Subscribe to Updates
Get the latest creative news from FooBar about art, design and business.
- ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
- ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
- ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
- ಇಪಿಎಫ್ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
- ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
- ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
- ಸರಗೂರು: 9ನೇ ವಾರ್ಡ್ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
- ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
Author: admin
ನಾನು ಈ ಲೇಖನವನ್ನು ಬರೆಯುತ್ತಿರುವ ಸಂದರ್ಭದಲ್ಲಿ ಈ ಹಿಂದೆ ಆತ್ಮಗಳಿಗೆ ಸಂಬಂಧಿಸಿದಂತೆ ಯಾವ ಲೇಖನವನ್ನೂ ಓದಿರುವುದಿಲ್ಲ ಎಂದು ಸ್ಪಷ್ಟೀಕರಣ ಮಾಡುತ್ತಾ ಪ್ರಾರಂಭಿಸುತ್ತೇನೆ. ಒಂದು ವೇಳೆ ನನ್ನ ಈ ಲೇಖನದ ಯಾವುದಾದರೂ ಒಂದು ಅಂಶ ಈ ಹಿಂದಿನ ಯಾರದಾದರೂ ಲೇಖನಕ್ಕೆ ಸಂಬಂಧಪಟ್ಟಿರುವುದು ಕಂಡುಬಂದರೆ ಅದು ಕಾಕತಾಳಿಯವಾಗಿರುತ್ತದೆ. ವೈಯಕ್ತಿಕವಾಗಿ ತಿಳಿದಿರುವಂತೆ ನಾನು ಆತ್ಮಗಳಿಗೆ ಸಂಬಂಧಿಸಿದಂತೆ ನಮ್ಮ ಹಿರಿಯರು ಕೆಲವು ಸಂದರ್ಭಗಳಲ್ಲಿ ದೆವ್ವ ಎಂತಲೂ ಕರೆದಿದ್ದಾರೆ, ಇದಕ್ಕೆ ಅವರು ಕೊಡುತ್ತಿದ್ದ ಕಾರಣ ಯಾರಾದರೂ ಬದುಕಿನಲ್ಲಿ ತಮ್ಮದೇ ಕೆಲವು/ಹಲವು ಆಸೆಗಳನ್ನು ಇಟ್ಟುಕೊಂಡು ಆಯಸ್ಸು ತುಂಬುವ ಮೊದಲು ಯಾವುದಾದರೂ ಕಾರಣಕ್ಕೆ, ಅದು ಆತ್ಮಹತ್ಯೆಯಾಗಿರಲೂ ಬಹುದು ಅಥವಾ ಯಾರಿಂದಲಾದರೂ ಸಾವು ಸಂಭವಿಸರಲೂ ಬಹುದು ಈ ಕಾರಣಗಳಿಂದ ಅಸುನೀಗಿದರೆ ಅವರು ಬದುಕಿ ಉಳಿದಿರುವಷ್ಟು ಕಾಲ ಅಸುನೀಗಿದ ಸಮಯದಿಂದ ದೆವ್ವವಾಗಿ (ಅಂತರ ಪಿಶಾಚಿ) ಉಳಿದ ಆಯಸ್ಸನ್ನು ಕಳೆಯಬೇಕಾಗುತ್ತದೆ ಎಂದು ಹೇಳುತ್ತಿದ್ದರು. ನಂತರ ಪುನರ್ಜನ್ಮೋ ಅಥವಾ ಅವರ ಪಾಪದ ಕರ್ಮದನಿಮಿತ್ತ ನರಕವಾಸ ಅಥವಾ ಬೇರೊಂದು ಜೀವಿಯಾಗಿ ಹುಟ್ಟಿ ಶಿಕ್ಷೆ ಅನುಭವಿಸಬೇಕು ಎಂದು ಹಲವು ಸಂದರ್ಭಗಳಲ್ಲಿ…
