Subscribe to Updates
Get the latest creative news from FooBar about art, design and business.
- ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
- ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
- ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
- ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
- ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
Author: admin
ತುಮಕೂರು, ಮಧುಗಿರಿ: ಸಚಿವ ರಾಜಣ್ಣ ಅವರೇ ನೀವೂ ಹಿರಿಯರು ಗೌರವವಿದೆ, ನಿಮ್ಮ ಹಿರಿತನಕ್ಕೆ ನಾನು ಬೆಲೆ ಕೊಡುತ್ತೇನೆ. ಆದರೆ ಹಿಟ್ಲರ್ ಕಾಲದ ರಾಜಕಾರಣ ಮಾಡಬೇಡಿ, ಇಲ್ಲಿ ಯಾರು ಕೂಡಾ ನಿಮ್ಮ ದರ್ಪಕ್ಕೆ, ಧಮ್ಕಿಗೆ, ಟಾರ್ಗೆಟ್ ರಾಜಕಾರಣಕ್ಕೆ ಕೈ ಕಟ್ಟಿಕೊಂಡು ಕೂರಲ್ಲ ರಾಜಣ್ಣ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು ತುಮಕೂರಿನ ಮಧುಗಿರಿಯಲ್ಲಿ ಆಯೋಜಿಸಲಾಗಿದ್ದ ಮೂರನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಸಭೆಯನ್ನ ಉದ್ದೇಶಿಸಿ ಮಾತನಾಡಿದರು. ತಾಲ್ಲೂಕಿನಲ್ಲಿ ಟಾರ್ಗೆಟ್ ರಾಜಕಾರಣ ಮಾಡುತ್ತಿದ್ದಾರೆ. ಕೃಷಿ ಇಲಾಖೆಯಲ್ಲಿ ಡಿ ಗ್ರೂಪ್ ನೌಕರ ನರಸಿಂಹಮೂರ್ತಿ ಜೆಡಿಎಸ್ ಪಕ್ಷದ ಅಭಿಮಾನಿಯಾಗಿದ್ದು ತಪ್ಪಾ.? ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡ ಅನ್ನೋ ಕಾರಣಕ್ಕೆ ಅಮಾಯಕ ನನ್ನ ಟಾರ್ಗೆಟ್ ಮಾಡಿ ಬಲಿಪಶು ಮಾಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆ ಅಭಿಮಾನಿ ಪಕ್ಷದ ಮೇಲೆ ಅಭಿಮಾನ ಇಡುವುದು ತಪ್ಪಾ.? ಅಂತಹ ಮುಗ್ಧ ವ್ಯಕ್ತಿಯ ಮೇಲೆ ಟಾರ್ಗೆಟ್ ಮಾಡಿ ಕಿತ್ತು ಬಿಸಾಕಿದ್ದಾರೆ. ಇಲ್ಲಿರುವ ಶಾಸಕರು ಹಿರಿಯರಿದ್ದಾರೆ. ಅವರು ಹಿರಿಯ ತನಕ್ಕೆ…
ತುಮಕೂರು, ಕೊರಟಗೆರೆ : ರಾಜ್ಯದ ಜನ ಕಾಂಗ್ರೆಸ್ ಆಡಳಿತದಿಂದ ರೋಸಿಹೋಗಿದ್ದಾರೆ. ದೇವೇಗೌಡರ ಮಾರ್ಗದರ್ಶನದಲ್ಲಿ, ಕುಮಾರಣ್ಣನವರ ನಾಯಕತ್ವದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು ನಿಮ್ಮ ಜೊತೆ ನಾನಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಿಗೆ ಧೈರ್ಯ ತುಂಬಿದರು. ಜನರೊಂದಿಗೆ ಜನತಾದಳ ಬುಧವಾರ ಮೂರನೇ ದಿನದ ರಾಜ್ಯ ಪ್ರವಾಸ ಬೈಕ್ ರ್ಯಾಲಿ ಮೂಲಕ ಕೊರಟಗೆರೆ ಕ್ಷೇತ್ರದಲ್ಲಿ “ಜನರೊಂದಿಗೆ ಜನತಾದಳ” ಮಿಸ್ಡ್ ಕಾಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಸಭೆಯನ್ನ ಉದ್ದೇಶಿಸಿ ಮಾತನಾಡಿದರು. ಸುಧಾಕರ್ ಲಾಲ್ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರಲು ಪೂರಕವಾಗಿ ಕೆಲಸ ಮಾಡಿ ಮಾಡುತ್ತಿದ್ದೇವೆ. ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಇದು ಕಾರ್ಯಕರ್ತರ ಪಕ್ಷ ಜಿಲ್ಲಾ ಮಟ್ಟದಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಜತೆ ನಾನಿದ್ದೇನೆ ಎಂದು ಧೈರ್ಯ ತುಂಬಿದರು. ಪ್ರವಾಸ ಅವಧಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆ ಮತ್ತು ಪ್ರತಿ ತಾಲ್ಲೂಕಿನ ಪಕ್ಷದ ನಾಯಕರು, ಕಾರ್ಯಕರ್ತರು ಮತ್ತು ಸಾಮಾನ್ಯ ಜನರನ್ನ ಭೇಟಿ ಮಾಡಳಿದ್ದೇನೆ. ಪಕ್ಷದ ಬಗ್ಗೆ ಕಾರ್ಯಕರ್ತರು ಹೊಂದಿರುವ ಭಾವನೆಯನ್ನು ಅರ್ಥಮಾಡಿಕೊಳ್ಳಳಿದ್ದೇನೆ.…
ತುಮಕೂರು: ಇಕೊ–ಕ್ಲಬ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತುಮಕೂರು ಮತ್ತು ಡಬ್ಲೂ.ಎಫ್.ವಿ ಸಂಸ್ಥೆ ತುಮಕೂರು ಇವರ ಸಂಯುಕ್ತ ಆಶ್ರಯದೊಂದಿಗೆ ಪರಿಸರ ಕಾಳಜಿಯ ಭಾಗವಾಗಿ ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರ ಮತ್ತು ನೀರಿನ ತೊಟ್ಟಿಗಳನ್ನು ವಿತರಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಡಬ್ಲೂ.ಎಫ್.ವಿ (ವಾಟರ್ ಫಾರ್ ವಾಯಿಸ್ ಲೈಸ್ ಫೌಂಡೇಶನ್) ಸಂಸ್ಥಾಪಕರಾದ ಜೈನ್ ಸನ್ನಿ ಹಸ್ತಿಮಲ್ ರವರು ವಿವಿಧ ರೀತಿಯ ಮೂಕ ಪ್ರಾಣಿಗಳು ಮತ್ತು ಪಕ್ಷಿಗಳು ಕುಡಿಯುವ ನೀರಿನ ಅವಶ್ಯಕತೆ ಮತ್ತು ಅದನ್ನು ಒದಗಿಸುವ ನಮ್ಮ ಪಾತ್ರ ಕುರಿತು ವಿಡಿಯೋ ಸಂವಾದದ ಮೂಖಾಂತರ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಇದೇ ಕಾರ್ಯಕ್ರಮದಲ್ಲಿ ಡಬ್ಲೂ.ಎಫ್.ವಿ ಸಂಸ್ಥೆಯಿಂದ ಕುಡಿಯುವ ನೀರಿನ ತೊಟ್ಟಿಗಳನ್ನು ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಮತ್ತು ಕಾಲೇಜಿಗೆ ನೀಡಲಾಯಿತು. ಈ ನೀರಿನ ತೊಟ್ಟಿಗಳಿಗೆ ತೃತೀಯ ಬಿ.ಎಸ್.ಸಿ ವಿದ್ಯಾರ್ಥಿಗಳಿಂದ ಪರಿಸರ ಕಾಳಜಿ ಸೂಚಿಸುವ ಭಿತ್ತಿ ಚಿತ್ರಗಳನ್ನು ಬಿಡಿಸಿ ಈ ಕಾರ್ಯಕ್ರಮದ ಮಹತ್ವವನ್ನು ಸಾರಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಪ್ರೊ. ವಸಂತ ಟಿ.ಡಿ. ಅವರು ಮಾತನಾಡಿ “ಅವಶ್ಯಕತೆ ಇರುವ ಮೂಕ…
ಬೆಳಗಾವಿ: ಬಸ್ ಗಳಲ್ಲಿ ಪ್ರಯಾಣದ ವೇಳೆ ಕಿಟಕಿ ಸೀಟ್ ಬಳಿ ಕುಳಿತುಕೊಳ್ಳುವುದು ಎಲ್ಲರಿಗೂ ಇಷ್ಟವಾದ ವಿಚಾರ, ಇಲ್ಲೊಂದು ಕಡೆ ಕಿಟಕಿ ಪಕ್ಕ ಸೀಟಿಗಾಗಿ ಇಬ್ಬರ ನಡುವೆ ನಡೆದ ಜಗಳ, ಚಾಕುವಿನಿಂದ ಇರಿಯುವ ಮಟ್ಟಕ್ಕೆ ಬೆಳೆದಿದೆ. ಹೌದು… ಬೆಳಗಾವಿಯಲ್ಲಿ ಈ ಘಟನೆ ನಡೆದಿದ್ದು, ಕಿಟಕಿ ಪಕ್ಕದ ಸೀಟ್ ಗಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಹತ್ಯೆ ಯತ್ನದಲ್ಲಿ ಅಂತ್ಯಗೊಂಡಿದೆ. ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ ಗೆ ಬರುತ್ತಿದ್ದ ಬಸ್ ನಲ್ಲಿ ಯುವಕರ ನಡುವೆ ಕಿಟಕಿ ಪಕ್ಕದ ಸೀಟ್ ಗಾಗಿ ಜಗಳ ನಡೆದಿದೆ. ಯುವಕನೋರ್ವ ಮತ್ತೊಬ್ಬ ಯುವಕನಿಗೆ ಚಾಕು ಇರಿದಿದ್ದಾನೆ. ಗ್ರಾಮದ ಮಜ್ಜು ಸನದಿ(20) ಎಂಬ ಯುವಕನ ಎದೆ ಭಾಗಕ್ಕೆ ಯುವಕರ ಗ್ಯಾಂಗ್ ಒಂದು ಚಾಕು ಇರಿದು ಪರಾರಿ ಆಗಿದೆ. ಮಜ್ಜು ಸನದಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೀದರ್ : ಕಮಲನಗರ್ ತಾಲ್ಲೂಕಿನ ಹೊಳ ಸಮುದ್ರ ಗ್ರಾಮದ ಬೀಜ ವಿತರಣಾ ಕೇಂದ್ರಕ್ಕೆ ಸೋಮವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರಿಗೆ ಬಿತ್ತನೆ ಬೀಜಗಳು ಸಮರ್ಪಕವಾಗಿ ನೀಡಲಾಗುತ್ತಿದೆ ಅಥವಾ ಇಲ್ಲವೇ ಎಂದು ಪರಿಶೀಲನೆ ನಡೆಸಿದರು. ಸಂದರ್ಭದಲ್ಲಿ ಗ್ರಾಮದ ರೈತರೊಂದಿಗೆ ಚರ್ಚಿಸಿ ಮುಂಗಾರು ಕೃಷಿ ಚಟುವಟಿಕೆಗಳಿಗೆ ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ವಿತರಿಸಲಾಗುವುದು ಎಂದು ತಿಳಿಸಿ, ರೈತರು ಯಾವುದೇ ಆತಂಕ ಪಡಬೇಕಿಲ್ಲ ಎಂದು ಹೇಳಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ನ್ಯಾಯಾಲಯದ ಮುಂದೆ ಹೃದಯಾಘಾತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ, ಗುಬ್ಬಿ ಪಟ್ಟಣದ ನ್ಯಾಯಾಲಯದ ಮುಂದೆ ನಡೆದಿದೆ. ರಂಗನಾಥ್(35) ಮೃತ ದುರ್ದೈವಿಯಾಗಿದ್ದಾರೆ. ಇವರು ಗುಬ್ಬಿ ತಾಲೂಕು ಚೇಳೂರಿನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದರು. ನ್ಯಾಯಾಲದಲ್ಲಿ ಕೆಲಸ ನಿಮಿತ್ತ ಬೆಳಗ್ಗೆ ಬಂದಿದ್ದ ರಂಗನಾಥ್, ನ್ಯಾಯಾಲಯದ ಗೇಟ್ ನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಕೊರತೆ ಆಗಿದೆ ಅಂತಾ ನಾವು ಸ್ಪಷ್ಟವಾಗಿ ಹೇಳ್ತೇವೆ ಎಂದು ಜೆಡಿಎಸ್ ಸಿಎಲ್ ಪಿ ನಾಯಕ ಸಿ.ಬಿ. ಸುರೇಶ್ ಬಾಬು ತಿಳಿಸಿದ್ದಾರೆ. ಯಾವತ್ತು ದೇವೆಗೌಡ್ರು ಬಿಜೆಪಿ ಜೊತೆ ಮುಖ ಮಾಡಿರಲಿಲ್ಲ. ಇದಕ್ಕೆ ಈಗಾಗಲೇ ಮೊನ್ನೆ ಕುಮಾರಣ್ಣ ಬೆಂಗಳೂರಿನಲ್ಲಿ ಉತ್ತರ ಕೊಟ್ರು. ಕೇಂದ್ರದಲ್ಲಿ ಯಾವ ರೀತಿ ಹೊಂದಾಣಿಕೆ ಇದೆ. ನಮ್ಮ ಪಕ್ಷವನ್ನ ಎಷ್ಟು ಗೌರವಯುತವಾಗಿ ನಡೆಸಿಕೊಳ್ತಿದ್ದಾರೆ. ಇಲ್ಲೂ ಕೂಡ ಅಷ್ಟೇ, ಒಂದು ಏನಾಗಿದೆ, ನಾವು ಈಗಾಗಲೇ ಹಲವಾರು ಬಾರಿ ಹೇಳಿದ್ದೇವೆ. ರಾಜ್ಯದಲ್ಲಿ ಹೊಂದಾಣಿಕೆ ಕೊರತೆ ಆಗಿದೆ ಅಂತಾ, ನಾವು ಕೂಡ ಸ್ಪಷ್ಟವಾಗಿ ಹೇಳ್ತೇವೆ. ಯಾಕಂದ್ರೆ ಇಲ್ಲಿ ಸಮನ್ವಯ ಸಮಿತಿಗಳಾಗಲಿಲ್ಲ ಎಂದರು. ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟಗಳಲ್ಲಿ ಸಮನ್ವಯ ಸಮಿತಿಗಳಾಗಲಿಲ್ಲ. ಅದೆಲ್ಲಾ ಆದ್ರೆ ಜನರಿಗೆ ಗೊಂದಲ ಇರಲ್ಲಾ ಅನ್ನೋ ದೃಷ್ಟಿಯಿಂದ ಇದನ್ನ ನಾವು ಆವಾಗಿನಿಂದ ಬಯಸುತ್ತಿದ್ದೇವೆ. ಖಂಡಿತಾ ಅದು ಮುಂದಿನ ದಿನಗಳಲ್ಲಿ ರಾಷ್ಟ್ರೀಯ ನಾಯಕರೆಲ್ಲಾ ಕೂತ್ಕೊಂಡು ಸರಿಪಡಿಸಿ ಎಂದರು. ಈಗ ಒಂದಾಗಿ ಎರಡು ಪಕ್ಷಗಳು ಒಟ್ಟಾಗಿ…
ಕೊರಟಗೆರೆ: ನಗರದ ಮುಖ್ಯರಸ್ತೆಯಲ್ಲಿ ಆಟೋ ವ್ಹೀಲಿಂಗ್ ಮಾಡುತ್ತಾ ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿದ್ದ ಆಟೋ ಚಾಲಕನನ್ನು ಕೊರಟಗೆರೆ ಪೊಲೀಸರು ಬಂಧಿಸಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂತೋಷ್ ಬಂಧಿತ ಆಟೋ ಚಾಲಕ ಎಂದು ಗುರುತಿಸಲಾಗಿದೆ. ಆಟೋ ಚಾಲಕ ಶನಿವಾರ ರಾತ್ರಿ ಮುಖ್ಯರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸುತ್ತಿದ್ದ ದೃಶ್ಯವನ್ನು ಚಿತ್ರೀಕರಿಸಿದ್ದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪಿಎಸ್ ಐ ವೈ.ಜಿ.