Subscribe to Updates
Get the latest creative news from FooBar about art, design and business.
- ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
- ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
- ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ: ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
- ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ ಪರಮೇಶ್ವರ್ ಸೂಚನೆ
- ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
- ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
Author: admin
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ (AOL) ಅಂತರರಾಷ್ಟ್ರೀಯ ಕೇಂದ್ರದಲ್ಲಿ ನೂತನವಾಗಿ ನಿರ್ಮಿಸಲಾದ ಭವ್ಯ ‘ಧ್ಯಾನ ಮಂದಿರ’ವನ್ನು ಉದ್ಘಾಟಿಸಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷಾಚರಣೆ ಹಾಗೂ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಭಾಗವಹಿಸಿ ಅವರು ಈ ಕೇಂದ್ರವನ್ನು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ರಾಜಕೀಯ ಮತ್ತು ಸರ್ಕಾರಕ್ಕಿಂತ ಸಮಾಜವೇ ಹೆಚ್ಚು ಶಕ್ತಿಶಾಲಿ. ಸಮಾಜದ ಪಾಲ್ಗೊಳ್ಳುವಿಕೆ ಇದ್ದಾಗ ಮಾತ್ರ ಯಾವುದೇ ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಸಾಧ್ಯ,” ಎಂದು ಅಭಿಪ್ರಾಯಪಟ್ಟರು. ಬೆಂಗಳೂರು ಕೇವಲ ತಂತ್ರಜ್ಞಾನದ ಕೇಂದ್ರವಲ್ಲ, ಅದು ಆಧ್ಯಾತ್ಮಿಕತೆಯ ಕೇಂದ್ರವೂ ಹೌದು ಎಂದು ಬಣ್ಣಿಸಿದ ಮೋದಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಆಧ್ಯಾತ್ಮಿಕ ಮೌಲ್ಯಗಳನ್ನು ಮತ್ತು ಸಾಮಾಜಿಕ ಸೇವೆಯನ್ನು ಸಮನ್ವಯಗೊಳಿಸುತ್ತಿರುವುದನ್ನು ಶ್ಲಾಘಿಸಿದರು. ಕಳೆದ 45 ವರ್ಷಗಳಿಂದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ನದಿ ಪುನಶ್ಚೇತನ, ನೈಸರ್ಗಿಕ ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು…
ಮೇ 10ರಂದು ತಾಯಂದಿರ ದಿನಾಚರಣೆ (ಮದರ್ ಡೇ) ದಿನದ ಅರ್ಥ ಮತ್ತು ತಾಯಂದಿರ ಮಹತ್ವವನ್ನು ತಿಳಿದುಕೊಳ್ಳಬೇಕು. ತಾಯಿ ದೇವರ ಸಮಾನ. ಅಮ್ಮ ಎಂದರೆ ಜನನಿ. ಜನ್ಮ ನೀಡುವಳು ಮಗುವಿಗೆ ತಾಯಿ. ಮಕ್ಕಳನ್ನು ಸಾಕಿ ಬೆಳಸುವಳು ತಾಯಿ. ಮಮತೆಯ ಕಡಲು ತಾಯಿ ತನ್ನ ಮಕ್ಕಳ ಜೀವನವನ್ನು ರೂಪಿಸುವಳು ತಾಯಿ. ಮನೆಯಲ್ಲಿ ಏನೇ ಕೆಲಸವಿದ್ದರೂ ಅಮ್ಮ ನಮ್ಮನ್ನು