Subscribe to Updates
Get the latest creative news from FooBar about art, design and business.
- ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
- ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!
- ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ
- ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
- ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
- ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
- ಗುಬ್ಬಿ: ಆ.17ರಿಂದ22ರವರೆಗೆ ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
- ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
Author: admin
ತುಮಕೂರು: ಅಪರಿಚಿತ ವಾಹನ ಹರಿದು ಯುವಕನ ಕಾಲು ಅಪ್ಪಚ್ಚಿಯಾಗಿರುವ ಘಟನೆ ನೆಲಹಾಳು ಬಳಿಯ ರಾಷ್ಟ್ರೀಯ ಹೆದ್ದಾರಿ ನಂ48 ರಲ್ಲಿ ನಡೆದಿದೆ. ತುಮಕೂರು ತಾಲೂಕಿನ ನೆಲಹಾಳ್ ನಲ್ಲಿ ಈ ಘಟನೆ ನಡೆದಿದ್ದು, ತೋವಿನಕೆರೆಯ ಪದ್ಮರಾಜು ಎಂಬ ಯುವಕ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಡಿಕೆ ಮಂಡಿ ನಡೆಸುತ್ತಿದ್ದ ಪದ್ಮರಾಜು ಶಿರಾದಿಂದ ಗ್ರಾಮಕ್ಕೆ ಹಿಂತಿರುಗುವಾಗ ಘಟನೆ ನಡೆದಿದೆ. ಸದ್ಯ ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ವಾಹನ ಹರಿದು ಯುವಕ ಗಂಭೀರವಾಗಿ ಗಾಯಗೊಂಡಿದ್ದ ವೇಳೆ ತಕ್ಷಣದಲ್ಲೇ ಆ್ಯಂಬುಲೆನ್ಸ್ ಸಿಗದೇ ಪರದಾಡುವಂತಾಗಿತ್ತು. ಇದರಿಂದಾಗಿ ಯುವಕನ ಸ್ಥಿತಿ ಗಂಭೀರ ಸ್ಥಿತಿಗೆ ಹೋಗಿತ್ತು. ಸದ್ಯ ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಹೇಮಾವತಿ ಕೆನಾಲ್ ವಿರುದ್ಧ ರಾಜಕೀಯ ನಾಯಕರ ಹೋರಾಟ ಹಿನ್ನೆಲೆ ಬಿಜೆಪಿ, ಜೆಡಿಎಸ್ ಶಾಸಕರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆ ಕಾಂಟ್ರ್ಯಾಕ್ಟ್ ಪಡೆದ ಕಂಪನಿಯ ಸಿಬ್ಬಂದಿ ದೂರಿನ ಮೇರೆಗೆ ಎಫ್ ಐಆರ್ ದಾಖಲಾಗಿದೆ. ಎ 1 ತುರುವೇಕೆರೆ ಜೆಡಿಎಸ್ ಶಾಸಕ ಕೃಷ್ಣಪ್ಪ ಎಂ.ಟಿ., ಎ 2 ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ, ಎ 3 ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿಗಣೇಶ್, ಎ 4 ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ, ಎ 5 ಜಿಲ್ಲಾ ರೈತ ಸಂಘದ ಅಧ್ಯಕ್ಷ ಗೊವಿಂದರಾಜು, ಎ 6 ಬಿಜೆಪಿ ಮುಖಂಡ ದಿಲೀಪ್ ಕುಮಾರ್, ಎ 7 ಚೇತನ್ ಹಾಗೂ ಎ8 ಇತರ 25 ರಿಂದ 30 ಮಂದಿ ಎಂದು ಎಫ್ ಐಆರ್ ನಲ್ಲಿ ಉಲ್ಲೇಖ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು: ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು, ಆರೋಗ್ಯ ವಿಚಾರಿಸಿದ್ದಾರೆ. ಸಚಿವ ಕೆ.ಎನ್.ರಾಜಣ್ಣ ಕಣ್ಣಿನ ಆಪರೇಷನ್ ಮಾಡಿಸಿಕೊಂಡಿದ್ದಾರೆ. ಹೀಗಾಗಿ ತುಮಕೂರಿನ ಕೆ.ಎನ್.ರಾಜಣ್ಣ ನಿವಾಸಕ್ಕೆ ಭೇಟಿ ನೀಡಿದ ಸಚಿವ ಸತೀಶ್ ಜಾರಕಿಹೊಳಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಇಬ್ಬರೂ ಸುಮಾರು ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದರು. ಬೆಂಗಳೂರಿನಿಂದ ಬೆಳಗಾವಿಗೆ ಹೋಗುವ ದಾರಿ ಮಧ್ಯೆ ಕೆ.ಎನ್.ರಾಜಣ್ಣ ಮನೆಗೆ ಸತೀಶ್ ಜಾರಕಿಹೊಳಿ ಭೇಟಿ ಕೊಟ್ಟರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಳಗಾವಿ: ಕಾರ್ಮಿಕರ ಮೇಲೆ ಟ್ಯಾಂಕರ್ ಹರಿದು ಮೂವರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ನ ರಾಷ್ಟ್ರೀಯ ಹೆದ್ದಾರಿ 4ರ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲಯ ಚಿಂಚೋಳಿ ತಾಲೂಕಿನ ಶಿರೋಳಿ ಗ್ರಾಮದ ರಾಮಚಂದ್ರ ಜಾಧವ್ (45), ಮಗ ಮಹೇಶ್ ರಾಮಚಂದ್ರ ಜಾಧವ್ (18), ರಾಮಣ್ಣ ಅಲಿಯಾಸ್ ರಮೇಶ್ (38) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಮೃತ ರಾಮಚಂದ್ರ ಪತ್ನಿ ಲಕ್ಷ್ಮೀಬಾಯಿ, ಅನುಶ್ರೀ, ಮೃತ ರಾಮಣ್ಣನ ಪತ್ನಿ ಭೀಮವ್ವ (55) ಗಂಭೀರವಾಗಿ ಗಾಯಗೊಂಡಿದ್ದಾರೆ. ಎನ್ ಹೆಚ್ ಎಐನಲ್ಲಿ ದಿನಗೂಲಿ ಕೆಲಸಕ್ಕಾಗಿ ಕಲಬುರಗಿಯ ಕಲಬುರಗಿಯ ಶಹಬಾದ್, ಸೇಡಂ, ಚಿಂಚೋಳಿಯಿಂದ ಬಂದಿದ್ದರು. ಭಾನುವಾರ ಬೆಳಿಗ್ಗೆ ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯಿಲ್ ತುಂಬಿದ್ದ ಟ್ಯಾಂಕರ್ ಏಕಾಏಕಿ ಹರಿದು, ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಟ್ಯಾಂಕರ್ ನಲ್ಲಿ ಸಿಲುಕಿದ್ದ ಚಾಲಕನನ್ನು ಪೊಲೀಸರು ಹೊರ ತೆಗೆದಿದ್ದಾರೆ. ಟ್ಯಾಂಕರ್ ಚಾಲಕ ದಿನೇಶ್ ಶೆಟ್ಟಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲಕ ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿರುವ ಘಟನೆ ಆಘಾತಕಾರಿ ಘಟನೆ ಕಸ್ತೂರ್ಬಾ ರಸ್ತೆಯ ಕ್ಷೀನ್ಸ್ ಜಂಕ್ಷನ್ (ಎಂ.ಜಿ.ರಸ್ತೆ) ಬಳಿ ನಡೆದಿದೆ. ಮೇ 23ರ ಸಂಜೆ 5.40ಕ್ಕೆ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಚಾಲಕ ಮತ್ತು ಯುವತಿ ನಡುವೆ ಗಲಾಟೆಯಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೀನ್ಸ್ ಜಂಕ್ಷನ್ ನಲ್ಲಿ ಕಾರಿನಿಂದ ಇಳಿದ ಯುವತಿ ಬಿಎಂಟಿಸಿ ಬಸ್ ಚಾಲಕನನ್ನು ಪ್ರಶ್ನೆ ಮಾಡುತ್ತಿದ್ದರು. ಈ ವೇಳೆ ಆಕ್ರೋಶಗೊಂಡ ಚಾಲಕ ಯುವತಿಯ ಮೇಲೆ ಬಸ್ ನುಗ್ಗಿಸಿದ್ದಾನೆ. ಆದರೆ, ಯುವತಿ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದಾರೆ. ಸ್ವಲ್ಪ ಯಾಮಾರಿದ್ದರು ಯುವತಿಯ ಜೀವಕ್ಕೆ ಕುತ್ತು ಬರುತ್ತಿತ್ತು. ಚಾಲಕನ ಕೃತ್ಯ ಕಂಡು ಜನರು ಬೆಚ್ಚಿಬಿದ್ದಿದ್ದರು. ಇನ್ನು, ಯುವತಿಯ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸದ್ಯ ಬಸ್ ಚಾಲಕ ಪ್ರಶಾಂತ್ ನನ್ನು ಅಮಾನತುಗೊಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಕಂತು ಯಾವಾಗ ಸಿಗುತ್ತದೆ ಎಂದು ಫಲಾನುಭವಿಗಳು ಕಾಯುತ್ತಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಹಣ ಬಂದಿಲ್ಲ ಎಂದು ಫಲಾನುಭವಿಗಳು ಕಂಗಾಲಾಗಿದ್ದರು. ಈ ನಡುವೆ ನಿನ್ನೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಏಪ್ರಿಲ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಇನ್ನೊಂದು ವಾರದಲ್ಲಿ ಫಲಾನುಭವಿಗಳ ಖಾತೆಗೆ ಜಮಾವಾಗಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಜನವರಿ ಫೆಬ್ರವರಿಯ ಹಣ ನಾವು ಹಾಕಿದ್ದೀವಿ, ಒಂದು ತಿಂಗಳ ಮಾರ್ಚ್ ನಲ್ಲಿ ನಮ್ಮ ಪೈನಾನ್ಸ್ ಇಯರ್ ಇರುತ್ತದೆ ಹಾಗಾಗಿ ಒಂದು ತಿಂಗಳದ್ದು ಹೆಚ್ಚುಕಮ್ಮಿಯಾಗಿದೆ. ಮಿಕ್ಕಿದ್ದು ಯಥಾವತ್ತಾಗಿ ಜಮಾ ಆಗಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪೂರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶಿವಲಿಂಗ ಹೇಡೆಗೆ ಅವರಿಗೆ ಗುಲ್ಬರ್ಗಾವಿಶ್ವ ವಿದ್ಯಾಲಯ ಪಿಎಚ್.ಡಿ.ಪದವಿ ನೀಡಿದೆ. ಡಾ.ಜಯಶ್ರೀ ದಂಡೆ ಅವರ ಮಾರ್ಗದರ್ಶನದಲ್ಲಿ ’12ನೇ ಶತಮಾನದ ಶರಣರು: ಬೀದರ್ ಜಿಲ್ಲೆಯ ಮೌಖಿಕ ಸಾಹಿತ್ಯ ‘ ವಿಷಯ ಕುರಿತು ಮಂಡಿಸಿದ ಮಹಾಪ್ರಬಂಧವನ್ನು ವಿಶ್ವವಿದ್ಯಾಲಯ ಪಿಎಚ್.ಡಿ.ಪದವಿಗೆ ಮಾನ್ಯ ಮಾಡಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ ಮಾಡಿದೆ. ಡಿಜಿ & ಐಜಿಪಿ ಹೊಸ ರೂಲ್ಸ್ ಆದೇಶದಲ್ಲೇನಿದೆ? * ಸಕಾರಣವಿಲ್ಲದೆ ವಾಹನಗಳನ್ನ ತಡೆದು ತಪಾಸಣೆಗೆ ಒಳಪಡಿಸಬಾರದು * ಕಣ್ಣಿಗೆ ಕಾಣುವ (visible Violation) ಕಂಡುಬಂದಲ್ಲಿ ಮಾತ್ರವೇ ವಾಹನಗಳನ್ನ ನಿಲ್ಲಿಸಬೇಕು * ಹೆದ್ದಾರಿಯಲ್ಲಿ ಜಿಗ್ ಜ್ಯಾಗ್ ಮಾದರಿಯಲ್ಲಿ ಬ್ಯಾರಿಕೇಡ್ ಹಾಕಿ ವಾಹನಗಳನ್ನು ತಡೆಯಬಾರದು * ರಸ್ತೆಯಲ್ಲಿ ದಿಢೀರನೆ ಅಡ್ಡ ಬಂದು ವಾಹನಗಳನ್ನ ನಿಲ್ಲಿಸುವಂತೆ ಹೇಳಬಾರದು * ದ್ವಿಚಕ್ರವಾಹನದ ಹಿಂಬದಿ ಸವಾರನನ್ನ ಹಿಡಿದು ಎಳೆಯುವಂತಿಲ್ಲ * ವಾಹನಗಳ ಕೀ ಕಸಿಯುವುದನ್ನು ಮಾಡಬಾರದು * ವೇಗವಾಗಿ ಬರುವ ವಾಹನಗಳ ಬೆನ್ನಟ್ಟದೆ ನೊಂದಣಿ ಸಂಖ್ಯೆ ಗುರುತು ಮಾಡಿ ಕಂಟ್ರೋಲ್ ರೂಂ ಗೆ ಮಾಹಿತಿ ನೀಡುವುದು * ವಾಹನಗಳ ತಪಾಸಣೆ ವೇಳೆ ಪೊಲೀಸ್ರು ರಿಫ್ಲೆಕ್ಟೀವ್ ಜಾಕೆಟ್ ಧರಿಸಿರಬೇಕು * ಸಂಜೆ ಸಮಯದಲ್ಲಿ ಕಡ್ಡಾಯವಾಗಿ ಎಲ್ ಇ ಡಿ ಬಟನ್ ಬಳಸಬೇಕು…
ಥಾಣೆ: ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ನಗರದ ವಿಶೇಷ ನ್ಯಾಯಾಲಯ 40 ವರ್ಷದ ಗೃಹಿಣಿಯೊಬ್ಬರಿಗೆ 14 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಮೇ 30ರಂದು ನೀಡಿರುವ ಆದೇಶದಲ್ಲಿ, ವಿಶೇಷ ಪೋಕ್ಸೊ ಕಾಯ್ದೆಯ ನ್ಯಾಯಾಧೀಶ ಡಿಎಸ್ ಎ ದೇಶ್ ಮುಖ್ ಅವರು ಮುಂಬೈನ ಗೋರೆಗಾಂವ್ ಪ್ರದೇಶದ ನಿವಾಸಿಯಾದ ಅಪರಾಧಿಗೆ 14,000 ರೂ. ದಂಡವನ್ನು ವಿಧಿಸಿದ್ದಾರೆ. ವಿಶೇಷ ಅಭಿಯೋಜಕಿ ರೇಖಾ ಹಿವ್ರಾಲೆ ಅವರ ಪ್ರಕಾರ, ವಿಚಾರಣೆಯ ಸಮಯದಲ್ಲಿ ಒಟ್ಟು ಏಳು ಸಾಕ್ಷಿಗಳನ್ನು ವಿಚಾರಣೆ ನಡೆಸಲಾಯಿತು. ಮುಂಬೈ ನಿವಾಸಿಯಾದ ಮಹಿಳೆಯನ್ನು 2021ರ ಏಪ್ರಿಲ್ 5 ರಂದು ಥಾಣೆಯ ವ್ಯಾಗ್ಲೆ ಎಸ್ಟೇಟ್ ಪ್ರದೇಶದ ಪಾಸ್ಪೋರ್ಟ್ ಕಚೇರಿ ಬಳಿಯ ಹೋಟೆಲ್ ನಲ್ಲಿ ಇಬ್ಬರು ಬಾಲಕಿಯರೊಂದಿಗೆ ಇದ್ದ ವೇಳೆ ಬಂಧಿಸಲಾಯಿತು. ‘ಓರ್ವ ಅಪ್ರಾಪ್ತೆ–A’ ಮತ್ತು ಮಹಿಳೆಯ ಮಗಳು ಸ್ನೇಹಿತರಾಗಿದ್ದರು. ಬಡ ಕುಟುಂಬದಿಂದ ಬಂದ ಅಪ್ರಾಪ್ತೆಗೆ ವೇಶ್ಯಾವಾಟಿಕೆ ಮಾಡಿದರೆ ಉತ್ತಮ ಹಣ ಸಿಗುತ್ತದೆ ಎಂದು ಮಹಿಳೆ ಹೇಳಿದ್ದಾಳೆ. ನಂತರ, ಮಹಿಳೆ ಆಕೆಯನ್ನು ಗ್ರಾಹಕರ…
ಬೆಂಗಳೂರು: ತಮಿಳಿನಿಂದಲೇ ಕನ್ನಡ ಜನಿಸಿದೆ ಎಂದು ಕಮಲ್ ಹಾಸನ್ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಅವರ ವಿರುದ್ಧ ಕೆಲವರು ಟೀಕೆಗಳನ್ನು ಮಾಡುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಮೌನಮುರಿದಿದ್ದಾರೆ. ಕನ್ನಡವೇ ನನ್ನ ಮೊದಲ ಆದ್ಯತೆ, ಇದು ಮೊದಲ ಬಾರಿಯಲ್ಲ, ಪ್ರತಿಬಾರಿಯೂ ಕನ್ನಡದ ವಿಷಯ ಬಂದಾಗೆಲ್ಲ ನಾನು ನಿಂತಿದ್ದೇನೆ. ಕನ್ನಡಕ್ಕಾಗಿ ನಾನು ಏನು ಮಾಡಿದ್ದೇನೆ ಎಂಬುದು ಕರ್ನಾಟಕದ ಜನರಿಗೆ ಗೊತ್ತಿದೆ, ಅದನ್ನು ಯಾರಿಂದಲೂ ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅಂದಿನ ಕಾರ್ಯಕ್ರಮಕ್ಕೆ ಹೋಗಿದ್ದೆ ಅಷ್ಟೆ ಎಂದು ಶಿವರಾಜ್ ಕುಮಾರ್ ಹೇಳಿದರು. ಇದೇ ವೇಳೆ ಈ ವಿವಾದಕ್ಕೆ ನಿಮ್ಮ ಹೆಸರು ಎಳೆದುತರಲಾಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಇರಲಿ ತೊಂದರೆ ಇಲ್ಲ, ನಾನು ಅದರ ಬಗ್ಗೆ ಎಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ, ನನ್ನ ಆತ್ಮಸಾಕ್ಷಿಗೆ ನಾನು ಸರಿಯಾಗಿದ್ದೇನೆ. ನಾನು ಕಲೆಗಾಗಿ ಬದುಕುತ್ತಿರುವವನು, ಕಲೆಯಿಂದಲೇ ನಾವು, ಎಲ್ಲ ಭಾಷೆಗಳ ಬಗ್ಗೆಯೂ ಗೌರವ ಇದೆ, ಆದರೆ ಕನ್ನಡ…