Subscribe to Updates
Get the latest creative news from FooBar about art, design and business.
- ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
- ಮಹಿಳಾ ಪಿಎಸ್ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
- ಕರ್ತವ್ಯನಿರತ ಮಹಿಳಾ ಪಿಎಸ್ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್ ಐಆರ್ ದಾಖಲು!
- ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
- ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
- ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
- ಆ.29: ಪಾವಗಡದಲ್ಲಿ ಉದ್ಯೋಗ ಮೇಳ
- ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
Author: admin
ಬೆಂಗಳೂರು/ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿಯ ಬಳಿ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳು ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ, ಉಪ ಅರಣ್ಯ ಸಂರಕ್ಷಣಾಧಿಕಾರಿ– ಡಿಸಿಎಫ್ ನೇತೃತ್ವದ ತನಿಖೆಗೆ ಆದೇಶ ನೀಡಿದ್ದಾರೆ. ಮುಖ್ಯ ವನ್ಯಜೀವಿ ಪರಿಪಾಲಕರಿಗೆ ನೀಡಿರುವ ಸೂಚನೆಯಲ್ಲಿ ಅವರು, ಒಂದೂವರೆ ತಿಂಗಳ ಹಿಂದೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಮ್ಮ ರಾಷ್ಟ್ರ ಪ್ರಾಣಿಯಾದ ಹುಲಿ ಮತ್ತು ಅದರ ನಾಲ್ಕು ಮರಿಗಳು ವಿಶಪ್ರಾಶನದಿಂದ ಮೃತಪಟ್ಟಿದ್ದವು, ನಂತರ ಕೋತಿಗಳನ್ನು ಕೊಂದು ಬಂಡೀಪುರದ ಬಳಿ ಎಸೆದಿದ್ದ ಘಟನೆ ನಡೆದಿತ್ತು. ಈಗ ನಮ್ಮ ರಾಷ್ಟ್ರಪಕ್ಷಿ ನವಿಲಿನ ಮಾರಣ ಹೋಮ ನಡೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ. ನವಿಲುಗಳ ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಕೀಟನಾಶಕವನ್ನು ನವಿಲುಗಳನ್ನು ಸಾಯಿಸಲೆಂದೇ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕ ಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ಡಿಸಿಎಫ್ ನೇತೃತ್ವದ ತಂಡದಿಂದ…
ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ (ಸಿದ್ದರಬೆಟ್ಟ) ಗ್ರಾಮದಲ್ಲಿನ ದೇವಾಲಯಕ್ಕೆ ತೆರಳಿದ್ದ ವೃದ್ಧೆಯ ಚಲನ-ವಲನ ಗಮನಿಸಿ ವೃದ್ದೆಯು ಬಸ್ ಸ್ಟಾಂಡ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಆರೋಪಿಗಳಾದ ರಂಗರಾಜು ಮತ್ತು ಶ್ರೀದೇವಿ ವೃದ್ಧೆಯ ಗಮನವನ್ನು ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣವನ್ನು ಕದ್ದು ಪಾರಾರಿಯಾಗಿದ್ದರು. ಈ ಬಗ್ಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ ಕೊರಟಗೆರೆ ಪೊಲೀಸ್ ತಂಡ ಮಿಂಚಿನ ಕಾರ್ಯಚರಣೆ ಮೂಲಕ ಎರಡೇ ದಿನಗಳಲ್ಲಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ತಾಲ್ಲೂಕಿನ ಹೂಲೀಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವರಹಳ್ಳಿ ಗ್ರಾಮದ ಬಸಮ್ಮ ಎಂಬ ವೃದ್ಧೆಯು ಸಿದ್ದರಬೆಟ್ಟದ ದೇವಸ್ಥಾನಕ್ಕೆ ಬಂದಿದ್ದರು, ಇವರ ಗಮನ ಬೇರೆಡೆ ಸೆಳೆದು ವೃದ್ಧೆಯನ್ನು ಯಾಮಾರಿಸಿ ಬ್ಯಾಗ್ ನಲ್ಲಿದ್ದ ಸುಮಾರು 100 ಗ್ರಾಂ ಚಿನ್ನಾಭರಣ ಕದ್ದು ಪಾರಾರಿಯಾಗಿದ್ದ ಇಬ್ಬರು ಕಳ್ಳರನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಂಡು ವೃದ್ಧೆಗೆ ಹಿಂತಿರುಗಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳಾದ ರಂಗರಾಜು ಮತ್ತು ಶ್ರೀದೇವಿ ಶಿರಾ ತಾಲ್ಲೂಕಿನ ಮೂಕನಹಳ್ಳಿ ಗ್ರಾಮದ ವಾಸಿಗಳು…
ಕೊರಟಗೆರೆ : ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜ್ಞಾನಾರ್ಜನೆಗಾಗಿ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಬೆಳೆಗಳಲ್ಲಿ ಬೆಳೆಯುವ ಬೆಳೆಗಳ ಬಗ್ಗೆ ಅರಿವು ಮೂಡಿಸಲು ಪ್ರವಾಸ ಕೈಗೊಂಡು ತರಬೇತಿ ನೀಡಲಾಗುವುದು ಎಂದು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ವಿಶ್ವವಿದ್ಯಾಲಯದ ವಿಸ್ತಾರಣ ಪ್ರಾಧ್ಯಾಪಕರಾದ ಮಧುಶ್ರೀ ತಿಳಿಸಿದರು. ತಾಲೂಕಿನ ಹೊಳವನಹಳ್ಳಿ ಹೋಬಳಿಯ ಕೋಡ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಮೂರು ತಿಂಗಳ ಶಿಬಿರದಲ್ಲಿ ಬೆಳೆ ಸಮೀಕ್ಷೆ ಮತ್ತು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾವಹಿಸಿ ಮಾತನಾಡಿದರು. ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ವಿಶ್ವವಿದ್ಯಾಲಯದಿಂದ ೨೦ ಜನ ವಿದ್ಯಾರ್ಥಿಗಳಲ್ಲಿ ೧೦ ಜನ ವಿದ್ಯಾರ್ಥಿಗಳು ಹಾಗೂ ೧೦ ಜನ ವಿದ್ಯಾರ್ಥಿನಿಯರ ತಂಡ ಮೂರು ತಿಂಗಳ ಕಾಲ ಕೋಡ್ಲಹಳ್ಳಿ ಹಾಗೂ ಅಕ್ಕಪಕ್ಕದ ಗ್ರಾಮಗಳಲ್ಲಿ ಬೆಳೆಯುವ ಬೆಳಗಳ ಸಮೀಕ್ಷೆ, ರೋಗ ನಿವಾರಣೆ, ಕೀಟ ನಿವಾರಣೆ ಸೇರಿದಂತೆ ರೈತರಿಗೆ ಯಾವ ರೀತಿ ಬೆಳೆಗಳನ್ನ ಬೆಳೆದರೆ ಉತ್ತಮ ಫಸಲು ಬೆಳೆಯಬಹುದು ಎಂದು ತಿಳಿಸಿಕೊಡಲಾಗುವುದು ಎಂದು…