ಒಂಬತ್ತು ತಿಂಗಳು ಹೊತ್ತು ಹೆತ್ತಿರುತ್ತಾಳೆ. ಅಮ್ಮನ ಸ್ಥಾನವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ. ತಾಯಿಯ ಸ್ಥಾನ ಮತ್ತು ಅಮ್ಮನ ಪ್ರೀತಿ ಅತ್ಯಮೂಲ್ಯವಾದದ್ದು. ನಮ್ಮನ್ನು ಕಣ್ಣಲ್ಲಿ ಕಣ್ಣಿಟ್ಟು ಸಾಕುವವಳು ಅಮ್ಮ. ಅಂತಹ ತಾಯಿಗೆ ನಾವು ಯಾವಾಗಲೂ ಗೌರವದಿಂದ ಕಾಣಬೇಕು. ಅದು ನಮ್ಮ ಕರ್ತವ್ಯ ಕೂಡ. ಅಮ್ಮ ನೀ ದೇವರು ಈ ಜಗವೆಲ್ಲಾ ನೀನೆ ಅಮ್ಮ. ಅಮ್ಮ ಎಂಬ ಎರಡಕ್ಷರ ಪವಿತ್ರವಾದ ಸಂಕೇತ. ಹೌದು ತಾಯಿ ದೇವರ ಸ್ವರೂಪ. ನಾವು ದೇವರನ್ನು ಎಷ್ಟು ಭಯ ಭಕ್ತಿಯಿಂದ ಗೌರವದಿಂದ ಪೂಜಿಸಿ ಆರಾದಿಸುತ್ತೇವೆಯೋ ಹಾಗೆಯೇ ಅಮ್ಮನ ಭಯ ಭಕ್ತಿಯಿಂದ ಗೌರವದಿಂದ ನೋಡಿಕೊಳ್ಳಬೇಕು. ಅಮ್ಮ…
ತುಮಕೂರು: ತುಮಕೂರು ವಿಶ್ವವಿದ್ಯಾಲಯ ಕಾಲೇಜು ಅಧ್ಯಾಪಕರ ಸಂಘ ಇವರ ವತಿಯಿಂದ ಕೃತಕ ಬುದ್ಧಿಮತ್ತೆ ಮತ್ತು ಭಾರತದಲ್ಲಿ ಉನ್ನತ ಶಿಕ್ಷಣ: ಅವಕಾಶಗಳು ಮತ್ತು ಸವಾಲುಗಳು ಎಂಬ ವಿಷಯ ಕುರಿತ ಒಂದು ದಿನದ ರಾಷ್ಟ್ರೀಯ ಸಮ್ಮೇಳನ ಮೇ 11 ರಂದು ಕೇಂದ್ರ ಗ್ರಂಥಾಲಯದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11.20 ರಿಂದ 11.30ರವರೆಗೆ ನಡೆಯಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ನೆರವೇರಿಸುವರು. ಅಧ್ಯಕ್ಷತೆಯನ್ನು ಎಂಎಲ್ಸಿ ಪುಟ್ಟಣ್ಣ ಅವರು ವಹಿಸುವರು. ಮುಖ್ಯ ಅತಿಥಿಗಳಾಗಿ ಎಂಎಲ್ಸಿ ಡಿ. ಟಿ. ಶ್ರೀನಿವಾಸ್, ಪ್ರೊ.ಕೆ.ರಾಮಕೃಷ್ಣರೆಡ್ಡಿ, ಶಶಿ ಹುಲಿಕುಂಟೆಮಠ್ ಆಗಮಿಸುವರು. ಡಾ.ಜಿ.ತಿಪ್ಪೇಸ್ವಾಮಿ ಉಪಸ್ಥಿತರಿರುವರು. ಬೆಳಗ್ಗೆ 11.45 ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರೊ. ಪಿ. ಪರಮಶಿವಯ್ಯ, ಪ್ರೊ. ಬಸವರಾಜ ಎಸ್. ಬೆನ್ನಿ, ಪ್ರೊ. ಆಶಾಗೌಡ ಕರೇಗೌಡರ, ವಿಶೇಷ ಆಹ್ವಾನಿತರಾಗಿ ಪ್ರೊ. ಕೆ. ಸಿ. ಬಸವರಾಜು, ಡಾ. ಎನ್. ಪಿ. ಶಿವಾನಂದಯ್ಯ, ಡಾ. ಡಿ. ಶಿವನಂಜಯ್ಯ, ಡಾ. ಒ. ನಾಗರಾಜು, ಡಾ. ಆರ್. ಪುಟ್ಟರಾಜು ಅವರುಗಳು…
ತುಮಕೂರು: ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ವತಿಯಿಂದ ಜಿಲ್ಲಾಧ್ಯಕ್ಷ ಎ. ಮಹಾಲಿಂಗಯ್ಯನವರ ನೇತೃತ್ವದಲ್ಲಿ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಪ್ರಸಕ್ತ ಸಾಲಿನ 2025–26ರ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90% ರಷ್ಟು ಅಧಿಕ ಅಂಕ ಹಾಗೂ ಉನ್ನತ ಸ್ನಾತಕ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸಿದ ಜಿಲ್ಲೆಯ ಕುರುಬ ಜನಾಂಗದ ವಿದ್ಯಾರ್ಥಿಗಳು ಮೇ 25ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಮುಖ್ಯಶಿಕ್ಷಕರು/ ಪ್ರಾಂಶುಪಾಲರಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿಪ್ರಮಾಣಪತ್ರ, ಆಧಾರ್ ಕಾರ್ಡ್, ತಮ್ಮ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರ, ವಿದ್ಯಾರ್ಥಿಯ ಮತ್ತು ಪೋಷಕರ ಮೊಬೈಲ್ ನಂಬರ್, ವಿಳಾಸದೊಂದಿಗೆ ತುಮಕೂರಿನ ಜಿಲ್ಲಾ ಕಚೇರಿಗೆ ಖುದ್ದಾಗಿ ಅಥವಾ ಮುಚ್ಚಿದ ಲಕೋಟೆಯಲ್ಲಿ ಅಂಚೆ ಕಚೇರಿ ಮೂಲಕ ಎ. ಮಹಾಲಿಂಗಯ್ಯ, ಜಿಲ್ಲಾಧ್ಯಕ್ಷರು, ಕರ್ನಾಟಕ ಪ್ರದೇಶ ಯುವ ಕುರುಬರ ಸಂಘ (ರಿ.), ಅನಿತಾನಿಲಯ, 7ನೇ ಕ್ರಾಸ್, ಶ್ರೀರಾಮನಗರ, ತುಮಕೂರು ಇಲ್ಲಿಗೆ ಸಲ್ಲಿಸುವಂತೆ ಸಂಘದ ಕಾರ್ಯದರ್ಶಿ ವೈ. ಬಸವರಾಜು…
ಬೆಂಗಳೂರು: ಕರ್ನಾಟಕ ಸರ್ಕಾರದ ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) ಅವರು ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಸುಧಾಕರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯ ರಾಜಕಾರಣಿಯಾಗಿದ್ದರು. ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಮೂಲಗಳ ಪ್ರಕಾರ, ಅವರಿಗೆ ಹೃದಯ ಸಂಬಂಧಿ ಸಮಸ್ಯೆಗಳಿದ್ದವು ಎಂದು ತಿಳಿದುಬಂದಿದೆ. ಆರೋಗ್ಯ ಸ್ಥಿತಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯದ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಾದ್ಯಂತ ಶೋಕ ಮಡುಗಟ್ಟಿದೆ. ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ವ್ಯವಸ್ಥೆ ಮಾಡಿ, ನಂತರ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.…
ಕೊಡಿಗೇನಹಳ್ಳಿ: ಬಸ್ ನಿಲ್ದಾಣದಲ್ಲಿ ಕೆಳಗೆ ಬಿದ್ದಿದ್ದ ಚಿನ್ನದ ನೆಕ್ಲೇಸ್ ಅನ್ನು ಕಳವು ಮಾಡಿದ್ದ ಮಹಿಳೆಯೊಬ್ಬರನ್ನು ಕೊಡಿಗೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಿಂದೂಪುರ ಮೂಲದ ಸುಜಾತಮ್ಮ ಎಂಬುವವರು ಶುಕ್ರವಾರ ಬೆಳಿಗ್ಗೆ ದೊಡ್ಡ ಹೊಸಹಳ್ಳಿಯ ಜಾತ್ರೆಗೆ ತೆರಳಲು ಬಸ್ ಹತ್ತಿದ್ದರು. ಕೊಡಿಗೇನಹಳ್ಳಿ ಬಸ್ ನಿಲ್ದಾಣದ ಬಳಿ ಅವರಿಗೆ ವಾಂತಿಯಾದ ಕಾರಣ ಗಲಿಬಿಲಿಗೊಂಡಿದ್ದರು. ಈ ಸಂದರ್ಭದಲ್ಲಿ ಅವರ ಕತ್ತಿನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಅರಿವಿಲ್ಲದಂತೆ ಕೆಳಗೆ ಬಿದ್ದಿತ್ತು. ಬಸ್ ಮುಂದೆ ಹೋದ ನಂತರ ನೆಕ್ಲೇಸ್ ಕಳೆದುಹೋಗಿರುವುದು ಸುಜಾತಮ್ಮ ಅವರ ಗಮನಕ್ಕೆ ಬಂದಿದೆ. ತಕ್ಷಣವೇ ಅವರು ಕೊಡಿಗೇನಹಳ್ಳಿಗೆ ವಾಪಸ್ ಬಂದು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ. ಈ ವೇಳೆ ಅನುಮಾನಾಸ್ಪದವಾಗಿ ಕಂಡುಬಂದ ಗುಟ್ಟೆ ಗ್ರಾಮದ ಲಕ್ಷ್ಮಮ್ಮ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಳವು ಮಾಡಿದ್ದ ಚಿನ್ನದ ನೆಕ್ಲೇಸ್ ಅವರ ಬಳಿ ಇರುವುದು ಪತ್ತೆಯಾಗಿದೆ. ಪೊಲೀಸರು ನೆಕ್ಲೇಸ್ ಅನ್ನು ವಶಪಡಿಸಿಕೊಂಡು, ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ. ನಮ್ಮತುಮಕೂರಿನ…
ಕುಣಿಗಲ್: ತಾಲ್ಲೂಕಿನ ಜಿಗಿಣಿಪಾಳ್ಯದ ಬಳಿಯ ರಾಜ್ಯ ಹೆದ್ದಾರಿ 33ರಲ್ಲಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಮೂಲದ ಕುಮಾರ ನರಸಿಂಹ ಸ್ವಾಮಿ (65) ಮತ್ತು ಅವರ ಪತ್ನಿ ಗಾಯತ್ರಿ (63) ಮೃತಪಟ್ಟ ದಂಪತಿಗಳೆಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇತರ ಇಬ್ಬರು ವ್ಯಕ್ತಿಗಳ ವಿಳಾಸ ಮತ್ತು ವಿವರಗಳು ತಕ್ಷಣಕ್ಕೆ ಲಭ್ಯವಾಗಿಲ್ಲ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಎದುರುಗಡೆಯಿಂದ ಅತಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ತೀವ್ರ ಸ್ವರೂಪದ ಗಾಯಗಳಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ನಜ್ಜುಗುಜ್ಜಾಗಿದ್ದ ಕಾರಿನಿಂದ ಶವಗಳನ್ನು ಹೊರತೆಗೆಯಲು ಸಾಕಷ್ಟು ಹರಸಾಹಸ ಪಡಬೇಕಾಯಿತು. ಈ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ಡಾ. ಜಿ.ಎಸ್. ಸಿದ್ದಲಿಂಗಯ್ಯನವರ ಬದುಕು-ಬರಹ ವಿಚಾರ ಸಂಕಿರಣ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ದತ್ತಿ ಪ್ರಶಸ್ತಿ ಸಮಾರಂಭವನ್ನು ಮೇ 12 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಸಿದ್ಧಗಂಗಾ ಕಲಾ, ವಾಣಿಜ್ಯ, ವಿಜ್ಞಾನ ಕಾಲೇಜಿನ ಶ್ರೀ ಶಿವಕುಮಾರ ಸ್ವಾಮೀಜಿಯವರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸೊಂಡಲಗೆರೆ ಮಲ್ಲಮ್ಮ ಶ್ರೀ ನಾರಸೀಗೌಡ ನೆನಪಿನ ಸಾಹಿತ್ಯ ದತ್ತಿಗಳಿಗೆ ಕೊರಟಗೆರೆ ತಾಲ್ಲೂಕಿನ ಯಲಚಗೆರೆ ಉಮೇಶ್ ತುಮಕೂರು ತಾಲ್ಲೂಕಿನ ಚಿಕ್ಕನಾರವಂಗಲ ರೇಖಾ ಹಿಮಾನಂದ್, ತಿಪಟೂರು ತಾಲ್ಲೂಕಿನ ಕೆ.ಬಿ. ಗೀತ ಆಯ್ಕೆಯಾಗಿದ್ದಾರೆ. ರತ್ನಮ್ಮ ಜಿ. ರಾಜನ್ ದತ್ತಿಗೆ ಎಲ್.ಎನ್. ಉಮಾಶಂಕರ್ ಆಯ್ಕೆಯಾಗಿದ್ದು ಪ್ರಶಸ್ತಿ ಪುರಸ್ಕೃತರಿಗೆ ಸಂಸ್ಕೃತಿ ಚಿಂತಕ, ಸಾಹಿತಿಗಳಾದ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ವಹಿಸುತ್ತಾರೆ. ಪ್ರೊ. ಎಸ್.ಜಿ. ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಪ್ರೊ. ಜಿ.ಎಸ್. ಸಿದ್ದಲಿಂಗಯ್ಯನವರ ಬದುಕು–ಬರಹದ ಬಗ್ಗೆ ವಿಚಾರ ಸಂಕಿರಣ ನಡೆಯಲಿದ್ದು, ಜಿಎಸ್ ಎಸ್ ಸಿದ್ದಲಿಂಗಯ್ಯನವರ ಬದುಕು ಮತ್ತು ಆಡಳಿತದ ಬಗ್ಗೆ…
ತುಮಕೂರು: ಜಿಲ್ಲೆಯ ಸಿರಾ ತಾಲೂಕು ಚಿಕ್ಕನಹಳ್ಳಿಯಲ್ಲಿರುವ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ದಾಖಲಾತಿ ಪ್ರಾರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಸಾಮಾನ್ಯ ವಿದ್ಯಾರ್ಥಿಗಳು ಪಿಯುಸಿಯಲ್ಲಿ ಕನಿಷ್ಠ ಶೇ. 50 ಅಂಕ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ–1/ವಿಕಲಚೇತನ ವಿದ್ಯಾರ್ಥಿಗಳು ಕನಿಷ್ಠ ಶೇ. 45ರಷ್ಟು ಅಂಕ ಗಳಿಸಿರಬೇಕು. ವಿದ್ಯಾರ್ಥಿಗಳಿಗೆ ಡಿ.ಎಲ್.ಇಡಿ ತರಬೇತಿ ಪಡೆದ ನಂತರ 1 ರಿಂದ 5ನೇ ತರಗತಿ ಹಾಗೂ ಪದವೀಧರ ವಿದ್ಯಾರ್ಥಿಗಳಿಗೆ 6 ರಿಂದ 8ನೇ ತರಗತಿವರೆಗೆ ಬೋಧನೆ ಮಾಡಲು ಅವಕಾಶವಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾವಕಾಶವಿದ್ದು, ಸಾಮಾನ್ಯ ವಿದ್ಯಾರ್ಥಿಗಳಿಗೆ 3,500 ರೂ.ಗಳ ಪ್ರವೇಶ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿದ್ಯಾರ್ಥಿವೇತನ ನೀಡಲಾಗುವುದು. ದಾಖಲಾತಿ ಪಡೆಯಲು ಮೇ 29 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂ. 9448842574, 9741507942, 9480250487ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆ ಪ್ರಾಂಶುಪಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ತುರುವೇಕೆರೆ: ಲಯನ್ಸ್ ಕ್ಲಬ್, ಕಲ್ಪತರು ಚಾರಿಟಬಲ್ ಟ್ರಸ್ಟ್, ಬಿಡಬ್ಲ್ಯು ಲಯನ್ಸ್ ಹಾಸ್ಪಿಟಲ್ ಬೆಂಗಳೂರು, ಜಿಲ್ಲಾ ಅಂಧತ್ವ ನಿವಾರಣಾ ಕೇಂದ್ರ, ತಾಲ್ಲೂಕು ಆರೋಗ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ತಾಲ್ಲೂಕಿನ ಹೆಗ್ಗೆರೆಯ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಮೇ 10 ರಂದು ಬೆಳಿಗ್ಗೆ 9 ಗಂಟೆಯಿಂದ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ, ರಕ್ತದೊತ್ತಡ, ಶುಗರ್ ಮತ್ತಿತರ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಶ್ರೀ ವೆಂಕಟೇಶ್ವರ ಸೇವಾ ಟ್ರಸ್ಟ್ನ ಅಧ್ಯಕ್ಷರಾದ ಎಚ್.ಎನ್.ಗಂಗಾಧರಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಈ ಸಂದರ್ಭದಲ್ಲಿ ಡಾ.ಚೌದ್ರಿ ನಾಗೇಶ್, ಡಾ.ಹರ್ಷಿತ್, ಎಚ್.ಆರ್.ರಂಗನಾಥ್, ಡಾ.ಎ.ನಾಗರಾಜು, ಕೀಲು ಮತ್ತು ಮೂಳೆ ತಜ್ಞರಾದ ಡಾ.ಸುನೀಲ್ಕುಮಾರ್ ಮತ್ತಿತರರು ಭಾಗವಹಿಸುವರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC