Subscribe to Updates
Get the latest creative news from FooBar about art, design and business.
- ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
- ಮಧುಗಿರಿ: ಪುರಸಭೆ ನಿರ್ಲಕ್ಷ, ಪಾದಚಾರಿ ಜಾಗ ಒತ್ತುವರಿ
- ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
- ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
- ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
- ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
- ಕೊರಟಗೆರೆ: ಹೃದಯಾಘಾತದಿಂದ ಕೆಎಸ್ ಆರ್ ಪಿ ಎಎಸ್ ಐ ಎನ್.ಜಿ. ಪವಾರ್ ನಿಧನ
- ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
Author: admin
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದು, ಒಂದೂವರೇ ವರ್ಷ ಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಕೊಡುತ್ತಾರೆ. ಹುದ್ದೆ ಬಿಟ್ಟು ಹೋಗ್ತಾರೆ. ವೈರಾಗ್ಯ ಬಂದ ಮೇಲೆ ಏನೂ ಮಾಡಲು ಸಾಧ್ಯವಿಲ್ಲ. ದೇಶವನ್ನು ನಂತರ ಆಳುವವರು ಸನ್ಯಾಸಿ ಎಂದಿದ್ದಾರೆ. ಬೆಂಗಳೂರಿನ ಧರ್ಮರಾಯ ದೇವಸ್ಥಾನದ ಕರಗ ಉತ್ಸವದಲ್ಲಿ ಭಾಗಿಯಾದ ಬ್ರಹ್ಮಾಂಡ ಗುರೂಜಿ ಮಾಧ್ಯಮಗಳ ಜೊತೆ ಈ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡಿದ್ದು, ವಯಸ್ಸಿನ ಕಾರಣದಿಂದ ಅವರ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎನ್ನುವ ಚರ್ಚೆಗಳ ನಡುವೆಯೇ ಬ್ರಹ್ಮಾಂಡ ಗುರೂಜಿ ಈ ಹೇಳಿಕೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ರಜತ್ ಜೊತೆ ನನ್ನ ಫ್ರೆಂಡ್ ಶಿಪ್ ಕಟ್ ಆಗಿಲ್ಲ. ಸಣ್ಣ ಸಣ್ಣ ವಿಷಯಕ್ಕೆ ಫ್ರೆಂಡ್ ಶಿಪ್ ಕಟ್ ಮಾಡ್ಕೊಳ್ಳೋವನು ನಾನಲ್ಲ ಎಂದು ವಿನಯ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದ ನಂತರ ರಜತ್ ನಿಂದ ವಿನಯ್ ಗೌಡ ಅಂತರ ಕಾಯ್ದುಕೊಂಡಿದ್ದರು. ಈ ವಿಚಾರವಾಗಿ ವಿನಯ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ರಜತ್ ಜೊತೆ ನನ್ನ ಫ್ರೆಂಡ್ ಶಿಪ್ ಕಟ್ ಆಗಿಲ್ಲ. ಸಣ್ಣ ಸಣ್ಣ ವಿಷಯಕ್ಕೆ ಫ್ರೆಂಡ್ ಶಿಪ್ ಕಟ್ ಮಾಡ್ಕೊಳ್ಳೋವನು ನಾನಲ್ಲ. ಅವನು ನನ್ನನ್ನ ಎಲ್ಲೂ ಬಿಟ್ಟುಕೊಟ್ಟಿಲ್ಲ. ನಾನೂ ಬಿಟ್ಟು ಕೊಡಲ್ಲ, ಸ್ನೇಹಿತರ ಸಂಬಂಧ ಗಂಡ ಹೆಂಡತಿ ಜಗಳ ಇದ್ದಂತೆ, ಎರಡ್ಮೂರು ದಿನ ಇರುಸು–ಮುರುಸು ಇರುತ್ತೆ, ಹಾಗೇ ಬಿಟ್ರೆ ಅದಾಗೇ ಸರಿ ಹೋಗುತ್ತೆ ಅಂತ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ವಿಜಯೋತ್ಸವ ಸಂಭ್ರಮಾಚರಣೆ ಪ್ರಯುಕ್ತ ಮಂಡ್ಯದ ವ್ಯವಸಾಯ ಕಾಲೋನಿ ಗ್ರಾಮ, ಮಾರಗೌಡನಗಳ್ಳಿ, ಕೆರಗೋಡು ಹೋಬಳಿ ಮಂಡ್ಯ ತಾಲೂಕು ಇಲ್ಲಿ ಇಂದು (ಏ.13) ಅಂಬೇಡ್ಕರ್ ಹಬ್ಬ ಆಚರಣೆ ಮಾಡಲಾಗುತ್ತಿದೆ. ಸಂಜೆ 5ರಿಂದ ಕಾರ್ಯಕ್ರಮ ಆರಂಭಗೊಂಡು ರಾತ್ರಿ 12.01ರವರೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಶ್ರಾಂತ ಜಿಲ್ಲಾ ಹಾಗೂ ಸೆಷನ್ ನ್ಯಾಯಾಧೀಶರು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ನಿಗಮದ ಕಾನೂನು ಸಲಹೆಗಾರರಾದ ಡಾ.ಬಾಬಾ ಸಾಹೇಬ್ ಜಿನರಾಳ್ಕರ್ ಅವರು ಅವರು ವಿಶೇಷ ವಿಷಯ ಮಂಡನೆ ಮಾಡಲಿದ್ದಾರೆ. ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಉದ್ಘಾಟನೆ ಮಾಡಲಿದ್ದಾರೆ. ದಲಿತ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ವೆಂಕಟರಮಣಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಅಂಬೇಡ್ಕರ್ ಸ್ವಾಭಿಮಾನ ಜಾಗೃತಿ ಅಭಿಯಾನ ಸಮಿತಿಯ ರಾಜ್ಯಾಧ್ಯಕ್ಷರಾದ ಸಿ.ಎಂ.ಕೃಷ್ಣ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ವಿಶೇಷ ಗೌರವ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ. ದಾಸನೂರು ಕುಶಣ್ಣ ಅವರು ಕೂಡ ಈ ಕಾರ್ಯಕ್ರಮದಲ್ಲಿ ವಿಷಯ ಮಂಡನೆ ಮಾಡಲಿದ್ದಾರೆ. ಅಲ್ಲದೇ ಹಲವಾರ…
ಬೆಂಗಳೂರು: ಕೆ.ಎಲ್ ರಾಹುಲ್ ಬ್ಯಾಟಿಂಗ್ ತುಂಬಾನೇ ಇಷ್ಟ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಹೇಳಿದ್ದಾರೆ. ಕೆ.ಎಲ್ ರಾಹುಲ್ ಹೋಂ ಗ್ರೌಂಡ್ ವೈರಲ್ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಕರ್ನಾಟಕದವರು. ಅವರು ಎಲ್ಲೇ ಆಡಿದ್ರು, ಕರ್ನಾಟಕದವರು ತಾನೇ ಎಂದಿದ್ದಾರೆ. ನನಗೆ ಅವರ ಬ್ಯಾಟಿಂಗ್ ತುಂಬಾ ಇಷ್ಟ. ಆವರು ಆಡಿದಾಗಲೆಲ್ಲಾ ಔಟೇ ಆಗಬಾರದು ಎಂದುಕೊಳ್ಳುತ್ತಿರುತ್ತೇನೆ. ವಿರಾಟ್ ಕೊಹ್ಲಿ ಚೆನ್ನಾಗಿ ಆಡ್ತಾರೆ. ಹಾಗೆಯೇ ರಾಹುಲ್ ಬ್ಯಾಟಿಂಗ್ ಸ್ಟೈಲ್ ನೋಡಿದಾಗ ಹೆಮ್ಮೆ ಎಂದೆನಿಸುತ್ತದೆ. ಯಾರ್ ಗೆದ್ರೂ ಕೂಡ ಕಪ್ ಇಂಡಿಯಾದಲ್ಲೇ ಇರುತ್ತದೆ ಎಂದು ಶಿವಣ್ಣ ಹೇಳಿದ್ದಾರೆ. ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವು ಸಾಧಿಸಿತ್ತು. ಗೆಲುವಿನ ಸಂಭ್ರಮದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಸ್ಪೆಷಲ್ ಸಿಗ್ನೇಚರ್ ಸ್ಟೈಲ್ ಮಾಡಿದ್ದರು. ಬಳಿಕ ಕಾಂತಾರ ನನ್ನ ಫೇವರಿಟ್ ಸಿನಿಮಾ, ಸಿನಿಮಾದಲ್ಲಿರುವಂತೆ ಮಾಡಿದೆ ಎಂದು ಅವರು ಹೇಳಿಕೊಂಡಿದ್ದರು. ಪಂದ್ಯದಲ್ಲಿ ಗೆದ್ದಾಗ ನನಗೆ ಆ ಸಿನಿಮಾದ ದೃಶ್ಯ ನೆನಪಾಯಿತು. ಹಾಗಾಗಿ ನಾನು ಅದೇ ರೀತಿ ಮಾಡಿದೆ. ಅದು ನನ್ನ ನೆಚ್ಚಿನ…
ಬೆಂಗಳೂರು: ಜಾತಿ ಜನಗಣತಿ ವರದಿ ಸಿದ್ದರಾಮಯ್ಯಗೆ ಮರಣ ಶಾಸನ ಆಗಬಹುದು, ಅವರ ಪಕ್ಷದವರೇ ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಜಾತಿ ಜನಗಣತಿ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ. ಈ ವರದಿ ಸಿದ್ದರಾಮಯ್ಯಗೇ ಮರಣ ಶಾಸನ ಆಗಬಹುದು. ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡ್ತಿದ್ದಾರೆ. ಈ ವರದಿ ಜಾರಿಯಾದರೆ ಸಿದ್ದರಾಮಯ್ಯ ರಾಜ್ಯ ರಾಜಕೀಯ ಇತಿಹಾಸದಲ್ಲಿ ಒಬ್ಬ ಖಳನಾಯಕ ಆಗ್ತಾರೆ ಎಂದರು. ಸಿದ್ದರಾಮಯ್ಯ ಅವರಿಗೆ ಪೂರ್ಣ ಸತ್ಯ ಗೊತ್ತಿದೆ. ಆದ್ರೆ ಅವರು ಅವರ ಕುರ್ಚಿ ಉಳಿಸಿಕೊಳ್ಳಲು ವರದಿ ಜಾರಿಗೆ ಮುಂದಾಗಿದ್ದಾರೆ. ಮೊನ್ನೆ ಮೊನ್ನೆ ಅವರ ಹೈಕಮಾಂಡ್ ನಾಯಕರು ಅವರನ್ನು ಕರೆದು ಹೇಳಿದ್ದಾರೆ, ಸಿದ್ದರಾಮಯ್ಯ ಅವರ ಇವತ್ತಿನ ಪರಿಸ್ಥಿತಿ ನೋಡಿದ್ರೆ, ಈ ಮಟ್ಟಕ್ಕೂ ಅವರು ಬಂದಿದ್ದಾರಾ ಅನ್ನೋ ನೋವು ಕಾಡುತ್ತೆ ನನಗೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ತುಮಕೂರು: ಶಿಕ್ಷಣ ಸಂಸ್ಥೆಗಳಿಗೆ ಗ್ರಂಥಾಲಯ ಮತ್ತು ಅದರಲ್ಲಿನ ಗ್ರಂಥಗಳು ದೇಹದ ಹೃದಯ ಭಾಗವಿದ್ದಂತೆ ಎಂದು ಪ್ರಾಂಶುಪಾಲರಾದ ಡಾ.ಪಿ.ಹೇಮಲತಾ ತಿಳಿಸಿದ್ದಾರೆ. ನಗರದ ಸರಸ್ವತಿಪುರಂನಲ್ಲಿ ಇರುವ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಸಿಲಿಬ್ ಸಾಫ್ಟ್ವೇರ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗ್ರಂಥಾಲಯ ಆಟೋಮೇಷನ್ ಮತ್ತು ಹೊಸ ಟ್ರೆಂಡ್ ಕುರಿತಾದ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಹಂತದಲ್ಲಿ ಗ್ರಂಥಗಳನ್ನು ಪಠಿಸುವುದು ಮತ್ತು ಹೊಸ ಹೊಸ ಗ್ರಂಥಗಳ ಬಗ್ಗೆ ಅಧ್ಯಯನ ನಡೆಸುವುದನ್ನು ಅಭ್ಯಾಸ ಮಾಡಬೇಕು, ಹಿರಿಯರು ಹೇಳಿದಂತೆ “ದೇಶ ಸುತ್ತು ಇಲ್ಲ ಕೋಶ ಓದು” ಎನ್ನುವಂತೆ ಒಂದೆಡೆ ಇದ್ದು ಗ್ರಂಥಗಳಿಂದ ಅಪಾರಜ್ಞಾನವನ್ನು ಸಂಪಾದಿಸಬಹುದಾಗಿದೆ ಎಂದರು. ಕಾರ್ಯಾಗಾರದ ಪ್ರಸ್ತಾವಿಕ ನುಡಿಯನ್ನು ಗ್ರಂಥಾಲಯ ಸಹಾಯಕಿ ಲಕ್ಷ್ಮಮ್ಮ ಎಚ್.ಜಿ. ಮಾತನಾಡಿ, ನಮ್ಮ ಕಾಲೇಜಿನಲ್ಲಿ ಸುಂದರವಾದಂತಹ ಗ್ರಂಥಾಲಯವಿದ್ದು, ಗ್ರಂಥಾಲಯದಲ್ಲಿ ಶೈಕ್ಷಣಿಕಕ್ಕೆ ಸಂಬಂಧಪಟ್ಟಂತಹ ಎಲ್ಲಾ ತರಹದ ಪುಸ್ತಕಗಳು ದೊರೆಯುತ್ತದೆ. ಜೊತೆಗೆ ಪ್ರತಿದಿನ ಕನ್ನಡ, ಇಂಗ್ಲಿಷ್ ಹಾಗೂ ನಿಯತಾಕಲಿಕೆಗಳು ಸಿಗುತ್ತದೆ. ಅದನ್ನು ತಾವುಗಳು ಎಲ್ಲಾ ವಿದ್ಯಾರ್ಥಿಗಳು…
ನವದೆಹಲಿ: ವ್ಯಕ್ತಿಯೊಬ್ಬ ಕಾಮತೃಷೆ ತೀರಿಸಿಕೊಳ್ಳಲು ಬೀದಿ ನಾಯಿಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ರಾಷ್ಟ್ರ ರಾಜಧಾನಿ ಶಾಹದಾರ ಪ್ರದೇಶದಲ್ಲಿ ನಡೆದಿದ್ದು, ಸದ್ಯ 36 ವರ್ಷ ವಯಸ್ಸಿನ ಕಾಮುಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 7 ರಂದು ಈ ಘಟನೆ ನಡೆದಿದೆ. ಪ್ರಾಣಿ ದಯಾ ಸಂಘದ ಸದಸ್ಯೆ ರೇಣು ಎಂಬುವರು ನೀಡಿದ ದೂರಿನ ನಂತರ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 7 ರಂದು ರಾತ್ರಿ 10 ಗಂಟೆಯ ಸುಮಾರಿಗೆ ಕೈಲಾಶ್ ನಗರದ ನಾಲಾ ಪ್ರದೇಶದ ಸ್ಟ್ರೀಟ್ ನಂ. 15 ರ ಬಳಿ ವ್ಯಕ್ತಿಯೊಬ್ಬ ಬೀದಿನಾಯಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಅವರು ಆರೋಪಿಸಿರುವುದಾಗಿ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 325 (ಪ್ರಾಣಿಗಳನ್ನು ಕೊಲ್ಲುವ ಅಥವಾ ಅಂಗವಿಕಲಗೊಳಿಸುವ ಮೂಲಕ ದುಷ್ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು…
ತುಮಕೂರು: ಹನುಮ ಜಯಂತಿ ಹಿನ್ನೆಲೆಯಲ್ಲಿ ಇಂದು ತುಮಕೂರಿನ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ದೇಗುಲದ ಎದುರು ಬೃಹತ್ ರಥೋತ್ಸವ ಜರುಗಿತು. ರಥೋತ್ಸವದಲ್ಲಿ ಸಾವಿರಾರು ಮಂದಿ ಹನುಮನ ಭಕ್ತರು ಭಾಗವಹಿಸಿದ್ದರು. ರಥದಲ್ಲಿ ಆಂಜನೇಯ ಸ್ವಾಮಿಯ ವಿಗ್ರಹವನ್ನು ಇರಿಸುತ್ತಿದ್ದಂತೆ ಬಾನಂಗಳದಲ್ಲಿ ಗರುಡ ಮೂರು ಸುತ್ತು ಪ್ರದಕ್ಷಣೆ ಹಾಕಿದ ನಂತರ ನೂರಾರು ಭಕ್ತರು ರಥವನ್ನು ಎಳೆದು ಪುನೀತರಾದರು. ಬಿರುಬಿಸಿಲಿನಲ್ಲಿಯೂ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಪಠ್ಯಕ್ರಮವನ್ನು ಸಿದ್ಧಪಡಿಸುವಾಗ ಎಲ್ಲ ವಿದ್ಯಾರ್ಥಿಗಳೂ ಗಮನದಲ್ಲಿರಬೇಕು. ಆದರೆ ನಿಧಾನಗತಿಯಲ್ಲಿ ಕಲಿಯುವವರಿದ್ದಾರೆ ಎಂಬ ಕಾರಣಕ್ಕೆ ಪಠ್ಯಕ್ರಮವನ್ನು ಸಡಿಲಗೊಳಿಸಬಾರದು ಎಂದು ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನ ವಿಭಾಗದ ಅಧ್ಯಕ್ಷ ಪ್ರೊ.ಹೆಚ್.ಕೆ.ಶಿವಲಿಂಗಸ್ವಾಮಿ ಅಭಿಪ್ರಾಯಪಟ್ಟರು. ತುಮಕೂರು ವಿ.ವಿ. ಇಂಗ್ಲಿಷ್ ಅಧ್ಯಾಪಕರ ವೇದಿಕೆ ಹಾಗೂ ಹುಳಿಯಾರು ಬಿಎಂಎಸ್ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ವಿಭಾಗಗಳ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹೊಸ ಪಠ್ಯಕ್ರಮ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು. ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಯಾವುದೇ ವಿಷಯದಲ್ಲಿ ಪಠ್ಯಕ್ರಮ ಪ್ರಮುಖ ಪಾತ್ರವಹಿಸುತ್ತದೆ. ಪಠ್ಯಕ್ರಮವೆಂದರೆ ವಿಶ್ವವಿದ್ಯಾಲಯದ ಮತ್ತು ವಿಭಾಗದ ಅಸ್ಮಿತೆಯಾಗಿರುತ್ತದೆ. ಪ್ರತಿ ವಿಷಯದ ಪಠ್ಯಕ್ರಮವು ನಿರ್ದಿಷ್ಟ ಉದ್ದೇಶಗಳನ್ನು ಹೊಂದಿದ್ದು ವಿದ್ಯಾರ್ಥಿಗಳ ಮನೋವೈಜ್ಞಾನಿಕ ಬೆಳವಣಿಗೆ, ಸಮಾಜದ ಅಗತ್ಯಗಳು ಮತ್ತು ಭವಿಷ್ಯದ ಸವಾಲುಗಳನ್ನು ಗಮನದಲ್ಲಿಡಲಾಗುತ್ತದೆ ಎಂದರು. ನಿಧಾನಗತಿಯ ಕಲಿಕಾರ್ಥಿಗಳಿಗಾಗಿ ಪಠ್ಯಕ್ರಮವನ್ನು ಸಡಿಲಗೊಳಿಸುವುದು ಒಳ್ಳೆಯದಲ್ಲ. ಉಪನ್ಯಾಸಕರು ವಿಷಯವನ್ನು ಕ್ರಮಬದ್ಧವಾಗಿ ಕಲಿಸಲು ಸಿದ್ಧರಾಗಬೇಕೇ ಹೊರತು ಕೆಲವು ವಿದ್ಯಾರ್ಥಿಗಳ ಅಸಾಮರ್ಥ್ಯವನ್ನು ನೆಪವಾಗಿಟ್ಟುಕೊಂಡು ಪಠ್ಯಕ್ರಮವನ್ನು ದುರ್ಬಲಗೊಳಿಸಬಾರದು ಎಂದರು. ದೇಶದ ಶ್ರೇಷ್ಠ ಯುನಿವರ್ಸಿಟಿಗಳ ಪಠ್ಯಕ್ರಮಗಳು ನಮಗೆ ಮಾದರಿಯಾಗಬೇಕು. ಬದಲಾಗುತ್ತಿರುವ…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 14ರಂದು “ಡಾ.ಬಿ.ಆರ್. ಅಂಬೇಡ್ಕರ್ ಅವರ 1000 ಕೆ.ಜಿ. ಕಂಚಿನ ಪ್ರತಿಮೆ ಅನಾವರಣ ಹಾಗೂ ಡಾ.ಬಾಬು ಜಗಜೀವನರಾಮ್ ಅವರ 118ನೇ ಜಯಂತಿ ಮತ್ತು ಡಾ: ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನದ ಆಚರಣೆ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಅಂದು ಮಧ್ಯಾಹ್ನ 2 ಗಂಟೆಗೆ ನಗರದ ಟೌನ್ ಹಾಲ್ ವೃತ್ತದಿಂದ ಮೆರವಣಿಗೆ ಹಾಗೂ ಸಂಜೆ 4 ಗಂಟೆಗೆ ಮಹಾನಗರಪಾಲಿಕೆ ಆವರಣದಲ್ಲಿ ವೇದಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ 1000 ಕೆ.ಜಿ. ಕಂಚಿನ ಪ್ರತಿಮೆ ಅನಾವರಣ ಹಾಗೂ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಸಹಕಾರ ಸಚಿವ ಕೆ.ಎನ್. ರಾಜಣ್ಣ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ: ಹೆಚ್.ಸಿ. ಮಹದೇವಪ್ಪ, ನಗರಾಭಿವೃದ್ಧಿ ಮತ್ತು ನಗರ…