Author: admin

ತುಮಕೂರು: ನಗರದ ಅರ್ಬನ್ ರೆಸಾರ್ಟ್‌ನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ತುಮಕೂರು ಡಿ.ಸಿ.ಸಿ.ಬ್ಯಾಂಕಿನ ಅಧಿಕಾರಿ ವೃಂದದವರಿಗೆ ಜರುಗಿದ ರಾಜ್ಯ ಮಟ್ಟದ ತರಬೇತಿ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾಜಿ ಸಹಕಾರ ಸಚಿವ, ಶಾಸಕ ಹಾಗೂ ತುಮಕೂರು ಡಿ.ಸಿ.ಸಿ.ಬ್ಯಾಂಕಿನ ಅಧ್ಯಕ್ಷ ಕೆ.ಎನ್.ರಾಜಣ್ಣ ಮಾತನಾಡಿ, ಸಹಕಾರ ಕ್ಷೇತ್ರದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿ ತರಬೇತಿ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ನಡೆಸುತ್ತಿರುವ ಜಿಲ್ಲಾ ಸಹಕಾರ ಯೂನಿಯನ್‌ ನ್ನು ಶ್ಲಾಘಿಸಿದರು. ತರಬೇತಿಯಲ್ಲಿ ತಿಳಿಸುವಂತಹ ವಿಷಯಗಳು ತುಂಬಾ ಮುಖ್ಯವಾಗಿದ್ದು, ಸಾಲ ಮರುಪಾವತಿಯ ಪ್ರಕ್ರಿಯೆಗಳ ವಿನೂತನ ವಿಚಾರಗಳ ಬಗ್ಗೆ ತಿಳಿದುಕೊಂಡು ಬ್ಯಾಂಕಿನ ದೈನಂದಿನ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಲು ತಿಳಿಸುತ್ತಾ, ಸಹಕಾರ ಕಾನೂನುಗಳ ಅರಿವು, ಜ್ಞಾನ ಪ್ರತಿಯೊಬ್ಬರಿಗೂ ಅವಶ್ಯಕವಾಗಿದ್ದು, ಗ್ರಾಹಕರಿಗೆ ಸಮಯಕ್ಕೆ ಸರಿಯಾಗಿ ಸೇವೆಯನ್ನು ಒದಗಿಸುವುದು ಬಹುಮುಖ್ಯವಾಗಿದ್ದು, ರೈತರ ಯೋಗಕ್ಷೇಮದ ನಿಟ್ಟಿನಲ್ಲಿ ಸ್ಥಳೀಯ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ ಹಾಗೂ ಬ್ಯಾಂಕಿನ ಅಧಿಕಾರಿಗಳು ಗ್ರಾಹಕರೊಂದಿಗೆ ಸೌಹಾರ್ದಯುತವಾಗಿ, ವಿಶ್ವಾಸದಿಂದ ವ್ಯವಹಾರಿಸಬೇಕೆಂದರು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾನೂನಿನ ರೀತ್ಯಾ ಕಾರ್ಯನಿರ್ವಹಿಸಬೇಕೆಂದು ಕರೆನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ…

