Author: admin

ತುಮಕೂರು: ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದಿಂದ ಶುಕ್ರವಾರ ನಗರದ ವಿದ್ಯಾನಗರದಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರ ಹುಟ್ಟುಹಬ್ಬ ಆಚರಿಸಲಾಯಿತು. ಇದರ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ತುಮಕೂರು ತಹಶೀಲ್ದಾರ್ ರಾಜೇಶ್ವರಿ ಅವರು ಉದ್ಘಾಟಿಸಿ, ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಲೇಖನ ಸಾಮಗ್ರಿ ವಿತರಿಸಿದರು. ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷ ಹೆಚ್.ಇ. ನಟರಾಜು ಅಧ್ಯಕ್ಷತೆ ವಹಿಸಿದ್ದರು. ಇದರ ಪ್ರಯುಕ್ತ ಡಾ. ಅಗರವಾಲ್ ಆಸ್ಪತ್ರೆ ಸಹಕಾರದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ನೂರಾರು ಜನ ಕಣ್ಣಿನ ತಪಾಸಣೆ ಮಾಡಿಸಿಕೊಂಡರು. ಸ್ಥಳೀಯ ಮುಖಂಡರಾದ ರಂಗಮಣಿ ಕಾಮೇಶ್, ಇನ್ನರ್ ವೀಲ್ ಸಂಸ್ಥೆ ಅಧ್ಯಕ್ಷೆ ಲಲಿತಮ್ಮ, ಕರ್ನಾಟಕ ಸಂಸ್ಕೃತಿ ವೇದಿಕೆ ಅಧ್ಯಕ್ಷೆ ಸುಧಾ, ಮುಖಂಡರಾದ ಆಂಟೋನಿ, ಪ್ರಕಾಶ್, ರವೀಂದ್ರ, ವಿನುತಾ, ಆಯಿಷಾ ಮೊದಲಾದವರು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ತುರುವೇಕೆರೆ: ಬಸವಣ್ಣನವರ ಆದರ್ಶಗಳನ್ನು ಪಾಲಿಸಿಕೊಂಡು ಸಮಾಜದ ಪಿಡುಗುಗಳನ್ನು ಹೋಗಲಾಡಿಸಲು ಪ್ರಯತ್ನ ಪಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ ಶ್ರೀಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕ, ಮಹಿಳಾ ಮತ್ತು ಯುವ ಘಟಕ ಹಾಗೂ ಎಲ್ಲಾ ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಮಹೋತ್ಸವ ಮತ್ತು ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ ಹಾಗೂ ತಾಲ್ಲೂಕು ಮಹಿಳಾ ಮತ್ತು ಯುವ ಘಟಕಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜು ಮಾತನಾಡಿ, ಹಿಂದಿನ ದಿನಗಳಲ್ಲಿ ಬಸವೇಶ್ವರ ಜಯಂತಿಯನ್ನು ಮನೆಯಲ್ಲಿನ ಎತ್ತುಗಳನ್ನು ಸಿಂಗರಿಸಿ, ಪೂಜಿಸಿ ಬಸವಣ್ಣನ ಜಯಂತಿ ಎಂದು ಆಚರಿಸಲಾಗುತ್ತಿತ್ತು. 1936ರ ನಂತರ ವೈಚಾರಿಕತೆಯಿಂದ ಬಸವೇಶ್ವರ ತತ್ವಗಳನ್ನು ಅರಿತುಕೊಂಡು ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹಿಳಾ ಘಟಕದ ರಾಜ್ಯಧ್ಯಕ್ಷೆ ಮುಕ್ತಾಂಬ ಮಾತನಾಡಿ, 12 ನೇ ಶತಮಾನದಲ್ಲಿಯೇ…

Read More

ಔರಾದ್: ತಾಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಭಕ್ತಿ ಹಾಗೂ ಸಡಗರದಿಂದ ಆಚರಿಸಲಾಯಿತು. ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಾಬಾಸಾಹೇಬರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮದ ಪ್ರತಿಭೆಗಳನ್ನು ಉತ್ತೇಜಿಸುವ ಸಲುವಾಗಿ ವಿಶೇಷ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವರ್ಷದ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಗ್ರಾಮದ ವಿದ್ಯಾರ್ಥಿಗಳನ್ನು ಪಂಡಿತ್ ಸಿಂದೆ ಹಾಗೂ ಗ್ರಾಮ ಆಡಳಿತಾಧಿಕಾರಿ ಜಗನಾಥ್ ಸಿಂದೆ ಅವರು ಸನ್ಮಾನಿಸಿ, ಕಾಣಿಕೆ ನೀಡಿ ಗೌರವಿಸಿದರು. ಸನ್ಮಾನಿತ ವಿದ್ಯಾರ್ಥಿಗಳು: ಪಿಯುಸಿ ವಿಭಾಗ: ದರ್ಶನ್ (ತಂದೆ: ಗುಂಡಪ್ಪ) ಮತ್ತು ನವನಾಥ್ (ತಂದೆ: ಸಂಜು). ಎಸ್ಎಸ್ಎಲ್ಸಿ ವಿಭಾಗ: ಪ್ರಿಯಾಂಕಾ (ತಂದೆ: ದೌಲಪ್ಪ) ಮತ್ತು ಅರುಣ್ (ತಂದೆ: ರಾಜು). ಕಾರ್ಯಕ್ರಮದಲ್ಲಿ ದತ್ತಾತ್ರಿ ಸಿಂದೆ, ರಾಮಪ್ಪ ವಡಗಾವಕರ, ಸಂತೋಷ್ ಮೇತ್ರೆ, ವಿಜಯಕುಮಾರ್ ಮೇತ್ರೆ, ಶರಣಪ್ಪ ಸಾಧುರೆ, ಕಮಲಮ್ಮ ಸಂತಪುರೆ, ರಾಗಿಣಿ,…

Read More

 ರಾಘವೇಂದ್ರ ಅಡಿಗ ಎಚ್ಚೆನ್. ಆರ್ ಅಂಡ್ ಆರ್ ಎಂಟರ್‌ ಪ್ರೈಸಸ್ ಅಡಿಯಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ ಡಿ.ಎನ್.ನಾಗೀರೆಡ್ಡಿ ಕಥೆ–ನಿರ್ಮಾಣ, ಆರ್.ಅನಂತರಾಜು ನಿರ್ದೇಶನ, ವಿಜಯರಾಘವೇಂದ್ರ  ಅಭಿನಯಿಸಿರುವ ’ಶ್ರೀಮತಿ ಸಿಂಧೂರ’ ಚಿತ್ರದ ಟೀಸರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ ಕಾರ್ಯಕ್ರಮವು ಎಸ್‌ಆರ್‌ವಿ ಪ್ರಿವ್ಯೂ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ನಾಯಕಿ ಪ್ರಿಯಾಹೆಗಡೆ, ಹೊಸ ಪರಿಚಯ ಡಿ.ಎನ್.ಲಿಯೋ ಮನೋಜ್, ಸಹ ನಿರ್ಮಾಪಕ ಡಿ.ಎನ್.ಜೈ ನಾರಾಯಾಣ್, ಸಾಹಿತಿ ಕವಿರಾಜ್, ಕಲಾವಿದರುಗಳಾದ ಗಣೇಶ್‌ರಾವ್ ಕೇಸರಕರ್, ರೇಷ್ಮಾ.ವಿ.ಗೌಡ, ಪ್ರಸನ್ನಬಾಗೀನ, ಉಗ್ರಂ ರವಿ, ಮಾಸ್ಟರ್ ಮೌರ್ಯ, ನೃತ್ಯ ಸಂಯೋಜಕ ಫೈವ್‌ಸ್ಟಾರ್ ಗಣೇಶ್, ಗಂಗಾಧರ್ ಅನುಭವಗಳನ್ನು ನೆನಪು ಮಾಡಿಕೊಂಡರು. ನಂತರ ಮಾತನಾಡಿದ ನಿರ್ಮಾಪಕರು, ಇದು ನನಗೆ ಇಪ್ಪತ್ತು ವರ್ಷದ ಕನಸು. ಸಿನಿಮಾ ಕಾರ್ಮಿಕರಿಗೆ ಏನಾದರೂ ಕೆಲಸ ಕೊಡಬೇಕೆಂಬ ಒಳ್ಳೆಯ ಉದ್ದೇಶದಿಂದ ಬಂಡವಾಳ ಹೂಡಿದ್ದೇನೆ. ಚಿತ್ರದಲ್ಲಿ ’ಹೂ ಮಳೆ’ ಹಾಡಿದೆ. ಇಂದು ಜೋರಾಗಿ ಮಳೆ ಬರುತ್ತಿದೆ. ಆದರೂ ಮಾಧ್ಯಮದವರು ಬಂದಿರುವುದು ಖುಷಿ ತಂದಿದೆ. ಆಂಜನೇಯನ ಹಾಡು ಸಿನಿಮಾದ ಹೈಲೈಟ್. ಕೈಲಾಶ್‌ಖೇರ್ ಹಾಡಿ ಇದು ಕೇವಲ ಕರ್ನಾಟಕ…

