Author: admin

ಸರಗೂರು:  ಓದುವುದು ಜೀವನದ ಮುಖ್ಯ ಉದ್ದೇಶವಾಗಬೇಕು. ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ’ ಎಂದು ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಮಹದೇವಸ್ವಾಮಿ ಹೇಳಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ  ಗ್ರಂಥಾಲಯ ಪಿತಾಮಹ ಹಾಗೂ ಗ್ರಂಥಪಾಲಕರ ದಿನಾಚರಣೆಯನ್ನು  ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಸಂಘ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಾಯದೊಂದಿಗೆ ಮಂಗಳವಾರದಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರಗೂರು ಸಮೃದ್ಧಿಯಾದ ತಾಲೂಕು. ಈ ತಾಲೂಕಿನಿಂದ ಹಲವಾರು ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳಾಗಿದ್ದಾರೆ. ಕೆ.ಎ.ಎಸ್ ಹಾಗೂ ಐ.ಎ.ಎಸ್ ಓದುವ ಗುರಿಯನ್ನು ಹೊಂದುವ ಮೂಲಕ ಜೀವನದ ದಿಕ್ಕನ್ನು ನಾವು ಗುರುತಿಸಿಕೊಳ್ಳಬೇಕಾಗಿದೆ’ ಎಂದರು ವನಜಲಸಿರಿ ನಾಡು ಪ್ರಸಿದ್ಧ ದೇವಾಲಯಗಳು ಹಾಗೂ ಜಲಾಶಯಗಳು ಹಾಗೂ ಸಮೃದ್ಧಿ ಸಂಪನ್ಮೂಲಗಳನ್ನು ಹೊಂದಿದೆ. ಇಂಥ ತಾಲೂಕಿನ ಇರುವುದು ನಮ್ಮ ಅದೃಷ್ಟ. ಮುಂದಿನ ದಿನಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ವಿದ್ಯಾರ್ಥಿಗಳು ಪೂರಕವಾಗಿ ಕೆಲಸ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು. ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಉತ್ತಮ ವ್ಯವಸ್ಥೆ ಇದ್ದು, ಸದುಪಯೋಗ ಪಡೆಯಬೇಕು. ಮುಂದಿನ ದಿನಗಳಲ್ಲಿ ತಾಲ್ಲೂಕು ಪಂಚಾಯಿತಿಯಿಂದ ಗ್ರಂಥಾಲಯಕ್ಕೆ…

