Subscribe to Updates
Get the latest creative news from FooBar about art, design and business.
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
Author: admin
ಮಂಗಳೂರು: ಮಂಜುನಾಥ–ಅಣ್ಣಪ್ಪ ಸ್ವಾಮಿಯಿಂದ ದುಷ್ಟರ ಸಂಹಾರ ಗ್ಯಾರಂಟಿ ಅಂತ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಜೆಡಿಎಸ್ ಸತ್ಯಯಾತ್ರೆ ಸಮಾವೇಶದಲ್ಲಿ ಮಾತನಾಡಿದ ನಿಖಿಲ್, ಇಲ್ಲಿ ರಾಜಕೀಯ ಲಾಭದ ಲೆಕ್ಕಾಚಾರವೂ ಇಲ್ಲ. ಇಲ್ಲಿಗೆ ಯಾರೂ ರಾಜಕೀಯ ನಾಯಕರು-ಕಾರ್ಯಕರ್ತರಾಗಿ ಬಂದಿಲ್ಲ, ಎಲ್ಲರೂ ಭಕ್ತರಾಗಿ ಬಂದಿದ್ದೇವೆ ಎಂದರು. ಧರ್ಮಸ್ಥಳ ಮಂಜುನಾಥ ಸ್ವಾಮಿ ಮುಂದೆ ಯಾವ ದುಷ್ಟ ಶಕ್ತಿಯೂ ಉಳಿಯಲ್ಲ. ಕ್ಷೇತ್ರದ ಆವರಣದ ಸುತ್ತಮುತ್ತ ಅಪಪ್ರಚಾರ-ಅನುಮಾನ ರೀತಿ ಬಿಂಬಿಸಿದ್ದಾರೆ. ತಾಳ್ಮೆಗೂ ಒಂದು ಮಿತಿ ಇದೆ, ನಾವು ಇನ್ನು ಕೈಕಟ್ಟಿ ಕೂರಲು ಆಗಲ್ಲ. ಖಾವಂದರಿಂದಾದ ಸಮಾಜ ಮುಖಿ ಕಾರ್ಯ ಸೂರ್ಯ-ಚಂದ್ರ ಇರುವರೆಗೂ ಅಜರಾಮರ. ಕ್ಷೇತ್ರದ ಮೇಲೆ ನಿರಂತರ ಅಪಪ್ರಚಾರ, ನಿಂದನೆ, ಹುನ್ನಾರ ನಡೆದಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ವಿಜಯಪುರ: ಧರ್ಮಸ್ಥಳ ವಿಚಾರದಲ್ಲಿ ವಿಜಯೇಂದ್ರ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ಬೇರೆ ಬಂಡವಾಳವಿಲ್ಲ, ಧರ್ಮಸ್ಥಳ ವಿಚಾರದಲ್ಲಿ ನಾವು ಮೊದಲು ಎಸ್ ಐಟಿ (SIT) ರಚಿಸಿದಾಗ ಬಿಜೆಪಿಯವರು (BJP) ಸ್ವಾಗತ ಮಾಡಿದ್ದರು. ಆದರೆ ಮುಸುಕುಧಾರಿ ತೋರಿಸಿದ ಜಾಗದಲ್ಲಿ ಏನೂ ಸಿಗದೇ ಇದ್ದ ಕಾರಣ ಇದೀಗ ತಿರುಗಿ ಬಿದ್ದಿದ್ದಾರೆ. ವಿಜಯೇಂದ್ರನಿಗೆ ಬೇರೆ ಬಂಡವಾಳ ಇಲ್ಲ. ಅಪಪ್ರಚಾರ ಮಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾನೆ ಎಂದರು. ನಮ್ಮ ಜಾಗದಲ್ಲಿ ಬಿಜೆಪಿಯವರೇನಾದರೂ ಇದ್ದರೆ ಅವರೂ ಎಸ್ಐಟಿ ರಚಿಸುತ್ತಿದ್ದರು. ಆದರೆ ಇದೀಗ ದುರುಪಯೋಗಪಡಿಸಿಕೊಳ್ಳಲು ಹೊರಟಿದ್ದಾರೆ. ನಾವು ಎಸ್ ಐಟಿ ರಚನೆ ಮಾಡುವ ಮೂಲಕ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ಸನ್ನಿಧಾನ ಹಾಗೂ ಧರ್ಮದರ್ಶಿಗಳ ಮೇಲೆ ಇದ್ದಂತಹ ಕಳಂಕವನ್ನು ತೆಗೆದುಹಾಕಿದ್ದೇವೆ. ಜನರ ನಂಬಿಕೆಯನ್ನು ಹೆಚ್ಚಿಸಿದ್ದೇವೆ. ಎಸ್ ಐಟಿ ಅವರು ಈಗಲೂ ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ದೆಹಲಿಗೆ ಹೋಗಿ ಯಾರೆಲ್ಲ ಇದ್ದಾರೆ ಎನ್ನುವ ತನಿಖೆ ಮಾಡ್ತಿದೆ ಎಂದು ಹೇಳಿದರು.…
ಬೆಂಗಳೂರು: ಯತ್ನಾಳ್ ಬಿಜೆಪಿಯಿಂದ ಯಾಕೆ ಉಚ್ಛಾಟನೆ ಆದ್ರು ಅಂತ ತಿಳಿದುಕೊಳ್ಳಲಿ, ಆ ಮೇಲೆ ನಮ್ಮ ಪಕ್ಷ, ನಮ್ಮ ಅಧ್ಯಕ್ಷರು, ನಮ್ಮ ಸಿಎಂ ಬಗ್ಗೆ ಮಾತಾಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಡಿ.ಕೆ ಶಿವಕುಮಾರ್ ಬಿಜೆಪಿ ಹೋಗೋಕೆ ಸಿದ್ಧತೆ ಮಾಡಿದ್ರು ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ತಿರುಗೇಟು ನೀಡಿದ ಅವರು, ಬಿಜೆಪಿಯಲ್ಲಿರುವವರಿಗೆ ಸ್ವಂತಕ್ಕೆ ಅಸೆಸ್ ಮೆಂಟ್ ಮಾಡೋಕೆ ಆಗಿಲ್ಲ. ಅವರು ಬಿಜೆಪಿಯಲ್ಲಿ ಉಳಿತಾರೋ ಇಲ್ಲವೋ ಅವರಿಗೇ ಗೊತ್ತಿಲ್ಲ. ಅವರು ನಮ್ಮ ಅಧ್ಯಕ್ಷರ ಬಗ್ಗೆ ವಿಮರ್ಶೆ ಮಾಡ್ತಾರಾ ಎಂದು ಪ್ರಶ್ನಿಸಿದ್ದಾರೆ. ಯತ್ನಾಳ್ ಯಾಕೆ ಹೊರಗೆ ಹೋಗಿದ್ದಾರೆ ಅಂತ ಇನ್ನು ಅವರಿಗೆ ಗೊತ್ತಿಲ್ಲ. ಬಿಜೆಪಿಯಲ್ಲಿ ಯಾರು ಹೊರಗೆ ಹೋಗ್ತಾರೆ, ಒಳಗೆ ಬರ್ತಾರೆ ಅಂತ ಅವರಿಗೆ ಗೊತ್ತಾಗುತ್ತಾ? ಅವರು ಸೆಲ್ಫ್ ಅಸೆಸ್ಮೆಂಟ್ ಅಲ್ಲೇ ವಿಫಲರಾಗಿದ್ದಾರೆ. ಇವರೆಲ್ಲ ನಮ್ಮ ಪಕ್ಷ, ಸಿಎಂ ಹಾಗೂ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಅಸೆಸ್ ಮಾಡ್ತಾರಾ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಹೆಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ ಪೋಸ್ಟ್ ನಲ್ಲಿ ಚಾಮರಾಜನಗರ ಲೋಕಸಭೆಯ ಸಂಸದ ಸುನೀಲ್ ಬೋಸ್ ಅವರ ಜನ್ಮದಿನದ ಹ್ಯಾಂಡ್ ಪೋಸ್ಟ್ ಸರ್ಕಲ್ ನಲ್ಲಿ ಕೆಕ್ ಕಟ್ ಮಾಡಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಕಾಂಗ್ರೆಸ್ ಯುವ ಮುಖಂಡ ಡಾ.ಎಸ್.ಮರಿದೇವಯ್ಯ ಅವರ ನೇತೃತ್ವದಲ್ಲಿ ಹಮ್ಮಿಕೊಂಡು ಆಚರಣೆ ಮಾಡಲಾಯಿತು. ನಂತರ ಮಾತನಾಡಿದ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಡಾ.ಎಸ್.ಮರಿದೇವಯ್ಯ, ಸಂಸದ ಸುನೀಲ್ ಬೋಸ್ ಉತ್ತಮ ವ್ಯಕ್ತಿಯಾಗಿರುವ ಹಿನ್ನೆಲೆಯಲ್ಲಿ ಜನರು ಅವರನ್ನು ಮೊದಲ ಬಾರಿಗೆ ಸಂಸದರನ್ನಾಗಿ ಆಯ್ಕೆ ಮಾಡಿದ್ದಾರೆ. ಚಾಮರಾಜನಗರ ಲೋಕಸಭಾ ವ್ಯಾಪ್ತಿಯ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೇಂದ್ರದಲ್ಲಿ ವಿವಿಧ ಯೋಜನೆಗಳ ಬಗ್ಗೆ ಸಂಸತ್ತಿನಲ್ಲಿ ಮಾಡಿದ್ದಾರೆ. ದಕ್ಷಿಣ ಬಹುಭಾಗವನ್ನು ಒಳಗೊಂಡಿದೆ. ಅವುಗಳನ್ನು ಅಭಿವೃದ್ಧಿಗೊಳಿಸಲು ಅನುದಾನವನ್ನು ಬಿಡುಗಡೆ ಮಾಡಬೇಕು ಸಂಸತ್ತಿನಲ್ಲಿ ಒತ್ತಾಯ ಮಾಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯ ಪ್ರೇಮ್ ಸಾಗರ್, ಜಿಲ್ಲಾ ಯಂಗ್ ಬ್ರಿಗೇಡ್ ಉಪಾಧ್ಯಕ್ಷ ಮಾನವೀಯಾಕರ್, ಕನ್ನೇನಹಳ್ಳಿ ಅವಿನಾಶ್, ಸ್ಟುಡಿಯೋ ಮಧು, ಅನಿಲ್ ಕುಮಾರ್, ಜೆ.ಎಸ್.ಮರಿಸ್ವಾಮಿ, ಮಂಜು ಹೈರಿಗೆ, ಪ್ರತಾಪ್, ನರಸಿಂಹಮೂರ್ತಿ, ಶಿವರಾಜ್, ಸಂತೋಷ್ ಇನ್ನು…
ಚಿಕ್ಕಬಳ್ಳಾಪುರ: ಗಣೇಶ ವಿಸರ್ಜನೆ ವೇಳೆ ಡಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಿಪತಿ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ನಿನ್ನೆ ರಾತ್ರಿ ಗಣೇಶೋತ್ಸವ ಮೆರವಣಿಗೆ ನಡೆಯುತ್ತಿದ್ದ ವೇಳೆ ನಾಗವಲ್ಲಿ ಹಾಡಿಗೆ ಇವರು ಎಲ್ಲರ ಜೊತೆಗೆ ಡಾನ್ಸ್ ಮಾಡುತ್ತಿದ್ದರು. ಡಾನ್ಸ್ ಮಾಡುತ್ತಿದ್ದಂತೆಯೇ ಸುಸ್ತಾದ ಲಕ್ಷ್ಮೀಪತಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕೃಷಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಲಕ್ಷ್ಮೀಪತಿ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಕೆ.ಎನ್.ರಾಜಣ್ಣ ಸಚಿವ ಸಂಪುಟದಿಂದ ವಜಾಗೊಂಡ ಹಿನ್ನೆಲೆ ಇದೀಗ ಮಹತ್ವದ ಬೆಳವಣಿಗೆಯಾಗಿದ್ದು, ರಾಜಣ್ಣನ ಬೆನ್ನಿಗೆ ವಿವಿಧ ಮಠಗಳ ಸ್ವಾಮೀಜಿಗಳು ನಿಂತು ಬೆಂಬಲ ಸೂಚಿಸಿದ್ದಾರೆ. ತುಮಕೂರಿನ ಕ್ಯಾತ್ಸಂದ್ರ ರಾಜಣ್ಣನ ನಿವಾಸಕ್ಕೆ ಬಂದ ಚಿತ್ರದುರ್ಗದ ಶ್ರೀ ಜಗದ್ಗುರು ಅಖಿಲ ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು, ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಹೊಸದುರ್ಗದ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಚಿತ್ರದುರ್ಗದ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಮಹಾಸ್ವಾಮಿಗಳು, ದಾವಣಗೆರೆಯ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳು, ಸ್ವಾಮೀಜಿಗಳು ರಾಜಣ್ಣನವರನ್ನು ಭೇಟಿಯಾದರು. ಬಳಿಕ ಒಂದು ಗಂಟೆಗೂ ಅಧಿಕ ಕಾಲ ರಾಜಣ್ಣನ ಜೊತೆ ಚರ್ಚೆ ನಡೆಸಿದ 15ಕ್ಕೂ ಹೆಚ್ಚು ಸ್ವಾಮಿಜಿಗಳು ಸಚಿವ ಸ್ಥಾನದಿಂದ ತೆರವು ವಿಚಾರಕ್ಕೆ ಬೇಸರ ವ್ಯಕ್ತಪಡಿಸುವುದರ ಜೊತೆಗೆ ನಿಮ್ಮ ಜೊತೆ ನಾವಿದ್ದೇವೆ ಎಂಬ ಮಾತುಗಳನ್ನಾಡಿದರು. ಆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಣ್ಣನ ಸಚಿವ ಸ್ಥಾನದಿಂದ ಕೈ ಬಿಟ್ಟಿರೋದು ಆಘಾತಕಾರಿ ವಿಚಾರ. ಇದು ರಾಜಣ್ಣನವರಿಗೆ…
ಮೈಸೂರು: ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಹೆಸರನ್ನ ವಿರೋಧಿಸುತ್ತಾರೆ ಅಂತ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕನ್ನಡಾಂಬೆಯ ಬಗ್ಗೆ ಬಾನು ಮುಷ್ತಾಕ್ ನೀಡಿರುವ ಹಳೇ ಹೇಳಿಕೆಗೂ ಇದಕ್ಕೂ ಏನು ಸಂಬಂಧ? ಬಿಜೆಪಿ ಕುಂಟು ನೆಪ ಹುಡುಕುತ್ತಿದ್ದಾರೆ ಅಷ್ಟೇ. ಯಾವತ್ತೋ ಏನೋ ಹೇಳಿದ್ದಾರೆ ಅಂತ ಅದನ್ನ ಇಲ್ಲಿಗೆ ಲಿಂಕ್ ಮಾಡುವುದು ಎಷ್ಟು ಸರಿ? ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸುತ್ತಾರೆ ಎಂದು ತಿರುಗೇಟು ನೀಡಿದರು. ಬೆರಳಣಿಕೆಯ ಮಂದಿಗೆ ಮಾತ್ರ ಬೂಕರ್ ಪ್ರಶಸ್ತಿ ಬಂದಿದೆ. ನಾನೇ ಅವರ ಹೆಸರನ್ನ ಆಯ್ಕೆ ಮಾಡಿದ್ದೇನೆ. ಉದ್ಘಾಟಕರು ದನ ತಿನ್ನುವುದನ್ನ ಬಿಜೆಪಿಯವರು ನೋಡಿದ್ದಾರಾ? ಅವರನ್ನ ವಿರೋಧಿಸಲೇಬೇಕೆಂದು ವಿರೋಧ ಮಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಉಡುಪಿ: 