Subscribe to Updates
Get the latest creative news from FooBar about art, design and business.
- ದೇಶದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
- LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
- ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
- ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
- ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
- ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
- ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
- ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
Author: admin
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ದೊಡ್ಡ ಆಘಾತ ನೀಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಪ್ರಕರಣದ ಹಿನ್ನೆಲೆ: ಕಳೆದ ವರ್ಷ ಜುಲೈನಲ್ಲಿ ಬೆಂಗಳೂರಿನ ಭಾರತಿನಗರದಲ್ಲಿ ರೌಡಿ ಶೀಟರ್ ಬಿಕ್ಲು ಶಿವನನ್ನು ಸಶಸ್ತ್ರ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಫ್ಐಆರ್ ನಲ್ಲಿ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿ (A5) ಎಂದು ಹೆಸರಿಸಲಾಗಿದೆ. ಗ್ಯಾಂಗ್ ಸ್ಟರ್ ಜಗದೀಶ್ ಅಲಿಯಾಸ್ ಜಗ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಕಾನೂನು ಹೋರಾಟ: ಈ ಹಿಂದೆ ಕರ್ನಾಟಕ ಹೈಕೋರ್ಟ್ ಭೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ,…
ಕೊರಟಗೆರೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ. ಬೇರೆ ರಾಜ್ಯಕ್ಕೆ ಹೊಲಿಸಿದರೆ ನಮ್ಮ ರಾಜ್ಯ ಶಾಂತಿಯುತವಾಗಿದೆ. ಅದನ್ನ ಕಾಯುವಂತ ಜವಾಬ್ದಾರಿ ನನ್ನ ಮೇಲೆ ಇದೆ. ಅದನ್ನ ಸಮರ್ಥವಾಗಿ ಮಾಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಪಟ್ಟಣದ ಪೊಲೀಸ್ ಸಿಬ್ಬಂದಿಗಾಗಿ ಸುಮಾರು 11 ಕೋಟಿ ವೆಚ್ಚದಲ್ಲಿ 36 ವಸತಿ ಗೃಹ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿದರು. ವಿರೋಧ ಪಕ್ಷದವರಾದ ಬಿಜೆಪಿ, ಜನತಾದಳದವರು ಹೇಳ್ತಾರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿ ಹೋಗಿದೆ ಅಂತ. ಯಾವುದೋ ಒಂದೊರಡು ಅಂಕಿ ಅಂಶಗಳ ಬಗ್ಗೆ ಮಾಹಿತಿ ಕೊಡ್ತಾರೆ ಅಷ್ಟೇ. ರಾಜ್ಯದಲ್ಲಿ ನಮ್ಮ ಪೊಲೀಸ್ ಇಲಾಖೆ ಬಲಿಷ್ಠವಾಗಿ ಕೆಲಸ ಮಾಡುತ್ತಿದೆ. ಇತರೆ ರಾಜ್ಯಕ್ಕೆ ಹೊಲಿಸಿದರೆ ನಮ್ಮ ರಾಜ್ಯ ಶಾಂತವಾಗಿದೆ ಎಂದು ವಿರೋಧ ಪಕ್ಷದವರಿಗೆ ತಿರುಗೇಟು ನೀಡಿದರು. ಪೊಲೀಸ್ ಅಧಿಕಾರಿಗಳು ನಮ್ಮ ಸೇವೆ ಮಾಡಲು ಮಳೆ, ಚಳಿ, ಎನ್ನದೇ ಮತ್ತೆ ಅವರ ಮನೆಯಲ್ಲಿ ಸಾವು ನೋವುಗಳು ನೆಡೆದರೂ ಸಹ ನಮ್ಮ ಸೇವೆ ಮಾಡಲು ಬರುತ್ತಾರೆ. ಅವರಿಗೆ ಉತ್ತಮವಾದ…
ಹುಳಿಯಾರು: ಸಮೀಪದ ತೋರೆಮನೆ ಗ್ರಾಮದಲ್ಲಿ ನೆಲೆಸಿರುವ ಗ್ರಾಮದೇವತೆಗಳಾದ ಶ್ರೀ ಅಂತರಗಟ್ಟೆ ಕರಿಯಮ್ಮ ದೇವಿ, ಹಳೇಊರಮ್ಮ ದೇವಿ ಹಾಗೂ ಚೌಡೇಶ್ವರಿ ಅಮ್ಮನವರ ಅದ್ದೂರಿ ಜಾತ್ರಾ ಮಹೋತ್ಸವವು ಫೆಬ್ರವರಿ 20 ರಿಂದ 25 ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ ಎಂದು ದೇವಸ್ಥಾನದ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ. ಧಾರ್ಮಿಕ ಕಾರ್ಯಕ್ರಮಗಳ ವಿವರ: ಫೆಬ್ರವರಿ 20 ಶುಕ್ರವಾರದಂದು ಅಮ್ಮನವರ ಮೂಲಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ಪೂಜೆ ಹಾಗೂ ಮಡಲಕ್ಕಿ ಸೇವೆಯೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಫೆ. 22 ಭಾನುವಾರ ಸಂಜೆ 6 ಗಂಟೆಗೆ ದೋಣಿ ಸೇವೆ ಹಾಗೂ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ. ಸೋಮವಾರ ಸಂಜೆ 5:30ಕ್ಕೆ ನೂರೊಂದು ಎಡೆ ಹಾಗೂ ಜಲ್ಲೆಗೌಡು ಸೇವೆ ನಡೆಯಲಿದ್ದು, ಅಂದು ರಾತ್ರಿ 9:30ಕ್ಕೆ ಅಮ್ಮನವರ ‘ಮದುವಣಗಿತ್ತಿ’ ಕಾರ್ಯಕ್ರಮ ವಿಶೇಷ ಆಕರ್ಷಣೆಯಾಗಿರಲಿದೆ. ಚಿನ್ನದ ಅಶ್ವ ರಥೋತ್ಸವ: ಜಾತ್ರೆಯ ಪ್ರಮುಖ ಘಟ್ಟವಾದ ‘ಚಿನ್ನದ ಅಶ್ವ ರಥೋತ್ಸವ’ವು ಫೆಬ್ರವರಿ 24ರ ಮಂಗಳವಾರ ರಾತ್ರಿ 9 ಗಂಟೆಗೆ ಸಕಲ ವಾದ್ಯಗೋಷ್ಠಿಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ. ಅದೇ ದಿನ ರಾತ್ರಿ 10:30ಕ್ಕೆ ಗೌರಿಬಿದನೂರಿನ…
ಕೊರಟಗೆರೆ: ವಿದ್ಯಾರ್ಥಿಗಳಲ್ಲಿ ವ್ಯಾಪಾರ ಮನೋಭಾವನೆ, ವ್ಯವಹಾರಿಕ ಜೀವನ ನಿರ್ವಹಣೆ ಮಹತ್ವ ತಿಳಿಸುವ ಉದ್ದೇಶದಿಂದ ಹೊಳವನಹಳ್ಳಿ ಹಿಂದೂಸ್ತಾನ್ ಇಂಟರ್ ನ್ಯಾಷನಲ್ ಶಾಲಾ ಆವರಣದಲ್ಲಿ ಎಲ್ ಕೆ ಜಿ, ಯಿಂದ 8 ನೇ ತರಗತಿ ವರೆಗಿನ ಮಕ್ಕಳಿಂದ ಮಕ್ಕಳ ಸಂತೆ ಏರ್ಪಡಿಸಲಾಗಿತ್ತು. ಓದು, ಆಟ–ಪಾಠಕ್ಕೆ ಮೀಸಲಾಗಿದ್ದ ಶಾಲಾ ಆವರಣ ಸಂತೆಯ ರೀತಿ ಮಾರ್ಪಾಡಗಿತ್ತು. ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ತಂದಂತಹ ವಿವಿಧ ಬಗೆ ಬಗೆಯ ತಾಜಾ ತರಕಾರಿ, ಹೂವು, ಸೊಪ್ಪು, ಹಣ್ಣು-ಹಂಪಲು ಹಾಗೂ ತಿಂಡಿ ತಿನ್ನಿಸುಗಳು, ತಂಪು ಪಾನೀಯಗಳು ಸಂತೆಯಲ್ಲಿದ್ದವು. ಮೊದಲೇ ಹಳ್ಳಿ ಮಕ್ಕಳಾದ್ದರಿಂದ ಪೈಪೋಟಿಗೆ ಬಿದ್ದವರಂತೆ ಭರ್ಜರಿ ವ್ಯಾಪಾರ ಮಾಡಿ ಓದಕ್ಕೂ ಸೈ, ವ್ಯಾಪಾರಕ್ಕೂ ಜೈ ಎನಿಸಿಕೊಂಡರು. ಶಾಲಾ ಮಕ್ಕಳ ವ್ಯಾಪಾರಕ್ಕೆ ಹಿರಿಯ ವಿದ್ಯಾರ್ಥಿಗಳು ಸಹಕಾರ ನೀಡಿದರು. ವ್ಯಾಪಾರ ಮಾಡುವ ಕೌಶಲ್ಯ ಹೇಳಿಕೊಟ್ಟರು, ಚಿಲ್ಲರೆ ಕೊಡುವ ಲೆಕ್ಕಚಾರ ಕಲಿಸಿದರು. ಒಟ್ಟಿನಲ್ಲಿ ಶಾಲೆಯ ಎಲ್ಲ ಮಕ್ಕಳಿಗೂ ಸಂತೆ ಮೇಳ ಹೊಸ ಕಲೆ ಕಲಿಸಿದಂತಿತ್ತು. ಈ ಮೇಳದಲ್ಲಿ ಶಿಕ್ಷಕರು, ಪೋಷಕರೇ ಗ್ರಾಹಕರಾಗಿ ತಮಗಿಷ್ಟವಾದ ವಸ್ತುಗಳನ್ನು ಖರೀದಿಸಿದರು. ವಿದ್ಯಾರ್ಥಿಗಳು…
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಮತ್ತು ಕಾರ್ಮಿಕರ ಹಿತ ಕಾಪಾಡದೇ ಕಾರ್ಪೋರೇಟರ್ ಗಳನ್ನು ಬೆಳೆಸುವ ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ತಯಾರಿ ಮಾಡಿಕೊಂಡಿದೆ. ಕಾರ್ಮಿಕರ ಕಷ್ಟವನ್ನು ಅರಿತು ದುಡಿಯುವ ವರ್ಗದ ಬೇಡಿಕೆಯನ್ನು ಶೀಘ್ರದಲ್ಲೇ ಈಡೇರಿಸದಿದ್ದರೆ ಹೋರಾಟದ ಕಿಚ್ಚು ಇನ್ನಷ್ಟು ಹೆಚ್ಚಲಿದೆ ಎಂದು ರೈತ ಸಂಘ ಅಧ್ಯಕ್ಷ ರಂಗಹನುಮಯ್ಯ ಎಚ್ಚರಿಕೆ ನೀಡಿದರು. ಕರ್ನಾಟಕ ರಾಜ್ಯ ರೈತ ಸಂಘ, ಸಿಐಟಿಯು ಕೊರಟಗೆರೆ ತಾಲ್ಲೂಕು ಸಮಿತಿ, ಬಿಸಿ ಊಟ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯರ್ತೆಯರು, ದಿನನಿತ್ಯ ಕೂಲಿ ಕಾರ್ಮಿಕರು, ಯುವಜನರು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲ ಸೂಚಿಸಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿಯ ವೆರೆಗೆ ಪ್ರತಿಭಟನೆ ನಡೆಸಿ ಗ್ರೇಡ್–2 ತಹಶೀಲ್ದಾರ್ ರಾಮ್ ಪ್ರಸಾದ್ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದರು. ಸರ್ಕಾರದ ಭ್ರಷ್ಠಚಾರಗಳನ್ನು ಅರಿತು ಜನರು ಜಾಗೃತರಾಗಿ ಶ್ರಮಕ್ಕೆ ತಕ್ಕ ಕೂಲಿಯನ್ನು ನೀಡುವಂತೆ ಮುಷ್ಕರದಲ್ಲಿ ಕಾರ್ಮಿಕರು ಪ್ರತಿಭಟಿಸುತ್ತಿದ್ದು, ತುಮಕೂರಿನ…
ಗುಬ್ಬಿ: ತಾಲೂಕಿನ ಕಸಬಾ ಹೋಬಳಿಯ ಹೊದಲೂರು ಗ್ರಾಮದ ಶ್ರೀ ಕೆಂಪಮ್ಮ ದೇವಿ ಮತ್ತು ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿದ್ದು ಅಗ್ನಿಕೊಂಡವನ್ನ ಹಾಯುವ ಮೂಲಕ ಭಕ್ತರು ತಮ್ಮ ಹರಕೆಯನ್ನು ಆಚರಿಸಿಕೊಂಡರು. ಜಾತ್ರಾ ಮಹೋತ್ಸವಕ್ಕೆ ಸಾವಿರಾರು ಭಕ್ತರು ಜಿಲ್ಲೆಯ ಹಲವು ಭಾಗಗಳಿಂದ ಆಗಮಿಸಿ ತಾಯಿಯ ದರ್ಶನವನ್ನು ಪಡೆದರು. ಮಂಗಳವಾರ ಮಧ್ಯರಾತ್ರಿಯವರೆಗೆ ಮೆರವಣಿಗೆ ನಡೆದಿದ್ದು ಸೋಮನ ಕುಣಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎಲ್ಲಾ ದೇವರ ಉತ್ಸವ ನಡೆದಿದ್ದು ಬುದುವಾರ ಬೆಳಗಿನ ಜಾವ ಅಗ್ನಿಕೊಂಡ ತುಳಿಯುವ ಮೂಲಕ ಸಾವಿರಾರು ಭಕ್ತರು ಹರಕೆ ತೀರಿಸಿದರು. ನಂತರ ಆರತಿ ಮೆರವಣಿಗೆ ನೂರಾರು ಮಹಿಳೆಯರು ಬಾಯಿ ಬೀಗಹಾಕಿಕೊಂಡು ಮೆರವಣಿಗೆ ಮೂಲಕ ಊರಿನ ಬೀದಿಗಳಲ್ಲಿ ಆರತಿಹೊತ್ತು ದೇವರಿಗೆ ಅರ್ಪಣೆ ಮಾಡಿದರು. ಗುಬ್ಬಿ ಹೊದಲೂರು ಗ್ರಾಮದಲ್ಲಿ ಶ್ರೀ ಕೆಂಪಮ್ಮ ದೇವಿ ಜಾತ್ರಾ ಮಹೋತ್ಸವ ನಡೆಯಿತು. ವರದಿ: ಚೇತನ್ ಗೌಡ, ಗುಬ್ಬಿ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು: 2.4 ಎಕರೆ ಜಮೀನನ್ನು ತಂದೆಯಿಂದ ತಮ್ಮ ಹೆಸರಿಗೆ ಬರೆಯಿಸಿ ಕೊಂಡು ನಂತರ ತಂದೆ ತಾಯಿಯನ್ನು ಆರೈಕೆ ಮಾಡದೇ, ಅಮಾನವೀಯತೆ ಮೆರೆದಿದ್ದ ಪುತ್ರಿಯರಿಗೆ ಇದೀಗ ಪೋಷಕರು ಕಾನೂನಿನ ಮೂಲಕ ಬಿಸಿಮುಟ್ಟಿಸಿದ್ದು, ಇದೀಗ ಪೋಷಕರು ನೀಡಿದ್ದ ಗಿಫ್ಟ್ ಡೀಡ್ ಆಸ್ತಿಯನ್ನು ಹೈಕೋರ್ಟ್ ಪೋಷಕರಿಗೆ ಮರಳಿಸಿದೆ. 2.4 ಎಕರೆ ಜಮೀನನ್ನು ಇಬ್ಬರು ಪುತ್ರಿಯರು ತಮ್ಮ ಹೆಸರಿಗೆ ಬರೆದ ನಂತರ ತಮ್ಮನ್ನು ನಿರ್ಲಕ್ಷಿಸಿರುವ ಬಗ್ಗೆ ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿಯ ವೆಂಕಟಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕ ಸದಸ್ಯ ಪೀಠ 2007ರ ಹಿರಿಯ ನಾಗರಿಕರ ಮತ್ತು ಪೋಷಕರ ನಿರ್ವಹಣೆ ಹಾಗೂ ಕಲ್ಯಾಣ ಕಾಯ್ದೆಯನ್ನು ಅನ್ವಯಿಸಿ, ಕೃಷಿ ಭೂಮಿಯನ್ನು ಪುತ್ರಿಯರ ಹೆಸರಿಗೆ ಮಾಡಿಕೊಟ್ಟಿದ್ದ ಗಿಫ್ಟ್ ಡೀಡ್ ನ್ನು ರದ್ದುಗೊಳಿಸಿದೆ. ಜೊತೆಗೆ ಹಿರಿಯ ನಾಗರಿಕರಿಗೆ ಅವರ ವೃದ್ಧಾಪ್ಯದಲ್ಲಿ ಆರೈಕೆ ಮಾಡದೆ, ಅವರ ಜೀವನ ನಿರ್ವಹಣೆಗೆ ನೆರವಾಗದೆ ಇದ್ದರೆ ಅಂತಹ ಸಂದರ್ಭದಲ್ಲಿ ನ್ಯಾಯಾಲಯ ಅವರ ರಕ್ಷಣೆಗೆ ಧಾವಿಸಿ ಅವರ ಆಸ್ತಿಯನ್ನು ರಕ್ಷಿಸಿ, ಅವರ…
ಮಧುಗಿರಿ / ಕೋಡಿಗೇನಹಳ್ಳಿ: ರಾಜಣ್ಣ ನಿನಗೆ ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ ಅದನ್ನು ಜನರು ಹೇಳುತ್ತಾರೆ. ಸಹಕಾರಿ ಕ್ಷೇತ್ರದಲ್ಲಿ ಬಡವರ ಪರವಾಗಿ, ಬೀದಿ ಬದಿ ವ್ಯಾಪಾರಿಗಳ ಪರವಾಗಿ ಸಾಲ ಸೌಲಭ್ಯಗಳನ್ನು ನೀಡುವುದರ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಬದಲಾವಣೆ ತರುವಲ್ಲಿ ಪ್ರಮುಖ ಪಾತ್ರ ನಿನ್ನದಾಗಿದೆ ಅಂತ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಕಿವಿಮಾತು ಹೇಳಿದರು. ತಾಲೂಕಿನ ಕೋಡಿಗೇನಹಳ್ಳಿ ಗ್ರಾಮದಲ್ಲಿನ ಬೆಸ್ಕಾಂ ಕಚೇರಿ, ಪಟ್ಟಣದಲ್ಲಿ 36 ನೂತನ ಕಟ್ಟಡ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ನೂತನ ಪೊಲೀಸ್ ಠಾಣೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಪರಮೇಶ್ವರ್, ಕೆ.ಎನ್.ರಾಜಣ್ಣ ಪರಿಶಿಷ್ಟ ಜಾತಿ, ಪಂಗಡ ಹಾಗೂ ಶೋಷಿತ ಸಮುದಾಯದವರಿಗೆ ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿ ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಏಕೈಕ ವ್ಯಕ್ತಿಯಾಗಿದ್ದಾರೆ ಎಂದರು. ತಳ ಸಮುದಾಯದವರಿಗೆ ಈ ಹಿಂದೆ ಸಹಕಾರಿ ಸಂಘಗಳ ಮೆಟ್ಟಿಲುಗಳ ಬಳಿ ಬಲಿಷ್ಠರು ಸುಳಿಯಲು ಬಿಡುತ್ತಿರಲಿಲ್ಲ. ಸಹಕಾರಿ ಸಚಿವರಾಗಿದ್ದ ರಾಜಣ್ಣನವರ ಅವಧಿಯಲ್ಲಿ…
ಕುಣಿಗಲ್: ನನ್ನ ಗಂಡ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ, ತಲೆ ಬುರುಡೆಗೆ ಗಾಯವಾಗಿ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ, ಆದರೆ ನನಗೆ ಪೊಲೀಸ್ ಠಾಣೆಯಲ್ಲಿ ನ್ಯಾಯ ಸಿಗುತ್ತಿಲ್ಲ ಎಂದು ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಕಾಲಿಗೆ ಬಿದ್ದು ನ್ಯಾಯ ಕೇಳಿದ ಘಟನೆ ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು. ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ, ಮಂಗಳವಾರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಕುಣಿಗಲ್ ಬಿಬಿಎಂಪಿ ನೌಕರನ ಪತ್ನಿ ಸುಧಾ ಹಾಗೂ ಸಂತೆ ಮಾವತ್ತೂರು ಗ್ರಾಮದ ಸುಮಿತ್ರಾ ನಮಗೆ ನಮ್ಮ ಗಂಡಂದಿರು ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಮಾರಣಾಂತಿಕ ಹಲ್ಲೆ ಮಾಡಿ ತಲೆ ಬುರುಡೆ ಗಾಯವಾಗಿ ಹಲವು ಬಾರಿ ವೈದ್ಯರು ಬುರುಡೆಗೆ ಹೊಲಿಗೆ ಹಾಕಿದ್ದಾರೆ. ನಾನು ಪೊಲೀಸ್ ಠಾಣೆಗೆ ದೂರು ನೀಡಿದರೆ ನನಗೆ ಪೊಲೀಸರು ನ್ಯಾಯ ಕೊಡುತ್ತಿಲ್ಲ. ನನ್ನ ಗಂಡನ ವಿರುದ್ಧ ಕ್ರಮಕೈಗೊಂಡಿಲ್ಲ. ನಾವು ಯಾರ ಬಳಿ ಹೋಗಿ ನ್ಯಾಯ ಕೇಳಬೇಕು…
ತುಮಕೂರು: ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ ಎಲ್. ಅವರು ಫೆಬ್ರವರಿ 17 ಮತ್ತು 18, ರಂದು ತುಮಕೂರು ಜಿಲ್ಲೆಗೆ ಭೇಟಿ ನೀಡಿ, ವಿವಿಧ ಇಲಾಖಾವಾರು ಪರಿಶೀಲನೆ ಹಾಗೂ ಸಂವಾದ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಿಂದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಿದ್ಧತೆ ಕೈಗೊಳ್ಳುವಂತೆ ಸೂಚಿಸಲಾಗಿದೆ. ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಸಿಟಿ ಕಾರ್ಪೊರೇಷನ್, ನಗರಸಭೆ, ಪುರಸಭೆಗಳಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಯೋಜನೆಗಳ ವಿವರ ಮತ್ತು ತೆರಿಗೆ ಹಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗದ ಅಭಿವೃದ್ಧಿಗೆ ವಿನಿಯೋಗಿಸುತ್ತಿರುವ ವಿವರಗಳ ಮಾಹಿತಿ ಕುರಿತು 18 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವ ಸಭೆಯಲ್ಲಿ ಪರಿಶೀಲನೆ ನಡೆಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC