Subscribe to Updates
Get the latest creative news from FooBar about art, design and business.
- ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
- ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
- ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
- ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
- ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
Author: admin
ತಿಪಟೂರು: ತಾಲೂಕಿನಲ್ಲಿ ದಿನ ಕಳೆದಂತೆ ಒಂದೊಂದೇ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು ಅದಕ್ಕೆ ತಾಜಾ ಉದಾಹರಣೆ ಎಂಬಂತೆ ತಿಪಟೂರು ತಾಲೂಕು ವನವಳ್ಳಿ ಹೋಬಳಿ ಹನುಮಂತಪುರ ಗ್ರಾಮದ ಸರ್ವೆ ನಂಬರ್ 23/7ರಲ್ಲಿ ಸುಮಾರು 3 ಎಕರೆ ಜಮೀನನ್ನು ಈ ಹಿಂದೆ ಸರ್ಕಾರವು 1979ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಈರಮ್ಮ ಕೋಂ ವೆಂಕಟರಾಮಯ್ಯ ಎಂಬವರ ಹೆಸರಿಗೆ ಮಂಜೂರು ಮಾಡಿದ್ದು, ಸದರಿ ಜಮೀನು ಇದೀಗ ಮೂಲ ಖಾತೆದಾರರ ಹೆಸರಿನಲ್ಲಿ ಇರುವಾಗಲೇ ಆ ಜಮೀನಿನಲ್ಲಿ ಸವರ್ಣೀಯರು ಜಮೀನನ್ನು ಕಬಳಿಕೆ ಮಾಡಿಕೊಂಡು ಇದೇ ಜಾಗದಲ್ಲೇ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಹಾಗೂ ತಮ್ಮದೇ ಆದಂತಹ ಸ್ವಂತ ಮನೆಯನ್ನು ಕಟ್ಟಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಹಿಂದೆ ಹಲವಾರು ಬಾರಿ ಜಮೀನಿನ ಮಾಲೀಕರ ಮಕ್ಕಳು ತಮ್ಮ ಜಮೀನನ್ನು ಬಿಟ್ಟು ಕೊಡುವಂತೆ ಅನೇಕ ಬಾರಿ ಮನವಿ ಮಾಡಿದರು ಯಾವುದೇ ಜಮೀನನ್ನು ಹಿಂತಿರುಗಿಸದೆ ದಲಿತರ ಮೇಲಿನ ದೌರ್ಜನ್ಯವನ್ನು ಮುಂದುವರಿಸಿದ್ದಾರೆ. ಸಿದ್ದಪ್ಪ ಎಂಬುವರು ಈಗಾಗಲೇ ಜಮೀನು ನಮ್ಮದೇ ಎಂದು ಈಗಾಗಲೇ ಅನೇಕ ಬಾರಿ ಕೋರ್ಟಿಗೆ ಹೋಗಿದ್ದರು,…
ಕೊರಟಗೆರೆ: ತಾಲೂಕಿನ ದೇವರಹಳ್ಳಿ ಬಳಿ ಇರುವ ಮುಕುಂದರಾಯನ ಬೆಟ್ಟದಲ್ಲಿ ಕನ್ನಿಕಾ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿಗಳು ಪರಿಸರ ದಿನಾಚರಣೆ ಅಂಗವಾಗಿ ಬೀಜದ ಉಂಡೆಗಳನ್ನು ಎಸೆದು ವಿಶಿಷ್ಟ ರೀತಿಯಲ್ಲಿ ಪರಿಸರ ಸಂರಕ್ಷಣೆಯ ಸಂದೇಶವನ್ನು ಹರಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ಎಂ.ಜಿ.ಸುಧೀರ್ ಮಾತನಾಡಿ, ಪರಿಸರ ಸಂರಕ್ಷಣೆಯ, ನಾವು ಪರಿಸರವನ್ನು ಪ್ರೀತಿಸುವಂತಹ ಪರಿಸರದೊಂದಿಗೆ ಬದುಕುವಂತಹ ಕಲೆಯನ್ನು ಕಲಿತುಕೊಳ್ಳಬೇಕು ಎಂದು ಮಕ್ಕಳಿಗೆ ತಿಳಿಸಿದರು. ಶಾಲೆಯ ಜೊತೆ ಪರಿಸರ ದಿನಾಚರಣೆ ಆಚರಣೆಯಲ್ಲಿ ಮಕ್ಕಳಿಗೆ ಸೀಟ್ ಬಾಲ್ ತಯಾರಿಸಿ ಪರಿಸರದ ಅರಿವಿನ ಬಗ್ಗೆ ಕೈಜೋಡಿಸಿದ್ದ ಸಮಾಜ ಸೇವಕಿ ವಾಣಿ ಎಂ.ಪಿ. ಅವರ ಬಗ್ಗೆ ಮಾತನಾಡಿ ಮಹಿಳೆಯರಿಗೆ ಆತ್ಮವಿಶ್ವಾಸ ತುಂಬಿದ ಸ್ವಾವಲಂಬಿ ಮಹಿಳೆಯಾಗಿ ಗುರುತಿಸಿಕೊಂಡಿದ್ದಾರೆ. ಜೊತೆಗೆ, ಕನ್ನಡ ಜನಪದ ಪರಿಷತ್ತಿನಲ್ಲಿ ಸಂಯುಕ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಜನಪದ ಪರಂಪರೆಯ ಸಂರಕ್ಷಣೆಗೆ ಸಹಕಾರ ನೀಡುತ್ತಿದ್ದಾರೆ ಎಂದರು. ಸಂಸ್ಥೆಯ ಕಾರ್ಯದರ್ಶಿ ಕೆಎಸ್ವಿ ರಘು ಮಾತನಾಡಿ, ಸಮಾಜಮುಖಿ ಕಾರ್ಯ ಮಾಡಲು ವಾಣಿ ಮತ್ತು ದರ್ಶನ್ ಸತಿಪತಿಗಳು ಪರಸ್ಪರ ಪ್ರೇರಣೆಯಾಗಿ, ಸಾಂಸ್ಕೃತಿಕ ಮೌಲ್ಯಗಳ ರಕ್ಷಣೆ, ಪರಿಸರ ಪೋಷಣೆ ಮತ್ತು ಸಮಾಜದ…
ಪಾವಗಡ: ಜೂ 15: ಆಗಸ್ಟ್ 1 ರೊಳಗೆ ಆಟೋ ರಿಕ್ಷಾಗಳಿಗೆ ಸಂಬಂಧಿಸಿದ ಚಾಲನ ಪರವಾನಗಿ, ಎಫ್ ಸಿ, ವಿಮಾ, ಪರ್ಮಿಟ್, ಸಮವಸ್ತ್ರ ಇನ್ನಿತರೆ ದಾಖಲಾತಿಗಳು ಕಡ್ಡಾಯವಾಗಿ ಆಟೋ ಚಾಲಕರು ಹೊಂದಿರಬೇಕು, ಇಲ್ಲವಾದಲ್ಲಿ ದಂಡದ ಬದಲು ಕೇಸು ದಾಖಲಿಸಿ ಆಟೋವನ್ನು ಸೀಜ್ ಮಾಡಲಾಗುವುದೆಂದು ಆಟೋ ಚಾಲಕರಿಗೆ ಪಾವಗಡ ಪೊಲೀಸ್ ಠಾಣೆಯ ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ ನೀಡಿದರು. ಪಾವಗಡ ಪಟ್ಟಣದ ಎಸ್ ಎಸ್ ಕೆ ಹಳೆ ಛತ್ರದಲ್ಲಿ ತುಮಕೂರು ಜಿಲ್ಲಾ ಪೊಲೀಸ್, ಮಧುಗಿರಿ ಉಪವಿಭಾಗ, ಪಾವಗಡ ಪೊಲೀಸ್ ಠಾಣೆ ವತಿಯಿಂದ ಆಟೋ ಚಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಇತ್ತೀಚಿಗೆ ಅಪಘಾತಗಳು ಹೆಚ್ಚಾಗುತ್ತಿದ್ದು ಈ ಹಿನ್ನಲೆ ಆಟೋ ಚಾಲಕರು ಸಾರಿಗೆ ಇಲಾಖೆಯ ಮಾನದಂಡಗಳನ್ನು ಅನುಸರಿಸದೆ ಅಗತ್ಯ ದಾಖಲಾತಿಗಳಿಲ್ಲದೆ ಬೇಕಾಬಿಟ್ಟಿ ಆಟೋ ಚಲಾಯಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು ಆಗಸ್ಟ್ 1 ರೊಳಗೆ ದಾಖಲಾತಿ ಸರಿಪಡಿಸಿಕೊಂಡು ಪೊಲೀಸ್ ಠಾಣೆಯಲ್ಲಿ ಆಟೋಗಳಿಗೆ ಸಂಬಂದ ಪಟ್ಟ ದಾಖಲಾತಿ ನೀಡಿ ಪೊಲೀಸ್ ಠಾಣೆಯ ಕ್ರಮ ಸಂಖ್ಯೆಯನ್ನು ಪಡೆದು ಆಟೋಗಳನ್ನು ಚಲಾಯಿಸುವಂತೆ ಖಡಕ್ ಸಂದೇಶ…
ತುಮಕೂರು: ತುಮಕೂರು ಜಿಲ್ಲಾಧಿಕಾರಿಯಾದ ಶುಭ ಕಲ್ಯಾಣ್, (ಭಾ.ಆ.ಸೇ.) ISDA Infracon National Awards — 2025 (IINA) ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಹಾಗೂ ಮಹತ್ವದ ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕಾಗಿ ಬೇಕಾದ ಭೂಸ್ವಾಧೀನ ಪ್ರಕ್ರಿಯೆಗೆ ಇವರು ತೆಗೆದುಕೊಂಡ ಕ್ರಮಗಳಿಗೆ ಈ ಪ್ರಶಸ್ತಿ ಲಭಿಸಿದೆ. ತುಮಕೂರು ಜಿಲ್ಲೆಯ ಸರಾಸರಿ ವಾರ್ಷಿಕ ಮಳೆಯ ಪ್ರಮಾಣ ಕೇವಲ 590 ಮಿ.ಮೀ. ಆಗಿದ್ದು, ಈ ಹಿನ್ನಲೆಯಲ್ಲಿ, ಕುಡಿಯುವ ನೀರಿಗೆ ಹೆಚ್ಚಿನ ಮಹತ್ವ ನೀಡಬೇಕಾಗಿರುವುದು ಅತ್ಯವಶ್ಯಕವಾಗಿದ್ದು. ಈ ಸಮಸ್ಯೆಯ ತೀವ್ರತೆಯನ್ನು ಅರಿತುಕೊಂಡ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರವರು ಎತ್ತಿನಹೊಳೆ ಯೋಜನೆ ಅನುಷ್ಠಾನಕ್ಕಾಗಿ ಹೆಚ್ಚಿನ ಪ್ರಾಮುಖ್ಯತೆ ನೀಡಿರುತ್ತಾರೆ. ಎತ್ತಿನಹೊಳೆ ಯೋಜನೆಗೆ ಅವಶ್ಯಕವಾಗಿ ಬೇಕಾದ 1335 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡು, ರೂ. 365 ಕೋಟಿ ಪರಿಹಾರ ಹಣವನ್ನು ಕೇವಲ ಒಂದು ವರ್ಷದ ಅವಧಿಯಲ್ಲಿ ಭೂ-ಮಾಲೀಕರಿಗೆ ಪಾರದರ್ಶಕವಾಗಿ ಪಾವತಿಸಿ ಭೂ ಸ್ವಾಧೀನಕ್ಕೆ ಹೆಚ್ಚಿನ ಒತ್ತು ನೀಡಿರುತ್ತಾರೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 75ಕ್ಕೂ ಹೆಚ್ಚು ಪರಿಶೀಲನಾ ಸಭೆಗಳನ್ನು ಕೈಗೊಂಡು,…
ತುಮಕೂರು: ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ಹೊಂದಾಣಿಕೆ ಆಗಿದೆ. ಅಲ್ಲದೆ ಎರಡು ಪಕ್ಷಗಳಿಗೂ ಇದು ಅನುಕೂಲವಾಗಿದೆ ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಇದು ಸಾಬೀತಾಗಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ವಿರೋಧಿ ಹೋರಾಟ ಕುರಿತು ಬಗೆಹರಿಸುವ ದೃಷ್ಟಿಯಿಂದ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರು ಆಗಿರುವ ಅವರು ರೈತರೊಂದಿಗೆ ಕುಳಿತು ಚರ್ಚಿಸುವ ಬಗೆಹರಿಸುವ ಕುರಿತು ಚಿಂತನೆ ನಡೆಸಿಲ್ಲ. ನೀರಿನ ವಿಚಾರದಲ್ಲಿ ಸರ್ಕಾರ ರಾಜಕಾರಣ ಮಾಡಬಾರದು ಎಂದು ಹೇಳಿದರು. “ಜನರೊಂದಿಗೆ ಜನತಾದಳ” ಮೊದಲನೇ ದಿನದ ಪ್ರವಾಸಕ್ಕೂ ಮೊದಲು ಪರಮಪೂಜ್ಯ ಡಾ.ಶಿವಕುಮಾರ ಶ್ರೀಗಳ ತಪೋಭೂಮಿ ಶ್ರೀಕ್ಷೇತ್ರ ಸಿದ್ದಗಂಗಾ ಮಠಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಪಕ್ಷದ ಸದಸ್ಯತಾ ಅಭಿಯಾನದ ನಿರೀಕ್ಷಿತ ಗುರಿ ಸಾಧಿಸಲು ಲಿಂಗೈಕ್ಯ ಶ್ರೀಗಳ…
ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ 18 ಮಂದಿಯ ಗುರುತು ಪತ್ತೆ ಇನ್ನೂ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಮೃತರ ಸಂಖ್ಯೆ ಮತ್ತು ಗುರುತಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಿಲ್ಲ. 242 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಒಬ್ಬ ಮಾತ್ರವೇ ಬದುಕುಳಿದಿದ್ದಾರೆ. ಅಹಮದಾಬಾದ್ನ ಬಿಜೆ ವೈದ್ಯಕೀಯ ಕಾಲೇಜು ಮತ್ತು ಸಿವಿಲ್ ಆಸ್ಪತ್ರೆಯ ಆವರಣದಲ್ಲಿ ಸಂಭವಿಸಿದ ಈ ಅವಘಡದಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರು ಮಾತ್ರವಲ್ಲದೇ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ಕೂಡ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 272 ಡಿಎನ್ ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇದರಲ್ಲಿ 13ಮಂದಿ ಇತರರೂ ಸೇರಿದ್ದಾರೆ — ಒಂಬತ್ತು ಸ್ಥಳೀಯ ನಿವಾಸಿಗಳು ಮತ್ತು ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ. ಇತರ 18 ವ್ಯಕ್ತಿಗಳು ಯಾರು (272 – [241 + 13]) ಏನು ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಡಿಎನ್ ಎ ಗುರುತಿನ ಪ್ರಕ್ರಿಯೆ ಮುಗಿದ ನಂತರವೇ ಸಾವಿನ ನಿಖರ ಸಂಖ್ಯೆ ತಿಳಿಯಬಹುದು ಎಂದು ಸರ್ಕಾರ ಹೇಳಿದೆ. ಇಲ್ಲಿಯವರೆಗೆ, ಡಿಎನ್…
ಪುಣೆ: ಪುಣೆಯಲ್ಲಿ ಇಂದ್ರಯಾಣಿ ನದಿಗೆ ನಿರ್ಮಿಸಲಾದ ಸೇತುವೆ ಕುಸಿದು ಆರು ಪ್ರವಾಸಿಗರು ಸಾವನ್ನಪ್ಪಿದ್ಧಾರೆ. ಜನಪ್ರಿಯ ಪ್ರವಾಸಿ ತಾಣವಾದ ಕುಂಡ್ಮಾಲಾದಲ್ಲಿ ಈ ಘಟನೆ ನಡೆದಿದೆ. ಸೇತುವೆ ಮೇಲಿದ್ದ ಸುಮಾರು 15 ರಿಂದ 20 ಪ್ರವಾಸಿಗರು ನದಿಗೆ ಬಿದ್ದು ಕೊಚ್ಚಿ ಹೋಗಿದ್ದಾರೆ ಎಂದು ಹೇಳಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ ಡಿಆರ್ ಎಫ್) ಸೇರಿದಂತೆ ಪೊಲೀಸರು ಮತ್ತು ವಿಪತ್ತು ಪರಿಹಾರ ಕಾರ್ಯಕರ್ತರು ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಕಾರ್ಯ ಆರಂಭವಾಗಿದೆ. ಇಲ್ಲಿಯವರೆಗೆ ಎಂಟು ಜನರನ್ನು ರಕ್ಷಿಸಲಾಗಿದ್ದು, ಇಬ್ಬರು ಮಹಿಳೆಯರು ಇನ್ನೂ ಸೇತುವೆಯ ಕೆಳಗೆ ಸಿಲುಕಿಕೊಂಡಿದ್ದಾರೆ. ಪುಣೆ ಮತ್ತು ಪಿಂಪ್ರಿ ಚಿಂಚ್ ವಾಡ್ ಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದ್ದರೂ, ಪುಣೆ ಗ್ರಾಮೀಣ ಪ್ರದೇಶದ ಮಾವಲ್ ಪ್ರದೇಶದಲ್ಲಿ ಸೇತುವೆ ಕುಸಿತ ಸಂಭವಿಸಿದೆ, ಘಾಟ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ಸೋಲಾರ್ ವಾಟರ್ ಹೀಟರ್ ಖರೀದಿಸಲು GeM(Government e–Marketing) ಪೋರ್ಟಲ್ ಮೂಲಕ ಟೆಂಡರ್ ಆಹ್ವಾನಿಸಲಾಗಿದೆ. ಆಸಕ್ತ ಟೆಂಡರುದಾರರು GeM ಪೋರ್ಟಲ್ ಮೂಲಕ ಜೂನ್ 16ರ ಮಧ್ಯಾಹ್ನ 3 ಗಂಟೆಯೊಳಗೆ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.08137–283346ನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕ ದಿನೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ 3 ವರ್ಷಗಳ ಅವಧಿಗೆ ಘನತ್ಯಾಜ್ಯ ನಿರ್ವಹಣೆ, ಸ್ವಚ್ಛ ಸರ್ವೇಕ್ಷಣೆ, ತ್ಯಾಜ್ಯ ನೀರು ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪಿ(ಎಸ್ ಹೆಚ್ ಜಿ)ನ ಸದಸ್ಯರನ್ನು ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಧಿತ ಅರ್ಜಿ ನಮೂನೆ, ಆಯ್ಕೆ ಪ್ರಕ್ರಿಯೆ, ಸಲ್ಲಿಸಬೇಕಾದ ಅಗತ್ಯ ದಾಖಲೆ, ಷರತ್ತು ಮತ್ತು ನಿಯಮ, ವೇತನ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಯನ್ನು ಜಾಲತಾಣ http://tumakurucity.mrc.gov.in/en ನಿಂದ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸುವವರು ‘ನಲ್ಮ್–ಡೇ’ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರಬೇಕು. ಜಾಲತಾಣದಲ್ಲಿ ಲಭ್ಯವಿರುವ ನಿಗಧಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜೂನ್ 17ರೊಳಗಾಗಿ ಇ-ಮೇಲ್ ವಿಳಾಸ itstaff_ulb_tumkur@yahoo.com ಗೆ ಸಲ್ಲಿಸಬಹುದು. ಆಸಕ್ತ ಎಸ್ ಹೆಚ್ ಜಿ ಸದಸ್ಯರು ಅರ್ಜಿಯೊಂದಿಗೆ ಗುರುತಿನ ಪುರಾವೆ, ವಿಳಾಸ ಪುರಾವೆ, ಅರ್ಹತಾ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ(ಎಂಪಾನೆಲ್) ದಾಖಲೆ, ಸ್ವ–ಸಹಾಯ ನೋಂದಣಿ ದಾಖಲೆ, ಶೈಕ್ಷಣಿಕ ಅರ್ಹತಾ ದಾಖಲೆ, NULM–DAY ಅವರಿಂದ ಪಡೆದ ಹಿಂಬರಹ…
ತುಮಕೂರು: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಕಾಡುಗೊಲ್ಲ ಜನಾಂಗದವರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಅರಿವು–ಶೈಕ್ಷಣಿಕ ನೇರ ಸಾಲ(ಹೊಸದು), ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕುಗಳ ಸಹಯೋಗದೊಂದಿಗೆ), ಸಾವಲಂಬಿ ಸಾರಥಿ ಹಾಗೂ ವಿದೇಶಿ ವ್ಯಾಸಂಗ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಾಡುಗೊಲ್ಲ ಜಾತಿಗೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪುಸ್ತಕದಲ್ಲಿ ಹೊಂದಾಣಿಕೆಯಾಗಬೇಕು. ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ತುಮಕೂರು ಒನ್ ಸೇವಾಕೇಂದ್ರಗಳ ಮೂಲಕ ಜುಲೈ 2ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ದೂ.ಸಂ. 0816–2005008ನ್ನು ಸಂಪರ್ಕಿಸಬಹುದು ಎಂದು ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…