216 ಗಂಟೆಗಳ ಕಾಲ ನಿರಂತರವಾಗಿ ಭರತನಾಟ್ಯ ಪ್ರದರ್ಶಿಸಿದ ಉಡುಪಿಯ ವಿದುಷಿ ದೀಕ್ಷಾ ವಿ. ಅಧಿಕೃತವಾಗಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ಗೆ ಪ್ರವೇಶಿಸಿದ್ದಾರೆ. ದೀಕ್ಷಾ ಅವರ ಭರತನಾಟ್ಯ ಮ್ಯಾರಥಾನ್ ಆಗಸ್ಟ್ 21ರಂದು ಮಧ್ಯಾಹ್ನ 3:30ಕ್ಕೆ ಅಜ್ಜರಕಾಡಿನ ಡಾ. ಜಿ. ಶಂಕರ್ ಮಹಿಳಾ ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಪ್ರಾರಂಭವಾಯಿತು. ಆಗಸ್ಟ್ 30 ರಂದು ಅದೇ ಸಮಯದಲ್ಲಿ ಮುಕ್ತಾಯವಾಯಿತು. ಒಂಬತ್ತು ದಿನಗಳ ನಿರಂತರ ನೃತ್ಯ ಪ್ರದರ್ಶನ ನೀಡಲಾಗಿದೆ. ದಾಖಲೆ ನಿರ್ಮಿಸುವ ದೃಢಸಂಕಲ್ಪದಿಂದ ದೀಕ್ಷಾ ಈ ಸವಾಲನ್ನು ಸ್ವೀಕರಿಸಿ ಒಂಬತ್ತು ದಿನಗಳ ಕಾಲ ನೃತ್ಯ ಮಾಡಿದ್ದಾರೆ. ದೀಕ್ಷಾ ಅವರ ಗುರು ಶ್ರೀಧರ್ ಬನ್ನಂಜೆ ಅವರು ತಮ್ಮ ಶಿಷ್ಯೆಯ ಸಮರ್ಪಣೆ ಮನೋಭಾವದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ನನ್ನ ಶಿಷ್ಯೆ ದೀಕ್ಷಾ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ದಾಖಲೆಯನ್ನು ಸೃಷ್ಟಿಸುವಲ್ಲಿ ಪ್ರಯತ್ನಿಸಿದ್ದು ಅದರಲ್ಲಿ ಯಶಸ್ವಿಯಾಗಿದ್ದಾರೆ. ಅವರು ಮೊದಲು ನನ್ನನ್ನು ಸಂಪರ್ಕಿಸಿದಾಗ, ನಾನು ಅವರಿಗೆ ವಿದ್ವತ್ ಪರೀಕ್ಷೆಗಳನ್ನು ಪೂರ್ಣಗೊಳಿಸಲು ಮತ್ತು ಸಂಪೂರ್ಣವಾಗಿ ತಯಾರಿ ಮಾಡಿಕೊಳ್ಳಲು ಸಲಹೆ ನೀಡಿದ್ದೇನೆ.…
ಕಲಬುರಗಿ: ‘ಸಿದ್ರಾಮುಲ್ಲಾಖಾನ್’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ವಾಟ್ಸ್ ಆಪ್ ಸ್ಟೇಟಸ್ ಹಾಕಿದ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಪ್ರವೀಣಕುಮಾರ್ ಉಡಗಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್ ಐಆರ್ ದಾಖಲಿಸಲಾಗಿದೆ. ಪ್ರವೀಣಕುಮಾರ್ ಅವರು ಆಗಸ್ಟ್ 21ರಂದು ‘ಸಿದ್ರಾಮುಲ್ಲಾಖಾನ್’ ಎಂಬ ಬರಹದ ಜೊತೆಗೆ ಸಿದ್ದರಾಮಯ್ಯ ಅವರ ತಲೆಗೆ ಮುಸ್ಲಿಮರು ಧರಿಸುವ ಟೊಪ್ಪಿ ಹಾಕಿರುವಂತೆ ಎಡಿಟ್ ಮಾಡಲಾದ ಚಿತ್ರವನ್ನು ಸ್ಟೇಟಸ್ ಇಟ್ಟುಕೊಂಡಿದ್ದನ್ನು ಗಮಿನಿಸಿದ ಸುಂಟನೂರ ಗ್ರಾಮದ ಮುಖಂಡ ಮಲ್ಲಿಕಾರ್ಜುನ ಡಣ್ಣೂರ ಅವರು ಪಿಡಿಒ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಪಿಡಿಒ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಗ್ರಾಮದ ಮುಖಂಡರಾದ ಮಹಾಲಿಂಗಪ್ಪ ಹರವಾಳ, ಆಳಂದ ತಾಲೂಕು ಕುರುಬರ ಸಂಘದ ಯುವ ಘಟಕದ ಅಧ್ಯಕ್ಷ ಬೀರಣ್ಣ ಪೂಜಾರಿ ಸೇರಿ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಕುರಿತು ನಿಂಬರ್ಗಾ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಸರಗೂರು: ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಭಾನುವಾರದಂದು ಚಾಮರಾಜನಗರ ಲೋಕಸಭಾ ಸಂಸದ ಸುನೀಲ್ ಬೋಸ್ ರವರ 44 ನೇ ಹುಟ್ಟು ಹಬ್ಬವನ್ನು ಸುನೀಲ್ ಬೋಸ್ ಅಭಿಮಾನಿಗಳ ಬಳಗದ ವತಿಯಿಂದ ಸರಳವಾಗಿ ಕೇಕ್ ಕಟ್ ಮಾಡುವ ಮೂಲಕ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಿಸಿದರು. ಇದೇ ಸಂದರ್ಭದಲ್ಲಿ ಸಮುದಾಯದ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ನೀಡುವ ಮೂಲಕ ಆಚರಣೆ ಮಾಡಲಾಯಿತು. ನಂತರ ಮಾತನಾಡಿದ ಮಾಜಿ ಎಪಿಎಂಸಿ ಅಧ್ಯಕ್ಷ ಹಾಗೂ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ಅಧ್ಯಕ್ಷ ದೇವಲಾಪುರ ಸಿದ್ದರಾಜು, ಅವರ ವ್ಯಕ್ತಿತ್ವಕ್ಕೆ ಅನುಗುಣವಾಗಿ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶೋಷಿತರು, ಬಡವರು ಮತ್ತು ನಿರ್ಗತಿಕರ ಪಾಲಿಗೆ ಸುನೀಲ್ ಬೋಸ್ ಸ್ಪಂದಿಸುತ್ತಿದ್ದರು. ಇಂತಹ ಕಾರ್ಯಕ್ರಮಗಳ ಮೂಲಕ ಅವರ ಹುಟ್ಟು ಹಬ್ಬದವನ್ನು ನಿಜವಾದ ಅರ್ಥವನ್ನು ಅಭಿಮಾನಿಗಳು ನೀಡಿದ್ದಾರೆ ಎಂದರು. ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವ ಡಾ.ಎಸ್.ಸಿ.ಮಹದೇವಪ್ಪರವರು ಎರಡು ತಾಲ್ಲೂಕು ಅಭಿವೃದ್ಧಿಗೊಳಿಸಲು ಅವರು ತಾಲೂಕಿನಲ್ಲಿ ಸುಮಾರು ವರ್ಷಗಳ ಮಂತ್ರಿಯಾಗಿ ಹಲವು ಜನಪ್ರಿಯ ಯೋಜನೆಯಗಳನ್ನು ಅನುಷ್ಠಾನಗೊಳಿಸಿದ್ದಾರೆ.…