ಔರಾದ: ಬೀದರ್ ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬೋಸ್ಕೋ ಬೆಂಗಳೂರು ಹಾಗೂ ಡಾನ್ ಬೋಸ್ಕೋ ಬೀದರ್ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಕತ್ವ ಯೋಜನೆಯಡಿಯಲ್ಲಿ ಪಾಲನೆ–ಪೋಷಣೆಯಿಂದ ವಂಚಿತರಾದ ಮಕ್ಕಳಿಗೆ ಸೂಕ್ತ ಪರಿವಾರದ ವ್ಯವಸ್ಥೆ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ. ಇದರಿಂದ ಮಕ್ಕಳು ಮಾನಸಿಕ, ದೈಹಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಡಾನ್ ಬೋಸ್ಕೋ ಬೀದರ್ ಸಂಸ್ಥೆಯ ಪೋಷಕತ್ವ ಯೋಜನೆ ಜಿಲ್ಲಾ ಸಂಯೋಜಕರಾದ ರಮೇಶ್ ಸೂರ್ಯವಂಶಿ ಹೇಳಿದರು. ಶುಕ್ರವಾರ, ತಾಲೂಕಿನ ಸಂತಪೂರ ಗ್ರಾಮದ ದೀಪಾಲಯ ಸಮಾಜ ಸೇವಾ ಸಂಸ್ಥೆಯಲ್ಲಿ ದೀಪಾಲಯ ಸಮಾಜ ಸೇವಾ ಸಂಸ್ಥೆಯ ಸಾಮಾಜಿಕ ಕಾರ್ಯಕರ್ತರು ಮತ್ತು ಆರ್ಬಿಟ್ ಸಂಸ್ಥೆಯ ಔರಾದ ತಾಲೂಕಿನ ಸಾಮಾಜಿಕ ಕಾರ್ಯಕರ್ತರು ಜಂಟಿಯಾಗಿ ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಈ ಸಭೆಯಲ್ಲಿ ಪೋಷಕತ್ವ ಯೋಜನೆ ಕುರಿತು ಕುಲಂಕುಶವಾಗಿ ಮಾಹಿತಿಯನ್ನು ನೀಡಲಾಯಿತು. ಪೋಷಕತ್ವ ಯೋಜನೆಯ ಲಾಭ ಅರ್ಹ ಮಕ್ಕಳಿಗೆ ದೊರೆಯಬೇಕಾದರೆ ಸ್ವಯಂ ಸೇವಾ ಸಂಸ್ಥೆಗಳ ಪಾಲುದಾರಿಕೆ ಬಹು ಮುಖ್ಯವಾಗಿದೆ ಮತ್ತು ತಾವು ತಮ್ಮ ತಮ್ಮ…
ಸರಗೂರು: ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಬಡ ಜನರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಎಸ್ ವಿವೈಎಂ ಸಂಸ್ಥೆ ಉತ್ತಮ ಅವಕಾಶ ಮಾಡಿದ್ದಾರೆ ಎಂದು ಜೆಎಸ್ಎಸ್ ವಿದ್ಯಾ ಸಂಸ್ಥೆಗಳ ಹಾಗೂ ಮೃತ್ಯುಂಜಯಪ್ಪ ಟ್ರಸ್ಟ್ ಅಧ್ಯಕ್ಷೆ ಸುಧಾ ಮೃತ್ಯುಂಜಯಪ್ಪ ಹೇಳಿದರು. ಪಟ್ಟಣದ ವಿವೇಕಾನಂದರ ಯೂತ್ ಮೂವ್ ಮೆಂಟ್ ಆಸ್ಪತ್ರೆ ಆವರಣದಲ್ಲಿ ಶನಿವಾರದಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ವಿವೇಕಾನಂದ ಸ್ಮಾರಕ ಆಸ್ಪತ್ರೆ ಮತ್ತು ವರ್ತಕ ಮಂಡಳಿ ಸರಗೂರು ಲಯನ್ ಕ್ಲಬ್ ಆಫ್ ಸರಗೂರು, ನೋಟರಿ ಕ್ಲಬ್ ಎಚ್.ಡಿ.ಕೋಟೆ, ಜೈನ್ ಮಿಲನ್ ಸರಗೂರು, ರಾಜಸ್ಥಾನ ಸಂಘ, ಲಯನ್ಸ್ ಕ್ಲಬ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಉಂಟಾಗಬೇಕು. ಆರೋಗ್ಯ ತಪಾಸಣೆ ಕಾರ್ಯಕ್ರಮಗಳ ಪ್ರಯೋಜನ ಪ್ರತಿಯೊಬ್ಬರು ಪಡೆದುಕೊಳ್ಳಬೇಕೆಂದು ಎಂದರು. ಅಧುನಿಕ ಜೀವನಶೈಲಿ, ಆಹಾರ ಪದ್ಧತಿ ಹಲವಾರು ರೋಗಗಳಿಗೆ ಕಾರಣವಾಗುತ್ತಿದೆ. ದುಶ್ಚಟಗಳಿಂದ ದೂರವಿದ್ದು, ಆಗಾಗ ನಿಯಮಿತ ರೋಗ ತಪಾಸಣೆಯಿಂದ ಆರೋಗ್ಯಮಯ…
ವೈ.ಎನ್.ಹೊಸಕೋಟೆ: ಹೋಬಳಿಯ ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಪುಷ್ಪವತಿ ಶಿವಣ್ಣ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಮಂಜುಳಾ ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಏಕೈಕ ಮಾತ್ರ ನಾಮಪತ್ರ ಸಲ್ಲಿಸಿದ್ದ ಪುಷ್ಪವತಿ ಶಿವಣ್ಣ ಅವರನ್ನು ಚುನಾವಣಾಧಿಕಾರಿ ತಾಲ್ಲೂಕು ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಕೆ.ಉತ್ತಮ್ ರವರು ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಿದರು. ಈ ವೇಳೆ ನೂತನ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಸ್ವಾತಿ, ಸದಸ್ಯರಾದ ಜ್ಯೋತಿ ಆನಂದ್, ಶೈಲಜಾ, ರಾಮಾಂಜಿನೇಯ, ರವಿ, ಸುಬ್ಬಪ್ಪ, ಚನ್ನ ರೆಡ್ಡಿ, ನರಸಿಂಹಪ್ಪ, ರಾಮರಾಜು, ನಾಗರಾಜು, ರಾಮಾಂಜಿನಮ್ಮ, ಪಿಡಿಒ ಹನುಮಂತರಾಯಪ್ಪ, ಮಾಜಿ ತಾ.ಪಂ. ಸದಸ್ಯರಾದ ರಾಮಸ್ವಾಮಿ, ದಿವಾಕರಪ್ಪ, ಪೂಜಾರಿ ತಿಮ್ಮಯ್ಯ, ಮಾಜಿ ಗ್ರಾ.ಪಂ. ಅಧ್ಯಕ್ಷ ಮಹಾಲಿಂಗಪ್ಪ, ಮುಖಂಡರಾದ ಆನಂದ್ ಕುಮಾರ್, ಗಂಗಪ್ಪ, ರಾಮಾಂಜಿನೇಯ, ಸತ್ಯಪ್ಪ, ಜಯರಾಮ್, ಇಂದ್ರಬೆಟ್ಟ ಶ್ರೀನಿವಾಸ್, ಮತ್ತಿತರರು ಇದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ…
ಪಾವಗಡ: ಪಾವಗಡದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳದಿಂದ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾ ಗಣಪತಿಯ ಶೋಭಯಾತ್ರೆಯನ್ನು ಸೆ.28ರಂದು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಶ್ರೀರಾಮ ಸೇನೆ ಅಧ್ಯಕ್ಷ ಕಾವಲಗೆರೆ ರಾಮಾಂಜಿ ತಿಳಿಸಿದರು ಶುಕ್ರವಾರ ಅರಳಿಕಟ್ಟೆ ಗಣಪತಿ ಬಳಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಬೆಳಗ್ಗೆ 11 ಗಂಟೆಗೆ ಮಧುಗಿರಿ ಊರು ಬಾಗಿಲು ಸಮೀಪದ ಅರಳಿಕಟ್ಟೆಯಿಂದ ಹಿಂದೂ ಮಹಾಗಣಪತಿಯ ಶೋಭಾಯಾತ್ರೆ ಪ್ರಾರಂಭಗೊಳ್ಳಲಿದೆ. ಶೋಭಾಯಾತ್ರೆಯಲ್ಲಿ ಹಿಂದೂ ಫೈರ್ ಬ್ರಾಂಡ್ ಬಸನ ಗೌಡ ಪಾಟೀಲ್ ಯತ್ನಾಳ್, ಚಿತ್ರದುರ್ಗ ಸಂಸದ ಗೋವಿಂದ ಎಂ.ಕಾರಜೋಳ, ಪಾವಗಡ ಶಾಸಕ ಎಚ್.ವಿ.ವೆಂಕಟೇಶ್, ಎಂಎಲ್ಸಿ ಸಿ.ಟಿ. ರವಿ, ಪ್ರತಾಪ್ ಸಿಂಹ, ನಿಖಿಲ್ ಕುಮಾರಸ್ವಾಮಿ, ಚಿದಾನಂದ್ ಎಂ ಗೌಡ, ಹಿಂದೂ ಮುಖಂಡ ಶರಣ್ ಪಂಪ್ವೆಲ್, ರಘು ಸಕಲೇಶಪುರ, ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳು ಭಾಗವಹಿಸಲಿವೆ ಜೊತೆಗೆ ಹತ್ತಕ್ಕೂ ಅಧಿಕ ಕಲಾತಂಡಗಳೊಂದಿಗೆ ವೈಭವ ಶೋಭಯಾತ್ರೆಯನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು. ಬಜರಂಗದಳ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಗುಪ್ತ ಮಾತನಾಡಿ, 28ರ ಭಾನುವಾರ ಬೆಳಗ್ಗೆ 11 ಗಂಟೆಯಿಂದ…
ಶಿರಾ: ಕೆಎಸ್ ಆರ್ ಟಿಸಿ ಬಸ್ ನಿಂದ ಇಳಿಯುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಮಾರಗೊಂಡನಹಳ್ಳಿ ಗ್ರಾಮದ ಬಳಿ ನಡೆದಿದೆ. ಕಾಮಕ್ಕ(64) ಮೃತಪಟ್ಟ ಮಹಿಳೆಯಾಗಿದ್ದಾರೆ. ಗುಡ್ಡದಜೋಗಿಹಳ್ಳಿ ಗ್ರಾಮದ ನಿವಾಸಿಯಾಗಿರುವ ಇವರು ತಮ್ಮ ಮಗಳ ಮನೆಗೆ ಹಬ್ಬಕ್ಕಾಗಿ ಬಂದಿದ್ದರು. ಹಬ್ಬ ಮುಗಿಸಿ ತಮ್ಮ ಮನೆಗೆ ಕೆಎಸ್ ಆರ್ ಟಿಸಿ ಬಸ್ ನಲ್ಲಿ ತೆರಳಿದ್ದರು. ಮಾರಗೊಂಡನಹಳ್ಳಿ ಬಳಿ ಬಸ್ ನಿಂದ ಇಳಿಯಲು ಮುಂದಾಗುತ್ತಿದ್ದಂತೆಯೇ ಚಾಲಕ ಬಸ್ ಮುಂದಕ್ಕೆ ಚಲಾಯಿಸಿದ್ದು, ಪರಿಣಾಮವಾಗಿ ಕಾಮಕ್ಕ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಬಸ್ ಅವರ ಮೇಲೆಯೇ ಹರಿದಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಯಿತು. ಆದರೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಬೀದರ್: ಎನ್ ಡಿಪಿಎಸ್ ಕಾಯ್ದೆಯಲ್ಲಿ ದಾಖಲಾದ ಪ್ರಕರಣದಡಿ ವಶಪಡಿಸಿಕೊಂಡಿದ್ದ 1,34,45,238 ರೂ. ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ ಗುರುವಾರ ಭಾಲ್ಕಿ ತಾಲ್ಲೂಕಿನ ಧನ್ನೂರ್ ಗ್ರಾಮದಲ್ಲಿರುವ ಇನ್ನೆರೋ ಬಯೋಟಿಕ್ ಜೈವಿಕ ತ್ಯಾಜ್ಯ ವಿಲೇವಾರಿ ಘಟಕದ ಕುಲುಮೆಯಲ್ಲಿ ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದ ಗಾಂಜಾ, ಗುಳಿಗೆ, ಸಿರಫ್ ಬಾಟಲ್, MDMA, ಮಾದಕ ದ್ರವ್ಯವನ್ನು ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮಿಟಿಯೊಂದಿಗೆ ಜತೆಗೂಡಿ ನಿಯಮಾನುಸಾರವಾಗಿ ನಾಶಗೊಳಿಸಲಾಯಿತು ಎಂದು ಅವರು ಹೇಳಿದ್ದಾರೆ. ಸುಮಾರು 16 ಪ್ರಕರಣಗಳಲ್ಲಿ ವಶಕ್ಕೆ ಪಡೆದ ಒಟ್ಟು 1,34,45,238 ರೂ. ಮೌಲ್ಯದ 84 ಕೆ.ಜಿ.ಕ್ಕಿಂತಲೂ ಹೆಚ್ಚು ಗಾಂಜಾ, ಗುಳಿಗೆ, ಸಿರಫ್ ಬಾಟಲ್ ಹಾಗೂ MDMA ಅನ್ನು ನಾಶಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ಜಾತಿವಾರು ಸಮೀಕ್ಷೆ ಆರಂಭವಾಗಿ ಐದನೇ ದಿನಕ್ಕೆ ಕಾಲಿಟ್ಟಿದ್ದರೂ ತುಮಕೂರು ಜಿಲ್ಲೆಯಲ್ಲಿ ಮಾತ್ರ ಮುಂದೆ ಸಾಗುತ್ತಿಲ್ಲ. ಇತರ ಜಿಲ್ಲೆಗಳಿಗಿಂತ ಸಾಕಷ್ಟು ಹಿಂದೆ ಉಳಿದಿದ್ದು, ಆಮೆ ವೇಗದಲ್ಲಿ ನಡೆಯುತ್ತಿದೆ. ತಾಂತ್ರಿಕ ಸಮಸ್ಯೆ ಶುಕ್ರವಾರ ಸಹ ಮುಂದುವರಿದಿದ್ದು, ಸಮೀಕ್ಷೆಗೆ ತೆರಳಿದ್ದ ಶಿಕ್ಷಕರು ಕೆಲವು ಕಡೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆ ವರೆಗೂ ಒಂದೂ ಮನೆಯ ಸಮೀಕ್ಷೆ ಮಾಡಲು ಸಾಧ್ಯವಾಗಿಲ್ಲ. ಸಮೀಕ್ಷೆ ಮಾಡಲೇಬೇಕು ಎಂದು ಶಿಕ್ಷಕರ ಮೇಲೆ ಅಧಿಕಾರಿಗಳು ನಿರಂತರವಾಗಿ ಒತ್ತಡ ಹಾಕುತ್ತಲೇ ಇದ್ದಾರೆ. ಆದರೆ ಸಮೀಕ್ಷೆ ಸಾಧ್ಯವಾಗದೆ ಸಾಕಷ್ಟು ಮಂದಿ ಕೈಚೆಲ್ಲಿ, ಅಸಹಾಯಕರಾಗಿ ಕುಳಿತಿದ್ದಾರೆ. ಮೊದಲು ತಾಂತ್ರಿಕ ಸಮಸ್ಯೆ ಬಗೆಹರಿಸಿ. ನಂತರ ಸಮೀಕ್ಷೆ ಮಾಡುವಂತೆ ಹೇಳಿ. ಆಗ ಕೆಲಸ ಮಾಡುತ್ತೇವೆ. ಸಮಸ್ಯೆ ಇದ್ದರೂ ಸುಮ್ಮನೆ ಸಮೀಕ್ಷೆ ಮಾಡಿ ಎಂದರೆ ಹೇಗೆ? ಬೆಳಿಗ್ಗೆಯಿಂದ ಸಂಜೆ ವರೆಗೂ ಪ್ರಯತ್ನಿಸಿದರೂ ಒಂದು ಕುಟುಂಬದ ಸಮೀಕ್ಷೆ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ಆದರೆ ಕೆಲಸದಲ್ಲಿ ತೊಡಗಿಸಿಕೊಂಡಿಲ್ಲ ಎಂದು ಹೇಳಿ ನೋಟಿಸ್ ಕೊಡಲು ಮುಂದಾಗಿದ್ದಾರೆ. ಇದು ಯಾವ ರೀತಿಯ ನ್ಯಾಯ ಅಂತ ಶಿಕ್ಷಕರು ಪ್ರಶ್ನಿಸಿದ್ದಾರೆ…
ಶ್ರೀರಂಗಪಟ್ಟಣ: ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್ ಎಸ್) ಬೃಂದಾವನ ಉದ್ಯಾನದ ಆವರಣದಲ್ಲಿ ನಡೆದ ಐತಿಹಾಸಿಕ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಶುಕ್ರವಾರ ಸಂಜೆ ಚಾಲನೆ ನೀಡಿದರು. 