Subscribe to Updates
Get the latest creative news from FooBar about art, design and business.
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
Author: admin
ಕೊರಟಗೆರೆ: ಸನಾತನ ಧರ್ಮ, ಸಂಸ್ಕೃತಿ, ಆಚಾರ ವಿಚಾರಗಳು ಉಳಿಯಬೇಕಾದರೆ ಪ್ರತಿಯೊಂದು ಗ್ರಾಮದಲ್ಲಿ ದೇವಾಲಯ, ಧಾರ್ಮಿಕ ಕ್ಷೇತ್ರಗಳು ನಿರ್ಮಾಣಗೊಳ್ಳಬೇಕು. ವರ್ಣರಹಿತವಾಗಿ ಬದುಕು ಕಟ್ಟಿಕೊಳ್ಳಬೇಕಾದರೆ ಇಂತಹ ಹಬ್ಬಗಳು, ಜಾತ್ರೆಗಳು ಅವಕಾಶ ಮಾಡಿಕೊಡುತ್ತವೆ ಎಂದು ಎಲೆರಾಂಪುರ ನರಸಿಂಹಗಿರಿ ಸುಕ್ಷೇತ್ರ ಶ್ರೀಮಠದ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು. ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ ಕರಿದುಗ್ಗನಹಳ್ಳಿ ಮತ್ತು ಹನುಮಂತಯ್ಯನಪಾಳ್ಯ ಗ್ರಾಮದೇವತೆ ಶ್ರೀದೊಡ್ಡಮ್ಮ ದೇವಿ ದೇವಾಲಯದ ಆವರಣದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 1 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾದ ಶ್ರೀದೊಡ್ಡಮ್ಮ ದೇವಿಯ ಸ್ಥಿರಬಿಂಬ ಪ್ರತಿಷ್ಠಾಪನಾ ಕುಂಭಾಭಿಷೇಕ ಮಹೋತ್ಸವ ಹಾಗೂ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮವು ಆ.29 ರಿಂದ 31ರವರೆಗೆ ನಡೆಯಲಿದೆ ಎಂದು ಹೇಳಿದರು. ದೇವಾಲಯದ ಧಾರ್ಮಿಕ ಕಾರ್ಯಕ್ರಮ ಸಿಂಹಪಾಲು ಉದ್ಯಮಿ ನಿಲೇಶ್ ಗೆ ಸಲ್ಲಬೇಕು. ರಸ್ತೆ ಮತ್ತು ಮೂಲಭೂತ ಸೌಕರ್ಯದಿಂದ ವಂಚಿತಗೊಂಡ ಈ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಿದ್ದಾರೆ. ಆ.31ಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರು ಆಗಮಿಸಲಿದ್ದು, ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳು…
ತುಮಕೂರು: ಮಧುಗಿರಿ ಶಾಸಕ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವುದರ ವಿರುದ್ಧ ಬೆಂಬಲಿಗರು ವ್ಯಾಪಕ ಪ್ರತಿಭಟನೆಗೆ ಮುಂದಾಗಿದ್ದಾರೆ. ರಾಜಣ್ಣ ಅಭಿಮಾನಿಗಳು ದೆಹಲಿಗೆ ಹೋಗಿ ಜಂತರ್ ಮಂತರ್ ನಲ್ಲಿ ಅರೆಬೆತ್ತಲೆ ಮತ್ತು ಉಪವಾಸ ಸತ್ಯಾಗ್ರಹ ಮಾಡಲು ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 8ರಿಂದ 10 ಸಾವಿರ ಅಭಿಮಾನಿಗಳು ದೆಹಲಿಗೆ ತೆರಳಿ ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ನ ಗಮನ ಸೆಳೆಯಲು ಮುಂದಾಗಿದ್ದಾರೆ. ಕೆ.