Author: admin

ಬೀದರ್ : ಕರ್ನಾಟಕದಲ್ಲಿ ಕೋವಿಡ್–19 ಪ್ರಕರಣಗಳು ಕ್ರಮೇಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರೋಗ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಮೇಲ್ವಿಚಾರಣೆ ಮತ್ತು ನಿರ್ವಹಣೆಯನ್ನು ಮುಂದುವರೆಸಿದ್ದು, ಸಾರ್ವಜನಿಕರು ಭಯಭೀತರಾಗದೆ, ಜಾಗರೂಕರಾಗಿದ್ದುಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಬದೋಲೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕರು ಭಯಭೀತರಾಗದಂತೆ ಕೆಲಸ ನಿರ್ವಹಿಸುತ್ತಿದೆ. ಯಾವುದೇ ಹೊಸ ರೂಪಾಂತರಗಳು ಅಥವಾ ಸಂಭಾವ್ಯಉಲ್ಬಣ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನಿಯಂತ್ರಿಸಲು ಸಾರ್ವಜನಿಕರ ನಿರಂತರ ಸಹಕಾರವೂ ಅತ್ಯಗತ್ಯವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ಸಾರ್ವಜನಿಕರಿಗೆ ಸಲಹೆಗಳು : ಜಾಗರೂಕರಾಗಿರಿ, ಆತಂಕಪಡಬೇಡಿ, ಅಧಿಕೃತ ಮೂಲಗಳ ಮೂಲಕ ಮಾಹಿತಿ ಪಡೆಯಬೇಕು. ಆರೋಗ್ಯ ಸಿಬ್ಬಂದಿಯೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಬೇಕು. ಅಗತ್ಯ ಅನುಸರಣೆಗಾಗಿ ವಿದೇಶಗಳಿಂದ ಬರುವ ಪ್ರಯಾಣಿಕರ ಬಗ್ಗೆ ಆರೋಗ್ಯ ಅಧಿಕಾರಿಗಳಿಗೆ ತಿಳಿಸಬೇಕು. ಜನದಟ್ಟಣೆಯ ಸ್ಥಳಗಳಲ್ಲಿ ಮಾಸ್ಕ್ ಧರಿಸಿ, ದೈಹಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ ಜ್ವರ, ಕೆಮ್ಮು, ಎದೆನೋವು…

Read More

ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ 10 ಹೆಚ್’ಪಿವರೆಗೆ ಉಚಿತ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಕೆಜೆ.ಜಾರ್ಜ್ ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಸೆಸ್ಕ್ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೃಷಿ ಪಂಪ್ ಸೆಟ್ ಗಳ ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡುತ್ತಿರುವುದರಿಂದ ಅವುಗಳಿಗೆ ಉಚಿತ ವಿದ್ಯುತ್ ಸ್ಥಗಿತಗೊಳ್ಳಲಿದೆ ಎಂಬ ಊಹಾಪೋಹಗಳು ಹಬ್ಬುತ್ತಿವೆ. ರೈತರಿಗೆ ಎಷ್ಟು ವಿದ್ಯುತ್ ಪೂರೈಸಲಾಗುತ್ತಿದೆ ಮತ್ತು ಎಷ್ಟು ಸಂಪರ್ಕಗಳಿವೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಕೃಷಿ ಪಂಪ್ ಸೆಟ್ ಗಳಿಗೆ 10 ಹೆಚ್’ಪಿ ವರೆಗೆ ಉಚಿತ ವಿದ್ಯುತ್ ಮುಂದುವರೆಯುವುದರ ಜೊತೆಗೆ 7 ಗಂಟೆ ಸಮರ್ಪಕ ವಿದ್ಯುತ್ ಕೂಡ ಪೂರೈಕೆಯಾಗಲಿದೆ. ಇದರಲ್ಲಿ ಅನುಮಾನ ಬೇಡ. ಮುಖ್ಯಮಂತ್ರಿಗಳು ಇತ್ತೀಚೆಗೆ ಹಾಡಿಗಳಿಗೆ ಭೇಟಿ ನೀಡಿದ ಬಳಿಕ ಅವುಗಳಿಗೆ ವಿದ್ಯುತ್ ಪೂರೈಸಲು ಅಗತ್ಯ ಕ್ರಮ ಕೈಗೊಂಡಿದ್ದು, ಅಗತ್ಯ ಮೂಲಸೌಕರ್ಯ ನಿರ್ಮಿಸಲಾಗಿದೆ. 600 ಹೆಚ್ಚು ಹಾಡಿ…

Read More

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇಂದು ಗುರುವಾರ ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಘಟನೆ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿಕೊಂಡಿದ್ದು, ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಯಲಿದ್ದು, ಸರ್ಕಾರ ಸಂಪೂರ್ಣ ವಿವರ ನೀಡಬೇಕಿದೆ. ನಿನ್ನೆ ವಿಧಾನ ಸೌಧ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯುವಾಗ ಹೈಕೋರ್ಟ್ ಕಟ್ಟಡದ ಮೇಲೆಯೂ ಜನರು ಏರಿ ವೀಕ್ಷಿಸುತ್ತಿದ್ದರು. ಈ ಸಂದರ್ಭದ ಫೋಟೋ –ವಿಡಿಯೊಗಳು ಸಾಕಷ್ಟು ಹರಿದಾಡಿದ್ದು ಭದ್ರತಾ ಲೋಪವಾಗಿದ್ದು ಸರ್ಕಾರದಿಂದ ಹೈಕೋರ್ಟ್ ವಿವರ ಕೇಳಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಐಪಿಎಲ್ (IPL) ಟ್ರೋಪಿ ಎತ್ತಿಹಿಡಿದ ಸಂಭ್ರಮವನ್ನು ಬೆಂಗಳೂರಿನಲ್ಲಿ ನಿನ್ನೆ ಆಚರಿಸಲಾಗಿದ್ದು, ಈ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ಕಾಲ್ತುಳಿತದಿಂದಾಗಿ 11 ಮಂದಿ ಸಾವನ್ನಪ್ಪಿ, 30ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿಯ ವಿವರ ಹೀಗಿದೆ: ಭೂಮಿಕ್, 20 ವರ್ಷ (ನೆಲಮಂಗಲ) ಸಹನ 19 ವರ್ಷ (ಕೋಲಾರ) ಪೂರ್ಣಚಂದ, 32 ವರ್ಷ (ಮಂಡ್ಯ) ಚಿನ್ಮಯಿ, 19 ವರ್ಷ ದಿವ್ಯಾಂಶಿ, 13 ವರ್ಷ ಶ್ರವಣ್, 20 ವರ್ಷ (ಚಿಕ್ಕಬಳ್ಳಾಪುರ) ದೇವಿ, 29 ವರ್ಷ ಶಿವಲಿಂಗ್, 17 ವರ್ಷ ಮನೋಜ್, 33 ವರ್ಷ (ತುಮಕೂರು) ಅಕ್ಷತಾ, (ಮಂಗಳೂರು) ಮತ್ತೊಬ್ಬರ ಹೆಸರು ಪತ್ತೆಯಾಗಿಲ್ಲ, 20 ವರ್ಷ ವೈದೇಹಿ ಆಸ್ಪತ್ರೆ ಮೃತರ ಪೈಕಿ ಶ್ರವಣ್, ಭೂಮಿಕ್, ಮನೋಜ್, ಚಿನ್ಮಯಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಮಧ್ಯರಾತ್ರಿಯೇ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ ಮೃತದೇಹಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತುಮಕೂರು: ಹೇಮಾವತಿ ಲಿಂಕ್ ಕಾಮಗಾರಿ ಯೋಜನೆ ವಿರೋಧಿಸಿ ನಡೆದ ಹೋರಾಟವು ಸ್ವಾರ್ಥಕ್ಕಾಗಿ ನಡೆದಿಲ್ಲ ಬದಲಾಗಿ ರೈತರ ನೀರಿಗಾಗಿ ಹೋರಾಟ ಮಾಡಿದ್ದೇವೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯದರು ಧರಣಿ ನಡೆಸುತ್ತಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಯೋಜನೆ ಅವೈಜ್ಞಾನಿಕವಾಗಿದೆ ಎಂದು ಹೋರಾಟ ಮಾಡಿದ್ದೇವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು. ಆದರೆ ಈ ಹೋರಾಟದಲ್ಲಿ ಭಾಗವಹಿಸಿದ್ದ ಸ್ವಾಮೀಜಿಗಳು ಹಾಗೂ ರೈತರ ಮೇಲೆ ಪ್ರಕರಣವನ್ನು ದಾಖಲು ಮಾಡಿದ್ದಾರೆ. ಅಂದು ಶಾಂತ ರೀತಿಯಿಂದ ಹೋರಾಟ ಮಾಡಿದ್ದೆವು ಎಂದು ಹೇಳಿದ್ದಾರೆ. ಯಾವುದೇ ಸರ್ಕಾರಿ ಆಸ್ತಿಪಾಸ್ತಿ ನಾಶಪಡಿಸಿಲ್ಲ. ಆದರೂ ರೈತರನ್ನು ಹಾಗೂ ಚಳುವಳಿಯನ್ನು ಹತ್ತಿಕ್ಕಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ರೀತಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಮ್ಮ ಹಕ್ಕನ್ನು ಹಾಗೂ ಹೋರಾಟವನ್ನು ದಮನ ಮಾಡಬೇಕೆಂಬ ಉದ್ದೇಶವನ್ನು ಹೊಂದಿದ್ದಾರೆ. ರಾಮನಗರಕ್ಕೆ ಅವೈಜ್ಞಾನಿಕವಾಗಿ ಹೇಮಾವತಿ ನೀರನ್ನು ತೆಗೆದುಕೊಂಡು ಹೋಗುತ್ತಿರುವುದಕ್ಕೆ…

Read More

ತುಮಕೂರು: ಹೇಮಾವತಿ ಲಿಂಕ್ ಕಾಮಗಾರಿ ಯೋಜನೆ ವಿರೋಧಿಸಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಹೋರಾಟಗಾರರನ್ನು ಬಂಧಿಸಬಾರದು, ಅಲ್ಲದೆ ಈಗಾಗಲೇ ಸ್ವಾಮೀಜಿಗಳ ಮೇಲೆ ದಾಖಲಾಗಿರುವ FIR ಅನ್ನು ವಾಪಸ್ ಪಡೆಯಬೇಕು ಈ ಕುರಿತಂತೆ ಸರ್ಕಾರದೊಂದಿಗೆ ಮಾತನಾಡುವುದಾಗಿ ಕೇಂದ್ರ ವಲಯ ಐಜಿಪಿ ಲಾಬು ರಾಮ್ ಭರವಸೆ ನೀಡಿದ್ದಾರೆ ಎಂದು ತುರುವೇಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದ್ದಾರೆ. ಅಲ್ಲದೆ ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ನಡೆಸಲಾಗುತ್ತಿರುವ ಧರಣಿಯನ್ನು ಮುಂದೂಡಿದ್ದೇವೆ ಎಂದು ತಿಳಿಸಿದ್ದಾರೆ.ಧರಣಿಯಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಮತ್ತಿತರರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————

Read More

ತುಮಕೂರು: ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಕಚೇರಿಗೆ ಬಿಜೆಪಿ ಮುಖಂಡರು ಹಾಗೂ ಹೋರಾಟಗಾರರು ಮುತ್ತಿಗೆ ಹಾಕಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ತುಮಕೂರು ನಗರದ ಬಿಎಚ್ ರಸ್ತೆಯಲ್ಲಿ ಸಂಪೂರ್ಣ ವಾಹನ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲು 10 ಮಂದಿ ಹೋರಾಟಗಾರರು ಅದರಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ, ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ಅವರುಗಳು ಆಗಮಿಸಿದರು. ಹೇಮಾವತಿ ಲಿಂಕ್ ಕಾಮಗಾರಿ ಯೋಜನೆ ವಿರೋಧಿಸಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಸ್ವಾಮೀಜಿಗಳು ಹಾಗೂ ರೈತರ ಮೇಲೆ ದಾಖಲಿಸಲಾಗಿರುವ ಎಫ್ ಫೈಯರ್ ಗಳನ್ನು ವೃದ್ಧಿಪಡಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಅಲ್ಲದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ದಿಢೀರ್ ಧರಣಿ ನಡೆಸಲು ಆರಂಭಿಸಿದರು. ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಲಾಬುರಾಮ್ ಅವರು ಭೇಟಿ ನೀಡಿ ಧರಣಿ ನಿರತರ ಮನವೊಲಿಸಿದರು. ಹೇಮಾವತಿ ಲಿಂಕ್ ಕಾಮಗಾರಿ ಯೋಜನೆ…

Read More

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಮೇ 22 ರ ನಂತರ ಈ ದಾಖಲೆ ಸಾಧ್ಯವಾಗಿದೆ. ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್ ಗೆ ಸಾಧ್ಯವಾಗಿದೆ ಎಂದು ಹೇಳಲಾಗಿದೆ. ಇದು ಕಳೆದ ವರ್ಷ ದಿನವೊಂದರಲ್ಲಿ ಸಂಗ್ರಹಿಸಿದ ಗರಿಷ್ಠ ಹಾಲಿಗಿಂತಲೂ ಹೆಚ್ಚು. ಕಳೆದ ವರ್ಷ ಜೂನ್ 28 ರಂದು 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗಿತ್ತು. ಆನಂತರ ದೈನಂದಿನ ಸರಾಸರಿ ಸಂಗ್ರಹ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ಕಂಡಿತ್ತು. ಈ ಮೂಲಕ, ಹಾಲು ಉತ್ಪಾದಿಸುವ ಪ್ರಮುಖ ರಾಜ್ಯವಾಗಿ ಕರ್ನಾಟಕ ತನ್ನ ಛಾಪು ಮುಂದುವರಿಸಿದೆ ಎಂದು ಕೆಎಂಎಫ್ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW…

Read More

ಬೆಂಗಳೂರು: ಅಹಮದಾಬಾದ್ ನಲ್ಲಿ ನಡೆದ ಐಪಿಎಲ್ ಫೈನಲ್ ನಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ ಭರ್ಜರಿ ಜಯ ಗಳಿಸಿದ್ದು, ಇದರ ಬೆನ್ನಲ್ಲೇ ಆರ್ ಸಿಬಿ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿ ಹಲವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಗದಗ ಜಿಲ್ಲಾ ಪ್ರವಾಸ ಮುಗಿಸಿ ಬರುತ್ತಿದ್ದಂತೆ ಬೆಂಗಳೂರು ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಟ್ಯಾಬ್ ನಲ್ಲೇ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿದರು. ಆರ್ ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, Rrrrrrrrr…. Cccccccc…. Bbbbbbbbb….ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್ ಸಿಬಿ ತಂಡಕ್ಕೆ ಅಭಿನಂದನೆಗಳು ಎಂದು ಹೇಳಿದ್ದಾರೆ. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್ ಸಿಬಿಯ ಹುಡುಗರು ನನಸಾಗಿಸಿದ್ದಾರೆ. ಆರ್ ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ…

Read More

ಬೆಂಗಳೂರು: ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯನ್ನು ಕೂಡಲೇ ನಿಲ್ಲಿಸಿ, ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯಿಂದ ತುಮಕೂರು ಭಾಗದ ರೈತರಿಗೆ ಅನ್ಯಾಯ ಆಗುತ್ತಿದ್ದು, ತಕ್ಷಣವೇ ಈ ಯೋಜನೆಯ ಕಾಮಗಾರಿಯನ್ನು ನಿಲ್ಲಿಸುವಂತೆ ಸಾಕಷ್ಟು ಭಾರಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದರೂ, ಅವರು ಈ ಬಗ್ಗೆ ಗಮನಹರಿಸದಿರುವುದು ಹಾಗೂ ಈ ಅನ್ಯಾಯದ ವಿರುದ್ಧ ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ವಿಷಾದನೀಯ ಸಂಗತಿ ಎಂದು ಹೇಳಿದ್ದಾರೆ. ಈ ಸಂಬಂಧ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ ಅವರು ಸಹ ಪ್ರಸ್ತುತ ಬೆಳವಣಿಗೆಯ ಬಗ್ಗೆ ದೂರವಾಣಿ ಮುಖಾಂತರ ಚರ್ಚಿಸಿದ್ದು, ಅತ್ಯಂತ ಕಳವಳವನ್ನು…

Read More