Subscribe to Updates
Get the latest creative news from FooBar about art, design and business.
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
Author: admin
ಸರಗೂರು: ಹಳೆ ಮೈಸೂರು ಪ್ರಾಂತ್ಯ ಭಾಗದ ಎಚ್.ಡಿ.ಕೋಟೆ ಎಸ್ ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಎಸ್ಸಿ ಎಸ್ಟಿ ಅತಿ ಹೆಚ್ಚು ಸಮುದಾಯದ ಇರುವುದರಿಂದ ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸರ್ಕಾರಕ್ಕೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಅಭಾವೀಲಿಂ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಮನುಗನಹಳ್ಳಿ ಗುರುಸ್ವಾಮಿ ಆಗ್ರಹಿಸಿದರು. ನಾಯಕ ಸಮಾಜದ ಪ್ರಮುಖ ನಾಯಕರಾದ ಶಾಸಕ ಅನಿಲ್ ಕುಮಾರ್ ಅವರು ಎರಡು ಬಾರಿ ಶಾಸಕರಾಗಿ ಅನೇಕ ಜನಪರ ಕೆಲಸಗಳನ್ನು ಮಾಡಿದ್ದಾರೆ. ಮುಖ್ಯವಾಗಿ ಅವರ ತಂದೆ ದಿವಂಗತ ಎಸ್. ಚಿಕ್ಕಮಾದು ಅವರು ತಾಲೂಕಿನಲ್ಲಿ ಶಾಸಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಹಾಗಾಗಿ ತಂದೆಯ ಹಾದಿಯಲ್ಲಿ ಮಗ ನಡೆಯುತ್ತಿದ್ದಾರೆ. ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾರೆ ಎಂದರು. ರಾಜ್ಯದ ಗಡಿ ಭಾಗದಲ್ಲಿ ಇರುವ ಎಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಗೊಂಡಿರುವ ಅನೀಲ್ ಚಿಕ್ಕಮಾದು ಅವರಿಗೆ ಒಂದೇ ಪಕ್ಷದಲ್ಲಿ ಬಾರಿ ಎರಡು ಬಾರಿ ಆಯ್ಕೆಯಾಗಿರುವ ಇತಿಹಾಸದಲ್ಲೇ ಇಲ್ಲ.ಅದನ್ನು ನಮ್ಮ ಶಾಸಕರು…
ಸರಗೂರು: ತಾಲೂಕಿನ ಹೆಗ್ಗನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ 11 ಮತಗಳ ಅಂತರದಿಂದ ಹೆಗ್ಗನೂರು ಮಾರಯ್ಯ ಆಯ್ಕೆಯಾದರು. ಮುತ್ತುರಾಜ್ ಅಧ್ಯಕ್ಷ ಸ್ಥಾನದಿಂದ ತೇರವಾಗಿದ್ದ ಹಿನ್ನೆಲೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಅಧ್ಯಕ್ಷ ಸ್ಥಾನಕ್ಕೆ ಗುರುವಾರದಂದು ಚುನಾವಣೆ ನಿಗದಿಯಾಗಿದ್ದು, ಅಧ್ಯಕ್ಷ ಸ್ಥಾನಕ್ಕಾಗಿ ಎಸ್ ಸಿ ಮೀಸಲು ಕ್ಷೇತ್ರದಿಂದ ಹೆಗ್ಗನೂರು ಮಾರಯ್ಯ ಹಾಗೂ ಹುಲ್ಲೇಮಾಳ ಲೋಕೇಶ್ ನಾಮಪತ್ರ ಸಲ್ಲಿಸಿದರು. ಆದರೆ ಇಬ್ಬರಲ್ಲಿ ಯಾರೊಬ್ಬರೂ ನಾಮಪತ್ರ ವಾಪಸ್ ಪಡೆಯದ ಕಾರಣ ಚುನಾವಣೆ ನಡೆಯಿತು. ಪಂಚಾಯಿತಿಯಲ್ಲಿ 14 ಸದಸ್ಯರು ಒಳಗೊಂಡು 13 ಸದಸ್ಯರು ಹಾಜರಿದ್ದರು.ಒಬ್ಬರು ಕಾರಣ ಅಂತರದಿಂದ ಗೈರು ಹಾಜರಾಗಿದ್ದರು. ಹೆಗ್ಗನೂರು ಮಾರಯ್ಯ 11, ಹುಲ್ಲೇಮಾಳ ಲೋಕೇಶ್ 2 ಮತಗಳನ್ನು ಪಡೆದಿದ್ದರಿಂದ ಹೆಗ್ಗನೂರು ಮಾರಯ್ಯ ಹೆಗ್ಗನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂದು ಕಬಿನಿ ಕಾರ್ಯಪಾಲಕ ಅಭಿಯಂತರರು ಹಾಗೂ ಚುನಾವಣಾಧಿಕಾರಿ ಕೆ.ಆರ್.ಉಷಾ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲೋಕೇಶ್ ಘೋಷಿಸಿದರು. ನೂತನವಾಗಿ ಅಧ್ಯಕ್ಷರಾದ ಹೆಗ್ಗನೂರು ಮಾರಯ್ಯ ಮಾತನಾಡಿ, ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷನಾಗಿ ಆಯ್ಕೆ ಮಾಡಿದ ಎಲ್ಲ…
ಕಲಬುರಗಿ: ಮುಸ್ಲಿಂ ಯುವತಿಯರ ಮದುವೆಯಾದ್ರೆ 5 ಲಕ್ಷ ರೂ. ನೀಡಲಾಗುವುದು ಎಂದು ಹೇಳಿಕೆ ನೀಡಿದ್ದ ಶಾಸಕ ಯತ್ನಾಳ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಯತ್ನಾಳ್ ವಿರುದ್ಧ ವಿಜಯಪುರ ಹಾಗೂ ಕಲಬುರಗಿಯಲ್ಲಿ ಎಫ್ ಐಆರ್ ದಾಖಲಾಗಿದೆ. ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮುಸ್ಲಿಂ ಹುಡುಗಿ ಪ್ರೀತಿಸಿ ಹಿಂದೂ ಹುಡುಗ ಮದುವೆ ಆದರೆ, 5 ಲಕ್ಷ ನಗದು ಘೋಷಣೆಯನ್ನ ಯತ್ನಾಳ್ ಮಾಡಿದ್ದಾರೆ. ಕೊಪ್ಪಳದಲ್ಲಿ ಈ ರೀತಿ ಹೇಳಿಕೆ ನೀಡಿದ್ದ ಶಾಸಕರ ವಿರುದ್ಧ ವಿಜಯಪುರ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಮೈನುದ್ದೀನ ಬೀಳಗಿ ದೂರು ಕೊಟ್ಟಿದ್ದರು. ಜೊತೆಗೆ ಯತ್ನಾಳ್ ಮೇಲೆ ಕಲಬುರ್ಗಿಯಲ್ಲೂ ದೂರು ದಾಖಲಾಗಿದ್ದು, ಅದನ್ನ ವಿಜಯಪುರ ಗಾಂಧಿಚೌಕ್ ಪೊಲಿಸ್ ಠಾಣೆಗೆ ಕಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಜನರ ಜಾಮೀನು ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವ ಬೆನ್ನಲ್ಲೇ ನಟಿ, ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಬಲವಾದ ಸಂದೇಶವನ್ನು ರವಾನಿಸುತ್ತದೆ ಎಂದು ರಮ್ಯಾ ಹೇಳಿದ್ದಾರೆ. ನ್ಯಾಯಯುತವಾಗಿ ಪ್ರಕ್ರಿಯೆಯನ್ನು ಅನುಸರಿಸಿ. ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಳ್ಳಿ. ಇದು ದೀರ್ಘ ಮತ್ತು ಕಠಿಣ. ಆದರೆ ಸುರಂಗದ ಕೊನೆಯಲ್ಲಿ ಬೆಳಕು ಇದೆ ಎಂಬ ನಂಬಿಕೆ ಇರಲಿ ಎಂದು ನಾನು ಇತರರಿಗೆ ಹೇಳುತ್ತೇನೆ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ಸಿಕ್ಕೇ ಸಿಗುತ್ತದೆ. ನಿಮ್ಮ ಪ್ರಜ್ಞೆಗೆ ನಿಷ್ಠರಾಗಿರಿ ಎಂದು ರಮ್ಯಾ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಭಾರತೀಯ ಜನತಾ ಪಾರ್ಟಿ ಮಧುಗಿರಿ ಮಂಡಲ ವತಿಯಿಂದ’ ಮಂಡಲ ಅಧ್ಯಕ್ಷರಾದ ಹನುಮಂತರೆಡ್ಡಿ ರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 14 ವಿಭಜನೆಯ ಕರಾಳ ಸ್ಮರಣಾ ದಿನ’ ವನ್ನ ಮಧುಗಿರಿ ನಗರದ ಸರ್ಕಲ್ ನಲ್ಲಿ ಕಪ್ಪು ಪಟ್ಟಿ ಧರಿಸಿ ಮೌನವಾಗಿ ಸ್ಮರಿಸಲಾಯಿತು. ಕಾರ್ಯಕ್ರಮದ ಮುಖ್ಯ ಭಾಷಣವನ್ನು ಬಿಜೆಪಿಯ ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಸರು ಮಾತನಾಡಿ, ದ್ವೇಷ, ಹಿಂಸಾಚಾರದಿಂದ ದೇಶದ ಲಕ್ಷಾಂತರ ಸಹೋದರ, ಸಹೋದರಿಯರು ನಿರಾಶ್ರಿತರಾಗಿ, ಜೀವ ಕಳೆದುಕೊಂಡ ನೋವು ಎಂದಿಗೂ ಮಾಸದು. ನಮ್ಮ ಜನರ ಹೋರಾಟ, ತ್ಯಾಗದ ಸ್ಮರಣೆಯ ದಿನವಾದ ದೇಶ ವಿಭಜನೆಯ ದಿನವನ್ನು ಮರೆಯಲು ಸಾಧ್ಯವಿಲ್ಲ ಎಂದರು. ಪ್ರಧಾನಿ ನರೇಂದ್ರ ಮೋದಿಜಿ ಅವರು ಆಗಸ್ಟ್ 14, 2021 ರಲ್ಲಿ ದೇಶ ವಿಭಜನೆ ಕರಾಳ ದಿನವೆಂದು ಘೋಷಿಸಿದ್ದಾರೆ, ಪಾಕಿಸ್ತಾನವನ್ನು ಆಗಸ್ಟ್ 14, 1947 ರಂದು ಪ್ರತ್ಯೇಕ ರಾಷ್ಟ್ರ ಎಂದು ಘೋಷಿಸಲಾಯಿತು. ಭಾರತವನ್ನು ಆಗಸ್ಟ್ 15, 1947 ರಂದು ಪ್ರತ್ಯೇಕ ರಾಷ್ಟ್ರ ಎಂದು ಘೋಷಿಸಲಾಯಿತು. ಈ ಸಂದರ್ಭದಲ್ಲಿ ಭಾರತದಿಂದ ಪಾಕಿಸ್ತಾನಕ್ಕೆ ಅನೇಕ ಜನ ವಲಸೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 7 ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಈ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೋಶ್ , ಎ11 ನಾಗರಾಜು ಅಲಿಯಾಸ್ ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದುಪಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ನೀಡಿರುವ ವೈಜ್ಞಾನಿಕ ದತ್ತಾಂಶವನ್ನು ಆಧರಿಸಿ, ರಾಜ್ಯ ಸರ್ಕಾರ ಆ.16ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಡಿಎಸ್ ಎಸ್ ತಾ.ಸಂಚಾಲಕ ಡಿ.ಎಲ್.ಶಿವರಾಮ್ ಒತ್ತಾಯಿಸಿದರು. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಮೂರು ದಶಕಗಳ ನಿರಂತರ ಹೋರಾಟದ ಫಲವಾಗಿ ಸರ್ಕಾರವು ಆಯೋಗವನ್ನು ರಚಿಸಿ ವರದಿಯನ್ನು ಸ್ವೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇನ್ನು ವಿಳಂಬ ಮಾಡದೆ, ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಮೂಲಕ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು ಎಂದು ಹೇಳಿದರು. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಒಳ ಮೀಸಲಾತಿ ವರ್ಗೀಕರಣದ ಬಗ್ಗೆ ಈಗಾಗಲೇ ಅನೇಕ ಕೂಗುಗಳು ಕೇಳಿ ಬರುತ್ತಿವೆ. ನಾಗಮೋಹನ್ ದಾಸ್ ರವರ ವರದಿಯ ಆಧಾರದ ಮೇಲೆ ಒಳಮೀಸಲಾತಿಯನ್ನು ಅಂಗೀಕರಿಸಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಚಿವರಾದ ಡಾ.ಜಿ.ಪರಮೇಶ್ವರ್, ಮಹದೇವಪ್ಪನವರು ಒಳಮೀಸಲಾತಿಯನ್ನು…
ಸರಗೂರು: ಗಣೇಶ ಹಾಗೂ ಬಕ್ರೀದ್ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸಬೇಕು. ದೇವರ ಹೆಸರಿನಲ್ಲಿ ಪೈಪೋಟಿ, ನಿಯಮಬಾಹಿರ ಧ್ವನಿ ವರ್ಧಕ ಅಳವಡಿಕೆ, ಇಸ್ಪೀಟ್, ಜೂಜಾಟ ಸೇರಿ ಯಾವುದೇ ಅಹಿತಕರ ಘಟನೆಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಶಾಂತಿಪಾಲನೆಗೆ ಸಾರ್ವಜನಿಕರು ಇಲಾಖೆಯೊಂದಿಗೆ ಕೈ ಜೋಡಿಸಬೇಕು ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಹೇಳಿದರು. ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಗೌರಿಗಣೇಶ ಹಾಗೂ ಬಕ್ರೀದ್ ಹಬ್ಬದ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ ಶಾಂತಿ ಸಭೆಯ ಉದ್ದೇಶಿಸಿ ಅವರು ಮಾತನಾಡಿದರು. 25 ಮತ್ತು 26 ರಂದು ನಡೆಯುವ ಗೌರಿ–ಗಣೇಶ ಹಬ್ಬವನ್ನು ಎಲ್ಲರೂ ಶಾಂತಿ ಸೌಹಾರ್ದಯುತವಾಗಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ಅನ್ಯೂನ್ಯತೆಯಿಂದ ಹಬ್ಬ ಆಚರಿಸಬೇಕು, ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಸ್ಥಳೀಯ ಆಡಳಿತದಲ್ಲಿ, ಅಗ್ನಿಶಾಮಕ ಠಾಣೆ, ವಿದ್ಯುತ್ ಇಲಾಖೆ ಹಾಗೂ ಧ್ವನಿವರ್ಧಕ ಅಳವಡಿಸಲು ತಹಶೀಲ್ದಾರ್ ಅನುಮತಿ ಪಡೆದು ಪೊಲೀಸರು ನೀಡುವ ಸಲಹೆ ಸೂಚನೆ ಪಾಲಿಸಬೇಕು. ಅನುಮತಿ ನೀಡಲಾಗುವ ಸಮಯದಲ್ಲಿ ಗಣಪತಿ ವಿಸರ್ಜನೆ ಮಾಡಬೇಕು. ಗ್ರಾಮಗಳಲ್ಲಿ ಯಾವುದೇ ಸಂದರ್ಭದಲ್ಲಿ ಡಿಜೆ ಬಳಸಬಾರದು’…
ಸರಗೂರು: ಎಚ್.ಡಿ.ಕೋಟೆ ಎಸ್ ಟಿ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸರ್ಕಾರಕ್ಕೆ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ನಾಯಕ ಸಮಾಜದ ಉಪಾಧ್ಯಕ್ಷ ಶ್ರೀನಿವಾಸ ಹಾಗೂ ಸೇರಿದಂತೆ ಅನೇಕ ಸದಸ್ಯರು ಒತ್ತಾಯ ಮಾಡಿದರು. ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಾಸಕ ಅನಿಲ್ ಕುಮಾರ್ ಅವರು ಎರಡು ಬಾರಿ ಶಾಸಕರಾಗಿ ಅನೇಕ ಜನಪರ ಕೆಲಸಗಳನ್ನು ಮಾಡಿದ್ದಾರೆ. ಮುಖ್ಯವಾಗಿ ಅವರ ತಂದೆ ದಿವಂಗತ ಎಸ್.ಚಿಕ್ಕಮಾದು ಅವರು ತಾಲೂಕಿನಲ್ಲಿ ಶಾಸಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ, ಹಾಗಾಗಿ ತಂದೆಯ ಹಾದಿಯಲ್ಲಿ ಮಗ ನಡೆಯುತ್ತಿದ್ದಾರೆ. ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾರೆ ಎಂದರು. ರಾಜ್ಯದ ಗಡಿ ಭಾಗದಲ್ಲಿ ಇರುವ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಗೊಂಡಿರುವ ಅನಿಲ್ ಚಿಕ್ಕಮಾದು ಅವರಿಗೆ ಒಂದೇ ಪಕ್ಷದಲ್ಲಿ ಬಾರಿ ಎರಡು ಬಾರಿ ಆಯ್ಕೆಯಾಗಿರುವ ಇತಿಹಾಸದಲ್ಲೇ ಇಲ್ಲ. ಅದನ್ನು ನಮ್ಮ ಶಾಸಕರು ಮಾಡಿ ತೋರಿಸಿದ್ದಾರೆ. ಸುಮಾರು ಸಚಿವ ಸಂಪುಟ ಸಭೆಯಲ್ಲಿ ಸಚಿವ ಸ್ಥಾನ ಕೈ…
ಬೀದರ್: ಜಿಲ್ಲೆಯ ಕೊಟ್ಟ ಮಾತಿನಂತೆ ಸಿಎಂ ಸಿದ್ದರಾಮಯ್ಯನವರು ಆ.16 ರಂದು ಒಳಮೀಸಲಾತಿ ಜಾರಿ ಮಾಡಬೇಕು ಎಂದು ಮಾದಿಗ ಸಮಾಜದ ಯುವ ಮುಖಂಡ ಸುಧಾಕರ ಕೋಟೆ ಒತ್ತಾಯಿಸಿದ್ದಾರೆ. ಸುಮಾರು 30ರಿಂದ 35 ವರ್ಷಗಳಿಂದ ಒಳಮೀಸಲಾತಿ ಜಾರಿಗಾಗಿ ನಮ್ಮ ಹಿರಿಯರು ನಿರಂತರವಾಗಿ ಹೋರಾಟ ಮಾಡಿದರೂ, ಜಾರಿ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಒಳಮೀಸಲಾತಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ, ದಲಿತ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ಹಿಂದೇಟು ಹಾಕುತ್ತಿದೆ. ಸುಮಾರು 35 ವರ್ಷಗಳಿಂದ ಮಾದಿಗ ಸಮುದಾಯದಿಂದ ಹೋರಾಟ ನಡೆಸುತ್ತಿದೆಯಾದರೂ ಇನ್ನೂ ನ್ಯಾಯ ಸಿಕ್ಕಿಲ್ಲ, ಒಳಮೀಸಲಾತಿ ಜಾರಿ ಮಾಡಿ ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಳಮೀಸಲಾತಿ ಜಾರಿ ಮಾಡಬೇಕು, ಸುಪ್ರೀಂಕೋರ್ಟ್ ಆದೇಶ ಪಾಲಿಸದ ಸರ್ಕಾರ ದಲಿತರ ಪಾಲಿಗೆ ಸತ್ತಿದೆ ಎಂದು ಸುಧಾಕರ ಕೋಟೆ ಆಕ್ರೋಶ ವ್ಯಕ್ತಪಡಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…