ತೀರ್ಥೇಶ್ ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯ ಸಹಿತ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ. ವ್ಹೀಲಿಂಗ್ ಮಾಡುವುದು, ಕರ್ಕಶ ಧ್ವನಿ ಮಾಡಿಕೊಂಡು ಓಡಾಡುವುದು ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವುದು ಕಂಡುಬಂದಲ್ಲಿ ಕ್ರಮವಹಿಸುವುದರೊಂದಿಗೆ ವಾಹನವನ್ನು ಜಪ್ತಿ ಮಾಡಿಕೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಬಗ್ಗೆ ಮಹಿಳೆಯೊಬ್ಬರು ನೀಡಿದ ದೂರಿನನ್ವಯ ವಿವಾಹಿತ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿಯ ಬೆಳತ್ತೂರು ನಿವಾಸಿ, ಆರೋಪಿ ಶ್ರೀನಿವಾಸ್ ಬಂಧಿತ ಆರೋಪಿಯಾಗಿದ್ದಾನೆ. ಸಂತ್ರಸ್ತ ಮಹಿಳೆ ಕೌಟುಂಬಿಕ ಹಿಂಸಾಚಾರದ ಹಿನ್ನೆಲೆಯಲ್ಲಿ ಪತಿಯಿಂದ ಬೇರ್ಪಟ್ಟಿದ್ದು, ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದರು. ನಂತರ, ಆಕೆ ಆರೋಪಿಯನ್ನು ಭೇಟಿಯಾಗಿದ್ದು, ತಾನು ಕೆಲಸ ಪಡೆಯಲು ಸಹಾಯ ಮಾಡಿದ್ದ. ಹೀಗಾಗಿ ಆತನೊಂದಿಗೆ ಆತ್ಮೀಯವಾಗಿದ್ದಳು. ವಿವಾಹಿತನಾಗಿರುವ ಆರೋಪಿ, ತನ್ನ ಪತಿಗೆ ವಿಚ್ಛೇದನ ನೀಡುವಂತೆ ಮಹಿಳೆಯ ಮನವೊಲಿಸಿ, ಕಾಡುಗೋಡಿಯ ಕಾಶಿ ವಿಶ್ವನಾಥ ದೇವಸ್ಥಾನದ ಬಳಿಯ ಬಾಡಿಗೆ ಮನೆಯಲ್ಲಿ ಕಳೆದ ಆರು ವರ್ಷಗಳಿಂದ ಲಿವ್–ಇನ್ ಪಾರ್ಟ್ನರ್ ಆಗಿ ಸಂತ್ರಸ್ತೆಯ ಜೊತೆ ವಾಸಿಸಲು ಪ್ರಾರಂಭಿಸಿದನು. ನಂತರ ಆಕೆಯ ಗಮನಕ್ಕೆ ಬಾರದೆ ಅವರ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಳಿಕ ಬ್ಲ್ಯಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ನಂತರ, ಆಕೆ 2023 ರಲ್ಲಿ ಆತನಿಂದ ತಪ್ಪಿಸಿಕೊಂಡು ಕೋಲಾರ ಜಿಲ್ಲೆಯ ಆಕೆಯ ಪೋಷಕರ ಮನೆಗೆ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದ ಮುಂಭಾಗದ ರಸ್ತೆಯಲ್ಲಿ ಬೃಹತ್ ಮರವೊಂದು ಧರೆಗುರುಳಿದ್ದು, ಪರಿಣಾಮ ಸ್ಥಳದಲ್ಲಿದ್ದ ವಾಹನಗಳಿಗೆ ಹಾನಿಯಾಗಿದೆ ಎಂದು ಬುಧವಾರ ತಿಳಿದುಬಂದಿದೆ. ಗಾಳಿ ಹಾಗೂ ಮಳೆ ಇಲ್ಲದಿದ್ದರೂ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸದ ಬಳಿಯೇ ಮರ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ರಸ್ತೆಯಲ್ಲಿ ಹೋಗುತ್ತಿದ್ದ ಟಿಟಿ ಹಾಗೂ ಇನ್ನೋವಾ ಮೇಲೆ ಮರದ ಕೊಂಬೆಗಳು ಬಿದ್ದಿದ್ದು, ಪರಿಣಾಮ ವಾಹನಗಳಿಗೆ ಹಾನಿಯಾಗಿದೆ ಎಂದು ವರದಿಗಳಿಂದ ತಿಳಿದಬಂದಿದೆ. ಘಟನೆ ಹಿನ್ನೆಲೆಯಲ್ಲಿ ಶಿವಾನಂದ ಸರ್ಕಲ್ ಬಳಿ ಪೊಲೀಸರು ರಸ್ತೆ ಬಂದ್ ಮಾಡಿದ್ದು, ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW