Subscribe to Updates
Get the latest creative news from FooBar about art, design and business.
- ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
- ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
- ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
- ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
- ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
- ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ
- 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
- ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
Author: admin
ಚಿತ್ರದುರ್ಗ: ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಾಗೂ ಚಿತ್ರದುರ್ಗ ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರ ರಸ್ತೆಯ ಸಿದ್ಧಾಪುರ ಗ್ರಾಮದಲ್ಲಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಊಟದ ತಟ್ಟೆ ಮತ್ತು ನೀರಿನ ಲೋಟ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯಾಧ್ಯಕ್ಷ ಡಾ.ಆರ್.ಕೋದಂಡರಾಮ್.M.B.A. ಅವರ ಮಾರ್ಗದರ್ಶನದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ ಕೆ., ಜಿಲ್ಲಾ ಗೌರವ ಅಧ್ಯಕ್ಷರಾದ ತಿಪ್ಪೇಸ್ವಾಮಿ ಪಿ.ಎಮ್., ಜಿಲ್ಲಾ ಕಾರ್ಯದರ್ಶಿ ಟಿ.ಸಿ.ಚಂದ್ರಣ್ಣ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾದ ಮೊಹಮ್ಮದ್ ರಫಿ, ಚಿತ್ರದುರ್ಗ ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ದಾದಾಪೀರ್.ಎಸ್., ತಾಲ್ಲೂಕು ಉಪಾಧ್ಯಕ್ಷರಾದ ದುರ್ಗೇಶ್ ಮತ್ತಿತರರು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಗುಬ್ಬಿ: ಸಿ.ಎಸ್.ಪುರ ನಾಡ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಜರುಗಿತು. ಕಾರ್ಯ ಕ್ರಮದ ಕುರಿತು ಪ್ರತಿಕ್ರಿಯೆ ನೀಡಿದ ನಾಡ ಕಛೇರಿಯ ಉಪತಹಶೀಲ್ದಾರ್ ಮುತ್ತುರಾಜ್ , ಕಂದಾಯ ಇಲಾಖೆ ಹಾಗೂ ಪಿಂಚಣಿ ನಿರ್ದೇಶನಾಲಯದ ಆದೇಶದಂತೆ ಜನತೆಯ ಮನೆ ಬಾಗಿಲಿಗೆ ಸೇವೆ ನೀಡುವ ಉದ್ದೇಶದಿಂದ ಪಿಂಚಣಿ ಅದಾಲತ್ ಕಾರ್ಯಕ್ರಮ ಮಾಡಲಾಗುತ್ತಿದ್ದು, ನಮ್ಮ ಕಂದಾಯ ಇಲಾಖೆಯ ಅಧಿಕಾರಿಗಳೇ ವಯೋವೃದ್ದರ ಮನೆ ಬಾಗಿಲಿಗೆ ತೆರಳಿ ಸಂಬಂಧ ಪಟ್ಟ ವಯಸ್ಸಿನ ದೃಢೀಕರಣ ಪಡೆದು ಮೊಬೈಲ್ ಆಪ್ ಮೂಲಕ ದಾಖಲೆ ಕ್ರೋಢೀಕರಿಸಿ ಅರ್ಹ ಫಲಾನುಭವಿಗಳಿಗೆ ಸ್ಥಳದಲ್ಲಿ ಪಿಂಚಣಿ ಮಂಜೂರಾತಿ ಪತ್ರಗಳನ್ನು ವಿತರಣೆ ಮಾಡುತ್ತಾರೆ ಎಂದರು. ಸಾರ್ವಜನಿಕ ಮತ್ತು ವಯೋವೃದ್ದರು ಇನ್ನೂ ಮುಂದೆ ಕಛೇರಿಗಳಿಗೆ ಭೇಟಿ ನೀಡುವ ಮತ್ತು ದಾಖಲೆ ಒದಗಿಸುವ ತೊಂದರೆ ತಪ್ಪಲಿದ್ದು, ನಮ್ಮ ಹೋಬಳಿಯ ಕಂದಾಯ ಇಲಾಖೆ ಗ್ರಾಮಲೆಕ್ಕಾಧಿಕಾರಿಗಳು ಆಯಾ ವೃತ್ತಗಳಿಗೆ ಭೇಟಿ ನೀಡಿ ಸರ್ಕಾರದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಿದ್ದಾರೆ ಎಂದು ತಿಳಿಸಿದರು. ಈ ವೇಳೆಯಲ್ಲಿ ಕೆಲ ಹೋಬಳಿಯ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ಪತ್ರವನ್ನು ವಿತರಣೆ ಮಾಡಿದರು.…
ಮಾಯಸಂದ್ರ: 2022ನೇ ವರ್ಷದ ಮೊದಲ ಮಾಯಸಂದ್ರ ಗ್ರಾಮ ಸಭೆಯನ್ನು ಮಾಯಸಂದ್ರ ಗ್ರಾ.ಪಂ. ಆವರಣದಲ್ಲಿ ನಡೆಸಲಾಯಿತು. ಸಭೆಯಲ್ಲಿ ಗ್ರಾಮ ನೈರ್ಮಲ್ಯ, ನೀರು ಸರಬರಾಜು ಮತ್ತು ಮೀಟರ್ ಅಳವಡಿಕೆ, ವಿದ್ಯುತ್ ಸಂಪರ್ಕ ಹಾಗೂ ಇತರೆ ಮೂಲಭೂತ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಮಂಗಳ ಗೌರಮ್ಮ ಹೊನ್ನಪ್ಪ ವಹಿಸಿದ್ದರು. ಸಭೆಯಲ್ಲಿ ಗ್ರಾಮ ಪಂಚಾಯತ್ ನ PDO ಶ್ರೀನಿವಾಸ ಮೂರ್ತಿ, ಸೆಕ್ರೆಟರಿ ಸುರೇಶ್’, ಗ್ರಾ.ಪಂ. ಸದಸ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಗಳೂರು: ಉರಾಳಾಸ್ ವೆರಿಕೋಸ್ ವೇನ್ಸ್(Varicose Veins) ಆಯುರ್ವೇದ ಮಂಗಳೂರು ವತಿಯಿಂದ, ಖ್ಯಾತ ವೆರಿಕೋಸ್ ವೇನ್ಸ್ ವೈದ್ಯರಾದ ಡಾ.ಎಂ.ವಿ.ಉರಾಳ,ರವರ ನಿರ್ದೇಶನದಲ್ಲಿ ಮಂಗಳೂರು ನಗರದ ಪೊಲೀಸರಿಗೆ ಒಂದು ದಿನದ ಅರಿವು ಕಾರ್ಯಕ್ರಮ ಮತ್ತು ಉಚಿತ ವೆರಿಕೋಸ್ ವೇನ್ಸ್ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶಿಬಿರವನ್ನು ಕುರಿತು ಮಂಗಳೂರು ಡಿಸಿಪಿಗಳಾದ ಹರಿರಾಂ ಶಂಕರ್ ಹಾಗೂ ದಿನೇಶ್ ಕುಮಾರ್ ಮಾತನಾಡಿ, ವೆರಿಕೋಸ್ ವೇನ್ಸ್ ಸಮಸ್ಯೆಯಿಂದ ರಾಜ್ಯದ ಹಲವಾರು ಪೊಲೀಸ್ ಸಿಬ್ಬಂದಿ ಕೂಡ ಬಳಲುತ್ತಿದ್ದಾರೆ ಎಂದು ತಿಳಿಸಿದರು. ಖ್ಯಾತ ತಜ್ಞ ವೈದ್ಯರಾದ ಡಾ.ಎಂ.ವಿ.ಉರಾಳ ಮಾತನಾಡಿ, ನಮ್ಮ ವೆರಿಕೋಸ್ ವೇನ್ಸ್ ಆಯುರ್ವೇದ ಔಷಧಿ ಅತ್ಯಂತ ಪರಿಣಾಮಕಾರಿಯಾಗಿದ್ದು, ಸಾವಿರಾರು ಮಂದಿ ಔಷಧೀಯ ಸದುಪಯೋಗ ಪಡೆದುಕೊಂಡು ಆಪರೇಷನ್ ರಹಿತ ಗುಣಮುಖವಾಗಿದ್ದಾರೆ. ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಉರಾಳಾಸ್ ವೆರಿಕೋಸ್ ವೇನ್ಸ್ ಆಯುರ್ವೇದ ಚಿಕಿತ್ಸೆ ಶಾಖೆಗಳು ತೆರೆದು, ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಬೆಂಗಳೂರು ಸಿಟಿ ಪೊಲೀಸ್ ಯೋಗಕ್ಷೇಮ ಅಧಿಕಾರಿ ಸುಶ್ಮಿತಾ, ಮಂಗಳೂರು ನಗರ ಪೊಲೀಸ್ ಸಹಾಯಕ ಆಯುಕ್ತ ನಟರಾಜ್ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ…
ತಿಪಟೂರು: ತಾಲ್ಲೂಕು ನೊಣವಿನಕೆ ಹೋಬಳಿ ಮಸವನಘಟ್ಟ ಗ್ರಾಮ ಪಂಚಾಯಿತಿ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಕಾವ್ಯ ಹರೀಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಹಸೀಲ್ದಾರ್ ಚಂದ್ರಶೇಖರ್ ಸಹ ಸಹಾಯಕಿಯಾಗಿ ಅರುಣ್ ಕುಮಾರ್ ಅವರು ಕಾರ್ಯನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಬಿಸಿಲಲ್ಲಿ ಜಗದೀಶ್, ತಾಲೂಕು ಅಧ್ಯಕ್ಷ ಸುರೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಬಿಜೆಪಿ ಮುಖಂಡರಾದ ಮಂಜೇಗೌಡ, ಗಿರೀಶ್ ಕುಮಾರ್ ಭಾಗವಹಿಸಿದ್ದರು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿಯ ಎಂ.ಎನ್.ಕೋಟೆ ಗ್ರಾಮದಲ್ಲಿ ಎಂ.ಎನ್.ಕೋಟೆ ವಲಯದ ಪದಾಧಿಕಾರಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಮಾಜಕ್ಕೆ ದೊರೆಯುವ ಸೌಲಭ್ಯಗಳ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಎಂ.ಎನ್.ಕೋಟೆ ಗ್ರಾಮದ ಉದ್ಯಮಿ ಬಿ.ಎನ್.ಮಾರುತಿ ದೀಪ ಬೆಳಗಿಸುವ ಮುಖಾಂತರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದಿಂದ ಪಡೆದುಕೊಂಡ ಪ್ರಗತಿನಿಧಿಯನ್ನು ಉತ್ಪಾದನೆ ಬರುವ ಉದ್ದೇಶಗಳಿಗೆ ಉಪಯೋಗಿಸಿ , ತಾನು ಸ್ವ-ಉದ್ಯೋಗಿ ಯಾಗುವ ಮೂಲಕ ಮತ್ತೊಬ್ಬರಿಗೆ ಕಾಯಕ ಕಲ್ಲಿಸುವ ನಿಟ್ಟಿನಲ್ಲಿ ಸ್ವಾವಲಂಬಿ ಜೀವನ ನಡೆಸಬೇಕು. ಆಗ ಮಾತ್ರ ಶ್ರೀ ಕ್ಷೇತ್ರದಿಂದ ಪಡೆದ ಪ್ರಗತಿ ನಿಧಿಗೆ ಒಂದು ಅರ್ಥ ಬಂದಂತೆ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಎಂ.ಎನ್.ಕೋಟೆ ಗ್ರಾಮದ ಪ್ರಗತಿ ಕೃಷ್ಣ ಬ್ಯಾಂಕ್ ನ ಚಂದನ್, ತುಮಕೂರು ಜಿಲ್ಲಾ ರಿಕವರಿ ಯೋಜನಾಧಿಕಾರಿ ಪುರಂದರ್ ಗುಬ್ಬಿ ತಾಲೂಕಿನ ಯೋಜನಾಧಿಕಾರಿಗಳಾದ ಹರೀಶ್ ಆರ್.ಎಸ್. ಜನಜಾಗೃತಿ ವೇದಿಕೆಯ ಸದಸ್ಯರಾದ ರಂಗಸ್ವಾಮಿ, ಒಕ್ಕೂಟದ…
ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಸುಪ್ರಸಿದ್ಧ ಕಮನೀಯ ಕ್ಷೇತ್ರದ ಶ್ರೀ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ಸನ್ನಿಧಾನದಲ್ಲಿ ಪ್ರತಿ ವರ್ಷವೂ ಸಂಕ್ರಾಂತಿ ಮುಗಿದ ಮಾರನೇ ದಿನ ರಾಸುಗಳ ಜಾತ್ರೆ ಪ್ರಾರಂಭವಾಗಿ, ಸುಮಾರು ಹತ್ತರಿಂದ ಹದಿನೈದು ದಿನಗಳ ಕಾಲ ಭಾರೀ ರಾಸುಗಳ ಜಾತ್ರೆ ನಡೆಯುತ್ತಿತ್ತು. ರಾಸುಗಳ ಜಾತ್ರೆ ಮುಗಿದ ನಂತರ ಶ್ರೀ ಆಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ನಡೆಯುತ್ತಿತ್ತು. ಆದರೆ ಈ ಬಾರಿ ಕೊವಿಡ್ ಹಿನ್ನೆಲೆಯಲ್ಲಿ ಜಾತ್ರೆಗೆ ನಿರ್ಬಂಧ ಹಾಕಲಾಗಿದೆ. ಕೊವಿಡ್ ಮಾರ್ಗಸೂಚಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ನಿರ್ದೇಶನದಂತೆ ಜಾತ್ರೆ ನಡೆದಂತೆ ತಾಲ್ಲೂಕು ಆಡಳಿತವು ನಿರ್ಬಂಧವನ್ನು ವಿಧಿಸಿದ್ದು, ಈ ವಿಚಾರ ತಿಳಿಯದೇ ರಾಸುಗಳನ್ನು ಮಾರಲು ಮತ್ತು ಕೊಳ್ಳಲು ಬಂದ ರೈತರು ನಿರಾಸೆಯಿಂದ ತಮ್ಮ ಊರಿಗೆ ತೆರಳುವಂತಾಗಿದೆ. ಈ ಸಂಬಂಧ ತಾಲೂಕ ದಂಡಾಧಿಕಾರಿ ನಹಿದಾ ಜಮ್ ಜಮ್ ಮಾತನಾಡಿ, ತಾಲ್ಲೂಕಿನಲ್ಲಿ ನಡೆಯುವ ಯಾವುದೇ ಸಭೆ ಸಮಾರಂಭ ಜಾತ್ರೆ ಉರೂಸ್ ಇನ್ನಿತರ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳ ಮುಖೇನ ಸೂಚನೆ ಹೊರಡಿಸಲಾಗಿದೆ. ಆದರೂ ಕ್ಯಾಮೆನಹಳ್ಳಿಯ…
ಮಧುಗಿರಿ: ಕೊವಿಡ್ ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಸ್ವಚ್ಛತೆಗೆ ಜನರು ಹೆಚ್ಚಿನ ಮಹತ್ವ ನೀಡುವ ನಿಟ್ಟಿನಲ್ಲಿ ತಾಲೂಕಿನ ಬೇಡತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ಲೋಕೇಶ್ ತಮ್ಮ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿಯೂ ಗಿಡಗಂಟಿಗಳನ್ನು ತೆರವುಗೊಳಿಸಿ, ಚರಂಡಿ ಸ್ವಚ್ಛಗೊಳಿಸುವ ಮೂಲಕ ಮುನ್ನೆಚ್ಚರಿಕೆ ಕ್ರಮಕೈಗೊಂಡರು. ನೀರಿನ ತೊಟ್ಟಿ ಸ್ವಚ್ಛಗೊಳಿಸಿ, ಚರಂಡಿಗಳ ಹೂಳು ತೆಗೆದು ನೀರು ಸುಗಮವಾಗಿ ಹರಿಯುವಂತೆ ಮಾಡಲಾಯಿತು. ಇನ್ನು ಸ್ವಚ್ಛತಾ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಾದ ಸಂತೋಷ್ ಸಿಂಗ್, ಸಮಾಜದಲ್ಲಿ ಗೌರವ ಇರಬೇಕಾದರೆ ನಾವು ಆರೋಗ್ಯಕರ ಮತ್ತು ನೈರ್ಮಲ್ಯದಿಂದ ಬದುಕಬೇಕು. ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಕೈಜೋಡಿಸಿದ ಅನಿತಾ ಲೋಕೇಶ್ ಅಧ್ಯಕ್ಷರು ಸ್ವಚ್ಛತೆಗೆ ಕಾರಣೀಭೂತರಾಗಿದ್ದಾರೆ ಎಂದು ಹೇಳಿದರು. ಇನ್ನೂ ಕಾರ್ಯಕ್ರಮದ ಸಂದರ್ಭ ಮಾತನಾಡಿದ ಅನಿತಾ ಲೋಕೇಶ್, ಓಮಿಕ್ರಾನ್ ಸೋಂಕು ಸೌಮ್ಯ ಸ್ವಭಾವದ್ದು ಎಂದು ಕೆಲವರು ಭಾವಿಸಿದ್ದಾರೆ. ಆದರೆ, ಇದು ವೇಗವಾಗಿ ಕಾಡ್ಗಿಚ್ಚಿನಂತೆ ಇಡೀ ವಿಶ್ವವನ್ನೇ ಆವರಿಸುತ್ತಿದೆ. ಈ ಹೊಸ ರೂಪಾಂತರವು ಹಿಂದಿನ ತಳಿಗಿಂತ ಸಾಂಕ್ರಾಮಿಕವಾಗಿದೆ. ಗಂಭೀರವಾದ ರೋಗವನ್ನುಂಟು ಮಾಡುತ್ತದೆ. ಹಾಗಾಗಿ ಇದನ್ನು…
