Subscribe to Updates
Get the latest creative news from FooBar about art, design and business.
- ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!
- ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!
- ಚಳಿಗಾಲದ ಸಿಹಿ ತಿನಿಸು ‘ಬೀಟ್ರೂಟ್ ಹಲ್ವಾ’: ರುಚಿಯ ಜೊತೆಗೆ ಆರೋಗ್ಯಕ್ಕೂ ಇದು ವರ!
- ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ
- ತಿಪಟೂರು: ಬೀದಿ ನಾಯಿಗಳ ಹಾವಳಿ ತಡೆಗೆ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಸೂಚನೆ
- ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ಕೆ.ಎನ್. ರಾಜಣ್ಣ
- ಕೊರಟಗೆರೆ | ಶಾಲಾ ಮಕ್ಕಳಿಗೆ ಟ್ರ್ಯಾಕ್ಸ್ ಶೂಟ್ ವಿತರಣೆ
- ಶಬರಿಮಲೆ ದರ್ಶನ ಮುಗಿಸಿ ಮರಳುವಾಗ ಭೀಕರ ಅಪಘಾತ: 7 ವರ್ಷದ ಮಗು ಸೇರಿ ನಾಲ್ವರು ದುರ್ಮರಣ
Author: admin
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಹೆಡ್ ಕಾನ್ ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ ಗಳು ಬ್ರಿಟೀಷರ ಕಾಲದ ಟೋಪಿಯಿಂದ ಮುಕ್ತಿ ಪಡೆಯಲಿದ್ದಾರೆ. ಈ ಬೇಡಿಕೆ ಬಹು ವರ್ಷಗಳ ಬೇಡಿಕೆಯಾಗಿತ್ತು. ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್ ಪೀಕ್ ಹ್ಯಾಟ್ ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳ ತಲೆಯನ್ನು ಅಲಂಕರಿಸಲಿದೆ ಎಂದು ಹೇಳಲಾಗಿದೆ. ಬ್ರಿಟೀಷರ ಕಾಲದ ಟೋಪಿಯಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಿತ್ತು. ಪ್ರತಿಭಟನೆಯ ಸಂದರ್ಭಗಳಲ್ಲಿ ಓಡುವಾಗ ಟೋಪಿ ಕೆಳಗೆ ಬಿದ್ದರೆ ಸಾರ್ವಜನಿಕವಾಗಿ ಅವಮಾನವಾಗುತ್ತಿತ್ತು. ಪ್ರಸ್ತುತ ಸ್ಮಾರ್ಟ್ ಪೀಕ್ ಹ್ಯಾಟ್ ಬದಲಾವಣೆ ಮಾಡಿದರೆ, ಈ ಸಮಸ್ಯೆಗಳಿಂದ ಪೊಲೀಸರಿಗೆ ಮುಕ್ತಿ ಸಿಗಲಿದೆ. ಗ್ಲೋಚ್ ಟೋಪಿಯಿಂದ ಪೊಲೀಸ್ ಕಾನ್ಸ್ ಟೇಬಲ್ ಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ವರದಿ ನೀಡಿತ್ತು. ಈಗಾಗಲೇ ಕೇರಳ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಅಲ್ಲಿನ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳಿಗೆ ಪೀಕ್ ಕ್ಯಾಪ್ ಗಳನ್ನು ನೀಡಲಾಗಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಸಲು…
