Author: admin

ಬೀದರ್:  ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ದೊರಕಿಸಿಕೊಡಲೆಂದೇ ಹುಟ್ಟಿ, ಭಾರತ ದೇಶವೇ ತಮ್ಮ ಕುಟುಂಬವೆಂದು ಭಾವಿಸಿ, ತಮ್ಮ ಕುಟುಂಬವನ್ನು ತೊರೆದು ಸ್ವಾತಂತ್ರ್ಯವನ್ನು ದೊರಕಿಸಿ, ತಮ್ಮ ಪ್ರಾಣವನ್ನೆ ಬಲಿದಾನ ನೀಡಿದ ಸ್ವಾತಂತ್ರ್ಯ ಹೋರಾಟಗಾರರನ್ನು 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಸ್ಮರಿಸೋಣ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದರು. ಬೀದರ್ ಜಿಲ್ಲಾ ಪೊಲೀಸ್ ವತಿಯಿಂದ ಆಚರಿಸಲಾದ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಸ್ವಾತಂತ್ರ್ಯವನ್ನು ದೊರಕಿಸಿಕೊಟ್ಟ ಸಮಸ್ತ ಸ್ವಾತಂತ್ರ ಹೋರಾಟಗಾರರಿಗೆ ಈ ಸಂದರ್ಭದಲ್ಲಿ ನೆನೆಯುತ್ತಾ, ಅವರ ಈ ಬಲಿದಾನವನ್ನು ನಮಿಸೋಣ ಎಂದರು. ಧ್ವಜಾರೋಹಣ ಮಾಡಿ ನೆರವೇರಿಸಿದ ಬಳಿಕ  ಬೀದರ ಜಿಲ್ಲೆಯ ನಾಗರಿಕರಿಗೆ, ಪೊಲೀಸ್ ಅಧಿಕಾರಿ,ಸಿಬ್ಬಂದಿ, ಲಿಪಿಕ ಅಧಿಕಾರಿ ಸಿಬ್ಬಂದಿ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ 79ನೇ ಸ್ವಾತಂತ್ರ್ಯವ ದಿನಾಚರಣೆ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ 2024– 25ನೇ ಸಾಲಿನ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ  ಬೆಳಕುಣಿ (ಚೌದ್ರಿ) ಗ್ರಾಮದ ಹೆಮ್ಮೆಯ ವಿದ್ಯಾರ್ಥಿಗೆ ಎಮ್.ಬಿ.ಬಿ.ಎಸ್.ಪ್ರವೇಶ ಪಡೆದುದ್ದಕ್ಕಾಗಿ ಸರಕಾರಿ ಪ್ರೌಢಶಾಲೆ. ಎಸ್ ಡಿ. ಎಂ ಸಿ. ಅಧ್ಯಕ್ಷ ಎಂ ಡಿ. ನಯುಮ್ ಅವರು  ವಿದ್ಯಾರ್ಥಿಗಳಿಗೆ ಶಾಲು ಮತ್ತು ಹೂವು ಗುಚ್ಛವನ್ನು ಕೊಟ್ಟು ಸನ್ಮಾನಿಸಿದರು. ಈ ಸಂದರ್ಭದಲ್ಲಿ  ಪ್ರೌಢ ಶಾಲೆ ಮುಖ್ಯ ಗುರುಗಳು  ಉಮಾಕಾಂತ್ ಚೋಪಡೆ, ಶಾಲೆಯ ಶಿಕ್ಷಕರು ಹಾಗೂ ಗ್ರಾಮದ ಪ್ರಮುಖ ಮುಖಂಡರು ಭೀಮಣ್ಣ ಗಂದಿಗೆ, ಸತ್ಯನಾರಾಯಣ ಠಾಕೂರ್, ಪರಮೇಶ್ವರ ಮೇತ್ರೆ, ಗ್ರಾಪಂ ಸದಸ್ಯ ಕರಬಸಪ್ಪಾ ಸೊರಾಳೆ, ಮಹೇಶ್ ಚಾಬೋಳೆ, ಗ್ರಾಪಂ ಸದಸ್ಯ ದೆವಿದಾಸ ಮಾಳಗೆ, ಮಾಜಿ ಸೈನಿಕ ಬಸವರಾಜ ಶಿಪೂಜೆ,  ಮಾಜಿ ಗ್ರಾಪಂ ಅಧ್ಯಕ್ಷ ದೇವಿದಾಸ ಧೂಳೆ, ಜೀವನ ಮಾಳೆಗೆ, ರಾಜಕುಮಾರ್  ಹಚಕಮಟೆ, ಪ್ರಭಾಕರ್ ಇಂಗಳೇ,…

Read More

ಸರಗೂರು:  ಇತಿಹಾಸದಲ್ಲಿ ಅಪರೂಪವಾಗಿ ಬರುವ ಇಂಥ ಈ ಗಳಿಗೆಯಲ್ಲಿ ಹಳತಿನಿಂದ ಹೊಸತಿಗೆ ಕಾಲಿಡುತ್ತಿದ್ದೇವೆ. ಹಳೆಯ ಯುಗ ಮುಗಿದು ಬಹುಕಾಲ ಅದುಮಿಟ್ಟ ದೇಶವೊಂದರ ಚೇತನವು ತನ್ನ ಅಭಿವ್ಯಕ್ತಿಯನ್ನು ಕಂಡುಕೊಳ್ಳುತ್ತಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದರು. ಪಟ್ಟಣದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆ  ಧ್ವಜ ಅನಾವರಣಗೊಳಿಸಿ ನಂತರ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇವತ್ತು ನಾವು ನಮ್ಮ ದುರಾದೃಷ್ಟದ ಕಾಲವನ್ನು ಮುಗಿಸುತ್ತಿದ್ದೇವೆ ಮತ್ತು ಭಾರತವು ತನ್ನನ್ನು ತಾನು ಮತ್ತೆ ಕಂಡುಕೊಳ್ಳುತ್ತಿದೆ. ಸ್ವಾತಂತ್ರ್ಯವು ಪ್ರತಿಯೊಬ್ಬ ವ್ಯಕ್ತಿಯು ತನ್ನ ಜೀವನವನ್ನು ತನಗೆ ಇಷ್ಟವಾದ ರೀತಿಯಲ್ಲಿ ನಡೆಸಲು, ತನ್ನ ಆಲೋಚನೆಗಳನ್ನು ವ್ಯಕ್ತಪಡಿಸಲು ಮತ್ತು ತನ್ನ ಆಯ್ಕೆಗಳನ್ನು ಮಾಡಲು ಅನುವು ಮಾಡಿಕೊಡುತ್ತದೆ. ಇದು ವ್ಯಕ್ತಿಯ ಆತ್ಮಗೌರವ ಮತ್ತು ಸ್ವಾಭಿಮಾನವನ್ನು ಹೆಚ್ಚಿಸುತ್ತದೆ ಎಂದರು. ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ವೈ.ಡಿ.ರಾಜಣ್ಣ ಮಾತನಾಡಿ, 200 ವರ್ಷಗಳ ಬ್ರಿಟಿಷ್ ಆಳ್ವಿಕೆಯ ನಂತರ ಭಾರತಕ್ಕೆ ಸ್ವಾತಂತ್ರ್ಯ ದೊರಕಿತು. ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ನಾಯಕರು…