ಸರಗೂರು: ತಾಲ್ಲೂಕಿನ ಬಿ ಮಟಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಣೇಗಾಲ ಗ್ರಾಮದಲ್ಲಿ ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೀರಿನ ತೊಂಬೆಯ ಕಳಪೆ ಕಾಮಗಾರಿಯಿಂದಾಗಿ ಜನರು ನೀರಿನ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ನಮ್ಮತುಮಕೂರು.ಕಾಂ ವರದಿ ಮಾಡಿದ್ದು, ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಮತ್ತು ಇಂಜಿನಿಯರ್ ಇದೀಗ ಕಾಮಗಾರಿ ಮತ್ತೆ ಆರಂಭಿಸಿದ್ದಾರೆ. ಈ ಬಗ್ಗೆ ನಮ್ಮತುಮಕೂರು.ಕಾಂ ಜೊತೆಗೆ ಮಾತನಾಡಿದ ಗ್ರಾಮದ ಸುರೇಶ್ ಅವರು, ಸುಮಾರು ಒಂದು ವರ್ಷಗಳ ಹಿಂದೆ ಕಾಮಗಾರಿ ಆರಂಭವಾಗಿದ್ದರೂ, ಈವರೆಗೆ ಪೂರ್ಣಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮತುಮಕೂರು.ಕಾಂ ಪ್ರತಿನಿಧಿ ಚಂದ್ರ ಹಾದನೂರು ಅವರಿಗೆ ನಾವು ಮಾಹಿತಿ ನೀಡಿದ್ದು, ವರದಿಯ ಪ್ರಕಟಗೊಂಡ ಬೆನ್ನಲ್ಲೇ ಇದೀಗ ತೊಂಬೆ ಕಾಮಕಾರಿ ಆರಂಭಗೊಂಡಿದೆ ಎಂದು ತಿಳಿಸಿದರು. ತಾಲ್ಲೂಕಿನ ಬಿ ಮಟಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಣೇಗಾಲ ಗ್ರಾಮದಲ್ಲಿ ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೀರಿನ ತೊಂಬೆ ಅತ್ಯಂತ ಕಳಪೆ ಗುಣಮಟ್ಟ ಹೊಂದಿದ್ದು, ಇದರಿಂದಾಗಿ ಗ್ರಾಮಸ್ಥರು ನೀರಿನ ಸಮಸ್ಯೆಯಿಂದ ಕಂಗೆಟ್ಟಿದ್ದರು. ಈ ಸಂಬಂಧ “ನೀರಿನ ತೊಂಬೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ: ನೀರಿಲ್ಲದೇ…
ಮುರುಳಿಧರನ್ ಆರ್., ಚಿತ್ರದುರ್ಗ ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮದಲ್ಲಿ ರೂ.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದ ವೇಳೆ ಹಿರಿಯೂರು ಶಾಸಕಿಯ ಪತಿ ಡಿ.ಟಿ.ಶ್ರೀನಿವಾಸ್ ದರ್ಬಾರ್ ನಡೆಸಿದ್ದು, ಶಿಷ್ಠಾಚಾರ ಉಲ್ಲಂಘಿಸಿರುವ ಬಗ್ಗೆ ವ್ಯಾಪಕ ಚರ್ಚೆ ಕೇಳಿ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹೊರವಲಯದಲ್ಲಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನೆಯ ಸಂದರ್ಭದಲ್ಲಿ ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಪ್ರಾಸ್ತಾವಿಕ ಭಾಷಣ ಮಾಡಬೇಕಿತ್ತು. ಆದರೆ, ಶಾಸಕಿಯ ಪತಿ ವೇಳೆ ಶಿಷ್ಠಾಚಾರ ಉಲ್ಲಂಘಿಸಿ ದರ್ಬಾರ್ ನಡೆಸಿರುವುದು ಇದೀಗ ತೀವ್ರ ಟೀಕೆಗೆ ಗುರಿಯಾಗಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ನಾರಾಯಣ ಸ್ವಾಮಿ, ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವರಿ ಸಚಿವ ಶ್ರೀರಾಮುಲು ಇದ್ದರು. ಶಾಸಕಿಯ ಬದಲು ಶಾಸಕಿಯ ಪತಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವುದನ್ನು ಯಾರೂ ಕೂಡ ಪ್ರಶ್ನಿದೇ ಮೌನವಾಗಿದ್ದದ್ದು ಕಂಡು ಬಂತು. ಜಿಲ್ಲಾಡಳಿತ ಕೂಡ ಈ…