Author: admin

ಬೆಂಗಳೂರು: ಇಂದು ರಾಜ್ಯದಲ್ಲಿ ನಡೆದ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾವೇರಿಯಲ್ಲಿ ಲಾರಿ ಚಾಲಕ ಹೃದಯಾಘಾತಕ್ಕೆ ಬಲಿಯಾಗಿದ್ದರೆ, ಮಂಗಳೂರಿನಲ್ಲಿ ವಿದ್ಯಾರ್ಥಿ ಹೃದಘಾತಕ್ಕೆ ಬಲಿಯಾಗಿದ್ದಾನೆ. ಲಾರಿ ಚಾಲಕ ಬಲಿ: ಹಾವೇರಿ: ಏಕಾಏಕಿ ಎದೆನೋವು ಕಾಣಿಸಿಕೊಂಡು, ಲಾರಿ ಚಾಲಕ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾವೇರಿಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ನಡೆದಿದೆ. ಬಾಬುರಾವ್ ಖಮ್ಮಟ್ (50) ಮೃತಪಟ್ಟ ಲಾರಿ ಚಾಲಕನಾಗಿದ್ದಾನೆ.  ಚಾಲಕಮಹಾರಾಷ್ಟ್ರದ ಉಮ್ರಾವತಿ ಗ್ರಾಮದ ನಿವಾಸಿಯಾಗಿದ್ದಾನೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ಗೂಡ್ಸ್ ಲಾರಿಯಲ್ಲಿ ಹೋಗುತ್ತಿದ್ದ ವೇಳೆ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಚಾಲಕನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯ ರವಾನೆಗೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಲಾರಿ ಚಾಲಕ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಬಲಿ: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್‌ ನ ಕೃಷ್ಣಾಪುರ ಹಿಲ್‌ಸೈಡ್ ಬಳಿ ಸೋಮವಾರ…

Read More

ಬೀದರ್:  ಲೋಕಸಭಾ ವ್ಯಾಪ್ತಿಯೊಳಗಿನ ನಗರ ಪ್ರದೇಶಗಳಲ್ಲಿ ವಾಸ ವಿರುವ ವಸತಿ ರಹಿತ ಅಥವಾ ನಿವೇಶನ ರಹಿತ ಕುಟುಂಬಗಳಿಂದ ಪ್ರಧಾನಮಂತ್ರಿ ಆವಾಸ ಯೋಜನೆ (ನಗರ) 2.0 ಯೋಜನೆ ಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಸಂಸದ ಸಾಗರ್ ಖಂಡ್ರೆ ತಿಳಿಸಿದ್ದಾರೆ ಮನೆ ಎಂಬುದು ಪ್ರತಿಯೊಬ್ಬನೂ ಕನಸು ಕಾಣುವ ಮೂಲಭೂತ ಅಗತ್ಯ ಪಿಎಂಎವೈ (ನಗರ) 2.0 ಯೋಜನೆಯ ಮೂಲಕ ವಸತಿ ರಹಿತ ಕುಟುಂಬಗಳಿಗೆ ಶಾಶ್ವತ ಮನೆ ನೀಡುವ ಗುರಿ ಹೊಂದಲಾಗಿದ್ದು, ಬೀದರ್ ಲೋಕಸಭಾ ಕ್ಷೇತ್ರದ ಅರ್ಹರು ಈ ಯೋಜನೆಯ ಲಾಭವನ್ನು ಪಡೆಯಬೇಕು ಆಶಯವಾಗಿದೆ. ಯೋಜನೆಯ ಲಾಭ ಪಡೆಯಲು ಅರ್ಜಿದಾರರು ಈಗಾಗಲೇ ಯಾವುದೇ ರಾಜ್ಯ ಅಥವಾ ಕೇಂದ್ರ ಸರಕಾರದ ವಸತಿ ಯೋಜನೆಯಡಿ ಮನೆ ಸಹಾಯಧನ ಪಡೆದುಕೊಂಡಿರಬಾರದು. ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕು ಅರ್ಜಿ ಸಲ್ಲಿಕೆಗೆ ಜು.15 ಕೊನೆಯ ದಿನವಾಗಿದೆ. ಆಸಕ್ತರು ತಮ್ಮ ಸ್ಥಳೀಯ ನಗರ ಪಂಚಾಯಿತಿ/ ಮುನ್ಸಿಪಲ್ ಕಛೇರಿಯಲ್ಲಿ ಅರ್ಜಿ…

Read More

ಬೀದರ್ : ಮಾಂಜ್ರಾ ನದಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟ ರೈತನ ಮನೆಗೆ  ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಪರಿಹಾರ ವಿತರಣೆ ಮಾಡಿದರು. ಮೃತನ ಕುಟುಂಬದ ಭೇಟಿ ಮಾಡಿದ ಅವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಕುಟುಂಬಸ್ಥರಿಗೆ ಸರಕಾರದಿಂದ ಅನುಮೋದಿಸಲಾದ 5 ಲಕ್ಷ ರೂ. ಪರಿಹಾರ ಧನದ ಚೆಕ್‌ ಹಸ್ತಾಂತರಿಸಿದರು. ಭಾಲ್ಕಿ ತಾಲ್ಲೂಕಿನ ಭಾಟಸಾಂಗವಿ ಗ್ರಾಮದ ರೈತ ನಾಮದೇವ್ ಝಳಕೆ (65) ಅವರು ಜು.3 ರಂದು ಮಾಂಜ್ರಾ ನದಿ ದಾಟುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರು. ಜು. 5 ರಂದು ಅವರ ಮೃತದೇಹ ಪತ್ತೆಹಚ್ಚಲಾಗಿತ್ತು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಪುಣೆ:  ನಗರದ ರೈಲ್ವೆ ನಿಲ್ದಾಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅಪವಿತ್ರಗೊಳಿಸಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ಮಾನಸಿಕ ಅಸ್ವಸ್ಥ ಎಂದು ಶಂಕಿಸಲಾಗಿದೆ. ಘಟನೆಯ ನಂತರ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ. ಆರೋಪಿಯನ್ನು ಸೂರಜ್ ಶುಕ್ಲಾ ಎಂದು ಗುರುತಿಸಲಾಗಿದ್ದು, ಆತ ಉತ್ತರ ಪ್ರದೇಶದ ವಾರಣಾಸಿ ಮೂಲದವನೆಂದು ಉಪ ಪೊಲೀಸ್ ಆಯುಕ್ತ (ವಲಯ 2) ಮಿಲಿಂದ್ ಮೋಹಿತೆ ತಿಳಿಸಿದ್ದಾರೆ. ವ್ಯಕ್ತಿಯ ಚೀಲದಲ್ಲಿ ಕೆಲವು ಧಾರ್ಮಿಕ ಪುಸ್ತಕಗಳು ಮತ್ತು ಕೈಯಲ್ಲಿ ಬಿಲ್‌ಹುಕ್ ಇತ್ತು ಮತ್ತು ಹರಿತವಾದ ಆಯುಧವನ್ನು ಬಳಸಿ ಪ್ರತಿಮೆಯನ್ನು ಅಪವಿತ್ರಗೊಳಿಸಲು ಪ್ರಯತ್ನಿಸುತ್ತಿದ್ದ. ಆದರೆ, ಸುತ್ತಮುತ್ತಲಿನ ಜನರು ಅವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಆರೋಪಿಯು ಪುಣೆಯ ವಿಶ್ರಾಂತವಾಡಿ ಪ್ರದೇಶದಲ್ಲಿ ವಾಸಿಸುತ್ತಿದ್ದು, ‘ರುದ್ರಾಕ್ಷ’  ಮಾರಾಟ ಮಾಡುತ್ತಿದ್ದ. ಸತಾರಾ ಜಿಲ್ಲೆಯ ವಾಯ್‌ ನಿಂದ ಹರಿತವಾದ ಆಯುಧವನ್ನು ಖರೀದಿಸಿದ ಬಳಿಕ ಕೃತ್ಯ ನಡೆಸಿದ್ದ ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಶಿವಮೊಗ್ಗ: ಸಿದ್ದರಾಮಯ್ಯ ಅವರ ಆಡಳಿತ ವೈಖರಿಯ ಬಗ್ಗೆ ಆಡಳಿತ ಪಕ್ಷದ ಶಾಸಕರಿಗೇ ವಿಶ್ವಾಸವಿಲ್ಲದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 15 ಬಾರಿ ಬಜೆಟ್ ಮಂಡಿಸಿದ ಅನುಭವವಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಅಭಿವೃದ್ಧಿ ಮಾತು ದೂರವಾಗಿದೆ. ಜೊತೆಗೆ ಮುಖ್ಯಮಂತ್ರಿ ಬದಲಾವಣೆಯ ಮಾತುಗಳೂ ಕೇಳಿ ಬಂದಿವೆ ಎಂದಿದ್ದಾರೆ. ಕಾನೂನು ಸುವ್ಯವಸ್ಥೆ ಕುಸಿದಿದೆ. ಮಂಗಳೂರು, ಶಿವಮೊಗ್ಗ ಸೇರಿದಂತೆ ಹಲವು ಕಡೆ ಅಹಿತಕರ ಘಟನೆಗಳು ನಡೆಯುತ್ತಿದ್ದರೂ, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸುವುದಾಗಿ ಅವರು ಹೇಳಿದ್ದಾರೆ. ಹಾಸನ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಹೃದಯಾಘಾತದಿಂದ ಸಾವು ಸಂಭವಿಸುತ್ತಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡದಿರುವುದು ಖಂಡನಾರ್ಹ. ಇಂತಹ ಸೂಕ್ಷ್ಮ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ವರ್ತಿಸಬೇಕಾಗಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ಬೀದರ್ : ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ಎಲ್ಲಾ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಅಳವಡಿಸಬೇಕು ಎಂದು ಭಾರತೀಯ ದಲಿತ್ ಪ್ಯಾಂಥರ್ ಮನವಿ ಮಾಡಿದೆ. ಹುಮನಾಬಾದ್ ತಹಶೀಲ್ದಾರ್ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಕರ್ನಾಟಕ ಉಚ್ಚ ನ್ಯಾಯಾಲಯವು ಡಾ.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವುದಕ್ಕಾಗಿ ಎಲ್ಲಾ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಅಳವಡಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೆ ಕೆಲವೊಂದು ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಹಾಕಿರುವುದಿಲ್ಲ ಎಂದು ಆರೋಪಿಸಲಾಗಿದೆ. ಉಚ್ಚ ನ್ಯಾಯಾಲಯದ ಆದೇಶದಂತೆ ಡಾ.ಅಂಬೇಡ್ಕರ್ ಅವರ ಫೋಟೋ ಎಲ್ಲಾ ನ್ಯಾಯಾಲಯಗಳ ಜೊತೆಗೆ ಹುಮನಾಬಾದ್ ನ್ಯಾಯಾಲಯದಲ್ಲಿಯೂ ಕೂಡ ಹಾಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಭಾರತೀಯ ದಲಿತ್ ಪ್ಯಾಂಥರ್ ನ ತಾಲೂಕು ಅಧ್ಯಕ್ಷ ಗಣಪತಿ ಅಷ್ಟೂರೆ, ಉಪಾಧ್ಯಕ್ಷ ಸಿದ್ದಾರ್ಥ್ ಜಾನವೀರ್, ಸುನಿಲಕುಮಾರ್ ಭೋಲಾ, ವಿಶಾಲ್ ಸಿಂಧನಕೇರಾ, ಗೌತಮ್ ಜಾನವೀರ್, ಅನಂತ್ ಮಾಳಗೆ, ವಿಠಲ್ ಶಿವನಾಯಕ್, ಆಕಾಶ್, ದಶರಥ್ ದಾಂಡೇಕರ್, ರಾಹುಲ್, ಗೌತಮ್ ಮೊಳಕೇರಾ, ಮಾಣಿಕ್ ಮೇಟಿ ಹಾಗೂ ಸಾಗರ್ ಸೇರಿದಂತೆ…

Read More

ರಾಯಚೂರು: ಮೊಹರಂ ಆಚರಣೆ ವೇಳೆ ಅಗ್ನಿ ಕುಂಡದಲ್ಲಿ ಬಿದ್ದ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನಲ್ಲಿ ನಡೆದಿದೆ. ಹನುಮಂತ ಯರಗಂಟಿ (33) ಗಾಯಗೊಂಡ ಯುವಕನಾಗಿದ್ದು,  ದರ್ಗಾದ ಮುಂದೆ ಕೆಂಡ ಹಾಯಲು ಸಿದ್ಧಪಡಿಸಲಾದ ಅಗ್ನಿ ಕುಂಡದಲ್ಲಿ ಕಟ್ಟಿಗೆಗಳನ್ನು ಹಾಕಿ ಬೆಂಕಿ ಹಚ್ಚಲಾಗಿತ್ತು. ಈ ವೇಳೆ ಹನುಮಂತ  ಬೆಂಕಿಗೆ ಬಿದ್ದಿದ್ದಾನೆ. ಪರಿಣಾಮವಾಗಿ  ಬೆಂಕಿಯಿಂದ ದೇಹ ಸುಟ್ಟು ಹೋಗಿದೆ. ತಕ್ಷಣ ಸ್ಥಳದಲ್ಲಿದ್ದವರು ಆತನ ನೆರವಿಗೆ ಧಾವಿಸಿದ್ದು, ರಕ್ಷಿಸಲು ಹರಸಾಹಸ ಪಟ್ಟಿದ್ದಾರೆ. ಬಳಿಕ ಗಾಯಾಳುವನ್ನು ಲಿಂಗಸೂಗೂರು ತಾಲೂಕ್ ಆಸ್ಪತ್ರೆಗೆ, ತದನಂತರ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆತ ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಮಂಡ್ಯ: ವಿಶ್ವೇಶ್ವರಯ್ಯ ಕಾಲುವೆಯ ಸೇತುವೆಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ನಲ್ಲಿದ್ದ ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಬೈಕ್ ನಲ್ಲಿ ಇಬ್ಬರು ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಸೇತುವೆ ದಾಟುವಾಗ ಸವಾರನ ನಿಯಂತ್ರಣ ತಪ್ಪಿ ಬೈಕ್ ರೇಲಿಂಗ್‌ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರೂ ಕಾಲುವೆಗೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ನೇರ ಕಾರಣ ಅಲ್ಲ ಅಂತ  ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕೋವಿಸ್‌ ಲಸಿಕೆಯಿಂದ ಹೃದಯಾಘಾತ ಎನ್ನುವ ಆರೋಪವನ್ನು ತಳ್ಳಿಹಾಕಿದ್ದಾರೆ. ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ. ಮಧುಮೇಹ, ಕೊಬ್ಬು ಸೇರಿದಂತೆ ಅನೇಕ ಅಡ್ಡ ಪರಿಣಾಮಗಳು ಹೃದಯಾಘಾತಕ್ಕೆ ಕಾರಣ ಆಗಿವೆ ಎಂದಿದ್ದಾರೆ. ರಕ್ತದೊತ್ತಡ, ಶುಗರ್, ದಪ್ಪ ಆಗಿರೋದು, ದೈಹಿಕ ಚಟುವಟಿಕೆ ಇಲ್ಲದೇ ಇರೋದು. ಹೃದಯಾಘಾತ ಹೆಚ್ಚಾಗೋದಕ್ಕೆ ಕಾರಣ ಆಗಿದೆ. ಜನರ ಜೀವನ ಶೈಲಿ ಕೂಡ ಹೃದಯಾಘಾತಕ್ಕೆ ಕಾರಣ ಆಗಿದೆ. ಕೊವಿಡ್ ಲಸಿಕೆಯಿಂದ ನೇರವಾಗಿ ಕಾರಣ ಅಲ್ಲ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಮಗೆ ದೇವಸ್ಥಾನ ಇದ್ದ ಹಾಗೆ ಎಂದು ಡಿಸಿಎಂ ಡಿಕೆ ಶಿವಕುಮಾರ್   ಹೇಳಿಕೆ ನೀಡಿದ್ದಾರೆ. ಎರಡು ದಿನಗಳ ದೆಹಲಿ ಪ್ರವಾಸದ ಹಿನ್ನೆಲೆ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು,   ಕಾಂಗ್ರೆಸ್ ಹೈಕಮಾಂಡ್ ನಮಗೆ ದೇವಸ್ಥಾನ ಇದ್ದ ಹಾಗೆ, ಸಮಯ ಸಿಕ್ಕರೆ ಹೈಕಮಾಂಡ್ ಭೇಟಿಯಾಗಿ ಅವರಿಗೆ ಕೈ ಮುಗಿದು ಬರುತ್ತೇನೆ ಎಂದರು. ಇನ್ನೂ ಎತ್ತಿನಹೊಳೆ ಯೋಜನೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾಗಬೇಕು. ತುಮಕೂರು ಮತ್ತು ಹಾಸನ ವಿಚಾರದಲ್ಲಿ ಕೇಂದ್ರ ಅನುಮತಿ ಕೊಡಬೇಕಿದೆ. ಈ ವಿಷಯದ ಕುರಿತು ಚರ್ಚೆಗೆ ಅವಕಾಶ ಕೊಟ್ಟಿದ್ದಾರೆ. ಅರಣ್ಯ ಸಚಿವರ ಜೊತೆ ಕೇಂದ್ರ ಜಲ ಸಂಪನ್ಮೂಲ ಸಚಿವರು ಸಮಯ ಕೊಟ್ಟಿದ್ದಾರೆ. ಅವರ ಜೊತೆಗೂ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More