Subscribe to Updates
Get the latest creative news from FooBar about art, design and business.
- ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
- ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
- ಆ.29: ಪಾವಗಡದಲ್ಲಿ ಉದ್ಯೋಗ ಮೇಳ
- ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
- ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
- ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
- ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
- ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
Author: admin
ತುಮಕೂರು: ಸುರೇಶ್ ಬಾಬು ಅವರನ್ನ ಮಂತ್ರಿಯಾಗಿ ನೋಡಬೇಕು ಎಂಬಾ ಆಸೆಯನ್ನು ಈ ಭಾಗದ ಜನರು ಇಟ್ಟುಕೊಂಡಿದ್ದಾರೆ ಅದು ನೆರವೇರಲಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು. ಚಿಕ್ಕನಾಯಕನಹಳ್ಳಿ ಬುಕ್ಕಾಪಟ್ಟಣದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, 10 ಸಾವಿರ ಜೆಡಿಎಸ್ ಸದಸ್ಯತ್ವ ನೋಂದಣಿಯನ್ನು ಉಡುಗೊರೆಯಾಗಿ ಕೊಟ್ಟಿದ್ದಿರಾ. ಸುರೇಶ್ ಬಾಬು ಅವರು ನಿಮ್ಮ ಮನೆ ಬಾಗಿಲಿಗೆ ನಿಮ್ಮ ಮನೆ ಮಗ ಕಾರ್ಯಕ್ರಮ ಮಾಡುತ್ತಿದ್ದಾರೆ. ಸುರೇಶ್ ಬಾಬು ಅವರನ್ನ ಮಂತ್ರಿಯಾಗಿ ನೋಡಬೇಕು ಎಂಬಾ ಆಸೆಯನ್ನು ಈ ಭಾಗದ ಜನರು ಇಟ್ಟುಕೊಂಡಿದ್ದಾರೆ ಅದು ನೆರವೇರಲಿದೆ ಎಂದರು. ಸುರೇಶ್ ಬಾಬು ಅವರಿಗೆ ರಾಜಕಾರಣ ಹೊರತು ಪಡಿಸಿ ಬೇರೆ ಕಸುಬಿಲ್ಲ. ಕ್ಷೇತ್ರದ ಜನತೆಯ ಋಣ ತೀರಿಸುವ ಹೋರಾಟ ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ ಎಂದರು. ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ನಮ್ಮ ಪಕ್ಷವನ್ನು ಹಲವು ದಶಕಗಳಿಂದ ಕಟ್ಟಿ ಬೆಳೆಸಿದ ದೇವೇಗೌಡರ ಕಾಲಘಟ್ಟದ ಸಾಕಷ್ಟು ನಾಯಕರಿದ್ದೀರಾ. ನಿಮ್ಮ ಸಂಪರ್ಕ ಬಯಸಿ ಪ್ರವಾಸ ಕೈಗೊಂಡಿದ್ದೇನೆ. ತುಮಕೂರು ಜಿಲ್ಲೆ ದೇವೇಗೌಡರ ಹೋರಾಟಕ್ಕೆ ಜೊತೆಯಾಗಿ ನಿಂತು ಬೆಂಬಲ ನೀಡಿದ್ದೀರಾ. ಜನತಾದಳ…
ತುಮಕೂರು: ಕಳೆದ ನಾಲ್ಕು ತಿಂಗಳ ಅಪರಾಧ ಪ್ರಕರಣಗಳ ಯಶಸ್ವಿ ಕಾರ್ಯಚರಣೆ ವಿಚಾರವಾಗಿ ತುಮಕೂರು ಎಸ್ಪಿ ಅಶೋಕ್ ವಿ.ಕೆ. ಸುದ್ದಿಗೋಷ್ಟಿ ನಡೆಸಿದರು. ತುಮಕೂರಿನ ಎಸ್ಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತುಮಕೂರಿನ ಐದು ವಿಭಾಗಗಳಲ್ಲಿ ಕೊಲೆ, ಮನೆಗಳ್ಳತನ, ಸರಗಳ್ಳತನ, ರಾಬರಿ, ಡಕಾಯಿತಿ ಸೇರಿದಂತೆ 130 ಪ್ರಕರಣಗಳು ದಾಖಲಾಗಿತ್ತು. 130 ಪ್ರಕರಣಗಳ ಸಂಬಂಧ ಯಶಸ್ವಿ ಕಾರ್ಯಾಚರಣೆಯಲ್ಲಿ 170 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಹಲವು ಪ್ರಕರಣಗಳಲ್ಲಿ ಕೋಟಿ ಕೋಟಿ ಮೌಲ್ಯದ ವಸ್ತುಗಳ ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು. 4 ಕೋಟಿ ಮೌಲ್ಯದ 4.31 ಕೆಜಿ ಚಿನ್ನ, 7.20 ಲಕ್ಷ ರೂಪಾಯಿ ಮೌಲ್ಯದ 7ಕೆಜಿ 207 ಗ್ರಾಂ ಬೆಳ್ಳಿ, 1.11 ಕೋಟಿ ಮೌಲ್ಯದ 99 ಬೈಕ್, 4 ಕಾರ್, ಒಂದು ಆಟೋ ಮತ್ತು 3 ಲಕ್ಷ ಮೌಲ್ಯದ ಜಾನುವಾರು ಹಾಗೂ 36.73 ಲಕ್ಷ ಮೌಲ್ಯದ ವಸ್ತುಗಳು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದರು. ತುಮಕೂರಿನ ವಿವಿಧ ಪ್ರಕರಣಗಳ ಒಟ್ಟಾರೆ ವಶಕ್ಕೆ ಪಡೆದ ವಸ್ತುಗಳ ಮೌಲ್ಯ…
ಬೀದರ್ : ಕಳ್ಳತನವಾದ ಮೊಬೈಲ್ ಫೋನ್ಗಳ ಬಗ್ಗೆ CEIR ಪೋರ್ಟಲ್ನಲ್ಲಿ ದೂರು ದಾಖಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರು ತಮ್ಮ ಮೊಬೈಲ್ ಪೋನ್ಗಳು ಕಳ್ಳತನವಾದಲ್ಲಿ ಕೆಎಸ್ ಪಿ ವೆಬ್ ಸೈಟ್ ನಲ್ಲಿ ಕಳ್ಳತನವಾದ ಮೊಬೈಲ್ ಪೋನ್ ಬಗ್ಗೆ ವಿವರವನ್ನು ದಾಖಲಿಸಬೇಕು. ನಂತರ ಕಳೆದುಹೋದ ವಸ್ತು, ದಾಖಲೆಯ ವರದಿ ಕ್ರಮ ಸಂಖ್ಯೆ ಬರುತ್ತದೆ. ಆ ಬಳಿಕ CEIR ಪೋರ್ಟಲ್ ನಲ್ಲಿ ತಮ್ಮ ಕಳೆದು ಹೋದ ಮೊಬೈಲ್ ಪೋನ್ ವಿವರ ದಾಖಲಿಸಬೇಕು. ಆ ದೂರಿನ ಪ್ರತಿಯನ್ನು ತಮ್ಮ ಸಮೀಪದ ಪೊಲೀಸ್ ಠಾಣೆಗೆ ನೀಡಬೇಕು ಎಂದು ಮಾಹಿತಿ ನೀಡಿದ್ದಾರೆ. ದೂರಿನ ಪ್ರತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸಲ್ಲಿಸಿದ ನಂತರ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸಲಾಗುವುದು ಎಂದು ಪ್ರದೀಪ್ ಗುಂಟಿ ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೀದರ್: ಆಂಗ್ಲ ಮಾಧ್ಯಮ ಶಾಲೆಗಳನ್ನು ಮುಚ್ಚಿಸಿ ಕನ್ನಡ ಶಾಲೆಗಳನ್ನು ಉಳಿಸಿ ಎಂದು ಕನ್ನಡ ಸಂರಕ್ಷಣಾ ಸಮಿತಿ ಬೀದರ್ ಜಿಲ್ಲಾ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘ( ರಿ) ಬೀದರ್ ಮತ್ತು ಕನ್ನಡ ಸಾಹಿತ್ಯ ಪರಿಷತ್ ಬೀದರ್ ಮತ್ತು ಕನ್ನಡ ಪರ ಸಂಘಟನೆಗಳು ಒತ್ತಾಯ ನಡೆಸಿದವು. ಕನ್ನಡ ಶಾಲೆ ಉಳಿವಿಗಾಗಿ ಮತ್ತು ಕನ್ನಡ ಶಾಲೆಗಳ ಅನುದಾನ ಒಳಪಡಿಸುವ ಸಲುವಾಗಿ ಮತ್ತು ಸರ್ಕಾರದಿಂದ ತೆರೆದ ಆಂಗ್ಲ ಮಾಧ್ಯಮ ಶಾಲೆಗಳನ್ನು ತಕ್ಷಣ ಮುಚ್ಚಬೇಕು ಇಲ್ಲವಾದರೆ ಇಲ್ಲವಾದರೆ ಹೋರಾಟ ನಡೆಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಈ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಗಳ ರಾಜ್ಯಾಧ್ಯಕ್ಷರನ್ನು ನಾರಾಯಣ ಗೌಡ, ಪ್ರವೀಣ ಶೆಟ್ಟಿ, ವಾಟಾಳ್ ನಾಗರಾಜ್ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯ ಅಧ್ಯಕ್ಷರು, ಮಹೇಶ್ ಜೋಶಿ, ನಮ್ಮ ಕರ್ನಾಟಕ ಸೇನೆ ರಾಜ್ಯ ಅಧ್ಯಕ್ಷರು ಬಸವರಾಜ ಪಡುಕೋಟೆ ಅವರನ್ನು ಭೇಟಿ ಮಾಡಲಾಯಿತು. ಬೆಂಗಳೂರಿಗೆ ತೆರಳಿದ್ದ ಬೀದರ್ ಜಿಲ್ಲೆಯ ನಿಯೋಗದಲ್ಲಿ ಜಿಲ್ಲಾ ಗೌರವಾಧ್ಯಕ್ಷರು ರೇವಣ…
ಬೀದರ್: ಬೀದರ್ ಜಿಲ್ಲೆಯ ಔರಾದ ತಾಲೂಕಿನ ದುಡುಕನಾಳ್ ಸಮೀಪ ಪಂಚಾಯತ್ ರಾಜ್ ಇಲಾಖೆ ವತಿಯಿಂದ 2 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಬೇಕಾಗಿದ್ದ ರಸ್ತೆ ಸುಧಾರಣೆ ಕಾಮಗಾರಿ ಟೆಂಡರ್ ಇಲ್ಲದೇ ಆರಂಭಿಸಿದ ಹಿನ್ನೆಲೆ, ಈಗಾಗಲೇ ಜೆ.ಇ.ಶಿವಕುಮಾರ್ ಪುರಾಣಿಕ್ ಅವರನ್ನು ಅಮಾನತ್ ಮಾಡಲಾಗಿದ್ದು, ಪಂಚಾಯತ್ ರಾಜ್ ಇಲಾಖೆ ಇ.ಇ.ಶಿವಾಜಿ ಡೋಣೆ ಹಾಗೂ ಎಇಇ ವೆಂಕಟರಾವ್ ಶಿಂಧೆ ವಿರುದ್ದವೂ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ. ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ್ ದಿಲೀಪ್ ಬದೋಲೆ ಅವರು ಜೆಇ ಶಿವಕುಮಾರ್ ಪುರಾಣಿಕ್ ರನ್ನು ಅಮಾನತ್ ಗೊಳಿಸಿ ಇಇ ಡೋಣೆ ಹಾಗೂ ಶಿಂಧೆ ವಿರುದ್ದವೂ ಶಿಸ್ತು ಕ್ರಮ ಜರುಗಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪಾತ್ರ ಬರೆದಿದ್ದಾರೆ. ಟೆಂಡರ್ ಇಲ್ಲದೇ ದುಡುಕನಾಳ್ ಸಮೀಪ 2 ಕೋಟಿ ರೂ. ಕಾಮಗಾರಿ ಆರಂಭಿಸಿರುವ ಬಗ್ಗೆ ಸ್ಥಳೀಯ ಪತ್ರಿಕಾ ವರದಿಗಳನ್ವಯ ಜಿಲ್ಲಾ ಪಂಚಾಯತ್ ಸಿಇಒ ಗಿರೀಶ್ ಬದೋಲೆ ಅವರು ಜಿ.ಪಂ. ಯೋಜನಾಧಿಕಾರಿ ಹಾಗೂ ಕೆಆರ್ ಡಿಎಲ್…
ತುಮಕೂರು : ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ತುಮಕೂರು ಪ್ರವಾಸ ಆರಂಭಿಸಿದ ನಿಖಿಲ್ ಕುಮಾರಸ್ವಾಮಿ ಅವರು ಗುಬ್ಬಿ ಮತ್ತು ಕುಣಿಗಲ್ ಕ್ಷೇತ್ರದಲ್ಲಿ ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸ ಹಾಗೂ ಮಿಸ್ ಕಾಲ್ ಸದಸ್ಯತ್ವ ಅಭಿಯಾನಕ್ಕೆ ಅವರು ಚಾಲನೆ ನೀಡಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು; ಇವತ್ತಿಂದ ರಾಜ್ಯ ಪ್ರವಾಸ ಮಾಡುತ್ತಿರುವುದು ನನ್ನ ಸೌಭಾಗ್ಯ ಇದು. ನಾನು ಇಡೀ ರಾಜ್ಯ ಪ್ರವಾಸ ಮಾಡುತ್ತಿರುವುದು ನಿಮ್ಮ ಜತೆಗೆ ಸಂಬಂಧ ಬೇಕು, ಸಂಪರ್ಕ ಬೇಕು, ಭಾಂದವ್ಯ ಬೇಕು ನಮ್ಮ ನಿಮ್ಮ ನಂಟು ಬೆಳಿಯಬೇಕು ಎಂದು ಕಾರ್ಯಕರ್ತರಿಗೆ ಅವರು ಮನವಿ ಮಾಡಿದರು. ಈ ಪಕ್ಷದಲ್ಲಿ ದುಡಿದಿರುವ ಎಲ್ಲಾ ಹಿರಿಯರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಪ್ರಾಮಾಣಿಕ ಕೆಲಸ ಮಾಡ್ತೀನಿ. ಯುವಕರು ಇಂದು ದೊಡ್ಡ ಮಟ್ಟದಲ್ಲಿ ನನ್ನ ಜತೆ ಹೆಜ್ಜೆ ಹಾಕಲು ಮುಂದೆ ಬಂದಿದ್ದಾರೆ. ನಾವೆಲ್ಲರೂ ಮೊದಲು ಪಕ್ಷದಲ್ಲಿನ ಹಿರಿಯರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗೋಣ ಎಂದು ಯುವಕರಿಗೆ ಮನವಿ ಮಾಡಿದರು.…
ತಿಪಟೂರು: ತಾಲೂಕಿನಲ್ಲಿ ದಿನ ಕಳೆದಂತೆ ಒಂದೊಂದೇ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು ಅದಕ್ಕೆ ತಾಜಾ ಉದಾಹರಣೆ ಎಂಬಂತೆ ತಿಪಟೂರು ತಾಲೂಕು ವನವಳ್ಳಿ ಹೋಬಳಿ ಹನುಮಂತಪುರ ಗ್ರಾಮದ ಸರ್ವೆ ನಂಬರ್ 23/7ರಲ್ಲಿ ಸುಮಾರು 3 ಎಕರೆ ಜಮೀನನ್ನು ಈ ಹಿಂದೆ ಸರ್ಕಾರವು 1979ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಈರಮ್ಮ ಕೋಂ ವೆಂಕಟರಾಮಯ್ಯ ಎಂಬವರ ಹೆಸರಿಗೆ ಮಂಜೂರು ಮಾಡಿದ್ದು, ಸದರಿ ಜಮೀನು ಇದೀಗ ಮೂಲ ಖಾತೆದಾರರ ಹೆಸರಿನಲ್ಲಿ ಇರುವಾಗಲೇ ಆ ಜಮೀನಿನಲ್ಲಿ ಸವರ್ಣೀಯರು ಜಮೀನನ್ನು ಕಬಳಿಕೆ ಮಾಡಿಕೊಂಡು ಇದೇ ಜಾಗದಲ್ಲೇ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಹಾಗೂ ತಮ್ಮದೇ ಆದಂತಹ ಸ್ವಂತ ಮನೆಯನ್ನು ಕಟ್ಟಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಹಿಂದೆ ಹಲವಾರು ಬಾರಿ ಜಮೀನಿನ ಮಾಲೀಕರ ಮಕ್ಕಳು ತಮ್ಮ ಜಮೀನನ್ನು ಬಿಟ್ಟು ಕೊಡುವಂತೆ ಅನೇಕ ಬಾರಿ ಮನವಿ ಮಾಡಿದರು ಯಾವುದೇ ಜಮೀನನ್ನು ಹಿಂತಿರುಗಿಸದೆ ದಲಿತರ ಮೇಲಿನ ದೌರ್ಜನ್ಯವನ್ನು ಮುಂದುವರಿಸಿದ್ದಾರೆ. ಸಿದ್ದಪ್ಪ ಎಂಬುವರು ಈಗಾಗಲೇ ಜಮೀನು ನಮ್ಮದೇ ಎಂದು ಈಗಾಗಲೇ ಅನೇಕ ಬಾರಿ ಕೋರ್ಟಿಗೆ ಹೋಗಿದ್ದರು,…
ಕೊರಟಗೆರೆ: ತಾಲೂಕಿನ ದೇವರಹಳ್ಳಿ ಬಳಿ ಇರುವ ಮುಕುಂದರಾಯನ ಬೆಟ್ಟದಲ್ಲಿ ಕನ್ನಿಕಾ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿಗಳು ಪರಿಸರ ದಿನಾಚರಣೆ ಅಂಗವಾಗಿ ಬೀಜದ ಉಂಡೆಗಳನ್ನು ಎಸೆದು ವಿಶಿಷ್ಟ ರೀತಿಯಲ್ಲಿ ಪರಿಸರ ಸಂರಕ್ಷಣೆಯ ಸಂದೇಶವನ್ನು ಹರಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ಎಂ.ಜಿ.ಸುಧೀರ್ ಮಾತನಾಡಿ, ಪರಿಸರ ಸಂರಕ್ಷಣೆಯ, ನಾವು ಪರಿಸರವನ್ನು ಪ್ರೀತಿಸುವಂತಹ ಪರಿಸರದೊಂದಿಗೆ ಬದುಕುವಂತಹ ಕಲೆಯನ್ನು ಕಲಿತುಕೊಳ್ಳಬೇಕು ಎಂದು ಮಕ್ಕಳಿಗೆ ತಿಳಿಸಿದರು. ಶಾಲೆಯ ಜೊತೆ ಪರಿಸರ ದಿನಾಚರಣೆ ಆಚರಣೆಯಲ್ಲಿ ಮಕ್ಕಳಿಗೆ ಸೀಟ್ ಬಾಲ್ ತಯಾರಿಸಿ ಪರಿಸರದ ಅರಿವಿನ ಬಗ್ಗೆ ಕೈಜೋಡಿಸಿದ್ದ ಸಮಾಜ ಸೇವಕಿ ವಾಣಿ ಎಂ.ಪಿ. ಅವರ ಬಗ್ಗೆ ಮಾತನಾಡಿ ಮಹಿಳೆಯರಿಗೆ ಆತ್ಮವಿಶ್ವಾಸ ತುಂಬಿದ ಸ್ವಾವಲಂಬಿ ಮಹಿಳೆಯಾಗಿ ಗುರುತಿಸಿಕೊಂಡಿದ್ದಾರೆ. ಜೊತೆಗೆ, ಕನ್ನಡ ಜನಪದ ಪರಿಷತ್ತಿನಲ್ಲಿ ಸಂಯುಕ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಜನಪದ ಪರಂಪರೆಯ ಸಂರಕ್ಷಣೆಗೆ ಸಹಕಾರ ನೀಡುತ್ತಿದ್ದಾರೆ ಎಂದರು. ಸಂಸ್ಥೆಯ ಕಾರ್ಯದರ್ಶಿ ಕೆಎಸ್ವಿ ರಘು ಮಾತನಾಡಿ, ಸಮಾಜಮುಖಿ ಕಾರ್ಯ ಮಾಡಲು ವಾಣಿ ಮತ್ತು ದರ್ಶನ್ ಸತಿಪತಿಗಳು ಪರಸ್ಪರ ಪ್ರೇರಣೆಯಾಗಿ, ಸಾಂಸ್ಕೃತಿಕ ಮೌಲ್ಯಗಳ ರಕ್ಷಣೆ, ಪರಿಸರ ಪೋಷಣೆ ಮತ್ತು ಸಮಾಜದ…
ಪಾವಗಡ: ಜೂ 15: ಆಗಸ್ಟ್ 1 ರೊಳಗೆ ಆಟೋ ರಿಕ್ಷಾಗಳಿಗೆ ಸಂಬಂಧಿಸಿದ ಚಾಲನ ಪರವಾನಗಿ, ಎಫ್ ಸಿ, ವಿಮಾ, ಪರ್ಮಿಟ್, ಸಮವಸ್ತ್ರ ಇನ್ನಿತರೆ ದಾಖಲಾತಿಗಳು ಕಡ್ಡಾಯವಾಗಿ ಆಟೋ ಚಾಲಕರು ಹೊಂದಿರಬೇಕು, ಇಲ್ಲವಾದಲ್ಲಿ ದಂಡದ ಬದಲು ಕೇಸು ದಾಖಲಿಸಿ ಆಟೋವನ್ನು ಸೀಜ್ ಮಾಡಲಾಗುವುದೆಂದು ಆಟೋ ಚಾಲಕರಿಗೆ ಪಾವಗಡ ಪೊಲೀಸ್ ಠಾಣೆಯ ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ ನೀಡಿದರು. ಪಾವಗಡ ಪಟ್ಟಣದ ಎಸ್ ಎಸ್ ಕೆ ಹಳೆ ಛತ್ರದಲ್ಲಿ ತುಮಕೂರು ಜಿಲ್ಲಾ ಪೊಲೀಸ್, ಮಧುಗಿರಿ ಉಪವಿಭಾಗ, ಪಾವಗಡ ಪೊಲೀಸ್ ಠಾಣೆ ವತಿಯಿಂದ ಆಟೋ ಚಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಇತ್ತೀಚಿಗೆ ಅಪಘಾತಗಳು ಹೆಚ್ಚಾಗುತ್ತಿದ್ದು ಈ ಹಿನ್ನಲೆ ಆಟೋ ಚಾಲಕರು ಸಾರಿಗೆ ಇಲಾಖೆಯ ಮಾನದಂಡಗಳನ್ನು ಅನುಸರಿಸದೆ ಅಗತ್ಯ ದಾಖಲಾತಿಗಳಿಲ್ಲದೆ ಬೇಕಾಬಿಟ್ಟಿ ಆಟೋ ಚಲಾಯಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು ಆಗಸ್ಟ್ 1 ರೊಳಗೆ ದಾಖಲಾತಿ ಸರಿಪಡಿಸಿಕೊಂಡು ಪೊಲೀಸ್ ಠಾಣೆಯಲ್ಲಿ ಆಟೋಗಳಿಗೆ ಸಂಬಂದ ಪಟ್ಟ ದಾಖಲಾತಿ ನೀಡಿ ಪೊಲೀಸ್ ಠಾಣೆಯ ಕ್ರಮ ಸಂಖ್ಯೆಯನ್ನು ಪಡೆದು ಆಟೋಗಳನ್ನು ಚಲಾಯಿಸುವಂತೆ ಖಡಕ್ ಸಂದೇಶ…
ತುಮಕೂರು: ತುಮಕೂರು ಜಿಲ್ಲಾಧಿಕಾರಿಯಾದ ಶುಭ ಕಲ್ಯಾಣ್, (ಭಾ.ಆ.ಸೇ.) ISDA Infracon National Awards — 2025 (IINA) ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಹಾಗೂ ಮಹತ್ವದ ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕಾಗಿ ಬೇಕಾದ ಭೂಸ್ವಾಧೀನ ಪ್ರಕ್ರಿಯೆಗೆ ಇವರು ತೆಗೆದುಕೊಂಡ ಕ್ರಮಗಳಿಗೆ ಈ ಪ್ರಶಸ್ತಿ ಲಭಿಸಿದೆ. ತುಮಕೂರು ಜಿಲ್ಲೆಯ ಸರಾಸರಿ ವಾರ್ಷಿಕ ಮಳೆಯ ಪ್ರಮಾಣ ಕೇವಲ 590 ಮಿ.ಮೀ. ಆಗಿದ್ದು, ಈ ಹಿನ್ನಲೆಯಲ್ಲಿ, ಕುಡಿಯುವ ನೀರಿಗೆ ಹೆಚ್ಚಿನ ಮಹತ್ವ ನೀಡಬೇಕಾಗಿರುವುದು ಅತ್ಯವಶ್ಯಕವಾಗಿದ್ದು. ಈ ಸಮಸ್ಯೆಯ ತೀವ್ರತೆಯನ್ನು ಅರಿತುಕೊಂಡ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರವರು ಎತ್ತಿನಹೊಳೆ ಯೋಜನೆ ಅನುಷ್ಠಾನಕ್ಕಾಗಿ ಹೆಚ್ಚಿನ ಪ್ರಾಮುಖ್ಯತೆ ನೀಡಿರುತ್ತಾರೆ. ಎತ್ತಿನಹೊಳೆ ಯೋಜನೆಗೆ ಅವಶ್ಯಕವಾಗಿ ಬೇಕಾದ 1335 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡು, ರೂ. 365 ಕೋಟಿ ಪರಿಹಾರ ಹಣವನ್ನು ಕೇವಲ ಒಂದು ವರ್ಷದ ಅವಧಿಯಲ್ಲಿ ಭೂ-ಮಾಲೀಕರಿಗೆ ಪಾರದರ್ಶಕವಾಗಿ ಪಾವತಿಸಿ ಭೂ ಸ್ವಾಧೀನಕ್ಕೆ ಹೆಚ್ಚಿನ ಒತ್ತು ನೀಡಿರುತ್ತಾರೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 75ಕ್ಕೂ ಹೆಚ್ಚು ಪರಿಶೀಲನಾ ಸಭೆಗಳನ್ನು ಕೈಗೊಂಡು,…