Subscribe to Updates
Get the latest creative news from FooBar about art, design and business.
- ಮಹಿಳೆಯರನ್ನು ಸೆಳೆಯಲು ವಿಭಿನ್ನ ಕಾರ್ಯಕ್ರಮ ಆಯೋಜಿಸಲು ಕೆಆರ್ ಎಸ್ ಪಕ್ಷ ತೀರ್ಮಾನ
- ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: ಹೈನುಗಾರಿಕೆ ನಡೆಸುತ್ತಿದ್ದ ಮಹಿಳೆ ಕಂಗಾಲು
- ತುರುವೇಕೆರೆ: ಅಯ್ಯಪ್ಪ ಮಾಲಾಧಾರಿಗಳ ಯಾತ್ರೆ, ಜ.7ರಿಂದ 10ರವರೆಗೆ ಹಲವು ಕಾರ್ಯಕ್ರಮಗಳು
- ತುಮಕೂರು: ಜನವರಿ 7, 8ರಂದು ಸಿರಿಧಾನ್ಯ ಹಬ್ಬ
- ಸರಗೂರು: ವಿಜೃಂಭಣೆಯಿಂದ ನಡೆದ ಹನುಮ ಜಯಂತಿ ಉತ್ಸವದ ಶೋಭಯಾತ್ರೆ
- ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸೂಚನೆ
- ಕ್ವಿಝ್: ಸಹನಾ ಶಾಲೆ ಪ್ರಥಮ ಸ್ಥಾನ
- ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸ್ಥಳದಲ್ಲೇ ಸವಾರ ಸಾವು
Author: admin
ಒಂದು ಊರಿನಲ್ಲಿ ಒಬ್ಬ ರಾಜನು, ಮಂತ್ರಿಯನ್ನು ಕರೆದು ರಾಜ್ಯದಲ್ಲಿ ನಿಜವಾದ ದಾನಿ ಯಾರೆಂದು ಗುರುತಿಸಿ ಅವರಿಗೆ ಬಹು ಮೌಲ್ಯದ ಬಹುಮಾನ ಕೊಡಲಾಗುವುದೆಂದು ಡಂಗುರ ಸಾರಿಸಿದನು. ಅದಕ್ಕಾಗಿ ಒಂದು ದಿನ ನಿಗದಿ ಮಾಡಿ ಹಲವು ರಾಜ ಭಟರನ್ನು ರಾಜ್ಯದಲ್ಲೆಲ್ಲಾ ಗಸ್ತು ತಿರುಗುತ್ತಾ ನಿಜವಾದ ದಾನಿಯನ್ನು ಪತ್ತೆ ಮಾಡುವ ಕಾರ್ಯ ವಹಿಸಿದನು. ಇದರ ಮುಂದಾಳತ್ವ ಮತ್ತು ಜವಾಬ್ದಾರಿಯನ್ನು ಮಂತ್ರಿಗೆ ವಹಿಸಿದನು. ಹಲವು ಶ್ರೀಮಂತರು ಅತಿ ಶ್ರೀಮಂತರು ಚಿನ್ನ, ಬೆಳ್ಳಿ, ವಜ್ರ ವೈಡೂರ್ಯಗಳನ್ನು ಯಥೇಚ್ಛವಾಗಿ ದಾನ ಮಾಡಿದರೆ, ಮತ್ತೆ ಕೆಲವು ಶ್ರೀಮಂತರು ಸಾರ್ವಜನಿಕ ಭೋಜನ ವಿತರಣೆಯಂತಹ ದೊಡ್ಡ ದೊಡ್ಡ ಕಾರ್ಯಗಳನ್ನು ಮಾಡತೊಡಗಿದರು, ಮತ್ತೆ ಕೆಲವರು ಭೂದಾನಗಳನ್ನೂ ಮಾಡಿದರು. ಅಂದು ರಾಜ್ಯದಲ್ಲೆಲ್ಲಾ ದಾನ ಧರ್ಮಗಳದೇ ಕಾರುಬಾರು. ಇವೆಲ್ಲವನ್ನು ಯಾರು ಹೆಚ್ಚು ಯಾರು ಕಡಿಮೆ ಎಂಬ ಲೆಕ್ಕಾಚಾರವನ್ನೆಲ್ಲಾ ರಾಜಭಟರು ಬರೆದುಕೊಳ್ಳುತ್ತಿದ್ದರು. ಅಂದು ಸಾಯಂಕಾಲ ಕಾರ್ಯಕ್ರಮದ ಅವಧಿ ಮುಗಿಯುತು. ಮಂತ್ರಿ, ರಾಜಭಟರು ಮತ್ತು ದಾನ ಮಾಡಿದ ಎಲ್ಲ ಶ್ರೀಮಂತರು ನಿಯೋಜಿಸಿದ್ದ ಅರಮನೆಯ ಮೈದಾನಕ್ಕೆ ಬಂದರು. ಎಲ್ಲರಿಗೂ ಒಂದೇ ಕುತೂಹಲ ಯಾರು…
ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವವು ಏಪ್ರಿಲ್ 5ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ. ಮಹಾರಥೋತ್ಸವ ಅಂಗವಾಗಿ ಏಪ್ರಿಲ್ 12ರವರೆಗೆ ಜಾತ್ರಾ ಕಾರ್ಯಕ್ರಮಗಳು ನಡೆಯಲಿದ್ದು, ಏಪ್ರಿಲ್ 6ರಂದು ರಾತ್ರಿ 10 ಗಂಟೆಗೆ ಬಿಲ್ವವೃಕ್ಷ ವಾಹನೋತ್ಸವ, ಏಪ್ರಿಲ್ 7ರಂದು ರಾತ್ರಿ 10 ಗಂಟೆಗೆ ಬೆಳ್ಳಿಪಲ್ಲಕ್ಕಿ ಉತ್ಸವ ಜರುಗಲಿವೆ. ಪ್ರತಿ ವರ್ಷದಂತೆ ದನಗಳ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಬರುವ ರಾಸುಗಳಿಗೆ ನೀರು ಮತ್ತು ನೆರಳಿನ ಸೌಲಭ್ಯ ಕಲ್ಪಿಸಲಾಗುವುದು. ಜಾತ್ರೆಯಲ್ಲಿ ಆಯ್ಕೆ ಮಾಡುವ ಉತ್ತಮ ರಾಸುಗಳಿಗೆ ಏಪ್ರಿಲ್ 5ರ ಸಂಜೆ 5 ಗಂಟೆಗೆ ಬಹುಮಾನ ವಿತರಿಸಲಾಗುವುದು. ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತಾದಿಗಳು ಜಾತ್ರೆಗೆ ಆಗಮಿಸಲಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ವಿಶೇಷ ಸಾರಿಗೆ ಸೌಕರ್ಯ ಲಭ್ಯವಿರುತ್ತದೆ. ಜಾತ್ರಾ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ತಾನೂ ಕೂಡ ನೇಣಿಗೆ ಶರಣಾಗಿರೋ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ. ಮಹದೇವಯ್ಯ ಎಂಬುವರ ಪತ್ನಿ ವಿಜಯಲಕ್ಷ್ಮೀ(45), ತನ್ನ ಮಗಳು ಚೂಡಾಮಣಿ(18) ಹಾಗೂ ನರಸಿಂಹಮೂರ್ತಿ(14) ಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ತನ್ನ ಇಬ್ಬರು ಮಕ್ಕಳ ಸ್ಥಿತಿ ಕಂಡು ಮಹಿಳೆ ಮಾನಸಿಕವಾಗಿ ರೋಸಿಹೋಗಿದ್ದರು. ಅಲ್ಲದೆ ಇತ್ತೀಚೆಗೆ ತಾಯಿಯ ಆರೋಗ್ಯದಲ್ಲಿ ಏರು ಪೇರು ಆಗುತ್ತಿತ್ತು. ತನ್ನ ಗಂಡ ಮನೆಯಲ್ಲಿ ಇಲ್ಲದ ಸಮಯದಲ್ಲಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಚೇಳೂರು ಪೊಲೀಸರು, ಸಿಪಿಐ ರಾಘವೇಂದ್ರ ಭೇಟಿ ನೀಡಿದರು. ಈ ಸಂಬಂಧ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೀದರ್ : ಯಾರೇ ಒತ್ತಾಯಿಸಿದರು ಕೂಡ ಅವರ ಮಾತಿಗೆ ಕಿವಿಗೊಡದೆ ಧರ್ಮದ ಕಾಲಂನಲ್ಲಿ ಹಿಂದು, ಜಾತಿ ಕಾಲಂ ನಲ್ಲಿ ಪರಿಶಿಷ್ಟ ಜಾತಿ ಹಾಗೂ ಉಪಜಾತಿ ಕಲಂನಲ್ಲಿ ಕಡ್ಡಾಯವಾಗಿ ಮಾದಿಗ ಎಂದು ಬರೆಯಿಸಿ ಎಂದು ಮಾದಿಗ ಸಮನ್ವಯ ಸಮಿತಿಯ ಪ್ರಮುಖ ಫರ್ನಾಂಡಿಸ್ ಹಿಪ್ಪಳಗಾಂವ್ ತಿಳಿಸಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಧರ್ಮ ಎಂದರೆ ನಮ್ಮ ಅಂಗಿ ಇದ್ದಂತೆ, ಜಾತಿ ಎಂದರೆ ಚರ್ಮ ಇದ್ದಂತೆ. ಧರ್ಮ ಹಾಗೂ ಜಾತಿ ನಮಗೆ ಕಡ್ಡಾಯವಾಗಿಬೇಕು. ನಾವು ಮೂಲತಃ ಹಿಂದೂಗಳೇ ಹೊರತು ಕ್ರಿಶ್ಚಿಯನ್ ರಲ್ಲ ಇದನ್ನು ಈ ಜಿಲ್ಲೆಯ ಪ್ರತಿಯೊಬ್ಬ ನಮ್ಮ ಸಮಾಜದವರು ಅರ್ಥಮಾಡಿಕೊಳ್ಳಬೇಕು ಎಂದರು. ನಮ್ಮ ಜಿಲ್ಲೆಯ ಔರಾದ್, ಕಮಲನಗರ, ಭಾಲ್ಕಿ, ಹುಲಸೂರ್ ಹಾಗೂ ಬಸವಕಲ್ಯಾಣ ತಾಲೂಕುಗಳಿಗೆ ಮಹಾರಾಷ್ಟ್ರ ರಾಜ್ಯದ ಪ್ರಭಾವ ಇರುವ ಕಾರಣ ಅಲ್ಲಿಯ ನಮ್ಮ ಸಮಾಜದವರು ಹೆಚ್ಚಾಗಿ ಮರಾಠಿ ಮಾತಾಡುತ್ತಾರೆ . ಅಲ್ಲಿ ನಮ್ಮ ಸಮಾಜದವರು ಮಾಂಗ್ ಎಂದು ಕರೆಯಿಸಿಕೊಳ್ಳುತ್ತಾರೆ. ಆದರೆ, ಈ ತಿಂಗಳ 6 ರಿಂದ ಒಂದು…
ತುಮಕೂರು: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು. ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಪರೇಡ್ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು. 1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಕೊರಟಗೆರೆ: ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ದಾಸೋಹ ನಿಲಯದ ಉಗ್ರಾಣದಲ್ಲಿ ಹೆಚ್ಚುವರೆಯಾಗಿ ಸಂಗ್ರಹಿಸಿರುವ ಅಕ್ಕಿ, ಬೆಲ್ಲ, ಹುಣಸೆ ಹಣ್ಣು, ರಾಗಿ ಮತ್ತು ತೆಂಗಿನಕಾಯಿ, ಸ್ಥಳೀಯ ಸಾರ್ವಜನಿಕರ ಮುಂದೆ ಕೊರಟಗೆರೆ ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ಹಲವು ಗೊಂದಲಗಳನ್ನು ಬಗೆಹರಿಸಿ ಸ್ಥಳೀಯ ಸಾರ್ವಜನಿಕರ ಮುಂದೆ ಯಶಸ್ವಿಯಾಗಿ ಹರಾಜು ಪ್ರಕ್ರಿಯೆ ನಡೆಸಿದರು. ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ದಾಸೋಹ ಭವನದ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ಸ್ಥಳೀಯ ಸಾರ್ವಜನಿಕರ ಇಚ್ಛೆಯಂತೆ ಷರತ್ತು ಬದ್ಧವಾಗಿ ನಡೆಯಿತು.ಬಹಿರಂಗ ಹರಾಜು ಮಾಡುವ ಸಂದರ್ಭದಲ್ಲಿ ಸುಮಾರು 30 ಜನ ಠೇವಣಿದಾರರು ಬಹಿರಂಗ ಹರಾಜಿನಲ್ಲಿ ಪಾಲ್ಗೊಂಡಿದ್ದರು. ಸ್ಥಳೀಯ ಸಾರ್ವಜನಿಕರಿಗೆ ಮತ್ತು ರೈತರಿಗೆ ಹರಾಜು ಪ್ರಕ್ರಿಯೆಯಲ್ಲಿ ಸ್ಥಳೀಯರ ಇಚ್ಛೆಯಂತೆ ಪಾಲ್ಗೊಳ್ಳಲು ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ಅವಕಾಶ ಮಾಡಿಕೊಟ್ಟರು. ಹೊರಗಡೆಯಿಂದ ಬಂದು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಠೇವಣಿದಾರರಿಗೆ ಸ್ಥಳೀಯರು.. ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಘಟನೆಯೂ ನಡೆಯಿತು. ದಿನಾಂಕ: 26.3.2025 ರಂದು ಹಲವು ಗೊಂದಲಗಳಿಂದ ಮತ್ತು ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಕೈಗೊಳ್ಳಬೇಕಾದ…
ಕೊರಟಗೆರೆ: ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 135ನೇ ಜಯಂತಿ ಅಂಗವಾಗಿ ಪರಮೇಶ್ವರ್ ಕಪ್– 2025 ಬೃಹತ್ ರಾಜ್ಯ ಮಟ್ಟದ ಹೊನಲು ಬೆಳಕಿನ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಮತ್ತು ಪಟ್ಟಣ ಪಂಚಾಯ್ತಿ ಸದಸ್ಯ ನಂದೀಶ್ ತಿಳಿಸಿದರು. ಅವರು ಪಟ್ಟಣದ ರಾಜೀವ ಭವನದಲ್ಲಿ ನಡೆದ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿ, ಕೊರಟಗೆರೆ ತಾಲ್ಲೂಕಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಇಂತಹ ಬೃಹತ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಏಪ್ರಿಲ್ 04, 05, 06ನೇ ತಾರೀಕಿನಂದು ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಂದ್ಯಾವಳಿಗಳು ನಡೆಯಲಿವೆ, ಎಲ್ಲಾ ಪಂದ್ಯಗಳು ಹೊನಲು ಬೆಳಕಿನಲ್ಲಿ ನಡೆಯಲಿದ್ದು, ಈ ಕ್ರೀಡೆಗೆ ರಾಜ್ಯದ ಪ್ರತಿಷ್ಟಿತ 24 ಕ್ರಿಕೆಟ್ ತಂಡಗಳು ಹಾಗೂ ಕೊರಟಗೆರೆ ತಾಲೂಕಿನ ಬಲಿಷ್ಟ ಎರಡು ತಂಡಗಳು ಭಾಗವಹಿಸಲಿವೆ, ಈ ಕ್ರೀಡೆಯಲ್ಲಿ ಪ್ರಥಮ ಬಹುಮಾನ 2,22,222 ರೂಗಳು ಹಾಗೂ ಆಕರ್ಷಕ ಟ್ರೋಫಿ, ಎರಡನೇ ಬಹುಮಾನ 1,11,111 ರೂಗಳು ಹಾಗೂ ಆಕರ್ಷಕ ಟ್ರೋಪಿ, ಸರಣಿ ಶ್ರೇಷ್ಠ ಆಟಗಾರನಿಗೆ ಮೋಟಾರ್ ಬೈಕ್…
ಕೊರಟಗೆರೆ : ಹೆಜ್ಜೇನಿನ ಏಕಾಏಕಿ ದಾಳಿಯಿಂದ ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಕೊರಟಗೆರೆ ಪಟ್ಟಣದ ಕನಕದಾಸ ವೃತ್ತದಲ್ಲಿ ಬುಧವಾರ ಹೆಜ್ಜೇನು ದಾಳಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 5 ಮಂದಿ ವಿದ್ಯಾರ್ಥಿಗಳು, 2 ಉಪನ್ಯಾಸಕರು ಹಾಗೂ ಚಲಿಸುತ್ತಿದ್ದ ವಾಹನ ಸವಾರರ ಮೇಲೂ ದಾಳಿ ಮಾಡಿದ್ದು, ಒಟ್ಟು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ತಪಾಸಣೆ ನಡೆಸಿ, ಚಿಕಿತ್ಸೆ ನೀಡಿ, ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಪುರುಷೋತ್ತಮ್ ಧೈರ್ಯ ತುಂಬಿದ್ದಾರೆ. ಹೆಜ್ಜೇನು ದಾಳಿಯಿಂದ ಗಾಯಗೊಂಡು ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕರನ್ನು ಮತ್ತು ವಿದ್ಯಾರ್ಥಿಗಳನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಈರಪ್ಪನಾಯ್ಕ ಭೇಟಿ ಮಾಡಿ, ಆರೋಗ್ಯದ ವಿಚಾರಣೆ ನಡೆಸಿ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ವೈದ್ಯರ ಮಾರ್ಗದರ್ಶನದಲ್ಲಿ ಸೂಕ್ತ ಚಿಕಿತ್ಸೆ ಪಡೆಯುವಂತೆ ತಿಳಿಸಿದ್ದಾರೆ. ಟೀ ಅಂಗಡಿ, ಹೋಟೆಲ್ ಹಾಗೂ…
ಚಿಕ್ಕಬಳ್ಳಾಪುರ: ಶ್ರೀನಿವಾಸ ಸಾಗರ ಜಲಾಶಯದ ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರು ಮೂಲದ ಬಶೀರ್ (43), ಪರ್ಹಿನ್ (45) ಹಾಗೂ ಇಮ್ರಾನ್ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಜಲಾಶಯ ನೋಡಲೆಂದು ಆಗಮಿಸಿದ್ದರು ಎಂದು ತಿಳಿದು ಬಂದಿದೆ. ರಂಜಾನ್ ಹಬ್ಬದ ನಂತರ ಕುಟುಂಬ ಸಮೇತರಾಗಿ ತಾಲೂಕಿನ ವಿವಿಧ ಕಡೆ ಪ್ರವಾಸಕ್ಕೆಂದು ಆಗಮಿಸಿದ್ದರು. ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯ ನೋಡಲೆಂದು ಆಗಮಿಸಿದ್ದ ವೇಳೆ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಮೈಸೂರು: ಕೆಎಸ್ ಆರ್ ಟಿಸಿ ಬಸ್ ಚಾಲಕನಿಗೆ ಹೃದಯಾಘಾತವಾದ ಪರಿಣಾಮ ಚಲಿಸುತ್ತಿದ್ದ ಬಸ್ ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಬಸ್ ಚಾಲಕ ಹಾಗೂ ಮಹಿಳೆ ಇಬ್ಬರೂ ಸಾವನ್ನಪ್ಪಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ನಡೆದಿದೆ. ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್ ಮೃತಪಟ್ಟವರಾಗಿದ್ದಾರೆ. ಇವರು ಹೊರಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತಪಟ್ಟ ಮಹಿಳೆಯನ್ನು ಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ. ಇವರು ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಗ್ರಾಮದ ನಿವಾಸಿಯಾಗಿದ್ದಾರೆ. ಕೆಎಸ್ ಆರ್ ಟಿಸಿ ಬಸ್ ಕೇರಳ ರಾಜ್ಯದ ಮಾನಂದವಾಡಿಯಿಂದ ಹೆಚ್.ಡಿ.ಕೋಟೆಗೆ ಬರುತ್ತಿತ್ತು. ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ಬರುತ್ತಿದ್ದಂತೆ ಚಾಲಕನಿಗೆ ಹೃದಯಾಘಾತವಾಗಿದ್ದು ಬಸ್ ಸ್ಟೇರಿಂಗ್ ಮೇಲೆ ಚಾಲಕ ಪ್ರಜ್ಞೆ ತಪ್ಪಿ ಮಲಗಿದ್ದು ಈ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಮೀನಿಗೆ ಬಸ್ ನುಗ್ಗಿದೆ. ಈ ಸಮಯದಲ್ಲಿ ಪಾದಾಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದಾರೆ. ಆದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…