ನಾಗ್ಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಗ್ಪುರದ ಡಾ.ಹೆಡಗೇವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿ ಆರ್ ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಮತ್ತು ಎರಡನೇ ಸರ್ಸಂಘಚಾಲಕ್ (ಮುಖ್ಯಸ್ಥ) ಎಂಎಸ್ ಗೋಳ್ವಾಲ್ಕರ್ ಅವರ ಸ್ಮಾರಕಗಳಿಗೆ ನಮನ ಸಲ್ಲಿಸಿದರು. RSS ಆಡಳಿತ ಕೇಂದ್ರ ಕಚೇರಿಯಾದ ರೇಶಿಂಬಾಗ್ನಲ್ಲಿರುವ ಸ್ಮೃತಿ ಮಂದಿರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ ಜೋಶಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆಗಿದ್ದರು. ಈ ಸ್ಮಾರಕಗಳು ಭಾರತೀಯ ಸಂಸ್ಕೃತಿ, ರಾಷ್ಟ್ರೀಯತೆ ಮತ್ತು ಸಂಘಟನೆಯ ಮೌಲ್ಯಗಳಿಗೆ ಸಮರ್ಪಿತವಾಗಿವೆ ಎಂದು ಪ್ರಧಾನಿ ಮೋದಿ ಸ್ಥಳದಲ್ಲಿದ್ದ ಸಂದೇಶ ಪುಸ್ತಕದಲ್ಲಿ ಹಿಂದಿಯಲ್ಲಿ ಬರೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬಿಲಾಸ್ ಪುರ: ಛತ್ತೀಸ್ ಗಢದ ಬಿಲಾಸ್ ಪುರದಲ್ಲಿ ನಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಎಸ್ ಯುವಿ ಕಾರು ಸೇತುವೆಯಿಂದ ನದಿಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು ಏಳು ಮಂದಿ ಗಾಯಗೊಂಡಿದ್ದಾರೆ. ಗೌರೆಲಾ-ಪೇಂದ್ರ-ಮಾರ್ವಾಹಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪೆಂಡ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಮಿ ಗ್ರಾಮದ ಬಳಿ ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಎಂಟು ಜನರೊಂದಿಗೆ ಎಸ್ ಯುವಿ ಮನೇಂದ್ರಗಢ—ಚಿರ್ಮಿರಿ–ಭಾರತ್ ಪುರ (ಎಂಸಿಬಿ) ಜಿಲ್ಲೆಯಿಂದ ಬಿಲಾಸ್ಪುರಕ್ಕೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸೋನ್ ನದಿಯ ಸೇತುವೆ ತಲುಪುವಷ್ಟರಲ್ಲಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು, ನದಿಗೆ ಬಿದ್ದಿದೆ. ಅಪಘಾತದಲ್ಲಿ ಮಹಿಳಾ ಪಾದಚಾರಿ ಮತ್ತು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಸ್ ಯುವಿಯಲ್ಲಿದ್ದ ಇತರ ಏಳು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೆಂಗಳೂರು: ಒಂದನೇ ತರಗತಿ ಶಾಲಾ ಪ್ರವೇಶ ವಯೋಮಿತಿಯನ್ನು ರಾಜ್ಯ ಶಿಕ್ಷಣ ನೀತಿ (SEP)ಆಯೋಗದ ಶಿಫಾರಸಿನಂತೆ ನಿಗದಿಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ. 1ನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ವಯೋಮಿತಿ ಸಡಿಲಿಕೆ ನೀಡುವಂತೆ ಹಲವು ಪೋಷಕರ ಮನವಿಯ ಹಿನ್ನೆಲೆಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಿದ್ದರು. ಇದು ಹಿಂದಿನ ಸರ್ಕಾರ ಮಾಡಿದ ತಪ್ಪಾಗಿದೆ. ಅವರು ರಾಷ್ಟ್ರೀಯ ಶಿಕ್ಷಣ ನೀತಿ ಮಾರ್ಗಸೂಚಿ ರೂಪಿಸಿದ್ದಾರೆ. ನಾವು ಅದರ ವಿರುದ್ಧವಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ರಾಜ್ಯ ಶಿಕ್ಷಣ ನೀತಿ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಒಂದು ಊರಿನಲ್ಲಿ ಒಬ್ಬ ಅಗಸ ಒಂದು ಕತ್ತೆ ಸಾಕಿದ್ದನು. ಅದನ್ನು ಬಟ್ಟೆಗಳನ್ನು ಹೇರಿಕೊಂಡು ನದಿಗೆ ಹೋಗಿ ಒಗೆದು, ಒಣಗಿಸಿ ಮತ್ತೆ ಹೇರಿಕೊಂಡು ಊರಿಗೆ ಬರಲು ಉಪಯೋಗಿಸುತ್ತಿದ್ದನು. ದಿನಾಲೂ ಬಟ್ಟೆತೂಕ ಹೊರುವುದೇ ಅದರ ಕಾಯಕವಾಗಿತ್ತು. ಒಂದು ದಿನ ರಾತ್ರಿ ಕತ್ತೆ ಮಲಗಿಕೊಂಡು ಹೀಗೆ ಯೋಚಿಸುತ್ತಿತ್ತು. ಈ ಅಗಸ ನನಗೆ ದಿನಾಲೂ ತೂಕ ಹೊರಿಸುತ್ತಾನೆ, ನನಗೂ ತೂಕ ಹೊತ್ತೂ ಹೊತ್ತೂ ಸಾಕಾಗಿ ಹೋಗಿದೆ. ಹೇಗಾದರೂ ಮಾಡಿ ಇವನಿಂದ ತಪ್ಪಿಸಿಕೊಂಡು ಹೋಗಬೇಕಲ್ಲ, ನಾನು ಸ್ವತಂತ್ರ್ಯವಾಗಿ ಬದುಕಬೇಕು ಎಂದುಕೊಂಡು ಸಮಯಕ್ಕಾಗಿ ಕಾಯುತ್ತಿತ್ತು. ಒಂದು ದಿನ ಅಗಸನನ್ನು ನದಿ ಬಳಿ ಬಿಟ್ಟು ಮೇಯಲು ಸ್ವಲ್ಪದೂರವಿದ್ದ ಕಾಡಿಗೆ ಹೋಯಿತು ಅದರ ಎದುರು ನರಿಯೊಂದು ಬಂದಿತು. ನರಿಯನ್ನು ನೋಡಿ ಕತ್ತೆ ಇದರ ಉಪಾಯ ಪಡೆದರೆ ಹೇಗೆ ಎಂದುಕೊಂಡು ನರಿಯನ್ನು ಕರೆದು ತನ್ನ ಕಷ್ಟವನ್ನೆಲ್ಲಾ ಹೇಳಿಕೊಂಡು ಒಂದು ಉಪಾಯ ನೀಡುವಂತೆ ಕೇಳಿಕೊಂಡಿತು. ನರಿಗೆ ಹಿಂದೆ ಚಿರತೆಯೊಂದು ತನಗಿಷ್ಟವಾದ ಊರಿನ ಕತ್ತೆಯೊಂದನ್ನು ಊಟಕ್ಕಾಗಿ ತಂದು ಕೊಟ್ಟರೆ ನರಿಗೆ ಪ್ರತಿಯಾಗಿ ನರಿ ಕೇಳಿದ ಬೇಟೆಯೊಂದನ್ನು ಮಾಡಿ…
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಒಂದೆಡೆಯಾದರೆ, ಇನ್ನೊಂದೆಡೆ ಯುಗಾದಿ ಹಬ್ಬದ ಸಂಭ್ರಮ ಸಡಗರ ಮನೆ ಮಾಡಿದೆ. ಹಾಲು, ಹೂವು, ಹಣ್ಣು, ತರಕಾರಿ ಸೇರಿದಂತೆ ಮತ್ತಿತರ ದಿನೋಪಯೋಗಿ ವಸ್ತುಗಳ ಬೆಲೆ ಗಗನಕ್ಕೇರಿದೆ. ಈ ಬಾರಿ ಬೆಲೆ ಏರಿಕೆಯೊಂದಿಗೆ ಜನ ಯುಗಾದಿ ಹಬ್ಬ ಆಚರಿಸುತ್ತಿದ್ದಾರೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ಇದು ಭರವಸೆ ಮತ್ತು ಜೀವನೋತ್ಸಾಹದೊಂದಿಗೆ ಸಂಬಂಧ ಹೊಂದಿರುವ ವಿಶೇಷ ಹಬ್ಬವಾಗಿದೆ. ಸಂತೋಷ ಮತ್ತು ಸಾಮರಸ್ಯದ ಮನೋಭಾವ ಬೆಳೆಯಲಿ ಮತ್ತು ಅರಳಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ‘ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ’ ನಾಡಿನೆಲ್ಲೆಡೆ ವಿಶ್ವಾವಸು ಸಂವತ್ಸರದ ಆಚರಣೆ, ಹಬ್ಬದ ಸಂಭ್ರಮ ನೋವು – ನಲಿವು, ಸೋಲು – ಗೆಲುವು, ಕಷ್ಟ – ಸುಖಗಳ…
ತುಮಕೂರು: ನಮ್ಮ ತಂದೆ ಕಾಲದ ರಂಗಭೂಮಿ ಇಂದು ನೋಡಲು ಸಾಧ್ಯವಿಲ್ಲ. ಇಂದಿನ ರಂಗಭೂಮಿಯಲ್ಲಿ ಬರೀ ಭಾವನೆಗಳನ್ನು ಸರಮಾಲೆಯಲ್ಲಿಯೇ ಹಿಡಿದಿಡಲಾಗುತ್ತಿದೆ. ಅಂತಹ ರಂಗಭೂಮಿ ಬೆಳೆದು ನಿಲ್ಲುವುದಾದರೂ ಹೇಗೆ? ಎಂಬ ಬೃಹದಾಕಾರದ ಪ್ರಶ್ನೆಗಳು ಹೆಮ್ಮರವಾಗಿ ಬೆಳೆಯುತ್ತಿರುವುದಕ್ಕೆ ಈ ಹೊತ್ತಿನ ಕುಟುಂಬಗಳೇ ಸಾಕ್ಷಿಎಂದು ಸಿಂಡಿಕೇಟ್ ಸದಸ್ಯರು ಹಾಗೂ ಹಿರಿಯ ಪ್ರಾಧ್ಯಾಪಕರು ಆಗಿರುವ ತುಮಕೂರು ವಿಶ್ವವಿದ್ಯಾನಿಲಯದಪ್ರೊ. ಪರಶುರಾಮ ಕೆ.ಜಿ. ಹೇಳಿದರು. ತುಮಕೂರಿನ ಸದಾಶಿವನಗರದಲ್ಲಿರುವ ಬೆಳ್ಳಿ ರಂಗ ಮನೆಯಲ್ಲಿ ಶ್ರೀ ರಂಗರಂಗ ಹವ್ಯಾಸಿ ಕಲಾವೃಂದ ಟ್ರಸ್ಟ್, ತುಮಕೂರು, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಮಕೂರು ಇವರುಗಳ ಸಹಕಾರದಲ್ಲಿ 27 ಮಾರ್ಚ್ 2025 ರಂದುಗುರುವಾರ ಸಂಜೆ 4 ಗಂಟೆಗೆ ಏರ್ಪಡಿಸಿದ್ದ “ವಿಶ್ವರಂಗಭೂಮಿ ದಿನಾಚರಣೆ” ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಖಾಸಗೀಕರಣ, ಉದಾರೀಕರಣದ ಸಂದರ್ಭದಲ್ಲಿ ಬದುಕುತ್ತಿರುವ ನಾವುಗಳು ರಂಗಭೂಮಿಯನ್ನು ವ್ಯವಹಾರೀಕರಣವಾಗಿಸುತ್ತಿರುವ ನಮ್ಮ ಕಲಾವಿದರು ಬೆಳೆಯುವುದಾದರೂ ಹೇಗೆ? ಎಂದು ಪ್ರಶ್ನಸಿದರು. ಇದಕ್ಕೆ ಕಾರಣಗಳು ಬೇಕಾದಷ್ಟಿರಬಹುದು. ಆದರೆ ನೈಜವಾದ ನಾಟಕಗಳ ಪ್ರಯೋಗ ನೀಡಿದ/ನೋಡಿದ ಗುಬ್ಬಿ ಕಂಪನಿಯಾಗಲಿ, ಸುಬ್ಬಯ್ಯನಾಯ್ಡು ಕಂಪನಿಯಾಗಲಿ, ಆರ್. ನಾಗರತ್ನಮ್ಮನವರ ಕಂಪನಿಯಾಗಲಿ, ಹಿರಣ್ಣಯ್ಯ…
ತುಮಕೂರು: ಜಿಲ್ಲೆಯಲ್ಲಿ 2024ರ ಜನವರಿಯಿಂದ ಈವರೆಗೆ 141 ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 176 ಸಂತ್ರಸ್ತರಿಗೆ 1,19,13,500 ರೂ.ಗಳ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕಳೆದ ಕ್ಯಾಲೆಂಡರ್ ವರ್ಷದ ಜನವರಿ ಮಾಹೆಯಿಂದ 2025ರ ಮಾರ್ಚ್ 27ರವರೆಗೆ ದಲಿತರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ 112 ಪ್ರಕರಣಗಳಲ್ಲಿ 140 ನೊಂದ ಪರಿಶಿಷ್ಟ ಜಾತಿಯ ಸಂತ್ರಸ್ತರಿಗೆ 97,38,500 ರೂ. ಹಾಗೂ 29 ಪ್ರಕರಣಗಳಲ್ಲಿ 36 ಪರಿಶಿಷ್ಟ ವರ್ಗದ ಸಂತ್ರಸ್ತರಿಗೆ 21,75,000 ರೂ.ಗಳ ಪರಿಹಾರವನ್ನು ಮಂಜೂರು ಮಾಡಲಾಗಿದೆ ಎಂದು ಸಭೆಯಲ್ಲಿ ಹಾಜರಿದ್ದ ದಲಿತ ಮುಖಂಡರ ಗಮನಕ್ಕೆ ತಂದರು. ಜಿಲ್ಲೆಯಲ್ಲಿ ಕಳೆದ ವರ್ಷದಿಂದ ಈವರೆಗೂ 300ಕ್ಕೂ ಹೆಚ್ಚು ದಲಿತ ದೌರ್ಜನ್ಯ ಪ್ರಕರಣಗಳು ವರದಿಯಾಗಿರುವುದಲ್ಲದೆ, ದಿನೇ ದಿನೇ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದರಿಂದ ದಲಿತರ ದೌರ್ಜನ್ಯ ಪ್ರಕರಣಗಳು ವರದಿಯಾದಾಗ ಪೊಲೀಸ್ ಅಧಿಕಾರಿಗಳು ತಕ್ಷಣವೇ…
ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ನಗೆಮಲ್ಲಿಗೆ ಬಳಗದ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 1ರಂದು ಸಂಜೆ 4 ಗಂಟೆಗೆ ನಗರದ ಕನ್ನಡಭವನದಲ್ಲಿ 30ನೇ ವರ್ಷದ “ಮೂರ್ಖರ ದಿನಾಚರಣೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡ ಭವನದಲ್ಲಿ ನಿರ್ಮಿಸಲಾಗುವ ಹಾಸ್ಯ ಸಾಹಿತಿ ಗೌಡನಕಟ್ಟೆ ತಿಮ್ಮಯ್ಯ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗೆಮಲ್ಲಿಗೆ ಬಳಗದ ಅಧ್ಯಕ್ಷೆ ಬಾ.ಹ. ರಮಾಕುಮಾರಿ ವಹಿಸಲಿದ್ದು, ಸಂಸ್ಕಾರ ಭಾರತಿ ಅಧ್ಯಕ್ಷ ಬಿ.ಆರ್.ನಟರಾಜ ಶೆಟ್ಟಿ ಉದ್ಘಾಟಿಸುವರು. ಜಿಲ್ಲಾ ಕಸಾಪ ಕೊಡಮಾಡುವ ಗೌ.ತಿ.