Subscribe to Updates
Get the latest creative news from FooBar about art, design and business.
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
Author: admin
ನವದೆಹಲಿ: ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಮೃತಪಟ್ಟ ದಾರುಣ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಸತತ ಮಳೆಯಿಂದ ಹುಮಾಯೂನ್ ಸಮಾಧಿಯ ಹಿಂದೆ ಇರುವ ಫತೇಹ್ ಶಾ ಎಂಬ ದರ್ಗಾದ ಗೋಡೆ ಮತ್ತು ಛಾವಣಿಯ ಒಂದು ಭಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಪರಿಣಾಮ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಮಧ್ಯಾಹ್ನ 3:55ಕ್ಕೆ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಬಗ್ಗೆ ಮಾಹಿತಿ ಬಂದಿದ್ದು, ತಕ್ಷಣ ಸ್ಥಳಕ್ಕೆ ದೌಡಾಯಿಸಿದ ನಿಜಾಮುದ್ದೀನ್ ಪೊಲೀಸ್ ಠಾಣೆಯ ಎಸ್ ಎಚ್ ಒ ಮತ್ತು ಸ್ಥಳೀಯ ಪೊಲೀಸ್ ತಂಡ ರಕ್ಷಣಾ ಕಾರ್ಯ ಕೈಗೊಂಡಿದೆ. ಬಳಿಕ ಅಗ್ನಿಶಾಮಕ ದಳ, ಸಿಎಟಿ ಆಂಬ್ಯುಲೆನ್ಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡ ಕೂಡ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ಸೇರಿಕೊಂಡಿತು. ಇಲ್ಲಿಯವರೆಗೆ 11 ಜನರನ್ನು ಅವಶೇಷಗಳಿಂದ ರಕ್ಷಿಸಲಾಗಿದೆ. ಗಾಯಾಳುಗಳನ್ನು ಏಮ್ಸ್ ಟ್ರಾಮಾ ಸೆಂಟರ್ ಮತ್ತು ಲೋಕ ನಾಯಕ್ ಆಸ್ಪತ್ರೆ (ಎಲ್ಎನ್ಜೆಪಿ) ಸೇರಿದಂತೆ…
ನೆಲಮಂಗಲ: ಕುರಿ, ಮೇಕೆ ತುಂಬಿದ್ದ ಲಾರಿಗೆ KSRTC ಬಸ್ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗಿನ ಜಾವ 3.30 ಸಮಯದಲ್ಲಿ ಸಂಭವಿಸಿದೆ. ಭೀಕರ ರಸ್ತೆ ಅಪಘಾತದಲ್ಲಿ ಲಾರಿಯಲ್ಲಿದ್ದ ಸೀನಪ್ಪ(50), ನಜೀರ್ ಅಹ್ಮದ್(36), ಆನಂದ್(42) ಮೃತರಾಗಿದ್ದಾರೆ. ಕುರಿ, ಮೇಕೆ ತುಂಬಿಕೊಂಡು ಮುಧೋಳದಿಂದ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ಲಾರಿ ತೆರಳುತ್ತಿತ್ತು. ಟೈಯರ್ ಪಂಚರ್ ಆಗಿದ್ದರಿಂದ ಲಾರಿಯನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು. ಈ ವೇಳೆ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಲಾರಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ವಾಹನಗಳು ವೇಗ ನಿಯಂತ್ರಣದ ಜತೆಗೆ ರಸ್ತೆ ಅಪಘಾತ ತಪ್ಪಿಸಲೆಂದು ಪಟ್ಟಣದ ವಿವಿಧ ಕಡೆಗಳಲ್ಲಿ ಇರುವ ಸ್ಪೀಡ್ ಬ್ರೇಕರ್ ಅಳವಡಿಸಲಾಗಿತ್ತು, ಆದರೆ ಸ್ಪೀಡ್ ಬ್ರೇಕರ್ ಅಳಿಸಿ ಹೋಗಿ ಇತ್ತೀಚೆಗೆ ಅಪಘಾತಗಳು ಹೆಚ್ಚಾಗಿದ್ದರಿಂದ ನಾವೇ ಸ್ಪೀಡ್ ಬ್ರೇಕರ್ ಗಳಿಗೆ ಬಣ್ಣ ಬಳಿಯುವ ಕಾರ್ಯ ಮುಂದುವರಿಸುತ್ತಿದ್ದೇನೆ ಪ.ಪಂ. ಸದಸ್ಯ ಶ್ರೀನಿವಾಸ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಎಚ್.ಡಿ.ಕೋಟೆ ಮತ್ತು ಬೇಗೂರು ಮುಖ್ಯ ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ ಗಳು ಇದ್ದು, ಸಂಬಂಧ ಪಟ್ಟ ಅಧಿಕಾರಿಗಳು ಸ್ಪೀಡ್ ಬ್ರೇಕರ್ ಗಳಿಗೆ ಬಣ್ಣ ಬಳಿದೆ ಇರುವ ಕಾರಣದಿಂದ ಪಪಂ ಸದಸ್ಯ ಹಾಗೂ ಮುಖಂಡರು ಸ್ವಾತಂತ್ರ್ಯ ದಿನಾಚರಣೆಯಂದು ಬಣ್ಣ ಬಳಿಯುವ ಕೆಲಸ ಮಾಡಿ ಮಾನವೀಯತೆ ಮೆರೆತಿದ್ದಾರೆ. ಇತ್ತೀಚೆಗೆ ಪಟ್ಟಣದಲ್ಲಿ ಸರಕು ಸಾಗಣೆಯಲ್ಲಿ ಹೆಚ್ಚಳವಾಗುತ್ತಿದೆ. ವಾಹನಗಳು ಹಾಗೂ ಬೈಕ್ ಸವಾರರು ಹೆಚ್ಚಾಗಿದ್ದರಿಂದ ಸ್ಪೀಡ್ ಬ್ರೇಕರ್ ಗಳಲ್ಲಿ ಜೀಬ್ರಾ ಕ್ರಾಸ್ ಇಲ್ಲದೆ ಅಪಘಾತಗಳು ಸಂಭವಿಸುತ್ತಿವೆ. ಆದರಿಂದ ನಾವುಗಳು ದಿನನಿತ್ಯ ನೋಡಿಕೊಂಡು ಬರುವುತ್ತಿದ್ದೇವೆ. ಆದರೆ ಅಧಿಕಾರಿಗಳಿಗೆ ಗಮನಕ್ಕೂ ತಂದರೂ ಕೆಲಸ ಮಾಡಿಲ್ಲ ಎಂದು…
ಸರಗೂರು: ವಿದ್ಯಾಭ್ಯಾಸ ಮುಗಿಸಿ ನಂತರವೂ ವಿದ್ಯಾರ್ಥಿಗಳು ತಾವು ಓದಿದ ಪ್ರಥಮ ದರ್ಜೆ ಕಾಲೇಜು ಗುರುಗಳನ್ನು ನೆನಪಿನಲ್ಲಿ ಇಟ್ಟಿಕೊಂಡಿದ್ದಾರೆ ಎಂದರೆ ಇದು ಮಾದರಿ ಕಾರ್ಯ ಎಂದು ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಸ್.ಜೆ.ಪುಟ್ಟರಾಜು ಎಂದರು. ಪಟ್ಟಣದ ಪ್ರಥಮ ದರ್ಜೆ ಕಾಲೇಜು ಎಚ್.ಡಿ.ಕೋಟೆ ಸಭಾಂಗಣದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ದೈಹಿಕ ಶಿಕ್ಷಣ ನಿರ್ದೇಶಕರಾದ ಎಸ್.ಜೆ.ಪುಟ್ಟರಾಜುರವರಿಗೆ ಅಭಿವಂದನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕಲಿಕೆ ಶ್ರೇಷ್ಠ ಮಟ್ಟದಲ್ಲಿ ಇರಬೇಕು ಎಂಬುದಕ್ಕಾಗಿ ಗುರುಗಳು ದಂಡಿಸುತ್ತಾರೆ. ಬಾಲ್ಯದಲ್ಲಿ ತಿದ್ದದೇ, ತಪ್ಪಿಗೆ ಶಿಕ್ಷೆ ನೀಡಿದೇ ಕಲಿಸುವ ಶಿಕ್ಷಣವು ನಿಜವಾದ ಶಿಕ್ಷಣವೇ ಅಲ್ಲ. ವಿದ್ಯಾರ್ಥಿಗಳು ಬದುಕು ಹಸನಾಗಲಿ ಎಂದು ಮಾತ್ರ ಶಿಕ್ಷಕರು ಬಯಸುತ್ತಾರೆ. ಈ ನಿಟ್ಟಿನಲ್ಲಿ ಇಂದಿನ ಶಿಕ್ಷಣ ಪಾಲಕರ ಸಂಬಂಧ ಉನ್ನತೀಕರಣಗೊಳ್ಳಬೇಕು ಎಂದರು. 15 ವರ್ಷಗಳ ಹಿಂದೆ ನಮ್ಮಿಂದ ಪಾಠ ಕೇಳಿದ ಮಕ್ಕಳು ಇಂದು ಉನ್ನತ ಮಟ್ಟದ ಸ್ಥಾನಗಳಲ್ಲಿ ಇದ್ದಾರೆ. ಇನ್ನೂ ಕೆಲವರು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರೆಲ್ಲರು ಒಂದೆಡೆ ಸೇರಿ…
