Subscribe to Updates
Get the latest creative news from FooBar about art, design and business.
- ತಿಪಟೂರು: ಮೂವರು ಎನ್ ಸಿಸಿ ಕೆಡೆಟ್ ಗಳು ಭಾರತೀಯ ಸೇನೆಗೆ ಆಯ್ಕೆ
- ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್ ನಲ್ಲಿ ಮಿಂಚಿದ ಕನ್ನಡಿಗ
- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
- ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
- ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
- ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
- ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
- ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
Author: admin
ತುಮಕೂರು: ಸರ್ಕಾರ ನಿಗದಿಪಡಿಸಿರುವ ಸುತ್ತೋಲೆ ಆದೇಶವನ್ನು ಪಾಲನೆ ಮಾಡದೆ ನಿರ್ಲಕ್ಷ್ಯ ವಹಿಸುತ್ತಿರುವ ಹಿನ್ನೆಲೆಯಲ್ಲಿ ಓರ್ವ ರಾಜಸ್ವ ನಿರೀಕ್ಷಕರು ಹಾಗೂ ಮೂವರು ಗ್ರಾಮ ಆಡಳಿತಾಧಿಕಾರಿಗಳಿಗೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರು ಸೂಚನಾ ಪತ್ರ ರವಾನಿಸಿದ್ದಾರೆ. ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಶಿಷ್ಟಾಚಾರ ಪಾಲನೆ ಮಾಡುವುದು, ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ರಾಜಸ್ವ ನಿರೀಕ್ಷಕರ ಕರ್ತವ್ಯವಾಗಿರುತ್ತದೆ. ಆದರೆ, ಈ ತಾಲ್ಲೂಕಿನಲ್ಲಿ ತಹಸಿಲ್ದಾರ್ ಅವರ ಶಿಷ್ಟಾಚಾರವನ್ನು ಕಸಬಾ ಹೋಬಳಿ ಟೌನ್ ವ್ಯಾಪ್ತಿಗೆ ಸೇರುವ ಗ್ರಾಮ ಆಡಳಿತಾಧಿಕಾರಿಗಳು ಮತ್ತು ರಾಜಸ್ವ ನಿರೀಕ್ಷಕರು ಪಾಲನೆ ಮಾಡದೆ ಸರ್ಕಾರದ ಸುತ್ತೋಲೆಯನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದ್ದಾರೆ. ಶಿಷ್ಟಾಚಾರ ಪಾಲನೆ ಮಾಡುವ ಬಗ್ಗೆ ಈಗಾಗಲೇ ಸಭೆಗಳಲ್ಲಿ ಸೂಚಿಸಿದ್ದರೂ ಸಹ ಕ್ರಮ ವಹಿಸಿರುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಆದಕಾರಣ, ಕೆಳಕಂಡ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ರಾಜಸ್ವ ನಿರೀಕ್ಷಕರು ಪ್ರತಿನಿತ್ಯ ಬೆಳಗ್ಗೆ 9.30ಕ್ಕೆ ತಾಲ್ಲೂಕು ಕಚೇರಿಗೆ ಹಾಜರಾಗಿ ತಹಶೀಲ್ದಾರ್ ಅವರನ್ನು ಭೇಟಿ ಮಾಡುವುದು ಮತ್ತು ಸಂಜೆ 6ಗಂಟೆಗೆ ತಾಲ್ಲೂಕು ಕಚೇರಿಯಲ್ಲಿ ತಹಸಿಲ್ದಾರ್ ಅವರನ್ನು ಭೇಟಿ ಮಾಡಲು…
ತುಮಕೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಸುರೇಶ್ ಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ, ಮುಂಬರುವ ತಮ್ಮ ಎರಡು ವರ್ಷಗಳ ಅಧಿಕಾರಾವಧಿಯಲ್ಲಿ ರಾಜ್ಯದ ಹೆಚ್ಚಿನ ಅಭಿವೃದ್ಧಿ ಹಾಗೂ ಜನ ಕಲ್ಯಾಣಕ್ಕಾಗಿ ಕೆಲಸ ಮಾಡಲಿ ಎಂದು ಅವರು ಹಾರೈಸಿದ್ದಾರೆ. ಆದರೆ, ನೂತನ ಸಂಪುಟ ರಚನೆ ಮತ್ತು ಕಾಂಗ್ರೆಸ್ ನ ಆಂತರಿಕ ರಾಜಕೀಯದ ಕುರಿತು ಶಾಸಕ ಸುರೇಶ್ ಗೌಡ ತೀವ್ರ ಅಸಮಾಧಾನ ಹಾಗೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇವತ್ತಿನ ಸಂಪುಟ ರಚನೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಇದರಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಆಯ್ಕೆಯ ಒಬ್ಬನೇ ಒಬ್ಬ ಸಚಿವರೂ ಇದ್ದಂತೆ ಕಾಣುತ್ತಿಲ್ಲ. ಯಾವುದೇ ಒಬ್ಬ ಹೊಸ ನಾಯಕ ಅಧಿಕಾರಕ್ಕೆ ಬಂದಾಗ, ತಮ್ಮದೇ ಆದ ಆಯ್ಕೆಯ ಜನರನ್ನು ಇಟ್ಟುಕೊಂಡು ಆಡಳಿತ ನಡೆಸಲು ಬಯಸುವುದು ಸಹಜ. ಆದರೆ, ಕಾಂಗ್ರೆಸ್ ಪಕ್ಷದೊಳಗಿರುವ ಆಂತರಿಕ ಹಿತಾಸಕ್ತಿಗಳು ಹಾಗೂ ಬಣ ರಾಜಕೀಯದ ಕಾರಣದಿಂದಾಗಿ ಎಲ್ಲರೂ ಸೇರಿಕೊಂಡು ಶಿವಕುಮಾರ್ ಅವರ ಕೈಕಾಲುಗಳನ್ನು…
ತುಮಕೂರು: ನಿರುದ್ಯೋಗಿ ಯುವಕ–ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ತುಮಕೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಇಂಟಿಗ್ರೇಟೆಡ್ ಪರ್ಸನಲ್ ಸರ್ವೀಸ್ ಲಿಮಿಟೆಡ್ ಸಂಸ್ಥೆಯು ಜಂಟಿಯಾಗಿ ಜೂನ್ 9ರಂದು ನೇರ ಸಂದರ್ಶನವನ್ನು (Walk–in Interview) ಆಯೋಜಿಸಿದೆ. ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗಾಗಿ ಈ ಸಂದರ್ಶನ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬಹುದು. ಖಾಲಿ ಇರುವ ಹುದ್ದೆಗಳ ವಿವರಗಳು: ಡಾಟಾ ಎಂಟ್ರಿ ಆಪರೇಟರ್ (Data Entry Operator) ಟೆಲಿಕಾಲರ್ಸ್ (Telecallers) ಡೆಲಿವರಿ ಬಾಯ್ಸ್ (Delivery Boys) ಫೀಲ್ಡ್ ಟೆಕ್ನೀಷಿಯನ್ (Field Technician) ಫೀಲ್ಡ್ ಎಕ್ಸಿಕ್ಯೂಟಿವ್ (Field Executive) ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್ (Field Sales Executive) ರೀಟೇಲ್ ಡಿಸೈನ್ ಕನ್ಸಲ್ಟೆಂಟ್ (Retail Design Consultant) ಸಂದರ್ಶನದ ಸಮಯ ಮತ್ತು ಸ್ಥಳ: ದಿನಾಂಕ: ಜೂನ್ 9 ಸಮಯ: ಬೆಳಿಗ್ಗೆ 10:00 ಗಂಟೆಯಿಂದ ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಡಿ.ಪಿ.ಐ. ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ,…
ಪಾವಗಡ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪಾವಗಡ ತಾಲೂಕಿನ ಸಿ.ಕೆ.ಪುರ ಗ್ರಾಮದ ಸರ್ಕಾರಿ ಹಿರಿಯ ಮಾದರಿ ಪಾಠಶಾಲೆ ಆವರಣದಲ್ಲಿ ಮಂಗಳವಾರ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಸಿಡಿಪಿಓ ಸುನಿತಾ ಅವರು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ, “ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಭೂಮಿಯ ವಾತಾವರಣದ ಸಮತೋಲನ ಕಾಪಾಡಲು ಪ್ರಕೃತಿ ರಕ್ಷಣೆ ಅತ್ಯಗತ್ಯ. ಪ್ರಕೃತಿಯನ್ನು ಹಾಳು ಮಾಡಿದರೆ ಮನುಷ್ಯನ ಉಳಿವೇ ಪ್ರಶ್ನೆ. ಗಿಡ-ಮರ ಬೆಳೆಸಿ ಉತ್ತಮ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಕರ್ತವ್ಯ” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ನಾಗರಾಜ್, ಪಿಡಿಓ ರಂಗಸ್ವಾಮಿ, ಎಸ್ಡಿಎಂಸಿ ಅಧ್ಯಕ್ಷ ವಸಂತ್ ಕುಮಾರ್, ಶಿಕ್ಷಕರಾದ ಪೃಥ್ವಿರಾಜ್, ಸರಸ್ವತಿ, ಪ್ರಕಾಶ್, ಜಯಣ್ಣ, ಇಲಾಖೆಯ ನಂದೀಶ್ ಹಾಗೂ ಅಂಗನವಾಡಿ ಶಿಕ್ಷಕರು ಉಪಸ್ಥಿತರಿದ್ದರು. ಸಿ.ಕೆ.ಪುರ ಸರ್ಕಾರಿ ಮಾದರಿ ಶಾಲೆ, ಶಾಂತಿನಿಕೇತನ, ಜ್ಞಾನವಾಹಿನಿ ಮತ್ತು ಸಿದ್ದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಪಾಲ್ಗೊಂಡು ಪರಿಸರ ಸಂರಕ್ಷಣೆಯ ಕುರಿತು ತಮ್ಮ ಕಲ್ಪನೆಯನ್ನು ಚಿತ್ರಗಳ ಮೂಲಕ ಅನಾವರಣಗೊಳಿಸಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ…
ತುಮಕೂರು: ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಸಬಲೀಕರಣದ ಉದ್ದೇಶದಿಂದ ತುಮಕೂರು ನಗರ ಪೊಲೀಸ್ ಇಲಾಖೆಯ ‘ಅಕ್ಕಪಡೆ’ ತಂಡ ನಗರದಾದ್ಯಂತ ವಿಶೇಷ ಜಾಗೃತಿ ಅಭಿಯಾನವನ್ನು ನಿರಂತರವಾಗಿ ನಡೆಸುತ್ತಿದೆ. ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಖ್ಯ ನೇತೃತ್ವದಲ್ಲಿ, ಗೃಹ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ಸಹಯೋಗದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ತಕ್ಷಣದ ರಕ್ಷಣೆ ಒದಗಿಸುವುದರ ಜೊತೆಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ, ತುಮಕೂರು ವಿಶ್ವವಿದ್ಯಾನಿಲಯದ ಮುಂಭಾಗ, ಗೆದ್ದಲಹಳ್ಳಿ ಸಿಗ್ನಲ್, ಜಿಲ್ಲಾ ಆಸ್ಪತ್ರೆ ಹಾಗೂ ಮಾರುಕಟ್ಟೆ ಪ್ರದೇಶ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಅಕ್ಕಪಡೆ ವಾಹನಗಳು ದಿನವೂ ಸಂಚರಿಸುತ್ತಿವೆ. ಕಾಲೇಜಿಗೆ ತೆರಳುವ ವಿದ್ಯಾರ್ಥಿನಿಯರು ಮತ್ತು ಹಾಸ್ಟೆಲ್ಗಳಲ್ಲಿ ವಾಸಿಸುವ ಹೆಣ್ಣುಮಕ್ಕಳ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಸಂಜೆ ವೇಳೆಯಲ್ಲಿ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಸಿಬ್ಬಂದಿ ಕಾಲ್ನಡಿಗೆಯಲ್ಲಿ ಗಸ್ತು ತಿರುಗಿ ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾ…
ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಇಂದು ತುಮಕೂರು ನಗರದ ಅಮಾನಿಕೆರೆ ಗಾಜಿನಮನೆಯ ಆವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜನ್ಮದಿನಾಚರಣೆಯನ್ನು ಇಂದು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ ಆಚರಣೆಯನ್ನು ಮಾಡಲಾಯಿತು. ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ 24ನೇ ರಾಜರಾಗಿದ್ದವರು, ಇವರ ಆಳ್ವಿಕೆ 1902 ರಿಂದ 1940 ರವರೆಗೆ ರಾಜ್ಯಭಾರ ಮಾಡಿದಂತಹ ಮಹಾನ್ ನಾಯಕರು. ಶ್ರೀಯುತರು ಕೇವಲ 10 ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು. ರಾಜಕುಮಾರನಿಗೆ ಸೂಕ್ತ ವಿದ್ಯಾಭ್ಯಾಸ, ಆಡಳಿತ ತರಬೇತಿ ಇವುಗಳನ್ನು ಮಹಾರಾಣಿಯವರು ತೀವ್ರ ನಿಗಾ ವಹಿಸಿ ನಡೆಸಿದ ಪರಿಣಾಮವಾಗಿ,…
ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ತಣ್ಣೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು ಹಾಗೂ ಕೊರಟಗೆರೆ ತಾಲ್ಲೂಕು ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಕೆ.ಟಿ. ಗೋವಿಂದರೆಡ್ಡಿ ಅವರು ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಪರಿಸರ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪೋಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಪರಿಸರ ಮಾಲಿನ್ಯ ಹಾಗೂ ಹವಾಮಾನ ವೈಪರೀತ್ಯಗಳನ್ನು ತಡೆಗಟ್ಟಲು ಮರಗಳ ಸಂರಕ್ಷಣೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು. ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಗಿದ್ದು, ಅವುಗಳ ನಿರ್ವಹಣೆ ಹಾಗೂ ಸಂರಕ್ಷಣೆಗೆ ವಿದ್ಯಾರ್ಥಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಯಿತು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ಈ ಕಾರ್ಯಕ್ರಮ ಗ್ರಾಮದಲ್ಲಿ…
ಕೊರಟಗೆರೆ: ರೋಟರಿ ಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಹಮ್ಮಿಕೊಂಡಿರುವ ಬೃಹತ್ ಯೋಜನೆಗಳು ಯಶಸ್ವಿಯಾಗಿವೆ. ಧಾರ್ಮಿಕ ಕೇಂದ್ರಗಳು ಕೇವಲ ಧಾರ್ಮಿಕ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಕ್ಕೆ ಪ್ರಗತಿಪರ ಚಿಂತನೆಗಳನ್ನು ಧಾರೆ ಎರೆಯಬೇಕು ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಶ್ರೀಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಸಿ.ಎನ್. ದುರ್ಗ ಹೋಬಳಿಯ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಶ್ರೀಮಠದ ಸಮುದಾಯ ಭವನದಲ್ಲಿ ರೋಟರಿ ಸಿದ್ದರಬೆಟ್ಟ ವತಿಯಿಂದ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಪಂಚದ ಜಾಗತಿಕ ಸಮಸ್ಯೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಶ್ರೀಗಳು, “ಇಂದು ಎಲ್ಲೆಡೆ ಜಾಗತಿಕ ಸಮಸ್ಯೆಗಳ ಭೀತಿ ಆವರಿಸಿದೆ. ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿರುವುದು ಆತಂಕಕಾರಿ ವಿಷಯ. ಹೀಗಾಗಿ ಸಂಸ್ಥೆಯು ಹಮ್ಮಿಕೊಂಡಿರುವ ಬೋರ್ವೆಲ್ ರೀಚಾರ್ಜ್ ಯೋಜನೆಗೆ ರೈತರು ಕೈಜೋಡಿಸಬೇಕಿದೆ,” ಎಂದರು. ಅಲ್ಲದೆ, ರೋಟರಿ ಅಧ್ಯಕ್ಷ ಬಾಲಾಜಿ ದರ್ಶನ್ ನೇತೃತ್ವದಲ್ಲಿ ೨೦೨೫-೨೬ನೇ ಸಾಲಿನಲ್ಲಿ ೩೫ಕ್ಕೂ ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿರುವುದನ್ನು ಶ್ಲಾಘಿಸಿದರು. ಗಂಗಾಧರ ಶಾಸ್ತ್ರಿಗಳ ಆರಂಭಿಕ ಶ್ರಮದಿಂದ…
