Subscribe to Updates
Get the latest creative news from FooBar about art, design and business.
- ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
- ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
- ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
- ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
- ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
- ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
- ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
Author: admin
ಸರಗೂರು: ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ರಾಯಚೂರು ಜಿಲ್ಲೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನ ಸೇವೆಯಿಂದ ವಜಾಗೊಳಿಸಿ ಬೃಹತ್ ಪ್ರತಿಭಟನೆ ನಡಿಸಲಾಯಿತು. ಸರಗೂರು ಪಟ್ಟಣದ ಅಂಗಡಿ ಮುಗ್ಗಟ್ಟು ಮಾಲಿಕರು ಸೇರಿದಂತೆ, ಸರಗೂರು ಬಂದ್ ಗೆ ಸಂವಿಧಾನ ಸಂರಕ್ಷಣಾ ಸಮಿತಿ ವರ್ತಕರ ಮಂಡಳಿ ಕರೆ ನೀಡಿದ ಬಳಿಕ ಎಲ್ಲಾ ಬಂದ್ ಗೆ ಬೆಂಬಲ ನೀಡಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಭವನದಿಂದ ಶುರುವಾದ ಮೆರವಣಿಗೆ ತಹಶೀಲ್ದಾರ್ ಕಚೇರಿವರೆಗೆ ನಡೆಯಿತು. ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಅನುಯಾಯಿಗಳು , ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಜನರು ಭಾರೀ ಜನಸಂಖ್ಯೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ ಮತ್ತು ಗಡಿಪಾರು ಮಾಡಿ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ, ಪ.ಪಂ. ಸದಸ್ಯ ಎಸ್.ಎಲ್.ರಾಜಣ್ಣ, ಮಲ್ಲಿಕಾರ್ಜುನ ಗೌಡ ಕಿಡಿಗೇಡಿ, ದೇಶದ್ರೋಹಿ, ಮನುವಾದಿ ಮನಸ್ಥಿತಿಯ ನ್ಯಾಯಾಧೀಶ ಎಂದು ಆಕ್ರೋಶ ವ್ಯಕ್ತಪಡಿಸಿ, ಅವರನ್ನು ತಕ್ಷಣವೇ ವಜಾಗೊಳಿಸಿ, ಗಡಿಪಾರು ಮಾಡಲು ಒತ್ತಾಯಿಸಿದರು. ಮೈಸೂರು…