ದತ್ತಿ ಪ್ರಶಸ್ತಿಯನ್ನು ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಪ್ರದಾನ ಮಾಡುವರು. ದಿನಾಚರಣೆ ಪ್ರಯುಕ್ತ ಡಾ: ಬಿ.ಸಿ. ಶೈಲಾನಾಗರಾಜ್ ಅವರ ಉಪಸ್ಥಿತಿಯಲ್ಲಿ ಹಾಸ್ಯ ಕವಿಗೋಷ್ಠಿ ನಡೆಯಲಿದೆ. ಕವಿಗೋಷ್ಠಿಯಲ್ಲಿ ಜಿ.ಕೆ.ಕುಲಕರ್ಣಿ, ಸುಮ ಬೆಳಗೆರೆ, ಓಂಕಾರಪ್ರಿಯ ಬಾಗೇಪಲ್ಲಿ, ಕಮಲಾರಾಜೇಶ್, ಸಿಹಿಜೀವಿ ವೆಂಕಟೇಶ್ವರ, ಅಬ್ಬಿನಹೊಳೆ ಸುರೇಶ್, ತುರುವೇಕೆರೆ ಪ್ರಸಾದ್, ಸಂಕೇತ್ ಗುರುದತ್ತ, ಅರುಣಕುಮಾರ್ ಕಲ್ಲೂರು, ಇಂದಿರಾ ಸಿ.ಎ. ಸೇರಿದಂತೆ ಹಲವಾರು ಕವಿಗಳು ಭಾಗವಹಿಸಲಿದ್ದಾರೆ. ಹಿರೇಮಗಳೂರು ಕಣ್ಣನ್ ಆಕರ್ಷಣೆ: ನಂತರ, ಹರಟೆ ಖ್ಯಾತಿಯ ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಮತ್ತು…
ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ 21 ರಿಂದ 24 ವರ್ಷದೊಳಗಿನ ನಿರುದ್ಯೋಗಿ ಯುವಕ/ಯುವತಿಯರಿಗೆ 1 ವರ್ಷದ ಇಂಟರ್ನ್ಶಿಪ್ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ತರಬೇತಿ ಪಡೆಯಲಿಚ್ಛಿಸುವವರು ಮಾರ್ಚ್ 31ರೊಳಗಾಗಿ www.pminternship.mca.gov.in ಪೋರ್ಟಲ್ನಲ್ಲಿ ಅಗತ್ಯ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ./ ಐಟಿಐ/ ದ್ವಿತೀಯ ಪಿಯುಸಿ/ ಬಿಎ/ ಬಿಎಸ್ಸಿ/ ಬಿ.ಕಾಂ/ ಬಿಸಿಎ/ ಬಿಬಿಎ/ಬಿ–ಫಾರ್ಮ ವಿದ್ಯಾರ್ಹತೆ ಹೊಂದಿರುವವರು ತರಬೇತಿಗೆ ಅರ್ಹರಿರುತ್ತಾರೆ. ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 1.25ಲಕ್ಷ ರೂ.ಗಳ ಮಿತಿಯೊಳಗಿರಬೇಕು. ಕುಟುಂಬ ಸದಸ್ಯರಲ್ಲಿ ಯಾವುದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಿ/ ಸರ್ಕಾರಿ ಸ್ವಾಯತ್ತ ಸಂಸ್ಥೆಗಳಲ್ಲಿ ಖಾಯಂ ನೌಕರರಾಗಿರಬಾರದು. ತರಬೇತಿ ಅವಧಿಯಲ್ಲಿ ಮಾಸಿಕ 5,000 ರೂ.ಗಳ ಕಲಿಕಾ ವೇತನ ನೀಡಲಾಗುವುದು. ಇಂಟರ್ನ್ಶಿಪ್ ಪೂರ್ಣಗೊಂಡ ನಂತರ ಅರ್ಹತೆ ಆಧಾರದ ಮೇಲೆ 6,000 ರೂ.ಗಳನ್ನು ಅಭ್ಯರ್ಥಿಯ ಬ್ಯಾಂಕ್ ಖಾತೆಗೆ ಸಂದಾಯ ಮಾಡಿ ಪ್ರಮಾಣ ಪತ್ರ ವಿತರಣೆ ಮಾಡಲಾಗುವುದು. ಉದ್ಯೋಗಾವಕಾಶ ಕಲ್ಪಿಸಿಕೊಳ್ಳಲು ಈ ತರಬೇತಿ ಉಪಯೋಗವಾಗಲಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…