10 ಸಾವಿರಕ್ಕೂ ಹೆಚ್ಚು ನೆರೆದಿದ್ದ ಭಕ್ತರ ಸಮ್ಮುಖದಲ್ಲಿ ಮೊದಲಿಗೆ ದಕ್ಷಿಣ ಭಾರತ ಶೈಲಿಯಲ್ಲಿ ಸ್ಥಳೀಯ ಪುರೋಹಿತರ ತಂಡ ಆರತಿ ಬೆಳಗಿತು. ಆನಂತರ ವಾರಣಾಸಿಯಿಂದ ಬಂದಿದ್ದ 13 ಜನ ಪುರೋಹಿತರ ತಂಡ ಆರತಿ ಬೆಳಗಿತು. ನಾಡಿನ ಜೀವನದಿ, ನಮ್ಮೆಲ್ಲರ ತಾಯಿ ಕಾವೇರಿಗೆ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆರತಿ ಬೆಳಗುವ ಈ ದಿವ್ಯ ಕ್ಷಣವು ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ನಡೆಯುವ ಗಂಗಾ ಆರತಿಯನ್ನೇ ಮೀರಿಸುವಂತೆ ಭಾವಿಸಿತು. “ಕಾವೇರಿ ಆರತಿಯನ್ನು ಬರೀ ಧಾರ್ಮಿಕ ಕಾರ್ಯಕ್ರಮವಾಗಿ ರೂಪಿಸಿಲ್ಲ. ನಮ್ಮೆಲ್ಲರನ್ನು ಕಾಪಾಡುವ ಕಾವೇರಿ ತಾಯಿಗೆ ಗೌರವ ಸಲ್ಲಿಸುವ, ಪ್ರಾರ್ಥನೆ ಸಲ್ಲಿಸುವ ಕಾರ್ಯಕ್ರಮವಾಗಿ ರೂಪಿಸಿದ್ದೇವೆ. ಇದನ್ನು ಯಾವುದೇ ತೊಂದರೆ ಬಂದರೂ ನಿಲ್ಲಿಸಲು ಸಾಧ್ಯವಿಲ್ಲ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು…
ಸರಗೂರು: ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬರುತ್ತಿದ್ದೇವೆ. ಅದರ ಜೊತೆಯಲ್ಲಿ ಗ್ರಾಮದಲ್ಲಿ ವಯಸ್ಸಾದ ಹಿರಿಯರಿಗೆ ಸಹಾಯಧನ ಟ್ರಸ್ಟ್ ವತಿಯಿಂದ ಮಾಡುತ್ತಿದ್ದೇವೆ ಎಂದು ವಿಷ್ಣು ಸೇನಾ ಟ್ರಸ್ಟ್ ಅಧ್ಯಕ್ಷ ಬಿ.ವಿ.ರವಿ ತಿಳಿಸಿದರು. ತಾಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ವಿಷ್ಣುಸೇನಾ ಟ್ರಸ್ಟ್ ವತಿಯಿಂದ ಗುರುವಾರದಂದು ವಿಷ್ಣು ಸೇನಾ ಟ್ರಸ್ಟ್ ಕಛೇರಿಯ ಕಟ್ಟಡದ ಗುದ್ದಲಿ ಪೂಜೆಯನ್ನು ಗ್ರಾಮದ ಯಜಮಾನರು ಮತ್ತು ಮುಖಂಡರು ನೆರವೇರಿಸಿದರು. ಬಿದರಹಳ್ಳಿ ಗ್ರಾಮದಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಹೆಸರಿನಲ್ಲಿ ಹುಟ್ಟುಹಬ್ಬ ಹಾಗೂ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಯುವಕರಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವ ನಿಟ್ಟಿನಲ್ಲಿ ಸಹಾಯ ಮಾಡಲು ನಮ್ಮ ಟ್ರಸ್ಟ್ ಸದಸ್ಯರು ಸಮ್ಮುಖದಲ್ಲಿ ಸಮಾಜ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ಕಳೆದೆ ಐದು ವರ್ಷಗಳ ಹಿಂದೆ ಸಂಘ ಮಾಡಿಕೊಂಡು ವಿವಿಧ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ಗ್ರಾಮದ ಅಭಿವೃದ್ಧಿಗೆ ಕೈ ಜೋಡಿಸಿಕೊಂಡು ಹಾಗೂ ಗ್ರಾಮದ ಯಾವುದೇ ಜನಾಂಗದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಹಾಗೂ ಆರೋಗ್ಯದಲ್ಲಿ ಸಮಸ್ಯೆಯಲ್ಲಿ ಇದ್ದವರಿಗೂ ಟ್ರಸ್ಟ್…