Subscribe to Updates
Get the latest creative news from FooBar about art, design and business.
- ದೇಶದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
- LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
- ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
- ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
- ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
- ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
- ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
- ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
Author: admin
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿಯ ಆರೋಪವನ್ನು ಗೃಹ ಸಚಿವ ಜಿ. ಪರಮೇಶ್ವರ್ ತಳ್ಳಿಹಾಕಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ ಎಂದು ಅಂಕಿ–ಅಂಶಗಳ ಸಹಿತ ಸ್ಪಷ್ಟಪಡಿಸಿದರು. ಹಿಂದಿನ ಸರ್ಕಾರಗಳ ಅವಧಿಯ ಅಪರಾಧಗಳ ವಿವರ: ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಿರುಗೇಟು ನೀಡಿದ ಪರಮೇಶ್ವರ್, ಅವರ ಅವಧಿಯಲ್ಲಿ ನಡೆದ ಅಪರಾಧಗಳ ಪಟ್ಟಿಯನ್ನು ನೀಡಿದರು: ಆರ್. ಅಶೋಕ (2011-2013): 4,121 ಕೊಲೆಗಳು, 582 ಮಾದಕ ದ್ರವ್ಯ ಪ್ರಕರಣಗಳು ಹಾಗೂ 995 ಸೈಬರ್ ಅಪರಾಧಗಳು ದಾಖಲಾಗಿದ್ದವು. ಬಸವರಾಜ ಬೊಮ್ಮಾಯಿ (2019-2020): 2,554 ಕೊಲೆಗಳು, 8,317 ಮಾದಕ ದ್ರವ್ಯ ಪ್ರಕರಣಗಳು ಮತ್ತು 19,157 ಸೈಬರ್ ಅಪರಾಧ ಪ್ರಕರಣಗಳು ನಡೆದಿದ್ದವು. ಆರಗ ಜ್ಞಾನೇಂದ್ರ: ಇವರ ಅವಧಿಯಲ್ಲಿ 2,417 ಕೊಲೆಗಳು ಹಾಗೂ 24,486 ಸೈಬರ್ ಅಪರಾಧಗಳು ದಾಖಲಾಗಿದ್ದವು. “ನಾನು…
ಬೆಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ–2026’ ಅನ್ನು ಜಾರಿಗೆ ತರದಂತೆ ತಡೆಯಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರವಾಗಿ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೂದೆಯ ಕುರಿತು ವಿವರಣೆ ನೀಡಿದರು: ರಾಜ್ಯಪಾಲರ ಆಕ್ಷೇಪ: ಈ ಮಸೂದೆಯಲ್ಲಿರುವ ಸುಮಾರು 28 ಅಂಶಗಳನ್ನು ಪ್ರಶ್ನಿಸಿರುವ ರಾಜ್ಯಪಾಲರು, ಬಿಲ್ ಅನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಮಸೂದೆ ನೆನೆಗುದಿಗೆ ಬೀಳುವಂತೆ ಮಾಡಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಸಚಿವರು ದೂರಿದರು. ಮಸೂದೆಯ ಅಗತ್ಯತೆ: ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಹರಡುವ, ಸಮುದಾಯಗಳನ್ನು ದೂಷಿಸುವ ಮತ್ತು ವೈಯಕ್ತಿಕ ನಿಂದನೆ ಮಾಡುವ ಭಾಷಣಗಳಿಗೆ ಕಡಿವಾಣ ಹಾಕಲು ಈ ಕಾಯ್ದೆ ಅನಿವಾರ್ಯವಾಗಿದೆ. ಕೆಲವು ಭಾಗಗಳಲ್ಲಿ ನಡೆದ ಪ್ರಚೋದನಾಕಾರಿ ಭಾಷಣಗಳ ಪರಿಣಾಮ ಏನಾಗಿದೆ ಎಂಬುದು ನಮಗೆ ತಿಳಿದಿದೆ ಎಂದು ಅವರು ಹೇಳಿದರು. ಮುಂದಿನ ನಡೆ: ಒಂದು ವೇಳೆ ರಾಷ್ಟ್ರಪತಿಗಳು…
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ರಾಜ್ಯದ ಆಡಳಿತ ವ್ಯವಸ್ಥೆಯು ಸಂಪೂರ್ಣವಾಗಿ ‘ಕೋಮಾ’ ಸ್ಥಿತಿಗೆ ತಲುಪಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಮಾತನಾಡಿದ ಅವರು, ಸರ್ಕಾರದ ವೈಫಲ್ಯಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು. ಅಶೋಕ್ ಅವರ ಭಾಷಣದ ಪ್ರಮುಖ ಅಂಶಗಳು ಇಲ್ಲಿವೆ: ಸುಳ್ಳಿನ ಭಾಷಣ: ರಾಜ್ಯಪಾಲರ ಭಾಷಣವು ಸತ್ಯಕ್ಕೆ ದೂರವಾಗಿದೆ. ಸರ್ಕಾರವು ರಾಜ್ಯಪಾಲರ ಮೂಲಕ ಸುಳ್ಳನ್ನು ಹೇಳಿಸುತ್ತಿದೆ. ರಾಜ್ಯಪಾಲರ ಭಾಷಣಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ, ಆದರೆ ಸರ್ಕಾರ ಸಿದ್ಧಪಡಿಸಿದ ಭಾಷಣದ ಪಠ್ಯವನ್ನು ವಿರೋಧಿಸುತ್ತೇನೆ ಎಂದು ಅವರು ಹೇಳಿದರು. ಅಧಿಕಾರದ ಜಗಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡುವಿನ ಅಧಿಕಾರದ ಕಿತ್ತಾಟವು ರಾಜ್ಯದ ಆಡಳಿತದ ಮೇಲೆ ಗಂಭೀರ ಪರಿಣಾಮ ಬೀರಿದೆ. ಹೈಕಮಾಂಡ್ ಓಲೈಕೆ ಮತ್ತು ರಾಜಕೀಯ ಪ್ರತಿಷ್ಠೆಗಾಗಿ ಸರ್ಕಾರವು ರಾಜ್ಯದ ಹಿತಾಸಕ್ತಿಯನ್ನು ಬಲಿಕೊಡುತ್ತಿದೆ ಎಂದು ಅಶೋಕ್ ಆರೋಪಿಸಿದರು. ಭ್ರಷ್ಟಾಚಾರದ ಆರೋಪ:…
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಂಡಿಸಿದ್ದ ಬಹುಚರ್ಚಿತ ‘ದ್ವೇಷ ಭಾಷಣ ಮಸೂದೆ’ (Hate Speech Bill) ಈಗ ರಾಷ್ಟ್ರಪತಿಗಳ ಅಂಗಳಕ್ಕೆ ತಲುಪಿದೆ. ಮಸೂದೆಗೆ ಸಹಿ ಹಾಕಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದು, ಈ ನಿರ್ಧಾರಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 29 ಪ್ರಮುಖ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಅಸ್ಪಷ್ಟ ವ್ಯಾಖ್ಯಾನ: ಮಸೂದೆಯಲ್ಲಿ ‘ದ್ವೇಷ ಭಾಷಣ’ ಎಂಬ ಪದದ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಇದರಿಂದ ಧರ್ಮ, ಜಾತಿ ಅಥವಾ ವ್ಯಕ್ತಿಗಳ ಮೇಲೆ ಪೂರ್ವಾಗ್ರಹ ಪೀಡಿತ ಕ್ರಮ ಜರುಗುವ ಸಾಧ್ಯತೆ ಇದೆ ಎಂದು ರಾಜ್ಯಪಾಲರು ಆತಂಕ ವ್ಯಕ್ತಪಡಿಸಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಮಸೂದೆಯು ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬ ಮೂಲಭೂತ ಹಕ್ಕನ್ನು ಕಸಿದುಕೊಳ್ಳುವ ಭೀತಿ ಇದೆ. ಪ್ರಜಾಪ್ರಭುತ್ವದ ಮುಕ್ತ ಚರ್ಚೆಗಳಿಗೆ ಇದು ಅಡ್ಡಿಯಾಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅಸಮರ್ಪಕ ಚರ್ಚೆ: ಉಭಯ ಸದನಗಳಲ್ಲಿ (ವಿಧಾನಸಭೆ ಮತ್ತು ವಿಧಾನ ಪರಿಷತ್ತು) ಈ ಮಸೂದೆಯ ಬಗ್ಗೆ ಸಮರ್ಪಕ ಮತ್ತು ಅರ್ಥಪೂರ್ಣ ಚರ್ಚೆ ನಡೆಯದೆ ಅಂಗೀಕರಿಸಲಾಗಿದೆ ಎಂದು ರಾಜ್ಯಪಾಲರು ಆಕ್ಷೇಪಿಸಿದ್ದಾರೆ. ದುರುಪಯೋಗದ…
ಸರಗೂರು: ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು. ಮಕ್ಕಳ ಬಗ್ಗೆ ಪೋಷಕರಿಗೆ ಇರುವಷ್ಟೇ ಶಿಕ್ಷಕರಿಗೂ ಇರುತ್ತದೆ ಎಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈಸೂರು ಜಿಲ್ಲಾ ನಿರ್ದೇಶಕ ವಿ.ವಿಜಯ ಕುಮಾರ್ ನಾಗನಾಳ ತಿಳಿಸಿದರು. ಪಟ್ಟಣದ ಪಟ್ಟಣ 11 ನೇ ವಾರ್ಡಿನ ವ್ಯಾಪ್ತಿಯ ಪಡುವಲ ವಿರಕ್ತ ಮಠದ ಶ್ರೀ ಕಾಳ ಓಡಯ ಗುರುಗಳ ಮಹಾವಿಧ್ಯಾಪೀಠದಲ್ಲಿ ಶನಿವಾರದಂದು ಗುರುಕುಲೋತ್ಸವ 2026 ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಹೆಚ್ಚಿನ ಸಮಯ ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರುವುದರಿಂದ ಮಕ್ಕಳ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಹೇಳಿದರು. ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳ ಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾರ್ಡ್ಯ ಹಾಗೂ ಆರೋಗ್ಯ ಹೊಂದುವಂತೆ ತಿಳಿಸಿದರು. ರಾಷ್ಟ್ರನಾಯಕರು, ಮಹಾನ್ ವ್ಯಕ್ತಿಗಳ ಸಾಧನೆ ಇಂದಿನ ಯುವ ಜನಾಂಗಕ್ಕೆ ಮಾದರಿಯಾಗಿ ಪ್ರೇರಣೆಯಾಗಬೇಕು’ ಎಂದರು…
ಸರಗೂರು: ಪಟ್ಟಣದಲ್ಲಿ ಶನಿವಾರ ಹಿಂದೂ ಸಮಾಜೋತ್ಸವದ ವತಿಯಿಂದ ಬೃಹತ್ ಶೋಭಾಯಾತ್ರೆ, ವಿಜೃಂಭಣೆಯಿಂದ ನೆರವೇರಿತು. ಸ್ನೇಹಸ್ತ್ರೀ ಸಮಾಜದ ಸಂಸ್ಥಾಪಕ ಅಧ್ಯಕ್ಷೆ ಸುಧಾ ಮೃತ್ಯುಂಜಪ್ಪ ಮಾತನಾಡಿ, ಇವಾಗ ಎಲ್ಲರು ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ. ವಿದೇಶಿಗಳು ನಮ್ಮ ಭಾರತ ಸಂಸ್ಕೃತಿ ಬಗ್ಗೆ ಮಾರು ಹೋಗಿ ನಮ್ಮ ಸಂಸ್ಕೃತಿ ದೊಡ್ಡದು ಎಂದು ತಿಳಿದು ಬರುತ್ತಿದ್ದಾರೆ. ಸಂಘಟನೆ ಮಾಡಬೇಕು, ದೇವಾಲಯಕ್ಕೆ ಹೋಗಬೇಕು, ಉಡುಗೆ ತೊಡುಗೆಯಿಂದ ನಮ್ಮ ಸಂಸ್ಕೃತಿ ಬಗ್ಗೆ ತಿಳಿಸುತ್ತದೆ ಎಂದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಹೊಳ್ಳ ಮಾತನಾಡಿ, ಹಿಂದೂಗಳಾದ ನಮ್ಮಲ್ಲಿ ನಮ್ಮ ದೇಶದ, ನಮ್ಮಗಳ ಶಕ್ತಿ ಸಾಮರ್ಥ್ಯ ಏನು ಎಂಬುದನ್ನು ಪರಿಚಯಿಸಲು ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಎಲ್ಲೆಡೆ ಹಿಂದೂ ಸಮಾಜೋತ್ಸವ ಆಚರಿಲಾಗುತ್ತಿದೆ. ಮೊದಲು ಹಿಂದೂಗಳಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು. ಭಾರತಾಂಬೆ ಏಕತೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವುದು ಹಿಂದೂ ಸಮಾಜೋತ್ಸವದ ಉದ್ದೇಶವಾಗಿದೆ ಎಂದರು. ಹಂಚಿಪುರ…
ಪುತ್ತೂರು: ಸಾಂಸ್ಕೃತಿಕ ಶ್ರೀಮಂತಿಕೆಯ ಕರಾವಳಿಯ ಕ್ರೀಡೆ 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದೇವಮಾರು ಗದ್ದೆಯಲ್ಲಿ ಜ.24 ರಂದು ಹಲವು ವಿಶೇಷಗಳಲ್ಲಿ ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ವಿಶಿಷ್ಟ ಬರಹ ಸಂಶೋಧನೆ ಬೋರ್ಡ ದ್ರಾವಣ ಟೆಕ್ನಿಕ್ ರಾಷ್ಟ್ರೀಯ ಪ್ರಶಸ್ತಿ ಹಲವು ಪ್ರಶಸ್ತಿ ಸನ್ಮಾನ ಸಾಧಕ ಕೋತಿ ಕೋವಿ ಪರಿಸರ ಉಳಿವಿಗಾಗಿ ಸಿಮೆಂಟ್ ಶೀಟಿನಲ್ಲಿ ಜೇನು ಪೆಟ್ಟಿಗೆ ಪ್ರಕೃತಿ ವೈಚಿತ್ರಗಳ ಗಿಡಮೂಲಿಕೆಗಳ ಔಷಧಿಯ ವೈವಿಧ್ಯ ಬರಹಗಳನ್ನು ಸುಂದರ ಲೇಖನಗಳನ್ನು ನಾಡಿನಾದ್ಯಂತ ಪತ್ರಿಕೆಗಳಲ್ಲಿ ಗ್ರಾಮೀಣ ಭಾಗದ ಹವ್ಯಾಸಿ, ವರದಿಗಾರರಾಗಿ ಅಲ್ಲವೇ ವಿನೂತನ ಪರಿಕಲ್ಪನೆ ಯೊಂದಿಗೆ ಸ್ವರ ಸಿಂಚನ ಕಲಾತಂಡ ದ ಸಂಗೀತವನ್ನು ಪ್ರಸರಿಸುವಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಕಲಾ ಪ್ರೋತ್ಸಾಹಕರಾಗಿ ಕಲಾ ನಿರ್ದೇಶಕರಾಗಿದ್ದು ಕೃಷಿ ಸಾಹಿತ್ಯ ಕ್ಷೇತ್ರದಲ್ಲಿ ಕುಮಾರ್ ಪೆರ್ನಾಜೆ ಸಾಧನೆಗೆ ಸಮಾರಂಭದ ಅಧ್ಯಕ್ಷರು ಶಾಸಕರು ಆದ ಅಶೋಕ್ ಕುಮಾರ್ ರೈ ಶಾಲು ಪೇಟ ಹೊದಿಸಿ ಸನ್ಮಾನ ಪತ್ರಗಳನ್ನಿತ್ತು ಸನ್ಮಾನಿಸಿದರು. ಕಂಬಳ…
ಬೆಂಗಳೂರಿನಲ್ಲಿ ಮನೆಗೆಲಸಕ್ಕೆ ಸೇರಿಕೊಂಡು ಮಾಲೀಕರ ವಿಶ್ವಾಸ ಗಳಿಸಿ, ಬರೋಬ್ಬರಿ 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದ ನೇಪಾಳಿ ದಂಪತಿಯ ಪ್ರಕರಣವೊಂದು ಈಗ ಬೆಳಕಿಗೆ ಬಂದಿದೆ. ಈ ಸಂಬಂಧ ಮಾರತಹಳ್ಳಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ದಿನೇಶ್ ಮತ್ತು ಕಮಲ (ಅಥವಾ ಸಲೀನಾ) ಎಂಬ ನಕಲಿ ಹೆಸರುಗಳನ್ನು ಬಳಸಿಕೊಂಡು ಈ ದಂಪತಿ ಮನೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ನಕಲಿ ಗುರುತಿನ ಚೀಟಿಗಳನ್ನು ನೀಡಿ ಮಾಲೀಕರನ್ನು ನಂಬಿಸಿದ್ದ ಇವರು, ಸಂಚು ರೂಪಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಬಂಗಾರವನ್ನು ಹೊತ್ತೊಯ್ದಿದ್ದಾರೆ. ತನಿಖೆಯ ವೇಳೆ ಈ ಜೋಡಿಯು ಈ ಹಿಂದೆ ಮಹಾರಾಷ್ಟ್ರದ ಪುಣೆಯಲ್ಲಿಯೂ ಇದೇ ರೀತಿಯ ಕೃತ್ಯ ಎಸಗಿರುವುದು ತಿಳಿದುಬಂದಿದೆ. ಅಲ್ಲಿನ ನಿವೃತ್ತ ಸರ್ಕಾರಿ ಅಧಿಕಾರಿಯೊಬ್ಬರ ಮನೆಯಲ್ಲಿ ಸುಮಾರು 16 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಕಳವು ಮಾಡಿದ್ದರು. ಪ್ರಸ್ತುತ ಆರೋಪಿಗಳು ನೇಪಾಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ಸೆರೆಹಿಡಿಯಲು ಪೊಲೀಸರು ಮುಂಬೈ, ಕೋಲ್ಕತ್ತಾ ಮತ್ತು ನೇಪಾಳದ ಗಡಿ ಭಾಗಗಳಲ್ಲಿ ಏಳು ವಿಶೇಷ…
ಕೊರಟಗೆರೆ : ಭಾರತ ದೇಶವನ್ನು ಅನೇಕ ರಾಜ ಮನೆತನಗಳು ಆಳ್ವಿಕೆ ಮಾಡಿದ ಇತಿಹಾಸವಿದೆ ಶೋಷಿತ ಸಮುದಾಯದ ಮಹಾರಾಜನೊಬ್ಬ ಮೇಲ್ಜಾತಿಗಳ ನಾಯಕತ್ವವಹಿಸಿ ದಕ್ಷಿಣ ಭಾಗದ ಸಂಜೀವಿನಿ ಕ್ಷೇತ್ರ ಸಿದ್ದರತಪೋ ವನ ಎಂದೇ ಪ್ರಖ್ಯಾತಿ ಹೊಂದಿರುವ ಸಿದ್ದರಬೆಟ್ಟ (ಬೂದಗವಿ) ಸಂಸ್ಥಾನದ ಮಹಾರಾಜರಾಗಿ ಆಳ್ವಿಕೆ ಮಾಡಿರುವ ಮಾದಿಗ ಸಮುದಾಯದ ಮೊದಲ ರಾಜ ಅರಸು ಕುರಂಗರಾಜನ 278ನೇ ಪಟ್ಟಾಭಿಷೇಕ ಮಹೋತ್ಸವವನ್ನು ದಲಿತ ಮುಖಂಡರು ಹಾಗೂ ಚಿಂತಕರು ಅದ್ದೂರಿಯಾಗಿ ಆಚರಣೆ ಮಾಡಿದರು. ಪಟ್ಟಣದ ಎಸ್ ಎಸ್ ಆರ್ ಸರ್ಕಲ್ ನಲ್ಲಿ ದಲಿತ ಚಕ್ರವರ್ತಿ ಕುರಂಗರಾಜನ ಪ್ರತಿಮೆಗೆ ಮಾದಿಗ ಸಮುದಾಯದ ಮುಖಂಡರುಗಳ ನೇತೃತ್ವದಲ್ಲಿ ಮಹಾರಾಜನಿಗೆ ಪುಷ್ಪಾರ್ಚನೆಯನ್ನು ಮಾಡಿ 278ನೇ ಪಟ್ಟಾಭಿಷೇಕವನ್ನು ನೆನಪಿಸಿ ಗೌರವವನ್ನು ಸಲ್ಲಿಸಿದರು. ಖ್ಯಾತ ಪ್ರಾಧ್ಯಾಪಕರು ಹಾಗೂ ಸಾಹಿತಿಗಳಾದ ಡಾ.ಓ.ನಾಗರಾಜ್ ಮಾತನಾಡಿ, ಕುರಂಗರಾಜ ತಳ ಸಮುದಾಯದ ಅಸ್ಮಿತೆಯಾಗಿದ್ದು ಇವರ ಈ ಪಟ್ಟಾಭಿಷೇಕದ ಮಹೋತ್ಸವ ಇತಿಹಾಸದಲ್ಲಿ ದಾಖಲಿಸಲಿದ್ದು, ಕೊರಟಗೆರೆ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾನು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾಗ ಸಿದ್ದರಬೆಟ್ಟಕ್ಕೆ ಚಾರಣ ಕೈಗೊಂಡ ಸಂದರ್ಭದಲ್ಲಿ ಕುರಂಗರಾಜನ ಬಗ್ಗೆ ಕೆಲವು…
ತುರುವೇಕೆರೆ: ತಾಲೂಕಿನ ಕಣಕೂರಿನಲ್ಲಿ ಫೆ.6ರಂದು ನಡೆಯಲಿರುವ ಟಿ.ಟಿ.ಡಿ. ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಕಲ್ಯಾಣೋತ್ಸವದ ರೂಪರೇಷೆ ಕುರಿತು ತಾಲೂಕು ದಂಡಾಧಿಕಾರಿ ಕುಂಞಿ ಅಹಮದ್ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಕಾರ್ಯಕ್ರಮ ಸುಗಮವಾಗಿ ನಡೆಯಲು ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಆಯಾ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಶ್ರೀ ಬಾಲಾಜಿ ಸೇವಾ ಟ್ರಸ್ಟ್ (ರಿ) ಸಂಸ್ಥಾಪಕ ಅಧ್ಯಕ್ಷ ಬಾಲಾಜಿ ಕೆ. ಕುಮಾರ್, ತಾಲೂಕು ಪಂಚಾಯಿತಿ ಇ.ಓ. ಅನಂತರಾಜು, ಸರ್ಕಲ್ ಇನ್ಸ್ಪೆಕ್ಟರ್ ಲೋಹಿತ್, ಡಿ.ಹೆಚ್.ಓ ಡಾ. ರಂಗನಾಥ್, ಅಗ್ನಿಶಾಮಕ ಅಧಿಕಾರಿ ಶ್ರೀನಿವಾಸ್, ಬೆಸ್ಕಾಂ ಎ.ಇ.ಇ ರಾಜಶೇಖರ್, ಪಿಡಬ್ಲ್ಯೂಡಿ ಅಧಿಕಾರಿ ನೂರೂಲ್ಲ, ಕುಡಿಯುವ ನೀರು ಸರಬರಾಜು ಇಲಾಖೆ ಅಬ್ದುಲ್ ಅಶಾಮ್, ರೈತ ಸಂಘದ ಅಧ್ಯಕ್ಷ ಕಣಕೂರು ಚಂದ್ರಶೇಖರ್, ಸಚಿನ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…