Read More

ಪಾವಗಡ:  ಸಚಿವ ಕೆ .ಎನ್. ರಾಜಣ್ಣ ಸಚಿವರಾಗಿ ಮುಂದುವರೆಸಬೇಕೆಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕ ಜಿಲ್ಲಾ ಅಧ್ಯಕ್ಷ ಪಾಳೇಗಾರ್ ಲೋಕೇಶ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಒತ್ತಾಯಿಸಿದ್ದಾರೆ. ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಶಕ್ತಿ ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಏಳಿಗೆಗಾಗಿ ಸದಾ ಶ್ರಮಿಸುತ್ತಿರುವವರು, ಸಹಕಾರ ಕ್ಷೇತ್ರಕ್ಕೆ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ತಮ್ಮದೇ ಆದ ಕೊಡುಗೆಯನ್ನು ನೀಡಿ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಪ್ರಾಮಾಣಿಕ ಉತ್ತಮ ಸೇವೆಯನ್ನು ಸಲ್ಲಿಸಿರುವ ಕೆ. ಎನ್. ರಾಜಣ್ಣ ಅವರ ರಾಜೀನಾಮೆಯನ್ನು ಪಡೆದಿರುವ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಸರ್ಕಾರ ರಾಜಣ್ಣ ಅವರನ್ನು ಸಚಿವರಾಗಿ ಮುಂದುವರಿಸದಿದ್ದಲ್ಲಿ ರಾಜ್ಯದಾದ್ಯಂತ ವಾಲ್ಮೀಕಿ ಸಮಾಜ ಹಾಗೂ ಶೋಷಿತ ಸಮುದಾಯಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಹಾಗೂ ಇಂತಹ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಗುವುದು ಎಂದು ತಿಳಿಸಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ನಾವು ನೀವೆಲ್ಲಾ 4–5 ನೇ ತರಗತಿ ಯಲ್ಲಿ ಇರುವಾಗಲೇ ನಮ್ಮ ವಿಜ್ಞಾನ ಶಿಕ್ಷಕರು ಬೆಳಕು ಒಂದು ಸೆಕೆಂಡಿಗೆ 3 ಲಕ್ಷ ಕಿಲೋಮೀಟರ್ ವೇಗದಲ್ಲಿ ಚಲಿಸುತ್ತದೆ ಎಂದು ಬೋಧಿಸಿರುವುದು ಸರಿಯಷ್ಟೆ. ಒಮ್ಮೆ ನೆನಪು ಮಾಡಿಕೊಳ್ಳಿ, ಹಾಗೆಯೇ ನಾವು ಬೆಳೆಯುತ್ತಾ ಕಾಲಾಂತರಗಳಲ್ಲಿ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಕೆಲವು ವಿಜ್ಞಾನ ಲೇಖನಗಳ ಅಂಕಣಗಳನ್ನು ಓದಿರುತ್ತೀರಿ ಬೆಳಕಿನ ವೇಗದ ಬಗ್ಗೆ; ಅದು ಸೆಕೆಂಡಿಗೆ 3 ಲಕ್ಷ ಕಿಲೋಮೀಟರ್ ವೇಗದಲ್ಲಿ ಚಲಿಸುತ್ತದೆ ಎಂದು. ಇದನ್ನು ವಿಜ್ಞಾನ ಹೇಳಿದ್ದು, ವಿಜ್ಞಾನಿಗಳ ಸತತ ಸಂಶೋಧನೆಯಿಂದ ಸಾಬೀತಾಗಿರುವ ಈ ನಿಯಮವನ್ನು ನಾವು ಒಪ್ಪಲೇ ಬೇಕು. ಹೀಗಿರುವಾಗ ನನ್ನ ಕಲ್ಪನೆ ಮೂಲಕ ಬಂದಿದ್ದ ಒಂದು ವಿಷಯವನ್ನು ಈಗ ಒಂದು ಆಲೋಚನೆ ಮೂಲಕ ವಿಮರ್ಷೆ ಮಾಡೋಣ… ಅದು ಏನೆಂದರೆ ಉದಾಹರಣೆಗೆ ಒಂದು ಹಣತೆ ದೀಪ ಬೆಳಗಿಸೋಣ, ಒಂದು ಪುಟ್ಟ ಹಣತೆಯ ಮಂದಗತಿಯ ಬೆಳಕು ಅಂದರೆ ತೀಕ್ಷಣೆ ತೀರಾ ಕಡಿಮೆ ಇರುವ ಬೆಳಕು ಕೂಡ ಒಂದು ಸಕೆಂಡಿಗೆ 3 ಲಕ್ಷ ಕಿಲೋಮೀಟರ್ ಚಲಿಸಬಲ್ಲದೇ? ಹಾಗೆಯೇ ಒಂದು 1.5 ವೋಲ್ಟ್…

Read More

ತುಮಕೂರು: ಕೆ.ಎನ್. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿರುವುದು ತುಮಕೂರಿನಾದ್ಯಂತ ಅವರ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಕುಣಿಗಲ್‌, ಮಧುಗಿರಿ, ಕೊರಟಗೆರೆ ಸೇರಿದಂತೆ ಹಲವು  ಪ್ರದೇಶಗಳಲ್ಲಿರುವ ರಾಜಣ್ಣ ಬೆಂಬಲಿಗರು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವನ್ನು ಖಂಡಿಸಿದ್ದಾರೆ,  ರಾಜಣ್ಣ ಅಬಿಮಾನಿಗಳು, ಬೆಂಬಲಿಗರು, ಕಾರ್ಯಕರ್ತರು ತುಮಕೂರು ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ತುಮಕೂರಿನ ಟೌನ್‌ ಹಾಲ್ ಮುಂಭಾಗ ಜಮಾಯಿಸಿದ್ದ ಸಾವಿರಾರು ಅಭಿಮಾನಿಗಳು, ಕೈಯಲ್ಲಿ ರಾಜಣ್ಣ ಫೋಟೋ ಇರುವ ಫ್ಲೆಕ್ಸ್ ಹಿಡಿದು ಘೋಷಣೆ ಕೂಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿವರೆಗೂ ಜಾಥಾ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ. ಮಂಗಳವಾರ ಮಧುಗಿರಿಯಲ್ಲಿ ದೊಡ್ಡ ಡ್ರಾಮವೇ ನಡೆದಿತ್ತು. ಬೆಂಬಲಿಗನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದ. ಹೀಗಾಗಿ ತುಮಕೂರಿನಲ್ಲಿ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೊರಟಗೆರೆ: ತಾಲ್ಲೂಕಿನ ಮಾವತ್ತೂರು ಗ್ರಾಮ ಪಂಚಾಯತಿ ಕೊರಟಗೆರೆ ತಾಲೂಕಿನಲ್ಲಿಯೇ ಗ್ರಾಮಗಳ ಸರ್ವಾಂಗೀಣ ಅಭಿವೃದ್ದಿ ಕಾರ್ಯಗಳಲ್ಲಿ ಉತ್ತಮ ಪಂಚಾಯಿತಿ ಎಂದು ರಾಜ್ಯ ಮಟ್ಟದ ಪ್ರಶಸ್ತಿ ಬಂದಿದ್ದು ಕೆಲವರ ಸುಳ್ಳು ಹೇಳಿಕೆಗಳು ಮನಸ್ಸಿಗೆ ನೋವುಂಟು ಮಾಡಿದೆ ಎಂದು ಅಧ್ಯಕ್ಷೆ ಅನಿತಾಲಕ್ಷ್ಮಿ ನಾಗರಾಜು ಬೇಸರ ವ್ಯಕ್ತಪಡಿಸಿದರು. ಮಾವತ್ತೂರು ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಪಂಚಾಯಿತಿ ಅಧ್ಯಕ್ಷೆ ಮತ್ತು ಹುರುಳುಗೆರೆ ಕ್ಷೇತ್ರದ ಸದಸ್ಯೆಯಾಗಿದ್ದು ಹುರುಳುಗೆರೆ ಗ್ರಾಮದ ಶಾಲೆಗೆ ಕಾಂಪೌಂಡ್, ಶೌಚಾಲಯ, ಸಿಸಿ ರಸ್ತೆ ಹಾಗೂ ಚರಂಡಿಗಳ ಅಭಿವೃದ್ದಿ ಕಾಮಗಾರಿಗಳನ್ನು ಮಾಡಲಾಗಿದೆ, ಆದರೆ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಹೊಲದಲ್ಲಿ ಮನೆ ಕಟ್ಟಿಕೊಂಡಿರುವ 12 ಮನೆಗಳ ಜನರು ಓಡಾಡಲು ಖಾಸಗಿ ಜಮೀನಿನಲ್ಲಿ ರಸ್ತೆ ಹಾದು ಹೋಗುವುದರಿಂದ ಹಲವಾರು ವರ್ಷಗಳಿಂದ ರಸ್ತೆ ಸಮಸ್ಯೆ ಇದೆ, ಈಗ ಆ ಸಮಸ್ಯೆಯನ್ನು ಜಮೀನು ಮಾಲೀಕರು ಮತ್ತು ಜನರು ಬಗೆಹರಿಕೊಂಡಿದ್ದು ರಸ್ತೆ ಮಾಡಿಕೊಡಲು ಪಂಚಾಯಿತಿಯು ಬದ್ದವಾಗಿದೆ, ಅದರೆ ಕೆಲವರು ವಿನಾಕಾರಣ ಯಾವ ಅಭಿವೃದ್ದಿಯೂ ಆಗಿಲ್ಲ ಎನ್ನುವ ಸುಳ್ಳು ಹೇಳಿಕೆಗಳನ್ನು ನೀಡುತ್ತಿರುವುದು ಸತ್ಯಕ್ಕೆ…

Read More

ಬೀದರ್: ನಗರದ ಜಾನಸನ್ ಘೋಡೆ ಅವರನ್ನು ಕಿಸಾನ್ ಕಾಂಗ್ರೆಸ್ ರಾಷ್ಟ್ರೀಯ ಜಂಟಿ ಸಂಯೋಜಕರಾಗಿ ನೇಮಕ ಮಾಡಲಾಗಿದೆ. ಕಿಸಾನ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸುಖ್ ಪಾಲ್ ಸಿಂಗ್ ಖೈರಾ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಜಾನಸನ್ ಘೋಡೆ ಎರಡು ದಶಕದಿಂದ ಕಾಂಗ್ರೆಸ್ ನಲ್ಲಿದ್ದಾರೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಕಾಂಗ್ರೆಸ್ ಬೀದರ್ ನಗರ ಯುವ ಘಟಕದ ಉಪಾಧ್ಯಕ್ಷ ‌ ರಾಜ್ಯ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಸೇರಿ ಪಕ್ಷದ ವಿವಿಧ ಹುದ್ದೆಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಪಕ್ಷ ನಿಷ್ಠೆಗೆ ಈಗ ಕಿಸಾನ್ ಕಾಂಗ್ರೆಸ್ ರಾಷ್ಟ್ರೀಯ ಸಂಯೋಜಕ ಹುದ್ದೆ ಒಲಿದಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೊರಟಗೆರೆ: ಮಾಜಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವ ಹಿನ್ನೆಲೆ ಕೊರಟಗೆರೆ ತಾಲೂಕಿನ ಅಹಿಂದ ಸಂಘಟನೆಗಳ ಒಕ್ಕೂಟ ಮತ್ತು ಕೆ ಎನ್ ಆರ್ ಅಭಿಮಾನಿಗಳ ಬಳಗ ತುಮಕೂರಿನಲ್ಲಿ ನಡೆಯುವ ಪ್ರತಿಭಟನೆಗೆ ಜಿಲ್ಲಾದ್ಯಂತ ಅಭಿಮಾನಿಗಳು ಕಾರ್ಯಕರ್ತರು ಬರುವಂತೆ ಕರೆ ನೀಡಿದೆ. ಕೊರಟಗೆರೆ ಪಟ್ಟಣ ಪ್ರವಾಸಿ ಮಂದಿರದಲ್ಲಿ ತಾಲೂಕು ಅಹಿಂದ ಸಂಘಟನೆಯು ಏರ್ಪಡಿಸಿದ್ದ ಪ್ರತಿಕಾ ಗೋಷ್ಟಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹನುಮಾನ್ ಮಾತನಾಡಿ ಕಳೆದ 40 ವರ್ಷಗಳಿಂದ ಕೆ.ಎನ್. ರಾಜಣ್ಣ ಸಹಕಾರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಮಾಡಿ ಬಡವರಿಗೆ ಮತ್ತು ರೈತರಿಗೆ ಬಹಳಷ್ಟು ಒಳ್ಳೆಯದನ್ನು ಮಾಡಿದ್ದಾರೆ, ಈಗ ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಮಾಡಿರುವ ಅನ್ಯಾಯವನ್ನು ಸರಿಪಡಿಸಿ ಕೂಡಲೆ ಅವರನ್ನು ಮತ್ತೆ ಸಹಕಾರ ಸಚಿವರನ್ನಾಗಿ ಮಾಡಬೇಕು ಈ ಸಂಭಂದ ಇಂದು ಬೆಳಿಗ್ಗೆ 10 ಗಂಟೆಗೆ ತುಮಕೂರಿನ ಟೌನ್ ಹಾಲ್ ವೃತ್ತದಿಂದ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಅಹಿಂದ ವರ್ಗದವರು, ಕೆ.ಎನ್.ಆರ್. ಅಭಿಮಾನಿಗಳು ಹಾಗೂ ಎಲ್ಲಾ ಸಹಕಾರ ಬಂಧುಗಳು ಪ್ರತಿಭಟನೆಗೆ ಆಗಮಿಸುವಂತೆ ಮನವಿ ಮಾಡಿದರು. ಬರಕ ವಿಎಸ್‌ಎಸ್‌ಎನ್…

