Subscribe to Updates
Get the latest creative news from FooBar about art, design and business.
- ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
- ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
- ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ: ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
- ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ ಪರಮೇಶ್ವರ್ ಸೂಚನೆ
- ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
- ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
Author: admin
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗಕ್ಕೆ 30 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ವಿಭಾಗದ ಹಿರಿಯ ವಿದ್ಯಾರ್ಥಿಗಳ ವೇದಿಕೆಯ ನೇತೃತ್ವದಲ್ಲಿ ಮೇ 15ರಂದು ಇತಿಹಾಸೋತ್ಸವ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಡಿಜಿಟಲ್ ಯುಗದ ಐತಿಹಾಸಿಕ ಸಂಶೋಧನೆಯಲ್ಲಿ ವೈಜ್ಞಾನಿಕ ಪ್ರಗತಿ ಎಂಬ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ವಿಭಾಗದ ಹಿರಿಯ ವಿದ್ಯಾರ್ಥಿಗಳು ಹಾಗೂ ಚೆನ್ನೈನ ಸೇವ್ ಅವರ್ ಕಂಟ್ರಿ ಫೌಂಡೇಶನ್ ಸಹಯೋಗದಲ್ಲಿ ಬೆಳಗ್ಗೆ 9ರಿಂದ ಇತಿಹಾಸೋತ್ಸವ ಮೆರವಣಿಗೆ ಹಾಗೂ ನಾಣ್ಯ ಪ್ರದರ್ಶನ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ವಹಿಸಲಿದ್ದು, ಸಾಹಿತಿ ಪ್ರೊ. ನಾಡೋಜ ಬರಗೂರು ರಾಮಚಂದ್ರಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯ, ಕಲ್ಬುರ್ಗಿಯ ವಿಶ್ರಾಂತ ಸಮಕುಲಪತಿ ಪ್ರೊ. ಎಸ್. ಚಂದ್ರಶೇಖರ್ ಭಾಗವಹಿಸಲಿದ್ದಾರೆ. ಕುಲ ಸಚಿವ ನಾಹಿದಾ ಝಮ್ ಝಮ್ ಹಾಗೂ ವಿಭಾಗದ ಮುಖ್ಯಸ್ಥ ಪ್ರೊ. ಪಿ.ಎಲ್. ರಾಜು ಉಪಸ್ಥಿತರಿರುವರು. ಬೆಂಗಳೂರಿನ ಕರ್ನಾಟಕ ಲಲಿತಕಲಾ ಪರಿಷತ್ನ ಲಲಿತ ಕಲಾ ಕಾಲೇಜಿನ ಪ್ರಾಧ್ಯಾಪಕ…
ತುಮಕೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವೈಫಲ್ಯವನ್ನು ಕೇಂದ್ರ ಸರ್ಕಾರ ಹೊರಬೇಕಾಗಿದೆ. ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವಲ್ಲಿ ಕೇಂದ್ರ ವಿಫಲವಾಗಿದೆ ಹಲವಾರು ಕನಸಕ್ತ ಪೋಷಕರು ಮತ್ತು ಮಕ್ಕಳ ಶ್ರಮವನ್ನು ಹಾಳು ಮಾಡಿದ್ದು ನೀಟ್ ಪರೀಕ್ಷೆ ನಡೆಸುವ ಕೇಂದ್ರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು 9 ವರ್ಷಗಳಲ್ಲಿ ನಾಲ್ಕು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಅಂತಹ ಸಮಸ್ಯೆಗಳನ್ನು ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಜೀವನಕ್ಕೆ ಅಡ್ಡ ತಂದು ಇನ್ನಿಲ್ಲದ ಆತಂಕವನ್ನು ಸೃಷ್ಟಿ ಮಾಡಿರುವ ಪ್ರಶ್ನೆ ಪತ್ರಿಕೆ ಸೋರಿಕೆಯ ಅವಾಂತರದ ವಿರುದ್ಧ ಪೋಷಕರು ನ್ಯಾಯಕ್ಕಾಗಿ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಆಂದೋಲನವನ್ನು ಹಮ್ಮಿ ಕೊಳ್ಳಲಿದ್ದಾರೆ ಎಂದು ರಾಜ್ಯ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳಿಧರ ಹಾಲಪ್ಪ ತಿಳಿಸಿದರು. ನೀಟ್ ಪರೀಕ್ಷೆಯ ಅವಾಂತರದ ವಿರುದ್ಧ ಹಾಗೂ ಮುಂಬರುವ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ. ಬಾಲ ಗುರುಮೂರ್ತಿ ಅವರಿಗೆ ಮನವಿ ಸಲ್ಲಿಸಿ ನಂತರ ಮಾತನಾಡಿ, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರು ತಾಯಂದಿರು…
ತುಮಕೂರು: ಸೋಶಿಯಲ್ ಮೀಡಿಯಾದಲ್ಲಿ ಹರಿದುಬರುವ ಆಮಿಷದ ಜಾಹೀರಾತುಗಳನ್ನು ನಂಬುವ ಮುನ್ನ ಎಚ್ಚರ! ಇನ್ ಸ್ಟಾಗ್ರಾಮ್ ನಲ್ಲಿ ಕೇರಳ ಲಾಟರಿ ಗೆದ್ದಿರುವುದಾಗಿ ನಂಬಿದ ತುಮಕೂರಿನ ಮಹಿಳೆಯೊಬ್ಬರು ಬರೊಬ್ಬರಿ 1.81 ಲಕ್ಷ ರೂಪಾಯಿ ಹಣ ಕಳೆದುಕೊಂಡು ವಂಚನೆಗೊಳಗಾಗಿದ್ದಾರೆ. ನಗರದ ಮಹಾಲಕ್ಷ್ಮೀ ನಗರದ ನಿವಾಸಿ ಟಿ.ಎಂ. ರೇಖಾ ಎಂಬುವವರು ಇನ್ ಸ್ಟಾಗ್ರಾಮ್ ವೀಕ್ಷಿಸುತ್ತಿದ್ದಾಗ ಕೇರಳ ಲಾಟರಿಗೆ ಸಂಬಂಧಿಸಿದ ರೀಲ್ಸ್ ಒಂದನ್ನು ನೋಡಿದ್ದಾರೆ. ಇದನ್ನು ನಂಬಿದ ಅವರು ಆನ್ ಲೈನ್ ವಂಚಕರ ಸಂಪರ್ಕಕ್ಕೆ ಬಂದಿದ್ದಾರೆ. ಏಪ್ರಿಲ್ 21 ರಂದು ಲಾಟರಿ ಹಣದ ಆಸೆಗೆ ಬಿದ್ದ ರೇಖಾ ಅವರಿಗೆ, ಬಹುಮಾನದ ಮೊತ್ತವನ್ನು ಪಡೆಯಬೇಕಾದರೆ ವಿವಿಧ ಶುಲ್ಕಗಳನ್ನು ಪಾವತಿಸಬೇಕೆಂದು ವಂಚಕರು ನಂಬಿಸಿದ್ದಾರೆ. ವಂಚಕರ ಮಾತನ್ನು ನಂಬಿದ ಮಹಿಳೆ, ಏಪ್ರಿಲ್ 21 ರಿಂದ ಏಪ್ರಿಲ್ 25 ರ ನಡುವೆ ವಿವಿಧ ಹಂತಗಳಲ್ಲಿ ಒಟ್ಟು 1,81,037 ರೂ.ಗಳನ್ನು ಆನ್ ಲೈನ್ ಮೂಲಕ ವರ್ಗಾಯಿಸಿದ್ದಾರೆ. ಎಷ್ಟು ಹಣ ಪಾವತಿಸಿದರೂ ಯಾವುದೇ ಬಹುಮಾನದ ಮೊತ್ತ ಕೈಸೇರದಿದ್ದಾಗ, ತಾವು ಮೋಸ ಹೋಗಿರುವುದು ಅವರಿಗೆ ಅರಿವಾಗಿದೆ. ತಕ್ಷಣ ಎಚ್ಚೆತ್ತುಕೊಂಡ…
ತುಮಕೂರು: ನಂಬಿದ ಕೆಲಸಗಾರನೇ ಅಸ್ತ್ರವಾಗಿ ಮಾಲೀಕನಿಗೆ ಲಕ್ಷಾಂತರ ರೂಪಾಯಿ ನಾಮ ಹಾಕಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಲಾರಿ ಟ್ರಾನ್ಸ್ಪೋರ್ಟ್ ಗುತ್ತಿಗೆ ಕೊಡಿಸುವುದಾಗಿ ನಂಬಿಸಿ ‘ಬುಕ್ ಲಾಜಿಸ್ಟಿಕ್ ಟ್ರಾನ್ಸ್ಪೋರ್ಟ್’ ಮಾಲೀಕ ಬಸವರಾಜು ಅವರಿಗೆ ಬರೋಬ್ಬರಿ 4 ಲಕ್ಷ ರೂಪಾಯಿ ವಂಚಿಸಲಾಗಿದೆ. ದೂರುದಾರ ಬಸವರಾಜು ಅವರ ಬಳಿ ಕೆಲಸಕ್ಕಿದ್ದ ಸತೀಶ್ ಎಂಬಾತನೇ ಈ ವಂಚನೆಯ ಸೂತ್ರಧಾರ. ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ‘ಎಪಿಎಲ್ ಅಪೊಲೋ ಪೈಪಿಂಗ್ ಸಿಸ್ಟಮ್’ (APL Apollo Piping System) ಎಂಬ ಹೊಸ ಶಾಖೆ ಆರಂಭವಾಗಿದೆ ಎಂದು ಮಾಲೀಕರಿಗೆ ನಂಬಿಸಿದ್ದಾನೆ. ಅಲ್ಲಿಗೆ ಲಾರಿಗಳ ಟ್ರಾನ್ಸ್ ಪೋರ್ಟ್ ಗುತ್ತಿಗೆ ಕೊಡಿಸುವುದಾಗಿ ಆಮಿಷವೊಡ್ಡಿದ್ದಾನೆ. ಕಂಪನಿಯ ಪ್ರತಿನಿಧಿ ರಾಮಪ್ರಸಾದ್ ಎಂಬ ಹೆಸರಿನಲ್ಲಿ ಕರೆ ಮಾಡಿಸಿ ಮಾಲೀಕರನ್ನು ನಂಬಿಸಲಾಗಿದೆ. ಗುತ್ತಿಗೆ ಪಡೆಯಲು 4 ಲಕ್ಷ ರೂಪಾಯಿ ಠೇವಣಿ ಇಡಬೇಕು ಎಂದು ನಂಬಿಸಿ, ಹಂತ ಹಂತವಾಗಿ ಹಣ ಪಡೆದಿದ್ದಾರೆ. ಆರಂಭದಲ್ಲಿ 1 ಲಕ್ಷ ರೂಪಾಯಿ ಪಡೆದು, ನಂತರ ಒಟ್ಟು 4 ಲಕ್ಷ ರೂಪಾಯಿಗಳನ್ನು ಪೀಕಿದ್ದಾರೆ. ಹಣ ನೀಡಿದರೂ…
ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಸಾರ್ವಜನಿಕರು, ಅದರಲ್ಲೂ ಯುವ ಸಮುದಾಯ ಎಚ್ಚೆತ್ತುಕೊಳ್ಳಬೇಕಿದೆ. ಆನ್ ಲೈನ್ ಶಾಪಿಂಗ್ ನಲ್ಲಿ ಯುವಕನೊಬ್ಬನಿಗೆ ಬರೋಬ್ಬರಿ 44 ಸಾವಿರಕ್ಕೂ ಅಧಿಕ ಹಣ ವಂಚಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಇನ್ ಸ್ಟಾ ಗ್ರಾಮ್ ನ ಕ್ರಿಕೆಟ್ ಗ್ಯಾಲರಿ 68 ಖಾತೆಯೊಂದರಲ್ಲಿ ಕ್ರಿಕೆಟ್ ಕಿಟ್ ಖರೀದಿ ಮಾಡಲು ಹೋದ ಯುವಕನೊಬ್ಬ 44,999 ರೂ ಸಾವಿರ ಹಣ ಕಳೆದುಕೊಂಡಿರುವ ಘಟನೆ ನಡೆದಿದ್ದು, ಈ ಬಗ್ಗೆ ನಗರದ ಎನ್ ಇಪಿಎಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಏ.19ರಂದು ತುಮಕೂರಿನ ಹಾಸ್ಟೆಲ್ ವಿದ್ಯಾರ್ಥಿ ಎಸ್.ಡಿ.ಪಾಟೀಲ್ ಎಂಬಾತ ಕ್ರಿಕೆಟ್ ಕಿಟ್ ಅನ್ನು ಬುಕ್ಕಿಂಗ್ ಮಾಡಿದ್ದು, ನಿನ್ನ ವಿಳಾಸಕ್ಕೆ ಕ್ಯಾಶ್ ಆಂಡ್ ಡಿಲಿವರಿ ಇಲ್ಲ ಎಂದು ವಂಚಕರಿಂದ ಸಂದೇಶ ಬಂದಿತ್ತು. ಇದನ್ನು ನಂಬಿ ವಿವಿಧ ಹಂತದಲ್ಲಿ ಒಟ್ಟು 44,999 ರೂಗಳನ್ನು ತನ್ನ ಹಾಗೂ ತನ್ನ ಸ್ನೇಹಿತನ ಖಾತೆಯಿಂದ ಯುವಕ ಆನ್ ಲೈನ್ ಪಾವತಿ ಮಾಡಿದ್ದಾನೆ. ಏ.26ರಂದು ಕಿಟ್ ಬಾರದ ಇದ್ದ ಹಿನ್ನೆಲೆಯಲ್ಲಿ ವಿಚಾರಿಸಿದಾಗ ಬೇರೆ…
ತುಮಕೂರು: ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿ ಕಾರೇಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪೆಟ್ಟಿಗೆ ಅಂಗಡಿಯನ್ನಿಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ ವೃದ್ಧೆಯೊಬ್ಬರ ಚಿನ್ನದ ಸರವನ್ನು ಸರಗಳ್ಳರು ಕದ್ದೊಯ್ದ ಘಟನೆ ನಡೆದಿದೆ. ಕೆಂಪಮ್ಮ ಎಂಬ ವೃದ್ಧೆ ಸರ ಕಳೆದುಕೊಂಡ ವೃದ್ಧೆಯಾಗಿದ್ದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವೇಳೆ ಅವರ ಕೊರಳಿನಲ್ಲಿದ್ದ ಚಿನ್ನವನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ವೃದ್ಧೆ ಕೆಂಪಮ್ಮ ಅವರನ್ನು ಸಿಗರೇಟ್ ಕೇಳುವ ನೆಪದಲ್ಲಿ ಬಂದ ಕಳ್ಳರು ಆಕೆಯ ಕೊರಳಿಗೆ ಕೈ ಹಾಕಿ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದಾರೆ. ಇದರಿಂದ ಜನ ಭಯಭೀತರಾಗಿದ್ದು, ಸರ ಕದ್ದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಮಧುಗಿರಿ: ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಮೇ 20ರಂದು ತುಮಕೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ನಮ್ಮ ತಾಲೂಕಿನಿಂದ ಅಧಿಕ ಜನರನ್ನು ಕರೆತರುವ ನಿಟ್ಟಿನಲ್ಲಿ 250ಕ್ಕೂ ಅಧಿಕ ಬಸ್ ಗಳನ್ನು ನಿಯೋಜಿಸಲಾಗಿದೆ. ಬರುವವರಿಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಎನ್.ರಾಜಣ್ಣ ಸಲಹೆ ನೀಡಿದರು. ಅವರು ತಾಲೂಕು ಪಂಚಾಯಿತಿ ಆವರಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಡಿ.ದೇವರಾಜು ಅರಸು ಅಭಿವೃದ್ಧಿ ನಿಗಮದಿಂದ ಬುಧವಾರ 20 ಅರ್ಹ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿದ ನಂತರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಧಿಕಾರಿಗಳು ಅಂದು ಬೆಳಿಗ್ಗೆ ಸಕಾಲಕ್ಕೆ ಜನರನ್ನು ಹೊರಡಿಸಿ ಕಾರ್ಯಕ್ರಮಕ್ಕೆ ಕರೆತರಬೇಕು. ಇದು ನಮ್ಮ ಸರ್ಕಾರದ ಸಾಧನಾ ಸಮಾವೇಶವಾಗಿದ್ದು, ಬರುವ ಜನರು ಮೀಸಲಿರುವ ಆಸನಗಳಲ್ಲಿ ಕೂತು ವೀಕ್ಷಿಸಬೇಕು. ಸಮಾರಂಭ ಮುಗಿಯುವ ತನಕ ಯಾರೂ ಸಹ ಎದ್ದು ಬರಬಾರದು. ನಂತರ ಅವರಿಗಾಗಿ ನಿಗದಿಪಡಿಸಿರುವ ಬಸ್ಗಳಲ್ಲಿ ಆಯಾಯ ಗ್ರಾಮಗಳಿಗೆ…
ಹೈದರಾಬಾದ್: ತೆಲುಗು ಚಿತ್ರರಂಗದ ಉದಯೋನ್ಮುಖ ನಟ ಹಾಗೂ ಸೋಶಿಯಲ್ ಮೀಡಿಯಾ ಸ್ಟಾರ್ ಕೆ. ಭರತ್ ಕಾಂತ್ (31) ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಭಾನುವಾರ ಹೈದರಾಬಾದ್ನ ಆದಿಬಟ್ಲಾ ಬಳಿಯ ಹೊರ ವರ್ತುಲ ರಸ್ತೆಯಲ್ಲಿ (ORR) ಈ ಭೀಕರ ಅಪಘಾತ ಸಂಭವಿಸಿದೆ. ನಟ ಭರತ್ ಕಾಂತ್ ಮತ್ತು ಅವರ ಸ್ನೇಹಿತ ಜಿ. ಸಾಯಿ ತ್ರಿಲೋಕ್ ನೆಲ್ಲೂರು ಜಿಲ್ಲೆಯಿಂದ ಹೈದರಾಬಾದ್ ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಚಲಾಯಿಸುತ್ತಿದ್ದ ಭರತ್, ಚಾಲನೆಯ ಮೇಲಿನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ಲಾರಿಯ ಹಿಂಬದಿಯ ಚಕ್ರಗಳು ಕಿತ್ತುಬಂದಿದ್ದು, ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 31 ವರ್ಷದ ಭರತ್ ಕಾಂತ್ ಅವರು ತೆಲುಗು ಡಿಜಿಟಲ್ ಲೋಕದಲ್ಲಿ ಬಹಳ ಪ್ರಸಿದ್ಧರಾಗಿದ್ದರು. ಇನ್ಸ್ಟಾಗ್ರಾಮ್ ನಲ್ಲಿ 40,000 ಮತ್ತು ಯೂಟ್ಯೂಬ್ ನಲ್ಲಿ 30,000ಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದ ಅವರು, ಅತ್ಯುತ್ತಮ ನರ್ತಕರಾಗಿಯೂ ಗುರುತಿಸಿಕೊಂಡಿದ್ದರು. ಕೇವಲ ಸೋಶಿಯಲ್…
ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಖ್ಯಾತ ನಟ, ನಿರ್ಮಾಪಕ ಹಾಗೂ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಖ್ಯಾತಿಯ ದಿಲೀಪ್ ರಾಜ್ (47) ಅವರು ಇಂದು (ಮೇ 13) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ, ಇಂದು ವೈದ್ಯರ ಭೇಟಿಗೆ ಸಮಯ ನಿಗದಿಪಡಿಸಲಾಗಿತ್ತು. ಆದರೆ ದುರದೃಷ್ಟವಶಾತ್ ಇಂದು ಬೆಳಗಿನ ಜಾವ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. 2005ರಲ್ಲಿ ಬಿಡುಗಡೆಯಾದ ‘ಬಾಯ್ಫ್ರೆಂಡ್’ ಸಿನಿಮಾ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದರು. ಪುನೀತ್ ರಾಜ್ಕುಮಾರ್ ಅಭಿನಯದ ‘ಮಿಲನ’ ಚಿತ್ರದ ವಿಲನ್ ಪಾತ್ರ ಇವರಿಗೆ ಅಪಾರ ಜನಪ್ರಿಯತೆ ತಂದುಕೊಟ್ಟಿತು. ಸುಮಾರು 28ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದು, ‘ಸುಗ್ರೀವ’, ‘ಗೆಳೆಯ’, ‘ಯೂಟರ್ನ್’ ಗಮನಾರ್ಹ ಚಿತ್ರಗಳು. ಇತ್ತೀಚೆಗೆ ‘ಲವ್ ಮಾಕ್ಟೇಲ್ 3’ ಚಿತ್ರದಲ್ಲೂ ಕಾಣಿಸಿಕೊಂಡಿದ್ದರು. ‘ಮನೆಯೊಂದು ಮೂರು ಬಾಗಿಲು’, ‘ರಥಸಪ್ತಮಿ’, ‘ಪ್ರೀತಿಗಾಗಿ’ ಅಂತಹ ಹಿಟ್ ಧಾರಾವಾಹಿಗಳಲ್ಲಿ ನಟಿಸಿದ್ದರು. ಇತ್ತೀಚೆಗೆ…
ತುಮಕೂರು/ಬೆಂಗಳೂರು: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಈ ಸಂಸ್ಥೆಯು ಪಾಲಿಮರ್ / ಪೆಟ್ರೋಕೆಮಿಕಲ್ಸ್ / ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡುತ್ತಾ ಬಂದಿದೆ. ಸಿಐಪಿಇಟಿ 2026–27ನೇ ಸಾಲಿನ ಉದ್ಯೋಗಾಧಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೊಮಾ, ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಜಿ, ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಜಿ ಮೂರು ವರ್ಷಗಳ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ., ಪಿಯುಸಿ ಮತ್ತು ಐಟಿಐ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಆನ್ಲೈನ್ / ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪಿಯುಸಿ (ವಿಜ್ಞಾನ), ಐಟಿಐ ತೇರ್ಗಡೆಯಾದವರು ಡಿಪ್ಲೊಮಾ 2ನೇ ವರ್ಷಕ್ಕೆ ಪ್ರವೇಶ ಪಡೆಯಬಹುದು. ಅರ್ಜಿ ಸಲ್ಲಿಸಲು ಮೇ 28 ಕಡೆಯ ದಿನವಾಗಿದೆ. https://cipet26.onlineregistrationform.org/CIPET …