Read More

ತುಮಕೂರು: ಸಂತಕವಿ ಕನಕದಾಸ ಮತ್ತು ತತ್ತ್ವಪದಕಾರರ ಅಧ್ಯಯನ ಕೇಂದ್ರವು 2026-27ನೇ ಸಾಲಿನಲ್ಲಿ ಕಿರು ಅಧ್ಯಯನ ನಡೆಸಲು ತಲಾ ರೂ.1.50 ಲಕ್ಷಗಳಂತೆ ಫೆಲೋಶಿಪ್ ನೀಡುತ್ತದೆ. ಕನಕದಾಸರ ಸಾಹಿತ್ಯದಲ್ಲಿ ಧರ್ಮ, ತತ್ತ್ವಪದಕಾರರ ಲೋಕಪ್ರಜ್ಞೆ ಮತ್ತು ಸಮಕಾಲೀನತೆ, ಭಾರತೀಯ ಭಕ್ತಿಮಾರ್ಗ ಮತ್ತು ತಳಸಮುದಾಯದ ಸಾಂತರು, ಕೀರ್ತನ ಸಾಹಿತ್ಯ ಮತ್ತು ಸಮುದಾಯ: ಪ್ರಸಾರ ಮತ್ತು ಪ್ರಭಾವದ ಬಹುಮುಖಿ ನೆಲೆಗಳು. ಈ ವಿಷಯಗಳ ಕುರಿತು ಅಧ್ಯಯನ ನಡೆಸಬೇಕು. 12 ತಿಂಗಳ ಅವಧಿಯ ಈ ಅಧ್ಯಯನ ಯೋಜನೆಯ ಬಗ್ಗೆ ಆಸಕ್ತ ಸಂಶೋಧನಾರ್ಥಿಗಳು ತಮ್ಮ ವಿದ್ಯಾರ್ಹತೆ, ಸಂಶೋಧನೆಯ ಬಗೆಗಿನ ಅನುಭವ ಹಾಗೂ ತಮ್ಮ ಆಸಕ್ತಿ ಕ್ಷೇತ್ರವನ್ನೊಳಗೊಂಡ ವಿವರಗಳನ್ನು ಹಾಗೂ ಆಯ್ಕೆ ಮಾಡಿಕೊಂಡ ವಿಷಯವನ್ನು ಕುರಿತು ಅಧ್ಯಯನ ವ್ಯಾಪ್ತಿ ಮತ್ತು ಆಕರ ಸಾಮಗ್ರಿಗಳನ್ನೊಳಗೊಂಡ ಸಂಕ್ಷಿಪ್ತ ಮಾಹಿತಿ ಇರುವ ಸಾರಲೇಖನವನ್ನು ಅರ್ಜಿಯೊಂದಿಗೆ ಲಗತ್ತಿಸಿರಬೇಕು. ಆಸಕ್ತಿ ಇರುವ 20 ರಿಂದ 55 ವರ್ಷ ವಯಸ್ಸಿನ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಯನ್ನು ಅಧ್ಯಯನ ಕೇಂದ್ರ ಇ-ಮೇಲ್‌ ಗೆ ಅಥವಾ ಅಂಚೆ ಮೂಲಕ ಕಳುಹಿಸಬೇಕು. ಅರ್ಜಿ ಸಲ್ಲಿಸಲು…

Read More

ತುಮಕೂರು: ತುರುವೇಕೆರೆ ತಾಲೂಕಿನ ದಂಡಿನಶಿವಾರ ಹೋಬಳಿ ಕೊಂಡಜ್ಜಿಯಲ್ಲಿ ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’ ಶೀರ್ಷಿಕೆಯಡಿಯಲ್ಲಿ ಸಂಗೀತ-ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಜಾನಪದ ಅಕಾಡೆಮಿ ಬೆಂಗಳೂರು, ಅಂತರಂಗ ಸಂಸ್ಕೃತಿ ಚಿಂತನ ಪ್ರತಿಷ್ಠಾನ ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ ಅಂದು ಸಂಜೆ 5 ಗಂಟೆಗೆ ಆರಂಭವಾಗುವ ಕಾರ್ಯಕ್ರಮದ ಉದ್ಘಾಟನೆಯನ್ನು ಹುಬ್ಬಳ್ಳಿ ಸೌತ್ವೆಸ್ಟರ್ನ್ ರೈಲ್ವೆ ಸದಸ್ಯರಾದ ವಿಶ್ವನಾಥ್ ಕೆ.ಎಸ್. ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಡಾ.ಗೊಲ್ಲಹಳ್ಳಿ ಶಿವಪ್ರಸಾದ್ ವಹಿಸುವರು. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಈಶ್ವರ್ ಕು.ಮಿರ್ಜಿ, ರೋಟರಿ ಅಧ್ಯಕ್ಷರಾದ ಸಾ.ಶಿ.ದೇವರಾಜ್, ಜಾನಪದ ವಿದ್ವಾಂಸ ಪ್ರೊ. ಹೊನ್ನಗಾನಹಳ್ಳಿ ಕರಿಯಣ್ಣ, ಕಲ್ಪತರು ಲಯನ್ಸ್ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಚೌದ್ರಿ ನಾಗೇಶ್ ಉಪಸ್ಥಿತರಿರುವರು. ವಿನಿತಾ ಹಿರೇಮಠ, ಅಶ್ವಿನಿ ಎಸ್.ಎನ್., ವೈ.ಎನ್.ಶಿವಕುಮಾರ್, ಕಾವ್ಯ ಎಸ್. ಆರ್. ಮತ್ತು ತಂಡ ಜಾನಪದ ಗಾಯನ ನಡೆಸಿಕೊಟ್ಟರೆ, ಆದರ್ಶ ಮತ್ತು ತಂಡ ಚಿಟ್ಟಿಮೇಳ, ಭೈರವೇಶ್ವರ ಜಾನಪದ ಕಲಾತಂಡ, ಸಣ್ಣಮ್ಮ…

Read More

ತುಮಕೂರು: ನಗರದ ವಿವಿಧ ಪ್ರದೇಶಗಳಲ್ಲಿ ನಗರ ಪಾಲಿಕೆ ಅಧಿಕಾರಿಗಳು ಫುಟ್ ಪಾತ್ ಅಂಗಡಿಗಳ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಫುಟ್ ಪಾತ್ ವ್ಯಾಪಾರಿಗಳಿಗೆ ಪರ್ಯಾಯ ಸ್ಥಳದ ವ್ಯವಸ್ಥೆ ಮಾಡದೆ ಅವರನ್ನು ತೆರವು ಮಾಡಿಸಬಾರದೆಂದು ಶ್ರಮಜೀವಿ ಬೀದಿಬದಿ ವ್ಯಾಪಾರಿಗಳ ಸಂಘದ ರಾಜ್ಯಾಧ್ಯಕ್ಷ ಎಂ.ಗೋಪಿ ಮನವಿ ಮಾಡಿದ್ದಾರೆ. ನಗರದೆಲ್ಲೆಡೆ ಸುಮಾರು 5 ಸಾವಿರಕ್ಕೂ ಹೆಚ್ಚು ಫುಟ್ ಪಾತ್ ವ್ಯಾಪಾರಿಗಳು ಹಲವಾರು ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಈಗ ಏಕಾಏಕಿ ಅವರನ್ನು ಎತ್ತಂಗಡಿ ಮಾಡಿದರೆ ಅವರ ಬದುಕು ಬೀದಿಪಾಲಾಗುತ್ತದೆ. ಎಷ್ಟೋ ಜನ ಫುಟ್ಪಾತ್ ವ್ಯಾಪಾರಿಗಳು ಪ್ರಧಾನ ಮಂತ್ರಿಗಳ ಯೋಜನೆಯಡಿ ಸಾಲ ಪಡೆದಿದ್ದಾರೆ, ಖಾಸಗಿ ಸಂಸ್ಥೆಗಳಿಂದ ಸಾಲ ಪಡೆದು ವ್ಯವಹಾರ ನಡೆಸುತ್ತಿದ್ದಾರೆ. ಈಗ ತೆರವು ಮಾಡಿದರೆ ಸಾಲ ಮರುಪಾವತಿಗೆ ಹಾಗೂ ಜೀವನ ನಿರ್ವಹಣೆಗೆ ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ. ಆರ್ಥಿಕವಾಗಿ ದುರ್ಬಲರಾಗಿರುವವರು, ಅನೇಕ ವಿಕಲಚೇತನರು ಫುಟ್ಪಾತ್ನಲ್ಲಿ ವ್ಯಾಪಾರ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದಾರೆ. ಈಗ ಅವರನ್ನು ಜಾಗ ಖಾಲಿ ಮಾಡಿಸಿದರೆ ಅವರ ಜೀವನ…

Read More

ಚಿಕ್ಕನಾಯಕನಹಳ್ಳಿ: ತಾಲೂಕಿನ ಕಸಬಾ ಹೋಬಳಿಯ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋಡಿ ಕಲ್ಲೇನಹಳ್ಳಿ ಗ್ರಾಮದಲ್ಲಿ ಖಾಸಗಿ ಬೋರ್ವೆಲ್ನಿಂದ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿರುವ ಕುರಿತು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಸ್ಥಳೀಯ ಸಾರ್ವಜನಿಕರು ಗ್ರಾಮದ ಚರಂಡಿ ವ್ಯವಸ್ಥೆ ಸೇರಿದಂತೆ ವಿವಿಧ ಮೂಲ ಸೌಕರ್ಯಗಳಿಗೆ ಸಂಬಂಧಿಸಿದ ಕುಂದು ಕೊರತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. ಜೋಡಿ ಕಲ್ಲೇನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆಗೆ ಹೊಸ ಕೊಳವೆಬಾವಿ ಕೊರೆಯಲು ಅನುಮೋದನೆಯಾಗಿದ್ದು ಗುರುವಾರ ಕೊಳವೆ ಬಾವಿ ಕೋರೆಸಲಾಗುವುದು ಎಂದು ಜನರಿಗೆ ತಿಳಿಸಿದರು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಶೀಘ್ರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ ಹಾಗೂ ಶಾಲೆಗೆ ಭೇಟಿ ನೀಡಿ ಸ್ವಚ್ಛತೆ, ಸಮವಸ್ತ್ರ ವಿತರಣೆ, ಪಠ್ಯಪುಸ್ತಕ ವಿತರಣೆ ಹಾಗೂ ಹೆಚ್ಚುವರಿ ಪೌಷ್ಟಿಕ ಆಹಾರ ವಿತರಣೆ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ…

Read More

ತುಮಕೂರು: ಲಕ್ಷಾಂತರ ಜನ ವಿದ್ಯಾರ್ಥಿಗಳಿಗೆ ಆಗಿರುವ ಮೋಸ, ಅನ್ಯಾಯದ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಧ್ವನಿ ಎತ್ತಿದ್ದಾರೆ. ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿ, ಕಾನೂನಿಗೆ ವಿರುದ್ಧವಾಗಿ ನಡೆದು ಕೊಂಡಿದ್ದಾರೆ. ರಾಹುಲ್ ಗಾಂಧಿ ಅವರ ಧ್ವನಿಯನ್ನು ಅಡಗಿಸುವುದಕ್ಕೆ ಕೇಂದ್ರ ಸರ್ಕಾರ ಈ ಪ್ರಯತ್ನಗಳನ್ನು ಮಾಡುತ್ತಿದೆ. ಯುವಜನತೆಯ ಪರವಾಗಿರುವ ನಮ್ಮ ಧ್ವನಿ, ಪ್ರತಿಭಟನೆ ಹೀಗೆಯೇ ಮುಂದುವರಿಯುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದರು. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಮೋದಿಯವರು ರಾಜೀನಾಮೆ ನೀಡಬೇಕು ಎಂಬುದಾಗಿ ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಅಧಿಕಾರದಲ್ಲಿರುವವರು ತಪ್ಪು ಮಾಡಿರುವಾಗ ಸ್ವಾಭಾವಿಕವಾಗಿ ರಾಜೀನಾಮೆ ಕೇಳಬೇಕು. ಧರ್ಮೇಂದ್ರ ಪ್ರಧಾನ್ ಅವರು ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ರೈಲ್ವೆ ಅಪಘಾತದಂತಹ ಸಂದರ್ಭಗಳಲ್ಲಿ ಕೇಂದ್ರದ ಸಚಿವರುಗಳು ರಾಜೀನಾಮೆ ಕೊಟ್ಟಿದ್ದಾರೆ ಎಂದರು. ಸಚಿವ ಸಂಪುಟ ವಿಸ್ತರಣೆ ಕುರಿತ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ, ನಮ್ಮ ನಾಯಕರುಗಳು ದೆಹಲಿಗೆ ಹೋಗಿದ್ದಾರೆ. ವರಿಷ್ಠರ…

Read More

ತುಮಕೂರು :ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಪಾವಸಂದ್ರ ಗ್ರಾಮದ ಕಲ್ಲುಕ್ವಾರಿಯಲ್ಲಿ ಮುಂಗಡ ಹಣದ ನೆಪದಲ್ಲಿ ಕಳೆದ 25 ವರ್ಷಗಳಿಂದ ಅಕ್ರಮವಾಗಿ ಜೀತದಾಳುಗಳಾಗಿ ದುಡಿಸಿಕೊಳ್ಳುತ್ತಿದ್ದ ಭೋವಿ ಜನಾಂಗದ 12 ಮಂದಿ ಕಾರ್ಮಿಕರನ್ನು ಅಧಿಕಾರಿಗಳ ಜಂಟಿ ತಂಡ ಯಶಸ್ವಿಯಾಗಿ ರಕ್ಷಿಸಿದೆ. ಈ ಸಂಬಂಧ ತುಮಕೂರು ಉಪವಿಭಾಗಾಧಿಕಾರಿ ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳು ‘ಕರ್ನಾಟಕ ಜೀತ ಕಾರ್ಮಿಕ ಪದ್ಧತಿ ವಿಮುಕ್ತಿ ಕಾಯ್ದೆ 1976’ ರ ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಸಂತ್ರಸ್ತರಿಗೂ ಜೀತ ಪದ್ಧತಿಯಿಂದ ವಿಮುಕ್ತಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಪಾವಸಂದ್ರ ಗ್ರಾಮದ ಸರ್ವೇ ನಂಬರ್ 34 ರ ಕಲ್ಲುಬಂಡೆಯಲ್ಲಿ ಕಲ್ಲುಗಣಿಗಾರಿಕೆ ಕೆಲಸಕ್ಕೆ ಕಾರ್ಮಿಕರನ್ನು ಜೀತದಾಳುಗಳಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬ ದೂರಿನನ್ವಯ, ಕುಣಿಗಲ್ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಹಾಗೂ ‘ಮುಕ್ತಿ ಸಂಸ್ಥೆ’ಯ ಪ್ರತಿನಿಧಿಗಳು ದಿ: 21-07-2026 ರಂದು ಜಂಟಿ ಸ್ಥಳ ತನಿಖೆ ನಡೆಸಿದರು. ಈ ಕಾರ್ಯಾಚರಣೆಯಲ್ಲಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು, ಸಿಡಿಪಿಒ, ಕಾರ್ಮಿಕ ಅಧಿಕಾರಿಗಳು, ಪೊಲೀಸ್ ಉಪನಿರೀಕ್ಷಕರು, ರಾಜಸ್ವ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಗೂ…

Read More

ತಿಪಟೂರು: ಕೇಂದ್ರ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಸಾಲು ಸಾಲು ಪರೀಕ್ಷಾ ಅಕ್ರಮಗಳು ನಡೆಯುತ್ತಿದ್ದು ‘ನೀಟ್’ (NEET) ಪರೀಕ್ಷೆಯ ಅಕ್ರಮಗಳಿಂದಾಗಿ ದೇಶದ ಸಾವಿರಾರು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯ ಸಂಪೂರ್ಣವಾಗಿ ಹಾಳಾಗಿದೆ ಎಂದು ತಿಪಟೂರು ಕಾಂಗ್ರೆಸ್ ಮುಖಂಡ ಹಾಗೂ ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ.ಬಿ. ಶಶಿಧರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀಟ್ ಪರೀಕ್ಷೆಯ ಅಕ್ರಮವನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ದೌರ್ಜನ್ಯ ಎಸಗಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕುವ ದುರುದ್ದೇಶದಿಂದ ವಿದ್ಯಾರ್ಥಿಗಳನ್ನು ತೀವ್ರವಾಗಿ ಅವಮಾನಿಸಲಾಗಿದೆ. ಹೋರಾಟದಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮೇಲೆಯೂ ಹಲ್ಲೆಗೆ ಯತ್ನಿಸಿರುವುದು ಪ್ರಜಾಪ್ರಭುತ್ವದ ಸ್ಪಷ್ಟ ಕಗ್ಗೊಲೆಯಾಗಿದೆ ಎಂದು ಟೀಕಿಸಿದರು. “ಈ ಸಾಲು ಸಾಲು ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ನೀಟ್ ಅಕ್ರಮ ಹಾಗೂ ಮಾನಸಿಕ ಒತ್ತಡದಿಂದಾಗಿ ಆತ್ಮಹತ್ಯೆಗೆ…