Read More

ಯಶ್ ತಾಯಿ  ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ  ‘ಕೊತ್ತಲವಾಡಿ’ಸಿನಿಮಾ ಆಗಸ್ಟ್ 1ರಂದು ರಿಲೀಸ್ ಆಯಿತು. ಇದೀಗ ಚಿತ್ರದ ಬಗ್ಗೆ ನೆಗೆಟಿವ್ ವಿಮರ್ಶೆ ಹಂಚುವವರ ವಿರುದ್ಧ ಪುಷ್ಪಾ ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ. ಯೂಟ್ಯೂಬ್ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು,  ನಮ್ಮ ಸಿನಿಮಾದ ಪ್ರಚಾರ ನೋಡಿ ಕೆಲವರು ನೆಗೆಟಿವ್ ಟಾಕ್​ ಹಬ್ಬಿಸಿದ್ದರು. ಸಿನಿಮಾ ಮಾಡುವವರಿಗೆ ನಿಜಕ್ಕೂ ಕಷ್ಟ ಇದೆ. ಇಲ್ಲಿ ನೂರು ತೊಂದರೆ ಇದೆ. ಮುಖ್ಯಮಂತ್ರಿ ಎದುರು ಹೋಗ್ತೀನಿ. ಇದನ್ನು ತಡೆಯಿರಿ ಎಂದು ಕೇಳುತ್ತೇನೆ. ಇದು ಸರ್ಕಾರದ ಕೆಲಸ’ ಎಂದು ಪುಷ್ಪಾ ಹೇಳಿದ್ದಾರೆ. ಸಿನಿಮಾ ನೋಡಿ ಬರೆದರೆ ತೊಂದರೆ ಇಲ್ಲ. ಆದರೆ, ಸುಮಾರು ಜನರು ಸಿನಿಮಾ ನೋಡದೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುತ್ತಿದ್ದಾರೆ. ಇದರಿಂದ ಅನೇಕರಿಗೆ ತೊಂದರೆ ಆಗುತ್ತಿದೆ. ನಾವು ದೂರು ತೆಗೆದುಕೊಂಡು ಬಂದಾಗ ಇದನ್ನು ಸ್ವೀಕರಿಸಬೇಕು. ಇಲ್ಲವಾದಲ್ಲಿ ರಾಕ್​ ಲೈನ್​ ವೆಂಕಟೇಶ್​ಗೆ ಹೇಳಿ ಉಗ್ರ ಹೋರಾಟ ಮಾಡುತ್ತೇವೆ’ ಎಂದಿದ್ದಾರೆ. ಕನ್ನಡ ಸಿನಿಮಾ ಓಡದೇ ಇರುವುದಕ್ಕೆ ಇಂತಹ ಕುತಂತ್ರಗಳೇ ಕಾರಣ ಎಂದಿರುವ…

Read More

ಬೀದರ್: ಆಟೋದಲ್ಲಿ  ಬಿಟ್ಟು ಹೋದ ಬೆಲೆಬಾಳುವ ಬಟ್ಟೆಗಳನ್ನು  AI ಸಿ.ಸಿ. ಟಿವಿಯ ಸಹಾಯದ ಮೂಲಕ ವಾರಿಸುದಾರರಿಗೆ ತಲುಪಿಸಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ನಿವಾಸಿಯೊಬ್ಬರು ರಿಲಯನ್ಸ್ ಟ್ರೇಂಡ್ಸ್ ನಲ್ಲಿ 10 ಸಾವಿರ ರೂಪಾಯಿ ಬೆಲೆಬಾಳುವ ಬಟ್ಟೆಗಳನ್ನು ಖರೀದಿಸಿದ್ದರು. ಬಳಿಕ ಆಟೋವೊಂದರಲ್ಲಿ ಗುಂಪಾದಿಂದ ಬೀದರ್ ನ ಗುರುದ್ವಾರ್ ಕಮಾನವರೆಗೆ ಪ್ರಯಾಣಿಸಿದ್ದು, ಆಟೋ ದಿಂದ ಇಳಿಯುವ ವೇಳೆ ಬಟ್ಟೆಯ ಬ್ಯಾಗ್ ನ್ನು ಆಟೋದಲ್ಲೇ ಮರೆತು ಬಿಟ್ಟಿದ್ದರು. ಸ್ವಲ್ಪ ಸಮಯದ ಬಳಿಕ ತಾವು ಖರೀದಿಸಿರುವ ಬಟ್ಟೆ ಆಟೋದಲ್ಲೇ ಮರೆತುಬಿಟ್ಟಿರುವುದು ಅರಿವಾಗಿದೆ. ಅವರು ತಕ್ಷಣವೇ ಬೀದರದ AI ಸಿ.ಸಿ ಟಿವಿ ಕಮಾಂಡ ಸೆಂಟರ್ ಗೆ ಆಗಮಿಸಿ ಮಾಹಿತಿ ನೀಡಿದ್ದಾರೆ.  AI ಸಿ.ಸಿ ಟಿವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ  ಹರ್ಷವರ್ಧನ ಡಾ.ಬಿ.ಆರ್ ಅಂಬೇಡ್ಕರ ವೃತ್ತದ ಹತ್ತಿರ ವಾಹನ ಸಂಚರಿಸುತ್ತಿದ್ದನ್ನು ಗಮನಿಸಿ , ಸಂಚಾರಿ ಠಾಣೆ ಪೊಲೀಸ್ ಸಿಬ್ಬಂದಿ ಶ್ರೀಕಾಂತ್ ಅವರ ಸಹಾಯದ ಮೂಲಕ ಆಟೋವನ್ನು ಪತ್ತೆ ಹಚ್ಚಿದ್ದಾರೆ. ಬಳಿಕ ಬೀದರ ಜಿಲ್ಲಾ ಪೊಲೀಸ್ ಅಧಿಕ್ಷಕರ ಕಛೇರಿ ಸಿ.ಸಿ ಟಿವಿ…

Read More

ಕೊರಟಗೆರೆ: ರಾಜ್ಯದ ಬಹುತೇಕ ಕಡೆಗಳಲ್ಲಿ ನಮ್ಮ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚುತ್ತಿವೆ, ಈ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುವಂತಹ ಶಿಕ್ಷಕರು ಗ್ರಾಮಗಳಲ್ಲಿ ಮನೆ –ಮನೆಗೆ ತೆರಳಿ ಮಕ್ಕಳನ್ನು ಶಾಲೆಗೆ ಬನ್ನಿ ಎಂದು ಬೇಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದ್ದು ವಿಷಾದನೀಯ ಎಂದು ಎಲೆರಾಂಪುರ ಕುಂಚಿಟಿಗರ ಮಹಾಸಂಸ್ಥಾನ ಮಠದ ಪೀಠಾದ್ಯಕ್ಷ ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ತಿಳಿಸಿದರು. ಅವರು ತಾಲೂಕಿನ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಸಮುದಾಯ ಭವನದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ತಾಲೂಕಿನ ೪೪ ಪ್ರೌಢಶಾಲೆಗಳ ಎಸ್.ಎಸ್.ಎಲ್.ಸಿ ಮತ್ತು ೧೧ ಪಿಯು ಕಾಲೇಜುಗಳ ೨೦೨೪–೨೫ ನೇ ಸಾಲಿನ ಪರೀಕ್ಷೇಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದಿವ್ಯ ಸಾನಿದ್ಯವಹಿಸಿ ಮಾತನಾಡಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿದರೆ ತಮ್ಮ ಕರ್ತವ್ಯ ಮುಗಿಯಿತು ಎಂದು ಕೊಂಡಿದ್ದಾರೆ ಇದು ಸರಿಯಲ್ಲ ಇಂದು ಮಕ್ಕಳು ಕೇವಲ ೧೦ ನೇ ತರಗತಿಯ ವರೆಗೆ ಪೋಷಕರ ಮತ್ತು ಶಿಕ್ಷರ ಹಿಡಿತದಲ್ಲಿ ಮಕ್ಕಳು ಇರುತ್ತಾರೆ ನಂತರ ಅವರ…

Read More