Subscribe to Updates
Get the latest creative news from FooBar about art, design and business.
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
- ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
- ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
- ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
- ಬೀದರ್: ರಾಡ್ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
- ಬೀದರ್ | ಹೆದ್ದಾರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವ ಗಂಭೀರ ಗಾಯ
- ವೈದ್ಯರು – ಸಮಾಜದ ಜೀವನಾಡಿ
Author: admin
ಮಾಯಸಂದ್ರ: ಇತ್ತೀಚಿಗಷ್ಟೇ ನಿಧನರಾದ ಕಲಾ ತಪಸ್ವಿ ರಾಜೇಶ್ ರವರಿಗೆ ಇಂದು ಮಾಯಸಂದ್ರದ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಶ್ರದ್ಧಾಂಜಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಕ.ಸಾ.ಪ ಮಾಯಸಂದ್ರ ಘಟಕದ ಸ್ಥಾಪಕ ಅಧ್ಯಕ್ಷರಾದ ಎನ್.ಆರ್.ಜಯರಾಮ್, ರಾಜಕುಮಾರ್, ಕಲ್ಯಾಣ್ ಕುಮಾರ್ ರವರ ಸಮಕಾಲೀನ ನಟರಾದ ರಾಜೇಶ್ ರವರ ನಿಧನದಿಂದ ಕನ್ನಡ ಚಿತ್ರರಂಗ ಅನಾಥವಾಗಿದೆ. ‘ದೇವರ ದುಡ್ಡು’ ಚಿತ್ರದಲ್ಲಿ ಅವರ ಅಭಿನಯ ನೆನೆದು ಇದೇ ವೇಳೆ ಅವರು ಭಾವುಕರಾದರು. ಶ್ರದ್ಧಾಂಜಲಿ ಕಾರ್ಯಕ್ರಮದ ನಂತರ ಮಾಯಸಂದ್ರ ಕ.ಸಾ.ಪ ಘಟಕದ ನೂತನ ಅಧ್ಯಕ್ಷರಾದ ಪಿ.ಎನ್ ಜವರೇಗೌಡ ರವರ ನೇತೃತ್ವದಲ್ಲಿ ನೂತನ ಸಮಿತಿಯ ರಚನೆಯಾಯಿತು. ಈ ಕಾರ್ಯಕ್ರಮದಲ್ಲಿ CN ನಂಜುಂಡಯ್ಯ, ಶ್ರೀಧರ್ ಮೂರ್ತಿ, ಪ್ರಕಾಶ್ CP, ಶಿವಲಿಂಗೇಗೌಡರು, SDMC ಅಧ್ಯಕ್ಷರಾದ ಕರಿಬಸವಪ್ಪ, ಹನುಮಂತಯ್ಯ, ಮುನಿರಾಜು, ಲೀಲಾವತಿ ಗಿಡ್ಡಯ್ಯ, MS ಶಿವರಾಮಯ್ಯನವರು,ವೇಗಣ್ಣ, ಯತೀರಾಜು, ಗಿರಿಧರ್, ರವೀಂದ್ರ ಮುಂತಾದವರು ಭಾಗವಹಿಸಿದ್ದರು. ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ತುಮಕೂರು: ಶಿವಮೊಗ್ಗ ನಗರದಲ್ಲಿ ಭಾನುವಾರ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧ ಪ್ರತ್ಯಕ್ಷ ವರದಿ ಸಾಕ್ಷಿಗಳಿಲ್ಲದೇ, ಎಫ್ ಐಆರ್ ದಾಖಲಿಸುವ ಮುನ್ನೆವೇ ಸಚಿವ ಈಶ್ವರಪ್ಪ ನವರು ಮುಸಲ್ಮಾನ ಗುಂಡಾಗಳು ಕೊಲೆ ಮಾಡಿದ್ದಾರೆ ಎಂದು ನೇರವಾಗಿ ಆರೋಪ ಮಾಡಿದ್ದು ಖಂಡನೀಯ. ಸಚಿವರ ಹೇಳಿಕೆಯಿಂದ ಕೋಮು ಸೌಹಾರ್ದಯಕ್ಕೆ ಧಕ್ಕೆಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ತುಮಕೂರು ಜಿಲ್ಲಾ ಅಧ್ಯಕ್ಷರು ತಾಜುದ್ದೀನ್ ಶರೀಫ್ ಒತ್ತಾಯಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಯುವಕನ ಅಂತಿಮಯಾತ್ರೆ ವೇಳೆ ಕೋಮು ಘರ್ಷಣೆ ಉಂಟಾಗಿ ಹಲವರ ಮನೆ, ಅಂಗಡಿಗಳಿಗೆ ಕಲ್ಲು ತೂರಾಟ ನಡೆಸಿ ಯುವಕರ ಗುಂಪು ದಾಂಧಲೆ ನಡೆಸಿದ್ದಾರೆ. ಅನೇಕ ವಾಹನಗಳಿಗೆ ಬೆಂಕಿಯನ್ನು ಹಚ್ಚಿ ಪುಂಡಾಟ ಮೆರೆದಿದ್ದಾರೆ. ಇದಕ್ಕೆ ಸಚಿವ ಈಶ್ವರಪ್ಪನವರೇ ನೇರ ಹೊಣೆ. ಅವರ ಹೇಳಿಕೆಯಿಂದಲೇ ಈ ದುರ್ಘಟನೆಯಾಗಿದೆ. ತಮ್ಮದೇ ಸರ್ಕಾರ ಇರುವಾಗ ಇಂತಹ ಘಟನೆಗಳು ನಡೆಯದ ಹಾಗೆ ನೋಡುವ ಬದಲು, ಕೋಮು ಪ್ರಚೋದನ ಹೇಳಿಕೆ ನೀಡಿ ಕೋಮು ಗಲಭೆ ಮಾಡಿಸಿದ್ದು ದುರ್ದೈವ. ಈ ಕೊಲೆಯ…
ಪಾವಗಡ: ತಾಲ್ಲೂಕು ಕೇಂದ್ರದಿಂದ ಡಿಜಿಟಲ್ ಸದಸ್ಯತ್ವ ನೋಂದಣಿ ತರಬೇತಿ ಕಾರ್ಯಾಗಾರವನ್ನು ಪಾವಗಡ ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷರಾದ ಹೆಚ್.ವಿ.ವೆಂಕಟೇಶ್ ಅವರ ನೇತೃತ್ವದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ನಗರ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೇಶ್ ಬಾಬು, ಶಂಕರ್ ರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷರಾದ ಸುಮಾ ಅನಿಲ್ ಹಾಗೂ ನೋಂದಣಿ ಚೀಫ್ ಎನ್ರೋಲರ್ ಗಳಾಗಿ ಆಯ್ಕೆಗೊಂಡಿರುವ ಹನುಮೇಶ್, ನಾಗೇನಹಳ್ಳಿ ಭಾಸ್ಕರ್ ನಾಯ್ಡು, ಗೋವಿಂದ್ ಯಾದವ್, ಮದನ್ ರೆಡ್ಡಿ, ರಂಜಿತ್, ಸುಮನ್, ಸವಿತಾ, ಬಿಂದು ಮಾದವ್ ರಾವ್, ಗೌತಮಿ, ಮಂಜುಳ ಮತ್ತು ಸಾಮಾಜಿಕ ಜಾಲತಾಣದ ಸದಸ್ಯ ಓಂಕಾರ ನಾಯಕ, ಪಾಪಣ್ಣ ವಿ.ಹೆಚ್.ಪಾಳ್ಯ,ಹರೀಶ್ ಮಣಿ ಮಹೇಶ್ ಮತ್ತಿತರರು ಇದ್ದರು. ವರದಿ: ದೇವರಹಟ್ಟಿ ನಾಗರಾಜು, ಕಸಬಾ ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಹಿರಿಯೂರು: ಹಿರಿಯೂರು ತಾಲ್ಲೂಕಿನ ವಾಣಿವಿಲಾಸಪುರ ಗ್ರಾಮದಲ್ಲಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯ ಆವರಣದಲ್ಲಿ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಯಿತು. ತಾಲ್ಲೂಕಿನ ಮಾಜಿ ಶಾಸಕ, ಮಾಜಿ ಸಚಿವ ಡಿ.ಸುಧಾಕರ್ ರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ಭಾಗವಹಿಸಿದ್ದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಆರ್ . ನಾಗೇಂದ್ರ ನಾಯ್ಕ, ಪಕ್ಷ ಅಂತ ಬಂದರೆ ನಾವುಗಳೆಲ್ಲರೂ ಸಹ ಒಂದೇ ಕುಟುಂಬದವರಾಗಿರಬೇಕು. ಯಾವುದೇ ಸಮಯ ಸಂದರ್ಭ ಬಂದರೂ ಸಹ ನಮ್ಮಲ್ಲಿ ಇರುವ ಒಗ್ಗಟ್ಟನ್ನು ಮತ್ತೊಬ್ಬರಿಗಾಗಿ ಬಿಟ್ಟುಕೊಡಬಾರದು. ಮುಂದಿನ ದಿನಗಳಲ್ಲಿ ಬರುವಂತಹ ತಾಲ್ಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆ ಯಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕು. ಭಿನ್ನಾಭಿಪ್ರಾಯಗಳನ್ನು ತೊರೆದು ಕೆಲಸ ಮಾಡಬೇಕು ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಕೆಪಿಸಿಸಿ ಸದಸ್ಯರಾದ ಅಮೃತೇಶ್ವರ್ ಮಾತನಾಡಿ, ನಮ್ಮ ಪಕ್ಷದಲ್ಲಿ ಪ್ರತಿಯೊಬ್ಬರೂ ಸಹ ಪಕ್ಷದ ಪರವಾಗಿ ಇನ್ನು ಅತಿ ಹೆಚ್ಚಿನ ರೀತಿಯಲ್ಲಿ ಕರ್ತವ್ಯ ನಿಷ್ಠೆಯಿಂದ ದುಡಿಯಬೇಕು ಎಂದು ತಿಳಿಸಿದರು. ಹಿರಿಯೂರು ಬ್ಲಾಕ್…
ಪಾವಗಡ: ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಪಾವಗಡ ಸಮಿತಿ ವತಿಯಿಂದ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಅಧ್ಯಕ್ಷರಾದ ಎಚ್.ವಿ. ವೆಂಕಟೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳುವಂತೆ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಇದೇ ವೇಳೆ ಮಾತನಾಡಿದ ಎಚ್.ವಿ. ವೆಂಕಟೇಶ್, ಕೆ.ಎಸ್. ಈಶ್ವರಪ್ಪ ಅವರು ರಾಜ್ಯ ಸರ್ಕಾರದ ಸಚಿವರಾಗಿ ರಾಜ್ಯದ ಹಾಗೂ ದೇಶದ ಘನತೆಯನ್ನು ಕಾಪಾಡಬೇಕು. ಆದರೆ, ತ್ರಿವರ್ಣ ಧ್ವಜವದ ಹಾರಾಡುವ ಜಾಗದಲ್ಲಿ ಕೇಸರಿ ಧ್ವಜವನ್ನು ಆರಿಸುತ್ತೇನೆ ಎಂದು ದೇಶದ್ರೋಹಿ ಹೇಳಿಕೆ ನೀಡಿರುವುದು ಖಂಡನೀಯ ಎಂದರು. ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸುದೇಶ್ ಕುಮಾರ್ ಜಿ. ಮಾತನಾಡಿ, ಶಾಂತಿಯುತ ರಾಷ್ಟ್ರ ಹಾಗೂ ಜಾತ್ಯತೀತ ರಾಷ್ಟ್ರದಲ್ಲಿ ಶಾಂತಿ ಕದಡುವ ಕೆಲಸಕ್ಕೆ ರಾಜ್ಯ ಸರ್ಕಾರದ ಸಚಿವರಾದ ಕೆ.