Subscribe to Updates
Get the latest creative news from FooBar about art, design and business.
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
Author: admin
ಬೆಂಗಳೂರು: ಶಾಸಕರು ತಮಗೆ ನೀಡಲಾದ ಅನುದಾನದಿಂದ ಎಂದಿಗೂ ತೃಪ್ತರಾಗುವುದಿಲ್ಲ. ನಮ್ಮಲ್ಲಷ್ಟೇ ಅಲ್ಲ, ಎಲ್ಲಾ ಸರ್ಕಾರಗಳೂ ಈ ಸಮಸ್ಯೆಯನ್ನು ಎದುರಿಸುತ್ತವೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ವಿರುದ್ಧ ಶಾಸಕರ ಅಸಮಾಧಾನ ಎಲ್ಲಾ ಸರ್ಕಾರಗಳಲ್ಲೂ ಸಾಮಾನ್ಯ. ಶಾಸಕರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದು ಕಷ್ಟಸಾಧ್ಯ. ಹಾಗಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ಮುಖ್ಯಮಂತ್ರಿಗಳು ಶಾಸಕರ ಜೊತೆ ಚರ್ಚೆ ಮಾಡಿ ಬಗೆಹರಿಸುತ್ತಾರೆ ಎಂದು ಹೇಳಿದರು. ಈ ಮೊದಲು ಶಾಸಕಾಂಗ ಸಭೆಯಲ್ಲಿ ತಮ ಅಭಿಪ್ರಾಯಗಳನ್ನು ಹೇಳಿಕೊಳ್ಳಲು ಶಾಸಕರಿಗೆ ಅವಕಾಶ ನೀಡಲಾಗಿತ್ತು. ಸಾಕಷ್ಟು ಚರ್ಚೆಗಳೂ ಆಗಿವೆ. ಇದೆಲ್ಲಾ ಸಣ್ಣಪುಟ್ಟ ಸಮಸ್ಯೆ, ಬಗೆಹರಿಯುತ್ತದೆ. ಹೈಕಮಾಂಡ್ ಮುಖ್ಯಮಂತ್ರಿಯವರಿಗೆ ಯಾವ ರೀತಿಯ ಸೂಚನೆ ನೀಡಿದೆಯೋ ಗೊತ್ತಿಲ್ಲ. ಒಂದು ವೇಳೆ ಸೂಚನೆ ನೀಡಿದ್ದರೆ ಅದರಂತೆ ನಡೆದುಕೊಳ್ಳುತ್ತಾರೆಂದು ತಿಳಿಸಿದರು. ಶಾಸಕರು ತಮ ಕ್ಷೇತ್ರದ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಅದು ರಾಜ್ಯದ ಸಮಸ್ಯೆ ಅಲ್ಲ. ಕ್ಷೇತ್ರದ ಅಭಿವೃದ್ಧಿಗೆ ಪ್ರತಿಯೊಂದಕ್ಕೂ ತಲಾ 50 ಕೋಟಿ ರೂ.ಗಳ ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಎಲ್ಲಾ ಸಮಸ್ಯೆಗಳು…
ಇತ್ತೀಚಿಗೆ ತುಮಕೂರು ಮತ್ತು ಹಾಸನ ಜಿಲ್ಲೆಗಳ ಪ್ರವಾಸದಲ್ಲಿದ್ದ ಭಾರತ ಸರ್ಕಾರದ ರೈಲ್ವೇ ಮತ್ತು ಜಲಶಕ್ತಿ ರಾಜ್ಯಖಾತೆ ಸಚಿವರಾದ ಸೋಮಣ್ಣನವರಿಗೆ ತಿಪಟೂರು ಹಾಗೂ ಅರಸೀಕೆರೆಯ ತೆಂಗು ಬೆಳೆಯುವ ರೈತರು ತೆಂಗು ಬೆಳೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೀಟ ಮತ್ತು ರೋಗಗಳ ತೀವ್ರತೆಯ ಬಗ್ಗೆ ಕೇಂದ್ರ ಸಚಿವ ವಿ. ಸೋಮಣ್ಣರವರ ಬಳಿ ವಿವರಿಸಿದ್ದರು. ಈ ಪರಿಸ್ಥಿತಿ ಮುಂದುವರೆದರೆ ಶೀಘ್ರದಲ್ಲಿಯೆ ಎಲ್ಲಾ ತೆಂಗಿನ ತೋಟಗಳು ನಾಶವಾಗುವ ಅಪಾಯವಿದೆ ಎಂಬ ಆತಂಕವನ್ನು ರೈತರು ವ್ಯಕ್ತಪಡಿಸಿದರು. ಕೃಷಿ ಕ್ಷೇತ್ರದಲ್ಲಿ ತೆಂಗಿನಕಾಯಿ ಬೆಳೆಗೂ ರಕ್ಷಣೆಯ ಅಗತ್ಯವಿದೆ ಹಾಗೂ ಜಿಲ್ಲೆಯ ತೆಂಗಿನ ಕೃಷಿಯ ಉಳಿವಿಗಾಗಿ ತ್ವರಿತ ಕ್ರಮಕೈಗೊಳ್ಳಬೇಕಾಗಿ ಸಚಿವರಲ್ಲಿ ಮನವಿ ಮಾಡಿಕೊಂಡರು. ತೆಂಗು ಬೆಳೆಯ ರೋಗದ ಪರಿಸ್ಥಿಯ ಗಂಬೀರತೆಯನ್ನು ಗಮನಿಸಿದ ಸಚಿವರು ತಕ್ಷಣ ಕ್ರಮಕೈಗೊಳ್ಳುವುದಾಗಿ ಮತ್ತು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವರ ಗಮನಕ್ಕೆ ತಂದು ಈ ಬಗ್ಗೆ ಕ್ರಮ ಜರುಗಿಸುವ ಭರವಸೆ ನೀಡಿದ್ದರು. ಈ ವಿಷಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಜಾಗೃತಗೊಳಿಸಲು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಸಚಿವರಿಗೆ ಅಧಿಕೃತ…
ಮಂಗಳೂರು: ರಾಜ್ಯ ಸರ್ಕಾರ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ ಅನ್ನೋದು ಸತ್ಯ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷದ ಬಜೆಟ್ ನಲ್ಲಿ ಒಂದು ಲಕ್ಷದ ಹದಿನಾರು ಸಾವಿರ ಕೋಟಿ ಅಂದಾಜು ಸಾಲ ಇದೆ. ಒಂದು ವೇಳೆ ಖಜಾನೆ ತುಂಬಿ ತುಳುಕಿದ್ರೆ ಬೆಲೆ ಏರಿಕೆ ಯಾಕೆ ಮಾಡ್ತಿದ್ರು? ಖಜಾನೆ ತುಂಬಿ ತುಳುಕಿದ್ರೆ ಸಾಲ ಯಾಕೆ ಮಾಡ್ತಿದ್ರು? ಎಂದು ಪ್ರಶ್ನಿಸಿದ್ದಾರೆ. ಶಾಸಕ ರಾಜುಕಾಗೆ ಹೇಳಿದ ಹಾಗೆ ಅಭಿವೃದ್ಧಿ ಆಗುತ್ತಿಲ್ಲ ಅನ್ನೋದು ಸ್ಪಷ್ಟವಾಗಿದೆ. ಎರಡು ವರ್ಷದ ಹಿಂದೆ ಈಡುಗಾಯಿ ಹೊಡೆದ ಕಾಮಗಾರಿ ಇನ್ನು ಆಗಿಲ್ಲ ಎಂದು ಸ್ವತಃ ರಾಜು ಅವರೇ ಹೇಳಿದ್ದಾರೆ. ಆಡಳಿತ ಪಕ್ಷದವರೇ ಕರ್ನಾಟಕ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಎಂದಿದ್ದಾರೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಟೆಹ್ರಾನ್: ಇಸ್ರೇಲ್ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಮೂವರನ್ನು ಇರಾನ್ ಗಲ್ಲಿಗೇರಿಸಿದ್ದು, ಇದ್ರಿಸ್ ಅಲಿ, ಆಜಾದ್ ಶೋಜೈ ಮತ್ತು ರಸೂಲ್ ಅಹ್ಮದ್ ರಸೂಲ್ ಗಲ್ಲಿಗೇರಿಸಲಾದವರು ಎಂದು ಹೇಳಲಾಗಿದೆ. ಈ ಮೂವರು ಶಸ್ತ್ರಾಸ್ತ್ರಗಳನ್ನು ಇರಾನ್ ಗೆ ತರಲು ಯತ್ನಿಸಿದ್ದರು. ಈ ಮೂಲಕ ಇಸ್ರೇಲ್ ಗೆ ಸಹಕಾರ ಒದಗಿಸಿದ್ದರು ಎಂದು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈ ಮೂವರಿಗೆ ಟರ್ಕಿ ಗಡಿಯ ಸಮೀಪದ ಉರ್ಮಿಯಾದಲ್ಲಿ ಬುಧವಾರ ಮರಣದಂಡನೆ ವಿಧಿಸಲಾಗಿದೆ. ಶಿಕ್ಷೆಗೆ ಗುರಿಯಾದ ಮೂವರು ನೀಲಿ ಜೈಲು ಸಮವಸ್ತ್ರದಲ್ಲಿರುವ ಫೋಟೋಗಳನ್ನು ಇರಾನ್ ನ ಕೋರ್ಟ್ ಹಂಚಿಕೊಂಡಿದೆ. ಇನ್ನೂ ಸಂಘರ್ಷದ ಸಮಯದಲ್ಲಿ, ಇಸ್ರೇಲ್ ಜೊತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಕನಿಷ್ಠ 700 ಜನರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಇಸ್ರೇಲ್ ನ ಗುಪ್ತಚರ ಸಂಸ್ಥೆ ಮೊಸಾದ್ ಜೊತೆ ಸಂಪರ್ಕದಲ್ಲಿದ್ದ ಗೂಢಚಾರಿಯನ್ನು ಸಹ ಗಲ್ಲಿಗೇರಿಸಲಾಗಿದೆ. ಸುಪ್ರೀಂ ಕೋರ್ಟ್ ಸಂಪೂರ್ಣ ವಿಚಾರಣೆ ನಡೆಸಿ ಅಪರಾಧಿಗೆ ಈ ಶಿಕ್ಷೆ ವಿಧಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ನವದೆಹಲಿ: ಹಲವಾರು ವರ್ಷಗಳಿಂದ ಒಂದೇ ದರವನ್ನು ನಿರ್ವಹಿಸುತ್ತಿದ್ದ ಭಾರತೀಯ ರೈಲ್ವೇ ಈಗ ರೈಲು ಟಿಕೆಟ್ ದರವನ್ನು ಏರಿಕೆ ಮಾಡಲು ಚಿಂತನೆ ನಡೆಸಿದೆ. ಜುಲೈ 1ರಿಂದ ಎಸಿ, ಎಸಿ ರಹಿತ, ಎಕ್ಸ್ಪ್ರೆಸ್ ಹಾಗೂ ದ್ವಿತೀಯ ದರ್ಜೆ ರೈಲುಗಳ ಟಿಕೆಟ್ ದರದಲ್ಲಿ ಏರಿಕೆ ಮಾಡಲು ಇಲಾಖೆ ಮುಂದಾಗಿದೆ. ದರಗಳು ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಪ್ರಯಾಣಿಕರಿಗೆ ಹೊರೆಯಾಗುವುದಿಲ್ಲ ಎಂದು ರೈಲ್ವೇ ಅಧಿಕಾರಿಯೊಬ್ಬರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಉಪನಗರ ರೈಲು ಹಾಗೂ ಮಾಸಿಕ ಪಾಸ್ಗಳ ದರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ಕೂಡ ಅಧಿಕಾರಿ ಮಾಹಿತಿ ನೀಡಿದ್ದಾರೆ. ರೈಲ್ವೇ ವೆಚ್ಚ ನಿರ್ವಹಣೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಂಡಿದ್ದು, ರೈಲ್ವೇ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಎಸಿ ರಹಿತ, ಎಕ್ಸ್ಪ್ರೆಸ್ ರೈಲು ಪ್ರತೀ ಕಿ.ಮೀ.ಗೆ 1 ಪೈಸೆ, ಎಸಿ ರೈಲುಗಳ ಟಿಕೆಟ್ಗೆ ಪ್ರತೀ ಕಿ.ಮೀ.ಗೆ 2 ಪೈಸೆ, 2ನೇ ದರ್ಜೆ ರೈಲು ಟಿಕೆಟ್ನಲ್ಲಿ 500 ಕಿ.