ತುಮಕೂರು: ಜಿಲ್ಲೆ ಕೊರಟಗೆರೆ ತಾಲ್ಲೂಕು ಕೋಳಾಲ ಹೋಬಳಿ ತೀತಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೀತಾ ಗ್ರಾಮದಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಕಾರ್ಯಕ್ರಮವನ್ನು ಕೊರಟಗೆರೆ ತಾಲೂಕು ದಂಡಾಧಿಕಾರಿಗಳಾದ ನಹಿದಾ ಜಮ್ ಜಮ್ ರವರು ಉದ್ಘಾಟನೆ ಮಾಡಿದರು ಈ ಯೋಜನೆಯಲ್ಲಿ ಸರ್ಕಾರದ 790 ಹೆಚ್ಚು ಸೇವೆಗಳು ದೊರೆಯಲಿವೆ ಎಂದು ದಂಡಾಧಿಕಾರಿಗಳು, ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಕೋಳಾಲ ಉಪತಹಶೀಲ್ದಾರ್ ಮಧುಚಂದ್ರ, ಕೊರಟಗೆರೆ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕರವೇ ನಟರಾಜ್ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಯತಿಂದ್ರ ಕುಮಾರ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಗದೀಶ್ ಟಿ.ಕೆ ಮತ್ತು ವಿ.ಎ.ಮಂಜುನಾಥ್ ಮತ್ತು ಗ್ರಾಮ ಒನ್ ಸೇವಾ ಕರ್ತರಾದ ಜಾನಕಿ ಟಿ.ಕೆ. ಮತ್ತು ನರಸಿಂಹಮೂರ್ತಿ ಹಾಜರಿದ್ದರು. ವರದಿ : ಸಿದ್ದೇಶ್ ನೇಗಲಾಲ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…
ತುಮಕೂರು: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಅವರನ್ನು ಬಂಧಿಸಲು ಆಗ್ರಹಿಸಿ, ದಲಿತ ಸಂಘಟನೆಗಳ ಒಕ್ಕೂಟದಿಂದ ‘ರಾಯಚೂರು ಚಲೋ’ ನಡೆಯಿತು. ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಲಿತ ಸಂಘಟನೆಯ ಒಕ್ಕೂಟದ ಮುಖಂಡರುಗಳು, ನಾವು ರಾಯಚೂರು ತಲುಪುವುದರೊಳಗೆ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ಅಮಾನತು ಮಾಡಿ, ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪ್ತಿ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ವೇದಿಕೆಯಿಂದ ತೆಗೆದರೆ ಮಾತ್ರ ಧ್ವಜಾರೋಹಣ ಮಾಡುವುದಾಗಿ ಹೇಳಿದ್ದಲ್ಲದೆ, ಅದನ್ನು ಮಾಡಿಯೇ ತೋರಿಸಿದ ಜಿಲ್ಲಾ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪಾಟೀಲರು ದುರಹಂಕಾರಕ್ಕೆ ಪಾಠ ಕಲಿಸಬೇಕು ಮತ್ತು ಅಪರಾಧ ಕಾನೂನಿನ ಕಠಿಣ ಶಿಕ್ಷೆ ಆಗಬೇಕೆಂದು ರಾಜ್ಯ ವ್ಯಾಪ್ತಿ ಆಕ್ರೋಶ ಭುಗಿಲೆದ್ದಿದೆ. ಈತನ ಮೇಲೆ ಪೊಲೀಸ್ ಕೇಸು ದಾಖಲಿಸಿ ಜೈಲಿಗೆ ಹಾಕಲು…
ತುಮಕೂರು: ಕೇಂದ್ರ ಸರ್ಕಾರದ 290 ಕೋಟಿ ಹಾಗೂ ರಾಜ್ಯ ಸರ್ಕಾರದ 297 ಕೋಟಿ ರೂ. ಅನುದಾನದಲ್ಲಿ ನಗರದಲ್ಲಿ ಅನುಷ್ಠಾನಗೊಂಡಿರುವ ಸ್ಮಾರ್ಟ್ ಸಿಟಿ ಅಭಿವೃದ್ಧಿ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಮುಂದಿನ ದಿನ ಗಳಲ್ಲಿ ಹೋರಾಟ ಹಮ್ಮಿಕೊಳ್ಳುವುದಾಗಿ ಮಾಜಿ ಶಾಸಕ ಡಾ.ಎಸ್. ರಫೀಕ್ ಅಹಮದ್ ಎಚ್ಚರಿಕೆ ನೀಡಿದರು. ನಗರದಲ್ಲಿ ಇಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದ ಇಲಾಖೆಯವರಿಗೆ ಪತ್ರ ಬರೆದು ಮಾಹಿತಿ ಕೇಳಿದರೆ ಪೂರ್ಣ ಮಾಹಿತಿಯನ್ನು ಕೊಟ್ಟಿಲ್ಲ. ಬಂದಿರುವ ಅನುದಾನ ಖರ್ಚಾಗಿರುವುದೆಷ್ಟು, ಕಾಮ ಗಾರಿಗಳ ಪ್ರಗತಿಗೆ ಸಂಬಂಧಿ ಸಿದಂತೆ ಅಪೂರ್ಣ ಮಾಹಿತಿ ನೀಡಿದ್ದು, ಇದರ ವಿರುದ್ಧ ಸ್ಮಾರ್ಟ್ ಸಿಟಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ಗ್ರಂಥಾಲಯ, ಕ್ರೀಡಾಂಗಣ, ಟ್ರಾಮಸೆಂಟರ್ ಇತ್ಯಾದಿ ಕಾಮಗಾರಿಗಳ ಜೊತೆಗೆ ಅಲ್ಲಲ್ಲಿ ಗಿಡಗಳನ್ನು ನೆಟ್ಟು ಬೆಳೆಸುತ್ತಿದ್ದು, ಈ ಎಲ್ಲ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು…
ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕೀಯ ಬೇಡ ಎನ್ನುತ್ತಲೇ ತಾವು ಸ್ಪರ್ಧೆ ಮಾಡೋ ಕ್ಷೇತ್ರಗಳ ಪಟ್ಟಿಯನ್ನು ತೆರೆದಿಡುವ ಮೂಲಕ ರಾಜಕೀಯ ಪ್ರವೇಶದ ಸುಳಿವು ನೀಡಿದ್ದಾರೆ. ಬಳ್ಳಾರಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ನನಗೆ ಬಳ್ಳಾರಿ, ಗಂಗಾವತಿ, ಕೊಪ್ಪಳ, ಯಲಬುರ್ಗಾ, ಬೆಂಗಳೂರಿನ ಕೆ.ಆರ್.ಪುರಂ, ಬಿಟಿಎಂ ಲೇಔಟ್, ಕೋಲಾರದಲ್ಲಿ ಸ್ಪರ್ಧಿಸುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ಜನಾರ್ದನ್ ರೆಡ್ಡಿ ಹೇಳಿದ್ದಾರೆ. ನನ್ನ ಸಹೋದರರು ಶಾಸಕರಾಗಿದ್ದಾರೆ, ನಾನೂ ಶಾಸಕನಿದ್ದಂತೆ. ನನ್ನ ಮಿತ್ರ ಶ್ರೀರಾಮುಲು ಬಳ್ಳಾರಿ ಉಸ್ತುವಾರಿಯಾಗಿದ್ದಾರೆ. ಅವರು ಮಂತ್ರಿ ಆದರೆ ನಾನು ಕೂಡ ಮಂತ್ರಿಯಾದಂತೆ. ನಾನು ಕೇವಲ ರಾಜಕೀಯಕ್ಕಾಗಿ ಬಳ್ಳಾರಿಗೆ ಬಂದಿಲ್ಲ. ಬಳ್ಳಾರಿಯನ್ನು ಅಭಿವೃದ್ಧಿ ಮಾಡುವುದಕ್ಕಾಗಿ ಬಂದಿದ್ದೇನೆ ಎಂದು ಹೇಳಿದರು. ಬಳ್ಳಾರಿಯಲ್ಲಿ ಇನ್ನೊಂದೆರಡು ವರ್ಷದಲ್ಲಿ ಕ್ರಿಕೆಟ್ ವರ್ಲ್ಡ್ಕಪ್ ನಡೆಯುವ ಮಟ್ಟಕ್ಕೆ ಬಳ್ಳಾರಿಯನ್ನು ಅಭಿವೃದ್ಧಿ ಮಾಡುವೆ. ಈ ಹಿಂದೆ ನಾನು ಹೇಳಿದ ಕೆಲಸಗಳು ವೇಗವಾಗಿ ನಡೀತಿತ್ತು. ಈಗ ಆಗುತ್ತಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಹೀಗಾಗಿ ಚಿಂತೆ ಮಾಡಬೇಡ ಎಂದು ರಾಮುಲುಗೆ ತಿಳಿಸಿದ್ದೇನೆ ಎಂದು ತಿಳಿಸಿದರು. ವರದಿ:…
ಬಿಹಾರ: ಭಿಕ್ಷುಕನೊಬ್ಬ ಚಿಲ್ಲರೆ ಇಲ್ಲದಿದ್ದರೆ ಡಿಜಿಟಲ್ ರೂಪದಲ್ಲಿ ಭಿಕ್ಷೆ ನೀಡಿ ಎಂದು ವಿಶಿಷ್ಠವಾಗಿ ಭಿಕ್ಷೆ ಬೇಡುತ್ತಿರುವ ಪ್ರಸಂಗ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆಟ್ಟಿಯಾ ಪಟ್ಟಣದಲ್ಲಿ ನಡೆದಿದೆ. ನಿಮ್ಮಲ್ಲಿ ಚಿಲ್ಲರೆ ಇಲ್ಲದಿದ್ದರೆ, ಚಿಂತಿಸಬೇಡಿ. ನೀವು ನನಗೆ ಇ ವ್ಯಾಲೆಟ್ ಮೂಲಕ ಪಾವತಿಸಬಹುದು. ಈಗ ನಾನು ಡಿಜಿಟಲ್ ಪಾವತಿಯ ಸೌಲಭ್ಯವನ್ನು ಹೊಂದಿದ್ದೇನೆ. ಎಂದು ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆಟ್ಟಿಯಾ ಪಟ್ಟಣದ ನಿವಾಸಿ ಭಿಕ್ಷುಕ ರಾಜು ಪ್ರಸಾದ್ (40) ಅವರು ಡಿಜಿಟಲ್ ರೂಪದಲ್ಲಿ ಪಾವತಿಸುವಂತೆ ಕೇಳುತ್ತಿದ್ದಾರೆ. ಶುಕ್ರವಾರ ಅವರು ತಮ್ಮ ಇ ವ್ಯಾಲೆಟ್ನಲ್ಲಿ ಭಿಕ್ಷಾಟನೆಯಿಂದ 57 ರೂಪಾಯಿಗಳನ್ನು ಗಳಿಸಿದರು. ಪ್ರಸಾದ್ ಅವರು ತಮ್ಮ 10ನೇ ವಯಸ್ಸಿನಿಂದ ಬೆಟ್ಟಿಯಾ ರೈಲು ನಿಲ್ದಾಣದ ಆಸುಪಾಸಿನಲ್ಲಿ ಭಿಕ್ಷೆ ಬೇಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ‘ಡಿಜಿಟಲ್ ಇಂಡಿಯಾ’ ಅಭಿಯಾನದ ಕಟ್ಟಾ ಬೆಂಬಲಿಗರಾದ ಪ್ರಸಾದ್ ಅವರು ಡಿಜಿಟಲ್ ಪಾವತಿಯ ಸೌಲಭ್ಯವನ್ನು ಪಡೆಯಲು ಇತ್ತೀಚೆಗೆ ಬ್ಯಾಂಕ್ ಖಾತೆಯನ್ನು ತೆರೆದರು. ನನ್ನ ಬಳಿ ಆಧಾರ್ ಕಾರ್ಡ್ ಇದ್ದರೂ ಪ್ಯಾನ್ ಕಾರ್ಡ್ ಇರಲಿಲ್ಲ, ಇದರಿಂದ…
ಸರಗೂರು: ಗ್ರಾಮ ಸಭೆಗೆ ಪ್ರಮುಖ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸರಗೂರು ತಾಲ್ಲೂಕಿನ ಹಾದನೂರಿನಲ್ಲಿ ನಡೆದಿದೆ. ಸಭೆಗೆ ಕೆಲವೇ ಕೆಲವು ಅಧಿಕಾರಿಗಳು ಆಗಮಿಸಿದ್ದು, ಈ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಗ್ರಾಮಸ್ಥರು, ಎಲ್ಲಅಧಿಕಾರಿಗಳೂ ಕೂಡ ಗ್ರಾಮ ಸಭೆಗೆ ಆಗಮಿಸಬೇಕು ಎಂದು ಒತ್ತಾಯಿಸಿದರು. ತಾಲ್ಲೂಕಿನ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಕ ಅಧಿಕಾರಿಗಳು ಸಭೆಗೆ ಬರಬೇಕು, ನಮ್ಮ ಸಮಸ್ಯೆಗಳನ್ನು ಅವರಿಗೆ ತಿಳಿಸಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಹಾದನೂರು ಅತೀ ಹೆಚ್ಚು ದಲಿತರೇ ಇರುವ ಗ್ರಾಮವಾಗಿದ್ದು, ಈ ಗ್ರಾಮವನ್ನು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ನಿರ್ಲಕ್ಷಿಸುತ್ತಿದ್ದಾರೆ. ಗ್ರಾಮಸಭೆಯನ್ನು ಕಾಟಾಚಾರಕ್ಕೆ ನಡೆಸುತ್ತಿದ್ದು, ಸಭೆಗೆ ಮುಖ್ಯ ಅಧಿಕಾರಿಗಳೇ ಆಗಮಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಡರಾತ್ರಿ ಚಿತ್ರದುರ್ಗದಲ್ಲಿ ನಡೆದಿದೆ. ಗೀತಾ(32), ಶಾರದಾ (60) ಹಾಗೂ ಧೃತಿ (5) ಮೃತರು ಎಂದು ಗುರುತಿಸಲಾಗಿದೆ. ತಡರಾತ್ರಿ ಕಾರಿನಲ್ಲಿ ಒಂದೇ ಕುಟುಂಬದ 7 ಜನರು ಕುಂದಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಆಗ ಕಾರು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಕುಂದಾಪುರ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಬೆಂಗಳೂರು: ಕೆಪಿಟಿಸಿಎಲ್ ಇಲಾಖೆಯ ವಿವಿಧ ಹುದ್ದೆಗಳ ನೇಮಕಕ್ಕೆ ಇನ್ನೂ ಮುಂದೆ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಕಡ್ಡಾಯ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಅಪ್ಟಿಟ್ಯಾಡ್ ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಕನ್ನಡ ಪರೀಕ್ಷೆ ಬರೆಯಬೇಕು ಹಾಗೂ ಅದರಲ್ಲಿ ಕನಿಷ್ಠ 50 ಅಂಕವನ್ನು ಪಡೆಯಬೇಕು ಎಂದು ಆದೇಶಿಸಲಾಗಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಮಾತ್ರ ಅರ್ಹತಾ ಪರೀಕ್ಷೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಸಿದ್ದಾರೆ. ಈ ಹಿಂದೆ ನಡೆದ ನೇಮಕದಲ್ಲಿನ ವಿದ್ಯಮಾನದ ಮಾಹಿತಿ ಪಡೆದಿದ್ದ ಸಚಿವರು, ಮತ್ತೆ ಆ ರೀತಿ ಲೋಪ, ಅನ್ಯಾಯದ ಅಪಸ್ವರ ಮರುಕಳಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೆಪಿಟಿಸಿಎಲ್ ನೇಮಕದಲ್ಲಿ ಮತ್ತೆ ಕನ್ನಡ ಭಾಷಾ ಪರೀಕ್ಷಾ ಕಡ್ಡಾಯಗೊಳಿಸುವ ಮೂಲಕ ಕನ್ನಡಪರ ಸಂಘಟನೆಗಳ ಧ್ವನಿಗೂ ಸರಕಾರ ಸ್ಪಂದಿಸಿದೆ. ದೀರ್ಘಾವದಿ ನಂತರ ತುಂಬುತ್ತಿರುವ ಹುದ್ದೆಗಳು ಕನ್ನಡಿಗರು, ಕನ್ನಡ ಬಲ್ಲ ಅರ್ಹರಿಗೆ ದಕ್ಕುವ ರೀತಿಯಲ್ಲಿ ಕ್ರಮ ಕೈಗೊಂಡಿದೆ. ಈ…
ತಿಪಟೂರು: ಕೃಷಿ ವಿಜ್ಞಾನ ಕೇಂದ್ರ ಕೊನೆಹಳ್ಳಿಯಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ “ಮಹಿಳೆ ಮತ್ತು ಮಕ್ಕಳ ಅಪೌಷ್ಠಿಕತೆಯಲ್ಲಿ ಪೌಷ್ಠಿಕ ಆಹಾರದ ಮಹತ್ವ”ದ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿ ವಿಜ್ಞಾನ ಕೇಂದ್ರ ಕೊನೆಹಳ್ಳಿಯ ಮುಖ್ಯಸ್ಥರಾದ ಡಾ.ಗೋವಿಂದೇಗೌಡ ಉದ್ಘಾಟಿಸಿದರು. ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿಗಳಾದ ಡಾ.ರೂಪ ಬಿ. ಪಾಟೀಲ್ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಮೇಲ್ವಿಚಾರಕಿ ಬಿ.ಎನ್. ಪ್ರೇಮ ಡಾ.ಅನಿತಾ, ಅಂಜುಮನ್ ಬಾನು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತರು ತರಬೇತಿಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB