Author: admin

ಪಾವಗಡ: ಪಾವಗಡ ತಾಲ್ಲೂಕಿನ ಮುಗದಾಳಬೆಟ್ಟದ ಗೊಲ್ಲರಹಟ್ಟಿಗೆ ಶನಿವಾರ ಮಧ್ಯಾಹ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ, ಹಟ್ಟಿಯ ನಿವಾಸಿಗಳ ಸಮಸ್ಯೆಗಳನ್ನು ಪರಿಶೀಲಿಸಿದರು. ಈ ವೇಳೆ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ, ಸ್ಥಳದಲ್ಲೇ ಹಾಜರಿದ್ದ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದರು. ಹೆಣ್ಮಕ್ಕಳು ಸೀರೆಯನ್ನು ಪರದೆಯಾಗಿ ಕಟ್ಟಿಕೊಂಡು ಸ್ನಾನ ಮಾಡುತ್ತಿರುವ ಸ್ಥಿತಿಯು ನಾಗರಿಕ ಸಮಾಜಕ್ಕೆ ತಲೆತಗ್ಗಿಸುವ ಸಂಗತಿಯೆಂದು ಅಭಿಪ್ರಾಯಪಟ್ಟ ಅವರು, ವಿಷಯ ನ್ಯಾಯಾಲಯದಲ್ಲಿದ್ದರೂ, ಜೂನ್ 16ರ ಬಳಿಕ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದರು. ಈವರೆಗೆ ತಾತ್ಕಾಲಿಕ ಪರಿಹಾರವಾಗಿ ಮೊಬೈಲ್ ಶೌಚಾಲಯಗಳನ್ನು ಹಟ್ಟಿಯಲ್ಲಿ ಸ್ಥಾಪಿಸಲು ಇ.ಒ. ಜಾನಕಿರಾಂ ಅವರಿಗೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ, ನಿವೇಶನ ಹಕ್ಕುಪತ್ರಗಳನ್ನು ನೀಡುವ ಬಗ್ಗೆ ತಹಶೀಲ್ದಾರ್ ವರದರಾಜುಗೆ ಸೂಚಿಸಿದ ಡಾ. ನಾಗಲಕ್ಷ್ಮಿ, ಹಟ್ಟಿಯಲ್ಲಿನ ಕರಡಿಗಳ ಹಾವಳಿಯನ್ನು ಗಮನಿಸಿ, ಮಧ್ಯಭಾಗದಲ್ಲಿ ಡೂಮ್ ಲೈಟ್ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು. ವಿಶೇಷ ಅತಿಥಿಯಾಗಿ ಬಂದ ಅಧ್ಯಕ್ಷೆ ಯನ್ನು ಹಟ್ಟಿಯ ಮಹಿಳೆಯರು…

Read More

ತುಮಕೂರು: ಬೆವಿಕಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ಅಟಲ್ ಭೂಜಲ್ ಯೋಜನೆಯಡಿ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೊಂಡಿರುವುದರಿಂದ ಮೇ 4 ರಿಂದ 31ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಹನುಮಂತಪುರ, ಕುವೆಂಪು ನಗರ, ಆದರ್ಶನಗರ, ಅಣ್ಣೇತೋಟ, ಜಗನ್ನಾಥಪುರ, ಶಾರದಾ ದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್, ಅಗ್ನಿಬನ್ನಿರಾಯ ನಗರ, ಭಾಗ್ಯ ನಗರದಲ್ಲಿ ಮೇ 4, 6, 8, 10, 12, 14, 16, 18, 20, 22, 24, 26, 29, 31ರಂದು ಹಾಗೂ ಗೋವಿಂದನಗರ, ಹೌಸಿಂಗ್ ಬೋಡ್, ಗುಬ್ಬಿಗೇಟ್, ಕುಂಟಮ್ಮನತೋಟ, ದಿಬ್ಬೂರು, ಬಿ.ಹೆಚ್.ಪಾಳ್ಯ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿ, ಪಿ.ಎನ್.ಆರ್. ಪಾಳ್ಯ, ಕುಪ್ಪೂರು, ಹೊಸಹಳ್ಳಿಯಲ್ಲಿ ಮೇ 5, 7, 9, 11, 13, 15, 17, 19, 21, 23, 25, 28, 30ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ.…

Read More

ತುಮಕೂರು: ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ಮೇ 4ರಂದು ನೀಟ್ (NEET(UG) ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯು ಮೇ 4ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ ಆಪ್, ಇತರೆ ಸಾಮಾಜಿಕ ಜಾಲತಾಣಗಳ ಮೂಲಕ…

Read More

ತುಮಕೂರು: ತುಮಕೂರು ಗ್ರಾಮಾಂತರ ವ್ಯಾಪ್ತಿಯಲ್ಲಿರುವ ಪಡಿತರ ಚೀಟಿದಾರರು ಕೂಡಲೇ ಕಡ್ಡಾಯವಾಗಿ ಇ–ಕೆವೈಸಿ ಮಾಡಿಸಬೇಕೆಂದು ತಹಶೀಲ್ದಾರ್ ರಾಜೇಶ್ವರಿ ಮನವಿ ಮಾಡಿದ್ದಾರೆ. ತಾಲ್ಲೂಕಿನಲ್ಲಿ ಪಡಿತರ ಚೀಟಿದಾರರು ತಮ್ಮ ಕುಟುಂಬದಲ್ಲಿ ಇ–ಕೆವೈಸಿ ಆಗದೇ ಇರುವ ಸದಸ್ಯರುಗಳನ್ನು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ–ಕೆವೈಸಿ ಮೂಲಕ ಅಪ್‌ ಡೇಟ್ ಮಾಡಿಸಬೇಕು. ಪ್ರತಿ ಸದಸ್ಯರ ಚಾಲ್ತಿಯಲ್ಲಿರುವ ಮೊಬೈಲ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನ್ಯಾಯಬೆಲೆ ಅಂಗಡಿಯವರಿಗೆ ಮಾಹಿತಿ ನೀಡಬೇಕು. E–KYC ಅಪ್‌ ಡೇಟ್ ಮಾಡಿಸದೇ ಇದ್ದಲ್ಲಿ ಅಂತಹ ಫಲಾನುಭವಿಗಳ ಹೆಸರನ್ನು ಪಡಿತರ ಚೀಟಿಯಿಂದ ಕೈಬಿಡಲಾಗುವುದು. ಈಗಾಗಲೇ ತುಮಕೂರು ತಾಲ್ಲೂಕಿನಲ್ಲಿ ಒಟ್ಟು 2,49,934 ಪಡಿತರ ಚೀಟಿಯ ಸದಸ್ಯರುಗಳಿದ್ದು, ಈವರೆವಿಗೆ 244695 ಸದಸ್ಯರುಗಳ ಇ–ಕೆವೈಸಿ ಪೂರ್ಣಗೊಂಡಿರುತ್ತದೆ. ಉಳಿದ 5239 ಸದಸ್ಯರುಗಳ ಇ–ಕೆವೈಸಿ ಬಾಕಿ ಉಳಿದಿರುವುದರಿಂದ ಎಲ್ಲರೂ ನಿಗದಿತ ಅವಧಿಯೊಳಗೆ ಇ–ಕೆವೈಸಿ ಅಪ್‌ ಡೇಟ್ ಮಾಡಿಸತಕ್ಕದ್ದು. ನಿಧನ ಹೊಂದಿರುವ ಕುಟುಂಬದ ಸದಸ್ಯರುಗಳ ಮರಣ ಪ್ರಮಾಣ ಪತ್ರವನ್ನು ಹಾಜರುಪಡಿಸಿ ನ್ಯಾಯಬೆಲೆ ಅಂಗಡಿಯಲ್ಲಿ ಹೆಸರನ್ನು ತೆಗೆಸಬೇಕು. ಕುಟುಂಬದಲ್ಲಿ ಯಾವುದಾದರೂ ಸದಸ್ಯರು ಆಧಾರ್ ಕಾರ್ಡ್ ಸಂಖ್ಯೆ ಪಡಿತರ ಚೀಟಿಗೆ…

Read More

ತುಮಕೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾ ನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಮೇ 4ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ‘ಶ್ರೀ ಭಗೀರಥ ಜಯಂತಿ’ ಕಾರ್ಯಕ್ರಮವನ್ನು ಆಚರಿಸಲಾಗುವುದು. ಶ್ರೀ ಭಗೀರಥ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುವುದು. ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿ, ವಿವಿಧ ಸಮುದಾಯದ ಮುಖಂಡರು, ಗಣ್ಯರು, ಕಲಾವಿದರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಸಮ್ಮೀರ್, ಕಲಂದರ ಶಾಫಿ, ಆದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್, ರಂಜಿತ್ ಬಂಧಿತ ಆರೋಪಿಗಳಾಗಿದ್ದಾರೆ. ಕಳೆದ ಮೇ 1 ರಂದು ರಾತ್ರಿ 8:30ರ ಸುಮಾರಿಗೆ ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಎಂಬಲ್ಲಿ ನಡು ರಸ್ತೆಯಲ್ಲೇ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ನಡೆಸಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಹಿನ್ನೆಲೆ ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಕಾನೂನು ಸುವ್ಯವಸ್ಥೆ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಅವರು ಸಭೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೂಡ ಭಾಗಿಯಾಗಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————

Read More

ಕಲಬುರಗಿ: ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪತಿಯೊಬ್ಬ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ(22), ಖಾಜಪ್ಪ(23) ಹತ್ಯೆಗೀಡಾದವರಾಗಿದ್ದಾರೆ. ಆರೋಪಿ ಶ್ರೀಮಂತ ಕೊಲೆ ಮಾಡಿ, ಮಾದನಹಿಪ್ಪರಗಾ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. 2 ವರ್ಷಗಳ ಹಿಂದೆ ಸೃಷ್ಟಿಯು ಶ್ರೀಮಂತನನ್ನು ಮದುವೆಯಾಗಿದ್ದಳು. ಗುರುವಾರ ಊರಿಗೆ ತೆರಳಿದ್ದ ಶ್ರೀಮಂತ, ರಾತ್ರಿ ಮನೆಗೆ ಹಿಂದಿರುಗಿದ್ದ. ಮನೆಯಲ್ಲಿ ಪತ್ನಿಯು ಅದೇ ಗ್ರಾಮದ ಖಾಜಪ್ಪನ ಜೊತೆ ಇರುವುದನ್ನು ಕಣ್ಣಾರೆ ಕಂಡಿದ್ದಾನೆ. ಈ ವೇಳೆ ಕೋಪದಲ್ಲಿ ಮಾರಕಾಸ್ತ್ರಗಳಿಂದ ಇಬ್ಬರನ್ನೂ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮಾದನ ಹಿಪ್ಪರಗಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————

Read More

ಬೆಂಗಳೂರು: ನಾವು ಭಾರತೀಯರು, ಹಿಂದೂಸ್ತಾನಿಗಳು. ಪಾಕಿಸ್ತಾನ ಎಂದಿಗೂ ನಮ್ಮ ಶತ್ರು. ಪ್ರಧಾನಮಂತ್ರಿ ನರೇಂದ್ರ, ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರ ಅವಕಾಶ ಕೊಟ್ಟಿದ್ದೇ ಆದರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ಹೋಗಲು ಸಿದ್ಧನಿದ್ದೇನೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಭಾರತೀಯರು, ನಾವು ಹಿಂದೂಸ್ತಾನಿಗಳು. ನಮಗೂ ಪಾಕಿಸ್ತಾನಕ್ಕೂ ಯಾವ ಸಂಬಂಧಾನೂ ಇಲ್ಲ. ಯುದ್ಧ ಮಾಡಬೇಕು ಎಂದರೆ ನಾನು ರೆಡಿ. ಮಂತ್ರಿಯಾಗಿ ನನ್ನನ್ನು ಕಳುಹಿಸುತ್ತಾರೆ ಎಂದರೆ ನಾನು ಸಿದ್ಧ. ಯುದ್ಧಕ್ಕೆ ನಾನು ಹೋಗುತ್ತೇನೆ. ದೇಶಕ್ಕಾಗಿ ಯುದ್ಧ ಮಾಡಲು ನಾನು ರೆಡಿ.. ನಡೀರಿ ಹೋಗಿ ಬಿಡೋಣ ಎಂದು ಹೇಳಿದರು. ಈ ದೇಶಕ್ಕೋಸ್ಕರ ನಾನು ಯುದ್ಧಕ್ಕೆ ಹೋಗುತ್ತೇನೆ. ನಾನು ತಮಾಷೆಗೆ, ಜೋಶ್ ನಲ್ಲಿ ಹೇಳುತ್ತಿಲ್ಲ. ಈ ದೇಶಕ್ಕೋಸ್ಕರ ಹೋಗುತ್ತೇನೆ, ನರೇಂದ್ರ ಮೋದಿ, ಅಮಿತ್ ಶಾ ಅವ್ರು ಶಸ್ತ್ರಾಸ್ತ್ರವನ್ನು ನನ್ನ ಕೈಗೆ ಕೊಡಲಿ. ಅಲ್ಲಾ ಮೇಲೆ ಆಣೆ, ಶಸ್ತ್ರಾಸ್ತ್ರವನ್ನು ಬೆನ್ನಲ್ಲಿ ಕಟ್ಟಿಕೊಂಡು ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಲು ಹೋಗುತ್ತೇನೆಂದರು.…

Read More

ಕೊರಟಗೆರೆ: ಉದ್ಭವ ದೇವರುಗಳ ಪುಣ್ಯ ಭೂಮಿ, 800 ವರ್ಷ ಇತಿಹಾಸವುಳ್ಳ ಶ್ರೀ ಕೋಟೆ ಮಾರಮ್ಮ ಮತ್ತು ಕೊಲ್ಲಾಪುರದಮ್ಮ ನೂತನ ದೇವಾಲಯ ಮತ್ತು ಮೂಲ ದೇವರ ಪುನರ್ ಪ್ರತಿಷ್ಠಾಪನೆಯ ಕಾರ್ಯಕ್ರಮವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ವಿಜೃಂಭಣೆಯಿಂದ ನಡೆಯಿತು. ಗ್ರಾಮ ದೇವತೆ ಕೋಟೆ ಮಾರಮ್ಮ ಮತ್ತು ಕೊಲ್ಲಾಪುರದಮ್ಮನವರ ಧಾರ್ಮಿಕ ಕಾರ್ಯಕ್ರಮವು ಕಟ್ಟಡ ಸಮಿತಿಯ ಸಂಪೂರ್ಣ ಸಿದ್ಧತೆಯಿಂದ ಏ.29ರಿಂದ ಮೇ 1ರವರೆಗೆ ನಡೆದ ಗ್ರಾಮ ದೇವತೆಗಳ ಪುನರ್ ಪ್ರತಿಷ್ಠಾಪನೆಯಿಂದ ಕೊರಟಗೆರೆ ನಗರ ಸೇರಿದಂತೆ ಸುತ್ತ ಮುತ್ತಲಿನ 16 ಗ್ರಾಮಗಳಲ್ಲಿ ಮೂರು ದಿನ ಹಬ್ಬದ ವಾತಾವರಣ ಸೃಷ್ಠಿಸಿತ್ತು. ಉದ್ಘಾಟನೆ ವೇಳೆ ನಡೆದ ಧಾರ್ಮಿಕ ಪೂಜೆಗಳು: 2 ಕೋಟಿ ವೆಚ್ಚದ ಗ್ರಾಮ ದೇವತೆಯ ಸಂಕಲ್ಪದಂತೆ ನೂತನ ದೇವಾಲಯ ನಿರ್ಮಾಣಗೊಂಡಿದೆ. ಮೂಲ ದೇವತೆಯ ಪುನರ್ ಪ್ರತಿಷ್ಠಾಪನೆಯಲ್ಲಿ ಗಂಗಾ ಪೂಜೆ, ಯಾಗಾಸಾಲ ಪ್ರವೇಶ, ಗಣಪತಿ ಪೂಜೆ, ಪುಣ್ಯ, ದೇವರುಗಳ ಪ್ರಧಾನ ಕಳಸ ಹೋಮ ಮತ್ತು ಪೂಜೆ, ನವಗ್ರಹ ಕಳಸಾ ಆರಾಧನೆ ಹೋಮ, ಮತ್ತು ಬ್ರಾಹ್ಮಿ ಮುಹೂರ್ತದಲ್ಲಿ ಮೂಲ ದೇವರ ಪುನರ್…

Read More