Author: admin

ಔರಾದ್ : ಪಟ್ಟಣದ ಯುವಕನೊಬ್ಬ 11 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಬುಧವಾರ ಔರಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ 30 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.  ಬಾಲಕಿ ಹಾಗೂ ಯುವಕ ಒಂದೇ ಬಡಾವಣೆಯಲ್ಲಿ ವಾಸವಿದ್ದು, ಬಾಲಕಿ ಕುಟುಂಬಸ್ಥರಿಗೂ ಮತ್ತು ಯುವಕನಿಗೆ ಪರಿಚಯವಿತ್ತು. ಯುವಕ ಆಗಾಗ ಬಾಲಕಿ ಜತೆ ಅನುಚಿತವಾಗಿ ವರ್ತಿಸುತ್ತಿದ್ದ. ಈ ಕುರಿತು ಬಾಲಕಿ ಪಾಲಕರಲ್ಲಿ ವಿಷಯ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ವರದಿ:  ಅರವಿಂದ ಮಲ್ಲಿಗೆ, ಬೀದರ್  ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್‌: ಎಕಂಬಾ ಗ್ರಾಮದಲ್ಲಿ ಶಾಲಾ ಬಸ್ ಹರಿದು ಮೃತಪಟ್ಟ ಬಾಲಕಿಯ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಅವರು ಭೇಟಿ ನೀಡಿ ಬಾಲಕಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸೇಂಟ್ ಪೌಲ್ ಪಬ್ಲಿಕ್ ಶಾಲೆಯ ಆಡಳಿತ ಮಂಡಳಿ ಹಾಗೂ ವಾಹನ ಚಾಲಕನ ನಿರ್ಲಕ್ಷ್ಯತನದಿಂದ ನಮ್ಮ ಮಗು ವಾಹನದ ಚಕ್ರದಲ್ಲಿ ಸಿಲುಕಿ ಮೃತಪಟ್ಟಿದೆ. ಶಾಲೆ ಶುಲ್ಕ ಕಟ್ಟಲು ಫೋನ್ ಮಾಡಿದ ಶಾಲಾ ಆಡಳಿತ ಮಂಡಳಿ, ನಮ್ಮ ಮಗಳು ಪ್ರಾಣ ಬಿಟ್ಟರೂ ಫೋನ್ ಮಾಡಲಿಲ್ಲ. ಇದಕ್ಕೆಲ್ಲ ಚಾಲಕನ ಕುಡಿತವೇ ಕಾರಣ ಎಂದು ಪಾಲಕರು ಕೋಸಂಬೆ ಅವರಲ್ಲಿ ಅಳಲು ತೋಡಿಕೊಂಡರು. ನಾವು ಬಡವರು, ನಮಗೆ ನ್ಯಾಯ ಕೊಡಿಸಿ. ಇಂತಹ ಘಟನೆ ಮರಕಳಿಸದಂತೆ ಶಾಲೆ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಬಾಲಕಿಯ ತಾಯಿ ಪೂಜಾ ಅವರು ಮನವಿ ಮಾಡಿಕೊಂಡರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೀದರ್/ಔರಾದ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾದಿಗ ದಂಡೋರ ಹೋರಾಟ ಸಮಿತಿ  ರಾಜ್ಯ ಕಾರ್ಯಾಧ್ಯಕ್ಷರಾದ ಫರ್ನಾಂಡಿಸ ಹಿಪ್ಪಳಗಾಂವ ಅವರ ನೇತೃತ್ವದಲ್ಲಿ ನೂತನ ತಾಲೂಕು ಪದಾಧಿಕಾರಿಗಳ ನೇಮಕಗೊಳಿಸಿ ಆದೇಶ ಪತ್ರ ನೀಡಲಾಯಿತು. ಪದಾಧಿಕಾರಿಗಳ ವಿವರ:  ತಾಲೂಕು ಗೌರವಾಧ್ಯಕ್ಷರಾಗಿ ಜಗನಾಥ ಕೌಠ, ತಾಲೂಕು ಅಧ್ಯಕ್ಷರಾಗಿ ಬಸವರಾಜ್ ಮಾಳಗೆ, ಕಾರ್ಯಧ್ಯಕ್ಷರಾಗಿ ಅಶೋಕ್ ನಾಗನಪಲ್ಲಿ, ಉಪಾಧ್ಯಕ್ಷರಾಗಿ ಶಿವರಾಜ ಬೆಲ್ದಾಳ, ಸಂಜು ಮೇತ್ರ  ರಾಯಪಳ್ಳಿ, ಸತೀಶ್ ನಾಗೂರ್, ಸುಂದರ ಖಾನಾಪುರ್, ಕಾರ್ಯದರ್ಶಿಗಳಾಗಿ ಶಿರೋಮಣಿ, ಅನಿಲ್, ಭಗವಂತ, ಖಜಂಚಿಯಾಗಿ ಶ್ಯಾಮವೇಲ, ಯುವ ಘಟಕ ಅಧ್ಯಕ್ಷರಾಗಿ ಮಾರುತಿ ಸೂರ್ಯವಂಶಿ, ಕಾರ್ಯಕಾರಿಣಿ ಸದಸ್ಯರುಗಳಾಗಿ ಸಿಮೋನ್, ಉಮಾಕಂತ್,  ನಾಗಪ್ಪ, ಕಾರ್ಮಿಕ ಘಟಕ ತಾಲೂಕು ಅಧ್ಯಕ್ಷರಾಗಿ ನಾಗಪ್ಪ, ಕಾರ್ಯದರ್ಶಿಗಳಾಗಿ ಆನಂದ್, ಉಪಾಧ್ಯಕ್ಷರಾಗಿ ಅಮೃತ್ ಶಿವಕುಮಾರ ಅವರನ್ನು ನೇಮಕ ಮಾಡಲಾಗಿದೆ ಎಂದು ಮಾದಿಗ ದಂಡೂರ ಹೋರಾಟ ಸಮಿತಿಯ ಜಿಲ್ಲಾ ಘಟಕ ಅಧ್ಯಕ್ಷರಾದ ವಿಜಯಕುಮಾರ್ ಹಿಪ್ಪಳಗಾಂವ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಮುದಾಯದ ಯುವ ಮುಖಂಡರಾದ ಸುಧಾಕರ್ ಕೊಳ್ಳುರ, ದಂಡೂರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿದಾಸ್ ಮೇಘ, ಕಮಲ್ ಹಾಸನ್,…

