Subscribe to Updates
Get the latest creative news from FooBar about art, design and business.
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
- ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
- ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
- ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
- ಬೀದರ್: ರಾಡ್ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
- ಬೀದರ್ | ಹೆದ್ದಾರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವ ಗಂಭೀರ ಗಾಯ
- ವೈದ್ಯರು – ಸಮಾಜದ ಜೀವನಾಡಿ
Author: admin
ಬೆಲೆ ಏರಿಕೆಯ ನಡುವೆಯೇ ಜನಸಾಮಾನ್ಯರ ಮೇಲೆ ಮತ್ತೊಮ್ಮೆ ಹೊರೆ ಬೀಳಲಿದೆ. ಪೆಟ್ರೋಲ್, ಡೀಸೆಲ್ ನಂತರ ಈಗ ಎಲ್ಪಿಜಿ ( LPG Price Hike) ಕೂಡ ಗ್ರಾಹಕರ ಜೇಬು ಸುಡಲಿದೆ. ಏಪ್ರಿಲ್ನಿಂದ ಅಡುಗೆ ಅನಿಲ ಇನ್ನಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಪ್ರಪಂಚದಾದ್ಯಂತ ಗ್ಯಾಸ್ ನಲ್ಲಿ ದೊಡ್ಡ ಕೊರತೆ ಕಂಡುಬಂದಿದೆ (Global Gas Crunch). ಏಪ್ರಿಲ್ನಿಂದ ಅದರ ಪರಿಣಾಮ ಭಾರತದ ಮೇಲೂ ಬೀಳುವ ಸಾಧ್ಯತೆ ಇದೆ. ಈ ಕಾರಣದಿಂದಾಗಿ ಇಲ್ಲಿಯೂ ಗ್ಯಾಸ್ ಬೆಲೆಗಳು ದ್ವಿಗುಣಗೊಳ್ಳಬಹುದು (Domestic Gas Prices) . ಜಾಗತಿಕ ಅನಿಲ ಕೊರತೆ : ಜಾಗತಿಕ ಮಟ್ಟದಲ್ಲಿಯೇ ಅನಿಲದ ಕೊರತೆಯಿಂದಾಗಿ ಸಿಎನ್ಜಿ (CNG), ಪಿಎನ್ಜಿ ಮತ್ತು ವಿದ್ಯುತ್ ಬೆಲೆಗಳು (electricity bill) ಹೆಚ್ಚಾಗುತ್ತವೆ. ಇದರ ಜೊತೆಗೆ ಕಾರ್ಖಾನೆಗಳಲ್ಲಿ ಯಂತ್ರಗಳನ್ನು ನಡೆಸುವುದು ದುಬಾರಿಯಾಗಬಹುದು. ಅಲ್ಲದೆ, ಉತ್ಪಾದನಾ ವೆಚ್ಚವೂ ಹೆಚ್ಚಾಗಬಹುದು. ಸರ್ಕಾರದ ರಸಗೊಬ್ಬರ ಸಬ್ಸಿಡಿ ಮಸೂದೆಯಲ್ಲೂ ಹೆಚ್ಚಳ ಕಂಡು ಬರಬಹುದು (Fertilizer Subsidy Bill). ಒಟ್ಟಿನಲ್ಲಿ ಇವೆಲ್ಲದರ ಪರಿಣಾಮ ಸಾಮಾನ್ಯ ಗ್ರಾಹಕರ ಮೇಲೆ ಮಾತ್ರ ಆಗಲಿದೆ.…
ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009ರ ಕೆಲವು ಅಂಶಗಳು ಏಕಪಕ್ಷೀಯ ಮತ್ತು ಅತಾರ್ಕಿಕವಾಗಿದ್ದು ದೇಶಾದ್ಯಂತ ಮಕ್ಕಳಿಗೆ ಏಕರೂಪದ ಪಠ್ಯಕ್ರಮ ಪರಿಚಯಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಮನವಿಯ ಕುರಿತು ಕೇಂದ್ರ ಸರ್ಕಾರ ಉತ್ತರ ನೀಡಬೇಕು ಎಂದು ದೆಹಲಿ ಹೈಕೋರ್ಟ್ ಇಂದು ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠವು ಕೇಂದ್ರ ಸರ್ಕಾರದ ಶಿಕ್ಷಣ, ಕಾನೂನು ಮತ್ತು ನ್ಯಾಯ ಹಾಗೂ ಗೃಹ ವ್ಯವಹಾರಗಳ ಸಚಿವಾಲಯಗಳಿಗೆ ನೋಟಿಸ್ ಗಳನ್ನು ನೀಡಿ ಪ್ರಕರಣದ ಮುಂದಿನ ವಿಚಾರಣೆಯನ್ನು ಮಾ.30ಕ್ಕೆ ನಿಗದಿಪಡಿಸಿತು.ಆರ್ ಟಿಇ ಅಧಿನಿಯಮದ ಸೆಕ್ಷನ್1(4) ಮತ್ತು 1(5) ಹಾಗೂ ಮಾತೃಭಾಷೆಯಲ್ಲಿ ಏಕರೂಪದ ಪಠ್ಯಕ್ರಮದ ಅನುಪಸ್ಥಿತಿ ಅಜ್ಞಾನದ ಬೆಳವಣಿಗೆಗೆ ಕಾರಣವಾಗುತ್ತದೆ ಮತ್ತು ಮೂಲಭೂತ ಕರ್ತವ್ಯಗ¼ ಅನುಷ್ಠಾನವನ್ನು ವಿಳಂಬಗೊಳಿಸುತ್ತದ ಎಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಪ್ರತಿಪಾದಿಸಲಾಗಿತ್ತು. ಸಾರ್ವತ್ರಿಕ ಶಿಕ್ಷಣ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವುದು ಕೇಂದ್ರದ ಮೂಲಭೂತ ಕರ್ತವ್ಯ. ಆದರೆ ಇದರಲ್ಲಿ ಸಂಪುರ್ಣ ವಿಫಲವಾಗಿರುವ ಕೇಂದ್ರ ಸರ್ಕಾರ ಅತ್ಯಂತ ಹಳೆಯದಾದ 2005ರ ಈ ಮುಂಚಿನ ರಾಷ್ಟ್ರೀಯ ಪಠ್ಯಕ್ರಮ ಕಾರ್ಯರ್ಕ…
ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಬೇಕು. ಮೃತರ ಕುಟುಂಬಕ್ಕೆ 25 ಲಕ್ಷ ರೂ.ಗಳ ಪರಿಹಾರ ನೀಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಮೈಸೂರಿನ ಆರ್ ಗೇಟ್ ಬಳಿ ಪ್ರತಿಭಟನೆ ನಡೆಸಿದ ಅವರು, ಕೊಲೆಗೆ ಕಾರಣರಾದವರನ್ನು ಎಡೆಮುರಿ ಕಟ್ಟಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬದವರಿಗೆ ಕನಿಷ್ಠ 25 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಕೊಲೆಯ ಹಿಂದೆ ಯಾವುದೇ ಶಕ್ತಿಗಳಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಘಟನೆ ಹಿಂದೆ ಪೊಲೀಸ್ ವೈಫಲ್ಯ ಎದ್ದು ಕಾಣುತ್ತಿದೆ. ಸದ್ಯ ಶಿವಮೊಗ್ಗದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಬೇಕು ಎಂದು ಹೇಳಿದರು. ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಬದಲಾವಣೆ ಮಾಡಲು ಹೇಳಿರುವ ಸಂಸದ ಪ್ರತಾಪ್ಸಿಂಹ ಅವರ ಹೇಳಿಕೆಯನ್ನು ಖಂಡಿಸಿದ ಅವರು, ಸಂಸದರು ಇಂತಹ ಅನಗತ್ಯ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಬೇಕು. ಟಿಪ್ಪು ಅವರು ಸ್ವಾತಂತ್ರ್ಯಕ್ಕಾಗಿ ಅಪರಿಮಿತ ಹೋರಾಟ ಮಾಡಿದ್ದಾರೆ. ನಾಗರಹೊಳೆ ಹೆಸರು ಬದಲಾಯಿಸಿ ಕಾರ್ಯಪ್ಪ ಹೆಸರಿಡುವಂತೆ ಹೇಳಿದ್ದಾರೆ. …
ಹಿರಿಯೂರು: ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಕರ್ಪೂರದಾರತಿ ಕಾರ್ಯಕ್ರಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ನಡೆಯಿತು. ಜಾತ್ರೆಯಲ್ಲಿ ಹಿರಿಯೂರು ಶಾಸಕಿ ಪೂರ್ಣಿಮಾಶ್ರೀನಿವಾಸ್ ಅವರು ಭಾಗಿಯಾಗಿದ್ದರು. ಇನ್ನೂ ಕರ್ಪೂರದಾರತಿ ಪೂಜೆಯಲ್ಲಿ ಮೊದಲ ಕರ್ಪೂರದಾರತಿಯನ್ನು ನಗರ ಸಭಾ ಸದಸ್ಯರಾದ ಈ .ಮಂಜುನಾಥ್ 64,500 ರೂಪಾಯಿಗೆ ನಡೆಸಿದರು. ಎರಡನೆಯ ಕರ್ಪೂರದ ಆರತಿಯನ್ನು ಮಾಹಿ ಜ್ಯೂಯಲರ್ಸ್ ಮಾಲೀಕ ಕೌಶಿಕ್ ನಾಯ್ಡು 35,500 ರೂಪಾಯಿಗಳಿಗೆ ನಡೆಸಿದರು. ಮೂರನೇ ಕರ್ಪೂರದಾರತಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನೇತ್ರಾವತಿ ಅರುಣ್ ಕುಮಾರ್ ಬ್ಯಾಡರಹಳ್ಳಿ ಅವರು 31,500 ರೂಪಾಯಿಗಳಿಗೆ ನಡೆಸಿದರು. ಈ ಸಂದರ್ಭದಲ್ಲಿಹಿರಿಯೂರು ತಾಲ್ಲೂಕಿನ ಶಾಸಕಿ ಪೂರ್ಣಿಮಾ ಅವರು ಸ್ವಾಮಿಗೆ ಕರ್ಪೂರದಾರತಿಯನ್ನು ಬೆಳಗಿದರು. ಬಳಿಕ ಕೌಶಿಕ್ ನಾಯ್ಡು ಅವರಿಗೆ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ವಿ, ನಗರಸಭೆ ಅಧ್ಯಕ್ಷರಾದ ಶಂಶುದ್ ಉನ್ನಿಸಾ, ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ಕೌಶಿಕ್ ನಾಯ್ಡು , ಜಿ.ಎಲ್.ಮೂರ್ತಿ, ನಗರಸಭೆ ಪೌರಾಯುಕ್ತರಾದ ಡಿ.ಉಮೇಶ್ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಆರ್.ನಾಗೇಂದ್ರ…
ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ನಿವಾಸಕ್ಕೆ ಡಾ.ಸಂತೋಷ ಭಾರತಿ ಶ್ರೀಪಾದ ಸ್ವಾಮೀಜಿ, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಅನೇಕ ಗಣ್ಯರು ಇಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ರಾಜ್ಯ ಸರ್ಕಾರ ಇಂದು ಯುವಕರನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಹಿಂದುತ್ವದ ಆಧಾರದ ಮೇಲೆ ಬಂದಿರುವ ಸರ್ಕಾರ ಹಿಂದೂ ಯುವಕರ ಮೇಲೆ ದಾಳಿ ನಡೆಯುತ್ತಿದ್ದರೂ ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಕಾಂಗ್ರೆಸ್ ಸರ್ಕಾರದಿಂದ ರಕ್ಷಣೆಯನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಆದರೆ, ಬಿಜೆಪಿ ಸರ್ಕಾರದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ದುರದೃಷ್ಟಕರ. ಸರ್ಕಾರದ ಗುಪ್ತಚರ ಇಲಾಖೆ ವಿಫಲವಾಗಿದೆ. ಘಟನೆ ಹಿಂದೆ ಇರುವವರನ್ನು ಬೇರು ಸಮೇತ ಕಿತ್ತುಹಾಕಬೇಕು. ಶಿವಮೊಗ್ಗದಲ್ಲಿ ಗಾಂಜಾ, ಡ್ರಗ್ಸ್ ನಿಲ್ಲಿಸಬೇಕೆಂದು ಹೇಳಿದರು. ಡಾ.ಸಂತೋಷ್ ಭಾರತಿ ಶ್ರೀಪಾದ ಸ್ವಾಮೀಜಿ ಮಾತನಾಡಿ, ಇದನ್ನು ಸ್ವಾಭಿಮಾನವಾಗಿ ತೆಗೆದುಕೊಳ್ಳದೆ ಯುದ್ಧವಾಗಿ ತೆಗೆದುಕೊಳ್ಳಬೇಕಾಗಿದೆ. ನಾವು ಒಬ್ಬ ಯೋಧನನ್ನು ಕಳೆದುಕೊಂಡಿದ್ದೇವೆ. ಕೊಲೆ ಮಾಡಿದವರಿಗೆ ಶಿಕ್ಷೆ ಕೊಡಲು ಆಗಲಿಲ್ಲವೆಂದರೆ ನಾವು ಕೊಡುತ್ತೇವೆ.…
ಕೊರಟಗೆರೆ: ಕರ್ನಾಟಕ ರಾಜ್ಯ ರೈತ ಸಂಘವು ಕೊರಟಗೆರೆ ತಾಲ್ಲೂಕಿನ ಮಾರಗೊಂಡನಹಳ್ಳಿ, ವಜ್ಜನಕುರಿಕೆ, ಪಾತಗಾನಹಳ್ಳಿ ಗ್ರಾಮಗಳಲ್ಲಿ ನೂತನ ಘಟಕಗಳ ಉದ್ಘಾಟನಾ ಸಮಾರಂಭ ನಡೆಯಿತು. ಉದ್ಘಾಟನೆಯ ನಂತರ ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಮಾತನಾಡಿ, ಪ್ರಪಂಚದ ಸಮಾರು 700 ದೇಶಗಳಲ್ಲಿ ವಿದ್ಯಾರ್ಥಿಗಳು ರೈತರಿಗೆ ಸಂಬಂಧಿಸಿದ ಅಧ್ಯಯನಗಳಲ್ಲಿ ವಿದ್ಯಾಭ್ಯಾಸವನ್ನು ಮಾಡುವುದರೊಂದಿಗೆ ಸಾಕಷ್ಟು ಸಾಧನೆ ಮಾಡಿರುವಂತಹದ್ದು ನಮ್ಮ ಕಣ್ಣು ಮುಂದೆಯೇ ಸಾಕಷ್ಟು ಉದಾಹರಣೆಗಳಿವೆ. ನೀವು ಸರಳವಾಗಿ ರೈತಸಂಘದ ಬಗ್ಗೆ ಅರ್ಥ ಮಾಡಿಕೊಳ್ಳಬೇಕಾದರೆ ರೈತ ಸಂಘದಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಮತ್ತು ಹೋರಾಟಗಳಲ್ಲಿ ಭಾಗವಹಿಸಿದರೆ ಮಾತ್ರ ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದು ಹೇಳಿದರು. ರೈತ ಸಂಘದ ಕಾರ್ಯಕ್ರಮಗಳಲ್ಲಿ ಕಾರ್ಯಕರ್ತರಾಗಿ ಭಾಗವಹಿಸುವಾಗ ಹಸಿರು ಶಾಲು, ಹಸಿರು ಸೇನೆಯ ಆದರ್ಶ ತತ್ವಗಳನ್ನು ಅಳವಡಿಸಿಕೊಂಡು ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರ ಎಲ್ಲಾ ಹಕ್ಕುಗಳು ನೇರವಾಗಿ ಅವರಿಗೆ ತಲುಪುವಂತೆ ಮಾಡುವುದೇ ರೈತ ಸಂಘದ ಮುಖ್ಯ ಕರ್ತವ್ಯ ಎಂದು ಅವರು ಹೇಳಿದರು. ರೈತ ಸಂಘದಲ್ಲಿ ಕಾರ್ಯಕರ್ತನಾದ ಮೇಲೆ ಸಂಘದಲ್ಲಿ ಇದ್ದು ಸಂಘವನ್ನು ದುರ್ಬಳಕೆ ಮಾಡಿಕೊಳ್ಳದೆ ಸಂಘದ ತತ್ವ ಮತ್ತು…
ವಿಜಾಪುರಜಿಲ್ಲೆ: ಕೊಲ್ಹಾರ ಪಟ್ಟಣ ಹಾಗೂ ಕೊಲ್ಹಾರ ತಾಲ್ಲೂಕು ವ್ಯಾಪ್ತಿಯ ಮುಳುಗಡೆ ಸಂತ್ರಸ್ತರ ಪರವಾಗಿ ಅವಿರತವಾಗಿ ಹೋರಾಟ ಮಾಡಲಾಗುವುದು ಎಂದು ಕೃಷ್ಣಾ ತೀರ ಸಂತ್ರಸ್ತರ ಹೋರಾಟ ಸಮಿತಿಯ ಅಧ್ಯಕ್ಷ ಸಿದ್ದು ಬಾಲಗೊಂಡ ಹೇಳಿದರು. ಪಟ್ಟಣದಲ್ಲಿ ಕೃಷ್ಣಾ ತೀರ ಸಂತ್ರಸ್ತರ ಹೋರಾಟ ಸಮಿತಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಬಾಗಲಕೋಟೆ ನಂತರ ಎರಡನೆಯ ಅತಿ ದೊಡ್ಡ ಪಟ್ಟಣವಾದ ಕೊಲ್ಹಾರ ಪಟ್ಟಣ ಸ್ಥಳಾಂತರವಾಗಿ ಅನೇಕ ವರ್ಷಗಳು ಕಳೆಯುತ್ತಾ ಬಂದರು ಕೂಡ ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದೆ. ಪುನರ್ವಸತಿ ಅಧಿಕಾರಿಗಳು ಈ ಬಗ್ಗೆ ಮುತುವರ್ಜಿ ವಹಸಿ ಪಟ್ಟಣವನ್ನು ಅಭಿವೃದ್ಧಿ ಪಡಿಸುವುದು ಬಿಟ್ಟು ತಮ್ಮ ಹುಳುಕು ಮುಚ್ಚಿಕೊಳ್ಳಲು ಸಂತ್ರಸ್ತರ ಮೇಲೆ ಪೊಲೀಸ್ ಪ್ರಕರಣ ದಾಖಲಿಸಿ ಸರಕಾರಕ್ಕಾಗಿ ಮನೆಮಠ ಕಳೆದುಕೊಂಡ ಸಂತ್ರಸ್ತರಿಗೆ ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಧಿಕಾರಿಗಳ ತಪ್ಪಿತಸ್ಥರು: ಪುನರ್ವಸತಿ ಅಧಿಕಾರಿಗಳು ತಪ್ಪು ಮಾಡಿ ಸುಖಾಸುಮ್ಮನೆ 1117 ಜನ ಸಂತ್ರಸ್ತರ ಮೇಲೆ ಪ್ರಕರಣದ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ. ನಮಗೆ ಪುನರ್ವಸತಿ ಅಧಿಕಾರಿಗಳು ನೀಡಿದ ನಿವೇಶನಗಳು ಬೇಡ! ಅವರು…
ತುಮಕೂರು: ತುಮಕೂರು ಗ್ರಾಮಾಂತರ ಕೆಸರುಮಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಚನಹಳ್ಳಿ ಗ್ರಾಮದ ಶ್ರೀ ತಿರುಮಲ ರಂಗನಾಥಸ್ವಾಮಿ ದೇವಾಲಯದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕರಾದ ಡಿ.ಸಿ. ಗೌರಿಶಂಕರ್ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು. ಈ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಶಾಸಕರಾದ ಡಿ.ಸಿ. ಗೌರಿಶಂಕರ್ ರವರು ವೈಯಕ್ತಿಕವಾಗಿ 3,50,000 (ಮೂರುವರೆ ಲಕ್ಷ) ರೂಗಳ ಧನಸಹಾಯ ಮಾಡಿದ್ದು, ದೇವಾಲಯದ ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದ ವತಿಯಿಂದ 10,00,000 (ಹತ್ತು ಲಕ್ಷ) ರೂಗಳನ್ನು ಬಿಡುಗಡೆ ಮಾಡಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಶಾಸಕರಾದ ಕೇವಲ ನಾಲ್ಕು ವರ್ಷದ ಅವಧಿಯಲ್ಲಿ ಮಾಚನಹಳ್ಳಿ ಗ್ರಾಮಕ್ಕೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಹೊರತುಪಡಿಸಿ ಸುಮಾರು 20,00,000 (ಇಪ್ಪತ್ತು ಲಕ್ಷ) ವೆಚ್ಚದಲ್ಲಿ ಸಿಸಿ ರಸ್ತೆ 12,00,000 (ಹನ್ನೆರೆಡು ಲಕ್ಷ) ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣದಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಶಾಸಕರ ಕಾರ್ಯಕ್ಕೆ ಗ್ರಾಮಸ್ಥರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ವರದಿ: ಎ.ಎನ್.ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ತುಮಕೂರು: ತುರುವೇಕೆರೆ ಪಟ್ಟಣದಲ್ಲಿ, ಕಾಂಗ್ರೆಸ್ ಮುಖಂಡ ಚೌದ್ರಿ ಟಿ, ರಂಗಪ್ಪ ನವರ ನೇತೃತ್ವದಲ್ಲಿ, ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ರಾಷ್ಟ್ರ ಧ್ವಜಕ್ಕೆ ಮಾಡಿದ ಅಪಮಾನ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿತು. ಪಟ್ಟಣದ ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿಯವರೆಗೆ , ನೂರಾರು ಸಂಖ್ಯೆಯ ಪಕ್ಷದ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ, ತಾಲ್ಲೂಕು ತಹಸೀಲ್ದಾರ್ ರವರ ಮೂಲಕ ಮನವಿಯನ್ನು ಸಲ್ಲಿಸಲಾಯಿತು. ಮೆರವಣಿಗೆಯಲ್ಲಿ ಈಶ್ವರಪ್ಪ ವಿರುದ್ಧ ಘೋಷಣೆ ಕೂಗುತ್ತಾ, ಬಿತ್ತಿ ಪತ್ರಗಳನ್ನು ಹಿಡಿದು ಈಶ್ವರಪ್ಪನವರನ್ನು ಸಚಿವ ಸ್ಥಾನದಿಂದ, ವಜಾಗೊಳಿಸುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎ. ಐ.ಸಿ.ಸಿ. ಸದಸ್ಯ ಸುಬ್ರಹ್ಮಣ್ಯ ಶ್ರೀಕಂಠೇಗೌಡ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಡಿ.ಕೆ. ಅವರ ತಂದೆಯವರ ಬಗ್ಗೆಯೂ ಅಸಂವಿಧಾನಿಕ ಪದವನ್ನು ಬಳಕೆ ಮಾಡಿ ಮಾತನಾಡಿದ್ದಾರೆ. ದೇಶದ್ರೋಹದ ಮಾತುಗಳನ್ನಾಡಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಇವರನ್ನು ಈ ಕೂಡಲೇ ರಾಜ್ಯಸರ್ಕಾರವು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಶಾಸಕ ಸ್ಥಾನವನ್ನು ವಜಾಗೊಳಿಸ ಬೇಕು ಎಂದು ಒತ್ತಾಯಿಸಿದರು. ಬಿ.ಎಸ್.ವಸಂತಕುಮಾರ್, ಟಿ.ಎನ್. ಶಿವರಾಜ್, ಸಮಾಜ…
ಚಿತ್ರದುರ್ಗ: ನಾನು ಅಧಿಕಾರದಲ್ಲಿರುವವರೆಗೆ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ನೀಡುವುದಾಗಿ ಹಿರಿಯೂರು ತಾಲ್ಲೂಕಿನ ನಗರಸಭೆ ಯ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷ ಜೆ.ಆರ್.ಅಜಯ್ ಕುಮಾರ್ ಹೇಳಿದರು. ಸ್ಥಾಯಿ ಸಮಿತಿಗೆ ನನ್ನನ್ನು ಆಯ್ಕೆ ಮಾಡಿದ ಮಾಜಿ ಸಚಿವರಾದ ಡಿ.ಸುಧಾಕರ್ ಹಾಗೂ ಎಲ್ಲಾ ನಾಯಕರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. 31 ಜನ ಸದಸ್ಯರು ಹಾಗೂ ಐದು ಜನ ನಾಮ ನಿರ್ದೇಶಕರ ಸಹಕಾರದಿಂದ ನಾನು ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಸರ್ಕಾರಿ ಕೆಲಸಗಳಲ್ಲಿ ಯಾವುದೇ ಲೋಪದೋಷಗಳಾಗದಂತೆ ಕೆಲಸ ನಿರ್ವಹಿಸುವುದಾಗಿ ಅವರು ಇದೇ ವೇಳೆ ತಿಳಿಸಿದರು. ಈ ಸಂದರ್ಭದಲ್ಲಿ ಹಿರಿಯೂರು ನಗರಸಭೆ ಅಧ್ಯಕ್ಷರಾದ ಶಂಶುದ್ ಉನ್ನಿಸಾ, ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ಪೌರಾಯುಕ್ತರಾದ ಡಿ.ಉಮೇಶ್ , ಸಿಬ್ಬಂದಿ ವರ್ಗದವರಾದ ಜಯಣ್ಣ, ನಿರಂಜನಿ, ಅಶೋಕ್, ಸುನಿಲ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್, ನಗರಸಭೆ ಸದಸ್ಯರಾದ ಶಿವರಂಜನಿ, ಜಗದೀಶ್, ಮದಲಿಮೇರಿ, ಜಬೀವುಲ್ಲಾ, ಸನಾವುಲ್ಲಾ, ಈರಲಿಂಗೆಗೌಡ, ಮಮತ, ಮದಲಿಮೇರಿ, ಸುರೇಖಾ ಮಣಿ, ಹಾಗೂ ಮಾಜಿ ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷರಾದ ಸಾದತ್ ವುಲ್ಲಾ ಹಾಗೂ ಪ್ರಭುಯಾದವ್ , ಕೃಷ್ಣಪೂಜಾರಿ ಉಪಸ್ಥಿತರಿದ್ದರು.…