ಎನ್.ರಾಜಣ್ಣ ಅವರನ್ನ ಸಂಪುಟದಿಂದ ವಜಾಗೊಳಿಸಿರುವುದು ಅನ್ಯಾಯ ಎಂದಿರುವ ಅಭಿಮಾನಿಗಳು, ಡಿ.ಕೆ.ಶಿವಕುಮಾರ್ ಅವರು ಆರ್ ಎಸ್ ಎಸ್ ನ್ನು ಹೊಗಳಿದರೂ, ಬಿ.ಎಲ್.ಸಂತೋಷ್ ಅವರ ಪರ ವಹಿಸಿ ಮಾತನಾಡಿದರೂ ಕ್ರಮಕೈಗೊಳ್ಳಲಾಗಿಲ್ಲ. ಆದರೆ ರಾಜಣ್ಣ ಅವರಿಗೆ ಕನಿಷ್ಠ ನೋಟಿಸ್ ಕೂಡ ನೀಡದೇ ಏಕಾಏಕಿ ವಜಾಗೊಳಿಸಿರುವುದು ಅಸಮಾನತೆಯ ಕ್ರಮವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಮೈಸೂರು: ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನಿಜಕ್ಕೂ ಹಾಸ್ಯಾಸ್ಪದ. ಗೌರಿ ಹಬ್ಬ ಆಚರಿಸುವ ವೇಳೆ ಹಿಂದೂ ಭಾವನೆಗೆ ಧಕ್ಕೆ ತರುವ ವಿಚಾರ ಇದು ಎಂದು ಮೈಸೂರು–ಕೊಡಗು ಸಂಸದ ಯದುವೀರ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು , ಸಾವಿರಾರು ವರ್ಷಗಳ ಹಿಂದೆ ಮರ್ಕಂಡೇಯ ತಪಸ್ಸು ಮಾಡಿದ್ದ ಸ್ಥಳ ಅದು. ಸಾವಿರಾರು ವರ್ಷಗಳಿಂದ ಚಾಮುಂಡಿ ಇರುವುದು ಕೂಡ ಉಲ್ಲೇಖ ಇದೆ. ಚಾಮುಂಡಿಬೆಟ್ಟಕ್ಕೆ ಎಲ್ಲರಿಗೂ ಪ್ರವೇಶವಿದೆ. ಅದು ಧಾರ್ಮಿಕ ಸ್ಥಳವಾಗಿರುವ ಕಾರಣ ಎಲ್ಲರೂ ಹೋಗಬಹುದು. ಆಧುನಿಕ ಕಾಲಘಟ್ಟದಲ್ಲಿ ಜಾತ್ಯಾತೀತ ದೃಷ್ಟಿಕೋನದಿಂದ ನೋಡಬಹುದು. ಲಕ್ಷಾಂತರ ಜನರ ಭಾವನೆಗೆ ಧಕ್ಕೆ ಉಂಟಾಗಿದೆ. ಧರ್ಮ ಉಳಿಸುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತೇವೆ. ಜತೆಗೆ ಕಾನೂನು ಚೌಕಟ್ಟಿನಲ್ಲೂ ಹೋರಾಡುತ್ತೇವೆ. ನಾವು ಎಲ್ಲ ಧರ್ಮ ಒಪ್ಪಿಕೊಳ್ತೀವಿ. ಹಾಗಂತ ಒಂದು ಧರ್ಮದ ಓಲೈಕೆಗೆ ಮುಂದಾಗಬಾರದು ಎಂದು ಅವರು ಹೇಲಿದರು. ಚಾಮುಂಡಿಬೆಟ್ಟ ಟಾರ್ಗೆಟ್ ಆಗಿದೆಯೇ ಎಂಬ ಪ್ರಶ್ನೆಗೆ, ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದು ಇದೇ ಕಾಂಗ್ರೆಸ್ ಸರ್ಕಾರ. ಬೆಟ್ಟವನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವುದು…
ಬೆಂಗಳೂರು: ನಟಿ ಹಾಗೂ ಆ್ಯಂಕರ್ ಅನುಶ್ರೀ ಹಾಗೂ ರೋಷನ್ ಅವರ ಕಲ್ಯಾಣ ಮಹೋತ್ಸವವು ಕಗ್ಗಲಿಪುರದ ಬೈಸ್ವಾನ್ ಲೈನ್ ಸ್ಟುಡಿಯೋಸ್ ತಿಟ್ಟಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದೆ. ಅನುಶ್ರೀ ಅವರ ವಿವಾಹ ಮಹೋತ್ಸವಕ್ಕೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಆಗಮಿಸಿ ಶುಭ ಹಾರೈಸಿದ್ದಾರೆ. ಕೊನೆಗೂ ಅನುಶ್ರೀ ಅವರ ಮದುವೆಯ ಬಗ್ಗೆ ಇದ್ದ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಅನುಶ್ರೀ– ರೋಷನ್ ಅವರ ಮನೆಗಳವರು ಒಪ್ಪಿ ಅದ್ದೂರಿಯಾಗಿ ಮದುವೆ ಮಾಡಿದ್ದಾರೆ. ನಿನ್ನೆಯಿಂದಾನೂ ಅರಿಶಿನ ಶಾಸ್ತ್ರ, ಬಳೆ ಶಾಸ್ತ್ರದಲ್ಲಿ ಅನುಶ್ರೀ ಮಿಂದೆದ್ದಿದ್ದಾರೆ. ರೋಷನ್ ಮೂಲತಃ ಕೊಡಗಿನವರು. ಬೆಂಗಳೂರಿನಲ್ಲಿಯೇ ಉದ್ಯಮಿಯಾಗಿದ್ದಾರೆ. ಇಂದು ಬೆಳಗ್ಗೆ 10.56ಕ್ಕೆ ರೋಷನ್, ಅನುಶ್ರೀ ಅವರಿಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಮನವಿ ಮಾಡಿದ್ದಾರೆ. ಸಾರ್ವಜನಿಕರು ನದಿ, ಹಳ್ಳ, ಕೆರೆಗಳು ದಾಟಬಾರದು. ಹಾಗೆಯೇ ಜಾನುವಾರುಗಳನ್ನು ನದಿ ದಂಡೆ ಅಥವಾ ಹಳ್ಳದ ತಟಕ್ಕೆ ಬಿಡಬಾರದು. ಮಕ್ಕಳು, ವಯೋವೃದ್ಧರ ಸುರಕ್ಷತೆಗಾಗಿ ವಿಶೇಷ ಗಮನ ಹರಿಸಬೇಕು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಈ ವಿಷಯದ ಬಗ್ಗೆ ಅಧಿಕಾರಿಗಳಿಗೂ ಕೂಡ ನಿರ್ದೇಶನ ನೀಡಿದ್ದು, ಅವರು ತಮ್ಮ ತಮ್ಮ ಪ್ರದೇಶಗಳಲ್ಲಿ ಸತತವಾಗಿ ಹಾಜರಿದ್ದು, ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರಬೇಕು. ಸಾರ್ವಜನಿಕರ ಜೀವ ಮತ್ತು ಆಸ್ತಿ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಹಾಗೂ ಕಮಲನಗರ ತಾಲೂಕಿನಲ್ಲಿ ಬುಧವಾರ ಹಾಗೂ ಗುರುವಾರ ಭಾರೀ ಮಳೆಗೆ ಸೇತುವೆಗಳು ಕೊಚ್ಚಿ ಹೋದ ಘಟನೆ ನಡೆದಿದೆ. ಜಿಲ್ಲಾದ್ಯಂತ ಅಧಿಕ ಮಳೆಯಿಂದ ರೈತರು ಬೆಳೆದ ಬೆಳೆಗಳು ಹಾಳಾಗಿದೆ. ಔರಾದ್ ತಾಲ್ಲೂಕು ಹಾಗೂ ಕಮಲನಗರ ತಾಲೂಕಿನ ಭಾರೀ ಮಳೆಯಿಂದಾಗಿ ಹತ್ತಿ, ಉದ್ದು ಮತ್ತು ತೊಗರಿ, ಸೋಯಾ ಬೆಳೆಗೆ ಹೆಚ್ಚಿನ ಹಾನಿಯಾಗಿದೆ. ಇದರಿಂದಾಗಿ ರೈತರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಶೀಘ್ರದಲ್ಲಿ ಬೆಳೆ ಹಾನಿ ಪರಿಹಾರ ಘೋಷಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. ತಾಲೂಕಿನ ಬೆಳಕುಣಿ (ಚೌದ್ರಿ) ಸಮೀಪದ ಸೇತುವೆ ಮಳೆಗೆ ಕುಸಿದಿದೆ ಗ್ರಾಮಕ್ಕೆ ಗ್ರಾಮಲೆಕ್ಕ ಅಧಿಕಾರಿ ಪಂಡಿತ್ ಸಿಂಧೆ ಭೇಟಿ ನೀಡಿದರು. ಔರಾದ್ ತಾಲ್ಲೂಕಿನ ಗ್ರಾಮಗಳ ಮನೆಗಳಿಗೆ ಹಾನಿಯಾಗಿದೆ ಹಾಗೂ ಸೇತುವೆಗಳು ಮುಳುಗಿ, ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಹಾನಿಯಾಗಿರುವ ಗ್ರಾಮಗಳಿಗೆ ತಹಶೀಲ್ದಾರ್ ಮಹೇಶ್ ಪಾಟೀಲ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ…
ಬೆಂಗಳೂರು: ಬಿಎಂಟಿಸಿ ಬಸ್ ಗಳಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಇದೀಗ ಸಾರಿಗೆ ಸಂಸ್ಥೆ ಅಪಘಾತ ತಡೆಗೆ ಕ್ರಮಕೈಗೊಳ್ಳಲು ಮುಂದಾಗಿದೆ. ಇದರಂತೆ ಚಾಲಕರ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಬಸ್ ನಿಗಮವು ಸುಮಾರು 3,000 ಬಿಎಂಟಿಸಿ ಬಸ್ ಮಾರ್ಗಗಳ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದೆ. ಅಪಘಾತಗಳಿಗೆ ಒತ್ತಡ ಕೂಡ ಒಂದು ಪ್ರಮುಖ ಅಂಶ ಹೇಳಲಾಗುತ್ತಿದೆ. ಕೆಲಸದ ಸಮಯದಲ್ಲಿ ಬದಲಾವಣೆ ಇಲ್ಲದಿರುವುದು ಮತ್ತು ಕರ್ತವ್ಯದ ಸಮಯ ಮೀರಿ ಕೆಲಸ ಮಾಡುತ್ತಿರುವುದು ಚಾಲಕರಿಗೆ ಒತ್ತಡ ಹೆಚ್ಚಾಗುವಂತೆ ಮಾಡಿದೆ ಎಂದು ಚಾಲಕರು ಹಾಗೂ ಕಾರ್ಮಿಕ ಸಂಘಟನೆಗಳು ಹೇಳುತ್ತಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಮಧುಗಿರಿ: ಅಬಕಾರಿ ವಿಭಾಗ ವ್ಯಾಪ್ತಿಯ ಮಧುಗಿರಿ ಹಾಗೂ ಕೊರಟಗೆರೆಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಜಪ್ತಾಗಿರುವ ಮದ್ಯ ಹಾಗೂ ಸೆಂದಿಯನ್ನು ಪರಿಸರಕ್ಕೆ ಹಾನಿಯಾಗದಂತೆ ನಾಶಪಡಿಸಲಾಗಿದೆ ಎಂದು ಡಿವೈಎಸ್ ಪಿ ದೀಪಕ್ ಎಸ್.ತಿಳಿಸಿದರು. ತಾಲ್ಲೂಕಿನ ಕಸಬಾ ವ್ಯಾಪ್ತಿಯ ಮಾಡಗನಹಟ್ಟಿ ಬಳಿ ಇರುವ ಪುರಸಭೆಯ ಕಸ ವಿಲೇವಾರಿ ಘಟಕದಲ್ಲಿ ಗುರುವಾರ ಅಧಿಕಾರಿಗಳ ಸಮ್ಮುಖದಲ್ಲಿ ಮದ್ಯ ಹಾಗೂ ಸೆಂದಿ ನಾಶಪಡಿಸಿ ಮಾತನಾಡಿದ ಅವರು, ಅಬಕಾರಿ ಉಪಯುಕ್ತರ ಆದೇಶದಂತೆ ಮಧುಗಿರಿ ವಲಯ ವ್ಯಾಪ್ತಿಯಲ್ಲಿ ಪೊಲೀಸ್ ಹಾಗೂ ಅಬಕಾರಿಯಲ್ಲಿ ವಿವಿಧ 14 ಪ್ರಕರಣಗಳಲ್ಲಿ ಜಪ್ತಾದಂತ 1110 ಲೀಟರ್ ಸೆಂದಿ 36 ಲೀಟರ್ ಐಎಂಎಲ್, 32 ಲೀ ಬಿಯರ್ ಅದೇ ರೀತಿ ಕೊರಟಗೆರೆ ವಲಯ ವ್ಯಾಪ್ತಿಯಲ್ಲಿ ದಾಖಲಾದ 3 ಪ್ರಕರಣಗಳಲ್ಲಿ 147 ಲೀಟರ್ ಬಿಯರ್ ಹಾಗೂ 3 ಲೀಟರ್ ಐಎಂಎಲ್ ಅಕ್ರಮ ಮದ್ಯ ನಾಶಪಡಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಅಬಕಾರಿ ನಿರೀಕ್ಷಕರಾದ ನಾಗರಾಜು ಹೆಚ್.ಕೆ. ಶ್ರೀಲತಾ ಬಿ., ಕೆ.ಎಸ್.ಬಿ.ಸಿ.ಎಲ್. ಡಿಪೋ ಮ್ಯಾನೇಜರ್ ವೀರರೆಡ್ಡಿ, ಅಬಕಾರಿ ಉಪ ನಿರೀಕ್ಷಕರಾದ ಮನು ಬಿ.ಜೆ., ಪ್ರಭಾಕರ್,…
ಸರಗೂರು: ಮೈಸೂರು ವಿಭಾಗದ ನಾಯಕ ಸಮುದಾಯದ ಪ್ರಭಾವಿ ನಾಯಕರು, ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದುರವರಿಗೆ ಸಚಿವ ಸ್ಥಾನ ನೀಡಬೇಕೆಂದು ರಾಜ್ಯದ ಕಾಂಗ್ರೆಸ್ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರನ್ನು ಹಾದನೂರು ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯೆ ಭಾಗ್ಯಕೇಂಪಸಿದ್ದ ಒತ್ತಾಯಿಸಿದ್ದಾರೆ. ಹೆಚ್.ಡಿ.ಕೋಟೆಕ್ಷೇತ್ರದಲ್ಲಿ ಅತ್ಯಧಿಕ ಮತಗಳಿಂದ ಸತತ ಎರಡನೇ ಬಾರಿ ಭರ್ಜರಿ ಜಯಗಳಿಸಿ ಜನ ಸಾಮಾನ್ಯರೊಡನೆ ಬೆರೆತು, ಕ್ಷೇತ್ರದ ಅಭಿವೃದ್ಧಿಗಾಗಿ 7 ವರ್ಷಗಳಿಂದ ಶ್ರಮಿಸಿ ಕ್ಷೇತ್ರದ ಮನೆ ಮಗನಾಗಿದ್ದಾರೆ. ತಾಲ್ಲೂಕಿನ ಹಳ್ಳಿ-ಹಳ್ಳಿಗಳನ್ನೂ ಸುತ್ತಿ, ಕಾಡಂಚಿನ ಕಟ್ಟಕಡೆಯ ಗ್ರಾಮಗಳ ಜನರ ಕುಂದುಕೊರತೆಗಳನ್ನೂ ಆಲಿಸಿ, ಅವುಗಳನ್ನು ವಿಧಾನಸಭೆ ಕಲಾಪಗಳಲ್ಲಿ ಪ್ರಸ್ತಾಪಿಸಿ, ಚರ್ಚಿಸಿ, ಸರ್ಕಾರದ ಗಮನಕ್ಕೆ ತಂದು ಸರ್ಕಾರದಿಂದ ಹೆಚ್ಚು ಅನುದಾನ ತಂದು ತಾಲ್ಲೂಕಿನ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು, ಪ್ರತಿಯೊಂದು ಚುನಾವಣೆಯಲ್ಲೂ ಗೆಲುವು ಸಾಧಿಸಿ ಕೋಟೆಯನ್ನು ಕಾಂಗ್ರೆಸ್ ಪಕ್ಷದ ಭದ್ರಕೋಟೆಯನ್ನಾಗಿ ರೂಪಿಸಿದ್ದಾರೆ. ಆದ್ದರಿಂದ ಹಿಂದುಳಿದ ತಾಲ್ಲೂಕಾಗಿರುವ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕಾದರೆ ಅನಿಲ್ ಅವರಿಗೆ ಸಚಿವ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಆರ್ ಎಸ್ ಎಸ್ ಗೀತೆ ಹಾಡಿದ್ದು ತಪ್ಪು. ಆದರೆ, ಕ್ಷಮೆ ಕೇಳಿರುವುದರಿಂದ ಎಲ್ಲವೂ ಮುಗಿದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಹಾಗೆ ಹೇಳಬಾರದಿತ್ತು ಹೇಳಿದ್ದಾರೆ. ಆರ್ ಎಸ್ ಎಸ್ ಗೀತೆ ಹೇಳಿದೆ ಮೇಲೆ ಅವರು ಕ್ಷಮೆ ಕೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು. ಕ್ಷಮೆ ಕೇಳಿದ ಮೇಲೆ ಮುಗೀತು. ಪದೇ ಪದೇ ಅದನ್ನ ಎತ್ತಿ ಹಿಡಿಯೋದು ಬೇಡ. ಇದೀಗ ಅದು ಮುಗಿದ ಅಧ್ಯಾಯ. ಮತ್ತೆ ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಮುಂದೆ ಯಾರೂ ಹೀಗೆ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಆರ್ ಎಸ್ ಎಸ್ ನ ಗೀತೆಯ ಕೆಲವು ಸಾಲುಗಳನ್ನು ಹಾಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…