Subscribe to Updates
Get the latest creative news from FooBar about art, design and business.
- ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
- ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
- ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
- ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
- ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
Author: admin
ಬೆಂಗಳೂರು: ಬಾಯಲ್ಲಿ ಕನ್ನಡ…ಆದ್ರೆ ರಾಜ್ಯ ಸರ್ಕಾರ ರಾಜ್ಯದ ಉತ್ಪನ್ನವನ್ನೇ ಕಡೆಗಣಿಸಿದೆ ಎನ್ನುವ ಆಕ್ರೋಶ ಇದೀಗ ಕೇಳಿ ಬಂದಿದೆ. ಬೆಂಗಳೂರಿನ ಮೆಟ್ರೋದಲ್ಲಿ ರಾಜ್ಯದ ನಂದಿನಿ ಹಾಲು ಉತ್ಪನ್ನಗಳ ಮಳಿಗೆಗಳ ಬದಲು, ಅಮುಲ್ ಉತ್ಪನ್ನಗಳಿಗೆ ಮಣೆ ಹಾಕಲಾಗಿದೆ. ಬೆಂಗಳೂರಿನ ಮೆಟ್ರೋದಲ್ಲಿ ಅಮೂಲ್ ಉತ್ಪನ್ನಗಳ ಮಳಿಗೆ ಪ್ರಾರಂಭಿಸುವುದಕ್ಕೆ ಬಿಎಂಆರ್ಸಿಎಲ್ ಅವಕಾಶ ಮಾಡಿಕೊಟ್ಟಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್ಸಿಎಲ್) ಇತ್ತೀಚೆಗೆ ಗುಜರಾತ್ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಲಿಮಿಟೆಡ್ ಅಥವಾ ಅಮುಲ್ ಜೊತೆ ನಿಲ್ದಾಣಗಳಲ್ಲಿ ಕಿಯೋಸ್ಕ್ಗಳನ್ನು ಸ್ಥಾಪಿಸಲು ಪರವಾನಗಿ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಪಟ್ಟಂದೂರು ಅಗ್ರಹಾರ, ಇಂದಿರಾನಗರ, ಬೆನ್ನಿಗಾನಹಳ್ಳಿ, ಬೈಯಪ್ಪನಹಳ್ಳಿ, ಟ್ರಿನಿಟಿ, ಸರ್ ಎಂ ವಿಶ್ವೇಶ್ವರಯ್ಯ, ನಾಡಪ್ರಭು ಕೆಂಪೇಗೌಡ (ಮೆಜೆಸ್ಟಿಕ್), ನ್ಯಾಷನಲ್ ಕಾಲೇಜು, ಜಯನಗರ ಮತ್ತು ಬನಶಂಕರಿ ನಿಲ್ದಾಣಗಳಲ್ಲಿ ಕಿಯೋಸ್ಕ್ಗಳನ್ನು ಸ್ಥಾಪಿಸಲು ಅಮುಲ್ ಜೊತೆ ಒಪ್ಪಂದ ಮಾಡಿಕೊಂಡಿರುವುದಾಗಿ ಬಿಎಂಆರ್ ಸಿಎಲ್ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಚಿತ್ತೂರು: ಸಾಲ ಮರುಪಾವತಿ ಮಾಡಲಿಲ್ಲವೆಂದು ಮಹಿಳೆಯನ್ನು ಮರಕ್ಕೆ ಕಟ್ಟಿ ಮನಬಂದಂತೆ ಥಳಿಸಿದ ಘಟನೆಯೊಂದು ಆಂಧ್ರಪ್ರದೇಶದ ಚಿತ್ತೂರಿನ ಕುಪ್ಪಂ ಮಂಡಲದ ನಾರಾಯಣಪುರಂ ಗ್ರಾಮದಲ್ಲಿ ನಡೆದಿದೆ. ಮುನಿಕಣ್ಣಪ್ಪ ಎಂಬ ವ್ಯಕ್ತಿ ಸಿರಿಷಾ ಎಂಬ ಮಹಿಳೆಯನ್ನು ಮರಕ್ಕೆ ಕಟ್ಟಿ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಸಿರಿಷಾ ಅವರ ಪತಿ ತಿಮ್ಮರಾಯಪ್ಪ ಮೂರು ವರ್ಷಗಳ ಹಿಂದೆ ಮುನಿಕಣ್ಣಪ್ಪ ಅವರಿಂದ 80,000 ರೂ. ಸಾಲ ಪಡೆದಿದ್ದರು. ಸಾಲ ಮರುಪಾವತಿಸಲು ವಿಫಲವಾದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಕ್ಕಳನ್ನು ಬಿಟ್ಟು ತಿಮ್ಮರಾಯಪ್ಪ ಊರು ಬಿಟ್ಟಿದ್ದ. ಇನ್ನು ಮಹಿಳೆ ದಿನಗೂಲಿ ಕಾರ್ಮಿಕಳಾಗಿ ಕೆಲಸ ಮಾಡಿ, ಮಕ್ಕಳನ್ನು ಪೋಷಿಸುತ್ತಿದ್ದು, ಸಾಲ ಮರುಪಾವತಿ ಮಾಡಲು ವಿಳಂಬ ಮಾಡಿದ್ದಾರೆ. ಈ ನಡುವೆ ಸೋಮವಾರ ಮಧ್ಯಾಹ್ನ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಮುನಿಕಣ್ಣಪ್ಪ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹತ್ಯೆ ಮಾಡುವ ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಬಲವಂತವಾಗಿ ಎಳೆದುಕೊಂಡು ಹೋಗಿ ಬೇವಿನ ಮರಕ್ಕೆ ಕಟ್ಟಿ ಹಾಕಿ, ದೈಹಿಕವಾಗಿ ಹಲ್ಲೆ ನಡೆಸಿದ್ದಾನೆಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಮಂಗಳೂರು: ಅರ್ಧ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಹತ್ತು ತಿಂಗಳ ಮಗುವೊಂದು ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರ್ ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್ ಮೃತ ಪಟ್ಟಿದೆ. ಶನಿವಾರ ಮಧ್ಯಾಹ್ನ ಸುಮಾರು 1:30ಕ್ಕೆ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು. ಮಧ್ಯಾಹ್ನ 3:30ಕ್ಕೆ ಮಗುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಭಾನುವಾರ ಬೆಳಗ್ಗೆ 10:25ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ. ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ತುಮಕೂರು: ಈಗಾಗಲೇ ರಾಜ್ಯಾದ್ಯಂತ ಸದಸ್ಯತ್ವ ನೋಂದಣಿ ನಡೆಯುತ್ತಿದೆ. ಮಿಸ್ಡ್ ಕಾಲ್ ಅಭಿಯಾನ ಒಂದೂವರೆ ಲಕ್ಷ ಆಗೋಗಿದೆ. ಯುವಕರು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ನಿರಂತರವಾಗಿ 57 ದಿನಗಳ ಕಾಲ ನಡೆಯುತ್ತಿದೆ ಎಂದು ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಬುಕ್ಕಾಪಟ್ಟಣದಲ್ಲಿ ಮಾತನಾಡಿದ ಅವರು, ಜನರೊಂದಿಗೆ ಜನತಾದಳ ಎರಡನೇ ದಿನ ನಡೆಯುತ್ತಿದೆ. ಬುಕ್ಕಾಪಟ್ಟಣದಲ್ಲಿ ಜೆಡಿಎಸ್ ಫೇವರ್ ಆಗಿದೆ ಎಂದರು. ರಾಜ್ಯ ಸರ್ಕಾರದ ಗ್ಯಾರೆಂಟಿ ಬಗ್ಗೆ ಮಾತನಾಡಿ, ಕಳೆದ ಚುನಾವಣೆಯಲ್ಲಿ ಪ್ರತಿ ತಿಂಗಳು ಗ್ಯಾರಂಟಿ ಯೋಜನೆ ಕೊಡ್ತೀನಿ ಅಂತಾ ಹೇಳಿದ್ರು. ಅಂತಿಮವಾಗಿ ಗ್ಯಾರಂಟಿ ಯೋಜನೆ ಯಾವ ಸಂದರ್ಭಗಳಲ್ಲಿ ಬರ್ತಿವೆ. ಯಾವುದಾದರೂ ಉಪಚುನಾವಣೆ, ಎಂ.ಪಿ ಚುನಾವಣೆ ಬಂದಾಗ ಈ ಗ್ಯಾರಂಟಿ ಯೋಜನೆ ಕೊಡ್ತಿದ್ದಾರೆ. ಕೆಲವೊಂದಷ್ಟು ಕೊಡ್ತಿದ್ದಾರೆ. ಇನ್ನು ಕೆಲವೊಂದಷ್ಟು ಗ್ಯಾರಂಟಿಯನ್ನ ಕೊಡುತ್ತಿಲ್ಲ. ಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳು ಜನರಿಗೆ ಹೋಗ್ತಿಲ್ಲ ಅನ್ನೋದು ರಾಜ್ಯದ ಜನತೆಯ ಅಭಿಪ್ರಾಯ ಎಂದರು. ಗ್ಯಾರಂಟಿ ಕೊಡೋದು ತಪ್ಪು ಅಂತಾ ಹೇಳ್ತಿಲ್ಲ. ನೀವು ಎಲ್ಲೋ ಒಂದು ಕಡೆ ಗ್ಯಾರಂಟಿ ಕೊಡ್ತಾ ಕೊಡ್ತಾ ಅಭಿವೃದ್ಧಿಯನ್ನ ಮರೆಯುತ್ತಿದ್ದೀರಿ. ಗ್ಯಾರಂಟಿ…
ತುಮಕೂರು: ಸುರೇಶ್ ಬಾಬು ಅವರನ್ನ ಮಂತ್ರಿಯಾಗಿ ನೋಡಬೇಕು ಎಂಬಾ ಆಸೆಯನ್ನು ಈ ಭಾಗದ ಜನರು ಇಟ್ಟುಕೊಂಡಿದ್ದಾರೆ ಅದು ನೆರವೇರಲಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು. ಚಿಕ್ಕನಾಯಕನಹಳ್ಳಿ ಬುಕ್ಕಾಪಟ್ಟಣದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, 10 ಸಾವಿರ ಜೆಡಿಎಸ್ ಸದಸ್ಯತ್ವ ನೋಂದಣಿಯನ್ನು ಉಡುಗೊರೆಯಾಗಿ ಕೊಟ್ಟಿದ್ದಿರಾ. ಸುರೇಶ್ ಬಾಬು ಅವರು ನಿಮ್ಮ ಮನೆ ಬಾಗಿಲಿಗೆ ನಿಮ್ಮ ಮನೆ ಮಗ ಕಾರ್ಯಕ್ರಮ ಮಾಡುತ್ತಿದ್ದಾರೆ. ಸುರೇಶ್ ಬಾಬು ಅವರನ್ನ ಮಂತ್ರಿಯಾಗಿ ನೋಡಬೇಕು ಎಂಬಾ ಆಸೆಯನ್ನು ಈ ಭಾಗದ ಜನರು ಇಟ್ಟುಕೊಂಡಿದ್ದಾರೆ ಅದು ನೆರವೇರಲಿದೆ ಎಂದರು. ಸುರೇಶ್ ಬಾಬು ಅವರಿಗೆ ರಾಜಕಾರಣ ಹೊರತು ಪಡಿಸಿ ಬೇರೆ ಕಸುಬಿಲ್ಲ. ಕ್ಷೇತ್ರದ ಜನತೆಯ ಋಣ ತೀರಿಸುವ ಹೋರಾಟ ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ ಎಂದರು. ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ನಮ್ಮ ಪಕ್ಷವನ್ನು ಹಲವು ದಶಕಗಳಿಂದ ಕಟ್ಟಿ ಬೆಳೆಸಿದ ದೇವೇಗೌಡರ ಕಾಲಘಟ್ಟದ ಸಾಕಷ್ಟು ನಾಯಕರಿದ್ದೀರಾ. ನಿಮ್ಮ ಸಂಪರ್ಕ ಬಯಸಿ ಪ್ರವಾಸ ಕೈಗೊಂಡಿದ್ದೇನೆ. ತುಮಕೂರು ಜಿಲ್ಲೆ ದೇವೇಗೌಡರ ಹೋರಾಟಕ್ಕೆ ಜೊತೆಯಾಗಿ ನಿಂತು ಬೆಂಬಲ ನೀಡಿದ್ದೀರಾ. ಜನತಾದಳ…
ತುಮಕೂರು: ಕಳೆದ ನಾಲ್ಕು ತಿಂಗಳ ಅಪರಾಧ ಪ್ರಕರಣಗಳ ಯಶಸ್ವಿ ಕಾರ್ಯಚರಣೆ ವಿಚಾರವಾಗಿ ತುಮಕೂರು ಎಸ್ಪಿ ಅಶೋಕ್ ವಿ.ಕೆ. ಸುದ್ದಿಗೋಷ್ಟಿ ನಡೆಸಿದರು. ತುಮಕೂರಿನ ಎಸ್ಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತುಮಕೂರಿನ ಐದು ವಿಭಾಗಗಳಲ್ಲಿ ಕೊಲೆ, ಮನೆಗಳ್ಳತನ, ಸರಗಳ್ಳತನ, ರಾಬರಿ, ಡಕಾಯಿತಿ ಸೇರಿದಂತೆ 130 ಪ್ರಕರಣಗಳು ದಾಖಲಾಗಿತ್ತು. 130 ಪ್ರಕರಣಗಳ ಸಂಬಂಧ ಯಶಸ್ವಿ ಕಾರ್ಯಾಚರಣೆಯಲ್ಲಿ 170 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಹಲವು ಪ್ರಕರಣಗಳಲ್ಲಿ ಕೋಟಿ ಕೋಟಿ ಮೌಲ್ಯದ ವಸ್ತುಗಳ ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು. 4 ಕೋಟಿ ಮೌಲ್ಯದ 4.31 ಕೆಜಿ ಚಿನ್ನ, 7.20 ಲಕ್ಷ ರೂಪಾಯಿ ಮೌಲ್ಯದ 7ಕೆಜಿ 207 ಗ್ರಾಂ ಬೆಳ್ಳಿ, 1.11 ಕೋಟಿ ಮೌಲ್ಯದ 99 ಬೈಕ್, 4 ಕಾರ್, ಒಂದು ಆಟೋ ಮತ್ತು 3 ಲಕ್ಷ ಮೌಲ್ಯದ ಜಾನುವಾರು ಹಾಗೂ 36.73 ಲಕ್ಷ ಮೌಲ್ಯದ ವಸ್ತುಗಳು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದರು. ತುಮಕೂರಿನ ವಿವಿಧ ಪ್ರಕರಣಗಳ ಒಟ್ಟಾರೆ ವಶಕ್ಕೆ ಪಡೆದ ವಸ್ತುಗಳ ಮೌಲ್ಯ…
ಬೀದರ್ : ಕಳ್ಳತನವಾದ ಮೊಬೈಲ್ ಫೋನ್ಗಳ ಬಗ್ಗೆ CEIR ಪೋರ್ಟಲ್ನಲ್ಲಿ ದೂರು ದಾಖಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರು ತಮ್ಮ ಮೊಬೈಲ್ ಪೋನ್ಗಳು ಕಳ್ಳತನವಾದಲ್ಲಿ ಕೆಎಸ್ ಪಿ ವೆಬ್ ಸೈಟ್ ನಲ್ಲಿ ಕಳ್ಳತನವಾದ ಮೊಬೈಲ್ ಪೋನ್ ಬಗ್ಗೆ ವಿವರವನ್ನು ದಾಖಲಿಸಬೇಕು. ನಂತರ ಕಳೆದುಹೋದ ವಸ್ತು, ದಾಖಲೆಯ ವರದಿ ಕ್ರಮ ಸಂಖ್ಯೆ ಬರುತ್ತದೆ. ಆ ಬಳಿಕ CEIR ಪೋರ್ಟಲ್ ನಲ್ಲಿ ತಮ್ಮ ಕಳೆದು ಹೋದ ಮೊಬೈಲ್ ಪೋನ್ ವಿವರ ದಾಖಲಿಸಬೇಕು. ಆ ದೂರಿನ ಪ್ರತಿಯನ್ನು ತಮ್ಮ ಸಮೀಪದ ಪೊಲೀಸ್ ಠಾಣೆಗೆ ನೀಡಬೇಕು ಎಂದು ಮಾಹಿತಿ ನೀಡಿದ್ದಾರೆ. ದೂರಿನ ಪ್ರತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸಲ್ಲಿಸಿದ ನಂತರ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸಲಾಗುವುದು ಎಂದು ಪ್ರದೀಪ್ ಗುಂಟಿ ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೀದರ್: ಆಂಗ್ಲ ಮಾಧ್ಯಮ ಶಾಲೆಗಳನ್ನು ಮುಚ್ಚಿಸಿ ಕನ್ನಡ ಶಾಲೆಗಳನ್ನು ಉಳಿಸಿ ಎಂದು ಕನ್ನಡ ಸಂರಕ್ಷಣಾ ಸಮಿತಿ ಬೀದರ್ ಜಿಲ್ಲಾ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘ( ರಿ) ಬೀದರ್ ಮತ್ತು ಕನ್ನಡ ಸಾಹಿತ್ಯ ಪರಿಷತ್ ಬೀದರ್ ಮತ್ತು ಕನ್ನಡ ಪರ ಸಂಘಟನೆಗಳು ಒತ್ತಾಯ ನಡೆಸಿದವು. ಕನ್ನಡ ಶಾಲೆ ಉಳಿವಿಗಾಗಿ ಮತ್ತು ಕನ್ನಡ ಶಾಲೆಗಳ ಅನುದಾನ ಒಳಪಡಿಸುವ ಸಲುವಾಗಿ ಮತ್ತು ಸರ್ಕಾರದಿಂದ ತೆರೆದ ಆಂಗ್ಲ ಮಾಧ್ಯಮ ಶಾಲೆಗಳನ್ನು ತಕ್ಷಣ ಮುಚ್ಚಬೇಕು ಇಲ್ಲವಾದರೆ ಇಲ್ಲವಾದರೆ ಹೋರಾಟ ನಡೆಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಈ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಗಳ ರಾಜ್ಯಾಧ್ಯಕ್ಷರನ್ನು ನಾರಾಯಣ ಗೌಡ, ಪ್ರವೀಣ ಶೆಟ್ಟಿ, ವಾಟಾಳ್ ನಾಗರಾಜ್ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯ ಅಧ್ಯಕ್ಷರು, ಮಹೇಶ್ ಜೋಶಿ, ನಮ್ಮ ಕರ್ನಾಟಕ ಸೇನೆ ರಾಜ್ಯ ಅಧ್ಯಕ್ಷರು ಬಸವರಾಜ ಪಡುಕೋಟೆ ಅವರನ್ನು ಭೇಟಿ ಮಾಡಲಾಯಿತು. ಬೆಂಗಳೂರಿಗೆ ತೆರಳಿದ್ದ ಬೀದರ್ ಜಿಲ್ಲೆಯ ನಿಯೋಗದಲ್ಲಿ ಜಿಲ್ಲಾ ಗೌರವಾಧ್ಯಕ್ಷರು ರೇವಣ…
ಬೀದರ್: ಬೀದರ್ ಜಿಲ್ಲೆಯ ಔರಾದ ತಾಲೂಕಿನ ದುಡುಕನಾಳ್ ಸಮೀಪ ಪಂಚಾಯತ್ ರಾಜ್ ಇಲಾಖೆ ವತಿಯಿಂದ 2 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಬೇಕಾಗಿದ್ದ ರಸ್ತೆ ಸುಧಾರಣೆ ಕಾಮಗಾರಿ ಟೆಂಡರ್ ಇಲ್ಲದೇ ಆರಂಭಿಸಿದ ಹಿನ್ನೆಲೆ, ಈಗಾಗಲೇ ಜೆ.ಇ.ಶಿವಕುಮಾರ್ ಪುರಾಣಿಕ್ ಅವರನ್ನು ಅಮಾನತ್ ಮಾಡಲಾಗಿದ್ದು, ಪಂಚಾಯತ್ ರಾಜ್ ಇಲಾಖೆ ಇ.ಇ.ಶಿವಾಜಿ ಡೋಣೆ ಹಾಗೂ ಎಇಇ ವೆಂಕಟರಾವ್ ಶಿಂಧೆ ವಿರುದ್ದವೂ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ. ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ್ ದಿಲೀಪ್ ಬದೋಲೆ ಅವರು ಜೆಇ ಶಿವಕುಮಾರ್ ಪುರಾಣಿಕ್ ರನ್ನು ಅಮಾನತ್ ಗೊಳಿಸಿ ಇಇ ಡೋಣೆ ಹಾಗೂ ಶಿಂಧೆ ವಿರುದ್ದವೂ ಶಿಸ್ತು ಕ್ರಮ ಜರುಗಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪಾತ್ರ ಬರೆದಿದ್ದಾರೆ. ಟೆಂಡರ್ ಇಲ್ಲದೇ ದುಡುಕನಾಳ್ ಸಮೀಪ 2 ಕೋಟಿ ರೂ. ಕಾಮಗಾರಿ ಆರಂಭಿಸಿರುವ ಬಗ್ಗೆ ಸ್ಥಳೀಯ ಪತ್ರಿಕಾ ವರದಿಗಳನ್ವಯ ಜಿಲ್ಲಾ ಪಂಚಾಯತ್ ಸಿಇಒ ಗಿರೀಶ್ ಬದೋಲೆ ಅವರು ಜಿ.ಪಂ. ಯೋಜನಾಧಿಕಾರಿ ಹಾಗೂ ಕೆಆರ್ ಡಿಎಲ್…
ತುಮಕೂರು : ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ತುಮಕೂರು ಪ್ರವಾಸ ಆರಂಭಿಸಿದ ನಿಖಿಲ್ ಕುಮಾರಸ್ವಾಮಿ ಅವರು ಗುಬ್ಬಿ ಮತ್ತು ಕುಣಿಗಲ್ ಕ್ಷೇತ್ರದಲ್ಲಿ ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸ ಹಾಗೂ ಮಿಸ್ ಕಾಲ್ ಸದಸ್ಯತ್ವ ಅಭಿಯಾನಕ್ಕೆ ಅವರು ಚಾಲನೆ ನೀಡಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು; ಇವತ್ತಿಂದ ರಾಜ್ಯ ಪ್ರವಾಸ ಮಾಡುತ್ತಿರುವುದು ನನ್ನ ಸೌಭಾಗ್ಯ ಇದು. ನಾನು ಇಡೀ ರಾಜ್ಯ ಪ್ರವಾಸ ಮಾಡುತ್ತಿರುವುದು ನಿಮ್ಮ ಜತೆಗೆ ಸಂಬಂಧ ಬೇಕು, ಸಂಪರ್ಕ ಬೇಕು, ಭಾಂದವ್ಯ ಬೇಕು ನಮ್ಮ ನಿಮ್ಮ ನಂಟು ಬೆಳಿಯಬೇಕು ಎಂದು ಕಾರ್ಯಕರ್ತರಿಗೆ ಅವರು ಮನವಿ ಮಾಡಿದರು. ಈ ಪಕ್ಷದಲ್ಲಿ ದುಡಿದಿರುವ ಎಲ್ಲಾ ಹಿರಿಯರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಪ್ರಾಮಾಣಿಕ ಕೆಲಸ ಮಾಡ್ತೀನಿ. ಯುವಕರು ಇಂದು ದೊಡ್ಡ ಮಟ್ಟದಲ್ಲಿ ನನ್ನ ಜತೆ ಹೆಜ್ಜೆ ಹಾಕಲು ಮುಂದೆ ಬಂದಿದ್ದಾರೆ. ನಾವೆಲ್ಲರೂ ಮೊದಲು ಪಕ್ಷದಲ್ಲಿನ ಹಿರಿಯರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗೋಣ ಎಂದು ಯುವಕರಿಗೆ ಮನವಿ ಮಾಡಿದರು.…