ಮೀ.ವರೆಗೆ ಹೆಚ್ಚಳ ಇಲ್ಲ, 500…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಪದೇ ಪದೇ ಹೊಗಳಿದ್ದಕ್ಕಾಗಿ ಪಕ್ಷದ ಹಿರಿಯ ನಾಯಕ ಶಶಿ ತರೂರ್ ಅವರನ್ನು ಬುಧವಾರ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ಕೆಲವರಿಗೆ ಮೋದಿಯೇ ಮೊದಲು ಎಂದು ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿಯನ್ನು ನಡೆಸಿದ್ದಾರೆ. ಶಶಿ ತರೂರ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಭಾಗವಾಗಿರುವುದಕ್ಕೆ ಒಂದೇ ಕಾರಣ, ಅವರ ಇಂಗ್ಲಿಷ್ ತುಂಬಾ ಒಳ್ಳೆಯದಿದೆ. ನನಗೆ ಇಂಗ್ಲಿಷ್ ಓದಲು ಬರುವುದಿಲ್ಲ, ಅವರ ಭಾಷೆ ತುಂಬಾ ಚೆನ್ನಾಗಿದೆ. ಅದಕ್ಕಾಗಿಯೇ ನಾವು ಅವರನ್ನು ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಮಾಡಿದ್ದೇವೆ. ಆದರೆ ನಾನು ಹೇಳಲು ಬಯಸುವುದೇನೆಂದರೆ, ನಾವೆಲ್ಲರೂ, ಇಡೀ ವಿರೋಧ ಪಕ್ಷ ಒಗ್ಗಟ್ಟಿನಿಂದ ನಮ್ಮ ಸೈನ್ಯದೊಂದಿಗೆ ಇದ್ದೇವೆ ಎಂದರು. ಕೇಂದ್ರವು ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ʼಸಂವಿಧಾನ ಹತ್ಯಾ ದಿವಸ್ʼ ನಾಟಕವಾಡುತ್ತಿದೆ. ಸಹಿಷ್ಣುತೆ ಇಲ್ಲದ ಮತ್ತು ಭ್ರಾತೃತ್ವ ಮತ್ತು ಸ್ವಾತಂತ್ರ್ಯವನ್ನು ಸಮೃದ್ಧಗೊಳಿಸಲು ಬಿಡದ ಸರಕಾರಕ್ಕೆ ಇತರರಿಗೆ ಉಪನ್ಯಾಸ ನೀಡುವ ಹಕ್ಕಿಲ್ಲ ಎಂದು…
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಿಪಟೂರು ವೈಭವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ತಾಯಿ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು. ಶಿಬಿರಕ್ಕೆ ಚಾಲನೆ ನೀಡಿದ ವೈಭವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಮಧುಸೂಧನ್, ಗರ್ಭಿಣಿಯರು ತಮ್ಮ ಆರೋಗ್ಯ ರಕ್ಷಣೆಗೆ ಹೆಚ್ಚು ಆದ್ಯತೆ ನೀಡಬೇಕು, ಹಸಿರು ತರಕಾರಿ ಮೊಟ್ಟೆ ಮಾಂಸ ಸೇರಿದಂತೆ ಪೌಷ್ಟಿಕ ಆಹಾರ ಹೆಚ್ಚು ಸೇವನೆ ಮಾಡಿದರೆ, ತಾಯಿಯ ಹೊಟ್ಟೆಯಲ್ಲಿ ಆರೋಗ್ಯ ಪೂರ್ಣ ಬ್ರೂಣ ಬೆಳವಣಿಗೆ ಹೊಂದುತ್ತದೆ. ನಿರಂತರವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರೆ. ಆರೋಗ್ಯಪೂರ್ಣ ಮಗುವಿನ ಜನನವಾಗುತ್ತದೆ. ನವಜಾತ ಶಿಶು ಆರೋಗ್ಯವಾಗಿರಲು ತಾಯಿ ಮಾನಸಿಕ ಸ್ಥಿತಿ ಹೊಂದಿರಬೇಕು ಹಾಗೂ ಕೆಲವರು ಮೂಢನಂಬಿಕೆಯಿಂದ ಬಾಣಂತಿಯರು ಪಥ್ಯಾಹಾರಗಳನ್ನ ಸೇವನೆ ಮಾಡುವುದರಿಂದ ಮಗುವಿಗೆ ಪೌಷ್ಠಿಕಾಂಶದ ಕೊರತೆ ಉಂಟಾಗಿ ಮಗುವಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಆದರಿಂದ ಹಣ್ಣು ತರಕಾರಿ, ಮೊಟ್ಟೆ ಸೇರಿಂತೆ ಬಾಣಂತಿಯರು ಪೌಷ್ಟಿಕ ಆಹಾರ ಸೇವನೆ ಮಾಡಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಸೂತಿ ತಜ್ಞರಾದ ಡಾ.ಕಾರ್ತಿಕ್ ಮಾತನಾಡಿ, ನವಜಾತ ಶಿಶುಗಳಿಗೆ…
ಶಿವಮೊಗ್ಗ: ಕುಡಿದು ಆ್ಯಂಬುಲೆನ್ಸ್ ಚಾಲನೆ ಮಾಡಿದ ಚಾಲಕನಿಗೆ ಶಿವಮೊಗ್ಗ ಸಂಚಾರಿ ಪೊಲೀಸರು 13 ಸಾವಿರ ರೂಪಾಯಿ ದಂಎ ವಿಧಿಸಿರುವ ಘಟನೆ ನಡೆದಿದೆ. ಆ್ಯಂಬುಲೆನ್ಸ್ ಚಾಲಕನೊಬ್ಬ ಶಿವಮೊಗ್ಗದ ಐಬಿ ಸರ್ಕಲ್ ನಲ್ಲಿ ಅಜಾಗರೋಕತೆಯಿಂದ ಆ್ಯಂಬುಲೆನ್ಸ್ ಚಲಾಯಿಸಿದ್ದ.. ಹೀಗಾಗಿ ಪೊಲೀಸರು ಪರಿಶೀಲನೆ ನಡೆಸಿದಾಗ ಡ್ರೈವರ್ ಮದ್ಯಪಾನ ಮಾಡಿರುವುದು ಬೆಳಕಿಗೆ ಬಂದಿತ್ತು. ವಾಹನ ದಾಖಲಾತಿ ಪರಿಶೀಲಿಸಿದಾಗ ಇನ್ಶ್ಯೂರೆನ್ಸ್ ಕೂಡ ಇರಲಿಲ್ಲ. ಈ ಎಲ್ಲ ಲೋಪಗಳನ್ನು ಗಮನಿಸಿ ಶಿವಮೊಗ್ಗ ನ್ಯಾಯಾಲಯ ಚಾಲಕನಿಗೆ 13 ಸಾವಿರ ರೂ. ದಂಡ ವಿಧಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಹೇಮಾವತಿ ಲಿಂಕ್ ಕೆನಾಲ್ ವಿಚಾರ ಪ್ರಸ್ತಾಪವಾಯಿತು. ಸಭೆ ಆರಂಭದಲ್ಲೇ ವಿವಾದದ ಹೇಮಾವತಿ ಲಿಂಕ್ ಕೆನಾಲ್ ವಿಚಾರ ಚರ್ಚೆಯಾಯಿತು. ಹೇಮಾವತಿ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿದ ಬಗ್ಗೆ ಚರ್ಚೆ ನಡೆಯಿತು. ಹೇಮಾವತಿ ವಿಚಾರವನ್ನ ಬಗೆಹರಿಸುವಂತೆ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಹಾಗೂ ಬಿಜೆಪಿ ಶಾಸಕ ಸುರೇಶ್ ಗೌಡ ಒತ್ತಾಯ ಮಾಡಿದರು. ಈ ವೇಳೆ ಉತ್ತರಿಸಿದ ಸಚಿವ ಪರಮೇಶ್ವರ್, ಬೆಂಗಳೂರಿನಲ್ಲಿ ಜೂನ್ 30ರಂದು ಅಂತಿಮ ನಿರ್ಧಾರದ ಸಭೆಯನ್ನು ನಡೆಸಲಾಗುವುದು. ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ನೀರಾವರಿ ಸಚಿವರು ಸಭೆಯಲ್ಲಿ ಹೇಮಾವತಿ ಲಿಂಕ್ ಕೆನಾಲ್ ಬಗ್ಗೆ ಮಾತಾಡ್ತಾರೆ. ರೈತರು, ಸಾರ್ವಜನಿಕರು, ಜನಪ್ರತಿನಿಧಿಗಳು ಭಾಗಿಯಾಗುವಂತೆ ಪರಮೇಶ್ವರ್ ಸಲಹೆ ನೀಡಿದರು. ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಹೋರಾಟ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗೆ ಪರಮೇಶ್ವರ್ ವಿಷಾದ ವ್ಯಕ್ತಪಡಿಸಿದರು. ಶಾಸಕರು, ಹೋರಾಟಗಾರರು ಸೇರಿ ಎಲ್ಲರೂ 30ರಂದು ಸಭೆಯಲ್ಲಿ ಭಾಗವಹಿಸಿ ಅಂತಾ ಮನವಿ ಮಾಡಿದರು. ಈ ಯೋಜನೆ ಬಗ್ಗೆ ಈಗಾಗಲೇ ಸರ್ಕಾರದಿಂದ ಅನುಮೋದನೆ…
ತುಮಕೂರು: ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಎಗ್ಗಿಲ್ಲದೆ ಲಂಚಾವತಾರ ನಡೆಯುತ್ತಿದೆ, ಜಿಲ್ಲಾಸ್ಪತ್ರೆಯಲ್ಲಿ ನಡೆಯುತ್ತಿರುವ ಲಂಚದ ಕರ್ಮಕಾಂಡ ಕೆಡಿಪಿ ಸಭೆಯಲ್ಲಿ ಬಟಾಬಯಲಾಗಿದೆ. ಜಿಲ್ಲಾಸ್ಪತ್ರೆಯ ಕರ್ಮಕಾಂಡಕ್ಕೆ ಕೆಡಿಪಿ ಸಭೆಯಲ್ಲಿ ಗೃಹ ಸಚಿವ ಪರಮೇಶ್ವರ್ ಕೆರಳಿ ಕೆಂಡವಾಗಿದ್ದು, ಹೆರಿಗೆ ಮಾಡಿಸೋಕೆ ಜಿಲ್ಲಾಸ್ಪತ್ರೆಯಲ್ಲಿ ದುಡ್ಡು ತಗೊಳೋದು ನಂಗೆ ಗೊತ್ತಿಲ್ಲವೇನ್ರೀ.. ಎಂದು ಅಧಿಕಾರಿಗಳಿಗೆ ಜೋರು ಧ್ವನಿಯಲ್ಲಿ ಸಚಿವ ಡಾ.ಜಿ. ಪರಮೇಶ್ವರ್ ಗದರಿದರು. ಬಳಿಕ ಡಿಎಚ್ ಒ ಚಂದ್ರಶೇಖರ್ ಹಾಗೂ ಡಿಎಸ್ ಅಸ್ಗರ್ ಬೇಗ್ ಅವರಿಗೆ ತೀವ್ರವಾಗಿ ತರಾಟೆಗೆತ್ತಿಕೊಂಡು ಚಳಿ ಬಿಡಿಸಿದರು. ಪರಮೇಶ್ವರ್ ಬೆನ್ನಲ್ಲೇ ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ಕೂಡ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಸ್ಪತ್ರೆಯಲ್ಲಿ ಹಣ ಪಡೆಯುತ್ತಿರುವುದು ಒಂದಡೆಯಾದರೆ ಉಳಿದ ಕರ್ಮಕಾಂಡ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಹೆರಿಗೆಯಲ್ಲಿ ಶಸ್ತ್ರಚಿಕಿತ್ಸೆಯೇ ಹೆಚ್ಚಾಗಿ ನಡೆಯುತ್ತಿದೆ, ತುಮಕೂರು ನಂ-1 ಸ್ಥಾನದಲ್ಲಿದೆ. ಯಾಕೆ ನಾರ್ಮಲ್ ಹೆರಿಗೆ ಮಾಡುತ್ತಿಲ್ಲ, ಎಲ್ಲವನ್ನೂ ಸಿಜರಿಯನ್ನೇ ಮಾಡುತ್ತಿದ್ದೀರಾ? ಖಾಸಗಿ ಆಸ್ಪತ್ರೆಗಳಲ್ಲಿ ಸಿಜರಿಯನ್ ಹೆಚ್ಚಾಗಿದ್ರು ಕಡಿವಾಣ ಯಾಕೆ ಹಾಕ್ತಿಲ್ಲ? ಖಾಸಗಿ ಆಸ್ಪತ್ರೆಗಳ ದರ್ಬಾರ್ ಗೆ ಕಡಿವಾಣ ಹಾಕುವಲ್ಲಿ ಯಾಕೆ ನಿರ್ಲಕ್ಷ್ಯ ಮಾಡ್ತಿದ್ದೀರಿ ಎಂದು ಪರಮೇಶ್ವರ್…