Subscribe to Updates
Get the latest creative news from FooBar about art, design and business.
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
Author: admin
ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮಗೊಳಿಸಲಾಗಿದೆ. ಆ ಸಮಾಧಿಯನ್ನು ಮರುಸ್ಥಾಪಿಸಬೇಕು ಮತ್ತು ಅಭಿಮಾನ್ ಸ್ಟುಡಿಯೋ ಜಾಗವನ್ನು ಸರ್ಕಾರ ವಾಪಸ್ಸು ಪಡೆಯಬೇಕು ಎಂದು ಡಾ.ವಿಷ್ಣುಸೇನಾ ಸಮತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಅವರಿಗೆ ಮನವಿ ಮಾಡಿದ್ದಾರೆ. ಅರಣ್ಯ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ನೆಲಸಮಗೊಳಿಸಲಾಗಿರುವ ವಿಷ್ಣು ಸಮಾಧಿಯನ್ನು ಮರು ಸ್ಥಾಪಿಸುವಂತೆ ಮನವಿ ಮಾಡಿಕೊಂಡರು. ಇದೇ ಆಗಸ್ಟ್ 7 ರಂದು ರಾತ್ರೋರಾತ್ರಿ ಅಭಿಮಾನ್ ಸ್ಡುಡಿಯೋದಲ್ಲಿದ್ದ ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನ ಧ್ವಂಸ ಮಾಡಲಾಗಿತ್ತು. ಈ ಕಾರಣಕ್ಕೆ ಭಾರೀ ವಿವಾದಕ್ಕೀಡಾಗಿದ್ದ ಜಾಗವನ್ನ ಇದೀಗ ಸರ್ಕಾರ ವಶಪಡಿಸಿಕೊಳ್ಳುವಂತೆ ಅರಣ್ಯ ಇಲಾಖೆ ಡಿಸಿ ಜಗದೀಶ್ ಅವರಿಗೆ ಪತ್ರ ಬರೆದಿದೆ. ಈ ಮೂಲಕ ಅಭಿಮಾನ್ ಸ್ಟುಡಿಯೋ ಜಾಗ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಮೈಸೂರು: ಮೈಸೂರಿನಲ್ಲಿರುವ ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಹಾಗೂ ಅವರ ಪತ್ನಿ ಭೇಟಿ ನೀಡಿದ್ದು, ಚಾಮುಂಡಿ ತಾಯಿಯ ದರ್ಶನ ಪಡೆದರು. ಸುದೀಪ್ ದಂಪತಿ ಜೊತೆ ಬಿಗ್ಬಾಸ್ ಸ್ಪರ್ಧಿ ವಿನಯ್ ಗೌಡ ಪತ್ನಿ ಅಕ್ಷತಾ ಹಾಗೂ ಪುತ್ರ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಇತ್ತೀಚೆಗಷ್ಟೆ ಅಗಲಿದ್ದ ತಾಯಿಯ ಹುಟ್ಟುಹಬ್ಬವನ್ನು ಶನಿವಾರ ಗಿಡ ನೆಡುವ ಮೂಲಕ ಸುದೀಪ್ ವಿಶೇಷವಾಗಿ ಆಚರಿಸಿದ್ದರು. ಅಲ್ಲದೇ ಇದೇ ಸೆಪ್ಟೆಂಬರ್ 2 ರಂದು ಸುದೀಪ್ ಕೂಡ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ಮಹಿಳೆಯರು ಮುಂಜಾಗೃತ ಕ್ರಮವಾಗಿ ಗ್ಯಾಸ್ ಸುರಕ್ಷತಾ ಕ್ರಮ ಅನುಸರಿಸಿಕೊಂಡು ಅಡುಗೆ ಮಾಡಬೇಕು ಎಂದು ಸೌಜನ್ಯ ಗ್ಯಾಸ್ ಏಜೆನ್ಸಿಯ ಮಾಲೀಕರು, ಮಾಜಿ ಸಚಿವ ಎಂ.