Subscribe to Updates
Get the latest creative news from FooBar about art, design and business.
- ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
- ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
- ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
- ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
- ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
Author: admin
ತಿಪಟೂರು: ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲ್ಲೂಕಿನ ರೈತಾಪಿ ವರ್ಗದವರಿಗೆ ಉಪಯೋಗವಾಗುವ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಬೆಳೆವಿಮೆ ಮಾಡಿಸಲು ತಾಲ್ಲೂಕು ಯೋಜನಾಧಿಕಾರಿ ಉದಯ್ ಕೆ. ರವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಉದಯ್ ಕೆ. ರೈತಾಪಿ ವರ್ಗದವರ ಬಾಳು ಬೆಳಗಿಸುವ ಕೃಷಿ ಕ್ಷೇತ್ರದಲ್ಲಿ ಸಮಾಜದ ಎಲ್ಲಾ ಜನತೆಗೆ ಅನ್ನಕೊಡುವ ರೈತನಿಗೆ ಬೆಳೆ ಬೆಳೆಯುವ, ಭೂಮಿಯ ಹದದಿಂದ, ಬೆಳೆ ಕಟಾವಿನವರೆಗೂ ಅನೇಕ ಪ್ರಾಕೃತಿಕ ವಿಕೋಪಗಳಿಂದ ಬೆಳೆನಷ್ಟ ಅನುಭವಿಸಬಾರದು ಎಂಬ ಕಾರಣಕ್ಕೆ ಕೇಂದ್ರ ಸರಕಾರದ ವತಿಯಿಂದ ಫಸಲ್ ಭೀಮಾ ಬೆಳೆ ವಿಮೆಯಂತಹ ಅದ್ಬುತ ಯೋಜನೆಯನ್ನು ಪರಿಚಯಸಲಾಗಿದೆ. ಈ ಒಂದು ವಿಮೆ ರಾಜ್ಯದ ಎಲ್ಲಾ ರೈತಾಪಿ ವರ್ಗದವರಿಗೂ ಉಪಯೋಗವಾಗಬೇಕೆಂದು ಪೂಜ್ಯ ವೀರೇಂದ್ರ ಹೆಗ್ಗಡೆಯವರು ರಾಜ್ಯದ ಪ್ರತಿ ತಾಲ್ಲೂಕಿನ CSC ಸೇವಾದರರಿಂದ ರೈತರಿಗೆ ಬೆಳೆವಿಮೆ ಮಾಡಿಸಿಕೊಳ್ಳುವ ಸವಲತ್ತನ್ನು ಒದಗಿಸಿಕೊಡಲಾಗಿದೆ ಎಂದರು. ಕಳೆದ ವರ್ಷ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲ್ಲೂಕಿನಾದ್ಯಂತ ಸರಿಸುಮಾರು 4,252 ರೈತರಿಗೆ ಬೆಳೆವಿಮೆ ಮಾಡಿಕೊಡಲಾಗಿತ್ತು. ಪ್ರಸ್ತುತ…
ಸರಗೂರು: ಗ್ರಾಮದಲ್ಲಿ ‘ಗ್ರಾಮ ಅರಣ್ಯ ಹಕ್ಕು ಸಮಿತಿ’ ರಚಿಸಿ ಅಲ್ಲಿನ ಜನರನ್ನು ಅರಣ್ಯವಾಸಿಗಳೆಂದು ಪರಿಗಣಿಸಿ ಸರಕಾರದಿಂದ ಸಿಗುವ ಅರಣ್ಯವಾಸಿಗಳ ಹಕ್ಕು ರಕ್ಷಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಹೇಶ್ ಸೂಚನೆ ನೀಡಿದರು. ತಾಲೂಕಿನ ಹಂಚೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಸ್ಕೂರು ಹಾಡಿಯಲ್ಲಿ ಶುಕ್ರವಾರದಂದು ಅರಣ್ಯ ಹಕ್ಕುಗಳ ಹಾಗೂ ಮಹಿಳಾ ಗ್ರಾಮ ಸಭೆ ಹಮ್ಮಿಕೊಂಡಿದ್ದು ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಘನ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನವೆಂಬರ್ ತಿಂಗಳ ಕೆರೆ ಹಾಡಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆರ್ಜಿಗಳನ್ನ ಅರಣ್ಯವಾಸಿಗಳ ಆದಿವಾಸಿಗಳ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಾಡಿಕೊಂಡು ಬರುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಲವೇ ದಿನಗಳಲ್ಲಿ 700 ಕುಟುಂಬಗಳಿಗೆ ವೈಯಕ್ತಿಕವಾಗಿ ಅರಣ್ಯ ಹಕ್ಕು ಪತ್ರ ವಿತರಣೆ ಮಾಡಲಾಗುತ್ತದೆ. 234 ಕುಟುಂಬಗಳಿಗೆ ಉಪವಿಭಾಗಾಧಿಕಾರಿಗಳಿಂದ ಅನುಮೋದನೆಗೊಂಡು ಜಿಲ್ಲಾಧಿಕಾರಿ…
ಸರಗೂರು: ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ರವರಿಗೆ ಸಚಿವ ಸಂಪುಟದಲ್ಲಿ ಉನ್ನತ ಮಟ್ಟದ ಸ್ಥಾನ ನೀಡುವಂತೆ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಒತ್ತಾಯಿಸಿದರು. ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ರವರಿಗೆ ಸಚಿವ ಸಂಪುಟ ವಿಸ್ತರಣೆ ಸಭೆಯಲ್ಲಿ ಉನ್ನತ ಮಟ್ಟದ ಸಚಿವ ಸ್ಥಾನ ನೀಡಲಿ ಎಂದು ಪಟ್ಟಣ ಆರ್ಯ ಈಡಿಗ ಸಮಾಜದವರು ಸಂತೆ ಮಾಸ್ತಮ್ಮ ಹಾಗೂ ರಾಮಮಂದಿರ ದೇವಸ್ಥಾನದಲ್ಲಿ ಶುಕ್ರವಾರ ದಂದು ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. ರಾಜ್ಯದಲ್ಲಿ ನಮ್ಮ ಸಮಾಜದ ನಾಯಕರು ಬಸವರಾಜು, ಜನಾರ್ಧನ್ ಪೂಜಾರು, ದಿ.ಎಸ್.ಬಂಗಾರಪ್ಪ, ಕಾಗೋಡು ತಿಮ್ಮಪ್ಪ, ಆರ್.ಎನ್.ಜಾಲಪ್ಪ, ಕುಮಾರ್ ಬಂಗಾರಪ್ಪ ಇವರು ಎಲ್ಲಾರೂ ರಾಜ್ಯದಲ್ಲಿ ರಾಜಕೀಯ ಮಾಡಿಕೊಂಡು ಬಂದರು. ಅಲ್ಲಿಂದ ಇಲ್ಲಿಯವರೆಗೆ ಯಾವುದೇ ನಮ್ಮ ಸಮಾಜದ ನಾಯಕರಿಗೆ ಸಚಿವ ಸ್ಥಾನ ನೀಡಿಲ್ಲ.ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಬಿ.ಕೆ.ಹರಿಪ್ರಸಾದ್ ರವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು. ಅವರು ಎಲ್ಲಾ ಸಮುದಾಯಗಳ ಜೊತೆ ಕೈಜೋಡಿಸಿಕೊಂಡು ಅಧಿಕಾರದ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕೆಲಸ…
ತುಮಕೂರು: ಗೊಲನ ಎಂಟರ್ಪ್ರೈಸಸ್ -– ತುಮಕೂರಿನ ಹೆಸರಾಂತ ಮಾನವ ಸಂಪತ್ತು ಪೂರೈಕೆ ಸಂಸ್ಥೆ, ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಖ್ಯಾತ ಕಂಪನಿಗೆ ಗುತ್ತಿಗೆ ಆಧಾರಿತ ಕೆಲಸಕ್ಕಾಗಿ ಯುವಕರನ್ನು ಆಹ್ವಾನಿಸುತ್ತಿದೆ. ಕೆಲಸದ ಶಿಫ್ಟ್ಗಳು: ಶಿಫ್ಟ್ 1: ಬೆಳಗ್ಗೆ 6:00 –- ಮಧ್ಯಾಹ್ನ 2:00 ಶಿಫ್ಟ್ 2: ಮಧ್ಯಾಹ್ನ 2:00 -– ರಾತ್ರಿ 10:00 ಶಿಫ್ಟ್ 3: ರಾತ್ರಿ 10:00 -– ಬೆಳಗ್ಗೆ 6:00 ಜನರಲ್ ಶಿಫ್ಟ್: ಬೆಳಗ್ಗೆ 8:30 -– ಸಂಜೆ 5:00 ಅರ್ಹತೆ: ✔ ಶಿಫ್ಟ್ ಆಧಾರಿತ ಕೆಲಸಕ್ಕೆ ಸಿದ್ಧತೆ ✔ ಅನುಭವ ಅಗತ್ಯವಿಲ್ಲ -– ಹೊಸಬರಿಗೆ ಉತ್ತಮ ಅವಕಾಶ! ಸೌಲಭ್ಯಗಳು: ✅ ಇಎಸ್ಐ (ESI) ✅ ಇಪಿಎಫ್ (EPF) ✅ ವಾರ್ಷಿಕ ಬೋನಸ್ ✅ ಕರ್ನಾಟಕ ಸರ್ಕಾರದ ಕನಿಷ್ಠ ವೇತನದ ಅನುಸಾರ ವೇತನ ಕೆಲಸದ ಸ್ಥಳ: ಅಂತರಸನಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು ವಿವರಗಳಿಗೆ ಸಂಪರ್ಕಿಸಿ: ನಟರಾಜು ಜಿ.ಎಲ್. 📱 97417 17700 ಮಣಿಕಂಠ: 97393 11269 ಇಮೇಲ್: golanaenterprises2016@gmail.com ವೆಬ್ ಸೈಟ್…
ತುಮಕೂರು: ಹನಿ ನಿಧಿ ಸಾಹಿತ್ಯ ಸಾಂಸ್ಕೃತಿಕ ಕಲಾ ಟ್ರಸ್ಟ್(ರಿ) ಹನಿ ನಿಧಿ ಪ್ರಕಾಶನ ಹಾಗೂ ಶ್ರೀಗಂಧ ಸಾಹಿತ್ಯ ಸಾಂಸ್ಕೃತಿಕ ಕಲಾ ಬಳಗ ತುಮಕೂರು ರಾಜ್ಯ ಕರ್ನಾಟಕ ಇದರ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ, ರಾಜ್ಯದ ಮಟ್ಟದ ಕವಿಗೋಷ್ಠಿ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ, ಪುಸ್ತಕ ಬಿಡುಗಡೆ ಹಾಗೂ ಸಾಹಿತ್ಯ ನಿಧಿ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ತುಮಕೂರಿನ ಕನ್ನಡ ಭವನದಲ್ಲಿ ಜೂನ್ 29ರಂದು ನಡೆಯಲಿದೆ. ಕವಿಗೋಷ್ಠಿಯಲ್ಲಿ ಭಾಗವಹಿಸುವವರು ಮತ್ತು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಹೆಚ್ಚಿನ ಮಾಹಿತಿಗಳಿಗಾಗಿ 7483146697 ಸಂಪರ್ಕಿಸಬಹುದಾಗಿದೆ. ಅರ್ಜಿಸಲ್ಲಿಸಲು 15—06—2025 ಕೊನೆಯ ದಿನಾಂಕವಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ, ಸಂಪಾದಕ ಹನಿನಿಧಿ ಸಾಹಿತ್ಯ ಸಾಂಸ್ಕೃತಿಕ ಕಲಾ ಟ್ರಸ್ಟ್ ಅಂಜನ್ ಕುಮಾರ್ ಪಿ.ಆರ್., ರಾಜ್ಯಾಧ್ಯಕ್ಷರಾದ ಭರತ್ ಕೆ.ಆರ್., ನಿರ್ದೇಶಕರಾದ ಡಾ.ಮಲ್ಲೇಕಾವು ಮುಕುಂದರಾಜು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಮರಾಠ ಮತ್ತು ಇದರ ಉಪಜಾತಿಗೆ ಸೇರಿದ ಜನರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಶ್ರೀ ಶಹಾಜಿರಾಜೇ ಸಮೃದ್ಧಿ, ಬೀಜಾವು–ಜಲಭಾಗ್ಯ(ಗಂಗಾಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ(ಹೊಸತು), ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ, ಮರಾಠ ಮಿಲ್ಟ್ರಿ ಹೋಟೆಲ್, ಸ್ವಯಂ ಉದ್ಯೋಗ ಸಾಲ( ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಸ್ವಾವಲಂಬಿ ಸಾರಥಿ ಹಾಗೂ ಸ್ವಾತಂತ್ರ ಅಮೃತ ಮಹೋತ್ಸವ ಮುನ್ನಡೆ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಜಾಲತಾಣ https://www.kaushalkar.com ಹಾಗೂ ಉಳಿದ ಯೋಜನೆಗಳ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಜುಲೈ 4ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ https://kmcdc.karnataka.gov.in ಅಥವಾ ನಿಗಮದ ಸಹಾಯವಾಣಿ 8867537799, 080-29903994 ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ವಾ.ಸಂಖ್ಯೆ 0816-2005008ನ್ನು ಸಂಪರ್ಕಿಸಬಹುದಾಗಿದೆ…
ತಿಪಟೂರು: ಕರ್ನಾಟಕದ ಪ್ರತಿಷ್ಠಿತ ತಾಂತ್ರಿಕ ಮಹಾವಿದ್ಯಾಲಯಗಳಲ್ಲಿ ಒಂದಾದ ತಿಪಟೂರು ಕಲ್ಪತರು ತಾಂತ್ರಿಕ ಮಹಾವಿದ್ಯಾಲಯಕ್ಕೆ ನ್ಯಾಷನಲ್ ಬೋರ್ಡ್ ಅಫ್ ಅಕ್ರಿಡೇಷನ್ ಕಮಿಟಿ ಮಾನ್ಯತೆ ದೊರೆತ್ತಿದ್ದು, ಕಲ್ಪತರು ತಾಂತ್ರಿಕ ಮಹಾವಿದ್ಯಾಲಯಕ್ಕೆ ಎಪ್ರಿಲ್ 26 ರಂದು ಭೇಟಿ ನೀಡಿದ ಎನ್.ಬಿ.ಎ ತಾಂತ್ರಿಕ ಪರಿಣಿತರ ತಂಡ ಭೇಟಿ ಕಾಲೇಜಿನ ವ್ಯವಸ್ಥೆಗಳು, ಮೂಲಸೌಕರ್ಯ, ವಿದ್ಯಾರ್ಥಿಗಳಿಗೆ ಪಠ್ಯಪೂರಕ ಹಾಗೂ ಪಠ್ಯೇತರ ಸೌಕರ್ಯಗಳು, ಪರಿಶೀಲನೆ ನಡೆಸಿದ್ದು, ಕಮಿಟಿಯ ಶಿಫಾರಸಿನಂತೆ 2025ರಿಂದ 2028ರ ಶೈಕ್ಷಣಿಕ ಸಾಲಿನವರೆಗೆ ಮಾನ್ಯತೆ ನೀಡಿ, ಕಲ್ಪತರು ಇಂಜಿನಿಯರಿಂಗ್ ಕಾಲೇಜು ಸೌಕರ್ಯಗಳು ಹಾಗೂ ಶೈಕ್ಷಣಿಕ ಗುಣಮಟ್ಟದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದೆ. ತಿಪಟೂರು ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾನಿಲಯ ಆಡಳಿತ ಭವನದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಲ್ಪತರು ವಿದ್ಯಾಸಂಸ್ಥೆ ಖಜಾಂಚಿ ಶಿವಪ್ರಸಾದ್, ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ ಕಲ್ಪತರು ನಾಡಿನ ಹೆಮ್ಮೆಯ ಕಾಲೇಜು, ನಮ್ಮ ಕಾಲೇಜು ಗ್ರಾಮೀಣ ಭಾಗದ ಸಾವಿರಾರು ಜನ ವಿದ್ಯಾರ್ಥಿಗಳ ಬಾಳಿನ ಆಶಾಕಿರಣವಾಗಿದ್ದು, ನಮ್ಮ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಸಾವಿರಾರು ವಿದ್ಯಾರ್ಥಿಗಳು ದೇಶ ವಿದೇಶಗಳ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆದು,…
ಕೊರಟಗೆರೆ: ತಾಲೂಕಿನ ಜೆಟ್ಟಿ ಅಗ್ರಹಾರದ ಕಾವರಗಲ್ ಮೀಸಲು ಅರಣ್ಯ ಪ್ರದೇಶಕ್ಕೆ ಗಣಿ ಮಾಫಿಯಾ ಲಗ್ಗೆಯಿಟ್ಟಿದ್ದು, ಕಲ್ಲು ಕ್ವಾರೆಯ ಬ್ಲಾಸ್ಟಿಂಗ್ ಸದ್ದಿನ ಆರ್ಭಟಕ್ಕೆ ಪ್ರಕೃತಿ ನಡುಗಿದೆ. ಪ್ರಾಣಿಗಳು ಭಯಭೀತಿಯಿಂದ ಊರುಗಳಿಗೆ ನುಗ್ಗುತ್ತಿದೆ ಎನ್ನುವ ಗಂಭೀರ ಆರೋಪಗಳು ಕೇಳಿ ಬಂದಿವೆ. ಕೊರಟಗೆರೆ ತಾಲೂಕು ಜೆಟ್ಟಿ ಅಗ್ರಹಾರದ ಕಾವರಗಲ್ ಮೀಸಲು ಅರಣ್ಯ ಪ್ರದೇಶದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗುಬ್ಬಿ ಮೂಲದ ಚಂದ್ರಶೇಖರ್ (ಗ್ಯಾಸ್ ಬಾಬು) ಎಂಬಾತ ಕಲ್ಲು ಕ್ವಾರೆ ಗುತ್ತಿಗೆ ಪಡೆದುಕೊಂಡಿದ್ದು, ಗಣಿ ಇಲಾಖೆ ಜೆಟ್ಟಿ ಅಗ್ರಹಾರ ಸರ್ವೆ ನಂ.35 ರಲ್ಲಿ 4 ಎಕರೇ 38 ಗುಂಟೆ ಕ್ವಾರೇ ಮಂಜೂರು ಮಾಡಿದೆ. ಭೂಮಿಯಿಂದ ಬರೋಬ್ಬರಿ 2 ಸಾವಿರ ಅಡಿ ಎತ್ತರದ ಕಾವರಗಲ್ ಬೆಟ್ಟದ ಮೇಲೆ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಭಾರೀ ಸ್ಫೋಟದ ಶಬ್ದಗಳಿಗೆ ಇಲ್ಲಿನ ಗ್ರಾಮಸ್ಥರು, ಮೂಕ ಜೀವಿಗಳು ಬೆಚ್ಚಿ ಬೀಳುತ್ತಿವೆ. ಗಣಿ ನಿಯಮಗಳನ್ನು ಉಲ್ಲಂಘಿಸಿ ಇಲ್ಲಿ ಗಣಿಗಾರಿಕೆ ನಡೆಸಲಾಗುತ್ತಿತ್ತು. ಕಾವರಗಲ್ ಅರಣ್ಯ ಪ್ರದೇಶದಲ್ಲಿ ಕರಡಿ, ನವಿಲು, ಕಾಡುಕಿರುಬ, ಜಿಂಕೆ, ಮೊಲ ಸೇರಿದಂತೆ…
ದೇವನಹಳ್ಳಿ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಕೋಲಾರ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆಂಧ್ರ ಸಾರಿಗೆ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ ಈ ಅಪಘಾತ ನಡೆದಿದೆ. ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಹಾಗೂ 1 ವರ್ಷದ ಮಗು ಸಾವಿಗೀಡಾಗಿದವರು ಎಂದು ಗುರುತಿಸಲಾಗಿದೆ. 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಬಸ್ ಓವರ್ ಟೇಕ್ ಮಾಡುವಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ದುರಂತ ಸಂಭವಿಸಿರುವುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ಜಾತಿ ಗಣತಿಯಲ್ಲಿ ಮರುಸಮೀಕ್ಷೆಯಿಂದ ಗೊಂದಲಗಳು ನಿವಾರಣೆಯಾಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿಯವರು ಗುರುವಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಇರುವ ಜಾತಿ ಗಣತಿ ವರದಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಮರು ಸಮೀಕ್ಷೆಯಿಂದ ಈ ಗೊಂದಲಗಳು ನಿವಾರಣೆಯಾಗುವ ನಿರೀಕ್ಷೆಗಳಿವೆ ಎಂದು ಹೇಳಿದರು. ವರದಿ ಅವೈಜ್ಞಾನಿಕ, ಹಳೆಯ ವರದಿ ಎಂದ ದೂರುಗಳು ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್, ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಲವು ಉನ್ನತ ನಾಯಕರು ಮರು ಸಮೀಕ್ಷೆಗೆ ನಿರ್ಧರಿಸಿದ್ದಾರೆ. ನಾವು ನಮ್ಮ ನಾವು ಅಭಿಪ್ರಾಯ ಕೊಟ್ಟಿದ್ದೇವೆ. ಯಾರಿಗೂ ತೊಂದರೆಯಾಗಬಾರದು. ಈಗಿನ ವರದಿ ಕರೆಕ್ಟ್ ಆಗಿದೆ. ಗೊಂದಲ ಇದ್ದರೆ ಪರಿಶೀಲನೆ ಮಾಡಬಹುದು. ಮರು ಸರ್ವೇ ಇಲ್ಲ, ಕರೆಕ್ಷನ್ ಅಷ್ಟೇ. ಯಾವುದನ್ನೇ ಮಾಡಲಿ, ತೊಂದರೆ ಏನಿದೆ. ಎಲ್ಲದಕ್ಕೂ ವಿರೋಧ, ಪರ ಇದ್ದೇ ಇರುತ್ತದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…