Read More

ಸರಗೂರು:  ಕೇವಲ ಭಾರತದ ಮಾತ್ರ ಆಗಸ್ಟ್ 15 ರಂದು ‘ಸ್ವಾತಂತ್ರ್ಯ ದಿನಾಚರಣೆ’ ಆಚರಿಸುತ್ತಿಲ್ಲ ಬದಲಾಗಿ ಪ್ರಪಂಚದ ಈ ಕೆಲವು ದೇಶಗಳು ಕೂಡ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತವೆ ಎಂದು ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಎಂದರು. ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,  ಭಾರತವು ಈ ಆಗಸ್ಟ್ 15 ರಂದು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತದೆ. ಈ ರಾಷ್ಟ್ರೀಯ ಹಬ್ಬವನ್ನು ದೇಶದ ಮೂಲೆ ಮೂಲೆಯಲ್ಲಿ ಆಚರಿಸುವುದಲ್ಲದೆ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು, ಧೀಮಂತ ನಾಯಕರನ್ನು ಮತ್ತು ಸೈನಿಕರನ್ನು ಈ ದಿನದಂದು ಸ್ಮರಿಸಲಾಗುತ್ತದೆ. ಪಾಕಿಸ್ತಾನ ಮತ್ತು ಭಾರತದ ನಡುವೆ ಯುದ್ಧ ನಡೆದು ನಮ್ಮ ದೇಶದ ಮಹಿಳೆಯರ ಮೇಲೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿರವರು ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ  ನಡೆದ ಸಂಘರ್ಷವನ್ನು ‘ಆಪರೇಷನ್‌ ಸಿಂಧೂರ’ ಎಂದು ಹೆಸರು ಇಟ್ಟು ಪಾಕಿಸ್ತಾನದ ಉಗ್ರಗಾಮಿಗಳನ್ನು ಬಳಿ ಪಡೆದು ನಮ್ಮ…

Read More

ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಅದ್ದೂರಿಯಾಗಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್ ಗೃಹರಕ್ಷಣದಳ, ಎನ್.ಸಿ.ಸಿ. ಸೇರಿದಂತೆ ವಿವಿಧ ಶಾಲಾ ತುಕ್ಕಡಿಗಳಿಂದ ಧ್ವಜವಂದನೆ ಸ್ವೀಕರಿಸಿ ಮಾತನಾಡಿದ ಅವರು, ಭಾರತ ದೇಶವು ಬ್ರಿಟೀಷ್ ಸಾಮ್ರಾಜ್ಯದಿಂದ ಸ್ವಾತಂತ್ರ್ಯಗೊಂಡು ಇಂದಿಗೆ 78 ವರ್ಷಗಳು ಮುಗಿದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಮ್ಮ ಮಾತೃ ಭೂಮಿಯಾಗಿರುವ ಭಾರತ ದೇಶ ಪುರಾತನವಾದ ಧರ್ಮ ನಾಗರಿಕತೆ, ಸಂಸ್ಕೃತಿ ಮೌಲ್ಯಗಳಿಂದ ಶ್ರೀಮಂತವಾಗಿದೆ. ಋಷಿ ಮುನಿಗಳ, ರಾಜ ಮಹಾರಾಜರ, ಸಾಹಿತಿ — ಕವಿಗಳು, ಶಿಕ್ಷಣ ತಜ್ಞರ, ರೈತರ — ಯುವಕರ ಸ್ವಾತಂತ್ರ್ಯ ಹೋರಾಟಗಾರರಿಂದ ತುಂಬಿ ಸಮೃದ್ಧವಾಗಿದ್ದ ದೇಶವಿದಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಕೆ.ಷಡಕ್ಷರಿ ಮಾತನಾಡಿ, ಹಲವಾರು ಮಹನೀಯರ ಹೋರಾಟ, ತ್ಯಾಗ ಬಲಿದಾನದಿಂದ ದೊರೆತ ಭವ್ಯಭಾರತದ ಸ್ವಾತಂತ್ರ್ಯವನ್ನ ಕಾಪಾಡ ಬೇಕಾಗಿರುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ನಾವು ಆಘಾತಕಾರಿ ಬೆಳವಣಿಗೆಗಳನ್ನಕಾಣುತ್ತಿದ್ದೇವೆ, ಜವಾಹರಲಾಲ್ ನೆಹರು…

Read More

ಬೆಂಗಳೂರು: ನಟ ದರ್ಶನ್ ಜೈಲು ಪಾಲಾಗಿರುವ ಬಗ್ಗೆ ನಟಿ, ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದು, ನಟ ದರ್ಶನ್ ಜೊತೆ ನಾನು ಸಿನಿಮಾ ಮಾಡಿದ್ದೇನೆ. ಸಿನಿಮಾ ಶೂಟಿಂಗ್ ವೇಳೆ ತಾವು ನಡೆದುಕೊಂಡು ಬಂದ ಹಾದಿ ಬಗ್ಗೆ ನನ್ನ ಬಳಿ ಹಂಚಿಕೊಂಡಿದ್ದರು. ನನಗೆ ಹೆಮ್ಮೆ ಅನಿಸಿತ್ತು. ಲೈಟ್ ಬಾಯ್ ಆಗಿ ಕೆಲಸ ಮಾಡಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಇತ್ತೀಚಿಗೆ ಅವರ ನಡವಳಿಕೆಯಿಂದ ತುಂಬಾ ಬೇಜಾರಾಗಿತ್ತು ಎಂದಿದ್ದಾರೆ. ಅವರು ತಮ್ಮ ಜೀವನ ಹಾಳು ಮಾಡಿಕೊಂಡರು. ಈ ಮಟ್ಟಕ್ಕೆ ಬೆಳೆದ ಮೇಲೆ ಜವಾಬ್ದಾರಿ ಇರುತ್ತದೆ. ಅವರ ಅಕ್ಕಪಕ್ಕ ಯಾರು ಒಳ್ಳೆಯವರಿಲ್ಲ ಅನಿಸುತ್ತೆ ಗೊತ್ತಿಲ್ಲ. ತಮ್ಮ ಸುತ್ತಮುತ್ತ ಒಳ್ಳೆಯವರನ್ನು ಇಟ್ಟುಕೊಂಡು ಒಳ್ಳೆಯ ದಾರಿಯಲ್ಲಿ ಕರೆದುಕೊಂಡು ಹೋಗಬಹುದಿತ್ತು. ಮೊದಲು ಅಕ್ಕಪಕ್ಕದವರ ಸಹವಾಸ ಬಿಡಬೇಕು ಎಂದು ರಮ್ಯಾ ಹೇಳಿದ್ದಾರೆ. ಜಡ್ಜ್ಮೆಂಟ್ ಕೇಳಿದಾಗ ರಿಲೀಫ್ ಅಂತಾ ಅನಿಸಿದೆ. ಈಗ ನಾವು ಹೋಗುತ್ತಿರುವ ಸಮಾಜ ಕೆಟ್ಟ ದಾರಿಯಲ್ಲಿದೆ. ಹೆಣ್ಣುಮಕ್ಕಳ ರಕ್ಷಣೆ, ಗೌರವ ವಿಷಯದಲ್ಲಿ ಸುಪ್ರೀಂ ಕೋರ್ಟ್ ಆರ್ಡರ್ ಬಂದಾಗ ನಾನು ಮಾಡಿದ…

Read More

ನವದೆಹಲಿ: ದೇಶದ ನಾಗರಿಕರಿಗೆ ದೀಪಾವಳಿ ಉಡುಗೊರೆಯಾಗಿ ಜಿಎಸ್‌ ಟಿಯಲ್ಲಿ ಸುಧಾರಣೆ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಘೋಷಿಸಿದರು. ಈ ದೀಪಾವಳಿಗೆ, ನಾನು ನಿಮಗಾಗಿ ಡಬಲ್ ಧಮಾಕ ನೀಡಲಿದ್ದೇನೆ. ಈ ದೀಪಾವಳಿಯಲ್ಲಿ ನಾಗರಿಕರು ದೊಡ್ಡ ಉಡುಗೊರೆಯನ್ನು ಪಡೆಯಲಿದ್ದಾರೆ. ನಾವು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳನ್ನು ತರುತ್ತಿದ್ದೇವೆ. ಇದು ದೇಶಾದ್ಯಂತ ತೆರಿಗೆ ಹೊರೆಯನ್ನು ಕಡಿಮೆ ಮಾಡುತ್ತದೆ. ಇದು ದೀಪಾವಳಿ ಉಡುಗೊರೆಯಾಗಲಿದೆ ಎಂದು ಹೇಳಿದ್ದಾರೆ. ಎಂಟು ವರ್ಷಗಳ ಹಿಂದೆ ಸರ್ಕಾರವು ಪ್ರಮುಖ ಸುಧಾರಣೆಗಳನ್ನು ಕೈಗೊಂಡಿದೆ. ಸರ್ಕಾರವು ದೇಶಾದ್ಯಂತ ತೆರಿಗೆ ಹೊರೆಯನ್ನು ಕಡಿಮೆ ಮಾಡಿ, ತೆರಿಗೆ ಪ್ರಕ್ರಿಯೆಯನ್ನು ಸರಳಗೊಳಿಸಿದೆ ಎಂದು ಭರವಸೆ ನೀಡಿದ್ದಾರೆ. ವಿಕಸಿತ ಭಾರತ ರೋಜ್‌ ಗಾರ್ ಯೋಜನೆಯಡಿಯಲ್ಲಿ ಮೊದಲ ಬಾರಿಗೆ ಖಾಸಗಿ ವಲಯದ ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ ಯುವಕರಿಗೆ 15,000 ರೂ. ನೆರವನ್ನು ಮೋದಿ ಘೋಷಿಸಿದ್ದಾರೆ. ಈ ಯೋಜನೆಯಿಂದ 3.5 ಕೋಟಿಗೂ ಹೆಚ್ಚು ಯುವಜನರು ಪ್ರಯೋಜನ ಪಡೆಯುವ ನಿರೀಕ್ಷೆಯಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ತುಮಕೂರು ಮತ್ತು ಹೇಮಾವತಿ ನಾಗರಿಕ ಹಿತರಕ್ಷಣಾ ವೇದಿಕೆ (ರಿ ತುಮಕೂರು ಇವರುಗಳ ಸಹಯೋಗದೊಂದಿಗೆ 79ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿತ್ತು. ಮಾಜಿ ಸೈನಿಕ ಸದಾಶಿವಯ್ಯ  ಎಂ.ಸಿ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ನಂತರ ಧ್ವಜಾರೋಹಣವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ತುಮಕೂರು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ  ಆರ್.  ಹಾಗೂ ಪ್ರಾದೇಶಿಕ ಕೇಂದ್ರ ಎಲ್ಲಾ ಸಿಬ್ಬಂದಿ ವರ್ಗ ಮತ್ತು ತುಮಕೂರಿನ ಟೂಡಾ ಲೇಔಟ್, ರಾಜೀವ್ ಗಾಂಧಿನಗರ,  ಹೇಮಾವತಿ ಬಡಾವಣೆಯ “ಹೇಮಾವತಿ ನಾಗರಿಕ ಹಿತರಕ್ಷಣಾ ವೇದಿಕೆ (ರಿ)”ಯ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಕಾರ್ಯದರ್ಶಿಗಳು, ನಿರ್ದೇಶಕರುಗಳು ಮತ್ತು ಸದಸ್ಯರುಗಳು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸರಗೂರು:  ಪ್ರತಿ ವ್ಯಕ್ತಿಯು ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಬೇಕು, ಹೇಗೆ ಶೀತ, ಜ್ವರ ಬಂದಾಗ ಡಾಕ್ಟರ್ ಗಳ ಬಳಿ ಹೋಗುತ್ತೇವೆ ಹಾಗೆಯೇ ಮನಸ್ಸಿಗೂ ಬೇಜಾರಾದಾಗ ಅಥವಾ ಮಾನಸಿಕ ಅಸ್ವಸ್ಥತೆ ಇದ್ದರೆ ಮಾನಸಿಕ ತಜ್ಞರ ಬಳಿ ತೋರಬೇಕೆಂದು ಮನೋವಿಜ್ಞಾನಿ ಬೇಬಿ ಫಾತಿಮಾ ತಿಳಿಸಿದರು. ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ಬುಧವಾರದಂದು ಮಾನಸಿಕ–ಸಾಮಾಜಿಕ ಶಿಕ್ಷಣ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿರುವ ಅಜ್ಞಾನ ಮತ್ತು ಕಳಂಕವನ್ನು ನಿವಾರಿಸುವ ಅಗತ್ಯವಿದೆ ಎಂಬುದನ್ನು ಗಂಭೀರವಾಗಿ ಪ್ರಸ್ತಾಪಿಸಿದರು ಅವರು ತಮ್ಮ ಉಪನ್ಯಾಸದಲ್ಲಿ ಈ ಕೆಳಗಿನ ವಿಷಯಗಳ ಕುರಿತು ಮನದಟ್ಟಾಗಿ ವಿವರಿಸಿದರು: ಆರೋಗ್ಯ ಮತ್ತು ಮಾನಸಿಕ ಆರೋಗ್ಯದ ಅರ್ಥ, ಮಾನಸಿಕ ಅಸ್ವಸ್ಥತೆಗಳ ವಿವರಣೆ, ಅವುಗಳ ವಿಧಗಳು, ಲಕ್ಷಣಗಳು ಮತ್ತು ಚಿಹ್ನೆಗಳು, ಕಾರಣಗಳು ಮತ್ತು ತಡೆಯುವ ಮಾರ್ಗಗಳು, ಮಿದುಳಿನ ಆರೋಗ್ಯದ ಮಹತ್ವ — “ಮಾನಸಿಕ ಆರೋಗ್ಯವಿಲ್ಲದೆ ದೈಹಿಕ ಆರೋಗ್ಯ ಸಾಧ್ಯವಿಲ್ಲ ಮೊದಲಾದ ಮಾಹಿಗಳನ್ನು ತಿಳಿದರು. ಇದಕ್ಕೂ ಮೇರೆಗೆ, ಬಿಬಿ ಫಾತಿಮಾ ಅವರು ಮಾನಸಿಕ ಒತ್ತಡದ ನಿರ್ವಹಣಾ ತಂತ್ರಗಳು ಕುರಿತು ಪ್ರಾಯೋಗಿಕ ಸೂಚನೆಗಳನ್ನು ನೀಡಿದರು. …