Read More

ತುಮಕೂರು: ನ್ಯಾಯಾಲಯದ ಆವರಣದಲ್ಲಿ ಬೀದಿ ನಾಯಿಯೊಂದು ಮಹಿಳೆಯ ಮೇಲೆ ಭೀಕರವಾಗಿ ದಾಳಿ ನಡೆಸಿದ್ದು, ತೀವ್ರ ರಕ್ತಸ್ರಾವವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ತುಮಕೂರು ಜಿಲ್ಲೆಯ ಗುಬ್ಬಿ ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯನ್ನು ತಿಪಟೂರು ತಾಲ್ಲೂಕಿನ ಬೀರಸಂದ್ರ ಗ್ರಾಮದ ನಿವಾಸಿ ಗಂಗೂಬಾಯಿ (35) ಎಂದು ಗುರುತಿಸಲಾಗಿದ್ದು, ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ನ್ಯಾಯಾಲಯಕ್ಕೆ ಬಂದಿದ್ದರು. ಗಂಗೂಬಾಯಿ ಶೌಚಾಲಯದಿಂದ ಹೊರಬಂದಾಗ ನಾಯಿ ಆಕೆಯ ಮೇಲೆ ಎರಗಿದೆ. ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ, ಪದೇ ಪದೇ ದಾಳಿ ಮಾಡಿ, ಆಕೆಯ ಮುಖವನ್ನು ಕಚ್ಚಿದೆ. ಆಕೆಯ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿ ಆಕೆಯನ್ನು ರಕ್ಷಿಸಲು ಹೋಗಿ ನಾಯಿಯ ಹಿಡಿತದಿಂದ ಬಿಡಿಸುವಲ್ಲಿ ಯಶಸ್ವಿಯಾದರು. ಘಟನೆಯಿಂದ ಆಘಾತಕ್ಕೊಳಗಾದ ಮತ್ತು ಕೋಪಗೊಂಡ ಅವರು ನಂತರ ನಾಯಿಯನ್ನು ಬೆನ್ನಟ್ಟಿ ಕೊಂದಿದ್ದಾರೆ.  ಗಾಯಾಳು ಮಹಿಳೆಯನ್ನು ಮೊದಲು ಚಿಕಿತ್ಸೆಗಾಗಿ ಗುಬ್ಬಿ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ನಂತರ ಉನ್ನತ ವೈದ್ಯಕೀಯ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಯಿತು ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ವಿಜಯಪುರ: ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿರುವ ಪತಿಯ ಹತ್ಯೆಗೆ ಪತ್ನಿಯೇ ಯತ್ನಿಸಿರುವ ಆರೋಪ ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ನಗರದಲ್ಲಿ ಕೇಳಿ ಬಂದಿದೆ. ಜೊತೆ ಸೇರಿದ ಸುನಂದಾ, ಪತಿ ಬೀರಪ್ಪನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಸಿದ್ದಪ್ಪ ಕ್ಯಾತಕೇರಿ ಎಂಬಾತನ ಜೊತೆ ಸುನಂದಾ ಅಕ್ರಮ ಸಂಬಂಧ ಹೊಂದಿದ್ದಾಗಿ ಬೀರಪ್ಪ ಆರೋಪಿಸಿದ್ದಾರೆ. ಕಳೆದ ಸೆಪ್ಟೆಂಬರ್ 1ರಂದು ರಾತ್ರಿ ಸಿದ್ದಪ್ಪ ಮನೆಗೆ ನುಗ್ಗಿದ್ದು ತನ್ನ ಕತ್ತು ಹಿಸುಕಿ, ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ದೂರಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೊಪ್ಪಳ: ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕೋಳಿಗಳಿಗೆ ನಿಗೂಢ ರೋಗ ಹಬ್ಬಿದ್ದು, ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಸ್ಥಳೀಯ ಕೋಳಿ ಸಾಕಣೆ ಕೇಂದ್ರಗಳಲ್ಲಿ ಈ ಕಾಯಿಲೆಯು ವೇಗವಾಗಿ ಹರಡುತ್ತಿದೆ ಎನ್ನಲಾಗಿದೆ. ಕೋಳಿಗಳ ಸಾವು ಅನೇಕರ ಜೀವನೋಪಾಯಕ್ಕೆ ಬೆದರಿಕೆ ಹಾಕುತ್ತಿದೆ ಎಂದು ಹೇಳಿದ್ದಾರೆ. ಕೆಲವು ಕೋಳಿ ಮಾಲೀಕರು ಸತ್ತ ಕೋಳಿಗಳನ್ನು ಹೂಳುತ್ತಿಲ್ಲ, ಬದಲಿಗೆ ಅವುಗಳನ್ನು ಬಯಲಿನಲ್ಲಿ ಎಸೆಯುತ್ತಿದ್ದಾರೆ. ಹೀಗಾಗಿ ಈ ಸಾಕಣೆ ಕೇಂದ್ರಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತರು ಈಗ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಸಾವಿಗೆ ನಿಖರವಾದ ಕಾರಣವನ್ನು ಗುರುತಿಸಲು ಶೀಘ್ರದಲ್ಲೇ ತಜ್ಞರನ್ನು ಕರೆಯುವುದಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಿಳಿಸಿದ್ದಾರೆ. ಕೋಳಿ ಸಾಕಣೆ ಕೇಂದ್ರಗಳಿಗೆ ಭೇಟಿ ನೀಡಿ, ರಕ್ತದ ಮಾದರಿಗಳನ್ನು ತೆಗೆದುಕೊಂಡು ಪರೀಕ್ಷೆಗೆ ಕಳುಹಿಸುವುದಾಗಿ ತಜ್ಞರು ತಿಳಿಸಿದ್ದಾರೆ. ಬಿ ಹೊಸಳ್ಳಿಯ ನಿವಾಸಿಗಳು ತಮ್ಮ ಗ್ರಾಮದಲ್ಲಿ ಸುಮಾರು ಆರು ತಿಂಗಳ ಹಿಂದೆ ಸುಮಾರು 10,000 ಕೋಳಿಗಳು ಸಾವನ್ನಪ್ಪಿದ್ದು, H5N1 ಇರುವುದು ದೃಢಪಟ್ಟಿದೆ ಎಂದು ಹೇಳಿದರು. ಸತ್ತ,…

Read More

ದಾವಣಗೆರೆ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಉಪಟಳಕ್ಕೆ ಸಾರ್ವಜನಿಕರು ಕಂಗಾಲಾಗಿದ್ದಾರೆ. ಹೊನ್ನಾಳಿ ತಾಲೂಕಿನ ಮಾವಿನ ಕೋಟೆ ಮತ್ತು ಸಾಸ್ವೆಹಳ್ಳಿಯಲ್ಲಿ ಐವರ ಮೇಲೆ ಬೀದಿನಾಯಿಗಳು ಮಾರಣಾಂತಿಕವಾಗಿ ದಾಳಿ ನಡೆದಿದೆ. ಮಾವಿನಕೋಟೆಯಲ್ಲಿ ಓರ್ವ ವೃದ್ಧ, ಮೂವರು ಮಕ್ಕಳು ಹಾಗೂ ಸಾಸ್ವೆಹಳ್ಳಿಯ ಓರ್ವ ಬಾಲಕನ ಮೇಲೆ ನಾಯಿಗಳು ದಾಳಿ ಮಾಡಿವೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.‌ ಬೀದಿ ನಾಯಿಗಳ ಸಂಖ್ಯೆ ಮೀತಿಮೀರುತ್ತಿದೆ. ಗ್ರಾಮ ಪಂಚಾಯತ್​ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂದು ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಸದಸ್ಯರ ವಿರುದ್ಧ ಗ್ರಾಮಸ್ಥರೊಬ್ಬರು ಆಕ್ರೋಶ ವ್ಯಕ್ತಪಡಿಸಿದರು. ತ್ವರಿತ ಕ್ರಮಕ್ಕೆ ಮುಂದಾಗದಿದ್ದರೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸರಗೂರು:  ಪಟ್ಟಣ ಬಸ್ ನಿಲ್ದಾಣದ ಮುಂಭಾಗದಲ್ಲಿ ಸಂಯುಕ್ತ ಕರ್ನಾಟಕ ರೈತ ಹಸಿರು ಸೇನೆಯ ತಾಲೂಕು ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾನುವಾರ, ರೈತರ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಖಂಡಿಸಿ ರೈತ ಸಂಘದ ಅಧ್ಯಕ್ಷ ಚನ್ನಾಯಕ  ನೇತೃತ್ವದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸಂಯುಕ್ತ ಕರ್ನಾಟಕ ಹಸಿರು ಸೇನೆ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ನಂದೀಶ್ವರ ಸ್ವಾಮಿ ಮಾತನಾಡಿ, ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ “ಎಲ್ಲಿದೆ ಆತ್ಮಹತ್ಯೆ, ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗುತ್ತಾ. ಅದೆಲ್ಲಾ ಸುಳ್ಳು ಎಂದು ರೈತರ ಬಗ್ಗೆ ತುಚ್ಚವಾಗಿ ಮಾತನಾಡಿದ್ದೀರಿ, ರೈತರಿಗೆ ದಿಧಿಕ್ಕಾರ ಕೂಗೋದು ಬಿಟ್ಟು ಬೇರೇನೋ ಮಾಡೋಕ್ಕಾಗಲ್ಲ ಎಂದು ರೈತರ ಅಸಹಾಯಕರು ಅನ್ನುವ ರೀತಿಯಲ್ಲಿ ಹೀಯಾಳಿಸಿ ಮಾತನಾಡಿದ್ದೀರಿ ಅಂತ ಡಿಸಿಎಂ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇಡೀ ದೇಶಕ್ಕೆ ಅನ್ನ ನೀಡುವ ರೈತ ಜೀವನವಿಡೀ ತಾನು ಬದುಕುವುದು.ದುಡಿಯುವುದು ಎಲ್ಲವೂ ಇನ್ನೊಬ್ಬರಿಗಾಗಿಯೇ ಹೊರತು ತನ್ನ ಸ್ವಂತಕ್ಕಾಗಿ…

Read More

ಸರಗೂರು: ಶಿವರಾತ್ರಿ ರಾಜೇಂದ್ರ ಶ್ರೀಗಳು ನಾಡಿನಾದ್ಯಂತ ನೂರಾರು ಶಿಕ್ಷಣ, ಆರೋಗ್ಯ  ಸಂಸ್ಥೆಗಳನ್ನು ಸ್ಥಾಪಿಸಿ, ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ ಎಂದು ಅಭಾವಿಲಿಂ ಮಹಾಸಭಾ ಕೇಂದ್ರ ಸಮಿತಿ ನಿರ್ದೇಶಕ ಯು.ಎಸ್.ಬಸವರಾಜು ತಿಳಿಸಿದರು. ಪಟ್ಟಣ ಬಿಡಗಲು ಗ್ರಾಮದ ಪಡುವಲು ವೀರಕ್ತ ಮಠದಲ್ಲಿ ಭಾನುವಾರದಂದು ಪೌರ್ಣಮಿ ಪೂಜೆ ಕಾರ್ಯಕ್ರಮ ಹಾಗೂ ಶ್ರೀ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 110 ನೇ ಜಯಂತಿ ಅಂಗವಾಗಿ ಸಂಸ್ಥಾಪಕರ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಸಮಾರಂಭ ಕಾರ್ಯಕ್ರಮವನ್ನು ಜಿಲ್ಲಾ ಶರಣು ಸಾಹಿತ್ಯ ಪರಿಷತ್ ಮೈಸೂರು ಹಾಗೂ ಪಡುವಲು ಶ್ರೀ ವಿರಕ್ತಮಠ ಹಾಗೂ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಡತನ ಹಾಗೂ ಅಸಮಾನತೆ ನಿರ್ಮೂಲನೆಗೆ ಶ್ರೀಗಳು ಶ್ರಮಿಸಿದ್ದರು. ಅದನ್ನು ಮುಂದುವರಿಸುತ್ತಿರುವ ಸುತ್ತೂರು ಮಠವು ಧರ್ಮ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಕ್ಷೇತ್ರದ ಸಂರಕ್ಷಣೆಗೂ ಶ್ರಮಿಸುತ್ತಿದೆ’ ಎಂದು ಶ್ಲಾಘಿಸಿದರು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಸುತ್ತೂರು ಶ್ರೀಮಠ ದೇಶದ ಉನ್ನತಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ರಾಜೇಂದ್ರ ಶ್ರೀಗಳು…

Read More

ಬೀದರ್:  ವ್ಯಕ್ತಿಯೊಬ್ಬನಿಗೆ ಕೆಲವರು ಬೆದರಿಕೆಯೊಡ್ಡಿ, ಯಾತನೆ ನೀಡುತ್ತಿರುವ ಸಂಬಂಧ ನೊಂದ ವ್ಯಕ್ತಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಈ ಬಗ್ಗೆ ಹುಮನಾಬಾದ ಪೊಲೀಸರು ಕಾನೂನು ರೀತಿಯ ಕ್ರಮಕೈಗೊಂಡಿದ್ದಾರೆ. ವ್ಯಕ್ತಿಯು ತನಗೆ ಕೆಲವರು  ಬೆದರಿಕೆಯೊಡ್ಡಿ ಯಾತನೆ ನೀಡುತ್ತಿದ್ದಾರೆ ಎಂದು ಅಳವತ್ತುಕೊಂಡು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣ ವಾಟ್ಸಾಪ್ ನಲ್ಲಿ ವಿಡಿಯೋ ಹರಿಯಬಿಟ್ಟಿದ್ದ.  ಈ ಸಂಬಂಧ ವ್ಯಕ್ತಿಗೆ ಯಾತನೆ ನೀಡುತ್ತಿದ್ದವರ ವಿರುದ್ಧ ಹುಮನಾಬಾದ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಿಕೊಂಡು  ಕಾನೂನು ಕ್ರಮವನ್ನು ಜರುಗಿಸಲಾಗಿದೆ. ಸಾಮಾಜಿಕ ಜಾಲತಾಣದ ಅಧಿಕಾರಿ, ಸಿಬ್ಬಂದಿಯ ಚುರುಕತನದಿಂದ ಮತ್ತು ಹುಮನಾಬಾದ ಪೊಲೀಸರು ನೊಂದವರಿಗೆ ತಕ್ಷಣ ಸ್ಪಂದಿಸಿ ಯಾತನೆ ನೀಡಿದವರ ವಿರುದ್ದ ಕೈಕೊಂಡ ಕ್ರಮದ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More