Author: admin

ತುಮಕೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಹಾಗೂ ಆತನ ಕೃತ್ಯಕ್ಕೆ ಸಹಕರಿಸಿದ ಬಾಲಕಿ ಚಿಕ್ಕಮ್ಮ ಮತ್ತು ಅಜ್ಜಿಗೆ ಜೀವಾವಧಿ ಶಿಕ್ಷೆ ಮತ್ತು 3.50 ಲಕ್ಷ ರೂ. ದಂಡ ವಿಧಿಸಿ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ POCSO ನ್ಯಾಯಾಲಯವು ತೀರ್ಪು ನೀಡಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯ ತಂದೆಗೆ ಎರಡು ಮದುವೆಯಾಗಿತ್ತು. 2ನೇ ಪತ್ನಿ ರತ್ನಮ್ಮ ಮತ್ತು ಆಕೆಯ ತಾಯಿ ಗಂಗಮ್ಮ ನೊಂದ ಬಾಲಕಿಯನ್ನು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೆಲಸಕ್ಕೆ ಹೋಗೋಣ ಎಂದು ಸುಳ್ಳು ಹೇಳಿ ಪೆನುಗೊಂಡಕ್ಕೆ ಕರೆದೊಯ್ದು ಅಲ್ಲಿಂದ ವರಂಗಲ್ ನ ಶೆಡ್ ವೊಂದಕ್ಕೆ ಕರೆದೊಯ್ದು ಕೂಡಿ ಹಾಕಿ ಆರೋಪಿ ಅರುಣ್ ಕುಮಾರ್ ನನ್ನು ಶೆಡ್ ನೊಳಗೆ ಕಳುಹಿಸಿದ್ದು, ಆತ ನೊಂದ ಬಾಲಕಿ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಘಟನೆ ಸಂಬಂಧ ಬಾಲಕಿಯ ತಾಯಿ ನೀಡಿದ ದೂರಿನಂತೆ ಪಾವಗಡ ಪೊಲೀಸ್ ಇನ್ಸ್ ಪೆಕ್ಟರ್…

Read More

ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-–2025 ಕ್ಕೆ ಸಂಬಂಧಿಸಿದಂತೆ, ಒಳಮೀಸಲಾತಿ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದ್ದು, ಮನೆ ಮನೆ ಭೇಟಿ ಸಮೀಕ್ಷೆಯು ಮೇ 17 ರಿಂದ 25 ವರೆಗೆ ವಿಸ್ತರಿಸಲಾಗಿದೆ. ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ನಡೆದಿರುವ ಸಮೀಕ್ಷೆ ಕಾರ್ಯದ ಅವಧಿಯನ್ನು ಮೇ. 28 ರವರೆಗೆ ವಿಸ್ತರಿಸಲಾಗಿದೆ. ಮತಗಟ್ಟೆವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವ ಅವಧಿಯನ್ನು ಮೇ 26 ರಿಂದ 28 ಮೇ ವರೆಗೂ ನಿಗದಿಗೊಳಿಸಿದೆ. ಆನ್ಲೈನ್ ಮೂಲಕ ಸ್ವಯಂ ಘೋಷಣೆ ಮಾಡುವ ಅವಧಿಯನ್ನು ಮೇ 19 ರಿಂದ ಮೇ 28 ರವರೆಗೆ ನಿಗದಿಗೊಳಿಸಿದೆ. ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಶುಕ್ರವಾರ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಎಸ್ ಸಿ ಒಳ ಮೀಸಲು ಏಕಸದಸ್ಯ ವಿಚಾರಣಾ ಆಯೋಗದ ಮುಖ್ಯಸ್ಥ…