ಕೊರಟಗೆರೆ: ಕ್ಷೇತ್ರದಿಂದ ಭರ್ಜರಿ ಜಯಗಳಿಸಿರುವ ಡಾ. ಜಿ. ಪರಮೇಶ್ವರ್ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ (DCM) ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಕೊರಟಗೆರೆ ಪಟ್ಟಣದ ಎಸ್ ಎಸ್ ಆರ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಭರ್ಜರಿಯಾಗಿ ಸಂಭ್ರಮಿಸಿದರು. ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಆರ್. ಓಬಳರಾಜು ಅವರು, “ನಮ್ಮ ಕ್ಷೇತ್ರದ ಶಾಸಕರು ಹಾಗೂ ಜನಪ್ರಿಯ ನಾಯಕರಾದ ಡಾ. ಜಿ. ಪರಮೇಶ್ವರ್ ಅವರು ಎರಡನೇ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಇಡೀ ಕ್ಷೇತ್ರಕ್ಕೆ ಸಂತೋಷ ತಂದಿದೆ. ಅವರ ಅಪಾರ ಸೇವೆ ಮತ್ತು ಹಿರಿತನಕ್ಕೆ ಅವರು ಮುಖ್ಯಮಂತ್ರಿಯಾಗಬೇಕಿತ್ತು. ಆದರೆ, ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ” ಎಂದರು. ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಎಲ್. ರಾಜಣ್ಣ ಮಾತನಾಡಿ, “ಡಾ. ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿರುವುದು ಕೊರಟಗೆರೆ ವಿಧಾನಸಭಾ ಕ್ಷೇತ್ರ, ತುಮಕೂರು ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯದ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಅತ್ಯಂತ…
ರಾಘವೇಂದ್ರ ಅಡಿಗ ಎಚ್ಚೆನ್. ಭಾರತದ ಪ್ರಮುಖ ಮನರಂಜನೆ ಹಾಗೂ ತಂತ್ರಜ್ಞಾನ ಸಂಸ್ಥೆ ‘ಜೀ’, ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ನ ಗ್ರಾಂಡ್ ಫಿನಾಲೆಗೆ ಸಿದ್ಧತೆ ಮಾಡಿಕೊಂಡಿದೆ. ನವ ಪೀಳಿಗೆಯ ಕಥೆಗಾರರನ್ನು ಗುರುತಿಸುವ ನಿಟ್ಟಿನಲ್ಲಿ 2026 ರ ಆರಂಭದಲ್ಲಿ ಘೋಷಿಸಲಾದ ಈ ಸ್ಪರ್ಧೆ, ದೇಶಾದ್ಯಂತ ಉದಯೋನ್ಮುಖ ಪ್ರತಿಭೆಗಳು ತಮ್ಮ ಸ್ಮಾರ್ಟ್ಫೋನ್ಗಳಲ್ಲೇ ಚಿತ್ರೀಕರಿಸಿದ ವಿಶಿಷ್ಟ ಕಿರುಚಿತ್ರಗಳಿಗೆ ವೇದಿಕೆಯಾಗಿದೆ. ಒಟ್ಟು ಎಂಟು ಭಾರತೀಯ ಭಾಷೆಗಳಲ್ಲಿ ನಡೆದ ಈ ಸ್ಪರ್ಧೆಯ ಮುಖ್ಯ ಉದ್ದೇಶ ಸಿನಿಮಾ ನಿರ್ಮಾಣ ಕೇವಲ ಕೆಲವರಿಗಷ್ಟೇ ಸೀಮಿತವಾಗದೆ, ದೇಶದ ಮೂಲೆ ಮೂಲೆಯ ವಿಭಿನ್ನ ಸಂಸ್ಕೃತಿ ಮತ್ತು ಕಥೆಗಳಿಗೆ ಸೂಕ್ತ ಮನ್ನಣೆ ಸಿಗುವಂತೆ ಮಾಡುವುದಾಗಿದೆ. ಸ್ಪರ್ಧೆಯು ಈಗ ಅಂತಿಮ ಘಟ್ಟಕ್ಕೆ ತಲುಪಿದ್ದು, ಭಾರತೀಯ ಚಿತ್ರರಂಗದ ದಿಗ್ಗಜ ನಿರ್ದೇಶಕರನ್ನೊಳಗೊಂಡ ಜ್ಯೂರಿ ಸಮಿತಿಯು ವಿಜೇತರ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಪ್ರತಿಷ್ಠಿತ ಸಮಿತಿಯಲ್ಲಿ ಅನುರಾಗ್ ಕಶ್ಯಪ್ (ಹಿಂದಿ), ರವಿ ಜಾಧವ್ (ಮರಾಠಿ), ನಾಗ್ ಅಶ್ವಿನ್ (ತೆಲುಗು), ಸೃಜಿತ್ ಮುಖರ್ಜಿ (ಬೆಂಗಾಲಿ), ಪಿ.…