Subscribe to Updates
Get the latest creative news from FooBar about art, design and business.
- ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ ಪರಮೇಶ್ವರ್ ಸೂಚನೆ
- ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
- ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
- ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
- ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
- ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
- ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
- ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು ಮಾಡಬೇಕು?
Author: admin
ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ ಅನುಭವದಲ್ಲಿ ಕಾಂಗ್ರೆಸ್ ಪಕ್ಷದ ಕಟ್ಟಾಳುವಿನಂತೆ ಪಕ್ಷಕ್ಕೆ ದುಡಿದಿದ್ದಾರೆ. ಇಂತಹ ಹಿರಿಯ ಜೀವಕ್ಕೆ ಸಚಿವ ಸ್ಥಾನ ನೀಡುವಂತೆ ನಗರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಂಜನ್ ಕುಮಾರ್ ಒತ್ತಾಯಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಯುವ ಕಾಂಗ್ರೆಸ್ ಘಟಕದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಯಚಂದ್ರ ಅವರಿಗೆ ಈವರೆಗೆ ಕಾಂಗ್ರೆಸ್ ಪಕ್ಷದ ಸರ್ಕಾರಗಳಲ್ಲಿ ಕಾನೂನು ಮತ್ತು ಸಂಸದೀಯ, ಸಣ್ಣ ನೀರಾವರಿ, ಕೃಷಿ, ಉನ್ನತ ಶಿಕ್ಷಣ ಸೇರಿದಂತೆ ವಿವಿಧ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಅನುಭವ ಇದೆ ಎಂದರು. ಸಿದ್ದರಾಮಯ್ಯ ಅವರ ಈ ಹಿಂದಿನ 5 ವರ್ಷಗಳ ಸರ್ಕಾರದ ಅವಧಿಯಲ್ಲಿ 29 ಕ್ಕೂ ಹೆಚ್ಚು ಸಮಿತಿಗಳ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿ ಇಡೀ ರಾಜ್ಯದಲ್ಲಿ ಓರ್ವ ಉತ್ತಮ ಶಾಸಕ ಎಂದು ಸರ್ಕಾರದಿಂದಲೇ ಪ್ರಶಸ್ತಿಯನ್ನೂ ಪಡೆದು ಅಭಿನಂದಿಸಲಾಗಿದೆ. ಇಂತಹ ಅನುಭವಿ ಶಾಸಕರಿಗೆ 20 ಮಂದಿಗೆ ಸಚಿವ…
ಮಧುಗಿರಿ : ಮುಂಗಾರು ಆರಂಭಗೊಂಡ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯಿಂದ ನೀಡಲಾಗುವ ಬಿತ್ತನೆ ಬೀಜವನ್ನು ವಿತರಿಸುತ್ತಿದ್ದು, ರೈತರು ಸದುಪಯೋಗ ಮಾಡಿಕೊಳ್ಳಿ ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು. ತಾಲೂಕಿನ ಮಿಡಿಗೇಶಿ ಹೋಬಳಿಯ ಹೊಸಕರೆ ಗ್ರಾಮದಲ್ಲಿ 2026–27 ನೇ ಸಾಲಿನ ಮುಂಗಾರು ಹಂಗಾಮಿನ ರಾಷ್ಟ್ರೀಯ ಖಾದ್ಯತೈಲ ಅಭಿಯಾನ ಎಣ್ಣೆಕಾಳು ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸದ್ಯ ಮಳೆ ಆರಂಭವಾಗಿದೆ. ವಾತಾವರಣವನ್ನು ಸೂಕ್ಷ್ಮವಾಗಿ ಗಮನಿಸಿ ಬೀಜ ಬಿತ್ತನೆ ಮಾಡಿ ಎಂದರು. ಕೃಷಿ ಭೂಮಿಯನ್ನು ಎಂದಿಗೂ ಮಾರಾಟ ಮಾಡಬೇಡಿ. ಮಣ್ಣು ಸಬಲೀಕರಣ ಮಾಡಿ ರೈತರು ಬೇಸಾಯ ಕೈಗೊಳ್ಳಬೇಕು. ಹಾಗಾಗ ಕೃಷಿ ಅಧಿಕಾರಿಗಳ ಸಲಹೆ ಪಡೆದು ಮುಂದುವರೆಯಲು ಸೂಚಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಜೆಡಿ ಲಕ್ಷ್ಮಣ್ ಕಲ್ಲಣವರ್, ಉಪ ಕೃಷಿ ನಿರ್ದೇಶಕ ಚಂದ್ರಕುಮಾರ್, ಸಾಹಾಯಕ ಕೃಷಿ ನಿರ್ದೇಶಕ ಚನ್ನಕೇಶವಮೂರ್ತಿ, ಕೃಷಿ ವಿಜ್ಞಾನಿ ಈರೇಹಳ್ಳಿ ಜಗದೀಶ್, ಪ್ರಶಾಂತ್, ಕೃಷಿಕ ಸಮಾಜದ ಅಧ್ಯಕ್ಷ ಗುಟ್ಟೆ ರಮೇಶ್, ಕಾಂಗ್ರೆಸ್ ಮುಖಂಡರು, ರೈತರು ಜೊತೆಗಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಕೊರಟಗೆರೆ: ತಾಲ್ಲೂಕಿನ ಕಸಬ ಹೋಬಳಿಯ ಬೋಡ ಬಂಡೇನಹಳ್ಳಿ ಗ್ರಾಮದ ಹೃದಯ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಚೌಡೇಶ್ವರಿ ತಾಯಿ ದೇವಸ್ಥಾನಕ್ಕೆ ಮಾಜಿ ಐಎಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಗ್ರಾಮದ ಆರಾಧ್ಯ ದೈವವಾಗಿರುವ ಶ್ರೀ ಚೌಡೇಶ್ವರಿ ದೇವಸ್ಥಾನವು ಶಿಥಿಲಾವಸ್ಥೆಗೆ ತಲುಪಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಮುಖಂಡರು ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದಾರೆ. ಪ್ರಸ್ತುತ ದೇವಸ್ಥಾನದ ಕಟ್ಟಡ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಆರ್ಥಿಕ ಕೊರತೆಯಿಂದ ಕಾಮಗಾರಿ ಮುಂದುವರಿಸಲು ದಾನಿಗಳ ಸಹಕಾರ ಅಗತ್ಯವಾಗಿದೆ ಎಂದು ಗ್ರಾಮಸ್ಥರು ಹಾಗೂ ಮುಖಂಡರು ಅನಿಲ್ ಕುಮಾರ್ ಅವರ ಗಮನಕ್ಕೆ ತಂದರು. ದೇವಸ್ಥಾನದ ಕಾಮಗಾರಿ ಹಾಗೂ ಪ್ರಗತಿಯನ್ನು ವೀಕ್ಷಿಸಿದ ಅನಿಲ್ ಕುಮಾರ್ ಅವರು, ಗ್ರಾಮದ ಜನರ ಭಕ್ತಿ ಹಾಗೂ ಶ್ರಮವನ್ನು ಶ್ಲಾಘಿಸಿದರು. ನಂತರ ಮಾತನಾಡಿದ ಅವರು, “ಇತಿಹಾಸ ಪ್ರಸಿದ್ಧ ಈ ದೇವಸ್ಥಾನವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿದೆ. ಪುನರ್ ನಿರ್ಮಾಣ ಕಾರ್ಯಕ್ಕೆ ನನ್ನಿಂದ…
ತುಮಕೂರು: ಸಮರ್ಥ್ ಫೌಂಡೇಷನ್ ಕೌಶಲ್ಯಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ ವತಿಯಿಂದ ಕೌಶಲ್ಯ ತರಬೇತಿ ಕಾರ್ಯಕ್ರಮದಡಿಯಲ್ಲಿ 18-40 ವರ್ಷ ವಯಸ್ಸಿನ ಲಿಂಗಾಯಿತ ಹಾಗೂ ಒಕ್ಕಲಿಗ ವರ್ಗದ ಯುವಕ ಮತ್ತು ಯುವತಿಯರಿಂದ ಉಚಿತ ಕಂಪ್ಯೂಟರ್ ಹಾಗೂ ಟೈಲರಿಂಗ್ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕನಿಷ್ಠ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಕಂಪ್ಯೂಟರ್ ಮತ್ತು ಟೈಲರಿಂಗ್ ತರಬೇತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆಧಾರ್ ಕಾರ್ಡ್, ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಫೋಟೊ ದಾಖಲಾತಿಗಳೊಂದಿಗೆ ನಗರದ ವಿವೇಕಾನಂದ ರಸ್ತೆ ಜೈನ್ ಮಂದಿರದ ಹಿಂಭಾಗ, ಸದ್ಗುರು ಭವನ, ಸಮರ್ಥ್ ಫೌಂಡೇಷನ್ ಅಥವಾ ದೂ. ಸಂ. 8050583608, 9902717910, 7795617408, 9986824210 ಸಂಪರ್ಕಿಸಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುರುವೇಕೆರೆ: ತಾಲೂಕಿನ ಮಲ್ಲಾಘಟ್ಟ ಸುತ್ತಮುತ್ತ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ ಬಾರಿಗೆ ಶನಿವಾರ ತುರುವೇಕೆರೆ ಮಲ್ಲಾಘಟ್ಟ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು, ಮಲ್ಲಾಘಟ್ಟದ ಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಮಾಣವಚನ ಸ್ವೀಕಾರ ವೇಳೆ ಹಿಂದೂ ಸಂಪ್ರದಾಯ ಅನುಸರಿಸಿದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕಾರಣಿಗಿಂತ ಭಕ್ತಿ ಮುಖ್ಯ. ಭಕ್ತನಿಗೂ ಭಗವಂತನಿಗೂ ಇರುವ ಸಂಬಂಧ ವೈಯಕ್ತಿಕವಾದದ್ದು. ಪ್ರಮಾಣವಚನ ಕಾರ್ಯಕ್ರಮಕ್ಕೆ ಹಿಂದೂ, ಕ್ರೈಸ್ತ, ಸಿಖ್, ಬೌದ್ಧ ಸೇರಿದಂತೆ ಎಲ್ಲಾ ಧರ್ಮಗಳ ಧಾರ್ಮಿಕ ಮುಖಂಡರನ್ನು ಆಹ್ವಾನಿಸಲಾಗಿತ್ತು ಎಂದರಲ್ಲದೆ ರಾಜ್ಯದ ಹಿತ ಕಾಪಾಡುವ ಜವಾಬ್ದಾರಿ ತಮ್ಮ ಮೇಲಿದ್ದು ಎಲ್ಲ ಧರ್ಮಗಳ ಆಶೀರ್ವಾದ ಪಡೆಯುವ ಉದ್ದೇಶದಿಂದ ಆ ರೀತಿಯ ಕಾರ್ಯಕ್ರಮ ನಡೆಸಲಾಗಿತ್ತು ಎಂದು ಸ್ಪಷ್ಟಪಡಿಸಿದರು. ಮಲ್ಲಾಘಟ್ಟದ ಗಂಗಾಧರೇಶ್ವರನಿಗೆ ಹರಕೆ ಹೊತ್ತಿದ್ದೀರಾ ಎಂಬ ಪ್ರಶ್ನೆಗೆ, ಯಾವುದೇ ಹರಕೆ ಇಲ್ಲ. ಇದು ನನ್ನ…
ಕುಣಿಗಲ್: ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರನ್ನು ಅಂಚೆ ಪಾಳ್ಯದ ಕೈಗಾರಿಕಾ ವಲಯದದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಬರಮಾಡಿಕೊಂಡು ಬೀಳ್ಕೊಡುಗೆ ಮಾಡಿದರು. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಾಲ್ಲೂಕಿನ ಅಂಚೆಪಾಳ್ಯ ರಾಷ್ಟ್ರೀಯ ದಾರಿ 75 ರ ಮೂಲಕ ತಿಪಟೂರು ತಾಲ್ಲೂಕಿನ ನೊಣವಿನಕೆರೆ ಕಾಡು ಸಿದ್ದೇಶ್ವರ ಅಜ್ಜಯ್ಯನ ಮಠಕ್ಕೆ ತೆರಳುವ ಮಾರ್ಗ ಮಧ್ಯೆ ಕುಣಿಗಲ್ ತಾಲ್ಲೂಕಿನ ಗಡಿ ಗ್ರಾಮವಾದ ಅಂಚೆಪಾಳ್ಯದ ಕೈಗಾರಿಕಾ ವಲಯದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ನೇತೃತ್ವದಲ್ಲಿ ಕುಣಿಗಲ್ ತಾಲ್ಲೂಕಿನ ಸಾವಿರಾರು ಅಭಿಮಾನಿಗಳು ನೂತನ ಮುಖ್ಯಮಂತ್ರಿಗಳನ್ನ ಸ್ವಾಗತಿಸಿ ಬೃಹದಾಕಾರವಾದ ಸೇಬಿನ ಹಾರವನ್ನ ಹಾಕಿ ಪಟಾಕಿ ಸಿಡಿಸಿ ಡಿ.ಕೆ., ಡಿ.ಕೆ., ಎಂdu ಮುಖ್ಯಮಂತ್ರಿಗೆ ಜಯ ಘೋಷಣೆ ಕೂಗಿದರು. ಈ ವೇಳೆ ಡಿ.ಕೆ.ಶಿವಕುಮಾರ್ ಅವರು, ನೆರೆದಿದ್ದ ಕಾರ್ಯಕರ್ತರತ್ತ ಕೈ ಬಿಸಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೋಗಟ್ಟ ರಾಜಣ್ಣ, ಕೆಪಿಸಿಸಿ ಸದಸ್ಯರಾದ ಬೇಗೂರು ನಾರಾಯಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗನಗೌಡ, ಜಿಲ್ಲಾ ಪಂಚಾಯಿತಿ ಮಾಜಿ…
ಬೆಂಗಳೂರು: ಐದು ವರ್ಷದ (ವರದಿಗಳ ಪ್ರಕಾರ ಆರು ವರ್ಷ) ಮಗಳನ್ನು ಕೊಲೆ ಮಾಡಿದ ಆರೋಪದ ಮೇಲೆ 39 ವರ್ಷದ ಮಹಿಳೆ ಮತ್ತು ಆಕೆಯ ಲಿವ್-ಇನ್ ಸಂಗಾತಿಯ ವಿರುದ್ಧ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೆನ್ನೆಲಾ ಎಂಬ ಮಗು ಈ ವರ್ಷದ ಮಾರ್ಚ್ 25 ರಂದು ಶವವಾಗಿ ಪತ್ತೆಯಾಗಿತ್ತು. ಇದೀಗ ಮಗುವಿನ ತಂದೆ ನೀಡಿದ ದೂರಿನ ಮೇರೆಗೆ ಆಕೆಯ ಪತ್ನಿ ಪ್ರಿಯಾಂಕಾ ಮತ್ತು ಆಕೆಯ ಲಿವ್-ಇನ್ ಸಂಗಾತಿ ಮೋಹನ್ ಜಿ ವಿರುದ್ಧ ಕೊಲೆ (BNS ಸೆಕ್ಷನ್ 103), ಸಾಕ್ಷ್ಯ ನಾಶ (ಸೆಕ್ಷನ್ 238) ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಆರೋಪಿ ಮೋಹನ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ದೂರುದಾರರ ಪ್ರಕಾರ, ಅವರು 2007 ರಲ್ಲಿ ಪ್ರಿಯಾಂಕಾ ಅವರನ್ನು ವಿವಾಹವಾಗಿದ್ದರು ಮತ್ತು ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಆದರೆ ದಂಪತಿ ನಡುವೆ ವೈವಾಹಿಕ ಭಿನ್ನಾಭಿಪ್ರಾಯ ತಲೆದೋರಿತ್ತು. 2025 ರಲ್ಲಿ ಪ್ರಿಯಾಂಕಾ ತನ್ನ ಹಳೇ ಸ್ನೇಹಿತ…
ತುಮಕೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಹೋಬಳಿ ಮುಗುಳೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳ ವೋಲ್ವೇಜ್ ಸ್ಥಿತಿ ಉತ್ತಮಪಡಿಸಲು ಮತ್ತು ಭವಿಷ್ಯದಲ್ಲಿ ವಿದ್ಯುತ್ ಹೊರೆ ಸರಿದೂಗಿಸುವ ಸಲುವಾಗಿ ಮುಗುಳೂರು ಗ್ರಾಮದಲ್ಲಿ ಉದ್ದೇಶಿತ 2×20ಎಂ.ವಿ.ಎ, 110/11ಕೆವಿ ವಿದ್ಯುತ್ ಉಪಸ್ಥಾವರ ಮತ್ತು ಹಾಲಿ ಇರುವ 110ಕೆವಿ ಕೆ.ಬಿ.ಕ್ರಾಸ್–ಮಾಯಸಂದ್ರ ಮಾರ್ಗದಿಂದ ಉದ್ದೇಶಿತ ಉಪಸ್ಥಾವರದವರೆಗೆ 4.270ಕಿಮೀ ಉದ್ದದ 110ಕೆವಿ ಲಿಲೋ ಪ್ರಸರಣ ಮಾರ್ಗ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಈ ಕಾಮಗಾರಿಯು ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಹೋಬಳಿ ಕೆ.ವಲಿಗೇರಹಳ್ಳಿ ಗ್ರಾಮದ ಸರ್ವೆ 6, ಬೊಮ್ಮನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 116, 110, 88, 98, 97, 96, 95, 22, 77, 76, 75, 74, 30, 22, 29, 31, 169, ಮುಗುಳೂರು ಗ್ರಾಮದ ಸರ್ವೆ ಸಂಖ್ಯೆ 215, 220, 214, 212, 211, 193, 192, 191, 201, 199, 190ರಲ್ಲಿ ಹಾದು ಹೋಗುತ್ತದೆ. ಈ ಯೋಜನೆಯ ಬಗ್ಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ…
ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ ಸೇವಾಸಿಂಧು https://sevasindhu.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. 2025ರ ಸೆಪ್ಟೆಂಬರ್ 12ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದರೆ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ, ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.…
ತುಮಕೂರು: ಸರ್ಕಾರ ನಿಗದಿಪಡಿಸಿರುವ ಸುತ್ತೋಲೆ ಆದೇಶವನ್ನು ಪಾಲನೆ ಮಾಡದೆ ನಿರ್ಲಕ್ಷ್ಯ ವಹಿಸುತ್ತಿರುವ ಹಿನ್ನೆಲೆಯಲ್ಲಿ ಓರ್ವ ರಾಜಸ್ವ ನಿರೀಕ್ಷಕರು ಹಾಗೂ ಮೂವರು ಗ್ರಾಮ ಆಡಳಿತಾಧಿಕಾರಿಗಳಿಗೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರು ಸೂಚನಾ ಪತ್ರ ರವಾನಿಸಿದ್ದಾರೆ. ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಶಿಷ್ಟಾಚಾರ ಪಾಲನೆ ಮಾಡುವುದು, ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ರಾಜಸ್ವ ನಿರೀಕ್ಷಕರ ಕರ್ತವ್ಯವಾಗಿರುತ್ತದೆ. ಆದರೆ, ಈ ತಾಲ್ಲೂಕಿನಲ್ಲಿ ತಹಸಿಲ್ದಾರ್ ಅವರ ಶಿಷ್ಟಾಚಾರವನ್ನು ಕಸಬಾ ಹೋಬಳಿ ಟೌನ್ ವ್ಯಾಪ್ತಿಗೆ ಸೇರುವ ಗ್ರಾಮ ಆಡಳಿತಾಧಿಕಾರಿಗಳು ಮತ್ತು ರಾಜಸ್ವ ನಿರೀಕ್ಷಕರು ಪಾಲನೆ ಮಾಡದೆ ಸರ್ಕಾರದ ಸುತ್ತೋಲೆಯನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದ್ದಾರೆ. ಶಿಷ್ಟಾಚಾರ ಪಾಲನೆ ಮಾಡುವ ಬಗ್ಗೆ ಈಗಾಗಲೇ ಸಭೆಗಳಲ್ಲಿ ಸೂಚಿಸಿದ್ದರೂ ಸಹ ಕ್ರಮ ವಹಿಸಿರುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಆದಕಾರಣ, ಕೆಳಕಂಡ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ರಾಜಸ್ವ ನಿರೀಕ್ಷಕರು ಪ್ರತಿನಿತ್ಯ ಬೆಳಗ್ಗೆ 9.30ಕ್ಕೆ ತಾಲ್ಲೂಕು ಕಚೇರಿಗೆ ಹಾಜರಾಗಿ ತಹಶೀಲ್ದಾರ್ ಅವರನ್ನು ಭೇಟಿ ಮಾಡುವುದು ಮತ್ತು ಸಂಜೆ 6ಗಂಟೆಗೆ ತಾಲ್ಲೂಕು ಕಚೇರಿಯಲ್ಲಿ ತಹಸಿಲ್ದಾರ್ ಅವರನ್ನು ಭೇಟಿ ಮಾಡಲು…