ಶಿವಣ್ಣ ಸಲಹೆ ನೀಡಿದರು. ಪಟ್ಟಣದ ಸೌಜನ್ಯ ಗ್ಯಾಸ್ ಸರ್ವೀಸ್ ನಿಂದ ಭಾರತ್ ಗ್ಯಾಸ್ ಏಜೆನ್ಸಿ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಶನಿವಾರ ನಡೆಸಿದ ಗ್ಯಾಸ್ ಬಳಕೆಯ ಮುಂಜಾಗೃತ ಕ್ರಮ, ಗೃಹಿಣಿಯರಿಗೆ ಅಡುಗೆ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮನೆಗಳಲ್ಲಿ ಅಡುಗೆ ಕೋಣೆ ಸ್ವಚ್ಛವಾಗಿಟ್ಟುಕೊಂಡು ಗಾಳಿ, ಬೆಳಕು ಇರಬೇಕು. ಸಿಲಿಂಡರ್, ರೆಗ್ಯುಲೇಟರ್, ಗ್ಯಾಸ್ ಸ್ಟವ್ ಗಳಲ್ಲಿ ಲೋಪವಾದರೆ ಶೀಘ್ರದಲ್ಲೆ ಕ್ರಮವಹಿಸಬೇಕು. ಇದಕ್ಕಾಗಿ ಗ್ಯಾಸ್ ವಿತರಕರನ್ನು ಸಂಪರ್ಕಿಸಬೇಕು. ಕೂಡಲೇ ಸರಿಪಡಿಸಲಿದ್ದಾರೆ. ಗ್ರಾಹಕರ ಹಿತ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಗ್ರಾಹಕರು ಮುಂದಾಗಬೇಕು ಎಂದು ಅವರು ತಿಳಿಸಿದರು. ಗ್ರಾಮಾಂತರ ಭಾಗದ ಜನರಿಗೆ ಗ್ಯಾಸ್ ಸೇವೆ ನೀಡುವ ಸಲುವಾಗಿ 25 ವರ್ಷಗಳ ಹಿಂದೆ ಆರಂಭವಾದ ಸೌಜನ್ಯ ಗ್ಯಾಸ್ ಸರ್ವೀಸ್ ಉತ್ತಮ ಸೇವೆ ನೀಡುತ್ತಾ ಬಂದಿದೆ. ಸದ್ಯ 15 ಸಾವಿರ ಗ್ರಾಹಕರನ್ನು…
ಬೀದರ್: ಅತಿವೃಷ್ಟಿಯಿಂದಾಗಿ ತೀವ್ರ ಹಾನಿಗೊಳಗಾದ ಬೀದರ್ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನ್ಸನ್ ಘೋಡೆ ಮನವಿ ಮಾಡಿದ್ದಾರೆ. ಈ ಕುರಿತು ಅವರು ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಔರಾದ್ ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಅತಿ ಹೆಚ್ಚು ನಷ್ಟವಾಗಿದೆ. ರೈತರ ಬೆಳೆ, ರಸ್ತೆ, ಸೇತುವೆಗಳು ಸಂಪೂರ್ಣ ಹಾಳಾಗಿವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ರೈತರು, ಕೃಷಿ ಕೂಲಿ ಕಾರ್ಮಿಕರು ಹಾಗೂ ಬಡವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ. ಖುದ್ದು ಬೀದರ್ ಜಿಲ್ಲೆಗೆ ಭೇಟಿ ನೀಡಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಈ ಮೂಲಕ ಜಿಲ್ಲೆಯ ಜನರಿಗೆ ನೆರವಾಗಬೇಕು ಎಂದು ಕೋರಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ದೊಡ್ಡಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆಯ ಸಂಭ್ರಮದ ವೇಳೆ ಪಟಾಕಿ ತುಂಬಿದ್ದ ಬಾಕ್ಸ್ ಸ್ಫೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ನಗರದ ಮುತ್ತೂರಿನಲ್ಲಿ ನಡೆದಿದೆ. ತನುಷ್ ರಾವ್ (15) ಮೃತಪಟ್ಟ ಬಾಲಕ. ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ನಿನ್ನೆ ಸಂಜೆ ಮುತ್ತೂರಿನ ಫ್ರೆಂಡ್ಸ್ ವಿನಾಯಕ ಗ್ರೂಪ್ ವತಿಯಿಂದ ಗಣೇಶ ವಿಸರ್ಜನೆ ಮೆರವಣಿಗೆಗೆ ತಯಾರಿ ನಡೆಸಲಾಗಿತ್ತು. ಟ್ರಾಕ್ಟರ್ ನಲ್ಲಿ ಗಣೇಶ ಮೂರ್ತಿಯನ್ನು ಮೆರವಣಿಗೆ ಮಾಡಲು ಪ್ರತಿಷ್ಠಾಪಿಸಿ, ಹೆಚ್ಚಿನ ಆಕರ್ಷಣೆಗೆ ಪವರ್ ಲಿಫ್ಟರ್ ವಾಹನ ಕರೆಸಲಾಗಿತ್ತು. ಪವರ್ ಲಿಫ್ಟರ್ ವಾಹನದ ಇಂಜಿನ್ ಮೇಲ್ಭಾಗದಲ್ಲಿ ಇಡಲಾಗಿದ್ದ ಭಾರಿ ಸದ್ದು ಮಾಡುವ ಪಟಾಕಿಗಳ ಬಾಕ್ಸ್ ಏಕಾಏಕಿ ಸ್ಫೋಟಗೊಂಡು ಈ ದುರ್ಘಟನೆ ನಡೆದಿದೆ. ಇದೇ ವೇಳೆ ವಿದ್ಯಾರ್ಥಿಗಳಾದ ಗಣೇಶ್, ಯೋಗೇಶ್, ಪವರ್ ಲಿಫ್ಟರ್ ಚಾಲಕ ಮುನಿರಾಜು, ನಾಗರಾಜು ಹಾಗೂ ಚೇತನ್ ಶಾವಿ ಸುಟ್ಟ ಗಾಯಗಳಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಅಲ್ಲದೆ ಪಟಾಕಿ ಬಾಕ್್ಸ ಸ್ಪೋಟದ ತೀವ್ರತೆಗೆ…
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ-ದೂರುದಾರ ಚಿನ್ನಯ್ಯನನ್ನು ಸ್ಥಳ ಮಹಜರಿಗಾಗಿ ಎಸ್ ಐಟಿ ಅಧಿಕಾರಿಗಳು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದೆ ಎಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಎಸ್ ಐಟಿ ತಂಡವು ಚಿನ್ನಯ್ಯ ನೀಡಿರುವ ಹೇಳಿಕೆಯಲ್ಲಿ ತಿಳಿಸಿರುವ ಸ್ಥಳಗಳಲ್ಲಿ ಮಹಜರು ನಡೆಸಲು ಬಿಗಿ ಭದ್ರತೆಯಲ್ಲಿ ಕರೆದೊಯ್ದಿದೆ. ಚಿನ್ನಯ್ಯನನ್ನು ನಿಖರವಾಗಿ ಎಲ್ಲಿಗೆ ಕರೆದೊಯ್ಯಲಾಯಿತು ಎಂಬುದರ ಕುರಿತು ಯಾವುದೇ ಅಧಿಕೃತ ಮಾಹಿತಿ ಇಲ್ಲ. ಭದ್ರತೆಯ ದೃಷ್ಟಿಯಿಂದ ಈ ಪ್ರಕ್ರಿಯೆಯನ್ನು ಬೆಳಗಿನ ಜಾವ ನಡೆಸಲಾಯಿತು. ಭೇಟಿ ನೀಡಿದ ಸ್ಥಳಗಳು ಮತ್ತು ಪಡೆದುಕೊಂಡ ದಾಖಲೆಗಳ ವಿವರಗಳನ್ನು ಈ ಹಂತದಲ್ಲಿ ಬಹಿರಂಗಪಡಿಸಲು ಆಗುವುದಿಲ್ಲ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೊರಟಗೆರೆ : ಬಡವ, ಶ್ರೀಮಂತ ಎನ್ನದೇ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿದ್ಯುತ್ ಅವಶ್ಯಕತೆಯಿದೆ. ವಿದ್ಯುತ್ನಿಂತ ಉಪಯೋಗವೂ ಇದೆ, ಅಪಾಯವು ಇದೆ. ಇದಕ್ಕೆ ಯಾವುದೇ ಜಾತಿ, ಧರ್ಮ, ಭೇದವಿಲ್ಲ ಎಂದು ಎಲೆರಾಂಪುರ ಶ್ರೀಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು. ಕೊರಟಗೆರೆ ಪಟ್ಟಣದ ಬೆಸ್ಕಾಂ ಕಚೇರಿ ಪಕ್ಕದಲ್ಲಿನ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ನೂತನ ಕಚೇರಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಗುತ್ತಿಗೆದಾರರ ನಡುವೆ ಉತ್ತಮ ಬಾಂಧವ್ಯ ಇರಬೇಕು, ಗುತ್ತಿಗೆದಾರರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ತಮ್ಮ ವೃತ್ತಿಯಲ್ಲಿ ಯಶಸ್ವಿಯಾಗಬೇಕಿದೆ ಎಂದರು. ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ವಿದ್ಯುತ್ ಗುತ್ತಿಗೆದಾರರು ಸಂಘಟನೆ ಸ್ಥಾಪನೆ ಮೂಲಕ ಸಾಧಕ ಬಾದಕಗಳಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರ ಕೂಡ ವಿದ್ಯುತ್ ಗುತ್ತಿಗೆದಾರರ ಬೇಡಿಗಳನ್ನು ಆದಷ್ಟು ಬೇಗ ಈಡೇರಿಸಬೇಕಿದೆ. ಖಾಸಗಿ ಸ್ಥಳದಲ್ಲಿ ಕಚೇರಿ ತಾತ್ಕಲಿಕವಾಗಿರಲಿದ್ದು ಶಾಸಕರು ಈ ಬಗ್ಗೆ ಗಮನಹರಿಸಿ ಗುತ್ತಿಗೆದಾರರ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ, ಉದ್ಘಾಟನೆ ಮಾಡಬೇಕಿದೆ ಎಂದು ಒತ್ತಾಯ ಮಾಡಿದರು.…
ಮಂಡ್ಯ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು NIA ತನಿಖೆ ಅವಶ್ಯಕವಾಗಿದೆ ಎಂದು JDS ಯುವ ಘಟದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಧರ್ಮಸ್ಥಳ ಪಾವಿತ್ರ್ಯತೆಯನ್ನ ಹಾಳು ಮಾಡಲು ಒಳಸಂಚು ರೂಪಿಸಿದ್ದು, ರಾಜ್ಯದ ಜನರಿಗೆ SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ. NIA ತನಿಖೆಗೆ ವಹಿಸಿದರೆ ಷಡ್ಯಂತ್ರ ಬಯಲಾಗಲಿದೆ ಎಂದು ಹೇಳಿದರು. ಧರ್ಮಸ್ಥಳ ಯಾತ್ರೆಗೆ ಹಾಸನವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿದ್ದು, ಮುಖಂಡರು, ಕಾರ್ಯಕರ್ತರು ಹಾಸನಕ್ಕೆ ತೆರಳಲಿದ್ದಾರೆ. ಅಲ್ಲಿ ಉಪಾಹಾರ ವ್ಯವಸ್ಥೆ ಮಾಡಲಾಗಿದೆ. ನಂತರ ಧರ್ಮಸ್ಥಳ ನೇತ್ರಾವತಿಗೆ ತೆರಳಿ, ಅಲ್ಲಿ ಸ್ನಾನ ಮಾಡಿದ ಬಳಿಕ ಅಲ್ಲಿಂದ ಮಂಜುನಾಥಸ್ವಾಮಿ ದೇವಸ್ಥಾನದವರೆಗೆ ಪಾದಯಾತ್ರೆ ಮಾಡುತ್ತೇವೆ. ಈ ಯಾತ್ರೆಯಲ್ಲಿ ಜೆಡಿಎಸ್ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಕಾರ್ಯಕರ್ತರು, ಭಕ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿದ್ದಾರೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ…
ತಿಪಟೂರು: ವಿದ್ಯಾರ್ಥಿಗಳು ಉದ್ಯೋಗವನ್ನು ಹುಡುಕದೆ ಸ್ವಂತ ಉದ್ಯಮಿಗಳಾಗಿ ಉದ್ಯೋಗವನ್ನು ಮಾಡಬೇಕು, ಪ್ರತಿಯೊಬ್ಬ ವ್ಯಕ್ತಿಗಳು ದೇಶದ ಅಭಿವೃದ್ಧಿಗೆ ಸೈನಿಕರು, ರೈತರು, ಸ್ವಂತ ಉದ್ಯಮಿಗಳಾಗಿ ಬೆಳೆದು ದೇಶಕ್ಕೆ ಕೊಡಗೆ ನೀಡಬೇಕೆಂದು ಕಾಪರ್ ಇಂಡಸ್ಟ್ರೀಸ್ ಚೇರ್ಮನ್ ಚಂದ್ರಶೇಖರ್ ತಿಳಿಸಿದರು. ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಉದ್ಯಮಶೀಲತೆ ವೃತ್ತಿಗಾಗಿ ಅವಕಾಶಗಳ ಮಹಾಸಾಗರ ಎಂಬ ಕಾರ್ಯಾಗಾರದಲ್ಲಿ ಮಾತನಾಡಿ, ನಾನು ದೇಶಕ್ಕಾಗಿ ಏನು ಮಾಡಿದೆ ತೆರಿಗೆ ಪಾವತಿಸುವುದರ ಮೂಲಕ ದೇಶದ ಆದಾಯವನ್ನು ಹೆಚ್ಚಿಸಿ ರಾಷ್ಟ್ರವನ್ನು ಅಭಿವೃದ್ಧಿಯತ್ತ ಮುನ್ನಡೆಸಬೇಕು ಎಂದರು. ತುಮಕೂರಿನ ವಿವಿಯ ರಿಜಿಸ್ಟರ್ ಎನ್. ಕೊಟ್ರೇಶ್ ಮಾತನಾಡಿ, ತುಮಕೂರು ವಿವಿ ದೇಶದ ಪ್ರತಿಷ್ಠಿತ ವಿದ್ಯೆ ವಿಶ್ವವಿದ್ಯಾಲಯವಾಗಿದೆ ದೇಶದ 75 ವಿವಿಗಳಲ್ಲಿ ತುಮಕೂರು ಇವತ್ತು 53ನೇ ಸ್ಥಾನ ಪಡೆದಿರುವುದು ನಮ್ಮೆಲ್ಲರ ಹೆಮ್ಮೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸಿಇಒ ಡಾಕ್ಟರ್ ಸತೀಶ್ ಎಂ. ಬಾವಣ್ಕರ್ ಹಾಗೂ ಕಲ್ಪತರು ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ.ಕೆ.ರುದ್ರಪ್ಪನವರು ಹಾಗೂ ಸಂಸ್ಥೆಯ ಉಪಾಧ್ಯಕ್ಷ ಬಾಗೆಪಲ್ಲಿ ನಟರಾಜ್, ಜಿ.ಪಿ.ದೀಪಕ್, ಎಮ್.ಆರ್.ಸಂಗಮೇಶ್, ಖಜಾಂಚಿ ಶಿವಪ್ರಸಾದ್, ಕೆ.ಏ.ಟಿ.ಪ್ರಾಂಶುಪಾಲ…
ಸರಗೂರು: ಧರ್ಮಸ್ಥಳದಲ್ಲಿ ದೇವರ ಹೆಸರಿಗೆ ಕಳಂಕ ತರಲು ಕೆಲವರು ಷಡ್ಯಂತ್ರ ನಡೆಸಿದ್ದು, ಇದರ ಹಿಂದಿರುವವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಪಟ್ಟಣದ ಸಂತೆ ಮಾಸ್ತಮ್ಮ ದೇವಸ್ಥಾನದಿಂದ ಪ.ಪಂ. ಮುಂಭಾಗದವರೆಗೂ ಶನಿವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಸಂರಕ್ಷಣಾ ಅಭಿಯಾನ ಸಮಿತಿವತಿಯಿಂದ ಪ್ರತಿಭಟನೆ ನಡೆಸಲಾಯಿತು. ಭಗವಾಧ್ವಜ ಹಿಡಿದು ಬಂದ ಕಾರ್ಯಕರ್ತರು ಧರ್ಮ ಉಳಿಸಲು ಧರ್ಮ ಯುದ್ಧ ಎಂದು ಘೋಷಣೆ ಕೂಗಿದರು. ಹಿಂದೂ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಮೈಕ್ ಪ್ರೇಮ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಸರಕಾರ ಹಿಂದೂ ದೇವರ ದೇವಾಲಯಗಳಿಗೆ ಕನ್ನ ಹಾಕುತ್ತಿದೆ. ಇದೀಗ ಅವರ ಮುಖವಾಡ ಬಯಲಾಗಿದೆ. ಧರ್ಮ ಉಳಿಯಬೇಕಾದರೆ ಹಿಂದೂಗಳ ಒಗ್ಗಟ್ಟು ಮುಖ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂದೂ ದೇವಸ್ಥಾನಗಳ ವಿಷಯದಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ಆರೋಪಿಸಿದರು. ಧರ್ಮಸ್ಥಳದಲ್ಲಿ ದೇವರ ಹೆಸರಿಗೆ ಕಳಂಕ ತರುವ ಷಡ್ಯಂತ್ರದ ವಿರುದ್ಧ ಕಾರವಾರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳಿಗೆ ಕನ್ನ ಹಾಕುತ್ತಿದೆ ಎಂದು ಆರೋಪಿಸಿ, ಹಿಂದೂಗಳ ಒಗ್ಗಟ್ಟಿಗೆ ಕರೆ ನೀಡಿದರು.…