Subscribe to Updates
Get the latest creative news from FooBar about art, design and business.
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
- ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
- “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
- ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
- ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
Author: admin
ತುಮಕೂರು: ಜಿಲ್ಲೆಯಲ್ಲಿ ಮೇ 1ರಂದು ಭಗವಾನ್ ಬುದ್ಧ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳು ಸಜ್ಜಾಗಿವೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬುದ್ಧ ಧಮ್ಮ ಪ್ರತಿಷ್ಠಾನ ಹಾಗೂ ಧಮ್ಮ ಲೋಕ ಬುದ್ಧ ವಿಹಾರದ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮೇ 1ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಯಂತಿಗೆ ಚಾಲನೆ ನೀಡಲಾಗುವುದು. ನಂತರ ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಗೂಳಹರಿ ಗೆದ್ದಲಹಳ್ಳಿಯ ಗೌತಮ ಬುದ್ಧ ನಗರದಲ್ಲಿರುವ ‘ಧಮ್ಮ ಲೋಕ ಬುದ್ಧ ವಿಹಾರ’ದಲ್ಲಿ ವಿಶೇಷ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತುಮಕೂರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನ ಋತುಮಾನ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿ, ಜಿಲ್ಲೆಯಾದ್ಯಂತ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಹಾಗೂ ತುರ್ತು ಕ್ರಮಗಳ ಕುರಿತು ಚರ್ಚಿಸಲಾಯಿತು. ಜಿಲ್ಲಾಧಿಕಾರಿಗಳು ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸಮರ್ಪಕ ಲಭ್ಯತೆ ಖಚಿತಪಡಿಸಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರಿಗೆ ಪೂರೈಕೆಯಾಗುವ ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸುವುದರ ಜೊತೆಗೆ, ಸರ್ಕಾರಿ ವಸತಿ ನಿಲಯಗಳು ಹಾಗೂ ಹಾಸ್ಟೆಲ್ ಗಳಲ್ಲಿ ಕುಡಿಯುವ ನೀರಿನ ಮಾದರಿಗಳನ್ನು ಪರಿಶೀಲಿಸಿ, ಕ್ಲೋರಿನೇಷನ್ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ತಿಳಿಸಲಾಯಿತು. ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಉಂಟಾಗದಂತೆ ಚರಂಡಿ ಮತ್ತು ತ್ಯಾಜ್ಯ ವಿಲೇವಾರಿ ಪ್ರದೇಶಗಳ ಸ್ವಚ್ಛತೆ, ಕ್ಲೀನಿಂಗ್ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಲುಷಿತ ನೀರು ಕುಡಿಯುವ ನೀರಿನ ಮೂಲಗಳಿಗೆ ಸೇರ್ಪಡೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಎಲ್ಲಾ…
ಮಧುಗಿರಿ: ಜಿಲ್ಲೆಯ ಮಧುಗಿರಿ ತಾಲ್ಲೂಕಿನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಹಣದ ವಿಚಾರವಾಗಿ ಉಂಟಾದ ಸಣ್ಣ ತಕರಾರು ವಿಕೋಪಕ್ಕೆ ತಿರುಗಿ, ಅಣ್ಣನೇ ತನ್ನ ಸ್ವಂತ ತಮ್ಮನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಪುರವರ ಹೋಬಳಿಯ ನಿಟ್ರಾಹಳ್ಳಿ ಗ್ರಾಮದ ನಾಗಪ್ಪ ಎಂಬುವವರ ಮಕ್ಕಳಾದ ನರಸಿಂಹಮೂರ್ತಿ ಮತ್ತು ಗಂಗರಾಜು (28) ನಡುವೆ ಈ ಘರ್ಷಣೆ ಸಂಭವಿಸಿದೆ. ಮೂಲಗಳ ಪ್ರಕಾರ, ಕಳೆದ ಕೆಲವು ದಿನಗಳಿಂದ ಇಬ್ಬರ ನಡುವೆ ಹಣಕಾಸಿನ ವಿಚಾರವಾಗಿ ಮನಸ್ತಾಪವಿತ್ತು. ಇಂದು ಅದೇ ವಿಚಾರವಾಗಿ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದೆ. ಜಗಳದ ಸಂದರ್ಭದಲ್ಲಿ ತೀವ್ರ ಆಕ್ರೋಶಗೊಂಡ ಅಣ್ಣ ನರಸಿಂಹಮೂರ್ತಿ, ಪಕ್ಕದಲ್ಲಿದ್ದ ದೊಡ್ಡ ಕಲ್ಲನ್ನು ಎತ್ತಿ ತಮ್ಮ ಗಂಗರಾಜು ತಲೆಯ ಮೇಲೆ ಹಾಕಿದ್ದಾನೆ. ಕಲ್ಲಿನ ಏಟಿಗೆ ಗಂಗರಾಜು ಅವರ ತಲೆಗೆ ಗಂಭೀರ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಕೊಡಿಗೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಅಣ್ಣ ನರಸಿಂಹಮೂರ್ತಿಯನ್ನು ಪೊಲೀಸರು ಈಗಾಗಲೇ…
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ದಬ್ಬೇಘಟ್ಟದಲ್ಲಿ ವಾಸಿಸುತ್ತಿದ್ದ ಅಲೆಮಾರಿ ಸಮುದಾಯದ ಬದುಕು ಬಿರುಗಾಳಿಯ ಆರ್ಭಟಕ್ಕೆ ತತ್ತರಿಸಿದ್ದು, ಸಂಕಷ್ಟದಲ್ಲಿದ್ದ ಕುಟುಂಬಗಳನ್ನು ತಾಲ್ಲೂಕು ಆಡಳಿತವು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ರವಾನಿಸಿದೆ. ದಬ್ಬೇಘಟ್ಟದ ಬಯಲು ಪ್ರದೇಶದಲ್ಲಿ ಟಾರ್ಪಲ್ ಟೆಂಟ್ಗಳನ್ನು ಹಾಕಿಕೊಂಡು ಕಳೆದ ಹಲವು ತಿಂಗಳುಗಳಿಂದ ಅಲೆಮಾರಿ ಕುಟುಂಬಗಳು ವಾಸಿಸುತ್ತಿದ್ದವು. ಮಂಗಳವಾರ ಸಂಜೆ ಬೀಸಿದ ಅನಿರೀಕ್ಷಿತ ಬಿರುಗಾಳಿಗೆ ಈ ಹಂಗಾಮಿ ಆಶ್ರಯ ತಾಣಗಳು ಸಂಪೂರ್ಣವಾಗಿ ಹಾರಿಹೋಗಿವೆ. ಇದರಿಂದಾಗಿ ವೃದ್ಧರು ಹಾಗೂ ಮಕ್ಕಳು ಆಶ್ರಯವಿಲ್ಲದೆ ಬೀದಿಗೆ ಬಿದ್ದಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಮಮತಾ ಎಂ. ಅವರು ಸಂತ್ರಸ್ತ ಕುಟುಂಬಗಳನ್ನು ಪಟ್ಟಣದ ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಲು ತಕ್ಷಣದ ಕ್ರಮ ಕೈಗೊಂಡರು. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸಿ.ಬಿ. ಸುರೇಶ್ ಬಾಬು ಅವರು ಸಂತ್ರಸ್ತರ ಅಹವಾಲು ಆಲಿಸಿದರು. ಬಳಿಕ ಮಾತನಾಡಿದ ಅವರು: ”ಈ ಹಿಂದೆ ಗುಂಡುತೋಪಿನಲ್ಲಿ ವಾಸವಿದ್ದ ಈ ಕುಟುಂಬಗಳಿಗೆ ದಬ್ಬೇಘಟ್ಟದ ಬಳಿ ಜಾಗ ಗುರುತಿಸಲಾಗಿತ್ತು, ನಿವೇಶನ ಹಂಚಿಕೆ ಮತ್ತು ಮನೆ ಮಂಜೂರಾತಿ ಪ್ರಕ್ರಿಯೆಯಲ್ಲಿ ಕೆಲವು ತಾಂತ್ರಿಕ ಅಡಚಣೆಗಳಿದ್ದು, ಈ ಬಗ್ಗೆ…
ಮಂಡ್ಯ: ಭ್ರೂಣಲಿಂಗ ಪತ್ತೆ ಮತ್ತು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಮೂವರು ಖಾಸಗಿ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆ.ಆರ್.ಪೇಟೆಯ ಚೇತನ ಮೆಟರ್ನಿಟಿ ಸೆಂಟರ್ ನ ಡಾ.ದಿವ್ಯಾ ಚೇತನ, ನಾವಿ ಡಯಾಗ್ನಸ್ಟಿಕ್ ಸೆಂಟರ್ ನ ಡಾ. ಹರ್ಷಿತ್ ಮತ್ತು ಕುಶಾಲ್ ಡಯಾಗ್ನಸ್ಟಿಕ್ ಸೆಂಟರ್ನ ಡಾ. ಹರೀಶ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಸರ್ಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಪ್ರಿಯಾಂಕಾ ಸದ್ಯ ತಲೆಮರೆಸಿಕೊಂಡಿದ್ದು, ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆಗೆ ಆದೇಶಿಸಿದ್ದರು. ಕೆ.ಆರ್.ಪೇಟೆ ತಾಲೂಕಿನಲ್ಲಿ ಒಟ್ಟು 12 ಎಫ್ಐಆರ್ಗಳು ದಾಖಲಾಗಿದ್ದು, ಅದರ ಆಧಾರದ ಮೇಲೆ ಈ ಬಂಧನ ನಡೆದಿದೆ. ತನಿಖೆಯ ವೇಳೆ ಸುಮಾರು 31 ಬಾಲ ಗರ್ಭಿಣಿಯರಿಗೆ (ಅಪ್ರಾಪ್ತ ವಯಸ್ಕರು) ನಿಯಮ ಬಾಹಿರವಾಗಿ ಸ್ಕ್ಯಾನಿಂಗ್ ಮಾಡಿರುವುದು ಪತ್ತೆಯಾಗಿದೆ. ಇಲ್ಲಿ 2024ರಲ್ಲಿ 19 ಮತ್ತು 2025ರಲ್ಲಿ…
ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಜಗನ್ನಾಥಪುರ ಬಳಿಯ ಸೇತುವೆ ಮೇಲೆ ನಡೆದಿದೆ. ಮೃತರನ್ನು ಶಿವರಾಜು (59) ಎಂದು ಗುರುತಿಸಲಾಗಿದೆ. ಏಪ್ರಿಲ್ 26ರಂದು ರಾತ್ರಿ ಸುಮಾರು 10 ಗಂಟೆಯ ಸಮಯದಲ್ಲಿ ಶಿವರಾಜು ಅವರು ರಸ್ತೆ ದಾಟುತ್ತಿದ್ದರು. ಈ ವೇಳೆ ಅಂತರಸನಹಳ್ಳಿಯಿಂದ ಬೆಂಗಳೂರು ಕಡೆಗೆ ಅತೀ ವೇಗವಾಗಿ ಬಂದ ಕಾರೊಂದು ಅವರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಶಿವರಾಜು ಅವರನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಾಯದ ತೀವ್ರತೆ ಹೆಚ್ಚಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಏಪ್ರಿಲ್ 27ರಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕ ಬೆಂಗಳೂರು ಮೂಲದ ರಾಘವೇಂದ್ರ ಎಂದು ತಿಳಿದುಬಂದಿದೆ. ಮೃತರ ಪುತ್ರ ಪ್ರಕಾಶ್ ಅವರು ನೀಡಿದ ದೂರಿನ ಮೇರೆಗೆ ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ತುಮಕೂರು: ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ನಗರದ ಹೊರವಲಯದ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) 2026–27ನೇ ಶೈಕ್ಷಣಿಕ ಸಾಲಿನ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಎಸ್ಸೆಸ್ಸೆಲ್ಸಿ ಓದಿದ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಪ್ರವೇಶಾತಿ ಕಲ್ಪಿಸಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಟಿಟಿಸಿ ಪ್ರಾಂಶುಪಾಲ ಜಯ ಪ್ರಕಾಶ್ ಜೆ.ಕೆ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜಿಟಿಟಿಸಿ ತುಮಕೂರು ಕೇಂದ್ರದಲ್ಲಿ ಎಐಸಿಟಿಯಿಂದ ಮಾನ್ಯತೆ ಪಡೆದಿರುವ ಡಿಪ್ಲೊಮಾ ಕೋರ್ಸ್ಗಳಾದ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ (DTDM), ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್ (DMCH), ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ (DEEE) ನ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ಕೋರ್ಸ್ ಅವಧಿ 3+1 ವರ್ಷ (ಕೌಶಲ್ಯ ಹೆಚ್ಚಳ ಮತ್ತು ಕೈಗಾರಿಕಾ ಜ್ಞಾನಕ್ಕಾಗಿ ಒಂದು ವರ್ಷ…
ಧಾರವಾಡ: ನಗರದಲ್ಲಿ ಪೊಲೀಸರ ಕಿರುಕುಳ ಮತ್ತು ಹಣದ ಬೇಡಿಕೆಗೆ ಮನನೊಂದು ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಈ ಸಂಬಂಧ ಕರ್ತವ್ಯ ಲೋಪ ಹಾಗೂ ಕಿರುಕುಳದ ಆರೋಪದ ಮೇಲೆ ವಿದ್ಯಾಗಿರಿ ಠಾಣೆಯ ಮೂವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಮೃತ ವಿದ್ಯಾರ್ಥಿಯನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬೇಲೂರು ಗ್ರಾಮದ ಆದಿತ್ಯ ಮ್ಯಾಗೇರಿ (20) ಎಂದು ಗುರುತಿಸಲಾಗಿದೆ. ಈತ ಧಾರವಾಡದ ಕಿಟೆಲ್ ಕಾಲೇಜಿನಲ್ಲಿ ಬಿಎಸ್ಸಿ ಓದುತ್ತಿದ್ದನು. ಏಪ್ರಿಲ್ 25ರಂದು ವಿದ್ಯಾಗಿರಿ ಪೊಲೀಸರು ನಡೆಸಿದ ಗಾಂಜಾ ವಿರೋಧಿ ಕಾರ್ಯಾಚರಣೆಯ ವೇಳೆ ಆದಿತ್ಯ ಸೇರಿದಂತೆ ಹಲವು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಆದಿತ್ಯ ಗಾಂಜಾ ಸೇವಿಸಿಲ್ಲ ಎಂಬುದು ದೃಢಪಟ್ಟಿತ್ತು (ನೆಗೆಟಿವ್ ಬಂದಿತ್ತು). ಆದರೂ, ಪೊಲೀಸರು ಆತನನ್ನು ಬಿಡುಗಡೆ ಮಾಡಲು ಹಣದ ಬೇಡಿಕೆ ಇಟ್ಟಿದ್ದರು ಎಂದು ಕುಟುಂಬದವರು ಆರೋಪಿಸಿದ್ದಾರೆ. ಮೊದಲು 10,000 ರೂ. ಕೇಳಿದ್ದ ಪೊಲೀಸರು, ನಂತರ 2,000 ರೂ. ನೀಡುವಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಆದಿತ್ಯ ತನ್ನ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ತಲೆದೂರಿರುವ ತೀವ್ರ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಆರ್. ಅಶೋಕ, ಸರ್ಕಾರವು ಕೂಡಲೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲದ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದ್ದಿದೆ. ಕೊಳವೆಬಾವಿಗಳು ಬತ್ತಿ ಹೋಗುತ್ತಿದ್ದು, ಜನ ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿವೆ. ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಶಾಸಕರಿಗೆ ಹೆಚ್ಚಿನ ಅನುದಾನದ ಅಗತ್ಯವಿದೆ. ರಾಜ್ಯ ಸರ್ಕಾರವು ವರ್ಗಾವಣೆ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಜನರ ಮೂಲಭೂತ ಸಮಸ್ಯೆಗಳಾದ ಕುಡಿಯುವ ನೀರಿನ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಅವರು ಟೀಕಿಸಿದರು. ಹಲವೆಡೆ ಟ್ಯಾಂಕರ್ ಮೂಲಕ ನೀರು ಪೂರೈಕೆಯಾಗುತ್ತಿದೆಯಾದರೂ, ಅದರಲ್ಲಿ ಅವ್ಯವಹಾರ ನಡೆಯುತ್ತಿದೆ. ಶಾಶ್ವತ ಪರಿಹಾರಕ್ಕಾಗಿ ಹೊಸ ಕೊಳವೆಬಾವಿಗಳನ್ನು ಕೊರೆಯಲು ಮತ್ತು ಪಂಪ್ಸೆಟ್ಗಳ ದುಸ್ತಿಗೆ ಹಣದ ಕೊರತೆಯಿದೆ ಎಂದು ಅವರು ದೂರಿದರು. ಸರ್ಕಾರವು ಕೇವಲ ಭರವಸೆಗಳನ್ನು ನೀಡದೆ, ಕೂಡಲೇ ಜಿಲ್ಲಾಧಿಕಾರಿಗಳ…
ಬೆಂಗಳೂರು: ಕೆಜಿಎಫ್ ಸರಣಿಯ ಅಭೂತಪೂರ್ವ ಯಶಸ್ಸಿನ ನಂತರ, ಇಡೀ ವಿಶ್ವವೇ ಎದುರು ನೋಡುತ್ತಿದ್ದ ಯಶ್ ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಚಿತ್ರದ ಬಿಡುಗಡೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದೆ. ಈ ಬಗ್ಗೆ ಸ್ವತಃ ನಟ ಯಶ್ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಈ ಮೊದಲು ಚಿತ್ರವನ್ನು ಜೂನ್ 4 ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಆದರೆ ಇತ್ತೀಚೆಗೆ ಅಮೆರಿಕದ ಲಾಸ್ ವೇಗಾಸ್ ನಲ್ಲಿ ನಡೆದ ಪ್ರತಿಷ್ಠಿತ ‘ಸಿನೆಮಾಕಾನ್’ (CinemaCon) ಈವೆಂಟ್ ನಲ್ಲಿ ಟಾಕ್ಸಿಕ್ ಚಿತ್ರದ ಪ್ರೆಸೆಂಟೇಶನ್ ಗೆ ಜಾಗತಿಕ ವಿತರಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರದ ವ್ಯಾಪ್ತಿ ಈಗ ಜಾಗತಿಕ ಮಟ್ಟಕ್ಕೆ ವಿಸ್ತರಿಸಲ್ಪಟ್ಟಿದ್ದು, ವಿಶ್ವದಾದ್ಯಂತ ಅತೀ ದೊಡ್ಡ ಮಟ್ಟದಲ್ಲಿ ಏಕಕಾಲಕ್ಕೆ ತೆರೆಗೆ ತರುವ ಉದ್ದೇಶದಿಂದ ದಿನಾಂಕವನ್ನು ಮರುಹೊಂದಿಸಲಾಗಿದೆ ಎಂದು ಯಶ್ ತಿಳಿಸಿದ್ದಾರೆ. “ಟಾಕ್ಸಿಕ್ ನನ್ನ ಪಾಲಿಗೆ ಒಂದು ವಿಶೇಷ ಪಯಣ. ಸಿನೆಮಾಕಾನ್ ನಲ್ಲಿ ಸಿಕ್ಕ ಪ್ರತಿಕ್ರಿಯೆ ನಮ್ಮ ನಂಬಿಕೆಯನ್ನು…