ತುಮಕೂರು: ನಗರದ ಸತ್ಯಮಂಗಲದ ಪ್ರತಿಷ್ಠಿತ ಜೈನ್ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಒಂದು ಗೂಡಿ ಬಹಳ ವಿಜೃಂಭಣೆಯಿಂದ ಭಕ್ತಿಪೂರ್ವಕವಾಗಿ ಪೂಜಾ ಕಾರ್ಯಕ್ರಮವನ್ನು ನಡೆಸಲಾಯಿತು. ಇದೇ ಸಂದರ್ಭದಲ್ಲಿ ಪ್ರಾಂಶುಪಾಲರಾದ ಎನ್.ವರುಣ್ ಕುಮಾರ್, ಉಪನ್ಯಾಸಕರಾದ ಪ್ರಶಾಂತ್, ಹರೀಶ್ ಕುಮಾರ್, ಟಿ.ಜಿ.ನಾಗಲಕ್ಷ್ಮಿ, ಭವ್ಯ, ನಂದಿನಿ, ಮುಂತಾದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಆರೋಗ್ಯವಂತರಾಗಿರಲು ಚೆನ್ನಾಗಿ ನಿದ್ದೆ ಮಾಡಬೇಕು ಅಂತ ವೈದ್ಯರು ಹೇಳುತ್ತಾರೆ. ಆದರೆ ಅತಿಯಾಗಿ ನಿದ್ದೆ ಮಾಡಿದರೂ ಆರೋಗ್ಯಕ್ಕೆ ಹಾನಿಕಾರಕವಂತೆ. ಅತಿಯಾದ ನಿದ್ದೆಯಿಂದಾಗುವ ಅಡ್ಡಪರಿಣಾಮಗಳು ಯಾವುದು ನಿಮಗೆ ಗೊತ್ತಾ? ತಜ್ಞರು ಮನುಷ್ಯನ ನಿದ್ದೆಯ ಬಗ್ಗೆ ನೀಡಿರುವ ವಿವರವಾದ ಮಾಹಿತಿ ಇಲ್ಲಿದೆ. ಪ್ರತಿ ರಾತ್ರಿ 9 ಗಂಟೆಗಳಿಗಿಂತ ಹೆಚ್ಚು ನಿದ್ರೆ ಮಾಡುವವರಿಗೂ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂದು ತಜ್ಞರು ಹೇಳುತ್ತಾರೆ. ರಾತ್ರಿ 7 ಗಂಟೆಗಳಿಗಿಂತ ಕಡಿಮೆ ಸಮಯ ನಿದ್ರೆ ಮಾಡುವ ಜನರಿಗೆ ಅಕಾಲಿಕ ಮರಣದ ಅಪಾಯವು ಶೇಕಡಾ 14 ರಷ್ಟು ಹೆಚ್ಚಾಗಿದೆ ಎಂದು ಹಲವಾರು ಅಧ್ಯಯನಗಳು ತೋರಿಸಿವೆ. ಇದಲ್ಲದೇ, 9 ಗಂಟೆಗಳಿಗಿಂತ ಹೆಚ್ಚು ಸಮಯ ನಿದ್ರೆ ಮಾಡುವವರಿಗೆ ಅಕಾಲಿಕ ಮರಣದ ಅಪಾಯ ಶೇಕಡಾ 34 ರಷ್ಟು ಇದೆ ಎಂದು ತಿಳಿದು ಬಂದಿದೆ. ಹಿಂದೆ ನಡೆಸಿದ 79 ಅಧ್ಯಯನಗಳನ್ನು ಪರಿಶೀಲಿಸಿದ ನಂತರ ಸಂಶೋಧಕರು ಈ ಹೇಳಿಕೆ ನೀಡಿದ್ದಾರೆ. ಸಮತೋಲಿತ ಆಹಾರ ಮತ್ತು ನಿಯಮಿತ ವ್ಯಾಯಾಮದಂತೆ, ನಿದ್ರೆಯು ಒಟ್ಟಾರೆ ದೇಹದ ಆರೋಗ್ಯಕ್ಕೆ ಬಹಳ ಮುಖ್ಯ. ನಾವು ನಿದ್ರಿಸಿದಾಗ, ದೇಹದಲ್ಲಿ…
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದರ ಬೆನ್ನಲ್ಲೇ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿತ್ತು. ನಟ ದರ್ಶನ್ ಬಂಧನದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಭಾವನಾತ್ಮಕವಾಗಿ ಪೋಸ್ಟ್ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಇನ್’ಸ್ಟಾಗ್ರಾಮ್’ನಲ್ಲಿ ದರ್ಶನ್ ನಿಂತಿರುವ ಹಿಮ್ಮುಖದ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ ದರ್ಶನ್, ಬ್ರೋಕನ್ ಹಾರ್ಟ್ (ಒಡೆದ ಹೃದಯ) ಎಮೋಜಿಯನ್ನು ಕ್ಯಾಪ್ಷನ್ ನಲ್ಲಿ ಹಾಕಿದ್ದಾರೆ. ಅಭಿಮಾನಿಯೋರ್ವರು ಪ್ರತಿಕ್ರಿಯಿಸಿ, ‘ಯಾವಾಗಲೂ ನಿಮ್ಮೊಂದಿಗಿದ್ದೇವೆ ಬಾಸ್’ ಎಂದು ತಿಳಿಸಿದ್ದಾರೆ. ಪ್ಲೀಸ್ ಸ್ಟೇ ಸ್ರಾಂಗ್ ಎಂದು ಮತ್ತೋರ್ವರು ತಿಳಿಸಿದ್ದಾರೆ. ಮಿಸ್ ಯು ಬಾಸ್, ಸ್ಟೇ ಸ್ಟ್ರಾಂಗ್ ಅತ್ತಿಗೆ ಎಂಬ ಕಾಮೆಂಟ್ ಹೆಚ್ಚಾಗಿ ಹರಿದು ಬಂದಿದೆ. ದರ್ಶನ್ ಈ ಪ್ರಕರಣದಿಂದ ಮುಕ್ತರಾಗಬೇಕೆಂದು ಬಯಸಿರೋ ಅಭಿಮಾನಿಯೊಬ್ಬರು , ‘ನಾವು ಎಂದೆಂದಿಗೂ ನಿಮ್ಮೊಂದಿಗೆ ಇದ್ದೇವೆ ಬಾಸ್. ನಿಮಗೆ ಹೆಚ್ಚಿನ ಶಕ್ತಿ ಸಿಗಲಿ ಮೇಡಂ. ದಯವಿಟ್ಟು ಬಾಸ್ ಅನ್ನು ಬೇಗ ಹೊರಗೆ ಕರೆದುಕೊಂಡು ಬನ್ನಿ’ ಎಂದು ತಿಳಿಸಿದ್ದಾರೆ. ಮತ್ತೊಂದು…
ಲಕ್ನೋ: ಹಿಂದೂ ಎಂದು ನಂಬಿಸಿ ಅನೇಕ ಹಿಂದೂ ಯುವತಿಯರನ್ನು ವಿವಾಹವಾಗಿದ್ದ ಶರಾಫ್ ರಿಜ್ವಿ ಎಂಬ ಮುಸ್ಲಿಂ ವ್ಯಕ್ತಿಯನ್ನು ಸಾರನಾಥ ಪೊಲೀಸರು ಫರೂಕಾಬಾದ್ ನಿಂದ ಬಂಧಿಸಿದ್ದಾರೆ. ಸಾರಾನಾಥದ ಮಹಿಳೆಯೊಬ್ಬರು ದೂರು ನೀಡಿದ ಬಳಿಕ ರಿಜ್ವಿ ಸಿಕ್ಕಿಬಿದ್ದಿದ್ದಾನೆ. ಈತ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ. ರೂ.5 ಲಕ್ಷ ಸುಲಿಗೆ ಮಾಡಿದ್ದು, ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಡ ಹಾಕುತ್ತಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಗಳಲ್ಲಿ ನಕಲಿ ಗುರುತಿನ ಮೂಲಕ ಉತ್ತರ ಪ್ರದೇಶ ಸೇರಿದಂತೆ ಮೂರು ರಾಜ್ಯಗಳಲ್ಲಿ ಕನಿಷ್ಠ 12 ಯುವತಿಯರನ್ನು ವಿವಾಹವಾಗಿರುವುದಾಗಿ ರಿಜ್ವಿ ವಿಚಾರಣೆಯ ಸಮಯದಲ್ಲಿ ಒಪ್ಪಿಕೊಂಡಿದ್ದಾನೆ ಎಂದು ಸಾರನಾಥ ಪೊಲೀಸರು ತಿಳಿಸಿದ್ದಾರೆ. ಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ ರಿಜ್ವಿ, ಹಣ ಮತ್ತು ಉಡುಗೊರೆಗಳನ್ನು ಸುಲಿಗೆ ಮಾಡುತ್ತಿದ್ದ. ದೈಹಿಕ ಸಂಬಂಧ ಹೊಂದಿದ್ದ ನಂತರ ತನ್ನ ನೈಜ ಗುರುತನ್ನು ಬಹಿರಂಗಪಡಿಸುತ್ತಿದ್ದ. ಆಗಾಗ್ಗೆ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಡ ಹೇರುತ್ತಿದ್ದ ಎಂದು ಆರೋಪಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಬೀದರ್: 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶುಕ್ರವಾರ ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪರಿಸರ ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಅವರು ಧ್ವಜಾರೋಹಣ ನೆರವೇರಿಸಿದರು. ಮೈದಾನದಲ್ಲಿ ತೆರದ ಜೀಪಿನಲ್ಲಿ ಸಂಚರಿಸಿದ ಸಚಿವರು, ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು ಜಿಲ್ಲಾ ಸಶಸ್ತ್ರ ಮೀಸಲು ಪೋಲಿಸ್ ಪಡೆ ಸೇರಿ ವಿವಿಧ ಶಾಲಾ ಹಾಗೂ ಕಾಲೇಜಿನ ತುಕಡಿಗಳು ಆಕರ್ಷಕ ಪಥ ಸಂಚಲನ ಗಮನ ಸೆಳೆಯಿತು. ಬಳಿಕ ಶಾಲಾ — ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಸಂಸದ ಸಾಗರ್ ಖಂಡ್ರೆ, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ನಗರಸಭೆ ಅಧ್ಯಕ್ಷ ಮೊಹಮ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿಸಿಎಫ್ ಆಶೀಷ ರೆಡ್ಡಿ, ಬುಡಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮತ್ತಿತರರು ಹಾಜರಿದ್ದರು. ವರದಿ: ಅರವಿಂದ ಮಲ್ಲಿಗೆ,…
ಔರಾದ: ತಾಲೂಕಿನ ಲಾಧಾ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ ದಿನಾಚರಣೆ ಆಚರಿಸಲಾಯಿತು. ಇದೇ ವೇಳೆ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳ ಎಸ್ ಎಸ್ ಎಲ್ ಸಿ, ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರಿಯಲ್ಲಿ ನಿವೃತ್ತರಾದವರನ್ನೂ ಗೌರವಿಸಲಾಯಿತು. ಕಾರ್ಯಕ್ರಮ ಧ್ವಜಾರೋಹಣ ಅಧ್ಯಕ್ಷರಾದ ನಾಗಪ್ಪ ಮುಸ್ತಾಪುರ್ ನೆರವೇರಿಸಿದರು. ಉದ್ಘಾಟಕರಾಗಿ ಜಿಲ್ಲಾ ಬಸವ ಕೇಂದ್ರದ ಅಧ್ಯಕ್ಷರಾದ ಶರಣಪ್ಪ ಮೀಠಾರೆ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪ್ರಕಾಶ ಮಿಠಾರೆ, ಉಪಾಧ್ಯಕ್ಷರಾದ ಅಂಬಿಕ ರಾಜಕುಮಾರ್ ಗಾದಗೆ, ಪ್ರದೀಪ್ ಕುಮಾರ್ ಮಿಠಾರೆ, ಈರಮ್ಮ ಶಂಕರ್, ಸಂಗೀತ ಬೀರಪ್ಪ, ಝರುಬಾಯಿ ಪ್ರಭುಶೆಟ್ಟಿ, ದೇವಿದಾಸ್ ಪವಾರ್, ಸುನಿಲ್ ರಾಥೋಡ್, ಶಿವಕಾಂತ್ ಮುಚಳಬೆ, ಎವನ್ ಕುಮಾರ್ ಲಾಧಕರ್, ಧನರಾಜ್ ಮುಸ್ತಾಪುರ್, ಸಂಜು ಕುಮಾರ್, ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…