Subscribe to Updates
Get the latest creative news from FooBar about art, design and business.
- ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
- ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
- ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
- ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
- ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
Author: admin
ಬೆಂಗಳೂರು: ತಪ್ಪು ಅರಿವಾದರೆ ಯಾರೇ ಆದರೂ ಸಹ ಪಕ್ಷಕ್ಕೆ ಮರಳಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಪಕ್ಷಕ್ಕೆ ವಾಪಸ್ ಮರಳುವ ವಿಚಾರ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಇದೆಲ್ಲಾ ಕೇಂದ್ರದ ಮಟ್ಟದಲ್ಲಿ ಚರ್ಚೆ ಆಗುವ ವಿಚಾರ ಎಂದರು. ನಮ್ಮ ಹಂತದಲ್ಲಿ ಚರ್ಚೆ ಆಗಲ್ಲ. ಆದ್ರೆ ಯಾರ್ಯಾರು ತಮ್ಮ ತಪ್ಪನ್ನು ಅರ್ಥ ಮಾಡಿಕೊಂಡು ವಾಪಸ್ ಬರಬೇಕು ಅನ್ಕೊಂಡಿದ್ದಾರೋ ಅವರು ಬರಬಹುದು ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಸ್ಯಾಂಡಲ್ ವುಡ್ ನ ಬಹು ಬೇಡಿಕೆಯ ನಟ ಧ್ರುವ ಸರ್ಜಾ ಅವರು ತನ್ನ ಅಣ್ಣ ಚಿರಂಜೀವಿ ಸರ್ಜಾ ಅವರ ಬೈಕ್ ನಲ್ಲಿ ರೈಡ್ ಮಾಡುವ ಮೂಲಕ ತಮ್ಮ ಅಣ್ಣನ ನೆನಪನ್ನು ಸ್ಮರಿಸಿ ಭಾವುಕರಾಗಿದ್ದಾರೆ. 2020ರ ಜೂನ್ 7ರಂದು ಚಿರಂಜೀವಿ ಸರ್ಜಾ ಹೃದಯಾಘಾತಕ್ಕೆ ನಿಧನರಾಗಿದ್ದರು. ಚಿರಂಜೀವಿ ಸರ್ಜಾ ಅವರ ನಿಧನದಿಂದ ಧ್ರುವ ಸರ್ಜಾ ಮತ್ತು ಕುಟುಂಬ ತೀವ್ರ ದುಃಖಿತವಾಗಿತ್ತು. ಅಣ್ಣನ ನೆನಪಲ್ಲೇ ಧ್ರುವ ಸರ್ಜಾ ಈಗಲೂ ಕಳೆಯುತ್ತಿದ್ದಾರೆ. ಚಿರು ಇಷ್ಟದ ಯಮಹಾ ಆರ್ಡಿ 350 (Yamaha RD 350) ಬೈಕ್ ನಲ್ಲಿ ಅಣ್ಣ–ತಮ್ಮ ಜಾಲಿ ರೈಡ್ ಹೋಗುತ್ತಿದ್ದರು. ಕಾಲೇಜಿಗೆ ಹೋಗ್ತಿದ್ರು, ಸಿನಿಮಾ ಥಿಯೇಟರ್ಗೂ ಹೋಗುತ್ತಿದ್ದರು. ಮೈಸೂರಿಂದ ಬೆಂಗಳೂರಿಗೂ ಪ್ರಯಾಣ ಮಾಡುತ್ತಿದ್ದರು. ಅಣ್ಣನ ಇಷ್ಟದ ಈ ಬೈಕ್ ನ್ನ ಹಾಗೇ ಉಳಿಸಿಕೊಂಡ ಧ್ರುವ ಸರ್ಜಾ ಅದನ್ನ ಮತ್ತೆ ಸಂಪೂರ್ಣ ರೆಡಿ ಮಾಡಿಸಿ ತಂದೆಯನ್ನ ಹಿಂದೆ ಕೂರಿಸಿಕೊಂಡು ಮನೆಯ ಮುಂದಿನ ರಸ್ತೆಯಲ್ಲಿ ರೈಡ್ ಮಾಡಿದ್ದಾರೆ. ಅಗಲಿದ ಮಗನ ಇಷ್ಟದ ಬೈಕ್ ನ್ನ ತಂದೆಯೂ ಓಡಿಸಿ ಖುಷಿಪಟ್ಟಿದ್ದಾರೆ.…
ಬೆಂಗಳೂರು: ರಾಜ್ಯಾಧ್ಯಕ್ಷ ಹುದ್ದೆ ಕುರಿತು ಪಕ್ಷ ಸದ್ಯವೇ ನಿರ್ಧರಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲ ಜಿಲ್ಲಾಧ್ಯಕ್ಷರ ಅಭಿಪ್ರಾಯ ಪಡೆದು, ಪಕ್ಷದ ಮುಖಂಡರ ಅಭಿಮತ ಪಡೆದುಕೊಂಡು ಅಂತಿಮವಾಗಿ ಯಾರನ್ನು ಮಾಡಿದರೆ ಒಳ್ಳೆಯದು ಎಂಬ ಕುರಿತು ಅಂತಿಮ ನಿರ್ಧಾರ ಸದ್ಯವೇ ಆಗುವ ವಿಶ್ವಾಸವಿದೆ ಎಂದರು. ಕಳೆದ ಒಂದೂಕಾಲು ವರ್ಷದಿಂದ ಕೊಟ್ಟಿರುವ ಜವಾಬ್ದಾರಿಯನ್ನು ಪಕ್ಷದ ಕಾರ್ಯಕರ್ತನಾಗಿ ಶ್ರದ್ಧೆಯಿಂದ ನಿರ್ವಹಿಸುತ್ತಿದ್ದೇನೆ ಎಂಬ ಅನಿಸಿಕೆ ನನ್ನದು. ಕೇಂದ್ರ ಮತ್ತು ರಾಷ್ಟ್ರೀಯ ನಾಯಕರಿಗೆ ಕೊಡಬೇಕಾದ ಮಾಹಿತಿಯನ್ನು ಕೊಡುತ್ತ ಬಂದಿದ್ದೇನೆ ಎಂದು ಹೇಳಿದರು. ನಾನು ಮತ್ತು ಪಕ್ಷದ ಕೆಲವು ಹಿರಿಯ ಮುಖಂಡರು ನಿನ್ನೆ ಕೇಂದ್ರ ಗೃಹ ಸಚಿವ ಮತ್ತು ಪಕ್ಷದ ಮಾರ್ಗದರ್ಶಕರಾದ ಅಮಿತ್ ಶಾ ಜೀ ಅವರನ್ನು ಭೇಟಿ ಮಾಡಿದ್ದೇವೆ. ಸುಮಾರು 20–25 ನಿಮಿಷಗಳ ಕಾಲ ಸುದೀರ್ಘವಾಗಿ ರಾಜ್ಯ ರಾಜಕಾರಣ, ಪ್ರಚಲಿತ ವಿದ್ಯಮಾನಗಳ ಕುರಿತು ಚರ್ಚಿಸಿದ್ದೇವೆ ಎಂದು ವಿವರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಬೆಂಗಳೂರು: ಇಸ್ರೇಲ್–ಇರಾನ್ ಯುದ್ಧ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಬರಹವನ್ನು ಹಂಚಿಕೊಂಡ ಸಿದ್ದರಾಮಯ್ಯ ಅವರು ಭಾರತ ಈಗ ಮಾತನಾಡಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ. ಇರಾನ್ ಮೇಲೆ ಇಸ್ರೇಲ್ ನಡೆಸಿದ ಅಪಾಯಕಾರಿ ದಾಳಿ ಕಾನೂನುಬಾಹಿರ. ಇದು ಪ್ರಾದೇಶಿಕ ಶಾಂತಿಗೆ ಬೆದರಿಕೆ ಹಾಕುತ್ತದೆ ಮತ್ತು ಭಾರತದ ಹಿತಾಸಕ್ತಿಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದಿದ್ದಾರೆ. ಸೋನಿಯಾ ಗಾಂಧಿಯವರ ಲೇಖನವು ನಾಗರಿಕರ ಜೀವಗಳು ಬಲಿಯಾದಾಗ, ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದಾಗ ಮತ್ತು ರಾಜತಾಂತ್ರಿಕತೆಯನ್ನು ತ್ಯಜಿಸಿದಾಗ ಭಾರತ ಮೌನವಾಗಿರಲು ಸಾಧ್ಯವಿಲ್ಲ ಎಂಬುದನ್ನು ಪ್ರಬಲವಾಗಿ ನೆನಪಿಸುತ್ತದೆ ಎಂದು ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಕಾಶ್ಮೀರ ಸೇರಿದಂತೆ ನಿರ್ಣಾಯಕ ಸಮಯದಲ್ಲಿ ಇರಾನ್ ಭಾರತದ ಪರವಾಗಿ ನಿಂತಿದ್ದರೂ ಕೇಂದ್ರ ಸರ್ಕಾರದ ಮೌನವಾಗಿದೆ. ಈ ಮೊದಲು ಗಾಜಾ ಈಗ ಇರಾನ್ ವಿಚಾರಲ್ಲಿ ಮೌನವಾಗಿರುವುದು ಶಾಂತಿಯನ್ನು ಪ್ರತಿಪಾದಿಸುವ ನಮ್ಮ ವಿದೇಶಾಂಗ ನೀತಿಯ ನಿರ್ಗಮನವನ್ನು ಸೂಚಿಸುತ್ತದೆ. ಪಶ್ಚಿಮ ಏಷ್ಯಾದಲ್ಲಿ ನಮ್ಮದೇ ಆದ ದೀರ್ಘಕಾಲೀನ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಭಾರತ ಈಗ ಮಾತನಾಡಬೇಕು ಎಂದು ಪೋಸ್ಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು: ಎತ್ತಿನಹೊಳೆ ನೀರಾವರಿ ಯೋಜನೆಯಲ್ಲ, ಕುಡಿಯುವ ನೀರಿನ ಮತ್ತು ಕೆರೆ ತುಂಬಿಸುವ ಯೋಜನೆಯಾಗಿದೆ. ಯೋಜನಾ ವ್ಯಾಪ್ತಿಯ ಎಲ್ಲಾ 7 ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಗುರಿ. ಎತ್ತಿನಹೊಳೆ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆಯಾಗಿದೆ. ಕುಡಿಯುವ ನೀರಿನ ಪೂರೈಕೆಗೆ ಬೇಕಾದಷ್ಟು ನೀರು ಲಭ್ಯವಿದೆ. ಪ್ರಾರಂಭಿಕ ಹಂತದಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಪೂರ್ಣಗೊಳಿಸಿ ಬಳಿಕ ಕೆರೆಗಳನ್ನು ತುಂಬಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಯೋಜನಾ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಖಾತ್ರಿಪಡಿಸಬೇಕು. ಕುಡಿಯುವ ನೀರು ಕಾಮಗಾರಿ ಪೂರ್ಣಗೊಳಿಸಲು ಇರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು ಎಂಬ ಸೂಚನೆ ನೀಡಲಾಯಿತು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ 14.056 ಟಿಎಂಸಿ ಕುಡಿಯುವ ನೀರು, 9.953 ಟಿಎಂಸಿ ನೀರು ಕೆರೆಯನ್ನು ತುಂಬಿಸಲು ಡಿಪಿಆರ್ ಮಾಡಲಾಗಿದೆ.…
ತುಮಕೂರು: ಇಂದು ದೇಶ ವಿದೇಶಗಳಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ತುಮಕೂರು ಜಿಲ್ಲೆಯಲ್ಲೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ತುಮಕೂರು ಜಿಲ್ಲಾಡಳಿತದ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಯಿತು. ತುಮಕೂರು ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿ ವರ್ಗ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿ, ಯೋಗ ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗ ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ಮಳೆಗಾಲದಲ್ಲಿ ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ಗುರುತಿಸಿ, ಅವುಗಳನ್ನು ತೆರವುಗೊಳಿಸಿ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಶುಕ್ರವಾರ ಅರಣ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮರಗಳನ್ನು ರಕ್ಷಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಇತ್ತೀಚೆಗೆ ಮರದ ಕೊಂಬೆ ಬಿದ್ದು 29 ವರ್ಷದ ಅಕ್ಷಯ್ ಸಾವಿಗೀಡಾಗಿದ್ದಕ್ಕೆ ದುಃಖ ವ್ಯಕ್ತಪಡಿಸಿದರು. ಮಳೆ ಮತ್ತು ಬಲವಾದ ಗಾಳಿ ಬೀಸುವ ಸಮಯದಲ್ಲಿ ಎತ್ತರದ ಅಥವಾ ಆಳವಾಗಿ ಬೇರೂರಿರದ ಮರಗಳು ಬೀಳುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ, ಕಾಂಕ್ರೀಟ್, ಕಲ್ಲಿನ ಚಪ್ಪಡಿಗಳು ಮತ್ತು ಬೇರುಗಳ ಸುತ್ತಲೂ ಹಾಕಲಾದ ಹೆಂಚುಗಳು, ನೀರು ನೆಲಕ್ಕೆ ಇಳಿಯುವುದನ್ನು ತಡೆಯುವುದು ಎಂದು ತಜ್ಞರನ್ನು ಉಲ್ಲೇಖಿಸಿ ಹೇಳಿದರು. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ ಜಿಟಿ) ಕೂಡ ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ ಮತ್ತು ರಾಜ್ಯ ಸರ್ಕಾರ ಈಗಾಗಲೇ ಅಧಿಕೃತ ಆದೇಶವನ್ನು ಬಿಡುಗಡೆ ಮಾಡಿದೆ. ಗುರುವಾರ ಬಿಬಿಎಂಪಿ ವಿಶೇಷ ಆಯುಕ್ತರು ಮರಗಳ ಸುತ್ತಲಿನ ಕಾಂಕ್ರೀಟ್ ತೆಗೆಯಲು ಆದೇಶಿಸಿದ್ದಾರೆ. ಇನ್ನು ಮುಂದೆ ರಸ್ತೆಬದಿಗಳಲ್ಲಿ ಸಸಿಗಳನ್ನು ನೆಡುವಾಗ, ಅದರ ಸುತ್ತ…
ಬೆಂಗಳೂರು: ನಿರ್ದೇಶಕ ನಂದ ಕಿಶೋರ್ ಯುವ ನಟರೊಬ್ಬರಿಗೆ ಅವಕಾಶ ನೀಡುವ ಆಮಿಷವೊಡ್ಡಿ ಬರೋಬ್ಬರಿ 22 ಲಕ್ಷ ರೂಪಾಯಿ ವಂಚಿಸಿರುವ ಆರೋಪ ಕೇಳಿ ಬಂದಿದೆ. ಯುವ ನಟ ಶಬರೀಶ್ ಶೆಟ್ಟಿ ಎಂಬವರು ಈ ಗಂಭೀರ ಆರೋಪ ಮಾಡಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ವಾಟ್ಸಾಪ್ ಚಾಟ್ ಹಂಚಿಕೊಂಡಿದ್ದಾರೆ. 2016ರಲ್ಲಿ ನಂದಕಿಶೋರ್ ಜಿಮ್ ನಲ್ಲಿ ಪರಿಚಯವಾಗಿದ್ದರು. ನನ್ನ ಫ್ರೆಂಡ್ ಥರ ಇದ್ದ ಅವರು ದುಡ್ಡಿನ ಸಹಾಯ ಕೇಳಿದರು. ನಾನು ಬೇರೆಯವರ ಮೂಲಕ ಅವರಿಗೆ ಸಹಾಯ ಮಾಡಿದೆ. ನಾನು ಸುದೀಪ್ ಅವರ ಫ್ಯಾನ್ ಆಗಿರುವುದರಿಂದ ನಂದ ಕಿಶೋರ್ ಜೊತೆಗೆ ಫ್ರೆಂಡ್ ಶಿಪ್ ಬೆಳೆಸಿದರೆ ಸುದೀಪ್ ಅವರನ್ನು ಸಂಪರ್ಕಿಸಬಹುದು ಎಂದು ಭಾವಿಸಿದ್ದೆ ಎಂದು ಶಬರೀಶ್ ಹೇಳಿದ್ದಾರೆ. ಸುದೀಪ್ ಸರ್ ಅವರನ್ನು ಸಂಪರ್ಕ ಮಾಡಬೇಕು ಅವರ ಜೊತೆ ಕ್ರಿಕೆಟ್ ಆಡಬೇಕು ಅನ್ನೋ ಕನಸಿತ್ತು. ನಂದ ಕಿಶೋರ್ ಅವರು ಸುದೀಪ್ ಸರ್ ಜೊತೆಗೆ ತುಂಬಾ ಆತ್ಮೀಯವಾಗಿದ್ರು ಅನ್ನೋ ಕಾರಣಕ್ಕೆ, ನಾನು ಅವರ ಜೊತೆ ಫ್ರೆಂಡ್ಶಿಪ್ ಬೆಳೆಸಿಕೊಂಡಿದ್ದೆ. ಅದನ್ನೇ ಬಂಡವಾಳವಾಗಿಟ್ಟುಕೊಂಡು ಅವರು ನನ್ನ…