Read More

ತುಮಕೂರು: ನಾಳೆಯಿಂದ ಮೇ 10ರವರೆಗೆ ತುಮಕೂರು ಓಪನ್ ಅಂತಾರಾಷ್ಟ್ರೀಯ ಮುಕ್ತ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್ ಪಂದ್ಯಾವಳಿಯನ್ನು ವಿವಿ ಹಿಂಭಾಗದ ಟೆನಿಸ್ ಅಂಕಣದಲ್ಲಿ ಆಯೋಜಿಸಿದ್ದು, ಈಗಾಗಲೇ 7 ದೇಶಗಳ 70 ಮಂದಿ ಮಹಿಳಾ ಟೆನಿಸ್ ಆಟಗಾರ್ತಿಯರು ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಪಂದ್ಯಾವಳಿ ಭಾಗವಹಿಸಲು ತಯಾರಿ ನಡೆಸುತ್ತಿದ್ದಾರೆ. ರಾಜಧಾನಿಯೇತರ ನಗರಕ್ಕೆ ಇದೇ ಮೊದಲ ಬಾರಿ ವಿಶ್ವ ದರ್ಜೆಯ ಟೆನಿಸ್ ಪಂದ್ಯಾವಳಿಗೆ ಅಂತಾರಾಷ್ಟ್ರೀಯ ಟೆನಿಸ್ ಫೆಡರೇಷನ್ ಅವರು ಅವಕಾಶ ನೀಡಿದ್ದು, ಇಂತಹ ಅವಕಾಶ ಪಡೆದ ತುಮಕೂರು ಕರ್ನಾಟಕದ ಮೊದಲ ನಗರವೆಂಬ ಗರಿಮೆಗೆ ಪಾತ್ರವಾಗಿದೆ. ತುಮಕೂರು ಜಿಲ್ಲಾಡಳಿತ, ತುಮಕೂರು ಟೆನಿಸ್ ಅಸೋಸಿಯೇಷನ್ ಹಾಗೂ ಕರ್ನಾಟಕ ಲಾನ್ ಟೆನಿಸ್ ಅಸೋಸಿಯೇಷನ್ ಸಹಕಾರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಕ್ರೀಡಾಕೂಟದ ಯಶಸ್ಸಿಗೆ ಸಕಲ ತಯಾರಿ ನಡೆಸಿದ್ದು, ಪಂದ್ಯಾವಳಿಯ ಸಿಂಗಲ್ಸ್, ಡಬಲ್ಸ್ ನಲ್ಲಿ ಗೆಲ್ಲುವ ಆಟಗಾರ್ತಿಯರಿಗೆ ನೀಡುವ ಬಹುಮಾನದ ಮೊತ್ತ 30 ಸಾವಿರ ಡಾಲರ್ ಅನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ತಮ್ಮ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಿಂದಲೇ ಪ್ರಾಯೋಜಕತ್ವ…

Read More

ಕೆಂಗೇರಿ: ಉಪನಗರದಲ್ಲಿರುವ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಮಂಗಳವಾರದಂದು “ಸಶಕ್ತ ಭಾರತಕ್ಕಾಗಿ ಸಮಾನ ಅವಕಾಶಗಳು” ಎಂಬ ವಿಷಯದಡಿ ಅಂತರ್ ಕಾಲೇಜು ಯುವ ಸಮಾವೇಶ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 8.30ಕ್ಕೆ ಆಶುಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ನಂತರ 11.30ಕ್ಕೆ ನಡೆದ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ. ಬಿ.ಟಿ. ಲಲಿತಾ ನಾಯಕ್ ಅವರು “ಸಶಕ್ತ ಭಾರತಕ್ಕಾಗಿ ಸಮಾನ ಅವಕಾಶಗಳು” ವಿಷಯದ ಕುರಿತು ಅನುಭವಪೂರ್ಣ ಉಪನ್ಯಾಸ ನೀಡಿ, ವಿದ್ಯಾರ್ಥಿಗಳೊಂದಿಗೆ ಅರ್ಥಪೂರ್ಣ ಪ್ರಶ್ನೋತ್ತರ ಸಂವಾದ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಕೆ. ಕೃಷ್ಣಸ್ವಾಮಿ ಅವರು ಕಡಿದಾಳ್ ಮಂಜಪ್ಪ ಅವರ ಸಮಾಜಸೇವೆ ಹಾಗೂ ರಾಷ್ಟ್ರಸೇವೆಯ ಉದಾಹರಣೆಗಳನ್ನು ನೀಡುತ್ತಾ ಪ್ರೇರಣಾದಾಯಕ ವಿಚಾರಗಳನ್ನು ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯರಾಮ ಅವರು ಪ್ರಸ್ತಾವಿಕ ನುಡಿಗಳ ಮೂಲಕ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಕಾರ್ಯಕ್ರಮದ ಸಂಯೋಜಕರಾದ ಡಾ.ಪೂರ್ಣಿಮಾ ಎಸ್. ಅವರು ಆತ್ಮೀಯವಾಗಿ ಸ್ವಾಗತಿಸಿ ನಿರೂಪಣೆ ನಡೆಸಿದರು. ಐಕ್ಯೂಎಸಿ ಸಂಚಾಲಕರಾದ ಡಾ.…

Read More

ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿಯ ಎಚ್. ಭೈರಾಪುರ ಗ್ರಾಮದ ಬಳಿ, ತಿಪಟೂರು-ಹುಳಿಯಾರು ಸಂಪರ್ಕಿಸುವ ರಸ್ತೆಗೆ ಲೋಕೋಪಯೋಗಿ ಇಲಾಖೆ ವತಿಯಿಂದ ಸುಮಾರು ಒಂದುವರೆ ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಕೆ. ಷಡಕ್ಷರಿ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಈ ಗ್ರಾಮದ ರಸ್ತೆಯಲ್ಲಿರುವ ಅತಿ ಕಿರಿದಾದ ಸೇತುವೆಯಿಂದ ಮಳೆ ಬಂದರೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ, ಕಿಲೋಮೀಟರ್ ಗಟ್ಟಲೆ ವಾಹನಗಳು ನೀರಿನಲ್ಲಿ ಚಲಿಸಲಾಗದೆ ಮುಳುಗಡೆಯಾಗಿ ನಿಲ್ಲುತ್ತಿದ್ದವು. ಇದನ್ನು ಗಮನಿಸಿ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ, ಸಾರ್ವಜನಿಕರು, ರೈತರು, ವಾಹನ ಸವಾರರಿಗೆ ತೊಂದರೆ ಆಗದಂತೆ ಮತ್ತು ಹಳ್ಳದಿಂದ ಬರುವ ನೀರು ಹಾಲ್ಕುರಿಕೆ ಕೆರೆಗೆ ಸರಾಗವಾಗಿ ಹೋಗಲೆಂದು ಬೃಹತ್ ಸೇತುವೆ ನಿರ್ಮಾಣ ಕಾಮಗಾರಿ ನಡೆಯಲಿದೆ. ಈ ಗ್ರಾಮದಲ್ಲಿ ಈಗಾಗಲೇ ಅಂಗನವಾಡಿ ಕಟ್ಟಡ ಉದ್ಘಾಟನೆಗೆ ಸಿದ್ಧವಾಗಿದ್ದು, ಮೂರು ಬೀದಿಗಳಿಗೆ ಸಿಸಿ ರಸ್ತೆ ಕಾಮಗಾರಿಯೂ ನಡೆದಿರುತ್ತದೆ ಎಂದು ತಿಳಿಸಿದರು. ಲೋಕೋಪಯೋಗಿ ಇಲಾಖೆಯ ಲೋಕೇಶ್, ಹಾಲ್ಕುರಿಕೆ ಗ್ರಾಪಂ ಮಾಜಿ ಅಧ್ಯಕ್ಷ ಸೋಮಶೇಖರ್,…

Read More

ಗುಬ್ಬಿ: ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕೇವಲ ಒಂದು ಜಾತಿಗೆ ಅಥವಾ ಸಮುದಾಯಕ್ಕೆ ಸೀಮಿತಗೊಳಿಸುವುದು ಅವರು ಈ ದೇಶಕ್ಕೆ ನೀಡಿದ ಅಪ್ರತಿಮ ಕೊಡುಗೆಗೆ ಮಾಡುವ ಅಪಚಾರವಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಹಾಗೂ ಸಂವಿಧಾನ ಸಂರಕ್ಷಣಾ ಪಡೆ, ಗುಬ್ಬಿ ತಾಲ್ಲೂಕು ಘಟಕದ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಚಾಲುಕ್ಯ ಆಸ್ಪತ್ರೆ ಸಿಇಒ ಡಾ.ಬಿ.ಎನ್.ನಾಗಭೂಷಣ್ ತಿಳಿಸಿದರು. ಪ್ರಾಂಶುಪಾಲ ಡಾ. ಪ್ರಸನ್ನ ಮಾತನಾಡಿ, ಶಿಕ್ಷಣವು ಪ್ರತಿಯೊಬ್ಬ ವ್ಯಕ್ತಿಯ ಮೂಲಭೂತ ಹಕ್ಕು ಮತ್ತು ಅದು ವಿಮೋಚನೆಯ ದಾರಿಯಾಗಿದೆ. ಶಿಕ್ಷಣ ಪಡೆದುಕೊಳ್ಳುವ ಮೂಲಕ ಸಮಾನತೆಯನ್ನು ಕಾಣಬಹುದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಉತ್ತಮ ಶಿಕ್ಷಣ ಪಡೆದುಕೊಂಡು ಸಮಾಜದಲ್ಲಿ ಸಮಾನತೆಯನ್ನು ರೂಪಿಸಬೇಕು ಎಂದರು. ನವಭಾರತ ನಿರ್ಮಾತೃ ಬಿ.ಆರ್.ಅಂಬೇಡ್ಕರ್ ಎಂಬ ವಿಷಯದ ಬಗ್ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಡಾ.ಎಚ್. ಲಕ್ಷ್ಮೀನಾರಾಯಣಸ್ವಾಮಿ ಮಾತನಾಡಿ, ‘ಹಿಂದೂ ಕೋಡ್ ಬಿಲ್’ ಮೂಲಕ ಮಹಿಳೆಯರಿಗೆ ಆಸ್ತಿ ಹಕ್ಕು, ವಿಚ್ಛೇದನದ ಹಕ್ಕು ಮತ್ತು ಸಮಾನತೆಯ ಹಕ್ಕುಗಳನ್ನು ದೊರಕಿಸಿಕೊಡಲು…

Read More

ನಿಟ್ಟೂರು: ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿ ಪತ್ರೆಮತ್ತಿಘಟ್ಟದಲ್ಲಿ ಮೇ 3 ಮತ್ತು 4 ರಂದು ಶ್ರೀ ಜೋಡಿಬಸವೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ ನಡೆಯಲಿದೆ. ಇದರ ಅಂಗವಾಗಿ ಮೇ 3 ರಂದು ಸಂಜೆ 5 ಗಂಟೆಗೆ ಧ್ವಜಾರೋಹಣ, ಮೇ 4 ರಂದು ಬೆಳಗ್ಗೆ 7ಕ್ಕೆ ಪೂರ್ಣ ಕುಂಭಾಭಿಷೇಕ, ರುದ್ರಾಭಿಷೇಕ, ಮಧ್ಯಾಹ್ನ ಪ್ರಸಾದ ವಿನಿಯೋಗ, ಸಂಜೆ 5 ಗಂಟೆಗೆ ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ, ಶ್ರೀಶೈಲ ಮಲ್ಲಿಕಾರ್ಜುನಸ್ವಾಮಿ, ಶ್ರೀ ತೀರ್ಥರಾಮೇಶ್ವರಸ್ವಾಮಿ, ಶ್ರೀ ಸಿದ್ಧೇಶ್ವರಸ್ವಾಮಿ ದೇವರುಗಳ ಆಗಮನ, ರಾತ್ರಿ 3 ಗಂಟೆಗೆ ಶ್ರೀ ಜೋಡಿ ಬಸವೇಶ್ವರಸ್ವಾಮಿಯವರಿಗೆ ಹೋಮ, ನಂತರ ಗ್ರಾಮಸ್ಥರಿಂದ ಆರತಿ ನಡೆಯಲಿದೆ. ಡಾ.ಶ್ರೀ ಅಭಿನವಮಲ್ಲಿಕಾರ್ಜುನದೇಶಿಕೇಂದ್ರ ಸ್ವಾಮಿಗಳು, ಶ್ರೀ ವಿಭವ ವಿದ್ಯಾಶಂಕರಸ್ವಾಮಿಗಳ ಆಗಮನದೊಂದಿಗೆ ದೇವಸ್ಥಾನದ ಆವರಣ, ರಸ್ತೆ ಉದ್ಘಾಟನೆಯನ್ನು ಸಚಿವ ವಿ.ಸೋಮಣ್ಣ ನೆರವೇರಿಸುವರು. ರಾತ್ರಿ 8ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 9ಕ್ಕೆ ಎಸ್ಎಸ್ಎಲ್‌ಸಿ ಮತ್ತು ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಒಬ್ಬ ವಿದ್ಯಾರ್ಥಿಗೆ ಶಾರದಾ ಪ್ರತಿಭಾ ಪುರಸ್ಕಾರ ನೀಡಲಾಗುವುದು. ರಾತ್ರಿ 10ಕ್ಕೆ ಭಜನಾ ಕಾರ್ಯಕ್ರಮ, ರಾತ್ರಿ 11ಕ್ಕೆ ವಿವಿಧ…

Read More

ತುರುವೇಕೆರೆ: ಗ್ರಾಮ ಪಂಚಾಯತಿ ಕರ ವಸೂಲಿಗಾರರ ಹುದ್ದೆಯನ್ನು ಸ್ಥಳೀಯರಿಗೆ ನೀಡಬೇಕು ಎಂದು ರೈತ ಸಂಘದ ಅಧ್ಯಕ್ಷ ಕಣಕೂರು ಚಂದ್ರಶೇಖರ್ ಒತ್ತಾಯ ಮಾಡಿದ್ದಾರೆ. ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ತಾಲ್ಲೂಕು ಪಂಚಾಯಿತಿ ಲೆಕ್ಕಾಧಿಕಾರಿ ಸವಿತಾರವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಮಾಯಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಕರ ವಸೂಲಿಗಾರ ಹುದ್ದೆಯನ್ನು ಈ ಹಿಂದೆ ತಾತ್ಕಾಲಿಕವಾಗಿ ನೀಡಲಾಗಿತ್ತು ಆದರೆ ಆ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಆತನ ತಮ್ಮ ಚಂದನ್ ಗೌಡ ಅನುಕಂಪದ ಆಧಾರದಲ್ಲಿ ಕರ ವಸೂಲಿಗಾರ ಹುದ್ದೆ ನೀಡುವಂತೆ ಮನವಿ ಸಲ್ಲಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹುದ್ದೆ ಪಡೆಯಲು ಮುಂದಾಗಿದ್ದಾರೆ ಇವರು ಮಾಯಸಂದ್ರ ಪಂಚಾಯಿತಿ ವ್ಯಾಪ್ತಿಯ ವರಲ್ಲದವರಾಗಿರುವುದು ಒಂದೆಡೆಯಾದರೆ ಇವರು ಸಾಮಾಜಿಕ ಮಾಧ್ಯಮದಲ್ಲಿ ಅಧಿಕಾರಿ ವರ್ಗದವರ ವಿರುದ್ಧ ಹಾಗೂ ಮಾಯಸಂದ್ರ ಪಂಚಾಯಿತಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿರುವುದು ಕಾನೂನು ಉಲ್ಲಂಘನೆಯಾಗಿದ್ದು, ಇವರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸುಮೊಟೋ ಕೇಸ್ ದಾಖಲಿಸಬೇಕೆಂದು ಆಗ್ರಹಿಸಿದರು. ಮೃತ ಮುತ್ತುರಾಜ್ ಪ್ರಕರಣದಲ್ಲಿ ಅನುಕಂಪದ ಆಧಾರದ ಹುದ್ದೆ ಎಂಬ ಮಾತೇ…

Read More