Read More

ವೈ.ಎನ್.ಹೊಸಕೋಟೆ: ವೈ.ಎನ್.ಹೊಸಕೋಟೆಯ RVP ಪ್ರೌಢಶಾಲೆಯಲ್ಲಿ ಮಧುಶ್ರೀನಿವಾಸನ್ ರವರ ಮಾರ್ಗದರ್ಶನದಲ್ಲಿ ರೂಪುಗೊಂಡ ಗಣಿತ –ವಿಜ್ಞಾನ ಪ್ರಯೋಗಶಾಲೆಯನ್ನು ಸಂಸ್ಥೆಯ ಕಾರ್ಯದರ್ಶಿ ಎನ್.ಆರ್. ಅಶ್ವಥ್ ಕುಮಾರ್ ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿದರು. ಮುಖ್ಯ ಶಿಕ್ಷಕರಾದ ಬಿ.ತಿಪ್ಪೇಸ್ವಾಮಿ ಒಂದು ಸರಳ ಪ್ರಯೋಗದ ಪ್ರಾತ್ಯಕ್ಷಿಕೆಯನ್ನು ಮಾಡಿದರು. ಮಧುಶ್ರೀನಿವಾಸನ್ ರವರು ಪ್ರಯೋಗಾಲಯದಲ್ಲಿರುವ ಗಣಿತ ಹಾಗೂ ವಿಜ್ಞಾನದ ಮಾದರಿಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರುಗಳಾದ ಅನಿಲ್ ಕುಮಾರ್, ವಿನೋದ್ ಕುಮಾರ್, ಶಿವಣ್ಣ, ಅನ್ನಪೂರ್ಣ ಉಪಸ್ಥಿತರಿದ್ದರು. ಅನಿಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More