Subscribe to Updates
Get the latest creative news from FooBar about art, design and business.
- ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
- ಆರ್ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
- “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!
- ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ
- ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ
- ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ
- ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
- ಗುಬ್ಬಿ: SBI ಬ್ಯಾಂಕ್ ನ ಎಟಿಎಂನಿಂದ ಹಣ ದೋಚಿದ ಕಳ್ಳರು
Author: admin
ವಿಜಯಪುರ: ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಕಲಚೇತನ ಸಾಧಕರಿಗೆ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ. ವಿಶ್ವ ವಿಕಲಚೇತನರ ದಿನಾಚರಣೆ-2025ರ ಕಾರ್ಯಕ್ರಮದಲ್ಲಿ ತಾಲೂಕಿಗೊಬ್ಬರಂತೆ ವಿಕಲಚೇತನ ಸಾಧಕರಿಗೆ ಸನ್ಮಾನಿಸಲಾಗುವುದು, ನವೆಂಬರ್ 25ರೊಳಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂರವಾಣಿ ಸಂಖ್ಯೆ: 08352–796060 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಕಬ್ಬಿನ ಬೆಲೆ ಏರಿಕೆಗೆ ಒತ್ತಾಯಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಸುಮಾರು 8 ದಿನಗಳಿಂದ ಮೈ ಕೊರೆಯುವ ಚಳಿಯಲ್ಲಿಯೇ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಗುರುವಾರ ಜಿಲ್ಲಾ ಉಸ್ತುವಾರಿ ಸಚಿವರ ಆದೇಶದ ಮೇರೆಗೆ ಜಿಲ್ಲಾಡಳಿತ ಪ್ರತಿ ಟನ್ ಕಬ್ಬಿಗೆ 2,950 ರೂ. ದರ ನಿಗದಿ ಮಾಡಲಾಗಿದೆ. ಇದರ ಬೆನ್ನಲ್ಲೆ ರೈತರು ಪ್ರತಿಭನೆಯನ್ನು ಹಿಂಪಡೆದುಕೊಂಡಿದ್ದಾರೆ. ಈ ಹಿಂದೆ ಜಿಲ್ಲಾಡಳಿತ ಪ್ರತಿ ಟನ್ ಕಬ್ಬಿಗೆ 2,900ರೂ. ದರ ನಿಗದಿಗೊಳಿಸಿತ್ತು. ಆದರೆ ಈ ದರವನ್ನು ಒಪ್ಪದ ರೈತರು ಅಹೋ ರಾತ್ರಿ ಧರಣಿ ಕೈಗೊಂಡಿದ್ದರು. ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ರೈತರ ಜೊತೆ ಸಮಾಲೋಚನೆ ನಡೆಸಿದ್ದರು. ಈ ಕುರಿತು ಮಾತನಾಡಿದ ರೈತ ಮುಖಂಡ ಮಲ್ಲಿಕಾರ್ಜುನ್ ಸ್ವಾಮಿ, ಪ್ರತಿ ಟನ್ ಕಬ್ಬಿಗೆ 2,950 ರೂ. ಬೆಲೆ ನಿಗದಿ ಮಾಡಿದಕ್ಕಾಗಿ ನಮಗೆ ಹೆಚ್ಚಿನ ಸಂತೋಷವಿಲ್ಲ. ಕಾರಣ ನಾವು ಅದಕ್ಕಿಂತ ಹೆಚ್ಚಿನ ಬೇಡಿಕೆ ಇಟ್ಟಿದ್ದೆವು. ಆದರೆ ಬೇರೆ…
ತುಮಕೂರು: ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರಿಗೆ ಇ–ಸ್ವತ್ತು ದಾಖಲೆಗಳನ್ನು ನೀಡುವಲ್ಲಿ ವಿಳಂಬ ಹಾಗೂ ಪಾಲಿಕೆ ಆಡಳಿತದ ಅವ್ಯವಸ್ಥೆ ತಾಂಡವವಾಡುತ್ತಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಇ–ಸ್ವತ್ತು ದಾಖಲೆ ಸಿದ್ಧಪಡಿಸುವಲ್ಲಿ ವಿಳಂಬ, ಹಣಕ್ಕೆ ಬೇಡಿಕೆ, ಸಾರ್ವಜನಿಕರ ಕೆಲಸ ಮಾಡಿಕೊಡದಿರುವ ಬಗ್ಗೆ ಜನರಿಂದ ದೂರು ಬಂದಿದ್ದರಿಂದ ಭೇಟಿ ನೀಡಿದ್ದರು. ಅಲ್ಲಿನ ಅವ್ಯವಸ್ಥೆ, ಭ್ರಷ್ಟಾಚಾರ ಕಂಡು ಒಂದು ಕ್ಷಣ ಅವಕ್ಕಾದರು. ಹಳಿ ತಪ್ಪಿದ ಪಾಲಿಕೆ ಆಡಳಿತ ನೋಡಿ ದಂಗಾದರು. ಪಾಲಿಕೆಯ ಆಸ್ತಿ ದಾಖಲಾತಿ ವಿಭಾಗದಲ್ಲಿ ಆನ್ ಲೈನ್ ಮೂಲಕ ಸಲ್ಲಿಕೆಯಾದ ಹಲವು ಅರ್ಜಿಗಳು ಕಂದಾಯ ನಿರೀಕ್ಷಕರ ಹಂತದಲ್ಲೇ ದೊಡ್ಡ ಪ್ರಮಾಣದಲ್ಲಿ ಬಾಕಿ ಉಳಿದಿರುವುದು ಪರಿಶೀಲನೆ ಸಮಯದಲ್ಲಿ ಕಂಡು ಬಂತು. ದಾಖಲೆಗಳ ಪರಿಶೀಲನೆಗೆ ತಿಂಗಳುಗಟ್ಟಲೆ ಕಾಯುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ಸಾರ್ವಜನಿಕರು ಗಮನಕ್ಕೆ ತಂದರು. ಕೆಲ ಕಡೆಗಳಲ್ಲಿ ಅಧಿಕಾರಿಗಳ ಅಸಮರ್ಪಕ ಸೇವೆ ಪಾಲಿಕೆ ವಸ್ತುಸ್ಥಿತಿಯನ್ನು ತೆರೆದಿಟ್ಟಿತು. ಈ ಸಂಬಂಧ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳು ಸಲ್ಲಿಸಿದ ಅಂಕಿ–ಅಂಶಗಳ ಪ್ರಕಾರ ನೂರಾರು ಇ–ಸ್ವತ್ತು…
ತಿಪಟೂರು: ಪಾಕಿಸ್ತಾನದ ವಿರುದ್ಧ ಭಾರತೀಯ ವಾಯು ಪಡೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಪ್ರಣವ್ ಬೆಳ್ಳೂರು ಅವರನ್ನು ಕಲ್ಪತರು ಸೆಂಟ್ರಲ್ ಸ್ಕೂಲ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಪ್ರಣವ್ ಬೆಳ್ಳೂರು ಅವರು ಸೆಂಟ್ರಲ್ ಸ್ಕೂಲ್ ನ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಆಪರೇಷನ್ ಸಿಂಧೂರ್ ಯಶಸ್ವಿಗೊಳಿಸಿದ ತಂಡದಲ್ಲಿ ಒಬ್ಬರಾಗಿದ್ದಾರೆ. ಇವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶೌರ್ಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ಮಾತನಾಡಿದ ಬಾಗೇಪಲ್ಲಿ ನಟರಾಜ್ ತಿಳಿಸಿದರು. ಪ್ರಣವ್ ಬೆಳ್ಳೂರು ಅವರಿಗೆ ಅವರ ತಂದೆ ತಾಯಿಯ ಸಮ್ಮುಖದಲ್ಲಿ ಕಲ್ಪತರು ವಿದ್ಯಾ ಸಂಸ್ಥೆಯ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾರನಗೆ ರೆಸಂಗಮೇಶ್ ಮತ್ತು ಕಲ್ಪತರು ವಿದ್ಯಾ ಸಂಸ್ಥೆಯ ಅನೇಕ ಪದಾಧಿಕಾರಿಗಳು ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೊರಟಗೆರೆ: ತಾಲ್ಲೂಕಿನಲ್ಲಿ ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ರೈತರಿಂದ ಪ್ರತಿ ಗಂಟೆಗೆ ರೂ. 2,700/- ಗಳಿಗೆ ನಿಗದಿಪಡಿಸಿದ್ದು ಒಂದು ವೇಳೆ ಕಟಾವು ಯಂತ್ರದ ಮಾಲಿಕರು/ ಗುತ್ತಿಗೆದಾರರು ರೈತರಿಂದ ಹೆಚ್ಚಿಗೆ ಬಾಡಿಗೆ ಹಣವನ್ನು ಕೇಳಿದರೆ ಅವರ ವಿರುದ್ದ ವಿಪತ್ತು ನಿರ್ವಹಣೆ ಕಾಯ್ದೆ 2005 ರ ಪ್ರಕಾರ ಕಾನೂನು ಕ್ರಮ ಕೈಕೊಳ್ಳಲಾಗುವುದು ಎಂದು ತಹಶೀಲ್ದಾರ್ ಮಂಜುನಾಥ ಕೆ. ತಿಳಿಸಿದ್ದಾರೆ. ತಾಲ್ಲೂಕು ಕಛೇರಿ ಸಭಾಂಗಣದಲ್ಲಿ, ರೈತರ ಮುಖಂಡರು ಹಾಗೂ ರಾಗಿ ಕಟಾವು ಯಂತ್ರಗಳ ಮಾಲೀಕರೊಂದಿಗೆ ಚರ್ಚೆ ನಡೆಸಿ, ಕೊರಟಗೆರೆ ತಾಲ್ಲೂಕಿನಲ್ಲಿ 2025–26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 12180 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಕಳೆದ ವರ್ಷಕ್ಕೆ ಹೊಲಿಕೆ ಮಾಡಿದರೆ ಈ ವರ್ಷ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು 3000 ಹೆಕ್ಟೇರ್ ನಷ್ಟು ಹೆಚ್ಚಾಗಿ ರಾಗಿ ಬೆಳೆಯು ಬಿತ್ತನೆಯಾಗಿದ್ದು ರಾಗಿ ಬೆಳೆಯು ಕಟಾವು ಹಂತದಲ್ಲಿ ಇರುತ್ತದೆ. ಈಗಾಗಲೇ ಕಟಾವು ಕಾರ್ಯ ಪ್ರಾರಂಭವಾಗಿದ್ದು ಬಳ್ಳಾರಿ ಜಿಲ್ಲೆಯಿಂದ ತಾಲ್ಲೂಕಿಗೆ 15–20 ಕಟಾವುಯಂತ್ರಗಳು ಬಂದಿದ್ದು ಬಹುತೇಕ ರೈತರು ರಾಗಿ…
ತುರುವೇಕೆರೆ: ತಾಲ್ಲೂಕಿನ ದಬ್ಬಘಟ್ಟ ಹೋಬಳಿಯ 29 ಕೆರೆಗಳಿಗೆ ನೀರು ಹರಿಸುವ ಏತ ನೀರಾವರಿ ಯೋಜನೆಗೆ ಸರ್ಕಾರ ಹೆಚ್ಚುವರಿ ಅನುದಾನ ಮಂಜೂರು ಮಾಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಬ್ಬೇಘಟ್ಟ ಹೋಬಳಿಯ ಜನರಿಗೆ ಈ ಕಾಮಗಾರಿಯಿಂದ ಬಹುಪಾಲು ನೀರಿನ ಸಮಸ್ಯೆ ಬಗೆಹರಿದಂತಾಗುತ್ತದೆ. ಈಗಾಗಲೇ ಮಲ್ಲಾಘಟ್ಟ ಕೆರೆಯಿಂದ ಕಾಮಗಾರಿ ಆರಂಭವಾಗಿದೆ. ಮಲ್ಲಾಘಟ್ಟದ ಬಳಿ ಜಾಕ್ ವೆಲ್ ನಿರ್ಮಿಸಲಾಗಿದೆ. ಅಲ್ಲಿಂದ ನೀರು ಹರಿಸುವ ಸಲುವಾಗಿ ಪೈಪ್ ಲೈನ್ ಕಾಮಗಾರಿ ಪ್ರಾರಂಭ ಮಾಡಲಾಗಿದೆ. ಈಗಾಗಲೇ ವೈಟಿ ರಸ್ತೆವರೆಗೆ ಪೈಪ್ ಲೈನ್ ಕಾಮಗಾರಿ ಮುಗಿದಿದೆ. 48 ಕೋಟಿ ಯೋಜನೆಗೆ ಸರ್ಕಾರ ಕೇವಲ 9 ಕೋಟಿಯಷ್ಟು ಹಣ ಮಾತ್ರ ಬಿಡುಗಡೆಗೊಳಿಸಿದೆ. ಉಳಿದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದರು. ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆ ಚಾಲನೆಯಲ್ಲಿದೆ. ತಿಪಟೂರು, ಗುಬ್ಬಿ ತಾಲ್ಲೂಕಿನಲ್ಲಿ ಕಾಮಗಾರಿ ಮಾಡಲು ತಲಾ 50 ಕೋಟಿ ನೀಡಲಾಗಿದೆ. ಆದರೆ ತುರುವೇಕೆರೆಗೆ ಕೇವಲ 30 ಕೋಟಿ ನೀಡಲಾಗಿದೆ. ಇದು ತಾರತಮ್ಯ. ಈ ಬಗ್ಗೆ ಉಪ…
ತಿಪಟೂರು: ಕಲಾಕೃತಿ ಸಂಸ್ಥೆ ತಾಲೂಕು ಆಡಳಿತ ಕನ್ನಡ ರಕ್ಷಣಾ ವೇದಿಕೆ ಮತ್ತು ವಿವಿಧ ಸಂಘ ಸಂಸ್ಥೆಯ ಸಹಯೋಗದೊಂದಿಗೆ ಕಲ್ಪತರು ಕ್ರೀಡಾಂಗಣದಲ್ಲಿ ನವೆಂಬರ್ 19 ರಿಂದ ಆರಂಭಗೊಂಡ ಕಲ್ಪೋತ್ಸವ ಕಾರ್ಯಕ್ರಮ 21 ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು. ಖ್ಯಾತ ನಟಿ ಉಮಾಶ್ರೀಗೆ ಕಲ್ಪತರು ರತ್ನ ಪ್ರಶಸ್ತಿಸಮಾಜಸೇವಕರಿಗೆ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದು ಶಾಸಕರು ಕೆ.ಷಡಕ್ಷರಿ ತಿಳಿಸಿದರು. ಕಲಾ ತಿ ಅಧ್ಯಕ್ಷ ಡಾ.ಶ್ರೀಧರ್ ಮಾತನಾಡಿ, ಕಳೆದ ಮೂರು ವರ್ಷದಿಂದ ಒಂದು ದಿನದ ಕಾರ್ಯಕ್ರಮ ಮಾಡುತ್ತಿದ್ದು, ಈ ಸಾರಿ ತಿಪಟೂರು ತಾಲೂಕಿನಲ್ಲಿ ತುಮಕೂರು ದಸರಾ ರೀತಿಯ ಮೂರು ದಿನ ಕಲ್ಪೋತ್ಸವ ಹಮ್ಮಿಕೊಳ್ಳಲಾಗಿದೆ, ಪ್ರತಿನಿತ್ಯ ಅನೇಕ ಕಲಾವಿದರಿಂದ ಮಿಮಿಕ್ರಿ ನಾಯಕರಾದ ರಾಜೇಶ್ ಕೃಷ್ಣನ್, ಅನುಶ್ರೀ, ಸರಿಗಮಪ ತಂಡದಿಂದ ಸಂಗೀತ ಮನರಂಜನ ಕಾರ್ಯಕ್ರಮ ದೃಶ್ಯ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು. ವಿಶೇಷ ಆಕರ್ಷಣೆಯಾಗಿ ಸಾರ್ವಜನಿಕರಿಗೆ ನವೆಂಬರ್ 22 ರಿಂದ 23ರವರೆಗೆ ಹೆಲಿಕಾಫ್ಟರ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಈ…
ತುಮಕೂರು: ಬಂಜಾರ ಸಮಾಜದ ಹಲವು ಆಚಾರ–ವಿಚಾರಗಳು ನಶಿಸಿ ಹೋಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇವುಗಳನ್ನು ಮುಂದಿನ ತಲೆಮಾರಿಗೆ ಕಾಪಾಡಿ ಉಳಿಸಲೆಂದು ನಿಗಮವು ಒಂದು ಕೋಟಿ ಇಪ್ಪತ್ತು ಲಕ್ಷ ರೂ. ವೆಚ್ಚ ಮಾಡಿ ರಾಜ್ಯದಾದ್ಯಂತ ಕಲಾ ಮೇಳಗಳನ್ನು ಆಯೋಜಿಸುತ್ತಿದೆ ಎಂದು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್.ಜಯದೇವ್ ನಾಯಕ್ ತಿಳಿಸಿದ್ದಾರೆ. ನಗರದ ಬಂಜಾರ ಭವನದಲ್ಲಿ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ವಲಯ ಕಚೇರಿಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕಲಾ ಮೇಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುವಕರು ಈ ವೇದಿಕೆಯನ್ನು ಸದುಪಯೋಗಪಡಿಸಿಕೊಂಡು ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದರು. ಕಲಾ ಮೇಳದಲ್ಲಿ ಬಂಜಾರರ ಪರಂಪರೆಯ ನೃತ್ಯ, ಸಂಗೀತ ಮತ್ತು ಸಾಂಸ್ಕೃತಿಕ ಕಲೆಗಳು ವಿಶೇಷ ಆಕರ್ಷಣೆಯಾಗಿದ್ದವು. ಕಾರ್ಯಕ್ರಮದಲ್ಲಿ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಡಿ. ನಾರಾಯಣ ನಾಯ್ಕ್, ಪ್ರಧಾನ ಕಾರ್ಯದರ್ಶಿ ಶಂಕರ್ ಬಿ, ತುಮಕೂರು ವಲಯ ಅಧಿಕಾರಿ ಸಂಗಮೇಶ, ಶ್ರೀ ಸೇವಾಲಾಲ್ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕುಬೇಂದ್ರ ನಾಯ್ಕ್,…
ಸರಗೂರು: ಕಣ್ಣಿನ ಆರೋಗ್ಯಕ್ಕೆ ಪೋಷಕಾಂಶವುಳ್ಳ ಸಮತೋಲನ ಆಹಾರ ಸೇವಿಸಬೇಕು ಎಂದು ರೋಟರಿ ಅವೈಡಬಲ್ ಬ್ಲೈಂಡ್ ನೆಸ್ ಫೌಂಡೇಷನ್ ನ ಕಾರ್ಯಕಾರಿ ಸಮಿತಿಯ ಸದಸ್ಯ ಸಂಪತ್ ಕುಮಾರ್ ತಿಳಿಸಿದರು. ಪಟ್ಟಣದ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ನ ಅಂಗಸಂಸ್ಥೆಯಾದ ವಿವೇಕಾನಂದ ಸ್ಮಾರಕ ಆಸ್ಪತ್ರೆಯು ಕಣ್ಣಿನ ಶಸ್ತ್ರ ಚಿಕಿತ್ಸಾ ಸಮುದಾಯ ಸಮರ್ಪಣಾ ಕಾರ್ಯಕ್ರಮವನ್ನು ಮಂಗಳವಾರದಂದು ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಣ್ಣಿನ ಆರೋಗ್ಯ ಕಾಪಾಡಲು ಮತ್ತು ದೃಷ್ಟಿ ಸಮಸ್ಯೆ ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ, ಅಮೂಲ್ಯವಾದ ಕಣ್ಣುಗಳ ರಕ್ಷಣೆ ಬಗ್ಗೆಯೂ ಸದಾ ಎಚ್ಚರ ವಹಿಸುವುದು ಅತ್ಯಗತ್ಯ ಎಂದರು. ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಹಾಗೂ ಆಸ್ಪತ್ರೆ ಉಪ ನಿರ್ದೇಶಕರಾದ ಡಾ.ಶಂಕರ್ ಹೆಚ್.ಕೆ. ಮಾತನಾಡಿ, ಕಣ್ಣಿನ ತಪಾಸಣೆ ನಡೆಸಿ, ಅಗತ್ಯವಿದ್ದಲ್ಲಿ ಚಿಕಿತ್ಸೆ ಅಥವಾ ಸಲಹೆ ನೀಡುತ್ತಾರೆ. ಇವುಗಳು ಕಣ್ಣಿನ ತೊಂದರೆಗಳನ್ನು ಸಕಾಲದಲ್ಲಿ ಗುರುತಿಸಲು ಮತ್ತು ಚಿಕಿತ್ಸೆ ನೀಡಲು ಸಹಾಯಕವಾಗಿವೆ ಎಂದರು. ಈ ಕಾರ್ಯಕ್ರಮವು ಆದಿವಾಸಿಗಳ ಅಂಧತ್ವ ನಿವಾರಣೆಗಾಗಿ ಆಯೋಜಿಸಿದ…
ಸರಗೂರು: ಮಕ್ಕಳು ಮದ್ಯಪಾನ ಮತ್ತು ಧೂಮಪಾನ ಇನ್ನಿತರ ಚಟುವಟಿಕೆಗಳಿಂದ ದೂರವಿರಬೇಕು ಎಂದು ಸಂಪನ್ಮೂಲ ವ್ಯಕ್ತಿ ಹಾಗೂ ಶಿಕ್ಷಕ ಮದನ್ ಹೇಳಿದರು. ತಾಲೂಕಿನ ಎಂ.ಸಿ.ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳೂರು ವಲಯದ ಎಂ.ಸಿ.ತಳಲು ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರದಂದು 8, 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಕ್ಕಳು ದುಶ್ಚಟ ದುರಭ್ಯಾಸಗಳಿಂದ ದೂರವಿರಲು ಸ್ವಾಸ್ಥ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಿಮ್ಮ ಮನೆಯಲ್ಲಿ ಯಾರಾದರೂ ಕುಡಿತದ ಚಟಕ್ಕೆ ಬಲಿಯಾಗಿದ್ದರೆ, ಅಂತವರನ್ನು ಶಿಬಿರಕ್ಕೆ ಸೇರಿಸಿ ಕುಡಿತವನ್ನು ಬಿಡಿಸಬೇಕು ಸಮಾಜಕ್ಕೆ ಹಾನಿ ಉಂಟು ಮಾಡುವಂತಹ ಯಾವುದೇ ಕಾರ್ಯಗಳನ್ನು ಮಾಡಬಾರದು, ನಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇಟ್ಟುಕೊಳ್ಳಬೇಕು ಎಂಬ ಸಲಹೆ ನೀಡಿದರು. ಮುಳ್ಳೂರು ವಲಯದ ಮೇಲ್ವಿಚಾರಕ ನರಸಿಂಹಮೂರ್ತಿ ಮಾತನಾಡಿ, ನಮ್ಮ ಸ್ವಾಸ್ಥ್ಯವನ್ನು ಬರೀ ಧೂಮಪಾನ ಮತ್ತು ಮದ್ಯಪಾನವೇ ಹಾನಿ ಉಂಟು ಮಾಡುತ್ತಿಲ್ಲ. ಹಲವಾರು ಮೊಬೈಲ್ ನಲ್ಲಿ ಬರುವಂತಹ ಹಲವಾರು ಸುಳ್ಳು ಸುದ್ದಿಗಳಿಂದಲೂ ಕೂಡ ಮನುಷ್ಯನ ನೆಮ್ಮದಿ ಹಾಳಾಗುತ್ತದೆ, ಇತ್ತೀಚೆಗೆ ನಮ್ಮ ಭಾಗದಲ್ಲಿ…