ಮಂಗಳೂರು: ಗರ್ಭಿಣಿ ಮಹಿಳೆಯನ್ನು ಹತ್ಯೆ ಮಾಡಿದ ಪತಿಯೊಬ್ಬ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ (52) ಹತ್ಯೆ ನಡೆಸಿದವರಾಗಿದ್ದು, ಇವರ ಪತ್ನಿ ಪತ್ನಿ ಜಯಂತಿ (45) ಹತ್ಯೆಯಾದವರಾಗಿದ್ದಾರೆ. ಹತ್ಯೆಯ ನಂತರ ರಾಮ ಮೂಲ್ಯ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಜಯಂತಿ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿದ್ದರೆ, ತಿಮ್ಮಪ್ಪ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು, ಜಗಳ ವಿಕೋಪಕ್ಕೆ ತಿರುಗಿ ಜಯಂತಿ ಅವರಿಗೆ ಹಲ್ಲೆ ಮಾಡಿ, ಕತ್ತು ಹಿಸುಕಿ ಕೊಂದಿದ್ದು, ನಂತರ ತಿಮ್ಮಪ್ಪ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮೃತ ಜಯಂತಿ ಅವರ ತಂಗಿ ಸುಜಾತ ಫರಂಗಿಪೇಟೆ ಮತ್ತು ತಿಮ್ಮಪ್ಪರ ಸಹೋದರ ವಿಶ್ವನಾಥ ಅವರ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ…
ಗುಂಡ್ಲುಪೇಟೆ: ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ರೇಂಜ್ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ. ದೇಶಿಪುರ ಕಾಲೋನಿಯ ಪುಟ್ಟಮ್ಮ (32) ಮೃತಪಟ್ಟವರು. ಗುರುವಾರ ಮಧ್ಯಾಹ್ನ ದನಗಳನ್ನು ಮೇಯಿಸಲು ಹೋಗಿದ್ದ ವೇಳೆ ಹುಲಿ ದಾಳಿ ಮಾಡಿದೆ. ಮಹಿಳೆಯನ್ನು ಕೊಂದ ಬಳಿಕ ಸ್ಥಳದಿಂದ ನೂರು ಮೀಟರ್ ಗಳವರೆಗೆ ಹುಲಿ ಹೊತ್ತೊಯ್ದಿತ್ತು. ಘಟನೆಯ ಮಾಹಿತಿ ತಿಳಿದು ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಂಡಿಪುರ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಮಾತನಾಡಿ, ಮಹಿಳೆ ಹುಲಿ ದಾಳಿಯಿಂದ ಸಾವನ್ನಪ್ಪಿರುವುದು ದೃಢಪಟ್ಟಿದೆ. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಹಸ್ತಾಂತರಿಸಲಾಗುವುದು. ಹುಲಿಯನ್ನು ಸೆರೆಹಿಡಿಯಲು ಕಾರ್ಯಾಚರಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಜೂನ್ 10 ರಂದು ಬೆಡಗುಳಿ ಗ್ರಾಮದ ವ್ಯಾಪ್ತಿಯ ರಂಗಮ್ಮ ಹುಲಿ ದಾಳಿಯಲ್ಲಿ ಸಾವನ್ನಪ್ಪಿದ್ದರು. ಈ ಘಟನೆ ನಡೆದು, ಕೆಲವೇ ಗಂಟೆಗಳಲ್ಲಿ ಅರಣ್ಯ ಇಲಾಖೆ ಹುಲಿಯನ್ನು ಸೆರೆಹಿಡಿಯಿತು. ಈಗ, 10 ದಿನಗಳ ಒಳಗೆ ಮತ್ತೊಂದು ಹುಲಿ ದಾಳಿ ಗ್ರಾಮಸ್ಥರಲ್ಲಿ ಭೀತಿಯನ್ನು…