Author: admin

ತಮಿಳಿನಿಂದ ಕನ್ನಡ ಹುಟ್ಟಿದೆ ಎನ್ನುವ ಕಮಲ್ ಹಾಸನ್ ಹೇಳಿಕೆಗೆ ನಾದ ಬ್ರಹ್ಮ ಹಂಸಲೇಖ ತಿರುಗೇಟು ನೀಡಿದ್ದು, ವಿಡಿಯೋ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ ಮಾತನಾಡಿದ ಅವರು, ಮಿಸ್ಟರ್​ ತಮಿಳ್​ ಹಾಸನ್​. ನೀವು ಮಿಸ್ಟರ್​ ತಮಿಳ್​ ಹಾಸನ್​ ಅಂತಾ ಹೆಸರು ಬದಲಾಯಿಸಿಕೊಳ್ಳಿ ಅಂತಾ ಹೇಳಿ ಸಾರ್​​ ಎಂದು ನಮ್ಮ ಮ್ಯೂಸಿಕ್​​ ಸ್ಕೂಲ್​ ಸ್ಟುಡೆಂಟ್ಸ್​​ ರಿಕ್ವೆಸ್ಟ್ ಮಾಡಿದ್ದಾರೆ. ಮಿಸ್ಟರ್​ ತಮಿಳ್​ ಹಾಸನ್​, ನೋಡಿ, ಮಾತು ಮನೆ ಕೆಡಿಸ್ತು, ತೂತು ಒಲೆ ಕೆಡಿಸ್ತು ಅನ್ನೋ ಗಾದೆ ನಮ್ಮ ಕಡೆ ಇದೆ. ಮಾತು ಎಷ್ಟು ತೊಂದರೆ ಕೊಡುತ್ತೆ ನೋಡಿ. ಸಿಎಂ ಸ್ಟಾಲಿನ್ ಅವರು ಇಡೀ ದಕ್ಷಿಣ ಭಾರತವನ್ನು ಒಂದುಗೂಡಿಸಬೇಕು ಅನ್ನೋ ಆಸೆಯನ್ನು ವ್ಯಕ್ತಪಡಿಸುತ್ತಾ ಇದ್ದಾರೆ. ಕನಸು ಕಂಡಿದ್ದಾರೆ. ಅವರ ಕನಸಿಗೆ ನಿಮ್ಮ ಮಾತು ಸಹಾಯ ಮಾಡಬೇಕು. ನೀವು ಆ ಪಕ್ಷದ ಮಿತ್ರಪಕ್ಷ. ನೀವು ಒಳ್ಳೆ ಮಾತುಗಳನ್ನಾಡಬೇಕು. ಯೋಚಿಸಿ ಮಾತನಾಡಬೇಕು” ಎಂದಿದ್ದಾರೆ. ”ನೋಡಿ, ನಾವು ಕನ್ನಡಿಗರು. ಕನ್ನಡಿಗರು ಭಾಷಾ ಪ್ರಿಯರು. ಭಾಷಾಂಧತೆ ನಮಗಿಲ್ಲ. ನಮ್ಮ ಕನ್ನಡದ ಸಾಂಸ್ಕತಿಕ ರಾಯಭಾರಿ ಬಸವಣ್ಣ.…

Read More

ತುಮಕೂರು: ಗಾಂಧೀಜಿಯವರ ಮಾತು ಮತ್ತು ಕೃತಿಯ ಮಧ್ಯೆ ವ್ಯತ್ಯಾಸವಿರಲಿಲ್ಲ. ಅವರು ಆತ್ಮವಂಚನೆಯಿಲ್ಲದೆ ಬದುಕಿದ್ದರು. ಎಂತಹದೇ ಪ್ರತಿಕೂಲ ಸನ್ನಿವೇಶದಲ್ಲೂ ಅಂತಃಸಾಕ್ಷಿಗೆ ಬದ್ಧರಾಗಿರಬೇಕು ಎಂಬುದನ್ನು ನಾವು ಗಾಂಧೀಜಿಯವರಿಂದ ಕಲಿಯಬೇಕು ಎಂದು ನಿವೃತ್ತ ರಾಜ್ಯಶಾಸ್ತ್ರ ಪ್ರಾಧ್ಯಾಪಕಿ ಭಾರತೀಯ ವಿದ್ಯಾಭವನದ ಗಾಂಧಿ ಕೇಂದ್ರದ ನಿರ್ದೇಶಕಿ ಡಾ. ಮೀನಾ ದೇಶಪಾಂಡೆ ಮಹಿಷಿ ತಿಳಿಸಿದರು. ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ತುಮಕೂರು ವಿಶ್ವವಿದ್ಯಾನಿಲಯವು ಬುಧವಾರ ಆಯೋಜಿಸಿದ್ದ ‘ಗಾಂಧಿ ಭಾರತ’– ವಿವಿ ಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಗಾಂಧೀಜಿಯವರು ವಿಶಿಷ್ಟವಾದ ಶಕ್ತಿಯನ್ನು ಮೈಗೂಡಿಸಿಕೊಂಡಿದ್ದರು. ಸತತ ಪ್ರಯತ್ನ, ಶ್ರಮ ಹಾಗೂ ತಪಸ್ಸಿನ ಫಲವಾಗಿ ಸ್ವಾತಂತ್ರ್ಯದ ಗಮ್ಯವನ್ನು ತಲುಪಿದರು. ಅವರು ಸತ್ಯದ ಅನ್ವೇಷಣೆಯನ್ನು ತಮ್ಮ ಬದುಕಿನ ಹಾದಿಯನ್ನಾಗಿಸಿಕೊಂಡಿದ್ದರು ಎಂದು ನೆನಪಿಸಿಕೊಂಡರು. ನಮ್ಮ ಅಂತರಾಳದ ಮಾತುಗಳನ್ನು ಕೇಳಿಸಿಕೊಂಡಾಗ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಆಂತರಿಕವಾಗಿ ಬೆಳೆಯಬೇಕಾದರೆ ಮನಸ್ಸಿನ ಮಾತು ಕೇಳಬೇಕು. ಗಾಂಧೀಜಿ ಒಳಗಿನಿಂದ ಸದೃಢರಾಗಿದ್ದರಿಂದಲೇ ಅವರ ನಡೆನುಡಿಗಳಲ್ಲಿ ಸೌಮ್ಯಸ್ವಭಾವ ಇತ್ತು. ಅವರೆಂದು ದನಿ ಎತ್ತರಿಸಿ ಮಾತನಾಡಿರಲಿಲ್ಲ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…

Read More

ತುಮಕೂರು: ಹಾಸನದ ಸರ್ಕಾರಿ ಕಲೆ, ವಾಣಿಜ್ಯ ಮತ್ತು ಸ್ನಾತಕೋತ್ತರ ಸ್ವಾಯತ್ತ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಅಂತರ ಕಾಲೇಜು ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಶ್ವವಿದ್ಯಾಲಯ ಕಲಾ ಕಾಲೇಜಿನ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದಿದ್ದಾರೆ. ತೇಜಸ್ ಎಸ್., ರೋಹನ್ ಆರ್., ರಾಜಶೇಖರ ಎನ್., ಮಹೇಶ್ ಎಚ್.ಎಲ್., ಲೋಕೇಶ್ ಕೆ.ಪಿ., ನಿತಿನ್ ಜಿ.ಎನ್., ವೆಂಕಟೇಶ್ ಕೆ. ಪಿ., ವೆಂಕಟೇಶ್ ವಿ.ಎಸ್., ಟಿ. ಕಿಶನ್ ಕುಮಾರ್, ದರ್ಶನ್ ಕೆ. ಜಿ., ಅಂಜನ್ ಕುಮಾರ್ ಎಚ್.ಆರ್. ಹಾಗೂ ರೋಹಿತ್ ಎಸ್.ಎಂ. ತಂಡದಲ್ಲಿದ್ದರು. ವಿಜೇತ ತಂಡದ ಸದಸ್ಯರನ್ನು ವಿವಿ ಕಲಾ ಕಾಲೇಜು ಪ್ರಾಂಶುಪಾಲೆ ಡಾ.ದಾಕ್ಷಾಯಣಿ ಜಿ. ದೈಹಿಕ ಶಿಕ್ಷಣ ನಿರ್ದೇಶಕ ಡಾ. ಸುದೀಪ್ ಕುಮಾರ್ ಆರ್., ಸಹಾಯಕ ನಿರ್ದೇಶಕ ಗಣೇಶ್ ಎಚ್. ವಿ. ಅಭಿನಂದಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು: ಪಾಲಿಕೆ ವತಿಯಿಂದ ನಗರದ ಕುಣಿಗಲ್ ರೈಲ್ವೆ ಅಂಡರ್ ಪಾಸ್ ನಲ್ಲಿ ರಸ್ತೆ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು, ಕುಣಿಗಲ್ ಅಂಡರ್ ಪಾಸ್ ಮಾರ್ಗವಾಗಿ ಹೋಗುವ ವಾಹನಗಳ ಸಂಚಾರವನ್ನು ಜೂನ್ 24ರವರೆಗೆ ಸ್ಥಗಿತಗೊಳಿಸಿ ವಾಹನಗಳ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. ಈ ಆದೇಶದನ್ವಯ ಲಕ್ಕಪ್ಪ ಸರ್ಕಲ್‌ನಿಂದ ಕುಣಿಗಲ್ ಕಡೆಗೆ ಹೋಗುವ ಎಲ್ಲಾ ವಾಹನಗಳು ಲಕ್ಕಪ್ಪ ಸರ್ಕಲ್–ಗುಬ್ಬಿ ರಿಂಗ್ ರಸ್ತೆ ಜಂಕ್ಷನ್–ಕುಣಿಗಲ್ ಜಂಕ್ಷನ್‌ಗೆ ಹಾಗೂ ಕುಣಿಗಲ್ ಕಡೆಯಿಂದ ಲಕ್ಕಪ್ಪ ಸರ್ಕಲ್ ಕಡೆಗೆ ಬರುವ ವಾಹನಗಳು ಕುಣಿಗಲ್ ಜಂಕ್ಷನ್-ಗುಬ್ಬಿ ರಿಂಗ್ ರಸ್ತೆ ಜಂಕ್ಷನ್-ಲಕ್ಕಪ್ಪ ಸರ್ಕಲ್‌ಗೆ ಬರಬೇಕು. ಸದಾಶಿವನಗರ, ಬನಶಂಕರಿ, ಎಸ್.ಎಸ್.ಐ.ಟಿ. ಕಾಲೇಜಿನ ಕಡೆಗಳಿಂದ ಬರುವ ದ್ವಿಚಕ್ರ ಮತ್ತು ಕಾರಿನ ಚಾಲಕರು ಲಕ್ಕಪ್ಪ ಸರ್ಕಲ್ ಕಡೆಗೆ ಹೋಗಲು ಹೇಮಾವತಿ ಕಛೇರಿ ಮುಂಭಾಗದ ರಸ್ತೆಯ ಮೂಲಕ ದಾನಾ ಪ್ಯಾಲೇಸ್-ಗುಬ್ಬಿ ರಿಂಗ್ ರಸ್ತೆ ಜಂಕ್ಷನ್‌ನಿAದ ಲಕ್ಕಪ್ಪ ಸರ್ಕಲ್‌ಗೆ ಬರಬೇಕು. ಲಕ್ಕಪ್ಪ ಸರ್ಕಲ್ ಕಡೆಯಿಂದ ಸದಾಶಿವನಗರ, ಬನಶಂಕರಿ, ಎಸ್.ಎಸ್.ಐ.ಟಿ.ಕಾಲೇಜಿನ ಕಡೆಗೆ ಹೋಗುವ ದ್ವಿಚಕ್ರ ಮತ್ತು ಕಾರು ಚಾಲಕರು…

Read More

ತುಮಕೂರು: ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದ ಕಿತ್ತೂರು ರಾಣಿ ಚೆನ್ನಮ್ಮ ವಸತಿ/ಮೊರಾರ್ಜಿ ದೆಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳನ್ನು ಗೌರವ ಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ವಸತಿ ಶಾಲೆಗಳಲ್ಲಿ ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯದ ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ವಿಷಯದ ಶಿಕ್ಷಕರ ಹುದ್ದೆಗೆ ಅಭ್ಯರ್ಥಿಗಳು ಬಿ.ಎ/ಎಂ.ಎ ಮತ್ತು ಬಿ.ಎಡ್/ಟಿಇಟಿ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯದ ಶಿಕ್ಷಕರ ಹುದ್ದೆಗೆ ಬಿಇ/ಬಿಸಿಎ/ಬಿ.ಎಸ್.ಸಿ.(ಕಂಪ್ಯೂಟರ್ ಸೈನ್ಸ್) ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವವರು ಶಿಕ್ಷಕ ಹುದ್ದೆಯಲ್ಲಿ ಸೇವಾನುಭವ ಹೊಂದಿರಬೇಕು. ಆಸಕ್ತಿಯುಳ್ಳ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಜೂನ್ 4ರೊಳಗೆ ಸಮೀಪದ ವಸತಿ ಶಾಲೆ ಅಥವಾ ಇ-ಮೇಲ್ principalteacher0408@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 80737536585ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ವೊಂದು ರಸ್ತೆಬದಿಯ ಹಳ್ಳಕ್ಕೆ ನುಗ್ಗಿದ ಘಟನೆ ನಿನ್ನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬೈರನಾಯಕನಹಳ್ಳಿ ಬಳಿ ನಡೆದಿದೆ. ಕುಣಿಗಲ್ ಟು ಮಾಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಹಳ್ಳದಲ್ಲಿ ಸಿಲುಕಿದೆ. ಹಳ್ಳದಲ್ಲಿ ಸಿಲುಕಿದ್ದ ಬಸ್ ನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು. ಕೊನೆಗೆ ಜೆಸಿಬಿ ಮೂಲಕ ಹಳ್ಳದಲ್ಲಿದ್ದ ಬಸ್ ನ್ನು ಹೊರ ತೆಗೆಯಲಾಯಿತು. ಅಪಘಾತಕ್ಕೀಡಾದ ಬಸ್ ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————