ಕೊರಟಗೆರೆ: ನಮ್ಮ ಜನಪ್ರಿಯ ಶಾಸಕರು, ಗೃಹ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ರವರ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದ್ದು, ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ತಿಳಿಸಿದರು. ಡಾ.ಜಿ.ಪರಮೇಶ್ವರ ರವರ 74ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಸಹಯೋಗದೊಂದಿಗೆ ಇದೇ ಬುಧವಾರ 6ನೇ ತಾರೀಖು ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಹೊಳವನಹಳ್ಳಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಆಯೋಜಿಸಲಾಗಿದೆ ಎಂದು ತಿಳಿಸಿದರು. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಕ್ಯಾಮೇನಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಡಾ.ಜಿ.ಪರಮೇಶ್ವರ್ ಅಭಿಮಾನಿಗಳ ಬಳಗದಿಂದ ಭಾನುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಮ್ಮ ನೆಚ್ಚಿನ ಜನಪ್ರಿಯ ಶಾಸಕರಾಗಿರುವ ಡಾ.ಜಿ.ಪರಮೇಶ್ವರ ರವರ ಆದೇಶದಂತೆ ಅವರ ಜನ್ಮ ದಿನದಂದು ಇವರದೇ ಸಿದ್ಧಾರ್ಥ ಆಸ್ಪತ್ರೆಯ…
ವಾಷಿಂಗ್ಟನ್: ಮಹಿಳೆಯರ ಬಗ್ಗೆ ಅಮೆರಿಕ ಅಧ್ಯಕ್ಷ ಬಳಸುವ ಪದಗಳು ಪದೇ ಪದೇ ಟೀಕೆಗೊಳಪಡುತ್ತಿವೆ. ಇದೀಗ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೊಲಿನ್ ಲೀವಿಟ್ ಅವರನ್ನು ಹೋಲಿಸಿರುವ ರೀತಿ ವ್ಯಾಪಕ ಟೀಕೆಗೆ ಕಾರಣವಾಗಿದೆ. ಸಂದರ್ಶನವೊಂದರಲ್ಲಿ ಲೀವಿಟ್ ಬಗ್ಗೆ ಮಾತನಾಡಿರುವ ಟ್ರಂಪ್ ಆಕೆ ಸ್ಟಾರ್ ಆಗಿಬಿಟ್ಟಿದ್ದಾಳೆ. ಆ ಮುಖ, ಬುದ್ಧಿವಂತಿಕೆ, ತುಟಿಗಳು, ಅವು ಚಲಿಸುವ ರೀತಿ.. ಅವುಗಳು ಚಲಿಸುವಾಗ ಮಷಿನ್ ಗನ್ ರೀತಿ ಕಾಣುತ್ತದೆ ಎಂದು ವರ್ಣಿಸಿದ್ದಾರೆ. ಅಲ್ಲದೇ ಇಂತಹ ಪತ್ರಿಕಾ ಕಾರ್ಯದರ್ಶಿ ಬೇರೆ ಅಧ್ಯಕ್ಷರಿಗೆ ಸಿಕ್ಕಿರಲಿಕ್ಕಿಲ್ಲ. ಆಕೆಯೊಂದು ಅದ್ಭುತ ಎಂದು ಬಣ್ಣಿಸಿದ್ದಾರೆ. ಟ್ರಂಪ್ ಹೀಗೆ ಮಾತಾಡುತ್ತಿರುವುದು ಇದೇ ಮೊದಲಲ್ಲ. ಈ ಮುಂಚೆ ತಮ್ಮ ಮಗಳು ಸೇರಿದಂತೆ ಹೆಂಗಳೆಯರ ಬಗ್ಗೆ ಕೀಳುಪದಗಳನ್ನು ಬಳಸಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಧರ್ಮಪುರ: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಕುರಿತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ತೀರ್ಪಿಗೆ ಯಾರೇ ಆದರೂ ತಲೆ ಬಾಗಬೇಕಾಗುತ್ತದೆ. ಪ್ರಜ್ವಲ್ ರೇವಣ್ಣ ವಿರುದ್ಧ ಸೆಷನ್ ಕೋರ್ಟ್ನಲ್ಲಿ ಆದೇಶ ಪ್ರಕಟಗೊಂಡಿದೆ. ಕೋರ್ಟ್ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ ಎಂದರು. ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ಬಂದ ತಕ್ಷಣ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಪಕ್ಷದ ವರಿಷ್ಠರು ಪಕ್ಷದಿಂದ ಅಮಾನತಿನಲ್ಲಿಟ್ಟಿದ್ದರು. ಆಗ ಅಪರಾಧಿನೋ, ಅಲ್ಲವೋ ಎಂಬ ತೀರ್ಪು ಬಂದಿರಲಿಲ್ಲ. ವರಿಷ್ಠರ ತೀರ್ಮಾನದ ಸ್ಪಷ್ಟತೆ ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕಿಂತ ಹೆಚ್ಚಾಗಿ ಈ ವಿಷಯದ ಬಗ್ಗೆ ನಾನು ಪ್ರಯಿಕ್ರಿಯಿಸಲ್ಲ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ವರದಿ: ಹಾದನೂರು ಚಂದ್ರ ಸರಗೂರು : ರಾಜ್ಯ ಹೆದ್ದಾರಿ ರಸ್ತೆಗೆ ಹೊಂದಿಕೊಂಡಂತೆ ಖಾಸಗಿ ವ್ಯಕ್ತಿಯೊಬ್ಬ ನಿಯಮ ಮೀರಿ ಕಟ್ಟಡ ಕಟ್ಟಿ ರಾಜರೋಷವಾಗಿ ಹೊಟೇಲ್ ತೆರೆದಿದ್ದರು ಸಹ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕಂಡು ಕಾಣದಂತೆ ಕಣ್ಣು ಮುಚ್ಚಿ ಕುಳಿತಿರುವುದನ್ನು ಕಾಣಬಹುದಾಗಿದೆ. ತಾಲ್ಲೂಕಿನ ಮೈಸೂರು ಮಾನಂದವಾಡಿ ಮುಖ್ಯ ರಸ್ತೆಯ ಮೈಸೂರು ಮತ್ತು ಎಚ್.ಡಿ.ಕೋಟೆ ತಾಲ್ಲೂಕಿನ ಗಡಿಭಾಗದಲ್ಲಿ ಮೈಸೂರು ತಾಲ್ಲೂಕಿಗೆ ಸೇರಿಕೊಂಡಂತೆ ಇರುವ ಕಂಚಮಹಳ್ಳಿ– ಮಂಡನಹಳ್ಳಿ ಗ್ರಾಮದ ಮಧ್ಯದಲ್ಲಿರುವ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಫಿಸ್ ಲ್ಯಾಂಡ್ ಗ್ರೂಪ್ ನವರು ನಿರಂತರ ಪೂಜಾರಿ ಎಂಬ ಹೆಸರಿನ ಹೋಟೆಲ್ ನ್ನು ಮೂರು ಎಕರೆ ಜಾಗದಲ್ಲಿ ನಿರ್ಮಾಣ ಮಾಡಿದ್ದಾರೆ, ಈ ಹಿಂದೆ ತನ್ನ ಹದ್ದುಬಸ್ತಿಗೆ ಕಾಂಪೌಂಡ್ ನಿರ್ಮಾಣ ಮಾಡಿಕೊಂಡು ವಹಿವಾಟು ನಡೆಸುತ್ತಿದ್ದು, ಒಂದು ವರ್ಷದ ಈಚೆಗೆ ಕಾಂಪೌಂಡ್ ನಿಂದ ಹೊರಬಂದು ಸುಮಾರು 50 ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿ ಇಲ್ಲಿ ಕ್ಯಾಂಟೀನ್ ತೆರೆದಿದ್ದಾರೆ. ರಾಜ್ಯ ಹೆದ್ದಾರಿ ರಸ್ತೆ ಆಗಿರುವುದರಿಂದ ಪ್ರತಿನಿತ್ಯ ಮೈಸೂರಿನಿಂದ ಕೇರಳ ರಾಜ್ಯಕ್ಕೆ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು,…
ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ತನಿಖೆ ನಡೆಸಿದ ವಿಶೇಷ ತನಿಖಾ ತಂಡಕ್ಕೆ ಸಿಎಂ ಪದಕ ನೀಡುತ್ತೇವೆ. ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಮೊದಲಿಂದಲೂ ಅಚ್ಚುಕಟ್ಟಾಗಿ ತನಿಖೆ ಮಾಡಿದ್ದಾರೆ. ಮೊದಲು ಎ ಸ್ಐಟಿಗೆ ಅಭಿನಂದನೆ ಹೇಳ್ತೇನೆ ಎಂದರು. ಇದು ಐತಿಹಾಸಿಕ ತೀರ್ಪು. ನ್ಯಾಯಾಲಯಕ್ಕೆ ನಮ್ಮ ಎಸ್ಐಟಿ ಎಲ್ಲಾ ದಾಖಲೆಯನ್ನು ಕೊಟ್ಟಿತ್ತು ಪೊಲೀಸರು ಬೇಗ ತನಿಖೆ ಮುಗಿಸಿದ್ದಾರೆ, ಅಭಿನಂದನೆ ಸಲ್ಲಿಸುತ್ತೇನೆ. ಪ್ರಜ್ವಲ್ ರೇವಣ್ಣ ಕೇಸನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು. ಪೊಲೀಸರ ಶ್ರಮಕ್ಕೆ ಸರ್ಕಾರ ಪ್ರಶಂಸೆ ಮಾಡುತ್ತೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಹುಬ್ಬಳ್ಳಿ: ರೇವಣ್ಣಗೆ ಶಿಕ್ಷೆ ವಿಧಿಸಿರುವ ವಿಚಾರದಲ್ಲಿ ಬಿಜೆಪಿಗೇಕೆ ಮುಜುಗರ ಯಾಕಾಗುತ್ತದೆ ಎಂದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು ಬಿಜೆಪಿಗೆ ಮುಜುಗರ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಶಿಕ್ಷೆ ಆಗಿದೆ, ನಮಗೆ ಮುಜುಗರ ಯಾಕೆ ಆಗುತ್ತೆ? ಕಾಂಗ್ರೆಸ್ ನವರು ಯಾವ ಯಾವ ಅಪರಾಧಿಗಳ ಜೊತೆ ಇದ್ರು ಗೊತ್ತಾ? ಖಲಿಸ್ತಾನಿ ಟೆರರಿಸ್ಟ್ ಜೊತೆ ರಾಹುಲ್ ಗಾಂಧಿ ಫೋಟೋ ಇದೆ. ಯಾಸಿನ್ ಮಲ್ಲಿಕ್ ಜೊತೆ ಇಲ್ಲಿರುವವರ ಫೋಟೋ ಇದೆ. ಅವರದ್ದು ಸಪ್ರೇಟ್ ಪಕ್ಷ, ನಮ್ಮದು ಅಲೈನ್ಸ್ ಆಗಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಿದೆ ಎಂದು ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು. ಇನ್ನೂ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಎಸ್ ಐಟಿ ಮಾಡಿದ್ದಾರೆ, ತನಿಖೆ ಆಗಲಿ. ಭಾರೀ ಅಪರಾಧ ಆಗಿದೆ ಅಂತ ಮೊದಲೇ ಬಿಂಬಿಸೋದು ಸರಿಯಲ್ಲ. ವೀರೇಂದ್ರ ಹೆಗಡೆ…
ಚೆನ್ನೈ: ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ, ಹಾಸ್ಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ನಟ ಮದನ್ ಬಾಬ್ ಅವರು ನಿಧನರಾಗಿದ್ದಾರೆ. ತಮಿಳು ಚಿತ್ರರಂಗದಲ್ಲಿ ಖ್ಯಾತರಾಗಿದ್ದ ಮದನ್ ಬಾಬ್ ಅವರಿಗೆ 71 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ. ಚೆನ್ನೈನಲ್ಲಿ ಶನಿವಾರ (ಆಗಸ್ಟ್ 2) ಸಂಜೆ ಅವರು ನಿಧನರಾಗಿದ್ದು, ಅನೇಕ ಸೆಲೆಬ್ರಿಟಿಗಳು ಕಂಬಿನಿ ಮಿಡಿದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC