Subscribe to Updates
Get the latest creative news from FooBar about art, design and business.
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
- ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
- “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
- ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
- ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
Author: admin
ಗುಬ್ಬಿ: ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕೇವಲ ಒಂದು ಜಾತಿಗೆ ಅಥವಾ ಸಮುದಾಯಕ್ಕೆ ಸೀಮಿತಗೊಳಿಸುವುದು ಅವರು ಈ ದೇಶಕ್ಕೆ ನೀಡಿದ ಅಪ್ರತಿಮ ಕೊಡುಗೆಗೆ ಮಾಡುವ ಅಪಚಾರವಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಹಾಗೂ ಸಂವಿಧಾನ ಸಂರಕ್ಷಣಾ ಪಡೆ, ಗುಬ್ಬಿ ತಾಲ್ಲೂಕು ಘಟಕದ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಚಾಲುಕ್ಯ ಆಸ್ಪತ್ರೆ ಸಿಇಒ ಡಾ.ಬಿ.ಎನ್.ನಾಗಭೂಷಣ್ ತಿಳಿಸಿದರು. ಪ್ರಾಂಶುಪಾಲ ಡಾ. ಪ್ರಸನ್ನ ಮಾತನಾಡಿ, ಶಿಕ್ಷಣವು ಪ್ರತಿಯೊಬ್ಬ ವ್ಯಕ್ತಿಯ ಮೂಲಭೂತ ಹಕ್ಕು ಮತ್ತು ಅದು ವಿಮೋಚನೆಯ ದಾರಿಯಾಗಿದೆ. ಶಿಕ್ಷಣ ಪಡೆದುಕೊಳ್ಳುವ ಮೂಲಕ ಸಮಾನತೆಯನ್ನು ಕಾಣಬಹುದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಉತ್ತಮ ಶಿಕ್ಷಣ ಪಡೆದುಕೊಂಡು ಸಮಾಜದಲ್ಲಿ ಸಮಾನತೆಯನ್ನು ರೂಪಿಸಬೇಕು ಎಂದರು. ನವಭಾರತ ನಿರ್ಮಾತೃ ಬಿ.ಆರ್.ಅಂಬೇಡ್ಕರ್ ಎಂಬ ವಿಷಯದ ಬಗ್ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಡಾ.ಎಚ್. ಲಕ್ಷ್ಮೀನಾರಾಯಣಸ್ವಾಮಿ ಮಾತನಾಡಿ, ‘ಹಿಂದೂ ಕೋಡ್ ಬಿಲ್’ ಮೂಲಕ ಮಹಿಳೆಯರಿಗೆ ಆಸ್ತಿ ಹಕ್ಕು, ವಿಚ್ಛೇದನದ ಹಕ್ಕು ಮತ್ತು ಸಮಾನತೆಯ ಹಕ್ಕುಗಳನ್ನು ದೊರಕಿಸಿಕೊಡಲು…
ನಿಟ್ಟೂರು: ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿ ಪತ್ರೆಮತ್ತಿಘಟ್ಟದಲ್ಲಿ ಮೇ 3 ಮತ್ತು 4 ರಂದು ಶ್ರೀ ಜೋಡಿಬಸವೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ ನಡೆಯಲಿದೆ. ಇದರ ಅಂಗವಾಗಿ ಮೇ 3 ರಂದು ಸಂಜೆ 5 ಗಂಟೆಗೆ ಧ್ವಜಾರೋಹಣ, ಮೇ 4 ರಂದು ಬೆಳಗ್ಗೆ 7ಕ್ಕೆ ಪೂರ್ಣ ಕುಂಭಾಭಿಷೇಕ, ರುದ್ರಾಭಿಷೇಕ, ಮಧ್ಯಾಹ್ನ ಪ್ರಸಾದ ವಿನಿಯೋಗ, ಸಂಜೆ 5 ಗಂಟೆಗೆ ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ, ಶ್ರೀಶೈಲ ಮಲ್ಲಿಕಾರ್ಜುನಸ್ವಾಮಿ, ಶ್ರೀ ತೀರ್ಥರಾಮೇಶ್ವರಸ್ವಾಮಿ, ಶ್ರೀ ಸಿದ್ಧೇಶ್ವರಸ್ವಾಮಿ ದೇವರುಗಳ ಆಗಮನ, ರಾತ್ರಿ 3 ಗಂಟೆಗೆ ಶ್ರೀ ಜೋಡಿ ಬಸವೇಶ್ವರಸ್ವಾಮಿಯವರಿಗೆ ಹೋಮ, ನಂತರ ಗ್ರಾಮಸ್ಥರಿಂದ ಆರತಿ ನಡೆಯಲಿದೆ. ಡಾ.ಶ್ರೀ ಅಭಿನವಮಲ್ಲಿಕಾರ್ಜುನದೇಶಿಕೇಂದ್ರ ಸ್ವಾಮಿಗಳು, ಶ್ರೀ ವಿಭವ ವಿದ್ಯಾಶಂಕರಸ್ವಾಮಿಗಳ ಆಗಮನದೊಂದಿಗೆ ದೇವಸ್ಥಾನದ ಆವರಣ, ರಸ್ತೆ ಉದ್ಘಾಟನೆಯನ್ನು ಸಚಿವ ವಿ.ಸೋಮಣ್ಣ ನೆರವೇರಿಸುವರು. ರಾತ್ರಿ 8ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 9ಕ್ಕೆ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಒಬ್ಬ ವಿದ್ಯಾರ್ಥಿಗೆ ಶಾರದಾ ಪ್ರತಿಭಾ ಪುರಸ್ಕಾರ ನೀಡಲಾಗುವುದು. ರಾತ್ರಿ 10ಕ್ಕೆ ಭಜನಾ ಕಾರ್ಯಕ್ರಮ, ರಾತ್ರಿ 11ಕ್ಕೆ ವಿವಿಧ…
ತುರುವೇಕೆರೆ: ಗ್ರಾಮ ಪಂಚಾಯತಿ ಕರ ವಸೂಲಿಗಾರರ ಹುದ್ದೆಯನ್ನು ಸ್ಥಳೀಯರಿಗೆ ನೀಡಬೇಕು ಎಂದು ರೈತ ಸಂಘದ ಅಧ್ಯಕ್ಷ ಕಣಕೂರು ಚಂದ್ರಶೇಖರ್ ಒತ್ತಾಯ ಮಾಡಿದ್ದಾರೆ. ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ತಾಲ್ಲೂಕು ಪಂಚಾಯಿತಿ ಲೆಕ್ಕಾಧಿಕಾರಿ ಸವಿತಾರವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಮಾಯಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಕರ ವಸೂಲಿಗಾರ ಹುದ್ದೆಯನ್ನು ಈ ಹಿಂದೆ ತಾತ್ಕಾಲಿಕವಾಗಿ ನೀಡಲಾಗಿತ್ತು ಆದರೆ ಆ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಆತನ ತಮ್ಮ ಚಂದನ್ ಗೌಡ ಅನುಕಂಪದ ಆಧಾರದಲ್ಲಿ ಕರ ವಸೂಲಿಗಾರ ಹುದ್ದೆ ನೀಡುವಂತೆ ಮನವಿ ಸಲ್ಲಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹುದ್ದೆ ಪಡೆಯಲು ಮುಂದಾಗಿದ್ದಾರೆ ಇವರು ಮಾಯಸಂದ್ರ ಪಂಚಾಯಿತಿ ವ್ಯಾಪ್ತಿಯ ವರಲ್ಲದವರಾಗಿರುವುದು ಒಂದೆಡೆಯಾದರೆ ಇವರು ಸಾಮಾಜಿಕ ಮಾಧ್ಯಮದಲ್ಲಿ ಅಧಿಕಾರಿ ವರ್ಗದವರ ವಿರುದ್ಧ ಹಾಗೂ ಮಾಯಸಂದ್ರ ಪಂಚಾಯಿತಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿರುವುದು ಕಾನೂನು ಉಲ್ಲಂಘನೆಯಾಗಿದ್ದು, ಇವರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸುಮೊಟೋ ಕೇಸ್ ದಾಖಲಿಸಬೇಕೆಂದು ಆಗ್ರಹಿಸಿದರು. ಮೃತ ಮುತ್ತುರಾಜ್ ಪ್ರಕರಣದಲ್ಲಿ ಅನುಕಂಪದ ಆಧಾರದ ಹುದ್ದೆ ಎಂಬ ಮಾತೇ…
ಮಿಡಿಗೇಶಿ: ಆಸೆ ಆಮಿಷವೊಡ್ಡಿ ಬಾಲಕಿಯೋರ್ವಳನ್ನು ಬೈಕ್ ನಲ್ಲಿ ಕರೆದೊಯ್ದು ಸುತ್ತಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಏಪ್ರಿಲ್ 23ರ ಸಂಜೆ ಮಿಡಿಗೇಶಿ ವ್ಯಾಪ್ತಿಯ ಗ್ರಾಮವೊಂದರಲ್ಲಿ 16 ವರ್ಷದ ಬಾಲಕಿ ಬಹಿರ್ದೆಸೆಗೆಂದು ಹೊರಗೆ ಹೋಗಿದ್ದರು. ಎಷ್ಟು ಹೊತ್ತಾದರೂ ಆಕೆ ಬಾರದ ಕಾರಣ ಪೋಷಕರು ಹುಡುಕಾಟ ನಡೆಸಿದರು. ಸಂಬಂಧಿಕರು ಮತ್ತು ಗ್ರಾಮಸ್ಥರನ್ನು ವಿಚಾರಿಸುತ್ತಿರುವಾಗ ನಿಮ್ಮ ಮಗಳು ಹೀರಮುದ್ದಯ್ಯ ಎಂಬುವವರೊಂದಿಗೆ ಆಗಾಗ್ಗೆ ದೂರವಾಣಿಯಲ್ಲಿ ಮಾತನಾಡುತ್ತಿದ್ದ ಬಗ್ಗೆ ತಿಳಿಸಿದರು. ಈ ಬಗ್ಗೆ ಬೆಂಗಳೂರಿನಲ್ಲಿರುವ ಹೀರಮುದ್ದಯ್ಯನಿಗೆ ಕರೆ ಮಾಡಲಾಗಿ ನನಗೇನೂ ತಿಳಿದಿಲ್ಲ ಎಂದು ಕರೆ ಕಟ್ ಮಾಡಿದ್ದ. ಪೋಷಕರು ಠಾಣೆಗೆ ದೂರು ನೀಡಲಾಗಿ ಕೃತ್ಯ ಹೊರಬಂದಿದೆ. ಅಂದರೆ, ಹೀರಮುದ್ದಯ್ಯನು ಬಾಲಕಿಯನ್ನು ತನ್ನ ಬೈಕ್ ನಲ್ಲಿ ಕರೆದೊಯ್ದು ಮೈಸೂರಿಗೆ ಹೋಗಿದ್ದಾನೆ. ಅಲ್ಲಿ ಸ್ನೇಹಿತರ ಮನೆಯಲ್ಲಿ ತಂಗಿದ್ದು, ಹೋಗಿಬರುವಾಗ ಕೆನ್ನೆ ಮುಟ್ಟುವುದು, ಮೈ ಮುಟ್ಟುವುದು ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ಬಾಲಕಿ ಹೇಳಿಕೆ ನೀಡಿದ್ದಾಳೆ. ಪೋಷಕರ ದೂರು ಹಾಗೂ ಬಾಲಕಿಯ ಹೇಳಿಕೆಯನ್ನು ಪಡೆದು ಪೊಲೀಸರು ಬಿಎನ್ಎಸ್ ಕಾಯ್ದೆ…
ತುಮಕೂರು: ವಿದ್ಯಾರ್ಥಿಗಳ ಏಕಾಗ್ರತೆಯಿಂದ ತಪಸ್ಸಿಗಾಗಿ ತಾವು ಮಾಡುವ ಕೆಲಸದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ಯಶಸ್ವಿಯಾಗಲು ಸಾಧ್ಯ. ತಮ್ಮನ್ನು ಇತರರೊಂದಿಗೆ ಹೋಲಿಕೆ ಮಾಡಿಕೊಳ್ಳಬಾರದು. ಕಲಿತ ವಿಷಯಗಳನ್ನು ಅಂತರ್ಗತ ಮಾಡಿಕೊಳ್ಳಬೇಕು. ಇಲ್ಲವಾದರೆ ಅದು ವ್ಯರ್ಥವಾಗುತ್ತದೆ ಎಂದು ತುಮಕೂರು ಶಿಕ್ಷಣ ಮಹಾವಿದ್ಯಾಲಯದ ಡೀನ್ ಕೆ.ಎಸ್. ಡಾ. ಸಿದ್ಧರಾಜು ಕರೆ ನೀಡಿದರು. ತುಮಕೂರು ವಿಶ್ವವಿದ್ಯಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆ.ಎಸ್.ಇ.ಎಫ್. ಶಿಕ್ಷಣ ಮಹಾವಿದ್ಯಾಲಯ ಶಿರಾ ಗೇಟ್ ಇಲ್ಲಿ ಹಮ್ಮಿಕೊಂಡಿದ್ದ ಅಕ್ಷರಂ ಅನಂತಂನ 2027ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದರು. ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಸಹ ಪ್ರಾಧ್ಯಾಪಕರಾದ ವಿದ್ಯಾರ್ಥಿಗಳು ಮಾತೃಭಾಷೆಯಲ್ಲಿ ಅನುತ್ತೀರ್ಣರಾಗುತ್ತಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಹಾಗೆಯೇ ಸಮನ್ವಯ ಶಿಕ್ಷಣ ಸಹಿಷ್ಣುತೆ ಶಿಕ್ಷಣ ಮತ್ತು ನೈತಿಕತೆಯ ಕೆಲವು ನಿದರ್ಶನಗಳ ಮೂಲಕ ವಿವರಿಸಿದರು. ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ಸ್ವ ಮೌಲ್ಯ ಮಾಪನ ಮಾಡಿಕೊಳ್ಳಬೇಕು ಎಂದರು. ಹಿರಿಯ ಉಪನ್ಯಾಸಕರಾದ ಪಿ. ರಾಮಕೃಷ್ಣ ಅವರು ಮಾತನಾಡಿ ವಿದ್ಯೆ ವಿವೇಚನೆ, ಸರಳತೆ ಮತ್ತು ವಿಧೇಯತೆಯನ್ನು ಕಲಿಸಿಕೊಡಬೇಕು. ಪ್ರಸ್ತುತ…
ಕೊರಟಗೆರೆ: ಹಲವು ವರ್ಷಗಳಿಂದ ಸಾರ್ವಜನಿಕರ ಬಹು ನಿರೀಕ್ಷೆಯಾಗಿದ್ದ ಕೊರಟಗೆರೆ ಪಟ್ಟಣ ಪಂಚಾಯತಿ ಇದೀಗ ಪುರಸಭೆಯಾಗಿ ಮೇಲ್ದರ್ಜೆಗೇರಿರುವ ಹಿನ್ನಲೆಯಲ್ಲಿ ಪುರಸಭೆ ಕಚೇರಿಯಲ್ಲಿ ನೂತನ ನಾಮಫಲಕವನ್ನು ಅನಾವರಣಗೊಳಿಸಲಾಯಿತು. ಈ ಮೂಲಕ ಪಟ್ಟಣದ ಅಭಿವೃದ್ಧಿಗೆ ಹೊಸ ದಿಕ್ಕು ಸಿಕ್ಕಂತಾಗಿದೆ. ಕೊರಟಗೆರೆ ಪಟ್ಟಣ ಪಂಚಾಯಿತಿ ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಕನಸನ್ನ ಪಟ್ಟಣದ ಜನತೆ, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಹಲವು ವರ್ಷಗಳಿಂದ ಪುರಸಭೆ ಸ್ಥಾನಮಾನಕ್ಕಾಗಿ ಒತ್ತಾಯ ಮಾಡುತ್ತಿದ್ದು, ಇದೀಗ ಆ ಕನಸು ನನಸಾಗಿದೆ. ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರ ವಿಶೇಷ ಒತ್ತಾಸೆ ಮತ್ತು ಪ್ರಯತ್ನದಿಂದ ಕೊರಟಗೆರೆ ಪುರಸಭೆಯಾಗಿ ಮೇಲ್ದರ್ಜೆಗೇರಿದೆ. ಪುರಸಭೆ ಸ್ಥಾನಮಾನದಿಂದ ಪಟ್ಟಣದ ರಸ್ತೆ, ಕುಡಿಯುವ ನೀರು, ಒಳಚರಂಡಿ, ಬೀದಿ ದೀಪ, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಹರಿದು ಬರಲಿದ್ದು, ಕೊರಟಗೆರೆ ಸಮಗ್ರ ಅಭಿವೃದ್ಧಿಯತ್ತ ಹೆಜ್ಜೆ ಇಡುವ ಅವಕಾಶ ಒದಗಿ ಬಂದಿದೆ. ಈ ಸಂದರ್ಭದಲ್ಲಿ ₹8 ಲಕ್ಷ ವೆಚ್ಚದಲ್ಲಿ ಕಚೇರಿ ಬಳಕೆಗಾಗಿ ಅಳವಡಿಸಲಾದ ಸೋಲಾರ್ ಪ್ಲಾಂಟ್ನ್ನು…
ತುಮಕೂರು: ಸರ್ಕಾರಿ ಎಂಪ್ರೆಸ್ ಮಹಿಳಾ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ದಾಖಲಾತಿ ಕೋರಿ ಬರುತ್ತಿರುವ ವಿದ್ಯಾರ್ಥಿನಿಯರಿಗೆ ಉರ್ದು ಒಂದು ಭಾಷೆಯನ್ನಾಗಿ ನೀಡಲು ನಿರಾಕರಿಸುತ್ತಿರುವ ವಿಚಾರವಾಗಿ ಪಿ.ಯು. ಉಪನಿರ್ದೇಶಕ ಡಾ. ಬಾಲಗುರುಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು. ಹಲವು ಮುಸ್ಲಿಂ ಮಹಿಳಾ ವಿದ್ಯಾರ್ಥಿನಿಯರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉರ್ದು ಭಾಷೆ ವಿಷಯದೊಂದಿಗೆ ತೇರ್ಗಡೆ ಹೊಂದಿ ಪ್ರಥಮ ವರ್ಷದ ಪಿಯುಸಿಯ ದಾಖಲಾತಿಗೆ ಎಂಪ್ರೆಸ್ ಮಹಿಳಾಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಿಗೆ ಸಂಪರ್ಕಿಸಿದಾಗ ಪ್ರಾಂಶುಪಾಲ ಡಿ.ಬಿ.ಅನ್ನಪೂರ್ಣ ಉರ್ದು ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ನಿರಾಕರಿಸುತ್ತಿದ್ದಾರೆ. ಉರ್ದು ಬದಲು ಹಿಂದಿ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಲು ಒತ್ತಾಯಿಸುತ್ತಿದ್ದು, ಇಲ್ಲವಾದಲ್ಲಿ ಬೇರೆ ಕಾಲೇಜಿನಲ್ಲಿ ದಾಖಲಾತಿ ಪಡೆಯಲು ಬಂದ ಮುಸ್ಲಿಂ ಮಹಿಳಾ ವಿದ್ಯಾರ್ಥಿನಿಯರಿಗೆ ಹಾಗೂ ಅವರ ಪೋಷಕರಿಗೆ ಹೇಳುತ್ತಿದ್ದಾರೆ. ಪ್ರಾಂಶುಪಾಲರ ಈ ನಡತೆಯಿಂದ ಅಲ್ಪಸಂಖ್ಯಾತ ಮುಸ್ಲಿಂ ವಿದ್ಯಾರ್ಥಿನಿಯರಿಗೆ ತುಂಬಾ ಅನಾನುಕೂಲತೆ ಹಾಗೂ ಅನ್ಯಾಯವಾಗುತ್ತಿದ್ದು ಅವರ ಮುಂದಿನ ವಿದ್ಯಾಭ್ಯಾಸಕ್ಕೆ ತುಂಬಾ ತೊಂದರೆ ಆಗುತ್ತಿದೆ. ಈಗಾಗಲೇ ಹಿಂದಿನ ವರ್ಷದಲ್ಲಿ ಮೊದಲ ಪಿಯುಸಿ ಉತ್ತೀರ್ಣರಾಗಿ ಈಗ…
ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಚಿಕ್ಕನಾಯಕನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ಇತ್ತೀಚಿನ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಪ್ರಕೃತಿ ವಿಕೋಪದಿಂದ ಮಾನವ ಜೀವಹಾನಿ, ಬೆಳೆ ನಷ್ಟ ಹಾಗೂ ಮೂಲಸೌಕರ್ಯ ಹಾನಿಯ ಕುರಿತು ಸಮಗ್ರ ಮಾಹಿತಿ ಪಡೆದು ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಚಿಕ್ಕನಾಯಕನಹಳ್ಳಿ ಪಟ್ಟಣದ ನಿವಾಸಿ ಪುಟ್ಟಯ್ಯ (70 ವರ್ಷ) ಅವರು ಏಪ್ರಿಲ್ 28ರಂದು ಸಂಜೆ ತೋಟದಿಂದ ಮನೆಗೆ ತೆರಳುವ ವೇಳೆ ಆಕಸ್ಮಿಕ ಗಾಳಿ-ಮಳೆಯ ಪರಿಣಾಮ ಮರದ ಕೊಂಬೆ ತಲೆಯ ಮೇಲೆ ಬಿದ್ದು ಮೃತಪಟ್ಟ ಘಟನೆ ಹಿನ್ನೆಲೆ, ಜಿಲ್ಲಾಧಿಕಾರಿಗಳು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿ ಸಾಂತ್ವನ ಹೇಳಿದರು. ಈ ವೇಳೆ ತಹಶೀಲ್ದಾರ್, ಮುಖ್ಯಾಧಿಕಾರಿ ಹಾಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಮೃತರ ಕುಟುಂಬಕ್ಕೆ ತಕ್ಷಣ ಮರಣ ಪ್ರಮಾಣ ಪತ್ರ ವಿತರಿಸುವುದು, ಹಕ್ಕುಪತ್ರ ಸಂಬಂಧಿತ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವುದು ಹಾಗೂ ಅರ್ಹ ಪಿಂಚಣಿ ಸೇರಿದಂತೆ…
ತುಮಕೂರು: ನಗರದ ಕನ್ನಡ ಭವನದಲ್ಲಿ ಕನ್ನಡ ಪರ ಸಂಘಟನೆಯಾದ ವಿಜಯ ಸೇನೆ ವತಿಯಿಂದ ಆಯೋಜಿಸಲಾಗಿದ್ದ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊರಟಗೆರೆಯ ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕೊರಟಗೆರೆಯ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿರುತ್ತಿರುವ ಡಿ.ಆರ್.ಶಿಲ್ಪಶ್ರೀ 2007ರಲ್ಲಿ ಶಿಕ್ಷಕಿಯಾಗಿ ನೇಮಕಗೊಂಡು ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕೋಟಗುಡ್ಡ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. 2010ರಲ್ಲಿ ಕೊರಟಗೆರೆ ತಾಲ್ಲೂಕಿನ ಚಟ್ಟೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ವರ್ಗಾವಣೆಗೊಂಡು ಪ್ರಾಮಾಣಿಕ ಸೇವೆ ಸಲ್ಲಿಸಿರುತ್ತಾರೆ. ತದ ನಂತರ 2014 ರಿಂದ ಅಕ್ಕಿರಾಂಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ವರ್ಗಾವಣೆ ಅಗಿ ಕರ್ತವ್ಯ ನಿರ್ವಹಿಸಿರುತ್ತಾರೆ, ನಂತರ 2019 ರಿಂದ ಕೊರಟಗೆರೆ ಪಟ್ಟಣದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಪ್ರಸ್ತುತವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಕರ್ತವ್ಯ ನಿಷ್ಠೆ ಮತ್ತು ನಿಸ್ವಾರ್ಥ ಸೇವೆ, ಶಿಕ್ಷಣ ಕ್ಷೇತ್ರದಲ್ಲಿ…
ಕುಣಿಗಲ್: ರೈತರ ಕೃಷಿಗೆ ಅಸಮರ್ಪಕ ವಿದ್ಯುತ್ ಸರಬರಾಜು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ರೈತರಿಗೆ ಅವೈಜ್ಞಾನಿಕವಾಗಿ ಯಾವುದೇ ಸಮಯ ನಿಗದಿ ಇಲ್ಲದೆ ವಿದ್ಯುತ್ ನೀಡುವ ಕೆಪಿಟಿಸಿಎಲ್(ಬೆಸ್ಕಾಂ) ಅಧಿಕಾರಿಗಳ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್, ತಾಲ್ಲೂಕು ಅಧ್ಯಕ್ಷ ಅನಿಲ್ ಕುಮಾರ್ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಮತ್ತು ರೈತರು ಇಲ್ಲಿನ ಬೆಸ್ಕಾಂ ಕಾರ್ಯಪಾಲಕ ಅಭಿಯಂತರರ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳ ಬೇಜವಾಬ್ದಾರಿಯನ್ನು ಖಂಡಿಸಿ ಧಿಕ್ಕಾರ ಕೂಗಿದರು. ರೈತಸಂಘ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಮಾತನಾಡಿ, ರಾಜ್ಯ ಸರ್ಕಾರ ರೈತರಿಗೆ ಏಳು ಗಂಟೆ ಉಚಿತ 3 ಫೇಸ್ ವಿದ್ಯುತ್ ನೀಡುವುದಾಗಿ ಹೇಳಿ, ದಿನಕ್ಕೆ ಕನಿಷ್ಠ ಎರಡು ಗಂಟೆ ವಿದ್ಯುತ್ ನೀಡುತ್ತಿಲ್ಲ. ಹಗಲು ಹೊತ್ತು ವಿದ್ಯುತ್ ಸಮರ್ಪಕವಾಗಿ ನೀಡುತ್ತಿಲ್ಲ. ರಾತ್ರಿ ವೇಳೆ ಮನ ಬಂದಂತೆ ಕರೆಂಟ್ ನೀಡುತ್ತಿದ್ದಾರೆ. ರೈತರು ಬೆಸ್ಕಾಂ ನೀಡುವ ವಿದ್ಯುತ್ಗಾಗಿ ಹೆಂಡತಿ,…