Author: admin

ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ಈ ಬಾರಿಯ ಮೈಸೂರು ದಸರಾವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕದ ಒಬ್ಬ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿರುವುದು ಬಹಳ ಸಂತೋಷ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು. ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿರುವ ಪ್ರಗತಿ ಪರ ಚಿಂತಕರು. ಹಾಗಾಗಿ ದಸರಾ ಉದ್ಘಾಟನೆಗೆ ಆಹ್ವಾನ ನೀಡಿದ್ದೇವೆ ಎಂದರು. ಈ ಬಾರಿ 11 ದಿನ ದಸರಾ ನಡೆಯಲಿದೆ. ಸೆಪ್ಟೆಂಬರ್‌ 22ರಿಂದ ದಸರಾ ಆರಂಭ ಆಗಲಿದ್ದು, ಅಕ್ಟೋಬರ್ 2 ರಂದು ವಿಜಯದಶಮಿ ಇದೆ. ಬಾನು ಮುಷ್ತಾಕ್ ಅವರಿಗೆ ಗೌರವದಿಂದ ಜಿಲ್ಲಾಡಳಿತ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಸ್ಪಷ್ಟಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೂಡ್ಲಿಗಿ: ಶ್ರೀಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳನ್ನು, ಸರ್ವರೂ ಸೌಹಾರ್ದತೆಯಿಂದ ಆಚರಿಸುವ ಮೂಲಕ, ಸಮಾಜದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು  ಪೊಲೀಸ್  ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷುಗಿರಿ ತಿಳಿಸಿದರು. ಅವರು ಪಟ್ಟಣದ ಪ್ರವಾಸಿ ಮಂದಿರಲ್ಲಿ ಜರುಗಿದ  ಶ್ರೀಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬ ಶಾಂತಿ ಸಭೆಯಲ್ಲಿ ಮಾತನಾಡಿದರು. ಶ್ರೀಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ತರುವ  ಮೆರವಣಿಗೆ, ಹಾಗೂ ಶ್ರೀಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆ ಮತ್ತು ಮೂರ್ತಿ ವಿಸರ್ಜನೆ ಮಾಡುವ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಆಯೋಜಕರು ಅಗತ್ಯ ಮುಂಜಾಗ್ರತೆ ಅನುಸರಿಸಬೇಕು. ಬೆಂಕಿ , ನೀರು, ವಿದ್ಯುತ್‌ ಅವಘಡಗಳು, ಕೋಮು ಗಲಭೆಗಳು ಗುಂಪು ಘರ್ಷಣೆಗಳು, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ತೀವ್ರ ಎಚ್ಚರವಹಿಸಬೇಕಿದೆ ಎಂದರು. ಹಬ್ಬ  ಸಡಗರ ಸಂಭ್ರಮದಿಂದ ಶಾಂತಿಯುತವಾಗಿ ಜರುಗಿಸುವ ಮೂಲಕ, ಸಾರ್ವಜನಿಕರು ಆಯೋಜಕರು ನಾಗರಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದರು.  ಇಲಾಖೆಯ ನಿಯಮಾವಳಿಗಳನ್ನು , ಆಯೋಜಕರು ಖಡ್ಡಾಯವಾಗಿ ಪಾಲಿಸತಕ್ಕದ್ದು ಎಂದರು. ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ ದೊಡ್ಡಮನೆ ಮಾತನಾಡಿ,  ಶಾಂತಿ…

Read More

ತಿಪಟೂರು: ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು  ದಿವಂಗತ ಮಾಜಿ ಮುಖ್ಯ ಮಂತ್ರಿ ಡಿ.ದೇವರಾಜ್ ಅರಸುರವರ 110 ನೇ ಜನ್ಮ ದಿನೋತ್ಸವ ಅಂಗವಾಗಿ  ಅರಣ್ಯ–ಬಗ‌ರ್ ಹುಕುಂ ಸಾಗುವಳಿದಾರರಿಗೆ “ಒನ್ ಟೈಮ್ ಸೆಟಲ್‌ ಮೆಂಟ್” ಮೂಲಕ “ಭೂಮಿ–ವಸತಿ” ಹಕ್ಕು ಮಾನ್ಯ ಮಾಡುವ “ಸಾಮಾಜಿಕ ನ್ಯಾಯ”ಕ್ಕಾಗಿ ಆಗ್ರಹಿಸಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಸ್ವಾತಂತ್ರ್ಯ ಪೂರ್ವದಿಂದಲೂ ಭೂಮಿಯ ಕನಸು ಕಂಡ ಅದೆಷ್ಟೋ ಜೀತಗಾರರು…. ಇನ್ನೊಬ್ಬರ ಭೂಮಿಯನ್ನೇ ಆಧರಿಸಿ ಗೇಣಿಯಲ್ಲೇ ಜೀವನ ಕಳೆದವರು ಒಪ್ಪತ್ತು ಊಟಕ್ಕಾಗಿಯೇ ಬದುಕು ಸವೆಸುತ್ತಿದ್ದ ಬಡ ಕೂಲಿಕಾರರು….ಇಂಥಹ ಬದುಕಿಗೆ ತರೆ ಎಳೆದು “ಉಳುವವನೇ ಭೂ ಒಡೆಯ” ಕಾನೂನು ಜಾರಿ ಮಾಡುವ ಮೂಲಕ, ಅಂದಿನ ಜನ ಹೋರಾಟಗಳ ಒತ್ತಡದಿಂದಲೂ ಲಕ್ಷಾಂತರ ದಲಿತ-ಹಿಂದುಳಿದ ಸಮುದಾಯಗಳಿಗೆ ಭೂಮಿ ಹಕ್ಕು ದೊರೆಕಿಸಿ ಕೊಟ್ಟ ಕೀರ್ತಿ ಅಂದಿನ ಕಾಂಗ್ರೆಸ್ ಸರ್ಕಾರದ ಕರ್ನಾಟಕ ಮುಖ್ಯ ಮಂತ್ರಿಗಳಾಗಿದ್ದ ದಿವಂಗತ ಡಿ.ದೇವರಾಜ್ ಅರಸ್ ರವರಿಗೆ ಸಲ್ಲುತ್ತದೆ.  ರಾಜ್ಯದಲ್ಲಿ ಭೂಸುದಾರಣಾ ಕಾಯ್ದೆಗೆ ತಿದ್ದುಪಡಿಯ ಮೂಲಕ ಉಳುವವನೇ ಭೂ ಒಡೆಯ…

Read More

ಸರಗೂರು:  ಎನ್.ಕೆ.ರಾಜಣ್ಣರವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರಂತರವಾಗಿ ನಾವುಗಳು ‌ಹೋರಾಟ ಮಾಡುತ್ತೇವೆ  ಎಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ಧಿ ಸಂಘದ ಎಂ.ರಾಮಚಂದ್ರ ಹೇಳಿದರು. ಪಟ್ಟಣದಲ್ಲಿ ಪ್ರವಾಸಿ ಮಂದಿರದಲ್ಲಿ ಗುರುವಾರದಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ಧಿ ಸಂಘದ ಸಮಿತಿ ನೇತೃತ್ವದಲ್ಲಿ ಸಭೆ ನಡೆಸಿದ ನಂತರ ಮಾತನಾಡಿದ ಅವರು,  ಎನ್.ಕೆ.ರಾಜಣ್ಣ ಹಾಗೂ ನಾಗೇಂದ್ರರವರನ್ನು ಸಂಪುಟದಿಂದ ವಜಾಗೊಳಿಸಿರವುದನ್ನು ಖಂಡಿಸಿ ಆ.29 ರಂದು ಮೈಸೂರು ಮತ್ತು ಚಾಮರಾಜನಗರ ನಾಯಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿ ತಾಲೂಕುಗಳಿಗೆ ಭೇಟಿ ಕೊಟ್ಟು ನಮ್ಮ ಸಮಾಜದ ಬಂಧುಗಳಿಗೆ ಆಹ್ವಾನ ಪತ್ರಿಕೆ ನೀಡಿ ಈ ಬೃಹತ್ ಪತ್ರಿಭಟನೆಗೆ  ತಾಲೂಕಿನ ಎಲ್ಲಾ ಗ್ರಾಮಗಳಿಗೆ ಕರಪತ್ರ ಹಂಚಿ ಹೆಚ್ಚಿನ ಜನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು. ಪ್ರತಿಭಟನೆಯಲ್ಲಿ ಮೈಸೂರಿನ ಟೌನ್ ಹಾಲ್ ಬಳಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಪ್ರತಿಭಟನೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ನಾಯಕ ಸಮಾಜದ ಮುಖಂಡರು ಭಾಗವಹಿಸುತ್ತಿದ್ದಾರೆ. ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ…

Read More

ಬೆಂಗಳೂರು: ಕರಾವಳಿ ಮೂಲದ ನಿರೂಪಕಿ, ನಟಿ ಅನುಶ್ರೀ ಅವರು ಕೊಡಗು ಮೂಲದ ರೋಷನ್ ಜೊತೆಗೆ ಶೀಘ್ರವೇ ವಿವಾಹವಾಗಲಿದ್ದಾರೆ. ವರದಿಗಳ ಪ್ರಕಾರ ಆ.28ರಂದು ಅನುಶ್ರೀ ಹಾಗೂ ರೋಷನ್ ಸಪ್ತಪದಿ ತುಳಿಯಲಿದ್ದಾರೆ. ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಈ ಮದುವೆ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10:56 ಶುಭ ಮುಹೂರ್ತದಲ್ಲಿ ಅನುಶ್ರಿ ರೋಷನ್‌ ಅವರ ಕೈ ಹಿಡಿಯಲಿದ್ದಾರೆ. `ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ’ ಎಂದು ಅನುಶ್ರೀ ಆಮಂತ್ರಣ ಪತ್ರಿಕೆಯಲ್ಲಿ ಬರೆಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್: ಡಾ.ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೆ ವಿಶೇಷ ಅನುದಾನ ಮಂಜೂರು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್. ಸಿ ಮಹಾದೇವಪ್ಪ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸಚಿವರನ್ನು ಭೇಟಿ ಮಾಡಿದ ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ಅವರ ಮನವಿಗೆ ಸ್ಪಂದಿಸಿ ಅವರು ಈ ಆಶ್ವಾಸನೆ ನೀಡಿದರು. ಚಿಕ್ಕಪೇಟೆಯ ಸರ್ವೇ ಸಂಖ್ಯೆ 61 ರಲ್ಲಿ ಭವನ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ ಒಂದು ಎಕರೆ ಜಮೀನು ಒದಗಿಸಿದೆ. 12 ವರ್ಷ ಗಳ ಹಿಂದೆ ರೂ.50 ಲಕ್ಷ ಅನುದಾನ ಕೂಡ ಮಂಜೂರು ಮಾಡಿದೆ. ಆದರೆ ಈ ಅನುದಾನದಲ್ಲಿ ಭವನ ನಿರ್ಮಾಣ ಅಸಾಧ್ಯವಾಗಿದೆ ಎಂದು ಜಾನಸನ್ ಘೋಡೆ ಸಚಿವರ ಗಮನ ಸೆಳೆದರು. ಭವನ ನಿರ್ಮಾಣದಿಂದ ಜಿಲ್ಲಾ ಕೇಂದ್ರದಲ್ಲಿ ವಾಸಿಸುವ ದೀನ ದಲಿತರು ಹಾಗೂ ಬಡವರಿಗೆ ಸಭೆ ಸಮಾರಂಭ ಹಾಗೂ ಇತರ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ. ಹೀಗಾಗಿ ಭವನಕ್ಕೆ ರೂ.5 ಕೋಟಿ ವಿಶೇಷ ಅನುದಾನ ಕಲ್ಪಿಸಬೇಕು ಎಂದು ಮನವಿ ಮಾಡಿದರು.  ನಮ್ಮ ಮನವಿಗೆ…

Read More

ನವದೆಹಲಿ: ಕ್ಯಾನ್ಸರ್ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಇಮ್ಯೂನೋಥೆರಪಿಗೆ ಬಳಸುವ ಔಷಧಗಳ ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ವಿನಾಯಿತಿ ನೀಡುವಂತೆ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಈ ಔಷಧಗಳ ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕಕ್ಕೆ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವುದಾಗಿ ಮಂಜುನಾಥ್ ಅವರು ಹೇಳಿದ್ದಾರೆ. ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಹಣಕಾಸು ಸಚಿವರು, ಆದಷ್ಟು ಬೇಗ ಈ ಬಗ್ಗೆ ಕ್ರಮ ವಹಿಸುವ ಭರವಸೆ ನೀಡಿದ್ದಾರೆ ಎಂದು ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸರಗೂರು:  ಶಾಸಕ ಕೆ.ಎನ್‌.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಸಮಾಜದವತಿಯಿಂದ ಆ.29ರಂದು ಪ್ರತಿಭಟನೆ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಅವರ ನೇತೃತ್ವದಲ್ಲಿ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಪಟ್ಟಣದ 9 ವಾರ್ಡ್ ನ ಚಿಕ್ಕ ದೇವಮ್ಮ ಕಲ್ಯಾಣ ಮಂಟಪದಲ್ಲಿ ಗುರುವಾರದಂದು ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನ ನಾಯಕ ಸಮಾಜದ ಸಂಘದ ವತಿಯಿಂದ ಹಮ್ಮಿಕೊಂಡಿದ್ದು, ಶಾಸಕ ಎನ್.ಕೆ.ರಾಜಣ್ಣರವರ ಸಚಿವ ಸ್ಥಾನ ನೇಮಕ ಮಾಡಿಕೊಡಕೊಳ್ಳಬೇಕು, ಪೂರ್ವಭಾವಿ ಸಭೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಜಯಪ್ರಕಾಶ್ ಮಾತನಾಡಿ, ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದರು. ‘ವಾಲ್ಮೀಕಿ ನಾಯಕ ಸಮಾಜದ ಪ್ರಭಾವಿ ನಾಯಕರಾದ ರಾಜಣ್ಣ ಸಹಕಾರ ಸಚಿವರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದರು. ಯಾವುದೇ ನೋಟೀಸ್ ನೀಡದೆ ಕಾಂಗ್ರೆಸ್ ಹೈಕಮಾಂಡ್ ವಜಾ ಮಾಡಿರುವುದನ್ನು ಸಮಾಜ ಖಂಡಿಸುತ್ತದೆ’ ಎಂದರು. ‘ಮುಖ್ಯಮಂತ್ರಿಗಳ ಬೆನ್ನೆಲುಬಾಗಿದ್ದರು ಎಂಬ ಕಾರಣದಿಂದ ಅವರನ್ನು ವಜಾ ಮಾಡಲಾಗಿದೆ. ನಾಯಕ ಸಮಾಜದಿಂದ…

Read More

ಬೆಂಗಳೂರು: ಬಿಎಂಟಿಸಿ ಬಸ್ ಹರಿದು 10 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್ ಬಳಿ ಗುರುವಾರ ನಡೆದಿದೆ. ತನ್ವಿ (10) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಮಿಲೆನಿಯಂ ಸ್ಕೂಲ್‌ ನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತನ್ವಿ,  ತನ್ನ ತಾಯಿ ಹರ್ಷಿತಾ ಜೊತೆಗೆ ಸ್ಕೂಟಿಯಲ್ಲಿ  ಸ್ಕೂಲ್‌ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಯಲಹಂಕದ ಕೋಗಿಲು ಮುಖ್ಯ ರಸ್ತೆ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ  ಹರ್ಷಿತಾ ಅವರು ಚಲಾಯಿಸುತ್ತಿದ್ದ ಸ್ಕೂಟಿ ಸ್ಕಿಡ್ ಆಗಿದೆ.  ಈ ವೇಳೆ ವಾಹನದಿಂದ ಕೆಳಗೆ ಬಿದ್ದ ಬಾಲಕಿಯ ತಲೆ ಮೇಲೆ ಬಿಎಂಟಿಸಿ ಬಸ್ ಚಕ್ರ ಹರಿದಿದ್ದು, ಬಾಲಕಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾಳೆ. ಘಟನೆ ಬೆನ್ನಲ್ಲೇ ಯಲಹಂಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಬಿಎಂಟಿಸಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ಸರಗೂರು: ಪಟ್ಟಣದ ನಾಲ್ಕನೇ ವಾರ್ಡಿನಲ್ಲಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಸಮುದಾಯದ ಭವನದಲ್ಲಿ ಬುಧವಾರ ಲೋಕಾಯುಕ್ತ ಪೊಲೀಸರಿಂದ ಆಯೋಜಿಸಿದ್ದ ಸಾರ್ವಜನಿಕ ಕುಂದು ಕೊರತೆಗಳ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಕಳೆದ ಸಭೆಯಲ್ಲಿ ಪಡೆದ ಅರ್ಜಿಗಳಿಗೆ ಕೈಗೊಂಡ ಕ್ರಮದ ಬಗ್ಗೆ ತಿಳಿಸುವಂತೆ ಒತ್ತಾಯಿಸಿ ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು. ಕಂದಾಯ ಇಲಾಖೆ, ಗ್ರಾಪಂಗಳ ವಿರುದ್ಧ ಸಾರ್ವಜನಿಕರು ಹಾಗೂ ರೈತರಿಂದ ಸಾಲು ಸಾಲು ದೂರುಗಳ ಸುರಿಮಳೆಯಾಗಿದೆ.  ನಂತರ ಸಭೆ ಪ್ರಾರಂಭವಾಗಿ ಸಾರ್ವಜನಿಕರಿಂದ ಕುಂದು ಕೊರತೆಗಳ ದೂರು ಸ್ವೀಕಾರ ಮಾಡಲಾಯಿತು. ಮನುಗನಹಳ್ಳಿ ಗ್ರಾ.ಪಂ. ಲಂಕೆ ರಮೇಶ್ ಮಾತನಾಡಿ ನಮ್ಮ ದೊಡ್ಡಪ್ಪನ ಹೆಸರಿನಲ್ಲಿ ಜಮೀನು ಇದೆ. ಅದರೆ ಅದನ್ನು ಬೇರೆಯವರಿಗೆ ಮಾಡಿದ್ದಾರೆ ಎಂದು ಆರೋಪಿಸಿದರು. ಕಳೆದ ಸಭೆಯಲ್ಲಿ ಈ ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿದರೂ ಯಾವುದೇ ಕಂದಾಯ ಇಲಾಖೆ ಬಂದಿಲ್ಲ ಎಂದರು. ಪೌತಿಖಾತೆ ಮಾಡಲು ಹಾಗೂ ನೆಮ್ಮದಿ ಕೇಂದ್ರದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಹಣವನ್ನು ಪಡೆಯಲಾಗುತ್ತಿದೆ. ಸ್ವಾಧೀನದಲ್ಲಿದ್ದು 53 ಮತ್ತು 57…

Read More