Author: admin

ಬೆಂಗಳೂರು: ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಆರೋಪಿಸಿದ್ದಾರೆನ್ನಲಾಗಿರುವ ಆಡಿಯೋ ಕ್ಲಿಪ್ ಜೂ.20ರಂದು ವೈರಲ್ ಆಗಿದೆ. ಆಡಿಯೋ ಕ್ಲಿಪ್‌ನಲ್ಲಿ, ಶಾಸಕ ಪಾಟೀಲ್ ತಮ್ಮಲ್ಲಿರುವ ಮಾಹಿತಿಯನ್ನು ಬಹಿರಂಗಪಡಿಸಿದರೆ, ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಡಿಪಾಯವೇ ಅಲುಗಾಡುತ್ತದೆ ಎಂದು ಹೇಳಿದ್ದಾರೆ. ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದೆ. ಕಲಬುರಗಿ ಜಿಲ್ಲೆಯ ಆಳಂದ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ ಪಾಟೀಲ್, ಸಚಿವ ಜಮೀರ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರೊಂದಿಗೆ ಮಾತನಾಡುತ್ತಿರುವುದು ದೂರವಾಣಿ ಸಂಭಾಷಣೆಯ ಆಡಿಯೋ ಕ್ಲಿಪ್‌ ನಲ್ಲಿ ಕೇಳಿಬರುತ್ತಿದೆ. ಪಾಟೀಲ್ ತಮ್ಮ ಕ್ಷೇತ್ರದೊಳಗಿನ ಹಳ್ಳಿಗಳಲ್ಲಿ ಮನೆ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಲಂಚದ ಬಗ್ಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು ಕಾರ್ಯದರ್ಶಿಯನ್ನು ಪ್ರಶ್ನಿಸಿದ್ದಾರೆ. ಲಂಚ ನೀಡಿದವರಿಗೆ ಮಾತ್ರ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ.…

Read More

ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಗಳಲ್ಲಿ ಗುಟ್ಕಾ, ಪಾನ್ ಮಸಾಲ ತಿಂದು ಉಗುಳುವವರಿಗೇನೂ ಕಡಿಮೆ ಇಲ್ಲ, ಅಂತಹ ಕೆಎಸ್ ಆರ್ ಟಿಸಿ ಬಸ್ ಗಳಲ್ಲೇ ಗುಟ್ಕಾ ಕಂಪೆನಿಗಳ ಜಾಹೀರಾತುಗಳನ್ನು ಪ್ರದರ್ಶನ ಮಾಡಲಾಗುತ್ತಿದೆಯೇ? ಇಲ್ಲೊಬ್ಬರು ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ಫೋಟೋವೊಂದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಹೌದು…! ರಘು ತುಮಕೂರು ಎಂಬವರು ಕೆಎಸ್ ಆಟಿಸಿ ಬಸ್ ವೊಂದರ ಹಿಂಬದಿಯ ಫೋಟೋ ತೆಗೆದು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದು, “ಈ ಚಿತ್ರಣದಲ್ಲಿ ಏನೆಲ್ಲ ತಪ್ಪಿದೆ ಗುರುತಿಸುವೀರಾ?”  ಎಂದು ಪ್ರಶ್ನೆ ಮಾಡಿದ್ದಾರೆ. KA 06- F0783 ನಂಬರ್ ಪ್ಲೇಟ್ ನ ಈ ಬಸ್ ನಲ್ಲಿ ಕನ್ನಡದಲ್ಲಿ ಬರೆಯಲಾಗಿರುವ ನಂಬರ್ ಪ್ಲೇಟ್ ಮೇಲೆಯೇ ವಿಮಲ್ ಜಾಹೀರಾತು ಅಂಟಿಸಲಾಗಿದೆ. ಈ ತಪ್ಪನ್ನು ಸಾಮಾಜಿಕ ಬಳಕೆದಾರರು ಗುರುತಿಸಿದ್ದಾರೆ. ಅಲ್ಲದೇ “ಕೆಎಸ್ ಆರ್ ಟಿ” ಮಾತ್ರವೇ ಇದ್ದು, ಸಿ ಅಕ್ಷರವನ್ನು ಬಿಟ್ಟಿರುವುದನ್ನೂ ಗುರುತಿಸಿದ್ದು, ಕೆಎಸ್ ಆರ್ ಟಿಸಿ ಬಸ್ ಗಳ ನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಪ್ರಸಿದ್ಧ ನಟರು ಗುಟ್ಕಾ ಕಂಪೆನಿಗೆ…

Read More

ತುಮಕೂರು: ಚುನಾವಣೆಗೂ ಮುಂಚೆ Save Nandini ಕನ್ನಡಿಗರ ಆತ್ಮಗೌರವ ಮಾರಾಟಕ್ಕಿಲ್ಲ ಎಂದು ಕಾಂಗ್ರೆಸ್ ದೊಡ್ಡ ಹೋರಾಟ ಮಾಡಿದ್ರು ಆದರೆ ಈಗ ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು. ನಂದಿನಿ ಉಳಿಸಬೇಕು ಅಂತ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಸೇವ್ ನಂದಿನಿ ಎಂಬ ಹ್ಯಾಶ್ ಟ್ಯಾಗ್ ಹಿಡಿದು ಕೈನಲ್ಲಿ ಹಾಲಿನ ಪ್ಯಾಕೇಟ್ ಹಿಡಿದು ಫೋಟೋಗೆ ಪೋಸ್ ಕೊಟ್ಟ ಹಾಗಲ್ಲ, ನಮ್ಮ ನಂದಿನಿಯನ್ನ ಉಳಿಸಬೇಕು. ಇವತ್ತು ಅಧಿಕಾರಕ್ಕೆ ಬರುತ್ತಿದ್ದಂತೆ ನಮ್ಮ ಹೆಮ್ಮೆಯ ನಂದಿನಿಯನ್ನ ಕಡೆಗಣಿಸಿದ್ದಾರೆ ಎಂದು ಅವರು ಆರೋಪಿಸಿದರು. ಅಮೂಲ್ ಸೇರಿದಂತೆ ಬೇರೆ ಬೇರೆಯವರಿಗೆ ಗುತ್ತಿಗೆ ಕೊಡುವಂತ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಇವತ್ತು ಉಪ ಮುಖ್ಯಮಂತ್ರಿಗಳ ತಮ್ಮ ಬಮುಲ್ ಅಧ್ಯಕ್ಷ ಆಗಿದ್ದಾರಲ್ಲ ಅವರೇ ಉತ್ತರ ಕೊಡ್ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಾದಯಾತ್ರೆ ಮಾಡಿ ಪಕ್ಷವನ್ನ ಸಂಘಟನೆ ಮಾಡುವ ವಿಚಾರಕ್ಕೆ ಮಾತನಾಡಿದ ಅವರು, ಪಾದಯಾತ್ರೆ ಆಗಲಿ ಯಾವುದೇ ಯಾತ್ರೆ ಆಗಲಿ. ಕೆಲವೊಮ್ಮೆ ಬೇರೆ…

Read More

ತುಮಕೂರು:  ಸಹಕಾರ ಖಾತೆ ಸಚಿವ ಕೆ.ಎನ್.ರಾಜಣ್ಣ ಅವರ 75ನೇ ಅಮೃತ ಮಹೋತ್ಸವ ಸಮಾರಂಭದ ಹಿನ್ನೆಲೆಯಲ್ಲಿ ಶನಿವಾರ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು ಇದಕ್ಕಾಗಿ ಸರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಕೆ.ಎನ್.ರಾಜಣ್ಣ ಅವರ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ವೇದಿಕೆಯನ್ನು ಹಾಕಲಾಗಿದ್ದು ಕಾಂಗ್ರೆಸ್ ಮುಖಂಡರ ಕಟ್ ಔಟ್ ಗಳು ರಾರಾಜಿಸುತ್ತವೆ. ಸಹಕಾರಿ ವಲಯದಲ್ಲಿ ಕೆಲಸ ಮಾಡಿರುವ ಸಹಕಾರಿಗಳು ಹಾಗೂ ರಾಜಣ್ಣ ಅಭಿಮಾನಿಗಳು ಸೇರಿದಂತೆ ಒಟ್ಟು ಎರಡು ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಗೊಂದಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್​ ಹೋಟೆಲ್ ​​ನಲ್ಲಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ವಾಗತಿಸಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ರಾತ್ರಿಯೇ ಅಮಿತ್ ಶಾರನ್ನು ಭೇಟಿಯಾಗಿದ್ದಾರೆ. ನೆಲಮಂಗಲ ಬಳಿಯ ನಗರೂರು ಬಿಜಿಎಸ್ ಕಾಲೇಜು ಆವರಣದಲ್ಲಿ ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿಯವರಿಂದ ರಾಜ್ಯಕ್ಕೆ ಕೊಡುಗೆ ಏನು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರಶ್ನಿಸಿದ್ದು, ತನ್ನ ಜೊತೆಗೆ ಈ ಬಗ್ಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, NDA ಎಂದರೆ ನೇಷನ್ ಡೆಸ್ಟ್ರಾಯ್ ಅಲಾಯನ್ಸ್. ಕೇಂದ್ರ ಸಚಿವ ಜೋಶಿ ಮತ್ತು ಕುಮಾರಸ್ವಾಮಿಗೆ ರಾಜ್ಯದ ಮೇಲೆ ಪ್ರೀತಿ ಜಾಸ್ತಿಯಾಗಿದೆ. ಕಳೆದ 1 ವರ್ಷದಿಂದ ನೀವು ಇಬ್ಬರು ಕೇಂದ್ರದಲ್ಲಿ ಏನ್ ಕಡಿದು ಕಟ್ಟೆ ಹಾಕಿದ್ದೀರಾ? ಉತ್ತರ ಕೊಡಿ. ಆತ್ಮಸಾಕ್ಷಿ ಇದ್ದರೆ ಬಹಿರಂಗ ಚರ್ಚೆ ಇಬ್ಬರು ಬರಲಿ ಎಂದರು. ಕೇಂದ್ರ ಸರ್ಕಾರ ಏನು ಮಾಡಿದೆ ಎಂದು ತಿಳಿಯುವ ಕುತೂಹಲವಿದೆ. ನಮ್ಮ ರಾಜ್ಯ ಸರ್ಕಾರ 2 ವರ್ಷ ಏನು ಮಾಡಿದೆ ಎಂದು ನಾನು ಹೇಳುತ್ತೇನೆ. ಮೊದಲು ನೀವು ರಾಜ್ಯಕ್ಕೆ ಏನು ಮಾಡಿದ್ದೀರಾ ಹೇಳಿ? ಬಹಿರಂಗ ಚರ್ಚೆಗೆ ಜೋಶಿ, ಕುಮಾರಸ್ವಾಮಿ ಬರಲಿ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ನವದೆಹಲಿ: ಕಮಲ್ ಹಾಸನ್ ಚಿತ್ರ `ಥಗ್ ಲೈಫ್’ ಬಿಡುಗಡೆ ವಿಚಾರದಲ್ಲಿ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ ಮತ್ತು ರಾಜ್ಯ ಚಲನಚಿತ್ರ ಮಂಡಳಿಯನ್ನು ತರಾಟೆಗೆತ್ತಿಕೊಂಡಿದೆ. ಚಿತ್ರದ ಮೇಲೆ ಯಾವುದೇ ನಿರ್ಬಂಧ ಹೇರಿಲ್ಲ. ನಿರ್ಮಾಪಕರು ಸಿನಿಮಾ ಬಿಡುಗಡೆ ಮಾಡಲು ಮನಸ್ಸು ಮಾಡಿದರೆ ಸಂಪೂರ್ಣ ಭದ್ರತೆಯನ್ನು ಒದಗಿಸುವುದಾಗಿ ರಾಜ್ಯ ಸರ್ಕಾರ ಸಲ್ಲಿಸಿದ ಅಫಿಡವಿಟ್ ಅನ್ನು ದಾಖಲಿಸಿಕೊಂಡ ನ್ಯಾಯಾಲಯ, ಬೆದರಿಕೆ ಹಾಕಿದವರ ವಿರುದ್ಧ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿತು. ದ್ವೇಷ ಭಾಷಣ ಮತ್ತು ಹಿಂಸಾಚಾರದ ಬೆದರಿಕೆಗಳ ಕುರಿತು ಮಾರ್ಗಸೂಚಿಗಳನ್ನು ಕೋರಿ ನಿರ್ಮಾಪಕ ಮತ್ತು ಮೂರನೇ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸಿದ ಪೀಠವು, ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆ ಎಂದು ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಬೆಂಗಳೂರು ಮೆಟ್ರೊ ನಿಲ್ದಾಣಗಳಲ್ಲಿ  ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತ ಮಾಡಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸ್ಪಷ್ಟನೆ ನೀಡಿದೆ. ಅಮುಲ್‌ಗೆ 10 ಮಳಿಗೆಗಳ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಎಂಆರ್‌ ಸಿಎಲ್‌ ನ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ ಚವಾಣ್, ಬೆಂಗಳೂರು ಮೆಟ್ರೊ ನಿಲ್ದಾಣಗಳ ವ್ಯಾಪ್ತಿಯಲ್ಲಿರುವ ಅಂಗಡಿಗಳು ಮತ್ತು ಮಳಿಗೆಗಳನ್ನು ಟೆಂಡರ್ ಪ್ರಕ್ರಿಯೆ ಮೂಲಕ ಹಂಚಲಾಗಿದೆ. ಈ ಪ್ರಕ್ರಿಯೆಯ ಮೂಲಕ ಅಮುಲ್ 10 ಮಳಿಗೆಗಳನ್ನು ಪಡೆದುಕೊಂಡಿದೆ ಎಂದರು. ಭವಿಷ್ಯದ ಟೆಂಡರ್‌ಗಳಲ್ಲಿ ನಂದಿನಿ ಭಾಗವಹಿಸಿದರೆ ಅದಕ್ಕೂ ಮಳಿಗೆಗಳನ್ನು ನೀಡುತ್ತೇವೆ. ನಾವು ಯಾರಿಗೂ ಆದ್ಯತೆ ನೀಡುವುದಿಲ್ಲ. 10 ಮಳಿಗೆಗಳಿಗೆ ಐದು ವರ್ಷಗಳ ಅವಧಿಗೆ ಅಮುಲ್‌ಗೆ ಮಾಸಿಕ ರೂ. 7 ಲಕ್ಷ ಬಾಡಿಗೆ ನಿಗದಿಪಡಿಸಲಾಗಿದೆ. ಬಿಎಂಆರ್‌ಸಿಎಲ್ ಇತ್ತೀಚೆಗೆ ಆಹ್ವಾನಿಸಿದ ಟೆಂಡರ್‌ನಲ್ಲಿ ನಂದಿನಿ ಭಾಗವಹಿಸಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ನಮ್ಮ ಮೆಟ್ರೋದಲ್ಲಿ ಅಮುಲ್ ಮಳಿಗೆ ತೆರೆದ ಹಿನ್ನೆಲೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ರಾಜ್ಯದ ನಂದಿನಿಗೆ ಸ್ಥಾನವಿಲ್ಲವೇ ಎನ್ನುವ ಆಕ್ರೋಶ ಕೇಳಿ…

Read More

ಬೆಂಗಳೂರು: ಶೌಚಗುಂಡಿ ಸ್ವಚ್ಚಗೊಳಿಸುವಾಗ ಅಸ್ಥಿಪಂಜರ, ಮೂಳೆಗಳು, ತಲೆಬುರುಡೆ ರೀತಿಯ ಭಾಗಗಳು ಪತ್ತೆಯಾಗಿರುವ ಘಟನೆ ಬೆಂಗಳೂರು ನಗರದ ಬೇಗೂರಿನ ಅಪಾರ್ಟ್​​ಮೆಂಟ್​​ ವೊಂದರಲ್ಲಿ ನಡೆದಿದೆ. ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಎಂಎನ್ ಕ್ರೆಡೆನ್ಸ್ ಫ್ಲೋರಾ ಅಪಾರ್ಟ್‌ಮೆಂಟ್ಸ್‌ ನ ಪಾರ್ಕಿಂಗ್ ಸ್ಥಳದ ಪಕ್ಕದಲ್ಲಿರುವ ಹೊಂಡಗಳಲ್ಲಿ ಅಸ್ಥಿಪಂಜರದ ಅವಶೇಷಗಳು ಕಂಡುಬಂದಿವೆ. ಸಿಕ್ಕ ಅಸ್ಥಿಪಂಜರ ಮನುಷ್ಯರದ್ದಾ ಅಥವಾ ಪ್ರಾಣಿಗಳಿದ್ದಾ ಎಂಬುದನ್ನು ಅರಿಯಲು ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮಾದರಿಗಳನ್ನು ಕಳುಹಿಸಿದ್ದಾರೆ. ಬೇಗೂರಿನ ಕೈಗಾರಿಕಾ ಪ್ರದೇಶದ ಅಪಾರ್ಟ್​​ಮೆಂಟ್ ​​​ವೊಂದರಲ್ಲಿ ಜೂನ್ 16ರಂದು ಗುತ್ತಿಗೆ ಕಾರ್ಮಿಕರು ಶೌಚಗುಂಡಿಗಳನ್ನು ಸ್ವಚ್ಚಗೊಳಿಸುವಾಗ ಅಸ್ಥಿಪಂಜರ ಕಂಡುಬಂದಿತ್ತು.‌ ಇದನ್ನು ಕಂಡು ಅಪಾರ್ಟ್‌ಮೆಂಟ್​​ ನಿವಾಸಿಗಳು ಆತಂಕಗೊಂಡಿದ್ದರು. ಕಾರ್ಮಿಕರು ಈ ವಿಷಯವನ್ನು ಅಪಾರ್ಟ್ ಮೆಂಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಕರಿಯಾ ಜಾನ್‌ಗೆ ತಿಳಿಸಿದರರು, ನಂತರ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಳೆದ‌ 10 ವರ್ಷಗಳ ಹಿಂದೆ ಅಪಾರ್ಟ್​​ಮೆಂಟ್ ನಿರ್ಮಾಣವಾಗುವ‌ ಆ ಜಾಗದ ಬಳಿ ಸ್ಮಶಾನವಿತ್ತು ಎಂದು ಸ್ಥಳೀಯರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಯುಡಿಆರ್ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಫ್​…

Read More

ಬೆಂಗಳೂರು: ಬಿಗ್‌ಬಾಸ್‌ ಸೀಸನ್ 11ರ ಸ್ಪರ್ಧಿ ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ಹಣ ವಂಚನೆ ಆರೋಪ ಕೇಳಿಬಂದಿದೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಮೈನುದ್ದಿನ್ ಎಂಬವರು ಗೋಲ್ಡ್ ಸುರೇಶ್ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ. ಕೇಬಲ್‌ ಚಾನೆಲ್‌ ಸೆಟ್‌ಅಪ್‌ ಮಾಡಿಕೊಡುವುದಾಗಿ ಹೇಳಿ ವಂಚನೆ ಮಾಡಿದ್ದಾರೆಂದು ಅವರು ದೂರಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಗೋಲ್ಡ್ ಸುರೇಶ್, ಇದು ಊಹಾಪೋಹದ ಆರೋಪ. ಅಧಿಕೃತವಾಗಿ ನನ್ನ ಮೇಲೆ‌ ಎಲ್ಲೂ ಎಫ್‌ ಐಆರ್  ಆಗಿಲ್ಲ. 2018ರಲ್ಲಿ ನನ್ನ ಸ್ನೇಹಿತನ ಮೂಲಕ ಆ ವ್ಯಕ್ತಿ ಪರಿಚಯ ಆಗಿದ್ರು. ಅವರ ಕೆಲಸ ಮಾಡಿಕೊಟ್ಟಿದ್ದೀನಿ. ನಾನು ಯಾರಿಗೂ ಯಾವುದೇ ಹಣ ಕೊಡಬೇಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More