Author: admin

ತುಮಕೂರು:  ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ರಾಜೇಂದ್ರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ತರಬೇತಿ ಶಿಬಿರದಲ್ಲಿ ಮೈಮುಟ್ಟಿ ತಪ್ಪು ವಿಷಯಗಳನ್ನು ಕಲಿಸುತ್ತಿದ್ದಾರೆ, ಕಿರುಕುಳ ನೀಡಿದ್ದಾರೆ ಎಂದು ಐವರು ಮಹಿಳಾ ಉದ್ಯೋಗಿಗಳು ಜಿಲ್ಲಾಧಿಕಾರಿ, ಮಹಿಳಾ ಆಯೋಗ ಮತ್ತು ಅಗ್ನಿಶಾಮಕ ಇಲಾಖೆಯ ಐಜಿಗೆ ಲಿಖಿತ ದೂರು ನೀಡಿದ್ದಾರೆ. ದೂರಿನ ಜೊತೆಗೆ ಪೆನ್ ಡ್ರೈವ್ ದಾಖಲೆಯನ್ನೂ ನೀಡಲಾಗಿದೆ. ತರಬೇತಿಯ ಸಮಯದಲ್ಲಿ ಅವರು ಮಹಿಳಾ ಸಿಬ್ಬಂದಿಯೊಂದಿಗೆ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ಅಪರೇಷನ್ ಸಿಂಧೂರದಲ್ಲಿ ದೇಶದ ಸೈನಿಕರ ಆತ್ಮಸ್ಟೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಬೃಹತ್ ತಿರಂಗ ಯಾತ್ರೆಯನ್ನು ಕೇಂದ್ರ ಸಚಿವ ವಿ.ಸೋಮಣ್ಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಂದ್ರ, ರಾಜ್ಯಸಭೆ ಸದಸ್ಯ ಜಗ್ಗೇಶ್, ವಿವಿಧ ಮಠಗಳ ಸ್ವಾಮೀಜಿ ಗಳು ಹಾಜರಿದ್ದರು.  ಬೃಹತ್ ರಾಷ್ಟ ಧ್ವಜವನ್ನು ಹಿಡಿದುಕೊಂಡು ವಿದ್ಯಾರ್ಥಿಗಳು ಸಾರ್ವಜನಿಕರು ಸಾಗಿದರು. ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ವಿ ಸೋಮಣ್ಣ,  ದೇಶದ ಸಾರ್ವಜನಿಕರನ್ನು ಮುಟ್ಟಿದರೆ ಯಾವ ರೀತಿ ಉತ್ತರವನ್ನು ಕೊಡುತ್ತೇವೆ ಎಂಬುದನ್ನು ದೇಶದ ಸೈನಿಕರು ದಿಟ್ಟ ಉತ್ತರವನ್ನು ನೀಡಿದ್ದಾರೆ. ಪ್ರಪಂಚಕ್ಕೆ ಈ ರೀತಿಯಾದ ಒಂದು ಸಂದೇಶವನ್ನು ನೀಡಿದ್ದಾರೆ ಎಂದರು. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಅದನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಪ್ರಧಾನಿ ಮೋದಿ ಅವರು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ತಿರಂಗ ಯಾತ್ರೆಯನ್ನು ಮಾಡುತ್ತಿದ್ದೇವೆ  ಎಂದು ತಿಳಿಸಿದರು. 27 ಅಮಾಯಕ ಸಾರ್ವಜನಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳಿಗೆ ಹಾಗೂ ಪಾಕಿಸ್ತಾನಕ್ಕೆ ಪ್ರಧಾನಿ ಮೋದಿಯವರು ನೂರಾರು ಉಗ್ರಗಾಮಿಗಳನ್ನು ಕೊಂದು ಹಾಕುವ ಮೂಲಕ ಉತ್ತರವನ್ನು…

Read More

ತಿಪಟೂರು: ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಬೆಂಕಿಗೆ ಆಹುತಿಗೊಂಡ ರಾಧಾಮಣಿ ಮನೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ, ಸಹಾಯಧನದ ಪತ್ರ ವಿತರಣೆ ಮಾಡಲಾಯಿತು. ತಿಪಟೂರು ತಾಲ್ಲೂಕಿನ ರಂಗಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಕಲ್ಲಯ್ಯನ ಪಾಳ್ಯ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ರಾಧಾಮಣಿಗಂಗಾದರಯ್ಯ ಎಂಬುವವರ ಮನೆ ಬೆಂಕಿಗಾಹುತಿಯಾಗಿ ಸರಿಸುಮಾರು 20 ಲಕ್ಷ ಮೊತ್ತದಷ್ಟು ನಷ್ಟ ಅನುಭವಿಸಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು  ನೊಂದ ಕುಟುಂಬಕ್ಕೆ 25 ಸಾವಿರ ಮೊತ್ತದ ಸಹಾಯ ಧನವನ್ನು ಮಂಜೂರುಗೊಳಿಸಿದ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಿಪಟೂರು ತಾಲ್ಲೂಕಿನ ಯೋಜನಾಧಿಕಾರಿಗಳಾದ ಉದಯ್ ಕೆ. ರವರು ರಾಧಾಮಣಿಯ ಕುಟುಂಬದವರಿಗೆ ವಿತರಿಸಿದರು. ಈ ಸಂದರ್ಭ ರಂಗಾಪುರ ವಲಯ ಮೇಲ್ವಿಚಾರಕ ದಿನೇಶ್ ಕೆ., ಸೇವಾಪ್ರತಿನಿಧಿ ರೂಪ ಹಾಗೂ ಧರ್ಮಸ್ಥಳ ಸ್ವಸಹಾಯ ಸಂಘದ ಪಾಲುದಾರು ಉಪಸ್ಥಿತರಿದ್ದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೈಪರ್ ಟೆನ್ಶನ್ ದಿನಾಚರಣೆ ಮಾಡಲಾಯಿತು. ಹಿರಿಯ ಜೀವಿಗಳಿಗೆ ಹೆಪಟೈಂಶನ್ ಬಗ್ಗೆ ಮಾಹಿತಿ ನೀಡಿ,  ಬಿಪಿ, ಶುಗರ್ ಟೆಸ್ಟ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. (ಎನ್ ಸಿ ಡಿ) ವಿಭಾಗದ ವೈದ್ಯರಾದ  ಆಶಾ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದಂತ ವೈದ್ಯಾಧಿಕಾರಿಗಳಾದ ರೇಣುಕಾ ನಾಗರಾಳ್ಕರ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ,  ನಾವು ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯಕರ ಜೀವನವನ್ನು ನಡೆಸಬಹುದು. ಯೋಗ ಮತ್ತು ಧ್ಯಾನವು ನಮಗೆ ಇದನ್ನು ಸಾಧಿಸಲು ಸಹಾಯ ಮಾಡುತ್ತದೆ. ಸದಾ ಒತ್ತಡದಿಂದ ತುಂಬಿರುವ ಇಂದಿನ ವೇಗದ ಜಗತ್ತಿನಲ್ಲಿ ಆತಂಕ ಮತ್ತು ಉದ್ವೇಗವನ್ನು ಎದುರಿಸಲು ಮತ್ತು ನಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಲು ಒಂದು ಮಾರ್ಗವನ್ನು ಕಂಡುಹಿಡಿಯುವುದು ಅತ್ಯಗತ್ಯ ಎಂದರು. ಮಾನಸಿಕ ಆರೋಗ್ಯದ ಸಮಸ್ಯೆಗಳ ಜೊತೆಗೆ ದೈಹಿಕ ಆರೋಗ್ಯ ಸಮಸ್ಯೆಗಳಾದ ಅಧಿಕ ರಕ್ತದೊತ್ತಡ (High Blood Pressure), ಮಧುಮೇಹ (Diabetes), ಅಧಿಕ ಕೊಲೆಸ್ಟ್ರಾಲ್ ಮಟ್ಟಗಳು ಮುಂತಾದವುಗಳಿಗೆ ಒತ್ತಡವು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ.…

Read More

ತುಮಕೂರು:  ಜಿಲ್ಲೆಯಲ್ಲಿ ಮೇ 5 ರಿಂದ ಕೈಗೊಂಡಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯಡಿ ಮನೆ–ಮನೆ ಭೇಟಿ ನೀಡಿ ಗಣತಿ ಮಾಡುವ ಅವಧಿಯನ್ನು ಮೇ 25ರವರೆಗೂ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಪತ್ರಿಕಾ ಹೇಳಿಕೆ ನೀಡಿದ ಅವರು ಮನೆ–ಮನೆ ಭೇಟಿ ಅವಧಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿ ಸಂಗ್ರಹಿಸಲು ಮೇ 26 ರಿಂದ 28ರವರೆಗೆ ಸಮೀಕ್ಷೆಯ ಬ್ಲಾಕ್ ವ್ಯಾಪ್ತಿಯಲ್ಲಿ ವಿಶೇಷ ಶಿಬಿರಗಳನ್ನು ನಡೆಸಲಾಗುವುದು. ಮನೆ-ಮನೆ ಸಮೀಕ್ಷೆ ಹಾಗೂ ವಿಶೇಷ ಶಿಬಿರದಲ್ಲಿ ಜಾತಿಯ ಬಗ್ಗೆ ಘೋಷಣೆ ಮಾಡಿಕೊಳ್ಳದವರು ಆನ್‌ ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಲು ಮೇ 19 ರಿಂದ 28ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಸಮೀಕ್ಷೆಯಲ್ಲಿ ತಾಂಡಾ, ಕಾಲೋನಿಗಳ ಮನೆ–ಮನೆ ಭೇಟಿ ಕೈಬಿಟ್ಟು ಹೋಗಿದ್ದಲ್ಲಿ ಈ ದಿನವೇ ತೆರಳಿ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಬೇಕು. ತಮಗೆ ವಹಿಸಿರುವ ಗಣತಿ ಕಾರ್ಯವನ್ನು ಶೇ.100ರಷ್ಟು ಪೂರ್ಣಗೊಳಿಸಬೇಕು. ಸಮೀಕ್ಷಾ ಕಾರ್ಯಕ್ಕೆ ಗೈರು ಹಾಜರಾಗಿರುವ…

Read More

ಸದಾ ಒಂದಲ್ಲ ಒಂದು ವಿವಾದಗಳಿಗೆ ಕಾರಣವಾಗುತ್ತಿದ್ದ ಬಾಲಿವುಡ್ ನ ಮಾದಕ ನಟಿ ಪೂನಂ ಪಾಂಡೆಯ ಇದೀಗ ಹೊಸ ಶೈಲಿಯ ಉಡುಪಿನೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ ನೀಡುತ್ತಿದ್ದಾರೆ. ಅಂದ ಹಾಗೆ ಇವರ ಉಡುಪು ಕಂಡು ಸಾಮಾಜಿಕ ಜಾಲತಾಣ ಬಳಕೆದಾರರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ನ್ಯೂಸ್ ಪೇಪರ್ ನ್ನು ಮೈಗೆ ಸುತ್ತಿಕೊಂಡು ಫೋಟೋ ಶೂಟ್ ನಡೆಸಿರುವ ಪೂನಂ “ನನ್ನನ್ನು ಓದಲು ಬಯಸುತ್ತೀರಾ? ಎಂದು ಶೀರ್ಷಿಕೆ ನೀಡಿದ್ದಾರೆ. ಈ ಪೋಸ್ಟ್ ಗೆ ಜನರು ತಮಗೆ ತೋಚಿದಂತೆ ಕಾಮೆಂಟ್ ಗಳನ್ನು ಹಾಕುತ್ತಿದ್ದಾರೆ. ಸಾಕಷ್ಟು ಜನರು ನ್ಯೂಸ್ ಪೇಪರ್ ಕೊಡಿ ಓದಿ ಕೊಡುತ್ತೇವೆ ಎಂದು ಕಾಮೆಂಟ್ ಹಾಕಿ ನಟಿಗೆ ತಿರುಗೇಟು ನೀಡಿದ್ದಾರೆ.  ಅಂತೂ ತಮ್ಮ ಹೊಸ ಫೋಟೋ ಮೂಲಕ ನಟಿ ಪೂನಂ ಪಾಂಡೆ ಮತ್ತೆ  ಅಭಿಮಾನಿಗಳಿಗೆ ಕಚಗುಳಿಯಿಟ್ಟಿದ್ದಾರೆ. ಈ ಹಿಂದೆ ತಾನು ಗರ್ಭ ಕಂಠ ಕ್ಯಾನ್ಸರ್ ನಿಂದ ಸಾವನ್ನಪ್ಪಿರುವುದಾಗಿ ನಟಿ ಪೂನಂ ತನ್ನ ಸಾವಿನ ಸುದ್ದಿಯನ್ನು ತಾನೇ ಹಬ್ಬಿಸಿಕೊಂಡಿದ್ದರು. ಈ ಸುದ್ದಿಯನ್ನು ಇಡೀ ದೇಶವೇ ನಂಬುವಂತೆ ಮಾಡಿದ್ದರು. ಆದರೆ ಬಳಿಕ…

Read More

ಬೆಂಗಳೂರು: ದಕ್ಷಿಣ ವಲಯದ ಇಂದಿರಾ ಕ್ಯಾಂಟೀನ್‌ ನಲ್ಲಿ ಸುಮಾರು 7 ಕೋಟಿ ರೂ.ಗಳ ಅವ್ಯವಹಾರದ ಹಿನ್ನೆಲೆ ಬಿಬಿಎಂಪಿ ವಲಯದ ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಪಿ. ಅವರನ್ನು ಅಮಾನತುಗೊಳಿಸಲಾಗಿದೆ. ಪಾಲಿಕೆಯ ದಕ್ಷಿಣ ವಲಯಕ್ಕೆ ಆಹಾರ ಪೂರೈಕ ಮಾಡಿದ ಚೆಫ್ಟಾಕ್ ಫುಡ್ ಅಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಬಿಲ್ ಪಾವತಿಯಲ್ಲಿ 7 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ನಡೆದಿದೆ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಆರೋಗ್ಯಾಧಿಕಾರಿಯಾಗಿದ್ದ ಡಾ.ಕಲ್ಪನಾ ಪಿ ಅವರು ಆರ್ಡರ್ ಗಳನ್ನು ಪರಿಶೀಲಿಸದೆ ಅಂದಾಜು ರೂ. 9.72 ಕೋಟಿ ಪಾವತಿಸಿದ್ದಾರೆ. ಆದರೆ ಅದಕ್ಕೆ ವಾಸ್ತವವಾಗಿ ಪಾವತಿಸಬೇಕಾದದ್ದು ಕೇವಲ ರೂ. 2.27 ಕೋಟಿ ಮಾತ್ರ,. ಇದರಿಂದ ಹೆಚ್ಚುವರಿಯಾಗಿ ಸುಮಾರು 7 ಕೋಟಿ ರೂ. ಪಾವತಿಸಿದ್ದಕ್ಕಾಗಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಚಂಡೀಗಢ: ಪಾಕಿಸ್ತಾನ ಸೇನೆ ಮತ್ತು ಐಎಸ್‌ ಐಗೆ ಭಾರತ ಸೇನೆಯ ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡುತ್ತಿದ್ದ ಆರೋಪದಲ್ಲಿ ಹರ್ಯಾಣದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಸ್ತ್‌ಗಢ ಚೀಕಾ ಗ್ರಾಮದ ದೇವೇಂದ್ರ ಸಿಂಗ್ (25) ಬಂಧಿತ ಆರೋಪಿಯಾಗಿದ್ದಾನೆ. ವಿಚಾರಣೆಯ ಸಂದರ್ಭದಲ್ಲಿ ದೇವೇಂದ್ರ ಸಿಂಗ್ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್‌ ಐ ಜೊತೆ ಸಂಪರ್ಕದಲ್ಲಿರುವುದಾಗಿ ಬಹಿರಂಗಪಡಿಸಿದ್ದಾನೆ. ದೇವೇಂದ್ರ ಸಿಂಗ್ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆಯೂ ಐಎಸ್‌ ಐಗೆ ಆಗಾಗ ಮಾಹಿತಿ ರವಾನಿಸಿದ್ದಾನೆ. ಗುಪ್ತಚರ ಮಾಹಿತಿ ಆಧಾರದ ಮೇಲೆ ಕೈಥಲ್ ಜಿಲ್ಲಾ ಪೊಲೀಸರು ದೇವೇಂದ್ರ ಸಿಂಗ್‌ನನ್ನು ಬಂಧಿಸಿದ್ದಾರೆ. ಸೈಬರ್ ಪೊಲೀಸ್ ಠಾಣೆಯಲ್ಲಿ ದೇವೆಂದ್ರ ಸಿಂಗ್ ಬಳಿ ಪತ್ತೆಯಾದ ಸಾಧನಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. ತನಿಖೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಎಸ್‌ ಪಿ ಕೈಥಲ್ ವೀರಭನ್ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಕಠ್ಮಂಡು:  ಮೌಂಟ್ ಎವರೆಸ್ಟ್ ಏರಿದ ಭಾರತೀಯ ಪರ್ವತಾರೋಹಿಯೊಬ್ಬರು ಇಳಿಯುವಾಗ ಸಾವನ್ನಪ್ಪಿರುವ ಘಟನೆ ನಡೆದಿದ್ದು,  ಪಶ್ಚಿಮ ಬಂಗಾಳದ ಸುಬ್ರತಾ ಘೋಷ್(45) ಮೃತಪಟ್ಟ ಪರ್ವತಾರೋಹಿಯಾಗಿದ್ದಾರೆ. ಇವರು 29,032 ಅಡಿ ಎತ್ತರದ ಮೌಂಟ್ ಎವರೆಸ್ಟ್ ಶಿಖರವನ್ನು ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ತಲುಪಿದರು. ಬಳಿಕ ಪರ್ವತ ಇಳಿಯುವಾಗ ಅವರಿಗೆ ಇದ್ದಕ್ಕಿದ್ದಂತೆ ಆಯಾಸ ಮತ್ತು ಹೈಟ್ ಫೋಬಿಯಾ ಕಾಣಿಸಿಕೊಂಡಿದ್ದು, ಹಿಲರಿ ಸ್ಟೆಪ್ಸ್ ಬಳಿ ಅವರು ಮೃತಪಟ್ಟಿದ್ದಾರೆ ಎಂದು ಪರ್ವತಾರೋಹಣ ಆಯೋಜಕರು ಮಾಹಿತಿ ನೀಡಿದ್ದಾರೆ. ಹೆಚ್ಚು ಆಯಾಸವಾದ ಬಳಿಕ ಘೋಷ್ ಕೆಳಗೆ ಇಳಿಯಲು ನಿರಾಕರಿಸಿದರು. ಅವರ ಮಾರ್ಗದರ್ಶಿ ಅವರನ್ನು ಕೆಳಗೆ ಕರೆತರಲು ಪ್ರಯತ್ನಿಸಿದರು. ಆದರೆ ಘೋಷ್‌ ರಿಂದ ಇಳಿಯಲು ಸಾಧ್ಯವಾಗಲಿಲ್ಲ. ಆ ಬಳಿಕ ಮಾರ್ಗದರ್ಶಿ ಗುರುವಾರ ರಾತ್ರಿ ಒಂಟಿಯಾಗಿ ಕ್ಯಾಂ ಪ್‌ಗೆ ಹಿಂತಿರುಗಿ ಮಾಹಿತಿ ನೀಡಿದರು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ನವದೆಹಲಿ: ಪಹಲ್ಗಾಮ್ ದಾಳಿಯ ನಂತರ ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಭಾರತಕ್ಕೆ ಹೆಚ್ಚುವರಿಯಾಗಿ ಸಿಗಲಿರುವ ನೀರನ್ನು ವಿದ್ಯುತ್ ಬಳಕೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ. ಸಿಂಧೂ ನದಿಯ ಉಪ ನದಿಯಾದ ಚೆನಾಬ್​ ಮೂಲಕ ಹರಿಯುತ್ತಿದ್ದ ನೀರನ್ನು ತಡೆಹಿಡಿಯಲಾಗಿದೆ. ಕೃಷಿಗೆ ಅಧಿಕವಾಗಿ ಬಳಸಲಾಗುತ್ತಿದ್ದ ಚೆನಾಬ್​ ನದಿ ನೀರನ್ನು ಇದೀಗ, ವಿದ್ಯುತ್​ ಉತ್ಪಾದನೆಗೂ ಬಳಸಿಕೊಳ್ಳಲು ಯೋಜಿಸಲಾಗಿದೆ. ಹೀಗಾಗಿ, ನದಿಗೆ ಹೊಂದಿಕೊಂಡಿರುವ ರಣವೀಲ್​ ಕಾಲುವೆಯ ಉದ್ದವನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಚೆನಾಬ್​ ಮೂಲಕ ಪಾಕಿಸ್ತಾನಕ್ಕೆ ಹರಿದು ಹೋಗುತ್ತಿದ್ದ ನೀರಿನಿಂದ 3 ಸಾವಿರ ಮೆಗಾವ್ಯಾಟ್​ ಜಲವಿದ್ಯುತ್​ ಅನ್ನು ಉತ್ಪಾದಿಸಲು ಭಾರತ ಯೋಜಿಸುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ಅಧ್ಯಯನ ನಡೆಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More