Read More

ತುಮಕೂರು: ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಗಂಗಹನುಮಯ್ಯ ಅವರ ಧರ್ಮಪತ್ನಿ, ಹಿರಿಯ ಪತ್ರಕರ್ತೆ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ (65) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತಿ, ಮೂವರು ಮಕ್ಕಳು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಸಾಮಾಜಿಕ, ರಾಜಕೀಯ ಹಾಗೂ ಮಾಧ್ಯಮ ರಂಗದಲ್ಲಿ ಸೇವೆ ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಕಮಲಮ್ಮ ಅವರು ತುಮಕೂರು ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಮಾಧ್ಯಮ ರಂಗದಲ್ಲೂ ಸಕ್ರಿಯರಾಗಿದ್ದ ಅವರು, ಸುಮಾರು 46 ವರ್ಷಗಳ ಇತಿಹಾಸವಿರುವ ‘ಅಮೃತವಾಣಿ’ ಪತ್ರಿಕೆಯ ಉಪ ಸಂಪಾದಕಿಯಾಗಿ ಪತ್ರಿಕೆಯನ್ನು ಸಮರ್ಥವಾಗಿ ಮುನ್ನಡೆಸಿದ್ದರು. ಗಣ್ಯರ ಸಂತಾಪ ಕಮಲಾ ಗಂಗಹನುಮಯ್ಯ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮಾಜಿ ಸಚಿವ ಕೆ.ಎನ್. ರಾಜಣ್ಣ, ಸೊಗಡು ಶಿವಣ್ಣ, ಶಾಸಕ ಜ್ಯೋತಿ ಗಣೇಶ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕ…

Read More

ವರದಿ:ಹಾದನೂರು ಚಂದ್ರ ಸರಗೂರು: ಪಟ್ಟಣದಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ತಂದು ಮಾರಾಟ ಮಾಡುತ್ತಿದ್ದ ದಂಧೆಯನ್ನು ಭೇದಿಸಿರುವ ಸರಗೂರು ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 2,880 ಲಾಟರಿ ಟಿಕೆಟ್‌ಗಳು ಹಾಗೂ ₹1.44 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಪಟ್ಟಣದ ನಿವಾಸಿಗಳಾದ ‘ತರಕಾರಿ ಮಂಜು’ ಹಾಗೂ ರಮೇಶ್ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಸರಗೂರು ಠಾಣೆಯ ಪಿಎಸ್‌ಐ ಆರ್. ಕಿರಣ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಪಕ್ಕದ ವಿ.ವಿ. ಬಡಾವಣೆಯಲ್ಲಿ ಅಕ್ರಮವಾಗಿ ಲಾಟರಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪಿಎಸ್‌ಐ ಆರ್. ಕಿರಣ್ ತಿಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಎಎಸ್‌ಐ ಕೃಷ್ಣಕುಮಾರ್, ಸಿಬ್ಬಂದಿಗಳಾದ ಇಮ್ರಾನ್ ಅಹಮದ್, ಚಂದ್ರ, ರಾಜು, ಶಿವರಾಜು, ರಮೇಶ್, ದೇವರಾಜು, ಸತೀಶ್, ಜಗದೀಶ್ ಶೆಟ್ಟರು, ರಾಜೇಶ್, ಅಂಬರೀಷ್ ಸೇರಿದಂತೆ ಹಲವರು…

Read More