Author: admin

ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯಿಂದ ಮಧುಗಿರಿ ಕಡೆಗೆ ಬರುತ್ತಿದ್ದ ಲಾರಿಯನ್ನು ಮಿಡಿಗೇಶಿ ಹೋಬಳಿಯ ಆಂಧ್ರ ಗಡಿ ಭಾಗದ ಚಂದ್ರಬಾವಿ ಚೆಕ್‌ಪೋಸ್ಟ್ ಬಳಿ ಪೊಲೀಸರು ತಡೆದು ತಪಾಸಣೆ ನಡೆಸಿದರು. ಈ ವೇಳೆ ಯಾವುದೇ ಅಧಿಕೃತ ದಾಖಲೆ ಅಥವಾ ಅನುಮತಿಯಿಲ್ಲದೆ ಅಕ್ರಮವಾಗಿ 27 ಜಾನುವಾರುಗಳನ್ನು (ಎಮ್ಮೆ, ಕೋಣ, ಹೋರಿ ಮತ್ತು ಹಸುಗಳು) ಸಾಗಿಸುತ್ತಿರುವುದು ಪತ್ತೆಯಾಗಿದೆ. ಕಾರ್ಯಾಚರಣೆ ನಡೆಸಿದ ಮಿಡಿಗೇಶಿ ಪೊಲೀಸರು ಲಾರಿ ಚಾಲಕ ಚೇತನ್, ಕ್ಲೀನರ್ ರಘು ಮತ್ತು ತಬರೀಸ್ ಎಂಬುವವರನ್ನು ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆಯ ವೇಳೆ ಬಂಧಿತರು ದಾವಣಗೆರೆ, ಬಳ್ಳಾರಿ ಹಾಗೂ ಚಿತ್ರದುರ್ಗ ಭಾಗಗಳಿಂದ ಜಾನುವಾರುಗಳನ್ನು ತರುತ್ತಿರುವುದಾಗಿ ತಿಳಿಸಿದ್ದಾರೆ. ವಶಪಡಿಸಿಕೊಂಡ ಜಾನುವಾರುಗಳನ್ನು ಸುರಕ್ಷಿತವಾಗಿ ಕ್ಯಾತ್ಸಂದ್ರದ ಗೋಶಾಲೆಗೆ ರವಾನಿಸಲಾಗಿದೆ ಎಂದು ಪಿಎಸ್‌ಐ ರವೀಂದ್ರ ಅವರು ಮಾಹಿತಿ ನೀಡಿದ್ದಾರೆ. ಆರೋಪಿಗಳ ವಿರುದ್ಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ ದೂರಿದರು. ಗುಬ್ಬಿ ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ವಿಶೇಷ ಪೂಜೆಯನ್ನು ಸಲ್ಲಿಸಿ ಮಾತನಾಡಿದ ಅವರು,  ಕಾಂಗ್ರೆಸ್ ಸರ್ಕಾರ ನೀಡುತ್ತಿರುವಂತ ಅಭಿವೃದ್ಧಿ ಕೆಲಸಗಳು ನನಗೆ ಶ್ರೀ ರಕ್ಷೆ ಆಗಿತ್ತು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಮುಂದಿನ ದಿನದಲ್ಲೂ ನಾವು ನೀಡುವಂತಹ ಆಶ್ವಾಸನೆಗಳನ್ನು ಇಡೇರಿಸುವ ಮೂಲಕ ಪದವಿ ಹೊಂದಿರುವ ಯುವಕರಿಗೆ ಉದ್ಯೋಗ ಸೇರಿದಂತೆ ಹಲವು ರೀತಿಯ ಉದ್ಯೋಗಕ್ಕೂ ಕೂಡ ಹೆಚ್ಚಿನ ಮುನ್ನಡೆಯನ್ನು ನೀಡಿ ಕೆಲಸ ಮಾಡಲು ಬದ್ಧವಾಗಿದ್ದೇನೆ ಎಂದರು. ನಾವು ಹೋದ ಕಡೆಯಲ್ಲ ಉತ್ತಮ ಬೆಂಬಲ ಸಿಕ್ಕಿದ್ದು ಗುಬ್ಬಿ ತಾಲೂಕಿನಲ್ಲೂ ಕೂಡ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಈಗಾಗಲೇ ನೋಂದಾವಣೆಯನ್ನು ಮಾಡಿ ಕೊಂಡಿದ್ದಾರೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಕೊಪ್ಪ ದೇವರಾಜು, ಪಟ್ಟಣ ಪಂಚಾಯಿತಿ ಮಾಜಿ…

Read More

ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಫೆಬ್ರವರಿ 9 ರಂದು ಬೃಹತ್ ‘ಹಿಂದೂ ಸಮಾಜೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಮುಖಂಡ ಲೋಕೇಶ್ ಅವರು ತಿಳಿಸಿದ್ದಾರೆ. ಭವ್ಯ ಶೋಭಾಯಾತ್ರೆ ಮತ್ತು ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಅದ್ಧೂರಿ ಶೋಭಾಯಾತ್ರೆ ಜರುಗಲಿದೆ. ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಸ್ಥಾನದಿಂದ ಮೆರವಣಿಗೆಗೆ ಚಾಲನೆ ಸಿಗಲಿದೆ. ಕಲಾತಂಡಗಳು: ಬಸವ ವೀರಭದ್ರ ಡೊಳ್ಳು ಕುಣಿತ ಹಾಗೂ ವೀರಗಾಸೆ ತಂಡಗಳಿಂದ ಸಾಂಸ್ಕೃತಿಕ ಪ್ರದರ್ಶನ. ಉತ್ಸವ ಮೂರ್ತಿಗಳು: ಕೆಂಪಮ್ಮ ದೇವಿ, ಕಲ್ಲೇಶ್ವರ ಸ್ವಾಮಿ ಮತ್ತು ಚಿಕ್ಕಮ್ಮ ದೇವಿ ದೇವರುಗಳ ಉತ್ಸವ. ದೇಶಭಕ್ತಿಯ ಪ್ರತೀಕ: ಭಾರತಾಂಬೆಯ ಭವ್ಯ ಚಿತ್ರಪಟಗಳ ಮೆರವಣಿಗೆ. ಈ ಧಾರ್ಮಿಕ ಸಭೆಯಲ್ಲಿ ಕೆರೆಗೋಡಿ ರಂಗಾಪುರ ಸುಕ್ಷೇತ್ರದ ಶ್ರೀ ಗುರು ಪರದೇಶಿ ಕೇಂದ್ರೀಯ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಭಾಷಣಕಾರರಾಗಿ ವಿದ್ಯಾರ್ಥಿ ಪರಿಷತ್ ಮುಖಂಡರಾದ ಮಾಚೇನಹಳ್ಳಿ ಪೃಥ್ವಿ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ವಿಚಾರವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದು ಮಹತ್ವದ ಹೇಳಿಕೆ ನೀಡಿದ್ದಾರೆ. “ಹೈಕಮಾಂಡ್ ಸುಮ್ಮನಿದ್ದರೆ ನಾವೇನು ಅರ್ಥ ಮಾಡಿಕೊಳ್ಳಬೇಕು?” ಎಂದು ಪ್ರಶ್ನಿಸುವ ಮೂಲಕ ಅವರು ಕುತೂಹಲ ಮೂಡಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಏನು ನಡೆದಿದೆ ಎಂಬುದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಹೈಕಮಾಂಡ್‌ ಗೆ ಮಾತ್ರ ತಿಳಿದಿದೆ. ಹೈಕಮಾಂಡ್‌ ನವರು ಏನೂ ಹೇಳದೆ, ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಿದ್ದರೆ ಅದರ ಬಗ್ಗೆ ನಾವು ಏನೂ ಹೇಳಲು ಸಾಧ್ಯವಿಲ್ಲ. ಹೈಕಮಾಂಡ್ ಕರೆ ಬಂದರೆ ಮಾತ್ರ ಎಲ್ಲವೂ ಇತ್ಯರ್ಥವಾಗಲಿದೆ,” ಎಂದು ತಿಳಿಸಿದರು. ವೈಯಕ್ತಿಕ ಹೇಳಿಕೆಗಳಿಗೆ ಕಿವಿಗೊಡಬೇಡಿ: ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಅದು ಅವರ ವೈಯಕ್ತಿಕ ಅಭಿಪ್ರಾಯ. ನಾವು ಸಂಪೂರ್ಣವಾಗಿ ಹೈಕಮಾಂಡ್ ಮೇಲೆ ಅವಲಂಬಿತರಾಗಿದ್ದೇವೆ. ಅಧಿಕಾರ ಹಂಚಿಕೆ ಒಪ್ಪಂದ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಬೇಕು,”…

Read More

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಆರ್ಥಿಕವಾಗಿ ದಿವಾಳಿ ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ. ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಹಲವಾರು ಗಂಭೀರ ಆರೋಪಗಳನ್ನು ಮಾಡಿದರು. ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು ಇಲ್ಲಿವೆ: ಮೆಟ್ರೋ ದರ ಏರಿಕೆ ಮತ್ತು ಆರ್ಥಿಕ ನಿರ್ವಹಣೆ: ಮೆಟ್ರೋ ಯೋಜನೆಗೆ ಹಣ ಹೊಂದಿಸಲು ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ. ಬೆಲೆ ಏರಿಕೆ ಮಾಡಬಾರದೆಂದು ಕೇಂದ್ರ ಸರ್ಕಾರ ಈ ಹಿಂದೆಯೇ ಪತ್ರ ಬರೆದಿದ್ದರೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಅವರು ದೂರಿದರು. ಎತ್ತಿನಹೊಳೆ ಯೋಜನೆ ವಿಳಂಬ: 8,000 ಕೋಟಿ ರೂಪಾಯಿಯಿಂದ ಆರಂಭವಾದ ಎತ್ತಿನಹೊಳೆ ಯೋಜನೆ ಈಗ 33,000 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಕಳಪೆ ಗುತ್ತಿಗೆದಾರರಿಗೆ ಕಾಮಗಾರಿ ನೀಡಲಾಗಿದ್ದು, ಸಿಎಜಿ ವರದಿಯಲ್ಲೂ ಈ ಬಗ್ಗೆ ಉಲ್ಲೇಖವಿದೆ ಎಂದು ಹೇಳಿದರು. ಕೇಂದ್ರ ಬಜೆಟ್‌ನ ಲಾಭ: ಈ ಬಾರಿಯ…