ಎಸ್ .ಈಶ್ವರಪ್ಪರವರು ಮುಂದಾಗಿದ್ದು, ತ್ರಿವರ್ಣ ಧ್ವಜದ ಬಗ್ಗೆ ಇಲ್ಲಸಲ್ಲದ ಗೊಂದಲ ಹೇಳಿಕೆ ನೀಡಿ, ದೇಶದಲ್ಲಿ ಗಲಭೆ ಸೃಷ್ಟಿಸಲು ಸಂಚು ರೂಪಿಸುತ್ತಿದ್ದಾರೆ. ಇಂತಹ ಸಚಿವರನ್ನು ರಾಜ್ಯಪಾಲರು…
ತುಮಕೂರು: ಕರ್ನಾಟಕ ತಾಂಡ ಅಭಿವೃದ್ಧಿ ನಿಯಮ ನಿಯಮಿತ ಬೆಂಗಳೂರು ಹಾಗೂ ವಲಯ ಕಚೇರಿ ತುಮಕೂರು ವತಿಯಿಂದ ವಿಭಾಗ ಮಟ್ಟದ ಕಲಾ ಮೇಳ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ತುಮಕೂರು ಬಂಜಾರ ಭವನದಲ್ಲಿ ಸರಿ ಸುಮಾರು 8 ಜಿಲ್ಲೆಯ ( ಚಾಮರಾಜನಗರ, ಮೈಸೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಹಾಗೂ ಕೋಲಾರ ) ಬಂಜಾರ ಬಹುಮುಖಿ ಆಡಿಷನ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾಡಿ ಮಾತಾಡಿದ ಡಾ.ರಮೇಶ್ ನಾಯ್ಕ, ಬಂಜಾರ ಸಮುದಾಯದದ ಆಚಾರ-ವಿಚಾರ ನಡೆ-ನುಡಿ ಸಾಂಸ್ಕೃತಿಕ ಉಳಿವಿಗಾಗಿ ಕಲಾಮೇಳ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ಶಿವಣ್ಣ, ಇಂಜಿನಿಯರ್ ಮೋಹನ್, ಮಹೇಶ್, ಕರ್ನಾಟಕ ಜಾಗೃತದಳ ರಾಜ್ಯಾಧ್ಯಕ್ಷ ತಿಪ್ಪ ಸರ್ ನಾಯ್ಕ, ಜಯಂ ನಾಯ್ಕ, ಗೋವಿಂದ್ ನಾಯ್ಕ, ವೆಂಕಟೇಶ್ ಚೌಹಾನ್, ರವಿ ಕುಮಾರ್, ಆಶಾ ರಾಠೋಡ್, ಹಾಗೂ ಬೇರೆ ಜೆಲ್ಲೆಯ ಕಲಾವಿದರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ವಾಣಿವಿಲಾಸ ಸಾಗರ ಕರ್ನಾಟಕದ ಹಳೆಯ ಅಣೆಕಟ್ಟುಗಳಲ್ಲಿ ಒಂದಾಗಿದ್ದು, ವೇದಾವತಿ ನದಿಗೆ ಅಡ್ಡಲಾಗಿ, ‘ಮಾರಿಕಣಿವೆ’ ಎಂಬಲ್ಲಿ ಕಟ್ಟಲಾಗಿರುವ ಈ ಅಣೆಕಟ್ಟಿನ ಎತ್ತರ ಇದರ 50 ಮೀ, ಉದ್ದ 405 ಮೀಟರ್ ಗಳು. 135 ಅಡಿಗಳವರೆಗೆ ನೀರನ್ನು ಸಂಗ್ರಹಿಸಬಹುದಾಗಿದೆ. ಹಿರಿಯೂರು ತಾಲ್ಲೂಕಿನ ಸುಮಾರು 1/3 ರಷ್ಟು (ಸುಮಾರು 10,000 ಹೆಕ್ಟೇರ್ ಪ್ರದೇಶ) ನೆಲಕ್ಕೆ ನೀರುಣಿಸುವುದಲ್ಲದೆ ಹಿರಿಯೂರು ಮತ್ತು ಚಿತ್ರದುರ್ಗ ನಗರಗಳಿಗೆ ಕುಡಿಯುವ ನೀರನ್ನೂ ಒದಗಿಸುತ್ತದೆ. ಸಿಮೆಂಟ್ ಉಪಯೋಗವಿಲ್ಲದೆ ಕೇವಲ ಗಾರೆಯಿಂದಲೇ ಇದನ್ನು ಕಟ್ಟಲಾಗಿದೆ. ಒಂದು ಬದಿಯಿಂದ ನೋಡಿದಾಗ, ‘ಭಾರತದ ಭೂಪಟ’ವನ್ನು ನಾವು ಕಾಣಬಹುದಾಗಿದೆ. ಮಾನಿ ಕಣಿವೆ (ಕನ್ನಡ: ಮಾರಿ ಕಣಿವೆ) ಎಂದು ಜನಪ್ರಿಯವಾಗಿ ಕರೆಯಲ್ಪಡುವ ವಾಣಿ ವಿಲಾಸ ಸಾಗರ ಭಾರತದ ರಾಜ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಸಮೀಪವಿರುವ ಒಂದು ಅಣೆಕಟ್ಟು. ಇದು ರಾಜ್ಯದ ಅತ್ಯಂತ ಹಳೆಯ ಅಣೆಕಟ್ಟು. ಈ ಅಣೆಕಟ್ಟನ್ನು ವೇದಾವತಿ ನದಿಗೆ ಅಡ್ಡಲಾಗಿ ಮೈಸೂರು ಮಹಾರಾಜರು ಸ್ವಾತಂತ್ರ್ಯ ಪೂರ್ವ…
ಪ್ರಾಣಿಗಳ ಜೀವವನ್ನು ಮಾನವರು ವೀರೋಚಿತವಾಗಿ ಉಳಿಸಿದ ಹಲವು ಸಂದರ್ಭಗಳಿವೆ. ಅಂಥದ್ದೇ ಒಂದು ಘಟನೆ ಮತ್ತೆ ಬೆಳಕಿಗೆ ಬಂದಿದ್ದು, ಈ ಬಾರಿ ಆಳವಾದ ಕಂದರದಲ್ಲಿ ಬಿದ್ದಿದ್ದ ಆನೆಯನ್ನು ಅರಣ್ಯ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ಕುರಿತಾದ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ (Elephant Saving Viral Video) ಆಗುತ್ತಿದೆ. ಈ ಇಡೀ ಘಟನೆಯ ವಿಶೇಷವೆಂದರೆ ಆರ್ಕಿಮಿಡಿಸ್ ತತ್ವವನ್ನು (Archimedes Principle Saved Elephant Life) ಅನ್ವಯಿಸಿ ಆನೆಯನ್ನು ಉಳಿಸಲಾಗಿದೆ. ಪ್ರಕರಣ ಏನು ತಿಳಿದುಕೊಳ್ಳೋಣ ಬನ್ನಿ, ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ಆನೆಯೊಂದು ನಾಲೆಗೆ ಬಿದ್ದ ಘಟನೆ ಸಂಭವಿಸಿದೆ. ಹೊಂಡ ತುಂಬಾ ಆಳವಾಗಿದ್ದರಿಂದ ಆನೆ ನಾಲೆಯಲ್ಲಿಯೇ ಸಿಕ್ಕಿಬಿದ್ದಿದೆ ಆನೆಯನ್ನು ರಕ್ಷಿಸುವ ಸಲುವಾಗಿ ಅರಣ್ಯ ರಕ್ಷಕರ ತಂಡ ಕುತೂಹಲಕಾರಿಯಾಗಿ ಹೊಂಡಕ್ಕೆ ನೀರನ್ನು ತುಂಬಿಸಿದ್ದಾರೆ. ಹಳ್ಳಕ್ಕೆ ನೀರು ತುಂಬಿಸಿದ್ದರಿಂದ ಆನೆ ಮೇಲಕ್ಕೆ ಈಜಲು ಸಹಾಯ ಮಾಡಿತು ಮತ್ತು ನಂತರ ಹಗ್ಗಗಳ ಸಹಾಯದಿಂದ ತಂಡವು ಆನೆಯನ್ನು ನಾಲೆಯಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ.ಘಟನೆಯ ಸಂಪೂರ್ಣ ವೀಡಿಯೊವನ್ನು IFS ಅಧಿಕಾರಿ ಪರ್ವೀನ್…
ನಿಂಬೆ ಪಾನಕವು ಭಾರತದ ಬಹುತೇಕ ಭಾಗಗಳಲ್ಲಿ ಜನಪ್ರಿಯವಾಗಿರುವ ಪಾನೀಯವಾಗಿದೆ. ದೇಶದಲ್ಲಿ ಬೇಸಿಗೆ ಕಾಲ ಆರಂಭವಾಗಿರುವುದರಿಂದ ಈಗ ಇದರ ಸೇವನೆಯೂ ಹೆಚ್ಚಾಗಲಿದೆ. ಆದರೆ ನಿಮಗೆ ಗೊತ್ತಾ ಪ್ರತಿದಿನ ಬೆಳಗ್ಗೆ ನಿಂಬೆ ನೀರು ಕುಡಿಯುವುದರಿಂದ ನಿಮ್ಮ ಬೊಜ್ಜು ಕಡಿಮೆಯಾಗುವುದು ಮಾತ್ರವಲ್ಲದೆ ನೀವು ಅನೇಕ ಕಾಯಿಲೆಗಳಿಂದ ದೂರವಿರಲು ಸಹಕಾರಿಯಾಗಲಿದೆ. ಏಕೆಂದರೆ ದೇಹದ ಮೇಲೆ ನಕಾರಾತ್ಮಕ ಪರಿಣಾಮಗಳನ್ನು ತೆಗೆದುಹಾಕಲು ನಿಂಬೆ ನೀರನ್ನು ಕುಡಿಯುವುದು ಹೆಚ್ಚು ಪ್ರಯೋಜನಕಾರಿ. ನಿಂಬೆ ನೀರಿನಲ್ಲಿ ಪ್ರೋಟೀನ್ಗಳು, ಕಾರ್ಬೋಹೈಡ್ರೇಟ್ಗಳು, ವಿಟಮಿನ್ಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿವೆ. ನಿಂಬೆ ನೀರು ನಿಮ್ಮ ಆರೋಗ್ಯದ ಮೇಲೆ ಯಾವ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ ಎಂಬುದನ್ನು ತಿಳಿಯೋಣ. ನಿತ್ಯ ಮುಂಜಾನೆ ನಿಂಬೆ ನೀರನ್ನು ಕುಡಿಯುವುದರಿಂದ ಸಿಗುವ 5 ದೊಡ್ಡ ಪ್ರಯೋಜನಗಳಿವು: 1. ಬೊಜ್ಜನ್ನು ಕಡಿಮೆ ಮಾಡಬಹುದು: ನೀವೂ ಸಹ ನಿಮ್ಮ ಬೊಜ್ಜನ್ನು (Obesity) ಕಡಿಮೆ ಮಾಡಿಕೊಳ್ಳಲು ಬಯಸಿದರೆ, ಇದು ನಿಮಗೆ ಸುಲಭವಾದ ಮಾರ್ಗವಾಗಿದೆ, ಪ್ರತಿದಿನ ಬೆಳಿಗ್ಗೆ ಒಂದು ಲೋಟ ಉಗುರು ಬೆಚ್ಚಗಿನ ನೀರಿಗೆ ನಿಂಬೆ ರಸವನ್ನು ಸೇರಿಸಿ ಮತ್ತು ದಿನಕ್ಕೆ ಎರಡು…
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ಹೊಸ ವರ್ಷದ ಮೊದಲ ದಿನದಂದು ಕೇಂದ್ರ ಸರ್ಕಾರ 10 ನೇ ಕಂತಿನ 2000 ರೂಪಾಯಿಗಳನ್ನು ರೈತರ ಖಾತೆಗೆ ವರ್ಗಾಯಿಸಿದೆ. ಈಗ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Nidhi Yojana) 2022 ರಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ, ಇದು 12 ಕೋಟಿಗೂ ಹೆಚ್ಚು ನೋಂದಾಯಿತ ರೈತರ ಮೇಲೆ ಪರಿಣಾಮ ಬೀರುತ್ತದೆ. ವಾಸ್ತವವಾಗಿ, ಈಗ ರೈತರು ಮುಂದಿನ ಕಂತಿಗೆ ಹಲವು ದಾಖಲೆಗಳನ್ನು ನವೀಕರಿಸಬೇಕಾಗುತ್ತದೆ, ಇಲ್ಲದಿದ್ದರೆ ಅವರು ಮುಂದಿನ ಕಂತನ್ನು ಪಡೆಯುವುದಿಲ್ಲ. ಇದಲ್ಲದೇ ಈ ಯೋಜನೆಯಡಿ ರೈತರಿಗೆ ದೊರೆಯುತ್ತಿದ್ದ ದೊಡ್ಡ ಸೌಲಭ್ಯವನ್ನೂ ಕಸಿದುಕೊಳ್ಳಲಾಗಿದೆ. ಪಿಎಂ ಕಿಸಾನ್ನಲ್ಲಿ ದೊಡ್ಡ ಬದಲಾವಣೆ: ಪ್ರಧಾನಮಂತ್ರಿ ಕಿಸಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ದೊಡ್ಡ ಬದಲಾವಣೆ (Big Changes in PM Kisan Yojana) ಮಾಡಿದೆ. ಇಲ್ಲಿಯವರೆಗೆ ರೈತರು ನೋಂದಣಿಯ ನಂತರ ತಮ್ಮ ಸ್ಥಿತಿಗತಿ, ಅರ್ಜಿಯ ಸ್ಥಿತಿ ಏನು, ನಿಮ್ಮ ಬ್ಯಾಂಕ್ ಖಾತೆಗೆ ಎಷ್ಟು ಹಣ ಬಂದಿದೆ ಅಥವಾ ಯಾವಾಗ…