Author: admin

ತುಮಕೂರು: ರಾಜ್ಯ ಸರ್ಕಾರ 3 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ ಆಯೋಜಿಸಿದ್ದು, ಇದು ಕೇವಲ ಸಾಧನೆಯ ಸಂಭ್ರಮವಲ್ಲ ಕಳೆದ 3 ವರ್ಷಗಳಲ್ಲಿ ರಾಜ್ಯ ಸರ್ಕಾರ ಮಾಡಿರುವ ಅದ್ಯತಾ ಕಾರ್ಯಕ್ರಮಗಳ ಸಾರ್ಥಕ ಸೇವೆಯ ಸಮರ್ಪಣೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸಮಾವೇಶದ ಪೂರ್ವಭಾವಿಯಾಗಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರದ ಉತ್ತರದಾಯಿತ್ವದ ದ್ಯೋತಕವಾಗಿ ಮೇ 20ರಂದು ಬುಧವಾರ ಒಂದೂವರೆ ಲಕ್ಷ ಫಲಾನುಭವಿಗಳಿಗೆ ತುಮಕೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸವಲತ್ತುಗಳನ್ನು ವಿತರಣೆ ಮಾಡಲಾಗುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರ ಮಾರ್ಗದರ್ಶನದಲ್ಲಿ ಅಗತ್ಯ ಸಿದ್ಧತೆಗಳು ನಡೆಯುತ್ತಿದೆ ಎಂದರು. ಫಲಾನುಭವಿಗಳನ್ನು ನಡೆದು ಬರುವಂತೆ ಮಾಡಬೇಡಿ: ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯಲ್ಲಿ ಅವರು ಸಮಾವೇಶಕ್ಕೆ ಆಗಮಿಸುವ ಫಲಾನುಭವಿಗಳಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ನಿರ್ವಹಿಸುವ ಜವಾಬ್ದಾರಿ ಜಿಲ್ಲಾಡಳಿತದ ಮೇಲಿದೆ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.…

Read More

ಪಾವಗಡ: ಮೇ 20ರಂದು ತುಮಕೂರು ನಗರದಲ್ಲಿ ನಡೆಯಲಿರುವ ಸರ್ಕಾರದ ಮೂರನೇ ವರ್ಷದ ಸಾಧನ ಸಮಾವೇಶದ ಅಂಗವಾಗಿ ಪಾವಗಡ ತಾಲೂಕಿನಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ನಾಗಲಮಡಿಕೆ ಹೋಬಳಿಯ 1008 ಫಲಾನುಭವಿಗಳಿಗೆ ವಿವಿಧ ಪಿಂಚಣಿಗಳ ಮಂಜೂರಾತಿ ಪತ್ರ, ಪೌತಿ ಖಾತೆ ಆಂದೋಲನ, ಪೋಡಿ ಮುಕ್ತ ಆಂದೋಲನ ಹಾಗೂ ಕಂದಾಯ ಗ್ರಾಮಗಳಿಗೆ ಸಂಬಂಧಿಸಿದ ಹಕ್ಕು ಪತ್ರಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಮಹತ್ವವನ್ನು ಜನರಿಗೆ ತಿಳಿಸಲು ನಾಗಲಮಡಿಕೆ ಹೋಬಳಿಯ ಉಪ ತಹಶೀಲ್ದಾರ್ ಕೆ. ನಾರಾಯಣಸ್ವಾಮಿ ಅವರು ಗ್ರಾಮ ಗ್ರಾಮಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ. ಕಂದಾಯ ಇಲಾಖೆಯಲ್ಲಿ ನಡೆದ ಮಹತ್ವದ ಬದಲಾವಣೆಗಳು ಮತ್ತು ಸರ್ಕಾರದ ಸಾಧನೆಗಳ ಕುರಿತು ಅವರು ಜನರಿಗೆ ಮಾಹಿತಿ ಹಂಚುತ್ತಿದ್ದಾರೆ. ಹುಸೇನ್ ಪುರ, ತಪ್ಪಗಾನದೊಡ್ಡಿ, ಅಪ್ಪಾಜಿಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ವ್ಯಾಪಕ ಪ್ರಚಾರ ಕಾರ್ಯ ನಡೆಯುತ್ತಿದೆ,  ಮೇ 20ರಂದು ನಾಗಲಮಡಿಕೆ ಹೋಬಳಿಯಿಂದ ಸುಮಾರು 20 ಬಸ್ಸುಗಳಲ್ಲಿ 1500ಕ್ಕೂ ಹೆಚ್ಚು ಫಲಾನುಭವಿಗಳು ತುಮಕೂರಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ವರದಿ: ನಂದೀಶ್ ನಾಯ್ಕ ಪಿ.,…

Read More

ತುಮಕೂರು: AIDSOಯು ನಾಡಿನ ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು ಹಾಗೂ ಶಿಕ್ಷಣ ಪ್ರೇಮಿಗಳಿಗೆ ಈ ಮೂಲಕ ಕರೆ ನೀಡುತ್ತಿದೆ. ಪದೇ ಪದೇ ಮರುಕಳಿಸುತ್ತಿರುವ ನೀಟ್ (NEET–UG) ಪ್ರಶ್ನೆಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷಾ ಸಂಸ್ಥೆಯ ವೈಫಲ್ಯವಲ್ಲ; ಇದು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಬೆವರು ಮತ್ತು ಕನಸುಗಳ ಮೇಲೆ ಎಸಗುತ್ತಿರುವ ಘೋರ ದೌರ್ಜನ್ಯವಾಗಿದೆ. ಕೇವಲ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ, ವೈದ್ಯಕೀಯ ಶಿಕ್ಷಣದ ಕನಸು ಹೊತ್ತವರ ಆಶೋತ್ತರಗಳನ್ನು ಅತಿ ಹೆಚ್ಚು ಹಣ ನೀಡುವವರಿಗೆ ಹರಾಜು ಹಾಕಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) “ಕೋಚಿಂಗ್ ಮಾಫಿಯಾ”ದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಇಡೀ ವ್ಯವಸ್ಥೆಯ ಹದಗೆಟ್ಟ ಸ್ಥಿತಿಯನ್ನು ತೋರಿಸುತ್ತಿದೆ. ಈ ವ್ಯವಸ್ಥೆಯು ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಹತಾಶೆಯನ್ನು ಮೂಡಿಸಿದೆ. ಕೇವಲ ಕೆಲವರ ಲಾಭಕ್ಕಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿರುವುದನ್ನು ಖಂಡಿಸುವುದಾಗಿ AIDSO ತಿಳಿಸಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ AIDSO ಮುಖಂಡ ಲಕ್ಕಪ್ಪ, ನಮ್ಮ ವಿದ್ಯಾರ್ಥಿಗಳ ಭವಿಷ್ಯದ ಅಡಿಪಾಯವನ್ನೇ ಭ್ರಷ್ಟಾಚಾರ ಮತ್ತು ಆಡಳಿತಾತ್ಮಕ ನಿರ್ಲಕ್ಷ್ಯಕ್ಕೆ ಬಲಿ…

Read More

ತುಮಕೂರು: ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲದೆ ಆಶಾ ಕಾರ್ಯಕರ್ತೆಯರ ಜೀವನ ನಡೆಸುವುದು ಕಷ್ಟಕರವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎರಡು ವೇತನಗಳು ಬಾಕಿ ಇದ್ದು ಈ ಬಗ್ಗೆ ವಿಳಂಬ ನೀತಿ ತೋರಿಸಿರುವುದನ್ನು ಖಂಡಿಸಲಾಯಿತು. ಕೂಡಲೇ ಎಲ್ಲಾ ಬಾಕಿ ವೇತನವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಲಾಯಿತು. ದಿನನಿತ್ಯ ವಿವಿಧ ಅವಶ್ಯಕ ಆರೋಗ್ಯ ಸೇವೆ ತೆಗೆದುಕೊಳ್ಳುವ ಇಲಾಖೆ ಇತ್ತೀಚೆಗೆ ಮತ್ತೊಂದು ಆದೇಶವನ್ನು ಹೊರಡಿಸಿ 9 ಚಟುವಟಿಕೆಗಳ ಕೇಂದ್ರದ ಪ್ರೋತ್ಸಾಹ ಧನವನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ ಒಬ್ಬ ಆಶಾ ಕಾರ್ಯಕರ್ತೆಗೆ ಸರಿಸುಮಾರು 500 ರಿಂದ 1000ರೂಪಾವರೆಗೂ ನಷ್ಟವಾಗುತ್ತದೆ ಎಂದು ಆಶಾ ಸಂಘದ ಜಿಲ್ಲಾ ಸಂಚಾಲಕಿ ಮಂಜುಳ ಗೋನವಾರ ತಿಳಿಸಿದರು. ಆಶಾ ಕಾರ್ಯಕರ್ತೆಯರ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ತುಮಕೂರಿನ ಟೌನ್ ಹಾಲ್ ವೃತ್ತದಿಂದ ಡಿಸಿ ಕಚೇರಿಯವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಆರೋಗ್ಯ ಅಭಿಯಾನದ ಆಯುಕ್ತರಿಗೆ ಮನವಿ ಕಳುಹಿಸಲಾಯಿತು. ಆಶಾ ಕಾರ್ಯಕರ್ತೆಯರಿಗೆ ಅವರು…

Read More

ತುಮಕೂರು: ನಗರ ಹೊರವಲಯದ ಅಮ್ಲಾಪುರದ ಮದರಸಾದಲ್ಲಿ ವ್ಯಾಸಂಗಕ್ಕೆ ಬಂದಿದ್ದ ಹೊರ ರಾಜ್ಯದ 24 ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳದೆ ದೈಹಿಕ ಹಿಂಸೆ ನೀಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ರೈಲ್ವೇ ಮಕ್ಕಳ ಸಹಾಯವಾಣಿ ಮೇಲ್ವಿಚಾರಕ ನಾಗಭೂಷಣ್ ಅವರು ಗ್ರಾಮಾಂತರ ಠಾಣೆಗೆ ಮೇ 10ರಂದು ನೀಡಿದ ದೂರಿನಲ್ಲಿ ಅಮ್ಲಾಪುರದ ಜಾಮಿಯಾ ಅರೇಬಿಯಾ ಹಸೀನಿಯಾ ಟ್ರಸ್ಟ್ ನಡೆಸುತ್ತಿದ್ದ ಮದರಸಾದಲ್ಲಿನ ಮಕ್ಕಳ ಹಿಂಸೆ ಪ್ರಕರಣ ಬಯಲಾಗಿದೆ. ಸದರಿ ಮದರಸಾದಿಂದ ಏ. 19ರಂದು ಓಡಿಬಂದಿದ್ದ 24 ಮಕ್ಕಳನ್ನು ಬೆಂಗಳೂರಿನ ಕೆಎಸ್ ಆರ್ ರೈಲು ನಿಲ್ದಾಣದಲ್ಲಿ ರೈಲ್ವೇ ರಕ್ಷಣಾ ದಳ ಸಿಬ್ಬಂದಿ ರಕ್ಷಿಸಿ ಪುನರ್ವಸತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ, ರೈಲ್ವೇ ಮಕ್ಕಳ ಸಹಾಯವಾಣಿ ಸಿಬ್ಬಂದಿ ವಶಕ್ಕೆ ನೀಡಿದ್ದರು. ಬಳಿಕ ಏ. 23ರಂದು ಮಕ್ಕಳ ಕಲ್ಯಾಣ ಸಮಿತಿಯವರು ಮಕ್ಕಳನ್ನು ಆಪ್ತಸಮಾಲೋಚನೆಗೆ ಒಳಪಡಿಸಿದಾಗ ನಮಗೆ ಮದರಸಾದಲ್ಲಿ ಹುಳು ಇರುವ ಅನ್ನ ನೀಡುತ್ತಾರೆ. ಜೊತೆಗೆ ಮದರಸಾದಲ್ಲಿ ಗೋಡೆಕಟ್ಟುವ ಕಾಮಗಾರಿ ನಡೆಯುತ್ತಿದ್ದು, ಆ ಕೆಲಸವನ್ನು ನಮ್ಮಿಂದಲೇ ಮಾಡಿಸುತ್ತಾರೆ ಎಂದು ತಿಳಿಸಿದ್ದು, ಮಕ್ಕಳ ಹೇಳಿಕೆ ಆಧಾರದಲ್ಲಿ…

Read More

ತುಮಕೂರು: ಕೊರಟಗೆರೆ ತಾಲ್ಲೂಕು ವಡೇರಹಳ್ಳಿ ಗ್ರಾಮದ ಬಳಿ ಬಫರ್ ಡ್ಯಾಂ ನಿರ್ಮಾಣ ವಿರೋಧಿಸಿ ಸೋಮವಾರ ಡಿಸಿ ಕಚೇರಿ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಡ್ಯಾಂ ನಿರ್ಮಿಸಬಾರದೆಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಎತ್ತಿನಹೊಳೆ ಯೋಜನೆಯಡಿ ಈ ಬಫರ್ ಡ್ಯಾಂ ನಿರ್ಮಾಣಕ್ಕೆ ಯೋಜಿಸಿದ್ದು, ಡ್ಯಾಂ ನಿರ್ಮಾಣದಿಂದ ಮನೆ, ಆಸ್ತಿ ಜಮೀನು ಕಳೆದುಕೊಳ್ಳಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ ವಡೇರಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು, ನಗರದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಬಫರ್ ಡ್ಯಾಂ ನಿರ್ಮಾಣ ಮಾಡದಂತೆ ಆಗ್ರಹಿಸಿ, ಜಿಲ್ಲಾಡಳಿತಕ್ಕೆ ಮನವಿ ಪತ್ರ ನೀಡಿದರು. ಸುಮಾರು 1.2 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಬಫರ್ ಡ್ಯಾಂ ಅನ್ನು ವಡೇರಹಳ್ಳಿ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿದ್ದು, ಇದಕ್ಕೆ ತಮ್ಮ ಸಂಪೂರ್ಣ ವಿರೋಧವಿದೆ ಎಂದು ವಡೇರಹಳ್ಳಿ, ಕಾಟೇನಹಳ್ಳಿ, ಅಂಕೋನಹಳ್ಳಿ, ನಾಯಕನಪಾಳ್ಯ, ಚಿನಾಗೇಹಳ್ಳಿ, ನಂದಿಪುರ, ಗಾಣದ ಹುಣ್ಣಿ ಸೇರಿ ಹಲವು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಜನವಸತಿಯಲ್ಲಿ, ನೂರಾರು ವರ್ಷಗಳಿಂದ ವಾಸವಿರುವ ಜಾಗದಲ್ಲಿ ಬಫರ್ ಡ್ಯಾಂ ನಿರ್ಮಾಣದ ಕ್ರಮ ಸರಿಯಲ್ಲ. ಡ್ಯಾಂ…

Read More

ಸಿರಾ: ಇತಿಹಾಸದಲ್ಲಿ ಬುದ್ಧನ ಸ್ಥಾನ ಅನನ್ಯವಾದುದು. ಮಾನವನ ದುಃಖಕ್ಕೆ ಮೂಲ ಕಾರಣ ಆಸೆ ಎನ್ನುವ ಸತ್ಯವನ್ನು ಬೋಧಿಸಿದ ಬುದ್ಧನ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಬಿಎಸ್ಪಿ ಪಕ್ಷದ ರಾಜ್ಯ ಉಸ್ತುವಾರಿ ಹರಾ ಮಹೇಶ್ ಹೇಳಿದರು. ಅವರು ನಗರದ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆದ ಬುದ್ಧ ಜಯಂತಿ ಹಾಗೂ ಭೀಮೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬೌದ್ಧ ಧರ್ಮವು ಸಮಾಜದಲ್ಲಿ ಸಮಾನತೆ ಹಾಗೂ ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು. ಸಾವಿರಾರು ವರ್ಷಗಳ ಹಿಂದೆಯೇ ಬುದ್ಧ ಪಂಚಶೀಲ ತತ್ವಗಳ ಮೂಲಕ ಸುಖ ಜೀವನದ ಮಾರ್ಗ ತೋರಿಸಿದ್ದರು. ಪ್ರೀತಿ, ಕರುಣೆ ಹಾಗೂ ಮೈತ್ರಿಯ ಸಂದೇಶ ಸಾರಿದ ಮಹಾನ್ ವ್ಯಕ್ತಿ ಬುದ್ಧ. ಜಾತಿ ವ್ಯವಸ್ಥೆ ಹಾಗೂ ಗೌತಮ ಬುದ್ಧನ ಜೀವನ ವಿಧಾನದ ಉಪದೇಶಗಳನ್ನು ಪ್ರತಿಯೊಬ್ಬರಿಗೂ ತಿಳಿಸಬೇಕಾಗಿದೆ. ಅದರಲ್ಲೂ ಅಂಬೇಡ್ಕರ್ ಅವರು ಪ್ರಕಟಿಸಿರುವ ಬುದ್ಧ ಹಾಗೂ ಧಮ್ಮದ ಬಗೆಗಿನ ಪುಸ್ತಕವನ್ನು ಪ್ರತಿಯೊಬ್ಬರೂ ಓದಬೇಕೆಂದು ಹರಾ ಮಹೇಶ್ ತಿಳಿಸಿದರು. ದಲಿತ ಸಂಘರ್ಷ ಸಮಿತಿಯ…

Read More

ಕುಣಿಗಲ್: ಮಹಿಳೆಯರ ಬದುಕಿಗೆ ಮಾರಕವಾಗಿರುವ, ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 14 ವರ್ಷ ಮೇಲ್ಪಟ್ಟ ಎಲ್ಲಾ ಹೆಣ್ಣು ಮಕ್ಕಳು ಕಡ್ಡಾಯವಾಗಿ ಎಚ್‌ ಪಿವಿ ವ್ಯಾಕ್ಸಿನ್ ಹಾಕಿಸಿಕೊಳ್ಳುವ ಮೂಲಕ ರೋಗದಿಂದ ಮುಕ್ತರಾಗಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ತಿಳಿಸಿದರು. ಸ್ತನ, ಅಂಡಾಶಯ, ಶ್ವಾಸಕೋಶ, ಗರ್ಭಕಂಠದ ಕ್ಯಾನ್ಸರ್ ಮಹಿಳೆಯರ ಬದುಕು, ತಾಯಿಯ ಮರಣದಿಂದ ಆ ಕುಟುಂಬಗಳು ಆತಂಕಕ್ಕೆ ಕಾರಣವಾಗಿವೆ. ಮಹಿಳೆಯರು ಮೌನವಾಗಿ ಅನುಭವಿಸುವ ನೋವು, ಆ ಮಹಿಳೆಯರಿಗೆ ಗೊತ್ತು. ಕ್ಯಾನ್ಸರ್ ಬಗ್ಗೆ ಉದಾಸೀನ ಮಾಡಿದರೆ ರೋಗವು ಉಲ್ಬಣಗೊಂಡು ಆಸ್ಪತ್ರೆಗೆ ಬರುವಷ್ಟರಲ್ಲಿ ಕಾಯಿಲೆಯು ಗುಣಪಡಿಸಲಾಗದಂತಹ ಹಂತಕ್ಕೆ ತಲುಪಿದೆ. ಹೀಗಾಗಿ ಮಾರಕ ಕ್ಯಾನ್ಸರ್ ಬಗ್ಗೆ ಜಾಗೃತಿ ಅಗತ್ಯ ಎಂದು ಹೇಳಿದರು. ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸೋಂಕು ಭೀಕರ ಕಾಯಿಲೆಗೆ ಎಚ್‌ ಪಿವಿ ಲಸಿಕೆ ಹಾಕಲು ದೇಶದಲ್ಲಿ 2010ರಲ್ಲಿ ಪ್ರಾರಂಭಿಸಲಾಯಿತು. ಆದರೆ ಪರಿಣಾಮಕಾರಿಯಾಗಿ ಪ್ರಚಾರವಾಗದೆ ಮಹಿಳೆಯರಲ್ಲಿ ಜಾಗೃತಿ ಮೂಡಿಸದ ಕಾರಣ, ಈ ಆಂದೋಲನ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಲಿಲ್ಲ. ಇದರಿಂದ 14 ವರ್ಷದೊಳಗಿನ ಹೆಣ್ಣು ಮಕ್ಕಳು ಲಸಿಕೆಯಿಂದ ವಂಚಿತರಾಗಿದ್ದಾರೆ ಎಂದು ಅವರು ಕಳವಳ…

Read More

ಪಾವಗಡ: ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಮ್ ಯುವಕ ಸಂಘದ ಕರೆಕ್ಯಾತನಹಳ್ಳಿ ವತಿಯಿಂದ ಅಂಬೇಡ್ಕರ್ ಅವರ 135ನೇ ಜನ್ಮದಿನ ಆಚರಿಸಲಾಯಿತು. ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಶಾಸಕ ಹೆಚ್.ವಿ. ವೆಂಕಟೇಶ್ ಹಾಗೂ ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಕರೆಕ್ಯಾತನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಅವರ 135ನೇ ಜನ್ಮದಿನವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಹೆಚ್.ವಿ. ವೆಂಕಟೇಶ್, ಕಳೆದ 30 ವರ್ಷಗಳಿಗೆ ಹೋಲಿಸಿದರೆ ಇಂದಿನ ಜನಜೀವನ ಎಲ್ಲಾ ಹಂತದಲ್ಲಿಯೂ ಸ್ವಲ್ಪ ಮಟ್ಟಿಗೆ ಸುಧಾರಣೆ ಕಂಡಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಬೇಕು. ತಾಲೂಕಿನ ಯಾವುದೇ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದು, ಯಾವುದೇ ಸಮಸ್ಯೆ ಇದ್ದರೆ ನೇರವಾಗಿ ನನ್ನ ಗಮನಕ್ಕೆ ತರಬೇಕು. ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಿದರು. ತುಮಕೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ. ಕೊಟ್ಟ ಶಂಕರ್ ಮಾತನಾಡಿ, ದಲಿತರಿಗೆ ವಿಮೋಚನೆ ದಾರಿ ತೋರಿಸಿದವರೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್. ಬಹುದೊಡ್ಡ ಸಂವಿಧಾನವನ್ನು…

Read More

ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆಯ ರೇಷ್ಮೆ, ಹತ್ತಿ ಮತ್ತು ಉಣ್ಣೆ ಕೈಮಗ್ಗ ಉತ್ಪನ್ನಗಳ ಅಭಿವೃದ್ಧಿಗಾಗಿ ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ, ಶ್ರೇಷ್ಠತೆ, ತಾಂತ್ರಿಕತೆ, ಉತ್ಕೃಷ್ಟತೆಯ ಉತ್ಪನ್ನ ತಯಾರಿಸಿದ ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕೈಮಗ್ಗ ಉತ್ಪನ್ನಗಳ ಅಭಿವೃದ್ಧಿಗಾಗಿ ಕೈಮಗ್ಗ ನೇಯ್ಗೆಯ ಅಸಾಧಾರಣ ಕೌಶಲ್ಯದಲ್ಲಿ 10 ವರ್ಷಗಳ ಅನುಭವ ಹೊಂದಿರುವ ಕನಿಷ್ಠ 30 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಸೀರೆ ಉತ್ಪನ್ನದ ಮಾದರಿ, ಬಣ್ಣದ ಛಾಯಾಚಿತ್ರ, ವಿವಿಧ ಹಂತದ ವಿಡಿಯೋದೊಂದಿಗೆ ಅರ್ಜಿಯನ್ನು ಮೇ 30ರೊಳಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ — 0816-2275370, ಮೊ.ಸಂ. 7022193202ನ್ನು ಸಂಪರ್ಕಿಸಬೇಕೆಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More