Read More

ಸರಗೂರು:  ಶಂಕಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನ ಭೂಮಿ ಒತ್ತುವರಿಯಾಗಿರುವ ಬಗ್ಗೆ ದೂರು ಬಂದಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಹಾಗೂ ಶಾಸಕರು ಆದೇಶದಂತೆ ಒತ್ತುವರಿ ತೆರವುಗೊಳಿಸಿ ಗ್ರಾಮ ಪಂಚಾಯಿತಿ ಸುರ್ಪದಿಗೆ ನೀಡಲಾಗಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದರು. ಶಂಕಹಳ್ಳಿ ಗ್ರಾಮಸ್ಥರಿಗೆ ಮೀಸಲಿಟ್ಟದ ಸ್ಮಶಾನ ಭೂಮಿಯನ್ನು ಅಕ್ರಮಿಕೊಂಡಿದ ಭೂಮಿಯನ್ನು ಒತ್ತುವರಿ ತೆರವುಗೊಳಿಸಿ ಗ್ರಾಮಸ್ಥರಿಗೆ ಸಂಸ್ಕಾರ ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಶಂಕಹಳ್ಳಿ ಗ್ರಾಮದ ಎಲ್ಲಾ ಸಮುದಾಯದ ಮಾಡಿದ್ದ ಮನವಿಗೆ ತಾಲೂಕು ಆಡಳಿತ ಅಧಿಕಾರಿಗಳು ಸ್ಪಂದಿಸಿ ಶುಕ್ರವಾರದಂದು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ ಶಂಕಹಳ್ಳಿ ರುದ್ರಭೂಮಿ ನಾಮಫಲಕವನ್ನು ತಹಶೀಲ್ದಾರ್ ಮೋಹನಕುಮಾರಿ ಸಮ್ಮುಖದಲ್ಲಿ ನಡೆಸಿದರು. ಅ ವ್ಯಕ್ತಿಯಿಂದ ಈ ಜಾಗದ ದಾಖಲೆಗಳು ತಂದರೆ ದಾಖಲೆಗಳನ್ನು ಪರಿಶೀಲಿಸಲಾಗುವುದು. ಆ ವ್ಯಕ್ತಿಗೆ ನಮ್ಮ ಅಧಿಕಾರಿಗಳು ಹಾಗೂ ಗ್ರಾಮಸ್ಥರಿಂದ ಕರೆ ಮಾಡಿ ಜಮೀನು ಹತ್ತಿರಕ್ಕೆ ಬರಬೇಕು ಎಂದು ಹೇಳಿದರೂ, ಆ ವ್ಯಕ್ತಿ ಬರಲಿಲ್ಲ. ಇದರಿಂದಾಗಿ ಆ ವ್ಯಕ್ತಿ ಸುಳ್ಳು ದಾಖಲೆಗಳನ್ನು ಮಾಡಿಕೊಂಡು ಈ ಸ್ಮಶಾನ ಭೂಮಿಯನ್ನು ಆಕ್ರಮಿಸಿಕೊಳ್ಳಲು ಮುಂದಾಗಿದ್ದಾರೆ. ಶಂಕಹಳ್ಳಿ ಗ್ರಾಮದ  ಸ್ಮಶಾನ ಭೂಮಿಯನ್ನು…

Read More

ತುಮಕೂರು:  ಆಪರೇಷನ್ ಸಿಂಧೂರ್ ಯಶಸ್ವಿ ಹಿನ್ನೆಲೆ, ರಾಷ್ಟ್ರೀಯ ರಕ್ಷಣೆಗಾಗಿ, ದೇಶ ಹಾಗೂ ಸೈನಿಕರ ಬೆಂಬಲಿಸಿ ಬೃಹತ್ ತಿರಂಗ ಯಾತ್ರೆ  ತುಮಕೂರು ನಗರದಲ್ಲಿ ಮೆ 18 ಭಾನುವಾರ ನಡೆಯಲಿದೆ. ತುಮಕೂರು ನಗರೀಕರು ಹಾಗೂ ವಿವಿಧ ಸಂಘಟನೆಗಳಿಂದ ಸಹಯೋಗದಲ್ಲಿ ತಿರಂಗ ಯಾತ್ರೆ ಆಯೋಜನೆಯಾಗಲಿದೆ.  ರಾಷ್ಟ್ರೀಯತೆ ಹಾಗೂ ರಾಷ್ಟ್ರದ ಸಾರ್ವಭೌಮತ್ವ, ಸೈನಿಕರ‌ ಪರಾಕ್ರಮವನ್ನ ಮೇಳೈಸುವ ತಿರಂಗ ಯಾತ್ರೆಯು,  ತುಮಕೂರು ನಗರದ ಎಸ್ ಐಟಿ ಮುಂಭಾಗದಿಂದ ಪ್ರಾರಂಭ ಆಗಲಿದೆ. ಎಸ್ ಐಟಿ,‌ ಗಂಗೋತ್ರಿ ರಸ್ತೆ, ಎಸ್ ಎಸ್ ಪುರಂ, ಸೋಮೇಶ್ವರ, ಹೈಸ್ಕೂಲ್ ಮೈದಾನಲ್ಲಿ ತಿರಂಗ ಯಾತ್ರೆ ಸಾಗಲಿದೆ ಎಂದು  ತಿರಂಗ ಯಾತ್ರೆ ಬಗ್ಗೆ  ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು: ಜಿಲ್ಲೆಯ ತಿಪಟೂರಿನ ಕಲ್ಪತರು ಕ್ರೀಡಾಂಗಣದಲ್ಲಿ ನಿರ್ಮಾಣವಾಗಿರೋ  ಮೂರು ಕೋಟಿ ವೆಚ್ಚದ ಈಜು ಕೊಳ ಲೋಕಾರ್ಪಣೆಯಾಗಿದೆ. ತಿಪಟೂರು ಶಾಸಕ ಷಡಕ್ಷರಿ ಈಜುಕೊಳ ಲೋಕಾರ್ಪಣೆ ಮಾಡಿದರು. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಈ ಈಜುಕೊಳ  ನಿರ್ಮಾಣವಾಗಿದೆ. ಜಿಮ್ ಕೊಠಡಿಗಳ ನವೀಕರಣದೊಂದಿಗೆ ಈಜುಕೊಳ ನಿರ್ಮಾಣವಾಗಿದೆ. ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಈಜುಕೊಳ ನಿರ್ಮಾಣವಾಗಿದೆ. ತಿಪಟೂರು ಶಾಸಕ ಷಡಕ್ಷರಿಈಜುಕೊಳ ಉದ್ಘಾಟನೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಕ್ರೀಡಾ ಇಲಾಖೆ ಆಯುಕ್ತ ಚೇತನೆ ಸೇರಿದಂತೆ ಹಲವು ಭಾಗಿಯಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು: ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಹೋರಾಟಗಾರರನ್ನು ಬಂಧಿಸಿರುವ ಹಿನ್ನೆಲೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ಕಳೆದ 17 ದಿನಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿರುವವರ ಮೇಲೆ ದಬ್ಬಾಳಿಕೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಆದೇಶದ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೋರಾಟಗಾರರನ್ನು ಜಿಲ್ಲಾಡಳಿತ ಪೊಲೀಸರನ್ನು ಬಿಟ್ಟು ಬಂಧಿಸಿದೆ, ಹಲವು ಅನುಮತಿ ಪಡೆಯುವಂತೆ ಆದೇಶ ಮಾಡಿ ಹೋರಾಟಗಾರರನ್ನು ಬಂಧಿಸಲಾಗಿದೆ. ಇದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರ ದಬ್ಬಾಳಿಕೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಸಮಸ್ಯೆಗೆ ಸಚಿವರು, ಜಿಲ್ಲಾಧಿಕಾರಿಗಳು ಈವರೆಗೆ ಹಲವು ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಇದರ ವಿರುದ್ಧ  ಹೋರಾಟ ಮಾಡ್ತಾ ಇದ್ದೋರನ್ನ ಬಂಧಿಸಿ ಹೋರಾಟ ಮಾಡುವಂತಿಲ್ಲ ಎನ್ನುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡೋದು ನಮ್ಮ ಹಕ್ಕು.  ಜಿಲ್ಲಾಧಿಕಾರಿಯವರು ನೇರಾ ನೇರ ಮಾತುಕತೆ ನಡೆಸಿ ಇತ್ಯರ್ಥ ಮಾಡುವಂತೆ ಒತ್ತಾಯಿಸುತ್ತೇವೆ, ನಾವು ಯಾವುದೇ ತೊಂದರೆ ಕೊಡುದಿಲ್ಲ ನಮಗೆ ಹೋರಾಟ ಮಾಡಲು ಬಿಡಿ ಎಂದು ಹೋರಾಟಗಾರರು ಒತ್ತಾಯ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ತಿಪಟೂರು ಕೃಷ್ಣ,…

Read More

ತುಮಕೂರು:  ಭರ್ಜರಿ ಮಳೆಗೆ ಮರ ಮುರಿದು ಬಿದ್ದ ಪರಿಣಾಮ ಕಾರು ಜಖಂ ಆಗಿರುವ ಘಟನೆ  ತುಮಕೂರು ಜಿಲ್ಲೆಯ ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ. ರಾತ್ರಿ ಸುರಿದ ಭರ್ಜರಿ ಮಳೆಗೆ ಮರ ಮುರಿದು ಬಿದ್ದಿದೆ. ಈ ವೇಳೆ ಮರದ ಕೆಳಗೆ ನಿಲ್ಲಿಸಲಾಗಿದ್ದ ಕಾರು ಜಖಂಗೊಂಡಿದೆ. ಮರ ಬಿದ್ದ ತೀವ್ರತೆಗೆ ಕಾರಿನ ಮೇಲ್ಭಾಗ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಘಟನೆ ವೇಳೆ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಿಪಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಳಗಾವಿ:  ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಪತಿಯ ಮನೆಯ ಮೇಲೆ RSS ದಾಳಿ ನಡೆಸಿದೆ ಎಂದು ಸುಳ್ಳು ವದಂತಿ ಹರಡಿದ ವ್ಯಕ್ತಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಅನೀಸ್ ಉದ್ದೀನ್ ಮೇಲೆ ಬೆಳಗಾವಿ ಜಿಲ್ಲಾ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಅವರ ಸೂಚನೆ ಮೇರೆಗೆ ಬಿಎನ್‌ಎಸ್ ಕಾಯ್ದೆಯಡಿ 353(2), 192 ಸೆಕ್ಷನ್ ಅಡಿಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ್ ಗುಳೇದ, ಎಕ್ಸ್ ಖಾತೆಯಲ್ಲಿ ಕರ್ನಲ್ ಸೋಫಿಯಾ ಪತಿ ಮನೆಯ ಮೇಲೆ ಆ ರ್‌ಎಸ್‌ ಎಸ್ ಬೆಂಬಲಿತ ಹಿಂದೂಗಳು ದಾಳಿ ಮಾಡಿ, ಮನೆ ದ್ವಂಸ ಮಾಡಿದ್ದಾರೆ ಎಂದು ಸುಳ್ಳು ಪೋಸ್ಟ್ ಹಾಕಲಾಗಿತ್ತು. ಅನೀಸ್ ಉದ್ದಿನ್ ಎಂಬಾತ ಎಕ್ಸ್ ಖಾತೆಯಲ್ಲಿ ಸುಳ್ಳು ಸುದ್ದಿ ಹಾಕಿಕೊಂಡಿದ್ದ ಎಂದು ಹೇಳಿದ್ದರು. ಪೋಸ್ಟ್ ನಲ್ಲಿ ಯಾವುದೋ ಹಳೆಯ ಫೋಟೋವನ್ನು ಹಂಚಿಕೊಳ್ಳಲಾಗಿತ್ತು. ವಿಚಾರವಾಗಿ ಜಿಲ್ಲಾ ಸಾಮಾಜಿಕ ಮಾಧ್ಯಮ…

Read More

ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆಯನ್ನು ರಾಜ್ಯ ಸರ್ಕಾರ ತಲಾ 2,000 ರೂಪಾಯಿಗಳಷ್ಟು ಹೆಚ್ಚಳ ಮಾಡಿದೆ. ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 10,000 ರೂಪಾಯಿ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 10,500 ಗೌರವ ಸಂಭಾವನೆ ನಿಗದಿಪಡಿಸಿತ್ತು. ಇದೀಗ ಈ ಮೊತ್ತಕ್ಕೆ ಹೆಚ್ಚುವರಿಯಾಗಿ 2,000 ರೂಪಾಯಿಗಳು ಸೇರ್ಪಡೆ ಆಗಿದೆ. ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 12,000 ರೂಪಾಯಿ ಸಿಗಲಿದೆ. ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 12,500 ರೂಪಾಯಿ ಸಿಗಲಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ 2,000 ಗಳಷ್ಟು ಗೌರವಧನ ಹೆಚ್ಚಳವಾಗಿದೆ. ಈ ಹಿಂದೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ 12,000 ರೂಪಾಯಿ ನಿಗದಿಯಾಗಿತ್ತು. ಪರಿಷ್ಕೃತ ಗೌರವ ಸಂಭಾವನೆಯು 14,000…

Read More

ಬೆಂಗಳೂರು: ಬೆಂಗಳೂರು ಹಾಗೂ ತುಮಕೂರು ನಡುವೆ ನಮ್ಮ ಮೆಟ್ರೋ ಯೋಜನೆ ಬಗ್ಗೆ ಹೊಸ ಮಾಹಿತಿ ಲಭ್ಯವಾಗಿದ್ದು, ಕಾರ್ಯ ಸಾಧ್ಯತಾ ಪರೀಕ್ಷಾ ವರದಿಯನ್ನು ಈಗಾಗಲೇ ಖಾಸಗಿ ಕಂಪನಿ ಬಿಎಂಆರ್ ಸಿಎಲ್ ಗೆ ಸಲ್ಲಿಸಿದೆ. ಆ ವರದಿಯನ್ನು ಬಿಎಂಆರ್ ಸಿಎಲ್ ಸರ್ಕಾರಕ್ಕೆ ಸಲ್ಲಿಸಿದೆ. 56.6 ಕಿ.ಮೀ. ಮೆಟ್ರೋ ಮಾರ್ಗದಲ್ಲಿ, 25 ಎತ್ತರಿಸಿದ ನಿಲ್ದಾಣಗಳ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಗ್ರೀನ್ ಲೈನ್ ನಲ್ಲಿ ಬರುವ ಮಾದಾವರ ನಿಲ್ದಾಣದಿಂದ ಪ್ರಾರಂಭವಾಗುವ ಮೆಟ್ರೋ ಮಾರ್ಗವು ಶಿರಾ ಗೇಟ್ ವರೆಗೆ ಮೆಟ್ರೋ ಮಾರ್ಗ ಹಾದು ಹೋಗಲಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಕಾರ್ಯಸಾಧ್ಯತಾ ಪರೀಕ್ಷಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುವ ಬಗ್ಗೆ ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ್ ಚೌವ್ಹಾಣ್ ಮಾಹಿತಿ ನೀಡಿದ್ದಾರೆ. ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆಯಾಗಿದ್ದೇ ಆದಲ್ಲಿ, ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಮತ್ತೊಂದು ಜಿಲ್ಲೆಗೆ ಮೆಟ್ರೋ ಸಂಚಾರ ಮಾಡುವಂತಾಗಲಿದೆ. ಬೆಂಗಳೂರಿನಿಂದ ತುಮಕೂರಿಗೆ ಮೆಟ್ರೋ ಸಂಚಾರ ಆರಂಭವಾದರೆ ತುಮಕೂರಿನಲ್ಲಿ ಇತಿಹಾಸ ನಿರ್ಮಾಣವಾಗಲಿದೆ. ಅಲ್ಲದೇ ತುಮಕೂರಿನ ಜನತೆಗೆ ಬೆಂಗಳೂರು…

Read More