Subscribe to Updates
Get the latest creative news from FooBar about art, design and business.
- ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
- ಗುಬ್ಬಿ: ಆ.17ರಿಂದ22ರವರೆಗೆ ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
- ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
- ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
- ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
- ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
- ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
- ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
Author: admin
ಬೆಂಗಳೂರು: ಮಡೆನೂರು ಮನು ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 31 ತಿಂಗಳ ಚಾಟಿಂಗ್ ಡಿಟೈಲ್ಸ್ ಪಡೆದುಕೊಂಡಿದ್ದಾರೆ. ನವೆಂಬರ್ 2022ರಿಂದ ಮೇ 2025ರವರೆಗೆ ನನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ. ಮದುವೆ ಹೆಸರಿನಲ್ಲಿ ಅತ್ಯಾಚಾರ ಎಸಗಿ ದೈಹಿಕ ಹಲ್ಲೆ ಮಾಡಿ ಜೀವಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದರು. ಪ್ರಕರಣ ಸಂಬಂಧ ಆರೋಪಿ ಮಡೆನೂರು ಮನುವನ್ನು ಪೊಲೀಸರು ಕಸ್ಟಡಿಗೆ ಪಡೆದು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಟನ 2 ಮೊಬೈಲ್ ಹಾಗೂ ಸಂತ್ರಸ್ತೆಯ 2 ಫೋನ್ ವಶಕ್ಕೆ ಪಡೆದು ಎಫ್ ಎಸ್ ಎಲ್ ಗೆ ಕಳುಹಿಸಿದ್ದಾರೆ. ಸಂತ್ರಸ್ತೆ ಹಾಗೂ ನಟನ ನಡುವಿನ ಆಡಿಯೋ, ವೀಡಿಯೋ ಸಂಭಾಷಣೆಯಲ್ಲಿ ಹಲವು ನಟ, ನಟಿಯರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆ ಪೊಲೀಸರು ಹೆಚ್ಚಿನ ತನಿಖೆಗೆ ಸಿದ್ಧತೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ಡೆಲಿವರಿ ಬಾಯ್ ಗ್ರಾಹಕನ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದರ ವಿಡಿಯೋ ವ್ಯಾಪಕ ವೈರಲ್ ಆಗಿದೆ. ಡೆಲಿವರಿ ಬಾಯ್ ನನ್ನು ಪ್ರಚೋದಿಸಿ ಗ್ರಾಹಕ ಏಟು ತಿಂದಿರುವುದು ವಿಡಿಯೋದಲ್ಲಿ ಕಂಡು ಬರುತ್ತದೆ. ಬೆಂಗಳೂರಿನ ಬಸವೇಶ್ವರನಗರದಲ್ಲಿ ಈ ಘಟನೆ ನಡೆದಿದೆ. ಆ್ಯಪ್ವೊಂದರಲ್ಲಿ ಶಶಾಂಕ್ ಅವರ ಪತ್ನಿ ಕೆಲ ವಸ್ತುಗಳನ್ನು ಆರ್ಡರ್ ಮಾಡಿದ್ದರು. ಡೆಲಿವರಿ ಬಾಯ್ ಬಂದಾಗ ಶಶಾಂಕ್ ಅವರ ನಾದಿನಿ ಸಾಮಗ್ರಿ ತೆಗೆದುಕೊಳ್ಳಲು ಮನೆಯಿಂದ ಹೊರಕ್ಕೆ ಬಂದಿದ್ದರು. ವಿಳಾಸ ತಪ್ಪಾಗಿದ್ದಕ್ಕೆ ಸಂಬಂಧಿಸಿದಂತೆ ಡೆಲಿವರಿ ಬಾಯ್ ವಿಷ್ಣುವರ್ಧನ್ ಮಹಿಳೆಯನ್ನು ಪ್ರಶ್ನಿಸಿದ್ದರು. ಈ ಘಟನೆ ಅಲ್ಲಿಗೆ ಮುಕ್ತಾಯವಾಗಿತ್ತು. ಆದರೆ ಈ ವೇಳೆ ಶಶಾಂಕ್ ಡೆಲಿವರಿ ಬಾಯ್ ನನ್ನು ಅಡ್ಡಗಟ್ಟಿ ಕ್ಯಾತೆ ತೆಗೆದಿದ್ದು, ಈ ವೇಳೆ ಆಕ್ರೋಶಗೊಂಡ ಡೆಲಿವರಿ ಬಾಯ್ ಹಲ್ಲೆ ನಡೆಸಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಈ ಘಟನೆ ಕುರಿತು ಶಶಾಂಕ್ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಹಲ್ಲೆಯಿಂದ ಕಣ್ಣಿಗೆ ಗಾಯವಾಗಿದೆ ಎಂದು ಶಶಾಂಕ್ ಆರೋಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಗಿತಗೊಂಡಿದ್ದ ವಾಹನಗಳ ಟೋಯಿಂಗ್ ಮತ್ತೆ ಆರಂಭವಾಗಲಿದೆ. ಈ ಬಗ್ಗೆ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಸುರಂಗ ರಸ್ತೆ ನಿರ್ಮಾಣ ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆ ಮೇಲೆ ವಾಹನ ನಿಲ್ಲಿಸುವವರಿಗೆ ಖಡಕ್ ಎಚ್ಚರಿಕೆ ನೀಡಿದರು. ರಸ್ತೆಗಳ ಮೇಲೆ ನಿಲ್ಲಿಸಿದ ವಾಹನಗಳನ್ನು ಟೋಯಿಂಗ್ ಮಾಡುತ್ತೇವೆ. 21 ದಿನಗಳಲ್ಲಿ ಆ ವಾಹನಗಳನ್ನು ಹರಾಜು ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದರು. ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ 2022ರ ಫೆಬ್ರವರಿಯಲ್ಲಿ ಟೋಯಿಂಗ್ ಬಂದ್ ಆಗಿತ್ತು. ಕೆಲವು ಹೊಸ ನಿಯಮ, ಗೈಡ್ ಲೈನ್ಸ್ನೊಂದಿಗೆ ಟೋಯಿಂಗ್ ಪ್ರಾರಂಭಿಸಲಾಗುವುದು ಎಂದು ಈ ಹಿಂದಿನ ಸರ್ಕಾರ ಹೇಳಿತ್ತು. ಆದರೆ, ಮತ್ತೆ ಟೋಯಿಂಗ್ ಪ್ರಾರಂಭವಾಗಿರಲಿಲ್ಲ. ಇದೀಗ ಮತ್ತೆ ಟೋಯಿಂಗ್ ಆರಂಭಿಸುವ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ ಕಾಣಿಸಿಕೊಂಡಿದೆ. ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಬೆಂಗಳೂರಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯ ಬಳಿಕ, ಬೆಳ್ಳಂದೂರು ಕೆರೆಯಲ್ಲಿ ಭಾರೀ ಪ್ರಮಾಣದಲ್ಲಿ ನೊರೆ ಕಾಣಿಸಿಕೊಳ್ಳುತ್ತಿದೆ. ಕೆರೆಗೆ ನೀರಿನ ಹರಿವು ಹೆಚ್ಚಾಗಿದ್ದರಿಂದ ನೊರೆ ಪ್ರಮಾಣವು ಏರಿಕೆಯಾಗಿದೆಯಂತೆ. ಬೆಳ್ಳಂದೂರು ಕೆರೆ ಕಲುಷಿತವಾಗಿದೆಂದು ಸ್ಥಳೀಯರು ಆತಂಕಗೊಂಡಿದ್ದಾರೆ. ಬೆಳ್ಳಂದೂರು, ಕರಿಯಮ್ಮ ಅಗ್ರಹಾರ, ಯಮಲೂರು, ಕೆಂಪಾಪುರ, ಚಲಘಟ್ಟ, ನಾಗಸಂದ್ರ ಇಬ್ಬಲೂರು, ದೇವರ ಬೀಸನಹಳ್ಳಿ ಕಾಡುಬೀಸನಹಳ್ಳಿ ಪ್ರದೇಶದ ಜನರಿಗೆ ಮತ್ತೆ ತೊಂದರೆ ಉಂಟಾಗಿದ್ದು, ಪದೇ ಪದೇ ಬೆಳ್ಳಂದೂರು ಕೆರೆಯಲ್ಲಿ ದೊಡ್ಡ ಪ್ರಮಾಣದಲ್ಲಿ ನೊರೆ ಕಾಣಿಸಿಕೊಳ್ಳುತ್ತಿದೆ. ಸಂಸ್ಕರಿಸದ ಮಾಲಿನ್ಯಯುಕ್ತ ನೀರನ್ನು ಕೆರೆಗೆ ಬೀಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಈ ಹಿಂದೆಯೂ ಇಂತಹ ಹಲವು ಆರೋಪಗಳು ಬಂದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎನ್ನುವ ಆಕ್ರೋಶ ಕೇಳಿ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ನಿವೃತ್ತ ಡಿಜಿ, ಐಜಿಪಿ ಓಂಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿ ಕೊಲೆ ಮಾಡಲು ಕಾರಣವಾದ ಹಲವು ಕಾರಣಗಳನ್ನು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ. ತನ್ನ ಬಗ್ಗೆ ವೈಯುಕ್ತಿಕವಾಗಿ ಗಮನ ಹರಿಸಿಲ್ಲ ಎಂದು ಪಲ್ಲವಿ ಆರೋಪಿಸಿದ್ದಾರೆ. ಅಲ್ಲದೇ ಮಗಳಿಗೆ ಮದುವೆ ಮಾಡಿಲ್ಲ ಎಂದು ಕೋಪ ಕೂಡ ಅವರ ಮೇಲಿತ್ತಂತೆ. ತನ್ನ ಭಾಗದ ಕುಟುಂಬದ ಬಗ್ಗೆ ಹೆಚ್ಚು ಗಮನವಹಿಸುತ್ತಿದ್ದ ಓಂ ಪ್ರಕಾಶ್, ಮನೆ ಸಮಸ್ಯೆಗಳಾದಾಗ ನೇರವಾಗಿ ಸಹೋದರಿ ಮನೆಗೆ ತೆರಳುತ್ತಿದ್ದರು. ಇನ್ನೊಂದೆಡೆ ಐಶಾರಮಿ ಮನೆಯಲ್ಲಿದ್ರು ಮಗಳ ಕೈಗೆ ಖರ್ಚಿಗೆ ಹಣ ಕೊಡುತ್ತಿರಲಿಲ್ಲ ಎಂದು ಪತ್ನಿ ಪಲ್ಲವಿ ಆರೋಪಿಸಿದ್ದಾರೆ. ಸಂಪೂರ್ಣ ಹಣದ ವ್ಯವಹಾರವನ್ಮ ಓಂ ಪ್ರಕಾಶ್ ಒಬ್ಬರೇ ನೋಡಿಕೊಳ್ಳುತ್ತಿದ್ರು. ಈ ಹಿಂದೆ ಕೆಲ ಬಾರಿ ಜಗಳ ಮಾಡಿಕೊಂಡು ಪಲ್ಲವಿ ಮನೆ ಬಿಟ್ಟು ಹೋಗಿದ್ದರು. ಜಗಳದಿಂದ ನೊಂದು ಓಂ ಪ್ರಕಾಶ್ ತನ್ನನ್ನು ಕೊಲೆ ಮಾಡಬಹುದು ಎಂದೆಲ್ಲಾ ಪಲ್ಲವಿ ಯೋಚಿಸುತ್ತಿದ್ದರು ಹೀಗಾಗಿ ತಾನು ಕೊಲೆಯಾಗುವ ಬದಲು ತಾನೇ ಅವರನ್ನ ಕೊಲೆ ಮಾಡುವ ನಿರ್ಧಾರಕ್ಕೆ ಪತ್ನಿ ಬಂದಿದ್ದರು ಎನ್ನಲಾಗಿದೆ.…
ತುಮಕೂರು: ಸಹೋದ್ಯೋಗಿ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿರುವ ಆರೋಪದಡಿ ತುಮಕೂರು ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಾಗಿದ್ದು, ಪತ್ರಕರ್ತನನ್ನು ಬಂಧಿಸಲಾಗಿದ್ದು, ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ವಿರುದ್ಧ ಝೀ ಕನ್ನಡ ನ್ಯೂಸ್ ವರದಿಗಾರ ಜಿ.ಎನ್.ಮಂಜುನಾಥ್ (ಸಮಯ ಮಂಜು) ನೀಡಿರುವ ದೂರಿನ ಮೇರೆಗೆ ತಿಲಕ್ ಪಾರ್ಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಮೇ 21ರಂದು ಬೆಳಿಗ್ಗೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ನಡೆದ ಇಡಿ ದಾಳಿಯ ವರದಿ ಮಾಡಲು ಝೀ ಕನ್ನಡ ನ್ಯೂಸ್ ವರದಿಗಾರ ಮಂಜುನಾಥ್ ಹೋಗಿದ್ದ ವೇಳೆ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ, ಏನಲೇ ನೀನು ಬಂದಿದ್ದೀಯಾ? ನಿನಗೆ ನೀನೆ ಮಹಾಬುದ್ಧಿವಂತ ಅಂದ್ಕೊಂಡಿದ್ದೀಯಾ, ಏನೇ ಮಾಡಿದರೂ, ಕೀಳು ಜಾತಿನೇ, ಕೀಳು ಜಾತಿ ಬುದ್ಧಿ ಬಿಡಲ್ಲ… ಮಾದಿಗರ ಬುದ್ದಿ ಲದ್ದಿ ಎಂದು ಜಾತಿ ನಿಂದನೆ ಮಾಡಿ ಅವಾಚ್ಯವಾಗಿ…
ತಿಪಟೂರು: ಬೀದಿಯಲ್ಲಿ ಆಟವಾಡುತ್ತಿದ್ದ 6 ವರ್ಷದ ಮಗುವಿನ ಮೇಲೆ ದಾಳಿ ನಡೆಸಿದ ಬೀದಿನಾಯಿಗಳ ಹಿಂಡು ಮಗುವಿನ ತಲೆ ಹಾಗೂ ಹೊಟ್ಟೆಯನ್ನ ತಿಂದು ಹಾಕಿರುವ ಹೃದಯ ವಿದ್ರಾವಕ ಘಟನೆ ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ಅಯ್ಯನಬಾವಿ ಬೋವಿ ಕಾಲೋನಿಯಲ್ಲಿ ನಡೆದಿದೆ. ಅಯ್ಯನಬಾವಿ ಗ್ರಾಮದ ನಿವಾಸಿ ಮಹಲಿಂಗಯ್ಯನವರ ಮಗಳು 6 ವರ್ಷದ ನವ್ಯ ಬೀದಿನಾಯಿಗಳ ದಾಳಿಗೊಳಗಾದ ನತದೃಷ್ಟೆ. ಮಧ್ಯಾಹ್ನ 4 ಗಂಟೆ ಸಮಯದಲ್ಲಿ ಅಯ್ಯನ ಬಾವಿ ಗ್ರಾಮದ ತಮ್ಮ ಮನೆ ಮುಂದೆ ಆಟವಾಡುತ್ತಿದ್ದ, ನವ್ಯಾಳ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿವೆ. ದಾಳಿ ನಡೆಸಿದ ನಾಯಿಗಳು ಮಗುವಿನ ತಲೆಯ ಚರ್ಮವನ್ನ ಸಂಪೂರ್ಣವಾಗಿ ಕಿತ್ತುಹಾಕಿದ್ದು, ಹೊಟ್ಟೆಯನ್ನ ಕಿತ್ತು ಕರುಳು ಆಚೆ ಬರುವಂತೆ ಮಾಡಿವೆ. ಮಗುವಿನ ಮುಖ ಹಾಗೂ ಕೈ, ಕಾಲು ತೊಡೆಭಾಗವನ್ನ ಕಿತ್ತು ಹಾಕಿವೆ. ರಕ್ತದ ಮಡುವಿನಲ್ಲಿ ಚೀರಾಡುತ್ತಿದ್ದ ಮಗುವನ್ನ ಕಂಡ ಸಾರ್ವಜನಿಕರು, ನಾಯಿಹಿಂಡನ್ನ ಓಡಿಸಿ ಮಗುವನ್ನ ತಕ್ಷಣ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗು ತೀವ್ರವಾಗಿ ಗಾಯಗೊಂಡಿದ್ದು ಹೆಚ್ಚಿನ ರಕ್ತಸ್ರಾವವಾದ ಕಾರಣ ಹೆಚ್ಚಿನ…
ಹಾಸನ: ವಿರಾಜಪೇಟೆ ಕಾಂಗ್ರೆಸ್ ಶಾಸಕ ಪೊನ್ನಣ್ಣ ಅವರ ಆಪ್ತ ಸಹಾಯಕ ಮಹೇಂದ್ರ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ 35 ವರ್ಷದ ಶೃತಿ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ತಿಂಗಳುಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶೃತಿ ಮನೆಯಲ್ಲಿಯೇ ವಿಷ ಸೇವಿಸಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಹೀಗಾಗಿ ಅವರನ್ನು ಹಾಸನದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸಕಲೇಶಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತಿಪಟೂರು: ಬೀದಿಯಲ್ಲಿ ಆಟವಾಡುತ್ತಿದ್ದ 6ವರ್ಷದ ಮಗುವಿನ ಮೇಲೆ ದಾಳಿ ನಡೆಸಿದ ಬೀದಿನಾಯಿಗಳ ಹಿಂಡು ಮಗುವಿನ ತಲೆ ಹಾಗೂ ಹೊಟ್ಟೆಯನ್ನ ತಿಂದು ಹಾಕಿರುವ ಹೃದಯ ವಿದ್ರಾವಕ ಘಟನೆ ತಿಪಟೂರು ತಾಲ್ಲೋಕಿನ ಕಸಬಾ ಹೋಬಳಿ ಅಯ್ಯನಬಾವಿ ಬೋವಿ ಕಾಲೋನಿಯಲ್ಲಿ ನಡೆದಿದೆ. ಅಯ್ಯನಬಾವಿ ಗ್ರಾಮದ ನಿವಾಸಿ ಮಹಲಿಂಗಯ್ಯನವರ ಮಗಳು 6 ವರ್ಷದ ನವ್ಯ ಬೀದಿನಾಯಿಗಳ ದಾಳಿಗೊಳಗಾದ ನತದೃಷ್ಟೆ. ಮಧ್ಯಾಹ್ನ 4 ಗಂಟೆ ಸಮಯದಲ್ಲಿ ಅಯ್ಯನ ಬಾವಿ ಗ್ರಾಮದ ತಮ್ಮ ಮನೆ ಮುಂದೆ ಆಟವಾಡುತ್ತಿದ್ದ ನವ್ಯಾಳ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿವೆ. ದಾಳಿ ನಡೆಸಿದ ನಾಯಿಗಳು ಮಗುವಿನ ತಲೆಯ ಚರ್ಮವನ್ನ ಸಂಪೂರ್ಣವಾಗಿ ಕಿತ್ತುಹಾಕಿದ್ದು. ಮಗುವಿನ ಹೊಟ್ಟೆ ಭಾಗ ಕಿತ್ತು ತಿಂದಿದೆ. ಬೀದಿ ನಾಯಿಗಳ ದಾಳಿಯಿಂದ ಮಗು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದೆ. ಬೀದಿ ನಾಯಿಗಳು ಮಗುವಿನ ಹೊಟ್ಟೆಯನ್ನು ಕಿತ್ತು ಕರುಳು ಆಚೆಬರುವಂತೆ ಮಾಡಿವೆ. ಮಗುವಿನ ಮುಖ ಹಾಗೂ ಕೈ.ಕಾಲು ತೊಡೆಭಾಗವನ್ನ ಕಿತ್ತು ಹಾಕಿವೆ. ರಕ್ತದ ಮಡುವಿನಲ್ಲಿ ಕೀರಾಡುತ್ತಿದ್ದ ಮಗುವನ್ನ ಕಂಡ ಸಾರ್ವಜನಿಕರು.ನಾಯಿಗಳನ್ನು ಓಡಿಸಿ…
ಕೊರಟಗೆರೆ : SSLC ಮರುಮೌಲ್ಯಮಾಪನ ಫಲಿತಾಂಶದಲ್ಲಿ ರವೀಂದ್ರ ಭಾರತಿ ಪ್ರೌಢಶಾಲೆ ವಿದ್ಯಾರ್ಥಿ ಸೃಜನ್ ಎಂ.ಎನ್ 620(99.2%) ಅಂಕದೊಂದಿಗೆ ರಾಜ್ಯಕ್ಕೆ ಆರನೇ ರ್ಯಾಂಕ್, ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದು ಸಂಸ್ಥೆಯ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿದ್ದಾನೆ. ಮೇ 2ರಂದು ಕರ್ನಾಟಕ ಪ್ರೌಢ ಶಿಕ್ಷಣಾ ಮಂಡಳಿಯಿಂದ ಬಿಡುಗಡೆಗೊಂಡ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮರು ಮೌಲ್ಯಪನಕ್ಕೆ ಶಾಲೆಯ 4 ಮಂದಿ ವಿದ್ಯಾರ್ಥಿಗಳು ಅರ್ಜಿ ಹಾಕಿದ್ದರು. ಈ ವಿದ್ಯಾರ್ಥಿಗಳಲ್ಲಿ ಸೃಜನ್ ಎಂ.ಎನ್ ಹಿಂದಿ, ಗಣ ತ, ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ, ಉಳಿದ ಮೂರು ವಿಷಯಗಳಲ್ಲಿ ಕನ್ನಡ 123 , ಇಂಗ್ಲೀಷ್ 99, ಸಮಾಜ ವಿಜ್ಞಾನ 98 ಒಟ್ಟು 620 ಅಂಕ ಪಡೆದಿದ್ದಾನೆ. ರಾಜ್ಯಕ್ಕೆ 6 ನೇ ರ್ಯಾಂಕ್ ಪಡೆದು ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಯ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಉಳಿದ ಮೂರು ವಿದ್ಯಾರ್ಥಿಗಳಲ್ಲಿ ವರ್ಷಿಣ ಟಿ.ವಿ 603 ಅಂಕ, ದೀಕ್ಷಿತ…