Author: admin

ಕಡೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕರೊಬ್ಬರ (PSI) ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪಿಎಸ್‌ ಐ ಆಗಿ ಕಾರ್ಯನಿರ್ವಹಿಸುತ್ತಿರುವ ಶರಣಬಸಪ್ಪ ಅವರ ಪತ್ನಿ ಕಾವ್ಯ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಾವ್ಯ ಅವರು ಕಡೂರು ಪಟ್ಟಣದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ದಂಪತಿಗಳ ನಡುವೆ ಕಳೆದ ಕೆಲವು ದಿನಗಳಿಂದ ಕೌಟುಂಬಿಕ ವಿಚಾರವಾಗಿ ಮನಸ್ತಾಪವಿತ್ತು ಎನ್ನಲಾಗಿದೆ. ಇದೇ ಕಲಹ ತಾರಕಕ್ಕೇರಿ ಮನನೊಂದ ಕಾವ್ಯ ಈ ಅಂತಿಮ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್, ಜಾಮೀನು ಕೋರಿ ಈಗ ಎರಡನೇ ಬಾರಿಗೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರ ಕಚೇರಿಯ ಮೂಲಕ ಈ ಹೊಸ ಜಾಮೀನು ಅರ್ಜಿಯನ್ನು ಸಲ್ಲಿಕೆ ಮಾಡಲಾಗಿದೆ. ದರ್ಶನ್ ಪರ ಸಲ್ಲಿಕೆಯಾಗಿರುವ ಈ ಅರ್ಜಿಯಲ್ಲಿ ಪ್ರಮುಖವಾಗಿ ವಿಚಾರಣೆಯ ವಿಳಂಬದ ಬಗ್ಗೆ ಉಲ್ಲೇಖಿಸಲಾಗಿದೆ,  ರೇಣುಕಾಸ್ವಾಮಿ ಕೇಸ್‌ ನ ಟ್ರಯಲ್ ಆರಂಭವಾಗಿ 8 ತಿಂಗಳು ಕಳೆದಿದ್ದರೂ, ಸಾಕ್ಷಿಗಳ ವಿಚಾರಣೆ ಇನ್ನೂ ಮುಕ್ತಾಯವಾಗಿಲ್ಲ. ಪ್ರಕರಣದಲ್ಲಿ ಒಟ್ಟು 273 ಸಾಕ್ಷಿಗಳಿದ್ದು, ಈವರೆಗೆ ಕೇವಲ 15 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ. ಇದೇ ವೇಗದಲ್ಲಿ ವಿಚಾರಣೆ ಮುಂದುವರಿದರೆ ಪೂರ್ಣಗೊಳ್ಳಲು ಹಲವು ವರ್ಷಗಳೇ ಬೇಕಾಗಬಹುದು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ತಾವು ಟ್ರಯಲ್ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದು, ಇದನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಮನವಿ ಮಾಡಿದ್ದಾರೆ. ವರದಿಯ ಪ್ರಕಾರ, ಟ್ರಯಲ್ ಕೋರ್ಟ್‌ನಲ್ಲಿ ರೇಣುಕಾಸ್ವಾಮಿ ಪೋಷಕರನ್ನು ಹೊರತುಪಡಿಸಿ ಮಹಜರು ಸಾಕ್ಷಿಗಳ ವಿಚಾರಣೆ ನಡೆಯುತ್ತಿದೆ.…

Read More

ತುಮಕೂರು: ಜಿಲ್ಲಾ ತಾಲ್ಲೂಕು ಕಚೇರಿಯಲ್ಲಿ ಮಹತ್ವದ ಕಡತವೊಂದು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಇದಕ್ಕೆ ಕಾರಣರಾದ ನೌಕರರು ಹಾಗೂ ಸಿಬ್ಬಂದಿ ವಿರುದ್ಧ ತಹಶೀಲ್ದಾರ್ ರಾಜೇಶ್ವರಿ ಅವರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೆಬ್ಬೂರು ಹೋಬಳಿ ಜೋಡಿ ಕಲ್ಲೆರೆ ಗ್ರಾಮದ ಸರ್ವೆ ನಂಬರ್ 60ಕ್ಕೆ ಸಂಬಂಧಿಸಿದ ದಾಖಲೆಗಳು ತಾಲ್ಲೂಕು ಕಚೇರಿಯಿಂದ ಕಳುವಾಗಿವೆ. ಈ ಸ್ವತ್ತಿಗೆ ಸಂಬಂಧಿಸಿದಂತೆ ಶ್ರೀನಿವಾಸ್ ಕಲ್ಲೆರೆ ಎಂಬುವವರು ದಾಖಲಾತಿಗಾಗಿ ಮನವಿ ಮಾಡಿದ್ದರು. ಆದರೆ, ದಾಖಲೆಗಳು ಲಭ್ಯವಿಲ್ಲವೆಂದು ತಹಶೀಲ್ದಾರ್ ನೀಡಿದ್ದ ಹಿಂಬರಹದ ವಿರುದ್ಧ ಶ್ರೀನಿವಾಸ್ ಅವರು ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ ಮಾಹಿತಿ ಆಯೋಗವು ತಹಶೀಲ್ದಾರ್ ನೀಡಿದ್ದ ಹಿಂಬರಹವನ್ನು ತಿರಸ್ಕರಿಸಿದೆ. ಅಷ್ಟೇ ಅಲ್ಲದೆ, ಒಂದು ವೇಳೆ ಕಡತ ಲಭ್ಯವಿಲ್ಲದಿದ್ದಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನು ನೀಡಿ, ಮೇ 5ರಂದು ಪ್ರಮಾಣ ಪತ್ರದೊಂದಿಗೆ ವಿಚಾರಣೆಗೆ ಹಾಜರಾಗಬೇಕೆಂದು ತಹಸೀಲ್ದಾರ್‌ಗೆ ಕಟ್ಟುನಿಟ್ಟಿನ ಆದೇಶ ನೀಡಿತ್ತು. ಮಾಹಿತಿ ಆಯೋಗದ ಆದೇಶದ ಬೆನ್ನಲ್ಲೇ ಎಚ್ಚೆತ್ತುಕೊಂಡ ತಹಶೀಲ್ದಾರ್ ರಾಜೇಶ್ವರಿ ಅವರು, ಕಡತ ನಾಪತ್ತೆಗೆ ಕಾರಣರಾದವರ ವಿರುದ್ಧ…

Read More

ತುಮಕೂರು: ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಪುನರ್ ವಿಂಗಡಣೆ ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸುವ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಕರ್ನಾಟಕ ಗ್ರಾಮ ಸ್ವರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲೆಯ ಒಟ್ಟು ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆಯನ್ನು 5,338ಕ್ಕೆ ನಿಗದಿಪಡಿಸಿ, ಗೆಜೆಟ್‌ ನಲ್ಲಿ ಕರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಿಂದಿನ ಅವಧಿಗೆ ಹೋಲಿಸಿದರೆ ಈ ಬಾರಿ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳ ಸಂಖ್ಯೆಯಲ್ಲಿ ಒಂದು ಇಳಿಕೆಯಾಗಿದೆ. ಜಿಲ್ಲೆಯ ಒಟ್ಟು ಗ್ರಾ.ಪಂ ಸಂಖ್ಯೆ 330ರಿಂದ 329ಕ್ಕೆ ಇಳಿದಿದೆ. ಇದಕ್ಕೆ ಪ್ರಮುಖ ಕಾರಣ ಕೊರಟಗೆರೆ ಪಟ್ಟಣಕ್ಕೆ ಹೊಂದಿಕೊಂಡಿದ್ದ ಹುಲಿಕುಂಟೆ ಗ್ರಾಮ ಪಂಚಾಯಿತಿಯನ್ನು ರದ್ದುಗೊಳಿಸಿರುವುದು. ಈ ಪಂಚಾಯಿತಿಯ ಕೆಲವು ಗ್ರಾಮಗಳನ್ನು ನೂತನ ಕೊರಟಗೆರೆ ಪುರಸಭೆಗೆ ಸೇರಿಸಲಾಗಿದ್ದು, ಉಳಿದ ಗ್ರಾಮಗಳನ್ನು ಅಕ್ಕಿರಾಂಪುರ ಗ್ರಾಮ ಪಂಚಾಯಿತಿಯೊಂದಿಗೆ ವಿಲೀನಗೊಳಿಸಲಾಗಿದೆ. ತುಮಕೂರು ತಾಲ್ಲೂಕು: ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 41 ಗ್ರಾಮ ಪಂಚಾಯಿತಿಗಳನ್ನು ಹೊಂದಿದೆ. ಇಲ್ಲಿ ಒಟ್ಟು 746 ಸದಸ್ಯರನ್ನು ನಿಗದಿಪಡಿಸಲಾಗಿದೆ. ಮೈದಾಳ ಗ್ರಾ.ಪಂ ಅತಿ ಹೆಚ್ಚು (31) ಸದಸ್ಯರನ್ನು ಹೊಂದಿದ್ದರೆ, ಸೋರೆಕುಂಟೆ ಅತಿ…

Read More

ಹುಬ್ಬಳ್ಳಿ: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇದಕ್ಕೆ ಮುಕ್ತ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಇತರ ನಾಯಕರಿಗೂ ಸಚಿವರಾಗುವ ಅವಕಾಶ ಸಿಗಬೇಕು ಎಂಬ ನಿಟ್ಟಿನಲ್ಲಿ ಸಂಪುಟ ಪುನಾರಚನೆ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಸರ್ಕಾರ ಈಗ ಮೂರನೇ ವರ್ಷಕ್ಕೆ ಕಾಲಿಡುತ್ತಿದೆ. ಈ ಹಂತದಲ್ಲಿ ಹೊಸಬರಿಗೆ ಮತ್ತು ಪಕ್ಷಕ್ಕಾಗಿ ಶ್ರಮಿಸಿದ ಇತರ ನಾಯಕರಿಗೆ ಸಚಿವ ಸ್ಥಾನ ನೀಡುವ ದೃಷ್ಟಿಯಿಂದ ಸಂಪುಟ ಪುನಾರಚನೆ ಆಗುವುದು ಒಳ್ಳೆಯದು ಎಂದರು. ಸಂಪುಟ ಪುನಾರಚನೆಯ ಬಗ್ಗೆ ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತೆಗೆದುಕೊಳ್ಳುತ್ತಾರೆ. ಪಕ್ಷ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದೊಳಗೆ ಯಾವುದೇ ಗೊಂದಲವಿಲ್ಲ ಎಂದು…

Read More

ಕಲಬುರಗಿ: 11 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿ ಸಾಬಣ್ಣ ಮಲ್ಕಪ್ಪ ಕಟ್ಟಿಮನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.25 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಕಲಬುರಗಿ ಜಿಲ್ಲೆಯ ರಟಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ನಿವಾಸಿಯಾದ ಸಾಬಣ್ಣ, ತನ್ನದೇ ಗ್ರಾಮದ 11 ವರ್ಷ 10 ತಿಂಗಳ ಬಾಲಕಿಯನ್ನು ಮನೆಯ ಮುಂದೆ ಆಟವಾಡುತ್ತಿದ್ದಾಗ ಅಪಹರಿಸಿದ್ದನು. ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿ ಆಕೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮವೊಂದಕ್ಕೆ ಕರೆದೊಯ್ದಿದ್ದನು. ಅಕ್ಟೋಬರ್ 16 ರಿಂದ 31ರ ವರೆಗೆ ಬಾಲಕಿಯನ್ನು ಒಂದು ಕೊಠಡಿಯಲ್ಲಿ ಕೂಡಿಹಾಕಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಬಗ್ಗೆ ಮಾಹಿತಿ ಪಡೆದ ಬಾಲಕಿಯ ತಂದೆ, ಸ್ಥಳಕ್ಕೆ ಧಾವಿಸಿ ಮಗಳನ್ನು ರಕ್ಷಿಸಿ ರಟಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಸರ್ಕಾರಿ…

Read More

ಬೆಂಗಳೂರು: ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಮತ್ತು ಕಚೇರಿಗಳಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪಕ್ಕೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಧ್ಯವರ್ತಿಗಳು ಎಲ್ಲೆಡೆ ಇರುತ್ತಾರೆ. ಆದರೆ ಅವರನ್ನು ಯಾವುದೇ ಕಾರಣಕ್ಕೂ ಕಚೇರಿಯ ಒಳಗೆ ಬಿಟ್ಟುಕೊಳ್ಳಬಾರದು. ಅವರನ್ನು ಕಚೇರಿಯಿಂದ ಹೊರಗಿಟ್ಟಾಗ ಮಾತ್ರ ಪಾರದರ್ಶಕ ಆಡಳಿತ ಸಾಧ್ಯ ಎಂದು ಸಿಎಂ ಹೇಳಿದರು. ಕೆಲಸಗಳಲ್ಲಿ ವಿಳಂಬ ಮಾಡುವುದು ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ಅಧಿಕಾರಿಗಳು ಯಾವುದೇ ಫೈಲ್‌ ಗಳನ್ನು ಬಾಕಿ ಉಳಿಸಿಕೊಳ್ಳದೆ, ಶೀಘ್ರವಾಗಿ ವಿಲೇವಾರಿ ಮಾಡಬೇಕು ಎಂದು ಅವರು ತಿಳಿಸಿದರು. ಅಧಿಕಾರಿಗಳಿಗೆ ಕೇವಲ ಕಾನೂನಿನ ಅರಿವಿದ್ದರೆ ಸಾಲದು, ಸಮಾಜದ ಬಡವರು ಮತ್ತು ದುರ್ಬಲ ವರ್ಗದವರ ಬಗ್ಗೆ ಕಾಳಜಿ ಇರಬೇಕು. ಗ್ರಾಮೀಣ ಭಾಗದ ಜನರು ಕಚೇರಿಗೆ ಬಂದಾಗ ಅವರ ಸಮಸ್ಯೆಗಳನ್ನು ಪ್ರೀತಿಯಿಂದ ಆಲಿಸಿ…

Read More

ರಾಯಚೂರು: ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ತೀವ್ರ ಬಿಸಿಲಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ದಾರುಣ ಘಟನೆ ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹುಸೇನಪ್ಪ ಮಡಿವಾಳ್ (45) ಎಂದು ಗುರುತಿಸಲಾಗಿದೆ. ಇವರು ಉದ್ಯೋಗ ಖಾತ್ರಿ (MGNREGA) ಯೋಜನೆಯಡಿ ಕೆಲಸಕ್ಕೆ ಹೋಗಿದ್ದರು. ಮಧ್ಯಾಹ್ನದ ವೇಳೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ, ದಾರಿಯಲ್ಲಿ ಹಠಾತ್ತನೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರು ಮತ್ತು ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರಾದರೂ, ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ತಾಪಮಾನ ವಿಪರೀತವಾಗಿದ್ದು, ಬಿಸಿಲಿನ ಬೇಗೆ ತಾಳಲಾರದೆ ಹುಸೇನಪ್ಪ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬಿಸಿಲಿನಿಂದಾಗಿ ರಕ್ತದೊತ್ತಡ (Low BP) ಕಡಿಮೆಯಾಗಿ ಅವರು ಕುಸಿದು ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಾವಿಗೆ ನಿಖರವಾದ ಕಾರಣವೇನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ರಾಯಚೂರು ಭಾಗದಲ್ಲಿ ಸೂರ್ಯನ ಪ್ರಖರತೆ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಮಧ್ಯಾಹ್ನದ ವೇಳೆ ಹೊರಬರದಂತೆ ಎಚ್ಚರಿಕೆ ವಹಿಸಬೇಕಾದ…