Read More

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ತೀವ್ರ ವಾಗ್ದಾಳಿ ನಡೆಸಿದ್ದು, “ಸಿದ್ದರಾಮಯ್ಯನವರು ಸುಳ್ಳಿನ ರಾಜ” ಎಂದು ಟೀಕಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಕೇಂದ್ರದ ಯೋಜನೆಗಳ ಜಾರಿಯಲ್ಲಿನ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ವಿರುದ್ಧ ಟೀಕೆ: ಸಿದ್ದರಾಮಯ್ಯನವರು ಎರಡನೇ ಬಾರಿ ಅಧಿಕಾರಕ್ಕೆ ಬಂದಾಗಿನಿಂದ ಕೇವಲ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ತಮ್ಮ ಆಡಳಿತದಲ್ಲಿ ಆಗುತ್ತಿರುವ ತಪ್ಪುಗಳ ಬಗ್ಗೆ ಅವರು ಮಾತನಾಡುತ್ತಿಲ್ಲ ಎಂದು ಸೋಮಣ್ಣ ಆರೋಪಿಸಿದರು. ಮೆಟ್ರೋ ಯೋಜನೆ: ಬೆಂಗಳೂರು ಮೆಟ್ರೋ ಯೋಜನೆಗೆ ಜೆ.ಎಚ್. ಪಟೇಲ್ ಅವರ ಕಾಲದಲ್ಲೇ ಅಡಿಪಾಯ ಹಾಕಲಾಗಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಕೇಂದ್ರದ ಯೋಜನೆಗಳ ಕ್ರೆಡಿಟ್ ಪಡೆಯಲು ಹವಣಿಸುತ್ತಿದೆ ಎಂದು ಕಿಡಿಕಾರಿದರು. ರೈಲ್ವೆ ಭೂಸ್ವಾಧೀನ ವಿಳಂಬ: ರಾಜ್ಯದಲ್ಲಿ ರೈಲ್ವೆ ಯೋಜನೆಗಳಿಗೆ ಅಗತ್ಯವಿರುವ ಭೂಮಿಯನ್ನು ನೀಡುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಬೆಳಗಾವಿ-ಧಾರವಾಡ ನಡುವಿನ ರೈಲ್ವೆ ಹಳಿ ಅಭಿವೃದ್ಧಿಗೆ ಬೇಕಾದ ಭೂಮಿಯನ್ನು ಇನ್ನೂ…

Read More

ಪಾವಗಡ: ತಾಲೂಕಿನ ಕನಿಕಲಬಂಡೆ ಗ್ರಾಮದಲ್ಲಿ ರಾಜಕೀಯ ವೈಷಮ್ಯ ಹಾಗೂ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಪ್ರಕರಣಗಳು ದಾಖಲಾಗಿವೆ. ಗ್ರಾಮದ ವೆಂಕಟೇಶ್ ಹಾಗೂ ನರಸಿಂಹಮೂರ್ತಿ ಎಂಬುವವರ ವಿರುದ್ಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಪ್ರಕರಣ 1: ಚುನಾವಣಾ ರಾಜಕೀಯ ಹಾಗೂ ಬೆದರಿಕೆ ಗ್ರಾಮದ ನರಸಿಂಹ ಎಂಬುವವರು ದೂರು ನೀಡಿದ್ದು, ತಾವು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಅಡ್ಡಗಟ್ಟಿದ ವೆಂಕಟೇಶ್ ಮತ್ತು ನರಸಿಂಹಮೂರ್ತಿ ಆಯುಧ ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. “ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅನಿಲ್‌ಗೆ ಬೆಂಬಲ ನೀಡಬಾರದು. ಈ ಹಿಂದಿನಂತೆ ನಮ್ಮ ಪತ್ನಿಗೆ ಅವಿರೋಧ ಆಯ್ಕೆಯಾಗಲು ಬೆಂಬಲ ನೀಡಬೇಕು” ಎಂದು ಒತ್ತಾಯಿಸಿ, ಜಾತಿ ನಿಂದನೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ 2: ಜಮೀನು ವಿವಾದ ಮತ್ತು ಹಲ್ಲೆ ಯತ್ನ ಅದೇ ಗ್ರಾಮದ ಗಿರಿಯಪ್ಪ ಎಂಬುವವರು ಮತ್ತೊಂದು ದೂರು ದಾಖಲಿಸಿದ್ದಾರೆ. ತಮ್ಮ ತಾಯಿ ಕೆಲಸ ಮಾಡುತ್ತಿದ್ದಾಗ ಸ್ಥಳಕ್ಕೆ ಬಂದ ಆರೋಪಿಗಳು, ಜಮೀನು ಬರೆದುಕೊಡುವಂತೆ…

Read More

ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರ ಅಸಮಾಧಾನ ಸ್ಫೋಟಗೊಂಡಿದೆ. ಅಧಿಕಾರ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬ ಹಾಗೂ ಕಡೆಗಣನೆಯಿಂದ ಆಕ್ರೋಶಗೊಂಡ ಕಾರ್ಯಕರ್ತರು ಪಕ್ಷದ ಹಿರಿಯ ನಾಯಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕಾರ್ಯಕರ್ತರ ಆಕ್ರೋಶ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದರೂ ನಿಗಮ–ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ನಾಮನಿರ್ದೇಶನ ಮಾಡದಿರುವುದಕ್ಕೆ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಮಗೆ ಅಧಿಕಾರ ನೀಡದಿದ್ದರೆ ಮುಂಬರುವ ಚುನಾವಣೆಗಳನ್ನು ಶಾಸಕರಿಂದಲೇ ಗೆಲ್ಲಿಸಿಕೊಳ್ಳಿ, ನಾವು ಕೆಲಸ ಮಾಡುವುದಿಲ್ಲ” ಎಂದು ನಾಯಕರಿಗೆ ನೇರ ಸವಾಲು ಹಾಕಿದ್ದಾರೆ. ಮುಖಂಡರ ಎದುರೇ ಗದ್ದಲ: ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮತ್ತು ಕೆಪಿಸಿಸಿ ವೀಕ್ಷಕರಾದ ವೆಂಕಟರಮಣಯ್ಯ, ಹುಸೇನ್ ಸಾಬ್ ಅವರ ಸಮ್ಮುಖದಲ್ಲೇ ಸಭೆಯಲ್ಲಿ ಗದ್ದಲ ಉಂಟಾಯಿತು. ಶಾಸಕರಿಗೆ ಮಾತ್ರ ಅಧಿಕಾರ ಮತ್ತು ಸಚಿವ ಸ್ಥಾನಮಾನ ನೀಡಲಾಗುತ್ತಿದೆ, ಆದರೆ ಪಕ್ಷಕ್ಕಾಗಿ ದುಡಿದ ಸಾಮಾನ್ಯ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬುದು ಅವರ ಪ್ರಮುಖ ಆರೋಪವಾಗಿತ್ತು. ಟಿ.ಬಿ. ಜಯಚಂದ್ರ ಸಮಾಧಾನ:…

Read More

ಸರಗೂರು:  ಪಟ್ಟಣ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ  ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟ ಸರ್ಕಾರ ಫೆ.9 ರಿಂದ 18ರ ತನಕ ಆಚರಿಸುತ್ತಿರುವ ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿತು. ಇದೇ ವೇಳೆ ಗೇಟ್ 2 ತಹಶೀಲ್ದಾರ್ ಪರಶಿವಮೂರ್ತಿ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.  ಒಕ್ಕೂಟದ ತಾಲೂಕು ಅಧ್ಯಕ್ಷ ಬಸವರಾಜು ತೆಲುಗು ಮಸಹಳ್ಳಿ ಮಾತನಾಡಿ, ಸಂಘಟನೆಯು ಕರ್ನಾಟಕ ರಾಜ್ಯಾಧ್ಯಂತ ಸುಮಾರು 35 ವರ್ಷಗಳಿಂದ ಸಾಮಾಜಿಕ, ಪಿಡುಗಾದ ಜೀತ ನಿರ್ಮೂಲನೆಗಾಗಿ ಹಗಲಿರುಳು ನಿರಂತರವಾಗಿ ಜಾಗೃತಿ ಮತ್ತು ಸಂಘಟನೆ ಕೆಲಸ ಮಾಡುತ್ತಾ ಬರುತ್ತಿದೆ, ಸಂಘಟನೆಯ ಅವಿರತ ಹೋರಾಟದ ಫಲವಾಗಿ ಮತ್ತು ಸಂಘಟನೆಯ ಪ್ರೇರಣೆಯಿಂದ ಸಾವಿರಾರು ಮಂದಿ ತಾವೇ ಸ್ವತಂತ್ರವಾಗಿ ಜೀತವಿಮುಕ್ತರಾಗಿ ಇಂದು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ.   ಕರ್ನಾಟಕ ಸರ್ಕಾರದ ಜನಪರ ನಿಲುವುಗಳಲ್ಲಿ ಒಂದಾದ ಮತ್ತು ಸಂವಿಧಾನದ ಆಶಯವಾದ 1976 ರ ಜೀತ ಪದ್ಧತಿ ನಿರ್ಮೂಲನೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ತೆಗೆದುಕೊಂಡ ನಿಲುವುಗಳು ಶ್ಲಾಘನೀಯ ಎಂದರು. ಒಕ್ಕೂಟದ ಉಪಾಧ್ಯಕ್ಷ ಸವಿತಾ…

Read More

ತುಮಕೂರು: ಸಬ್ಸಿಡಿ ರೂಪದಲ್ಲಿ ಸಾಲ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರು ನಗರದ ಸೈಬರ್ ಕ್ರೈಂ ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಮಹತ್ವದ ಮಾಹಿತಿಗಳನ್ನು ಕಲೆಹಾಕಲಾಗಿದೆ. ಏನಿದು ಪ್ರಕರಣ? ಬಂಧಿತ ಆರೋಪಿಗಳು ಎಕ್ಸಿಸ್ ಬ್ಯಾಂಕ್ ಹಾಗೂ ಐಸಿಐಸಿಐ ಬ್ಯಾಂಕ್‌ಗಳ ಹೆಸರಿನಲ್ಲಿ ಜನರನ್ನು ಸಂಪರ್ಕಿಸುತ್ತಿದ್ದರು. ತುಮಕೂರಿನ ಒಬ್ಬ ಆರೋಪಿ ಹಾಗೂ ಬೆಂಗಳೂರಿನ ಮತ್ತೊಬ್ಬ ವ್ಯಕ್ತಿ ಸೇರಿ ಈ ಕೃತ್ಯ ಎಸಗುತ್ತಿದ್ದರು. ಬೆಂಗಳೂರಿನ ಆರೋಪಿಯು ಸಾವಿರಾರು ಜನರ ಮೊಬೈಲ್ ಸಂಖ್ಯೆಗಳನ್ನು ಒದಗಿಸುತ್ತಿದ್ದನು. ಈ ಸಂಖ್ಯೆಗಳಿಗೆ ಕರೆ ಮಾಡುತ್ತಿದ್ದ ತುಮಕೂರಿನ ಆರೋಪಿಯು, “ನಿಮಗೆ ಸಬ್ಸಿಡಿ ದರದಲ್ಲಿ ಸಾಲ ಮಂಜೂರಾಗಿದೆ” ಎಂದು ಆಮಿಷ ಒಡ್ಡುತ್ತಿದ್ದನು. ಟೆಲಿ ಕಾಲರ್ ಗಳ ಬಳಕೆ: ಸಾಲದ ಬಗ್ಗೆ ವಿವರಿಸಲು ಆರೋಪಿಗಳು ಮಹಿಳೆಯರನ್ನು ಟೆಲಿ ಕಾಲರ್ ಗಳಾಗಿ ನೇಮಿಸಿಕೊಂಡಿದ್ದರು. ಅವರು ಬ್ಯಾಂಕ್ ಅಧಿಕಾರಿಗಳಂತೆ ಮಾತನಾಡಿ ಜನರನ್ನು ನಂಬಿಸುತ್ತಿದ್ದರು. ಪ್ರಕ್ರಿಯೆ ಶುಲ್ಕದ ಹೆಸರಲ್ಲಿ ಹಣ: ಸಾಲ ಪಡೆಯಲು ಒಪ್ಪಿದವರಿಂದ ಫೈಲ್ ಚಾರ್ಜ್,…

Read More