Read More

ತುಮಕೂರು :  ಸಂಸ್ಕೃತದ ಜೊತೆಯಲ್ಲಿಯೇ ಕನ್ನಡ ಭಾಷೆ ಅಸ್ತಿತ್ವದಲ್ಲಿ ಇರುವುದನ್ನು ಕಂಡಿದ್ದೇವೆ, ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ತಮ್ಮ ಹೇಳಿಕೆಯನ್ನು ಬಳಸಬಾರದಿತ್ತು, ನಾವ್ಯಾರು ಕೂಡ ಸುಮ್ಮನೆ ಕೂರುವುದಿಲ್ಲ ಎಂದು ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ತಿಳಿಸಿದ್ದಾರೆ. ಕಮಲಹಾಸನವರ ಹೇಳಿಕೆಯನ್ನು ಖಂಡಿಸುತ್ತೇವೆ. ಅವರ  ಹೇಳಿಕೆ ವಿರುದ್ಧ ಪ್ರತಿಭಟಿಸುತ್ತೇವೆ. ಚಿತ್ರನಟ ಕಮಲಹಾಸನ್ ಸೇರಿದಂತೆ ಯಾರೋ ಕನ್ನಡ ಭಾಷೆಯನ್ನು ಬಗ್ಗೆ ಮಾತನಾಡಿದರೆ ನಾವು ಕೆಳಹಂತಕ್ಕೆ ಹೋಗುವುದಿಲ್ಲ. ಎಂಟು ಜ್ಞಾನಪೀಠ ಪ್ರಶಸ್ತಿ ಕನ್ನಡ ಭಾಷೆಗೆ ಲಭಿಸಿದೆ ಕಮಲಹಾಸನವರ ಹೇಳಿಕೆಯಿಂದ ಅವರೇ ಸಣ್ಣ ಮಟ್ಟಕ್ಕೆ ಹೋಗಿದ್ದಾರೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಕಮಲ್ ಹಾಸನ್ ಅವರು ಕ್ಷಮೆ ಕೇಳಬೇಕು ಇಲ್ಲದೇ ಹೋದರೆ ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಹೇಳಿದ್ದಾರೆ. ‘ಥಗ್ ಲೈಫ್’ ಸಿನಿಮಾ ಕರ್ನಾಟಕದ ವಿತರಕ ವೆಂಕಟೇಶ್ ಅವರನ್ನು ಚೇಂಬರ್​ಗೆ ಕರೆಸಿ ಮಾತುಕತೆ ನಡೆಸಿದ್ದೇವೆ. ಕಮಲ್ ಹಾಸನ್ ಅವರನ್ನು ಸಂಪರ್ಕ ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಕಮಲ್ ಅವರಿಂದ ಕ್ಷಮೆ ಕೇಳಿಸುತ್ತೇವೆ. ಎಂದು ಅವರು ಹೇಳಿದ್ದಾರೆ. ಇನ್ನೂ ಸಾರಾ ಗೋವಿಂದು ಮಾತನಾಡಿ, ಕಮಲ್ ಹಾಸನ್ ಬಗ್ಗೆ ಕನಿಕರ ಇಲ್ಲ ಇದನ್ನ ಸಹಿಸೋಕೆ ಸದ್ಯ ಇಲ್ಲ, ಇವತ್ತು ನಾಳೆ ಒಳಗೆ ಕ್ಷಮೆ ಕೇಳದೆ ಹೋದ್ರೆ ಚಿತ್ರ ಬಿಡುಗಡೆ ಆಗೋದಿಲ್ಲ, ಕಮಲ್ ಹಾಸನ್ ಅವರಿಗೆ ಮನದಟ್ಟು ಮಾಡಿಸುವ ಜವಾಬ್ದಾರಿ ವಿತರಕರದ್ದು  ಎಂದು ಅವರು ಹೇಳಿದ್ದಾರೆ. ಸಿನಿಮಾದ ಕರ್ನಾಟಕ ವಿತರಕ ವೆಂಕಟೇಶ್ ಮಾತನಾಡಿ, ನಾನೊಬ್ಬ ಕನ್ನಡಿಗನಾಗಿ ಕಮಲ್ ಹಾಸನ್ ಅವರ ಹೇಳಿಕೆಯನ್ನು ಖಂಡಿಸುತ್ತೀನಿ. ಚೇಂಬರ್ ನಲ್ಲಿ ಏನೇನು ಮೀಟಿಂಗ್ ಆಗಿದೆ ಅದನ್ನೆಲ್ಲ ಕಮಲ್ ಹಾಸನ್ ಅವರಿಗೆ…

Read More

ಬೆಳಗಾವಿ: ಬೆಳಗಾವಿಯಲ್ಲಿ ಕೊವಿಡ್ ಗೆ  ಮೊದಲ ಬಲಿಯಾಗಿದ್ದು,  ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ವೃದ್ಧ  ಮೃತಪಟ್ಟಿದ್ದಾರೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿ ಮೃತಪಟ್ಟವರಾಗಿದ್ದು, ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು.  ಹೀಗಾಗಿ ಚಿಕಿತ್ಸೆಗೆ ಅಂತಾ ಬೀಮ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಾರೆ. ಕೊವಿಡ್ ತಪಾಸಣೆ ಮಾಡಿದಾಗ ಪಾಸಿಟಿವ್ ಎಂದು ಗೊತ್ತಾದ ತಕ್ಷಣವೇ ಕೋವಿಡ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದ ಕಾರಣ 70 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಕೊವಿಡ್ ನಿಯಮಾವಳಿ ಪ್ರಕಾರವೇ ರಾತ್ರಿಯೇ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೆರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಹಾವೇರಿ: ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿದಲ್ಲದೇ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ ಪ್ರದರ್ಶಿಸುತ್ತಿದ್ದಾರೆ ಎಂದು ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳಿನಿಂದಲೇ ಕನ್ನಡ ಹುಟ್ಟಿದ್ದು ಎಂಬ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ತಮಿಳು, ಕನ್ನಡ ಎರಡೂ ಒಂದೇ ಮೂಲದ ಭಾಷೆಗಳು. ಇವು ದ್ರಾವಿಡ ವರ್ಗದಿಂದ ಬಂದ ಭಾಷೆಗಳಾಗಿವೆ. ಎರಡೂ ಕೂಡಾ ಸಹೋದರ ಭಾಷೆಗಳು. ಕಮಲ್ ಹಾಸನ್ ಅವೈಜ್ಞಾನಿಕ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ Vs ಡಿಸಿಎಂ ಮಧ್ಯೆ ವರ್ಗಾವಣೆ ಸಂರ್ಘರ್ಷ – ನಿಜಕ್ಕೂ ಆಗಿದ್ದೇನು? ಡಿಕೆಶಿ ಆಕ್ಷೇಪ ಏಕೆ? ಕಮಲ್ ಹಾಸನ್ ಇಷ್ಟಾದ್ರೂ ಕನ್ನಡಿಗರ ಬಳಿ ಕ್ಷಮೆ ಕೇಳದೇ ಮೊಂಡುತನ ತೋರಿಸಿದ್ದಾರೆ. ಸಣ್ಣತನದ ಹೇಳಿಕೆ ನೀಡಿದ್ದಾರೆ. ಕ್ಷಮೆ ಕೇಳುವ ವಿನಯವೂ ಅವರಿಗೆ ಇಲ್ಲ. ಸುಳ್ಳಲ್ಲೇ ಮೆರೆಯೋಕೆ ನೋಡ್ತಿದಾರೆ. ಅವರು ವೈಚಾರಿಕೆ ನೆಲೆಗಟ್ಟಿನಲ್ಲಿ ಮಾತಾಡಬೇಕು. ಕಮಲ್ ಹಾಸನ್ ಹೇಳಿಕೆಯಲ್ಲಿ ದ್ರಾವಿಡ ಪರಿಕಲ್ಪನೆಯೂ ಅಲ್ಲ ಎಂದು ಆಕ್ರೋಶ ಹೊರಹಾಕಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More