Read More

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ SSLC ಪರೀಕ್ಷಾ ಫಲಿತಾಂಶದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಬಾರಿ ಸುಮಾರು 45 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಲು ಪ್ರಮುಖ ಕಾರಣವೇನು ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ಈ ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಪರೀಕ್ಷಾ ಅಕ್ರಮ ಹಾಗೂ ನಕಲು ಮಾಡುವುದಕ್ಕೆ ಬ್ರೇಕ್ ಹಾಕಲಾಗಿತ್ತು. ಇದರಿಂದಾಗಿ ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಸಾಧ್ಯವಾಯಿತು ಎಂದು ಸಚಿವರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಬಾರಿ ಶೇ. 10ರಷ್ಟು ಕೃಪಾಂಕವನ್ನು ನೀಡಲಾಗಿತ್ತು. ಇಷ್ಟಾದರೂ ಸಹ 45 ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಸಾಧ್ಯವಾಗಿಲ್ಲ ಎಂಬುದು ಗಮನಾರ್ಹ ಎಂದರು. ಕೇವಲ ಫಲಿತಾಂಶದ ಸಂಖ್ಯೆ ಹೆಚ್ಚಿಸುವುದು ನಮ್ಮ ಗುರಿಯಲ್ಲ, ಬದಲಾಗಿ ಶಿಕ್ಷಣದ ಗುಣಮಟ್ಟವನ್ನು ಕಾಪಾಡುವುದು ಸರ್ಕಾರದ ಉದ್ದೇಶವಾಗಿದೆ. ನಕಲು ಮುಕ್ತ ಪರೀಕ್ಷೆ ನಡೆಸಿದ್ದರಿಂದ ನಿಜವಾದ ಕಲಿಕೆಯ ಮಟ್ಟ ಏನೆಂಬುದು ತಿಳಿಯಲು ಸಹಕಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ.…

Read More

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಮತ್ತು ಡಿಸಿಎಂ ನಡುವೆ ಕುರ್ಚಿ ಕಿತ್ತಾಟ ಹಾಗೂ ಭಿನ್ನಾಭಿಪ್ರಾಯಗಳ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಅಚ್ಚರಿಯ ನಡೆ ಪ್ರದರ್ಶಿಸಿದ್ದಾರೆ. ತಮ್ಮ ನಡುವೆ ಯಾವುದೇ ಗೊಂದಲಗಳಿಲ್ಲ ಎಂಬ ಸಂದೇಶವನ್ನು ರವಾನಿಸುವ ಉದ್ದೇಶದಿಂದ ಇಬ್ಬರೂ ನಾಯಕರು ಇಂದು ಒಂದೇ ಕಾರಿನಲ್ಲಿ ಪ್ರಯಾಣಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಇಂದು ನಗರದ ಲೋಕಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಇಬ್ಬರೂ ಪ್ರತ್ಯೇಕ ವಾಹನಗಳಲ್ಲಿ ಹೋಗುವ ಬದಲು, ಸಿದ್ದರಾಮಯ್ಯ ಅವರ ಕಾರಿನಲ್ಲೇ ಡಿ.ಕೆ. ಶಿವಕುಮಾರ್ ಅವರು ಕುಳಿತು ವಿಧಾನಸೌಧಕ್ಕೆ ಆಗಮಿಸಿದರು. ಕೇವಲ ಪ್ರಯಾಣ ಮಾತ್ರವಲ್ಲದೆ, ವಿಧಾನಸೌಧಕ್ಕೆ ಬಂದ ನಂತರವೂ ಡಿಸಿಎಂ ಅವರು ಮುಖ್ಯಮಂತ್ರಿಗಳ ಕಚೇರಿಗೆ ತೆರಳಿ ಸಿದ್ದರಾಮಯ್ಯ ಅವರೊಂದಿಗೆ ಕೆಲಕಾಲ ಗಂಭೀರ ಚರ್ಚೆ ನಡೆಸಿದರು. ಮೇ 15ರ ಹೊತ್ತಿಗೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ ಎಂಬ ವದಂತಿಗಳ ನಡುವೆ ಇಬ್ಬರೂ…

Read More