Subscribe to Updates
Get the latest creative news from FooBar about art, design and business.
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
Author: admin
ಬೀದರ್: ನಗರದ ಖಾಸಗಿ ಶಾಲೆಯೊಂದರಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಜುಲೈ 24ರಂದು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಯಾವುದೇ ಕುರುಹು ಕಂಡಿಬಂದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಸ್ಪಷ್ಟನೆ ನೀಡಿದ್ದಾರೆ. ಬಾಲಕಿಗೆ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು , ವೈದ್ಯಾಧಿಕಾರಿಗಳು ಕುಲಂಕುಶವಾಗಿ ವೈದ್ಯಕೀಯ ತಪಾಸಣೆ ನಡೆಸಿ ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ರೀತಿಯ ಪುರಾವೆ ಕಂಡು ಬಂದಿಲ್ಲ ಎಂದು ವರದಿ ನೀಡಿದ್ದಾರೆ. ಮಗುವಿಗೆ ಆದ ಗಾಯಗಳು ಆಕಸ್ಮಿಕವಾಗಿ ಯಾವುದೋ ವಸ್ತು ಚುಚ್ಚಿದ್ದರಿಂದ ಕೇವಲ ಮೇಲ್ಭಾಗದಲ್ಲಿ ಗಾಯವಾಗಿದೆ ಎಂದು ಪ್ರಾಥಮಿಕ ಅಭಿಪ್ರಾಯ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಮಗುವಿಗೆ ಮತ್ತು ಮಗುವಿನ ಪಾಲಕರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಮಕ್ಕಳ ರಕ್ಷಣಾ ಘಟಕದಲ್ಲಿ ಆಪ್ತ ಸಮಾಲೋಚನೆ ನಡೆಸಿದ್ದು, ಮಗುವಿನ…
ಸರಗೂರು: ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಸದಾ ಮುಂದಿದ್ದು ಬದ್ಧತೆಯಿಂದ ಕೆಲಸ ಮಾಡುವ, ಉತ್ತಮ ವಿದ್ಯಾರ್ಹತೆ ಪಡೆದ ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿದ್ದಾರೆ ಎಂದು ಸರಗೂರು ಲಯನ್ಸ್ ಅಕಾಡೆಮಿ ಷೇರುದಾರರಾದ ಸುರೇಶ್ ಜೈನರವರು ಅಭಿಪ್ರಾಯಪಟ್ಟರು. ತಾಲೂಕಿನ ಹಂಚೀಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಉನ್ನತೀಕರಿಸಿದ ಹಳಿಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಉಚಿತವಾಗಿ ಕ್ರೀಡಾ ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿದರು. ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳಿಂದ ಸಾಕಷ್ಟು ಸೌಕರ್ಯಗಳು ದೊರಕುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಲು ಶ್ರಮಿಸಬೇಕು ಎಂದು ಕರೆ ನೀಡಿದರು. ಶಾಲೆಯ ಶಿಕ್ಷಕ ರಂಗನಾಥ್ ಡಿ. ಮಾತನಾಡಿ, ಭಾರತೀಯ ಪರಂಪರೆಯಲ್ಲಿ ದಾನಶೀಲ ಮೌಲ್ಯಗುಣ ಮುಖ್ಯವಾಗಿದ್ದು, ಇಂತಹ ಕಾರ್ಯಗಳಿಂದ ಸಮಾಜದ ಸಮತೋಲನ ಸ್ವಲ್ಪ ಮಟ್ಟಿಗಾದರೂ ಸಾಧ್ಯವಾಗುತ್ತದೆ. ಹಾಗೂ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಅಂಕಣದಲ್ಲಿ ಉತ್ತಮ ಆಟವಾಡುವುದರ ಮೂಲಕ ವ್ಯಕ್ತಪಡಿಸಬೇಕು ಎಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಶಾಲಾ ಸಂಸತ್ ಚುನಾವಣೆಯಲ್ಲಿ ವಿಜೇತರಾದ ಮಹೇಂದ್ರ…
ಔರಾದ: ಪಾಲನೆ ಪೋಷಣೆಯಿಂದ ವಂಚಿತರಾದ ಮಕ್ಕಳಿಗೆ ಸೂಕ್ತ ಪರಿಹಾರದ ವ್ಯವಸ್ಥೆ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ ಇದರಿಂದ ಮಕ್ಕಳು ಮಾನಸಿಕ ದೈಹಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸಂಯೋಜಕ ರಮೇಶ್ ಸೂರ್ಯವಂಶಿ ಹೇಳಿದರು. ತಾಲೂಕಿನ ಚಿಂತಾಕಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೋಷಕತ್ವ ಸಂಸ್ಥೆಗಳಪಾಲುದಾರರಿಗೆ ನಡೆದ ಜಿಲ್ಲಾಮಟ್ಟದ ಸಮಾಲೋಚನೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಪೋಷಕತ್ವ ಎಂದರೆ ಕಾನೂನಿನ ಪ್ರಕಾರ ಅನಾಥರು ಎಂದು ಪರಿಗಣಿಸಿದ ಮಕ್ಕಳು ಪರಿವಾರದ ಆರೈಕೆಯಿಂದ ವಂಚಿತರಾದ ಮಕ್ಕಳಿಗೆ ತಾತ್ಕಾಲಿಕ ಪರಿವಾರದ ಮೂಲಕ ಸಿಗುವ ಕಾಳಜಿಯಾಗಿದೆ. ಬಾಲನ್ಯಾಯಕಾಯ್ದೆ– 2015 ತಿದ್ದುಪಡಿ 21ರ ಅನ್ವಯ ಪೋಷಕತ್ವ ಯೋಜನೆ 2022 ಅನುಷ್ಠಾನಗೊಳ್ಳಲು ಸರ್ಕಾರ ಜನರ ಮಧ್ಯೆ ಸ್ವಯಂ ಸೇವಾ ಸಂಸ್ಥೆಗಳು ಸೇತುವೆಯಾಗಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಡಾನ್ ಬೋಸ್ಕೊ ಕಾರ್ಯ ಶ್ಲಾಘನೀಯ ಎಂದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸಿಮಪ್ಪ ಆರೋಗ್ಯ ಸಿಬ್ಬಂದಿ, ವಲಯ ಮಟ್ಟದ ಆಶಾ ಕಾರ್ಯಕರ್ತರು ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ…
ತಿಪಟೂರು: ತಾಲ್ಲೂಕಿನ ಹರಚನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಿರಿಧಾನ್ಯ ಬೇಸಾಯದ ರೈತಕ್ಷೇತ್ರ ಪಾಠಶಾಲೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೃಷಿ ಅಧಿಕಾರಿ ಕಿರಣ್, ಸಿರಿಧಾನ್ಯಗಳಾದ ನವಣೆ, ಸಾವೆ, ಹಾರಕ, ಊದಲು, ಕೊರಲೆ ಹಾಗೂ ಬರಗು ಸೇವನೆಯಿಂದ ಮನುಷ್ಯನ ಆಯುಷ್ಯ ಹಾಗೂ ಆರೋಗ್ಯ ಹೆಚ್ಚಾಗುವ ಕಾರಣ ಪ್ರತಿಯೊಬ್ಬರು ಸಿರಿಧಾನ್ಯವನ್ನು ಬೆಳೆದು ಬಳಸುವಂತಾಗಬೇಕೆಂದು ತಿಳಿಸಿದರು. ಸಿರಿಧಾನ್ಯ ಬೆಳೆಗಾರರ ಉತ್ತೇಜನಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಗ್ರಾಮಮಟ್ಟದಲ್ಲಿ ರೈತರನ್ನು ಒಟ್ಟುಗೂಡಿಸಿ ಸಿರಿಧಾನ್ಯ ಬೆಳೆಗಳ ಉಪಯೋಗಗಳ ಬಗ್ಗೆ ಉಚಿತ ಮಾಹಿತಿ ತರಬೇತುಗಳನ್ನು ಕೊಡಿಸುವುದಲ್ಲದೇ, ಉಚಿತ ಸಿರಿ ಅದ್ಯಯನ ಪ್ರವಾಸಗಳನ್ನು ಏರ್ಪಡಿಸುವ ಮಹತ್ತರ ಕಾರ್ಯವನ್ನು ಮಾಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದು. ಇಷ್ಟಲ್ಲದೇ ಕೃಷಿ ಇಲಾಖೆಯ ವತಿಯಿಂದ 1 ಎಕರೆಯಿಂದ 2.5 ಎಕರೆಯಷ್ಟು ಸಿರಿದಾನ್ಯ ಬೆಳೆಯುವ ರೈತನೋರ್ವನಿಗೆ ಕನಿಷ್ಟ 4 ಸಾವಿರದಿಂದ ಗರಿಷ್ಟ 10 ಸಾವಿರದವರೆಗೆ ಪ್ರೋತ್ಸಾಹಧನ ಸಿಗುತ್ತದೆಂದು ತಿಳಿಸಿದರು. ಬಳಿಕ ಮಾತನಾಡಿದ ತಾಲ್ಲೂಕು ಯೋಜನಾಧಿಕಾರಿ ಕೆ.ಉದಯ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಥರಟಿ ಗ್ರಾಮದ ಸರ್ವೆ ನಂ.76/4ರಲ್ಲಿರುವ ತಿಮ್ಮಕ್ಕ ಅವರ ಜಮೀನಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಭೇಟಿ ನೀಡಿ ಬೆಳೆಗಳ ಸ್ಥಿತಿ–ಗತಿಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಇತರ ಕೃಷಿ ಉಪಕರಣಗಳ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ ಅವರಿಗೆ ಸೂಚನೆ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ ಮಾತನಾಡಿ, 2025ನೇ ಸಾಲಿನಲ್ಲಿ ಕೊರಟಗೆರೆ ತಾಲೂಕಿನಲ್ಲಿ ಇದುವರೆಗೆ ಒಟ್ಟು 3748 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯಗಳು ನಡೆದಿದ್ದು, ಶೇಂಗಾ, ರಾಗಿ ಹಾಗೂ ಜೋಳ ಬೆಳೆಗಳು ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆಗೊಂಡಿವೆ ಎಂದು ಮಾಹಿತಿ ನೀಡಿದರು. ತಾಲೂಕಿನಲ್ಲಿ 3071 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು, ಈವರೆಗೂ 1210 ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ ಮಾಡಲಾಗಿದೆ. ಪ್ರಸ್ತುತ 1861 ಮೆಟ್ರಿಕ್ ಟನ್ ಲಭ್ಯವಿದ್ದು, ರೈತರಿಗೆ ಯಾವುದೇ ರಸಗೊಬ್ಬರದ ಕೊರತೆ ಉಂಟಾಗುವುದಿಲ್ಲ. ತಾಲೂಕಿನಲ್ಲಿರುವ ನಾಲ್ಕು ರೈತ…
ತಿಪಟೂರು: ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಸಮ್ಮೇಳನದಿಂದ ಸಾಫ್ಟ್ ವೇರ್ ಮತ್ತು ಹಾರ್ಡ್ ವೇರ್ ಕ್ಷೇತ್ರಗಳಲ್ಲಿ ಯುವ ಇಂಜಿನಿಯರ್ ಗಳಿಗೆ ಪ್ರಪಂಚದಾದ್ಯಂತ ಅವಕಾಶ ಬಾಗಿಲು ತೆರೆಯುತ್ತಿದೆ, ಸಕಾಲದಲ್ಲಿ ಅಧ್ಯಯನ ನಡೆಯುವ ಮೂಲಕ ಉದ್ಯೋಗಗಳನ್ನು ಕಾತರಿ ಪಡಿಸಿಕೊಳ್ಳಬೇಕೆಂದು ಫಿಲಿಪೈನ್ಸ್ ನ ಟೆಕ್ನಾಲಜಿಕಲ್ ಯೂನಿವರ್ಸಿಟಿಯ ಡಾ.ಲೀನಾ ಕಾ ಲೋ ಸ್ಯಾಂಟ್ರೋಸ್ ತಿಳಿಸಿದರು. ಮೂರನೇ ಅಂತರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಅಮೆರಿಕ ಇಂಗ್ಲೆಂಡ್ ಹಾಂಗ್ ಕಾಂಗ್ ಚೀನಾ ಮುಂತಾದ ದೇಶಗಳಲ್ಲಿ ಕೌಶಲ್ಯಯುತ ಎಂಜಿನಿಯರಿಗಾಗಿ ಬೇಡಿಕೆ ಹೆಚ್ಚಿದೆ ಇಂಥ ಸಮ್ಮೇಳನದಲ್ಲಿ ನೂತನ ಅನ್ವೇಷಣೆಗಳು ಪ್ರಸ್ತುತಪಡಿಸುವ ಮೂಲಕ ಹೆಚ್ಚಿನ ಅವಕಾಶ ಗಿಟ್ಟಿಸಿಕೊಳ್ಳಬೇಕು ಎಂದು ತಿಳಿಸಿದರು. ಬೆಂಗಳೂರು ಇಂಟೆಲ್ ಕಾರ್ಪೊರೇಷನ್ ಮ್ಯಾನೇಜರ್ ಕುಮಾರ್ ಮಾತನಾಡಿ, ಸಾಕಷ್ಟು ಹೊಸ ಅವಕಾಶಗಳು ಪ್ರಾರಂಭವಾಗುತ್ತಿದ್ದು, ನೂತನ ಇಂಜಿನಿಯರ್ ಗಳು ಇರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಜಿ.ಪಿ.ದೀಪಕ್ ಕಾರ್ಯದರ್ಶಿಗಳಾದ ಎಂ.ಆರ್. ಸಂಗಮೇಶ್, ಜೆ.ಎ.ಉಮಾ ಶಂಕರ್ ಬಾಗೇಪಲ್ಲಿ, ನಟರಾಜ್ ಅನೇಕ ಬೋಧಕ ಬೋಧಕೇತರ ಕಾಲೇಜಿನ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ…
ಬೀದರ್: ಜಿಲ್ಲಾದಾದ್ಯಂತ ಜೂನ್ 1ರಿಂದ ಜುಲೈ 25ರವರೆಗೆ ಸುರಿದ ಮುಂಗಾರು ಮಳೆಯಿಂದ ಒಟ್ಟು 36 ಮನೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಜಿಲ್ಲೆಯ ಬಸವಕಲ್ಯಾಣ (20), ಭಾಲ್ಕಿ (6), ಚಿಟಗುಪ್ಪ (5), ಔರಾದ್ (4), ಹಾಗೂ ಹುಮನಾಬಾದ್ ತಾಲೂಕಿನಲ್ಲಿ (1) ಮನೆಗಳು ನಿರಂತರವಾಗಿ ಸುರಿದ ಮಳೆಗೆ ಭಾಗಶಃ ಗೋಡೆ ಉರುಳಿದೆ. ಇನ್ನು ಚಿಟಗುಪ್ಪ ಬಸವಕಲ್ಯಾಣ,ಹುಲಸೂರ ಹಾಗೂ ಔರಾದ್ ತಾಲ್ಲೂಕಿನಲ್ಲಿ ಸಿಡಿಲು ಬಡಿದು ಒಟ್ಟು 6 ಜಾನುವಾರು ಸಾವನ್ನಪ್ಪಿರುವುದು ಬಗ್ಗೆ ವರದಿಯಾಗಿದೆ. ಜೂನ್ 1ರಿಂದ ಆರಂಭವಾದ ಮಳೆಯಿಂದಾಗಿ ಜಿಲ್ಲೆಯ ಭಾಲ್ಕಿ ತಾಲ್ಲೂಕಿನಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವುದಾಗಿ ಜಿಲ್ಲಾಡಳಿತ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೊರಟಗೆರೆ : ಕ್ಯಾಮೇನಹಳ್ಳಿ ಶ್ರೀಆಂಜನೇಯ ಸ್ವಾಮಿ ದೇವಾಲಯಕ್ಕೆ 800 ವರ್ಷಗಳ ಇತಿಹಾಸವಿದೆ. ರಾಜ್ಯದ ಅನೇಕ ಭಾಗಗಳಲ್ಲಿ ಸ್ವಾಮಿಯ ಭಕ್ತರಿದ್ದಾರೆ. ಸಮಿತಿಯು ರಾಜ ಗೋಪುರ ಅಭಿವೃದ್ಧಿಗೆ ತೀರ್ಮಾನಿಸಿದ್ದು, ಭಕ್ತರ ಸಹಕಾರ ಅಗತ್ಯವಾಗಿದೆ ಎಂದು ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ.ರಾಮಮೂರ್ತಿ ತಿಳಿಸಿದರು. ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕಮನೀಯ ಕ್ಷೇತ್ರ ಕ್ಯಾಮೇನಹಳ್ಳಿ ಶ್ರೀಆಂಜನೇಯ ಸ್ವಾಮಿ ದೇವಾಲಯದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇವಾಲಯ ರಾಜಗೋಪುರ ನೀಲಿನಕ್ಷೆ ಈಗಾಗಲೇ ಸಿದ್ದವಾಗಿದೆ. 45 ಅಡಿ ಎತ್ತರ, 23 ಅಡಿ ಅಗಲ, ಬಾಗಿಲು ಕಲ್ಲು ಎತ್ತರ 16 ಅಡಿಯನ್ನು ಹೊಂದಿದೆ. ರಾಜಗೋಪುರ ಅಭಿವೃದ್ಧಿಗೆ ಗಾರೆ, ಸುಣ್ಣ, ಚಿನ್ನ, ಇಟ್ಟಿಗೆ, ಕಲ್ಲು, ಸಿಮೆಂಟ್ ಬಳಸಲಿದ್ದು, ಮುಜುರಾಯಿ ಇಲಾಖೆ ಒಳಪಟ್ಟ ದೇವಾಲಯವಾದ್ದರಿಂದ 10 ಲಕ್ಷ ನೀಡುವಂತೆ ಸಮಿತಿಯು ಈಗಾಗಲೇ ಮನವಿ ಮಾಡಿದೆ ಎಂದು ಹೇಳಿದರು. ಗುತ್ತಿಗೆದಾರ ಮಹಾಲಿಂಗಪ್ಪ ಮಾತನಾಡಿ, ಕೊರಟಗೆರೆ ತಾಲ್ಲೂಕು ಪುಣ್ಯಕ್ಷೇತ್ರಗಳ ಬೀಡು. ಕಮನೀಯ ಕ್ಷೇತ್ರ ಕ್ಯಾಮೇನಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಾಲಯ ತನ್ನದೇ ಆದ ಇತಿಹಾಸವನ್ನು…
ಸರಗೂರು: ಶಿವಮೊಗ್ಗ ಪತ್ರಿಕಾ ಭವನದಲ್ಲಿ ಇತ್ತೀಚೆಗೆ ನಡೆದ ಧೀವರು ಮತ್ತು ಜಾತಿ ಗಣತಿ ಕುರಿತು ಒಂದು ಸಮಾಲೋಚನೆ ನಡೆಯಿತು. ಆ ಸಭೆಯಲ್ಲಿ ಹಿರಿಯರಾದ ಮಧು ಗಣಪತಿ ರಾವ್ ಡಾ.ಜಿ.ಡಿ.ನಾರಾಯಣಪ್ಪ ಶಿವಾನಂದ ಕುಗ್ವೆ ಧರ್ಮರಾಜು ಮಂಜಪ್ಪ ಡಿ.ಆರ್.ಮೋಹನ್ ಚಂದ್ರಗುತ್ತಿ ಇನ್ನೂ ಹಲವಾರು ಮುಖಂಡರು ಭಾಗವಹಿಸಿ ಆ ಸಭೆಯಲ್ಲಿ ಜಾತಿ ಗಣತಿಯನ್ನು ಧೀವರು ಎಂದು ನಮೂದಿಸಬೇಕು ಎಂದು ನಿರ್ಣಯ ಮಾಡಿದ್ದಾರೆ ಅದು ಸರಿಯಲ್ಲ. ಸರ್ಕಾರ ಸೌಲಭ್ಯಗಳನ್ನು ಪಡೆಯಲು ಅನುಕೂಲವ ನಿಟ್ಟಿನಲ್ಲಿ ನಾವುಗಳು ಧೀವರು ಅನ್ನೋ ಬದಲು ಈಡಿಗ ಎಂದು ಜಾತಿ ಆದಾಯ ಪತ್ರ ನಮೂದಿಸಿ. ಆದ್ದರಿಂದ ಶಿವಮೊಗ್ಗ, ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಾಗಿರುವುದರಿಂದ ನಮ್ಮ ಸಮಾಜದವರು ಇರುವುದರಿಂದ ಈಡಿಗ ಎಂದು ನಮೂದಿಸಬೇಕು ಎಂದು ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆ ಆರ್ಯ ಈಡಿಗ ಸಮಾಜದ ಸಂಘಟನಾ ಕಾರ್ಯದರ್ಶಿ ಹಾಗೂ ಸರಗೂರು ತಾಲೂಕು ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎಸ್.ಎನ್.ನಾಗರಾಜು ಒತ್ತಾಯಿಸಿದರು. 12ನೆ ಶತಮಾನದಲ್ಲಿ ಹೆಂಡದ ಮಾರಾಯ ಸೇಂದಿಯನ್ನು ಇಳಿಸಿ ವ್ಯಾಪಾರ ಮಾಡುತ್ತ ಬಂದಿದ್ದರು ಅದಾದ…
ಕೊರಟಗೆರೆ : ಕೊರಟಗೆರೆ ಪಟ್ಟಣದ ಬೀದಿಗಳಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ನಾಯಿಗಳು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ಮಹಿಳೆಯರ ಮೇಲೆ ಹಲ್ಲೆ ನಡೆಸುತ್ತಿದ್ದು, ಸಾರ್ವಜನಿಕರು ಪಟ್ಟಣದ ರಸ್ತೆಯಲ್ಲಿ ಓಡಾಡಲು ಭಯ ಉಂಟು ಮಾಡುವ ವಾತಾವರಣ ನಿರ್ಮಾಣವಾಗಿದೆ. ಕೊರಟಗೆರೆ ಪಟ್ಟಣದಲ್ಲಿ ಮಾಂಸ ಮತ್ತು ಚಿಕನ್ ಮಾರಾಟ ಅಂಗಡಿಗಳ ಬಳಿ ಹಾಗೂ ಮಾರಮ್ಮ ದೇವಾಲಯ, ಕಟ್ಟೆಗಣಪತಿ ದೇವಾಲಯ ರಸ್ತೆ, ದೊಡ್ಡಪೇಟೆ ಸೇರಿದಂತೆ ಪಟ್ಟಣದ ಎಲ್ಲಾ ರಸ್ತೆಗಳಲ್ಲಿ ಬೀಡು ಬಿಟ್ಟಿರುವ ಬೀದಿನಾಯಿಗಳು, ಗುಂಪು–ಗುಂಪುಗಳಾಗಿ ಓಡಾಡುತ್ತಿದ್ದು 10 ರಿಂದ 15 ನಾಯಿಗಳು ಗುಂಪುಗಳಾಗಿ ಓಡಾಡುವುದರಿಂದ ಸಾರ್ವಜನಿಕರಿಗೆ ಭಯದ ವಾತಾವರಣ ಉಂಟಾಗಿದೆ. ರಸ್ತೆಗಳಲ್ಲಿ ಮಾಂಸ ಮತ್ತು ಚಿಕನ್ ಮಾರಾಟ ಅಂಗಡಿಗಳ ಮುಂದೆ ಹಸಿ ಮಾಂಸ ಮತ್ತು ಹೊಟೇಲ್ಗಳ ಮುಂದೆ ತ್ಯಾಜ್ಯಗಳನ್ನು ಬಿಸಾಡುವುದರಿಂದ ಅವುಗಳನ್ನು ತಿನ್ನುವ ನಾಯಿಗಳು ಗುಂಪು–ಗುಂಪಾಗಿ ಪಟ್ಟಣದ ರಸ್ತೆಗಳಲ್ಲಿ ಓಡಾಡುತ್ತಿದ್ದು ಹಸಿ ಮಾಂಸ ತಿಂದ ನಾಯಿಗಳು ರಸ್ತೆಯಲ್ಲಿ ಓಡಾಡುವ ಮನಷ್ಯರ ಮೇಲೂ ದಾಳಿ ನಡೆಸುತ್ತಿವೆ, ಮುಂಜಾನೆ ಮತ್ತು ಸಂಜೆ ನಡೆದಾಡುವವರನ್ನು ದ್ವಿಚಕ್ರ ವಾಹನ ಸವಾರರನ್ನು ಶಾಲೆಗೆ ಹೋಗುವ ವಿದ್ಯಾರ್ಥಿಗಳನ್ನು…