Subscribe to Updates
Get the latest creative news from FooBar about art, design and business.
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
- ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
- “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
- ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
- ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
Author: admin
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಸಿಎಂ ಬದಲಾವಣೆ ಮತ್ತು ಅಧಿಕಾರ ಹಂಚಿಕೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮಾಜಿ ಸಚಿವ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆ ಈಗ ಹೊಸ ಸಂಚಲನ ಮೂಡಿಸಿದೆ. “ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿಯಾಗಬೇಕು ಎನ್ನುವುದು ನಮ್ಮ ಪ್ರಬಲ ಒತ್ತಾಯ” ಎಂದು ಹೇಳುವ ಮೂಲಕ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಕ್ತ ಮನಸ್ಸಿನಲ್ಲಿದ್ದಾರೆ. ಹೈಕಮಾಂಡ್ ಸೂಚಿಸಿದರೆ ಅವರು ಅಧಿಕಾರ ಬಿಟ್ಟುಕೊಡಲು ಅಥವಾ ಪದತ್ಯಾಗ ಮಾಡಲು ಮಾನಸಿಕವಾಗಿ ಸಿದ್ಧರಿದ್ದಾರೆ ಎಂದು ರಾಜಣ್ಣ ತಿಳಿಸಿದ್ದಾರೆ. ರಾಜ್ಯದ ಹಿತದೃಷ್ಟಿಯಿಂದ ಮತ್ತು ದಲಿತ ಸಮುದಾಯಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮುಂದಿನ ಬಾರಿ ದಲಿತ ಮುಖ್ಯಮಂತ್ರಿ ಆಗಬೇಕು ಎಂಬ ವಿಚಾರವನ್ನು ಈಗಾಗಲೇ ಹೈಕಮಾಂಡ್ ಗಮನಕ್ಕೆ ತರಲಾಗಿದೆ ಎಂದು ಅವರು ಹೇಳಿದ್ದಾರೆ. ಆಡಳಿತದಲ್ಲಿ ಹೊಸ ವೇಗ ತರಲು ಸಂಪುಟ ಪುನಾರಚನೆಯ ಅಗತ್ಯವಿದೆ. ಹೊಸಬರಿಗೆ ಅವಕಾಶ ನೀಡುವ ಮೂಲಕ ಪಕ್ಷವನ್ನು ಬಲಪಡಿಸಬೇಕು ಎಂಬುದು ರಾಜಣ್ಣ ಅವರ ಅಭಿಪ್ರಾಯ. 2013ರ ಅವಧಿಗೂ ಈಗಿಗೂ ವ್ಯತ್ಯಾಸವಿದೆ. ಅಹಿಂದ ವರ್ಗದ…
ಬೀದರ್: ಔರಾದ್ ತಾಲೂಕಿನ ಶಾಸಕ ಪ್ರಭು ಚವ್ಹಾಣ್ ಅವರು ದಲಿತ ಸಮುದಾಯದ ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಮತ್ತು ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಸಣ್ಣತನದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಸುಧಾಕರ್ ಕೊಳ್ಳುರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆಯ ಮೂಲಕ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಔರಾದ್ ಮತ್ತು ಕಮಲನಗರ ತಾಲೂಕಿನ ಹಳ್ಳಿಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನಗಳನ್ನು ಮಂಜೂರು ಮಾಡಿಸಿದ್ದೇನೆ ಎಂದು ಶಾಸಕರು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಸಮುದಾಯ ಭವನ ಮಂಜೂರು ಮಾಡಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿರುವ ಶಾಸಕರು, ಅದಕ್ಕೆ ಸಂಬಂಧಿಸಿದ ಅಧಿಕೃತ ಮಂಜೂರಾತಿ ಆದೇಶ ಪತ್ರವನ್ನು ಬಹಿರಂಗಪಡಿಸಲಿ ಎಂದು ಕೊಳ್ಳುರ್ ಸವಾಲು ಹಾಕಿದ್ದಾರೆ. ಶಾಸಕರು ಇಲಾಖೆಯ ಮೇಲೆ ಒತ್ತಡ ಹೇರಿ ಗ್ರಾಮ ಪಂಚಾಯಿತಿಗಳಿಗೆ ಪತ್ರ ಬರೆಸುತ್ತಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರ ಮೂಲಕ ಗ್ರಾಮಗಳಲ್ಲಿ ಗೊಂದಲ ಸೃಷ್ಟಿಸಿ, ಜಾಗ ನೀಡುವಂತೆ ದಲಿತರನ್ನು ಒತ್ತಾಯಿಸುತ್ತಾ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು…
ತುಮಕೂರು: ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪೋಕ್ಸೋ ಪ್ರಕರಣದ ಸಂತ್ರಸ್ತರು, ಬಾಲ್ಯ ವಿವಾಹದ ಸಂಕೋಲೆಯಲ್ಲಿ ಸಿಲುಕಿದ್ದವರು ಹಾಗೂ ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದ ಒಟ್ಟು 672 ಮಕ್ಕಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಕ್ಕಳ ರಕ್ಷಣಾ ಘಟಕವು ಯಶಸ್ವಿಯಾಗಿ ರಕ್ಷಿಸಿದೆ. ಒಟ್ಟು ರಕ್ಷಿಸಲ್ಪಟ್ಟ ಮಕ್ಕಳು: 672 (2023-24 ರಿಂದ 2025–26ರ ಅವಧಿ). ಪೋಷಕರ ಬಳಿ ಕಳುಹಿಸಿದವರು: 644 ಮಕ್ಕಳು. ಆಶ್ರಯ ತಾಣಗಳಲ್ಲಿರುವವರು: 28 ಮಕ್ಕಳು (ಪಾಲನಾ ಸಂಸ್ಥೆಗಳ ವಶದಲ್ಲಿದ್ದಾರೆ). ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪುನರ್ವಸತಿ: ಶಾಲೆ ಮತ್ತು ಆಟದ ಮೈದಾನಗಳಲ್ಲಿ ಇರಬೇಕಾದ ಮಕ್ಕಳು ಬಾಲ್ಯ ವಿವಾಹ ಮತ್ತು ದೌರ್ಜನ್ಯದಂತಹ ಸಮಸ್ಯೆಗಳಿಗೆ ಸಿಲುಕುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಇಂತಹ ಮಕ್ಕಳನ್ನು ರಕ್ಷಿಸಿ ಅವರಿಗೆ ಹೊಸ ಬದುಕು ರೂಪಿಸಿಕೊಡುವ ನಿಟ್ಟಿನಲ್ಲಿ ‘ಮಿಷನ್ ವಾತ್ಸಲ್ಯ’ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತಿದೆ. ಅಧಿಕಾರಿಗಳು ಮಕ್ಕಳ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸ್ಥಿತಿಗತಿಯನ್ನು ಪರಿಶೀಲಿಸಿ, ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ…
ತುಮಕೂರು: ಕಳೆದ ಕೆಲವು ದಿನಗಳಿಂದ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮೈದಾಳ ಕೆರೆ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ನೀರು ಬಿಡುಗಡೆ ಮಾಡುವಂತೆ ಜಿಲ್ಲಾಡಳಿತಕ್ಕೆ ಆದೇಶ ನೀಡಿದ್ದಾರೆ. ಈ ಶುಭ ಸುದ್ದಿಯನ್ನು ಶಾಸಕ ಕೆ.ಎನ್. ರಾಜಣ್ಣ ಅವರು ಘೋಷಿಸುವ ಮೂಲಕ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ನಡೆಸುತ್ತಿದ್ದ ಪ್ರತಿಭಟನೆಯನ್ನು ಯಶಸ್ವಿಯಾಗಿ ಕೊನೆಗಾಣಿಸಿದರು. ಶನಿವಾರ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಬಿ. ಸುರೇಶ್ ಗೌಡ ಅವರು ಮಳೆ ಕೊರತೆಯ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಮೈದಾಳ ಕೆರೆಯ ನೀರನ್ನು ಸಂರಕ್ಷಿಸಬೇಕು, ಕಾಲುವೆಗೆ ಹರಿಸಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನೀರು ಬಿಡುಗಡೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದನ್ನು ವಿರೋಧಿಸಿದ ಅಚ್ಚುಕಟ್ಟು ಪ್ರದೇಶದ ರೈತರು, ತಮ್ಮ ಸಾವಿರಾರು ಎಕರೆ ಅಡಿಕೆ ಮತ್ತು ತೆಂಗಿನ ತೋಟಗಳು ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿ ಧರಣಿ ಆರಂಭಿಸಿದ್ದರು. ಕೆ.ಎನ್. ರಾಜಣ್ಣ ಮಧ್ಯಪ್ರವೇಶ: ರೈತರ ಹೋರಾಟಕ್ಕೆ ಬೆಂಬಲ ನೀಡಿದ ಶಾಸಕ ಕೆ.ಎನ್.ರಾಜಣ್ಣ, ಸೋಮವಾರ ಮಾಜಿ…
ಕುಣಿಗಲ್: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಕೇವಲ ಅಧಿಕಾರ ಮತ್ತು ಕುರ್ಚಿ ಪೈಪೋಟಿಯಲ್ಲಿ ಮುಳುಗಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಮಾದಪ್ಪನಹಳ್ಳಿ ಗ್ರಾಮದಲ್ಲಿ ನಡೆದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾನೇ ಐದು ವರ್ಷ ಸಿಎಂ ಎನ್ನುತ್ತಿದ್ದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡೂವರೆ ವರ್ಷದ ನಂತರ ತಾನು ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಬೆಂಬಲಿಗರ ಮೂಲಕ ಬಲ ಪ್ರದರ್ಶನ ಮಾಡುತ್ತಾ ಕುರ್ಚಿ ಪೈಪೋಟಿಯಲ್ಲಿ ತೊಡಗಿದ್ದಾರೆ. ಇದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದರು. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುತ್ತಿದೆ. ಆದರೆ ಸರ್ಕಾರಕ್ಕೆ ಇದನ್ನು ಬಗೆಹರಿಸುವ ಆಸಕ್ತಿ ಇಲ್ಲ.ಇನ್ನೊಂದೆಡೆ ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟ, ಸೇವನೆ ಮತ್ತು ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇವುಗಳನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಗಳೂರು…
ರಾಘವೇಂದ್ರ ಅಡಿಗ ಎಚ್ಚೆನ್ ಬೆಟ್ಟಿಂಗ್ ಆಟ ಹಿನ್ನೆಲೆಯ ಕಥೆ ಇರುವ ‘ಲೂಪ್’ ಚಿತ್ರದ ಟ್ರೈಲರ್ ಮತ್ತಿತರೆ ಕಂಟೆಂಟ್ ಗಳು ಈಗಾಗಲೇ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿದ್ದು ಲವ್ ಮತ್ತು ಸಸ್ಪೆನ್ಸ್ ಅಂಶಗಳನ್ನ ಹೊಂದಿರೋ ‘ಲೂಪ್’ ಸಿನಿಮಾ ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಪಡೆದಿದ್ದು ಇದೇ ಮೇ ೮ಕ್ಕೆ ತೆರೆಗೆ ಬರಲಿದೆ. ಸ್ಟಾಪ್ ಬೆಟ್ಟಿಂಗ್ಸ್, ನೋ ಡ್ರಗ್ಸ್ ಎನ್ನುವ ಸಂದೇಶವನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಇತ್ತೀಚೆಗೆ ಒಳ್ಳೆ ಹುಡುಗ ಪ್ರಥಮ್ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿ ಶುಭ ಕೋರಿದ್ದರು. ಚಿತ್ರಕ್ಕೆ ಯಶವಂತ ಆಕ್ಷನ್–ಕಟ್ ಹೇಳಿದ್ದು, ಎಸ್.ಕೆ.ಎಲ್ಲಪ್ಪ ಹಾಗೂ ಯುವಿ ಪ್ರಮೋಷನ್ ಉಮೇಶ್ K N ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಶಶಿಕಿರಣ್ ಗೆ ಶೋಭಿತ ಜೋಡಿಯಾಗಿದ್ದು ಮಿಮಿಕ್ರಿ ಗೋಪಿ, ಅಪ್ಪುರಾಜ್, ಅಭಿ ಸಾಮ್ರಾಟ್, ಮಂಜುಳಾ ಅರಸ್, ಗಣೇಶ್, ಜೀವನ್ ಗೌಡ ಕೂಡ ನಟಿಸಿದ್ದಾರೆ. ಜೀವನ್ ಗೌಡ ಸಿನಿಮಾಟೋಗ್ರಾಫಿ, ಸಂತೋಷ್ ಜೋಶ್ವ ಮ್ಯೂಸಿಕ್ ಮತ್ತು ಅನಿಲ್ ಆಚಾರ್ ಸಂಕಲನ ಚಿತ್ರಕ್ಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಔರಾದ್: ತಾಲೂಕಿನ ಸಂತಪೂರ್ ಗ್ರಾಮದ ಹೋಲಿ ಕ್ರಾಸ್ ಚರ್ಚಿನಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ರಾಜ್ಯ ಉಪಾಧ್ಯಕ್ಷರಾದ ಸಂಜಯ್ ಜಾಗೀರ್ದಾರ್ ಅವರ ನೇತೃತ್ವದಲ್ಲಿ ತಾಲೂಕಿನ ಕ್ರಿಶ್ಚಿಯನ್ ಮುಖಂಡರ ಮಹತ್ವದ ಸಭೆ ಜರುಗಿತು. ಸಮುದಾಯದ ಜನರ ಕುಂದುಕೊರತೆಗಳು ಹಾಗೂ ಚರ್ಚುಗಳ ಅಭಿವೃದ್ಧಿ ಕುರಿತು ಸಂಜಯ್ ಜಾಗೀರ್ದಾರ್ ಅವರು ಸಮಾಲೋಚನೆ ನಡೆಸಿದರು. “ಸರ್ಕಾರವು ನಿಗಮದ ಮೂಲಕ ಕ್ರಿಶ್ಚಿಯನ್ ಸಮುದಾಯದ ಏಳಿಗೆಗಾಗಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅನೇಕ ಯೋಜನೆಗಳನ್ನು ರೂಪಿಸಿದೆ. ಸಮುದಾಯದ ಜನರು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಸಬಲರಾಗಲು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಅವರು ಕರೆ ನೀಡಿದರು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು. ಸಭೆಯಲ್ಲಿ ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಅರ್ಜುನ್ ಕನಕ, ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಸುಧಾಕರ್ ಕೊಳ್ಳುರ, ಫಾದರ್ ಸ್ಟೀವನ್, ಜಗನ್ನಾಥ ಕೌಠಾ, ಜೇಮ್ಸ್ ರಕ್ಷಳ, ಜಾನ್ಸನ್, ದಾವಿದ, ಅನಿಲ, ಅಶೋಕ ಪಾಸ್ಟರ್, ಪ್ರಭುದಾಸ, ಜೀವನ ಜಾಗಿರದಾರ, ಸುಭಾಷ್,…
ತುಮಕೂರು: ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಸಿದ್ದರಬೆಟ್ಟದ ನೈಸರ್ಗಿಕ ಸಮತೋಲನವನ್ನು ಕಾಪಾಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸ್ವಚ್ಛತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ಜರುಗಿತು. ಸಾಮಾಜಿಕ ಕಾರ್ಯಕರ್ತ ಹಾಗೂ ಪ್ರಗತಿಪರ ಚಿಂತಕ ಸಲೀಂ ಖಾನ್ ತುಮಕೂರು ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಈ ಅಭಿಯಾನದಲ್ಲಿ ವಿವಿಧ ಸಂಘ–ಸಂಸ್ಥೆಗಳು ಮತ್ತು ಒಕ್ಕೂಟಗಳು ಕೈಜೋಡಿಸಿದ್ದವು. ಸ್ಥಳೀಯ ಸ್ವಯಂಸೇವಕರು ಮಾತ್ರವಲ್ಲದೆ ಚಿತ್ರದುರ್ಗ, ಮಂಡ್ಯ ಹಾಗೂ ಬೆಂಗಳೂರಿನಿಂದ ಆಗಮಿಸಿದ್ದ ಪರಿಸರ 6 ರಾಯಭಾರಿಗಳು ಮತ್ತು ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ಬೆಟ್ಟದ ಪರಿಸರದಲ್ಲಿ ಬಿದ್ದಿದ್ದ ಸರಿಸುಮಾರು 20 ಕೆಜಿ ಪ್ಲಾಸ್ಟಿಕ್ ಕಸವನ್ನು ಸಂಗ್ರಹಿಸಿದ ತಂಡವು, ಅದನ್ನು ವ್ಯವಸ್ಥಿತವಾಗಿ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಕ್ಕೆ ಹಸ್ತಾಂತರಿಸಿತು. ಸತತ 15 ದಿನಗಳ ಪೂರ್ವ ಸಿದ್ಧತೆಯೊಂದಿಗೆ ನಡೆದ ಈ ಕಾರ್ಯಕ್ರಮವು ಶಿಸ್ತು ಮತ್ತು ಸೌಹಾರ್ದತೆಗೆ ಮಾದರಿಯಾಯಿತು. ಅಭಿಯಾನದ ಕುರಿತು ಮಾತನಾಡಿದ ಭಾವೈಕ್ಯ ಯುವಜನ ಸಂಘದ ಸಲೀಂ ಖಾನ್, “ಯಾವುದೇ ಭೇದ-ಭಾವವಿಲ್ಲದೆ ಪ್ರಕೃತಿಯ ಋಣ ತೀರಿಸಲು ನಾವೆಲ್ಲರೂ ಒಂದಾಗಿದ್ದೇವೆ. ಈ ಮೌನ…
ಬಳ್ಳಾರಿ: ಪ್ಯಾನ್ ಐಐಟಿ ಅಲ್ಯೂಮ್ನಿ ಇಂಡಿಯಾ ಅಸೋಸಿಯೇಷನ್ ಮತ್ತು ಕರ್ನಾಟಕ ಸರ್ಕಾರದ ಸಹಯೋಗದಲ್ಲಿ, ಮೇ 16ರಂದು ಬೆಂಗಳೂರಿನಲ್ಲಿ “ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026” ಆಯೋಜಿಸಲಾಗಿದೆ. “ತಂತ್ರಜ್ಞಾನದಲ್ಲಿನ ಸ್ವಾಯತ್ತತೆ” ಎಂಬ ವಿಷಯದಡಿ ಈ ಸಮಿಟ್ ನಡೆಯಲಿದೆ ಎಂದು ಕರ್ನಾಟಕ ಸರ್ಕಾರದ ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕರ್ನಾಟಕ, ವಿಶೇಷವಾಗಿ ಬೆಂಗಳೂರು, ಇಂದು ಭಾರತದ ತಂತ್ರಜ್ಞಾನ ಮಹತ್ವಾಕಾಂಕ್ಷೆಯ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ದೇಶದ ಪ್ರಮುಖ ಜಿಡಿಪಿ ಕೊಡುಗೆ ನೀಡುವ ನಗರಗಳಲ್ಲಿ ಬೆಂಗಳೂರು ಒಂದಾಗಿದ್ದು, ವೆಂಚರ್ ಕ್ಯಾಪಿಟಲ್ ಹೂಡಿಕೆಗಳ ಪ್ರಮುಖ ಕೇಂದ್ರವಾಗಿಯೂ ಗುರುತಿಸಿಕೊಂಡಿದೆ. ಸ್ಟಾರ್ಟ್ಅಪ್ಗಳ ನಿಧಿ ಸಂಗ್ರಹ ಹಾಗೂ ನವೀನ ಚಟುವಟಿಕೆಗಳಲ್ಲಿ ಮಹತ್ತರ ಪಾತ್ರವಹಿಸಿರುವುದು, ಸಾವಿರಾರು ಇಂಜಿನಿಯರಿಂಗ್ ಕಾಲೇಜುಗಳು ಹಾಗೂ ವಿಶ್ವದ ಅತಿ ದೊಡ್ಡ ಪ್ರತಿಭಾ ಸಂಪನ್ಮೂಲಗಳಲ್ಲಿ ಒಂದನ್ನು ಹೊಂದಿರುವುದು—ಈ ಎಲ್ಲ ಕಾರಣಗಳಿಂದ ಬೆಂಗಳೂರು “ಪೂರ್ವದ ಸಿಲಿಕಾನ್ ವ್ಯಾಲಿ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಅವರು ಹೇಳಿದರು. ಸಾರ್ವಜನಿಕ ವಲಯ ಮತ್ತು ತಾಂತ್ರಿಕ ಕಂಪನಿಗಳ ಮೂಲಕ ಏರೋಸ್ಪೇಸ್, ರಕ್ಷಣಾ…
ಬಳ್ಳಾರಿ: ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ, ಕಾರ್ಮಿಕರ ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ, ಚರ್ಚಿಸಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ಹೇಳಿದರು. ಸಂಡೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸಂಡೂರು ತಾಲ್ಲೂಕಿನ ತಾಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ–2 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರ ಏಳಿಗೆಗೆ ಬದ್ಧವಾಗಿದ್ದು, ಅಂಬೇಡ್ಕರ್ ಸಹಾಯಹಸ್ತ ಕಾರ್ಯಕ್ರಮದ ಮೂಲಕ ವಿವಿಧ ಅಸಂಘಟಿತ ವಲಯಗಳ ಜನರನ್ನು ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದರು. ಅಮೆಜಾನ್, ಜೊಮ್ಯಾಟೊ, ಸ್ವಿಗ್ಗಿ ಮುಂತಾದ ಆನ್ ಲೈನ್ ಕಂಪನಿಗಳಲ್ಲಿ ಕೆಲಸ ಮಾಡುವ ಡೆಲಿವರಿ ಬಾಯ್ ಗಳ ಹಿತರಕ್ಷಣೆಗಾಗಿ ಭಾರತದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಗಿಗ್ ವರ್ಕರ್ಸ್ ಬಿಲ್ ಕಾನೂನು ತರಲಾಗಿದೆ. ಚಾಲಕರು ಮತ್ತು ಕ್ಲೀನರ್…